Tag: Fake Lokayukta

  • ನಕಲಿ ʻಲೋಕಾಯುಕ್ತ ಜಸ್ಟೀಸ್ʼ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು – ದೂರು ದಾಖಲು

    ನಕಲಿ ʻಲೋಕಾಯುಕ್ತ ಜಸ್ಟೀಸ್ʼ ಹಾವಳಿಗೆ ಬೆಚ್ಚಿಬಿದ್ದ ಅಧಿಕಾರಿಗಳು – ದೂರು ದಾಖಲು

    ಬೆಂಗಳೂರು: ಹಣ ಮಾಡೋದಕ್ಕೆ ಅಡ್ಡದಾರಿ ಹಿಡಿಯೋ ಸೈಬರ್ ವಂಚಕರು ಈ ಬಾರಿ ಬಳಸಿದ್ದು ನ್ಯಾಯಾಧೀಶರ ಹೆಸರನ್ನ. ಅಚ್ಚರಿ ಅನಿಸಿದ್ರೂ ಇದು ನಿಜ. ಲೋಕಾಯುಕ್ತ ಜಸ್ಟೀಸ್ (Lokayukta Justice) ಹೆಸರಲ್ಲಿ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಫೋನ್ (Phone) ಮಾಡಿ ನಿಮ್ಮ ಇಲಾಖೆಯಲ್ಲೇ ಭ್ರಷ್ಟಚಾರ ನಡೆಯುತ್ತಾ ಇದೆ. ನಿಮ್ಮ ಮೇಲಿನ ಆರೋಪಿಗಳಿಂದ ರೇಡ್ ಮಾಡ್ತೀವಿ ಅಂತ ಬೆದರಿಸೋಕೆ ಶುರು ಮಾಡಿದ್ದಾರೆ. ಟ್ರೂ ಕಾಲರ್‌ನಲ್ಲಿ (Truecaller) ಲೋಕಾಯುಕ್ತ ಜಸ್ಟೀಸ್ ಹೆಸರು ಬಳಸಿ ಕರೆ ಮಾಡಿದ್ದಾರೆ. ಇದ್ರಿಂದ ಕರೆ ಸ್ವೀಕರಿಸಿದ ಸರ್ಕಾರಿ ಅಧಿಕಾರಿಗಳು ಬೆಚ್ಚಿ ಬಿದ್ದಿದ್ದಾರೆ. ಇದನ್ನೂ ಓದಿ: ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಸೇವೆಗಳ ಕಮಿಷನ್ ಹಾವಳಿಗೆ ಬ್ರೇಕ್!

    ಮಹಾ ವಂಚಕರು ಮಾಡ್ತಿದ್ದೇನು?
    ಈ ವಂಚಕರು ಅಧಿಕಾರಿಗಳು ಕಾರ್ಯ ನಿರ್ವಹಿಸುವ ಕ್ಷೇತ್ರದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಾರೆ. ನಾನು ಲೋಕಾಯುಕ್ತ ಜಸ್ಟೀಸ್ ಬಿ.ಎಸ್ ಪಾಟೀಲ್ , ಹಾಗೂ ಉಪಯೋಕಾಯುಕ್ತ ಫಣೀಂದ್ರ ಎಂದು ಕರೆ ಮಾಡುವ ಅಪರಿಚಿತರು. ಇಂಪಾರ್ಟೆಂಟ್ ಕಾಲ್, ಜಸ್ಟೀಸ್ ಅವರೇ ಕರೆ ಮಾಡಿದ್ದಾರೆಂದು ತಕ್ಷಣ ರಿಸೀವ್ ಮಾಡುವ ಸರ್ಕಾರಿ ಅಧಿಕಾರಿಗಳು, ನಂತರ ಅವರ ಅವರು ಕಾರ್ಯನಿರ್ವಹಿಸುವ ಡಿಪಾರ್ಟ್ಮೆಂಟ್ ನಲ್ಲಿ ಏನೇನು ಕೆಲಸ ನಡೀತಿದೆ ಎಂದು ತಿಳಿದುಕೊಳ್ಳುವ ಅಪರಿಚಿತರು ಬಳಿಕ ಹೆದರಿಸುತ್ತಿದ್ದರು. ನಿಮ್ಮ ಮೇಲೆ ಲಂಚ ಸ್ವೀಕಾರದ ಆರೋಪ ಬಂದಿದೆ ಎಂದು ಬೆದರಿಕೆ ಹಾಕುತ್ತಿದ್ದರು. ಅಷ್ಟೇ ಅಲ್ಲದೆ ಲೋಕಾಯುಕ್ತ ದಾಳಿ ತಡೆಯಬೇಕು ಎಂದರೆ ಇಂತಿಷ್ಟು ಹಣ ಕೊಡಬೇಕು ಅಂತ ಡಿಮ್ಯಾಂಡ್‌ ಮಾಡಿದ್ದಾರೆ. ಇದೇ ರೀತಿ ಸರ್ಕಾರಿ ಕಾರ್ಯನಿರ್ವಾಹಕ ಎಂಜಿನಿಯರ್‌ (ಎಇಇ)ಗೂ ಕರೆ ಮಾಡಿದ್ದ ಅಪರಿಚಿತರು ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ರಸ್ತೆಗಳಲ್ಲಿ ಬಟರ್ ಫ್ಲೈ ಲೈಟ್ ಹಾಕಿದ್ದೇವೆಂದು 73 ಲಕ್ಷ ಹಣ ಪಡೆದು ಗುಳುಂ; ಗೋಲ್ಮಾಲ್ ಬಹಿರಂಗ

