Tag: Fahadh Faasil

  • ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ಲೂಸಿಯಾ ಪವನ್ ನಿರ್ದೇಶನದ ‘ಧೂಮಂ’ ಚಿತ್ರದಲ್ಲಿ ‘ಕೆಜಿಎಫ್’ ರಾಕಿಭಾಯ್ : ಟ್ರೈಲರ್ ರಿಲೀಸ್

    ರಾಕಿಂಗ್ ಸ್ಟಾರ್ ಯಶ್ ‘ಧೂಮಂ’ (Dhoomam) ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಲೂಸಿಯಾ ಪವನ್ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಇಂದು 12.59ಕ್ಕೆ ಬಿಡುಗಡೆಯಾಗಿದ್ದು,  ಆ ಟ್ರೈಲರ್ ನಲ್ಲಿ ನೀವು ಯಶ್ ಅವರನ್ನು ನೋಡಬಹುದಾಗಿದೆ. ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ರಿಲೀಸ್ ಆಗಿದ್ದು ಕನ್ನಡ ಮತ್ತು ಮಲಯಾಳಂನಲ್ಲಿ ಅದನ್ನು ನೋಡಬಹುದಾಗಿದೆ. ಯಶ್  (Yash) ಅವರದ್ದು ಯಾವ ಪಾತ್ರ? ಅವರು ಹೇಗೆ ಕಾಣಿಸುತ್ತಾರೆ ಎನ್ನುವುದನ್ನು ನೀವು ಟ್ರೈಲರ್ ನಲ್ಲೇ ನೋಡಬೇಕು.

    ಪವನ್ ಕುಮಾರ್ (Pawan Kumar) ನಿರ್ದೇಶನದ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಈ ಸಿನಿಮಾವನ್ನು ಕೇವಲ ಎರಡೇ ಎರಡು ತಿಂಗಳಲ್ಲಿ ಚಿತ್ರೀಕರಣ ಮುಗಿಸಿದೆ ಅಚ್ಚರಿ ಮೂಡಿಸಿದ್ದರು ನಿರ್ದೇಶಕರು. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿದ್ದ ಹೊಂಬಾಳೆ ಫಿಲ್ಮ್ಸ್, ತಮ್ಮ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದ್ದರು.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್  (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ (Aparna Balamurali) ಜೊತೆಯಾಗಿದ್ದಾರೆ. ಕನ್ನಡದ ಅಚ್ಯುತ್ ಕುಮಾರ್ ಸೇರಿದಂತೆ ಹಲವರು ತಾರಾಗಣದಲ್ಲಿ ಇದ್ದಾರೆ.  ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾ ಕೂಡ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. ಶ್ರೀಮುರುಳಿ ನಟನೆಯ ಬಘೀರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಯುವ ರಾಜ್ ಕುಮಾರ್ ನಟನೆಯ ಯುವ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ತಮಿಳು ಮತ್ತು ಹಿಂದಿಯಲ್ಲೂ ಸಿನಿಮಾ ಮಾಡುವುದಾಗಿ ಹೊಂಬಾಳೆ ಘೋಷಣೆ ಮಾಡಿದೆ.

     

    ಐದು ವರ್ಷದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಂಡವಾಳವನ್ನು ಸಿನಿಮಾ ರಂಗದಲ್ಲಿ ಹೂಡುವುದಾಗಿ ಹೇಳಿರುವ ನಿರ್ಮಾಪಕ ವಿಜಯ ಕಿರಗಂದೂರು, ಈಗಾಗಲೇ ಹಲವು ಚಿತ್ರಗಳನ್ನು ಘೋಷಣೆ ಮಾಡಿದ್ದಾರೆ. ಕಾಂತಾರ 2 ಸಿನಿಮಾ ಮಾಡಲು ಯೋಜನೆ ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾ ಕೂಡ ಶುರು ಮಾಡಲಿದ್ದಾರಂತೆ. ಅಲ್ಲದೇ, ಬಾಲಿವುಡ್ ನಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನುವುದು ಹೊಸ ವರ್ತಮಾನ.

