Tag: Fake Fertilizer

  • ಅಕ್ರಮವಾಗಿ ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಿಸುತ್ತಿದ್ದ ವಾಹನ ಜಪ್ತಿ

    ಅಕ್ರಮವಾಗಿ ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಿಸುತ್ತಿದ್ದ ವಾಹನ ಜಪ್ತಿ

    ಯಾದಗಿರಿ: ನಕಲಿ ರಸಗೊಬ್ಬರ, ಕ್ರಿಮಿನಾಶಕ ಸಾಗಿಸುತ್ತಿದ್ದ ವಾಹನ ಜಪ್ತಿ ಮಾಡಿದ್ದು, 2.26 ಲಕ್ಷ ರೂ. ಮೌಲ್ಯದ ನಕಲಿ ಕ್ರಿಮಿನಾಶಕವನ್ನು ಗೋಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ವಾಹನ ಚಾಲಕ ಸೈಯದ್ ಅಮೀನ್ ಸಾಬ್ ಉಕ್ಕಲಿ ಎಂಬಾತನನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ನಿಯತ್ತಾಗಿರುವವರು ಯಾರು ಬೇಕಾದರೂ ಕಾಂಗ್ರೆಸ್‌ಗೆ ಬರಬಹುದು: ಕೊತ್ತೂರು ಮಂಜುನಾಥ್

    ವಿಜಯಪುರ (Vijayapura) ಜಿಲ್ಲೆಯ ಸಿಂದಗಿಯಿಂದ (Sindagi) ಚಾಮನಾಳ ಕಡೆಗೆ ಟಾಟಾ ಎಸಿ ವಾಹನವೊಂದು ಹೊರಟಿತ್ತು. ಖಚಿತ ಮಾಹಿತಿಯ ಮೇರೆಗೆ ಗೋಗಿ ಪೊಲೀಸರು ವಾಹನವನ್ನು ಪರಿಶೀಲಿಸಿದ್ದಾರೆ. ಈ ವೇಳೆ 2.26 ಲಕ್ಷ ರೂ. ಮೌಲ್ಯದ ವಸ್ತು ಪತ್ತೆಯಾಗಿದ್ದು, ಅದರಲ್ಲಿ 70 ಸಾವಿರ ರೂ. ಮೌಲ್ಯದ 50 ಚೀಲ ರಸಗೊಬ್ಬರ, 1.44 ಲಕ್ಷ ಮೌಲ್ಯದ 44 ಡಬ್ಬಾ ಕ್ರಿಮಿನಾಶಕ ಪತ್ತೆಯಾಗಿದೆ.

    ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ವಿಜಯಪುರದಲ್ಲಿ ಭೂಕಂಪನ: ಜೋರು ಶಬ್ದಕ್ಕೆ ಹೆದರಿ ಮನೆಯಿಂದಾಚೆ ಓಡಿ ಬಂದ ಜನ!

  • ನಕಲಿ ರಸಗೊಬ್ಬರ ದಾಸ್ತಾನು ಪತ್ತೆಹಚ್ಚಿದ ರೈತರು

    ನಕಲಿ ರಸಗೊಬ್ಬರ ದಾಸ್ತಾನು ಪತ್ತೆಹಚ್ಚಿದ ರೈತರು

    ವಿಜಯಪುರ: ಅಕ್ರಮ ರಸಗೊಬ್ಬರ ತಯಾರಿಕಾ ಜಾಲವನ್ನು ರೈತರೇ ಬೇಧಿಸಿದ್ದಾರೆ. ಜಿಲ್ಲೆಯ ಇಂಡಿ ತಾಲೂಕಿನ ಇಂಗಳಗಿ ಗ್ರಾಮದ ಹೊರ ಭಾಗದಲ್ಲಿ ಅಕ್ರಮ ದಾಸ್ತಾನು ಪತ್ತೆಯಾಗಿದೆ.

    ಜಮ್ಮು ಭಾಗವಾನ್ ಅವರಿಗೆ ಸೇರಿದ ತೋಟದ ಮನೆಯಲ್ಲಿ ಅಕ್ರಮವಾಗಿ ಇಟ್ಟಿದ್ದ ರಸಗೊಬ್ಬರಗಳ ಮೂಟೆಗಳನ್ನು ರೈತರು ಪತ್ತೆಹಚ್ಚಿದ್ದಾರೆ. ನಂತರ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಿ, ಅಧಿಕಾರಿಗಳೊಂದಿಗೆ ದಾಳಿ ಮಾಡಿದ್ದಾರೆ.

    ದಾಳಿ ವೇಳೆ ತೋಟದ ಮನೆಯಲ್ಲಿ ಯಾರೂ ಕಂಡು ಬಂದಿಲ್ಲ. ನಂತರ ಅಧಿಕಾರಿಗಳು ರಸಗೊಬ್ಬರ ತಯಾರಿಕೆ, ಸಾಗಾಟ ಹಾಗೂ ಮಾರಾಟ ಮಾಡಿದ್ದರ ಬaಗ್ಗೆ ತನಿಖೆ ನಡೆಸಿದ್ದಾರೆ.ನಕಲಿ ರಸಗೊಬ್ಬರ ಸಂಗ್ರಹಿಸಿದ ಮನೆಗೆ ಪೊಲೀಸ್ ಕಾವಲು ಇರಿಸಿ, ನಕಲಿ ರಸಗೊಬ್ಬರವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೃಷಿ ಜಂಟಿ ನಿರ್ದೇಶಕ ರಾಜಶೇಖರ್ ವಿಲಿಯಮ್ಸ್ ಹಾಗೂ ಇತರ ಸಿಬ್ಬಂದಿಯಿಂದ ಪರಿಶೀಲನೆ ನಡೆಸಲಾಗಿದ್ದು, ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ.