    ಎಇಇ ವೆಂಕಟೇಶ್‌ಗೆ ಕರೆ ಮಾಡಿ ಸಿಕ್ಕಿಬಿದ್ದರು
    ಅಧಿಕಾರಿಗಳನ್ನು ಬೆದರಿಸುತ್ತಿದ್ದ ಖತರ್ನಾಕ್‌ಗಳು ಎಇಇ ವೆಂಕಟೇಶ್‌ ಅವರಿಗೂ ಕರೆ ಮಾಡಿದ್ದರು. ಮೊದಲಿಗೆ ಕರೆಯನ್ನ ಸ್ವೀಕಾರ ಮಾಡಿರಲಿಲ್ಲ. ಪದೇ ಪದೇ ಕರೆ ಮಾಡಿದಾಗ ಬೆದರಿಕೆ ಬಂದಿದೆ. ಇದ್ರಿಂದ ಅನುಮಾನಗೊಂಡು ನೇರವಾಗಿ ಲೋಕಾಯುಕ್ತ ಕಚೇರಿಗೆ ವೆಂಕಟೇಶ್‌ ಬಂದು ಮಾಹಿತಿ ನೀಡಿದ್ದಾರೆ. ಈ ವೇಳೆ ಕಾಲ್‌ ಬಂದಿದ್ದ ನಂಬರ್‌ ಜಸ್ಟೀಸ್ ಬಿ.ಎಸ್ ಪಾಟೀಲ್ ಹಾಗೂ ಉಪಲೋಕಾಯುಕ್ತ ಫಣೀಂದ್ರ ಅವರದ್ದಲ್ಲ ಅನ್ನೋದು ಗೊತ್ತಾಗಿದೆ. ಜಸ್ಟೀಸ್ ಹೆಸರು ಬಳಸಿ ಬ್ಲ್ಯಾಕ್‌ಮೇಲ್‌ ಮಾಡಲಾಗ್ತಿದೆ ಎಂದು ತಿಳಿದುಬಂದಿದೆ. ಜಸ್ಟೀಸ್‌ಗಳ ಗೌರವಕ್ಕೆ ಧಕ್ಕೆ ತಂದಿರುವ ಹಾಗೂ ಹೆಸರು ದುರ್ಬಳಕೆ ಮಾಡಿರುವ ಹಿನ್ನಲೆ ಅವರ ಪರವಾಗಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ದೂರು ನೀಡಿದ್ದಾರೆ. ಇದನ್ನೂ ಓದಿ: ನೆಲಮಂಗಲ | ತಣ್ಣಗಾಗಿದ್ದ ಏರಿಯಾದಲ್ಲಿ ಮತ್ತೆ ರೌಡಿಸಂ – ಪಂಚಾಯಿತಿ ಸದಸ್ಯನ ಮೇಲೆ ಗುಂಡಿನ ದಾಳಿ

  • ಜಮಖಂಡಿ ಪೊಲೀಸರಿಂದ ನಕಲಿ ಲೋಕಾಯುಕ್ತನ ಬಂಧನ

    ಜಮಖಂಡಿ ಪೊಲೀಸರಿಂದ ನಕಲಿ ಲೋಕಾಯುಕ್ತನ ಬಂಧನ

    ಬಾಗಲಕೋಟೆ: ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿ ಎಂದು ಕರೆ ಮಾಡಿ ಮೋಸ ಮಾಡ್ತಿದ್ದ ವ್ಯಕ್ತಿಯನ್ನು ಜಮಖಂಡಿ ನಗರ ಪೊಲೀಸರು ಬಂಧಿಸಿದ್ದಾರೆ.