  • ನಾಳೆ ಪವನ್ ಕುಮಾರ್ ನಿರ್ದೇಶನದ ಧೂಮಂ ಸಿನಿಮಾದ ಟ್ರೈಲರ್ ರಿಲೀಸ್

    ನಾಳೆ ಪವನ್ ಕುಮಾರ್ ನಿರ್ದೇಶನದ ಧೂಮಂ ಸಿನಿಮಾದ ಟ್ರೈಲರ್ ರಿಲೀಸ್

    ಹೊಂಬಾಳೆ ಬ್ಯಾನರ್ (Hombale Films) ನಲ್ಲಿ ಮೂಡಿ ಬರುತ್ತಿರುವ ಮಲಯಾಳಂನ ಮೊದಲ ಸಿನಿಮಾ ಧೂಮಂ (Dhoomam) ಚಿತ್ರದ ಟ್ರೈಲರ್ ನಾಳೆ ಬಿಡುಗಡೆಯಾಗಲಿದೆ. ಚಿತ್ರದ ನಿರ್ದೇಶಕ ಪವನ್ ಕುಮಾರ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು, ನಾಳೆ 12.59ಕ್ಕೆ ಮೊದಲ ಟ್ರೈಲರ್ (Trailer) ರಿಲೀಸ್ ಮಾಡುವುದಾಗಿ ಬರೆದುಕೊಂಡಿದ್ದಾರೆ. ಪವನ್ ಕುಮಾರ್ (Pawan Kumar) ನಿರ್ದೇಶನದ ಮೊದಲ ಮಲಯಾಳಂ ಸಿನಿಮಾ ಕೂಡ ಇದಾಗಿದ್ದರಿಂದ ಟ್ರೈಲರ್ ಬಗ್ಗೆ ಕುತೂಹಲ ಮೂಡಿದೆ.

    ‘ಧೂಮಂ’ ಸಿನಿಮಾ ಕೇವಲ ಎರಡೇ ಎರಡು ತಿಂಗಳಲ್ಲಿ ಚಿತ್ರೀಕರಣ ಮುಗಿಸಿದೆ ಅಚ್ಚರಿ ಮೂಡಿಸಿದ್ದರು ನಿರ್ದೇಶಕರು. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿದ್ದ ಹೊಂಬಾಳೆ ಫಿಲ್ಮ್ಸ್, ತಮ್ಮ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದ್ದರು. ಇದನ್ನೂ ಓದಿ:ಮೈಸೂರಿಗೆ ಬಂದಿಳಿದ ನಟ ಉಸ್ತಾದ್ ರಾಮ್ ಪೋತಿನೇನಿ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್  (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ (Aparna Balamurali) ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾ ಕೂಡ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. ಶ್ರೀಮುರುಳಿ ನಟನೆಯ ಬಘೀರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಯುವ ರಾಜ್ ಕುಮಾರ್ ನಟನೆಯ ಯುವ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಜೊತೆಗೆ ತಮಿಳು ಮತ್ತು ಹಿಂದಿಯಲ್ಲೂ ಸಿನಿಮಾ ಮಾಡುವುದಾಗಿ ಹೊಂಬಾಳೆ ಘೋಷಣೆ ಮಾಡಿದೆ.

     

    ಐದು ವರ್ಷದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಂಡವಾಳವನ್ನು ಸಿನಿಮಾ ರಂಗದಲ್ಲಿ ಹೂಡುವುದಾಗಿ ಹೇಳಿರುವ ನಿರ್ಮಾಪಕ ವಿಜಯ ಕಿರಗಂದೂರು, ಈಗಾಗಲೇ ಹಲವು ಚಿತ್ರಗಳನ್ನು ಘೋಷಣೆ ಮಾಡಿದ್ದಾರೆ. ಕಾಂತಾರ 2 ಸಿನಿಮಾ ಮಾಡಲು ಯೋಜನೆ ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾ ಕೂಡ ಶುರು ಮಾಡಲಿದ್ದಾರಂತೆ. ಅಲ್ಲದೇ, ಬಾಲಿವುಡ್ ನಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನುವುದು ಹೊಸ ವರ್ತಮಾನ.

  • ನಾಳೆ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ :  ಹೊಂಬಾಳೆ ಫಿಲ್ಮ್ಸ್

    ನಾಳೆ ‘ಧೂಮಂ’ ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಹೊಂಬಾಳೆ ಫಿಲ್ಮ್ಸ್

    ಲೂಸಿಯಾ ಪವನ್ (Lucia Pawan) ನಿರ್ದೇಶನದ ಧೂಮಂ (Dhoomam) ಸಿನಿಮಾದ ಫಸ್ಟ್ ಲುಕ್ (First Look) ಅನ್ನು ನಾಳೆ ಬೆಳಗ್ಗೆ 10.45ಕ್ಕೆ ರಿಲೀಸ್ ಮಾಡುವುದಾಗಿ ಹೊಂಬಾಳೆ ಫಿಲ್ಮ್ಸ್ ಘೋಷಣೆ ಮಾಡಿದೆ. ಈ ಕುರಿತು ಸಂಸ್ಥೆಯು ಸೋಷಿಯಲ್ ಮೀಡಿಯಾದಲ್ಲಿ ವಿವರ ಹಂಚಿಕೊಂಡಿದೆ. ಮಲಯಾಳಂ ಸಿನಿಮಾ ಇದಾಗಿದ್ದು, ಪವನ್ ಇದೇ ಮೊದಲ ಬಾರಿಗೆ ಆ ಭಾಷೆಯಲ್ಲಿ ಚಿತ್ರ ಮಾಡಿದ್ದಾರೆ. ಈ ಪೋಸ್ಟರ್ ಪೋಸ್ಟ್ ಮಾಡಿದ ಬೆನ್ನಲ್ಲೇ ಸಲಾರ್ ಸಿನಿಮಾದ ಅಪ್ ಡೇಟ್ ನೀಡಿ ಎಂದು ಅಭಿಮಾನಿಗಳು ಕೇಳಿದ್ದಾರೆ.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್ (Fahadh Faasil) ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ  (Aparna Balamurali)ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!

    ‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ.

    ಧೂಮಂ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಹೊಂಬಾಳೆ ಸಂಸ್ಥೆ (Hombale Films), ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಬರಲಿದೆ ಎಂದಿದೆ. ಕ್ರಮವಾಗಿ ಮಲಯಾಳಂ, ಕನ್ನಡ, ತಮಿಳು ತೆಲುಗು ಭಾಷೆಯ ಹೆಸರು ಹಾಕಿರುವುದರಿಂದ ಮೂಲ ಮಲಯಾಳಂನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕನ್ನಡ ಮತ್ತು ಇತರ ಭಾಷೆಗೆ ಸಿನಿಮಾವನ್ನು ಡಬ್ ಮಾಡುತ್ತಾರಾ ಕಾದು ನೋಡಬೇಕು.

  • ಎರಡನೇ ತಿಂಗಳಿಗೆ ಧೂಮಂ ಶೂಟಿಂಗ್ ಮುಗಿಸಿದ ಹೊಂಬಾಳೆ ಫಿಲ್ಮ್ಸ್

    ಎರಡನೇ ತಿಂಗಳಿಗೆ ಧೂಮಂ ಶೂಟಿಂಗ್ ಮುಗಿಸಿದ ಹೊಂಬಾಳೆ ಫಿಲ್ಮ್ಸ್

    ಲೂಸಿಯಾ ಪವನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಮಲಯಾಳಂ ‘ಧೂಮಂ’ ಸಿನಿಮಾ ಕೇವಲ ಎರಡೇ ಎರಡು ತಿಂಗಳಲ್ಲಿ ಚಿತ್ರೀಕರಣ ಮುಗಿಸಿದೆ. ಈ ಕುರಿತು ಫೋಟೋವೊಂದನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್, ತಮ್ಮ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ರಿಲೀಸ್ ಗೆ ರೆಡಿಯಾಗುತ್ತಿದೆ ಎಂದು ಘೋಷಿಸಿದ್ದಾರೆ. ಈಗಾಗಲೇ ಸಂತೋಷ್ ಆನಂದ್ ರಾಮ್ ನಿರ್ದೇಶನದ, ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ ಕೂಡ ಬಿಡುಗಡೆಗೆ ಸಿದ್ಧವಾಗಿದ್ದು, ಅದರ ಸಾಲಿಗೆ ಧೂಮಂ ಕೂಡ ಸೇರಿಕೊಂಡಿದೆ.

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಮೊದಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದ ನಿರ್ದೇಶಕರೇ ಆ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು ವಿಶೇಷ. ಪ್ರಧಾನ ಪಾತ್ರದಲ್ಲಿ ಫಾಹದ್ ಫಾಸಿಲ್ ನಟಿಸಿದ್ದಾರೆ. ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಪರ್ಣ ಬಾಲಮುರಳಿ ಜೊತೆಯಾಗಿದ್ದಾರೆ. ಸೆಪ್ಟೆಂಬರ್ 30ರಂದು ಘೋಷಣೆಯಾಗಿದ್ದ ಈ ಸಿನಿಮಾ, ಅಕ್ಟೋಬರ್ 9ರಂದು ಮುಹೂರ್ತ ಮಾಡಿತ್ತು. ಇದನ್ನೂ ಓದಿ: ಮದುವೆ ಬಗ್ಗೆ ಮೌನ ಮುರಿದ ರಾಗಿಣಿ ದ್ವಿವೇದಿ

    ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಸಲಾರ್ ಸಿನಿಮಾ ಕೂಡ ಇನ್ನೇನು ಚಿತ್ರೀಕರಣದ ಕೊನೆಯ ಹಂತದಲ್ಲಿದೆ. ಶ್ರೀಮುರುಳಿ ನಟನೆಯ ಬಘೀರ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಯುವ ರಾಜ್ ಕುಮಾರ್ ನಟನೆಯ ಹೊಸ ಸಿನಿಮಾ ಇನ್ನಷ್ಟೇ ಶೂಟಿಂಗ್ ಶುರು ಮಾಡಬೇಕು. ಜೊತೆಗೆ ತಮಿಳು ಮತ್ತು ಹಿಂದಿಯಲ್ಲೂ ಸಿನಿಮಾ ಮಾಡುವುದಾಗಿ ಹೊಂಬಾಳೆ ಘೋಷಣೆ ಮಾಡಿದೆ.