  • 462 ಚೀಲ ನಕಲಿ ಸಾವಯವ ಗೊಬ್ಬರ ಜಪ್ತಿ

    462 ಚೀಲ ನಕಲಿ ಸಾವಯವ ಗೊಬ್ಬರ ಜಪ್ತಿ

    ರಾಯಚೂರು: ಲಿಂಗಸುಗೂರು ತಾಲೂಕಿನ ನಾಗಲಾಪೂರ ಬಳಿ ಮಿಂಚಿನ ದಾಳಿ ನಡೆಸಿದ ಕೃಷಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳ ತಂಡ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ಸಾವಯವ ಗೊಬ್ಬರವನ್ನ ಜಪ್ತಿ ಮಾಡಿದೆ.

    ಕಲಬುರ್ಗಿಯ ಅಫಜಲಪುರದ ರೇಣುಕಾ ಶುಗರ್ ಫ್ಯಾಕ್ಟರಿಯಿಂದ ಕನಕಗಿರಿಗೆ ಸಾಗಿಸುತ್ತಿದ್ದ ನಕಲಿ ಗೊಬ್ಬರದ ಚೀಲಗಳನ್ನು ಜಪ್ತಿಮಾಡಲಾಗಿದೆ. 40 ಕೆ.ಜಿ.ತೂಕದ 462 ಚೀಲ ಗೊಬ್ಬರ ಹಾಗೂ ಸಾಗಾಟ ಮಾಡುತಿದ್ದ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ.

    ಮುಂಗಾರು ಹಂಗಾಮು ಉತ್ತಮವಾಗಿರುವುದರಿಂದ ಎಲ್ಲೆಡೆ ಬಿತ್ತನೆ ಕಾರ್ಯ ಜೋರಾಗಿದೆ. ಹೀಗಾಗಿ ರೈತರು ಬೀಜ ಗೊಬ್ಬರಕ್ಕಾಗಿ ಪರಿತಪಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಅಕ್ರಮ ದಂದೆಕೋರರು ನಕಲಿ ಗೊಬ್ಬರ ಮಾರಾಟ ನಡೆಸಿದ್ದಾರೆ. ನಕಲಿ ಸಾವಯವ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಿ ವಂಚಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ನಡೆಸಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ರೂ. ಮೌಲ್ಯದ ನಕಲಿ ಡಿಎಪಿ ಗೊಬ್ಬರ ಜಪ್ತಿ

    ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ರೂ. ಮೌಲ್ಯದ ನಕಲಿ ಡಿಎಪಿ ಗೊಬ್ಬರ ಜಪ್ತಿ

    ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಕುಣೆಕೆಲ್ಲೂರು ಹಾಗೂ ಮಟ್ಟೂರು ಗ್ರಾಮಗಳಲ್ಲಿ ದಾಳಿ ನಡೆಸಿದ ಲಿಂಗಸುಗೂರು ತಾಲೂಕು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ತಂಡ 6 ಲಕ್ಷ ಮೌಲ್ಯದ 514 ಚೀಲ ನಕಲಿ ಡಿಎಪಿ ಗೊಬ್ಬರ ವಶಪಡಿಸಿಕೊಂಡಿದೆ.

    ದಾಳಿ ವೇಳೆ ಕುಣೆಕೆಲ್ಲೂರು, ಮಟ್ಟೂರು ಗ್ರಾಮದ ವಿವಿಧೆಡೆ ಸಂಗ್ರಹಿಸಿಟ್ಟಿದ್ದ ನಕಲಿ ಗೊಬ್ಬರ ಜಪ್ತಿಮಾಡಲಾಗಿದೆ. ಗಂಗಾವತಿ ಮೂಲದ ಪ್ರಶಾಂತ, ರಾಮಚಂದ್ರ ಎಂಬುವರಿಂದ ನಕಲಿ ಗೊಬ್ಬರ ಮಾರಾಟ ದಂಧೆ ನಡೆದಿದ್ದು, ಗಂಗಾವತಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನನ್ವಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೂರ್ನಾಲ್ಕು ವರ್ಷದಿಂದ ನಕಲಿ ಗೊಬ್ಬರ ಮಾರಾಟದಲ್ಲಿ ತೊಡಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

    ತಾಲೂಕು ಕೃಷಿ ಅಧಿಕಾರಿಗಳಾದ ಮಂಜುಳಾ ಬಸರೆಡ್ಡಿ, ಮಹಾಂತೇಶ್ ಹವಾಲ್ದಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಮುಂಗಾರು ಹಂಗಾಮು ಚೆನ್ನಾಗಿರುವುದರಿಂದ ರೈತರು ಗೊಬ್ಬರಕ್ಕಾಗಿ ಅಂಗಡಿಯಿಂದ ಅಂಗಡಿಗಳಿಗೆ ಅಲೆಯುತ್ತಿರುವುದನ್ನು ನಕಲಿ ದಂಧೆಕೋರರು ಬಂಡವಾಳ ಮಾಡಿಕೊಂಡು ವಂಚನೆ ನಡೆಸಿದ್ದಾರೆ. ಗಂಗಾವತಿ ಠಾಣೆ ಪೊಲೀಸರ ಮಾಹಿತಿ ಮೇರೆಗೆ ದಾಳಿ ನಡೆಸಿ, ನಕಲಿ ಗೊಬ್ಬರ ವಶಪಡಿಸಿಕೊಳ್ಳಲಾಗಿದ್ದು, ಗೊಬ್ಬರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.