    ಲೋಕಾಯುಕ್ತ ಅಧಿಕಾರಿ ಎಂದು ಕಚೇರಿಗಳಿಗೆ ಭೇಟಿ ನೀಡಿ ನನಗೆ ಐಬಿ ವ್ಯವಸ್ಥೆ ಮಾಡಿ ಎಂದು ಹೇಳಿ ಪೊಲೀಸರಿಗೆ ವಂಚಿಸಿ ಮೋಸ ಮಾಡುತ್ತಿದ್ದ, ಅಪ್ಪಯ್ಯ ಹಿರೇಮಠ ಎಂಬುವನೇ ಬಂಧಿತ ಆರೋಪಿಯಾಗಿದ್ದಾನೆ. ಈತನು ತಾನು ಲೋಕಾಯುಕ್ತ ಇಲಾಖೆಯಲ್ಲಿ ನೌಕರಿ ಮಾಡುತ್ತಿರುವುದಾಗಿ ಹೇಳಿಕೊಳ್ಳುತ್ತಿದ್ದನು. ಆದರೆ ಅನುಮಾನಗೊಂಡ ಪೊಲೀಸರು ಈತನ ಮೇಲೆ ನಿಗಾ ಇಟ್ಟಿದರು.

    ಸರ್ಕಾರಿ ನೌಕರರನ್ನು ಹೆದರಿಸಿ ಹಣ ಸುಲಿಗೆ ಮಾಡಿ ಅವರ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದ. ಐಬಿಗೆ ಭೇಟಿ ನೀಡಿ ನನ್ನನ್ನು ಲೋಕಾಯುಕ್ತರು ಕಳಿಸಿದ್ದು, ರೂಮ್ ಕೊಡಲು ತಿಳಿಸಿದ್ದಾರೆ ಎಂದು ಎರು ಧ್ವನಿಯಲ್ಲಿ ಮಾತನಾಡುತ್ತಿದ್ದ ಎಂದು ತಿಳಿದು ಬಂದಿದೆ. ಕೊನೆಗೆ ಅಪ್ಪಯ್ಯನ ವರ್ತನೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು, ಜಮಖಂಡಿ ಶಹರ ಪಿ.ಎಸ್.ಐ ಗೋವಿಂದಗೌಡ ಪಾಟೀಲ್ ಅವರಿಗೆ ವಿಷಯ ಮುಟ್ಟಿಸಿದ್ದಾರೆ.

    ನಂತರ ಮಾಹಿತಿ ಕಲೆ ಹಾಕಿದಾಗ ಈತ ನಕಲಿ ಲೋಕಾಯುಕ್ತ ಎಂದು ತಿಳಿದು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ. ಶಿವಮೊಗ್ಗ, ಹುಕ್ಕೇರಿ, ಹಿಡಕಲ್ ಡ್ಯಾಂಗಳಲ್ಲಿ ಸೇರಿದಂತೆ ವಿವಿಧ ನಗರಗಳಲ್ಲಿ ಪೊಲೀಸರಿಗೆ ವಂಚಿಸಿರುವ ಬಗ್ಗೆ ಮಾಹಿತಿ ಇದ್ದು, ತನಿಖೆ ಕೈಕೊಂಡಿರುವುದಾಗಿ ಪಿ.ಎಸ್.ಐ ಗೋವಿಂದಗೌಡ ತಿಳಿಸಿದ್ದಾರೆ.

    ಪೊಲೀಸ್ ಸಿಬ್ಬಂದಿಗಳಾದ ಮಲ್ಲು ಕೋಲಾರ, ಶೇಗುಣಸಿ, ಶಿವಾನದ್ ರಾಠೋಡ ಇತರರಿದ್ದ ಸಿಬ್ಬಂದಿ ತಂಡ ಬಲೆ ಬೀಸಿ ನಕಲಿ ಅಧಿಕಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿ ಅಪ್ಪಯ್ಯ ಹಿರೇಮಠ್ ಮೇಲೆ ಚೀಟಿಂಗ್ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಕೇಸ್ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.