    ಐದು ವರ್ಷದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಬಂಡವಾಳವನ್ನು ಸಿನಿಮಾ ರಂಗದಲ್ಲಿ ಹೂಡುವುದಾಗಿ ಹೇಳಿರುವ ನಿರ್ಮಾಪಕ ವಿಜಯ ಕಿರಗಂದೂರು, ಈಗಾಗಲೇ ಹಲವು ಚಿತ್ರಗಳನ್ನು ಘೋಷಣೆ ಮಾಡಿದ್ದಾರೆ. ಕಾಂತಾರ 2 ಸಿನಿಮಾ ಮಾಡಲು ಯೋಜನೆ ಈಗಾಗಲೇ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಕೆಜಿಎಫ್ 3 ಸಿನಿಮಾ ಕೂಡ ಶುರು ಮಾಡಲಿದ್ದಾರಂತೆ. ಅಲ್ಲದೇ, ಬಾಲಿವುಡ್ ನಲ್ಲಿ ಸ್ಟಾರ್ ನಟನ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ ಎನ್ನುವುದು ಹೊಸ ವರ್ತಮಾನ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಧೂಮಂ’ ಸೆಟ್ ಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು

    ‘ಧೂಮಂ’ ಸೆಟ್ ಗೆ ಭೇಟಿ ನೀಡಿದ ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು

    ಹೊಂಬಾಳೆ ಫಿಲಂಸ್​ನಡಿ ವಿಜಯ್​ ಕುಮಾರ್​ ಕಿರಗಂದೂರು ನಿರ್ಮಿಸುತ್ತಿರುವ ‘ಧೂಮಂ’ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದೆ. ಈ ಸಂದರ್ಭದಲ್ಲಿ ವಿಜಯ್ ಕುಮಾರ್​ ಕಿರಗಂದೂರು, ರಿಷಭ್​ ಶೆಟ್ಟಿ, ಸಪ್ತಮಿ ಗೌಡ ಮುಂತಾದವರು ಚಿತ್ರೀಕರಣ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಚಿತ್ರೀಕರಣದಲ್ಲಿ ಫಹಾದ್​ ಫಾಸಿಲ್​, ಅಪರ್ಣಾ ಬಾಲಮುರಳಿ ಮತ್ತಿತರರು ಭಾಗವಹಿಸಿದ್ದು ಅವರೊಂದಿಗೆ ಸಂತಸದ ಕ್ಷಣಗಳನ್ನು ಕಳೆದಿದ್ದಾರೆ.

    ‘ಧೂಮಂ’ ಚಿತ್ರವನ್ನು ‘ಲೂಸಿಯಾ’ ಖ್ಯಾತಿಯ ಪವನ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದು, ಇದೊಂದು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು, ಫಹಾದ್​ ಫಾಸಿಲ್​ ಮತ್ತು ಅಪರ್ಣಾ ಬಾಲಮುರಳಿ ಜತೆಗೆ ಅಚ್ಯುತ್​ ಕುಮಾರ್​, ಜಾಯ್​ ಮ್ಯಾಥ್ಯೂ, ದೇವ್​ ಮೋಹನ್​, ಅನು ಮೋಹನ್​ ಮುಂತಾದವರು ನಟಿಸುತ್ತಿರುವ ಈ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಪ್ರೀತಾ ಜಯರಾಮನ್​ ಅವರ ಛಾಯಾಗ್ರಹಣವಿದೆ. ಇದನ್ನೂ ಓದಿ: ಅಭಿಷೇಕ್ ಮದುವೆ ಸುಳ್ಳು ಸುಳ್ಳು: ಸುಮಲತಾ ಅಂಬರೀಶ್ ಸ್ಪಷ್ಟನೆ

    ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಒಂದು ವಾರಗಳಿಂದ ಸತತವಾಗಿ ಚಿತ್ರೀಕರಣವಾಗುತ್ತಿದ್ದು, ಫಹಾದ್ ಫಾಸಿಲ್ ಸೇರಿದಂತೆ ಹಲವು ಕಲಾವಿದರು ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ನಿನ್ನೆ ನಡೆದ ಕಾಂತಾರ ಸಿನಿಮಾದ 50 ದಿನದ ಸಂಭ್ರಮದಲ್ಲೂ ಫಾಸಿಲ್ ಭಾಗಿಯಾಗಿದ್ದರು. ಅಲ್ಲದೇ, ಸಿನಿಮಾದ ಬಗ್ಗೆ ಈ ಹಿಂದೆಯೂ ಅವರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪವನ್ ಕುಮಾರ್-ಫಾಸಿಲ್ ಕಾಂಬಿನೇಷನ್‌ನ ‘ಧೂಮ್ʼ ಚಿತ್ರದ ಅದ್ಧೂರಿ ಮುಹೂರ್ತ

    ಪವನ್ ಕುಮಾರ್-ಫಾಸಿಲ್ ಕಾಂಬಿನೇಷನ್‌ನ ‘ಧೂಮ್ʼ ಚಿತ್ರದ ಅದ್ಧೂರಿ ಮುಹೂರ್ತ

    ಹೊಂಬಾಳೆ ಬ್ಯಾನರ್‌ನ (Hombale Films) ಬಹುನಿರೀಕ್ಷಿತ ‘ಧೂಮ್’ (Dhoom) ಚಿತ್ರದ ಅದ್ಧೂರಿ ಮುಹೂರ್ತ ನೆರವೇರಿದೆ. ಪವನ್ ಕುಮಾರ್ (Pawan Kumar) ಮತ್ತು ಸೌತ್ ಸ್ಟಾರ್ ಫಾಸಿಲ್ (Fahadh Faasil) ಕಾಂಬಿನೇಷನ್‌ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

     

    View this post on Instagram

     

    A post shared by Hombale Films (@hombalefilms)

    ಸಾಕಷ್ಟು ಸಿನಿಮಾಗಳನ್ನ ಅದರಲ್ಲೂ ಕೆಜಿಎಫ್ (KGF) ಅಂತಹ ಅದ್ಭುತ ಚಿತ್ರವನ್ನ ನಿರ್ಮಾಣ ಮಾಡಿರುವ ಹೊಂಬಾಳೆ ಬ್ಯಾನರ್‌ನಲ್ಲಿ ‘ಧೂಮ್’ ಸಿನಿಮಾ ಮೂಡಿ ಬರುತ್ತಿದೆ. ʼಪುಷ್ಪʼ ಸ್ಟಾರ್ ಫಹಾದ್ ಫಾಸಿಲ್‌ಗೆ ಪವನ್ ಕುಮಾರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಭಿನ್ನ ಕಥೆಯನ್ನ ತೆರೆಯ ಮೇಲೆ ತೋರಿಸಲು ಚಿತ್ರತಂಡ ಸಜ್ಜಾಗಿದೆ. ಸದ್ಯ ಧೂಮ್ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಅದ್ಧೂರಿಯಾಗಿ ಮುಹೂರ್ತ ಆಚರಿಸಿಕೊಂಡಿದೆ. ಇದನ್ನೂ ಓದಿ: `ಗಂಧದಗುಡಿ’ ಪ್ರೀ ರಿಲೀಸ್ ಇವೆಂಟ್‌ಗೆ ಭರ್ಜರಿ ತಯಾರಿ

    ಈ ಚಿತ್ರದ ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ಪಡೆದ ನಟಿ ಅಪರ್ಣಾ ಬಾಲಮುರಳಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡಕ್ಕೆ ಶುಭಹಾರೈಸಲು ಪ್ರಶಾಂತ್ ನೀಲ್ ಕೂಡ ಪಾಲ್ಗೊಂಡಿದ್ದಾರೆ.

    ಅಪ್ಪುಗಾಗಿ ಮಾಡಿರುವ ಕಥೆಯಲ್ಲಿ ಫಾಸಿಲ್ ನಟಿಸುತ್ತಿದ್ದಾರಾ ಅಥವಾ ಫಾಸಿಲ್‌ಗೆ ಬೇರೆಯದ್ದೇ ಕಥೆಯನ್ನ ಪವನ್ ಕುಮಾರ್ ಸಿದ್ಧಪಡಿಸಿದ್ದಾರಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ಮನೆಯಲ್ಲಿ ಮಾಡಿದ ಛತ್ರಿ ಕೆಲಸದ ಬಗ್ಗೆ ಬಾಯ್ಬಿಟ್ಟ ಅಮೂಲ್ಯ ಗೌಡ

    Live Tv
    [brid partner=56869869 player=32851 video=960834 autoplay=true]

  • ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಪವನ್ ನಿರ್ದೇಶಕ, ಫಹಾದ್ ಹೀರೋ

    ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾ ಘೋಷಣೆ: ಪವನ್ ನಿರ್ದೇಶಕ, ಫಹಾದ್ ಹೀರೋ

    ಲೂಸಿಯಾ ಖ್ಯಾತಿಯ ಪವನ್ ಕುಮಾರ್ (Pawan Kumar) ಮತ್ತು ಮಲಯಾಳಂ ಹೆಸರಾಂತ ನಟ ಫಹಾದ್ ಫಾಸಿಲ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಎಂದು ಮೊದಲ ಬಾರಿಗೆ ಪಬ್ಲಿಕ್ ಟಿವಿ ಡಿಜಿಟಲ್ ಸುದ್ದಿಯನ್ನು ಬ್ರೇಕ್ ಮಾಡಿತ್ತು. ಅದೀಗ ನಿಜವಾಗಿದೆ. ಈ ಕಾಂಬಿನೇಷನ್ ನಲ್ಲಿ ಸಿನಿಮಾ ಮೂಡಿ ಬರಲಿದ್ದು, ಹೊಂಬಾಳೆ ಫಿಲ್ಮ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಿನ್ನೆಯಷ್ಟೇ ಹೊಸ ಸುದ್ದಿಯೊಂದನ್ನು ಕೊಡಲಿದ್ದೇವೆ ಎಂದು ಹೊಂಬಾಳೆ ಹೇಳಿಕೊಂಡಿತ್ತು.

    ಅಂದುಕೊಂಡಂತೆ ಆಗಿದ್ದರೆ, ಪವನ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನ ದ್ವಿತ್ವ ಸಿನಿಮಾ ಆಗಬೇಕಿತ್ತು. ಪುನೀತ್ ಅವರ ಹಠಾತ್ ನಿಧನದಿಂದಾಗಿ ದ್ವಿತ್ವ ಸೆಟ್ಟೇರಲಿಲ್ಲ. ಈಗ ಅದೇ ಕಥೆಯನ್ನು ಫಾಸಿಲ್ ಗೆ ಮಾಡಲಿದ್ದಾರಾ ಅಥವಾ ಬೇರೆ ಕಥೆಯನ್ನು ಪವನ್ ಆಯ್ಕೆ ಮಾಡಿಕೊಂಡಿದ್ದಾರಾ ಅವರೇ ಹೇಳಬೇಕು. ಒಟ್ಟಿನಲ್ಲಿ ಫಾಸಿಲ್ ಗಾಗಿ ಪವನ್ ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಧೂಮ್ (Dhoom) ಎಂದು ಹೆಸರಿಡಲಾಗಿದೆ. ಇದನ್ನೂ ಓದಿ:`ಜೂನಿಯರ್’ ಆಗಿ ಸಿನಿರಸಿಕರನ್ನು ಗೆಲ್ಲಲು ಬಂದ್ರು ಜನಾರ್ಧನ್ ರೆಡ್ಡಿ ಪುತ್ರ ಕಿರೀಟಿ

    ಧೂಮ್ ಸಿನಿಮಾದ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿರುವ ಹೊಂಬಾಳೆ ಸಂಸ್ಥೆ (Hombale Films), ನಾಲ್ಕು ಭಾಷೆಗಳಲ್ಲಿ ಈ ಸಿನಿಮಾ ಬರಲಿದೆ ಎಂದಿದೆ. ಕ್ರಮವಾಗಿ ಮಲಯಾಳಂ, ಕನ್ನಡ, ತಮಿಳು ತೆಲುಗು ಭಾಷೆಯ ಹೆಸರು ಹಾಕಿರುವುದರಿಂದ ಮೂಲ ಮಲಯಾಳಂನಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಕನ್ನಡ ಮತ್ತು ಇತರ ಭಾಷೆಗೆ ಸಿನಿಮಾವನ್ನು ಡಬ್ ಮಾಡುತ್ತಾರಾ ಕಾದು ನೋಡಬೇಕು.

    ಫಹಾದ್ ಫಾಸಿಲ್ (Fahadh Faasil) ನಾಯಕನಾಗಿ ನಟಿಸುತ್ತಿದ್ದರೆ, ಸೂರರೈ ಪೋಟ್ರು ನಾಯಕಿ ಅಪರ್ಣಾ ಬಾಲಮುರಳಿ (Aparna Balamurali) ಈ ಸಿನಿಮಾದ ನಾಯಕಿ. ಅಕ್ಟೋಬರ್ 9 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಫಹಾದ್ ಪ್ರತಿಭಾವಂತ ನಟ, ಪವನ್ ಕುಮಾರ್ ಹೊಸ ಬಗೆಯ ಯೋಚಿಸುವ ನಿರ್ದೇಶಕ. ಹಾಗಾಗಿ ಧೂಮಂ ಸಿನಿಮಾದ ಬಗ್ಗೆ ಈಗಿನಿಂದಲೇ ನಿರೀಕ್ಷೆ ದುಪ್ಪಟ್ಟಾಗಿದೆ. ಹೊಂಬಾಳೆ ಫಿಲ್ಸ್ಮ್ ನಿಂದ ಈಗಾಗಲೇ ಸಲಾರ್, ಬಘೀರ್, ರಾಘವೇಂದ್ರ ಸ್ಟೋರ್ಸ್ ಸಿನಿಮಾಗಳು ರೆಡಿಯಾಗಿದ್ದು, ಈ ಸಿನಿಮಾ ಸಾಲಿಗೆ ಧೂಮ್ ಕೂಡ ಸೇರ್ಪಡೆಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪುಷ್ಪಾ 2 : ವಿಜಯ್ ಸೇತುಪತಿ ಎಂಟ್ರಿಗೆ ಫಹಾದ್ ಫಾಸಿಲ್ ಮುನಿಸು?

    ಪುಷ್ಪಾ 2 : ವಿಜಯ್ ಸೇತುಪತಿ ಎಂಟ್ರಿಗೆ ಫಹಾದ್ ಫಾಸಿಲ್ ಮುನಿಸು?

    ಲ್ಲು ಅರ್ಜುನ್ ನಟನೆಯ ‘ಪುಷ್ಪಾ 2’ ಸಿನಿಮಾ ಯಾವಾಗಿಂದ ಸೆಟ್ಟೇರುತ್ತದೋ ಗೊತ್ತಿಲ್ಲ. ಆದರೂ, ದಿನಕ್ಕೊಂದು ಸುದ್ದಿಗಳು ಹೊರ ಬರುತ್ತಲೇ ಇವೆ. ಅವೆಲ್ಲವೂ ವಿವಾದಕ್ಕೆ ಕಾರಣವಾಗುತ್ತಿವೆ. ಈ ಹಿಂದೆ ಪುಷ್ಪಾ 2 ಸಿನಿಮಾದ ಕಥೆಯನ್ನೇ ನಿರ್ದೇಶಕರು ಬದಲಾಯಿಸುತ್ತಿದ್ದಾರೆ ಎಂದಾಯಿತು. ನಂತರ ಡಾಲಿ ಧನಂಜಯ್ ಈ ಸಿನಿಮಾದಲ್ಲಿ ಇರುತ್ತಾರಾ ಎಂಬ ಪ್ರಶ್ನೆ ಮೂಡಿತ್ತು. ರಶ್ಮಿಕಾ ಮಂದಣ್ಣ ಪಾತ್ರ ಸಿನಿಮಾದ ಅರ್ಧಕ್ಕೆ ಸಾಯುತ್ತದೆ ಎಂದೂ ಸುದ್ದಿ ಹೊರಬಿತ್ತು. ಇದೀಗ ಮತ್ತೊಂದು ರಣರೋಚಕ ವಿಷಯ ಹರಡಿದೆ.

    ತೆಲುಗಿನ ಖ್ಯಾತ ನಟ ವಿಜಯ್ ಸೇತುಪತಿ ಪುಷ್ಪಾ 2 ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಅದೀಗ ನಿಜವಾಗಿದೆ. ಪುಷ್ಪಾನನ್ನು ಹೆಡೆಮೂರಿ ಕಟ್ಟುವುದಕ್ಕೆ ಈ ಪೊಲೀಸ್ ಪಾತ್ರವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ಪುಷ್ಪಾ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರವನ್ನು ಫಹಾದ್ ಫಾಸಿಲ್ ಸಮರ್ಥವಾಗಿ ನಿಭಾಯಿಸಿದ್ದರು. ಈ ಬಾರಿ ಅವರ ಪಾತ್ರ ಇರುತ್ತಾ ಇಲ್ಲವಾ ಎನ್ನುವುದೇ ಸಸ್ಪೆನ್ಸ್. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ವಿಜಯ್ ಸೇತುಪತಿಯ ಪಾತ್ರ ಎಂಟ್ರಿ ಆಗುತ್ತಿದ್ದಂತೆಯೇ ಫಹಾದ್ ಫಾಸಿಲ್ ಚಿತ್ರತಂಡದ ಮೇಲೆ ಮುನಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಪೊಲೀಸ್ ಅಧಿಕಾರಿಯ ಪಾತ್ರವನ್ನು ತಾವು ಮಾಡಿದ್ದರಿಂದ, ಅದನ್ನೇ ಮುಂದುವರೆಸಿಕೊಂಡು ಹೋಗಬಹುದಿತ್ತಲ್ಲ ಎಂದು ಫಾಸಿಲ್ ಕೇಳಿದ್ದಾರೆ ಎನ್ನಲಾಗುತ್ತಿದೆ. ಮತ್ತೊಂದು ಪಾತ್ರದ ಅವಶ್ಯಕತೆ ನನಗೆ ಕಾಣುತ್ತಿಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ ಎನ್ನುವುದು ಈಗಿರುವ ಸುದ್ದಿ.

    Live Tv
    [brid partner=56869869 player=32851 video=960834 autoplay=true]

  • Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

    Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

    ಅಂದುಕೊಂಡಂತೆ ಆಗಿದ್ದರೆ ಲೂಸಿಯಾ ಖ್ಯಾತಿಯ ಪವನ್ ಕುಮಾರ್ ದ್ವಿತ್ವ ಸಿನಿಮಾ ಮಾಡಬೇಕಿತ್ತು. ಪುನೀತ್ ರಾಜ್ ಕುಮಾರ್ ಬದುಕಿದ್ದರೆ, ಈ ಸಿನಿಮಾದ ಬಹುತೇಕ ಶೂಟಿಂಗ್ ಕೂಡ ಮುಗಿದಿರುತ್ತಿತ್ತು. ಆದರೆ, ವಿಧಿಯಾಟ ಬೇರೆಯೇ ಆಗಿತ್ತು. ಇನ್ನೇನು ಸಿನಿಮಾದ ಶೂಟಿಂಗ್ ಗೆ ಹೊರಡಬೇಕಿದ್ದ ಅಪ್ಪು ಲೋಕವನ್ನೇ ಬಿಟ್ಟು ನಡೆದು ಬಿಟ್ಟರು. ಹಾಗಾಗಿ ದ್ವಿತ್ವ ಸೇರಿದಂತೆ ಹಲವು ಸಿನಿಮಾಗಳು ಹಾಗೆಯೇ ಉಳಿದುಕೊಂಡವು.

    ದ್ವಿತ್ವ ಸಿನಿಮಾ ನಿಲ್ಲುತ್ತಿದ್ದಂತೆಯೇ ಈ ಕಥೆಯನ್ನು ಪವನ್ ಕುಮಾರ್ ಏನು ಮಾಡಲಿದ್ದಾರೆ ಎನ್ನುವ ಪ್ರಶ್ನೆಯೂ ಮೂಡಿ ಬಂತು. ಈ ಕುರಿತು ಪವನ್ ಕೆಲ ಮಾಧ್ಯಮಗಳಲ್ಲಿ ಸ್ಪಷ್ಟನೆಯನ್ನೂ ನೀಡಿದರು. ಸೂಕ್ತ ಕಲಾವಿದರನ್ನು ಹುಡುಕಿ ಇದೇ ಕಥೆಯನ್ನೇ ಸಿನಿಮಾ ಮಾಡುವುದಾಗಿಯೂ ಹೇಳಿಕೊಂಡಿದ್ದರು. ಬಹುಶಃ ಈ ಕಥೆಯನ್ನು ದಕ್ಷಿಣದ ಖ್ಯಾತ ನಟ ಫಹಾದ್ ಫಾಸಿಲ್ ಗಾಗಿ ಮಾಡುತ್ತಿದ್ದಾರಾ ಎನ್ನುವ ಕುತೂಹಲ ಮೂಡಿದೆ. ಕಾರಣ ಅವರು ಫಹಾದ್ ಗಾಗಿ ತಮಿಳಿನಲ್ಲಿ ಸಿನಿಮಾವೊಂದನ್ನು ಮಾಡಲಿದ್ದಾರಂತೆ. ಇದನ್ನೂ ಓದಿ : ಬಾಲಿವುಡ್ ನಲ್ಲಿ ಕನ್ನಡದ ರಂಗಿತರಂಗ ಸಿನಿಮಾ ರಿಮೇಕ್

    ಅಧಿಕೃತವಾಗಿ ಪವನ್ ಕುಮಾರ್ ಈ ವಿಷಯವನ್ನು ಹೇಳದೇ ಇದ್ದರೂ, ಅವರ ಆಪ್ತರ ಖಚಿತ ಮಾಹಿತಿ ಪ್ರಕಾರ ಫಹಾದ್ ಫಾಸಿಲ್ ಜೊತೆ ಈಗಾಗಲೇ ಮಾತುಕತೆ ಮಾಡಿದ್ದಾರಂತೆ. ಅದೇ ಸಿನಿಮಾದ ಕೆಲಸಗಳಲ್ಲೇ ಪವನ್ ಕುಮಾರ್ ಸದ್ಯ ಬ್ಯುಸಿಯಾಗಿದ್ದಾರೆ. ಕೆಲವೇ ದಿನಗಳಲ್ಲೇ ಈ ಸಿನಿಮಾ ಸೆಟ್ಟೇರಲಿದೆಯಂತೆ. ಆದರೆ, ಫಾಸಿಲ್ ಗಾಗಿ ದ್ವಿತ್ವ ಕಥೆಯನ್ನೇ ಮಾಡುತ್ತಾರಾ ಅಥವಾ ಹೊಸ ಕಥೆಯನ್ನು ಬರೆದುಕೊಂಡಿದ್ದಾರಾ ಎನ್ನುವುದೇ ಸಸ್ಪೆನ್ಸ್.

    Live Tv
    [brid partner=56869869 player=32851 video=960834 autoplay=true]