Tag: family

  • ದಿನಾ ಬೆಳಗ್ಗೆದ್ದು ಮನೆ ಮಂದಿಯೆಲ್ಲ ಯೋಗ- ಆಸಕ್ತಿ ಇರುವವರಿಗೆ ಮನೆಯಲ್ಲೇ ಉಚಿತ ಪಾಠ

    ದಿನಾ ಬೆಳಗ್ಗೆದ್ದು ಮನೆ ಮಂದಿಯೆಲ್ಲ ಯೋಗ- ಆಸಕ್ತಿ ಇರುವವರಿಗೆ ಮನೆಯಲ್ಲೇ ಉಚಿತ ಪಾಠ

    ವಿಜಯಪುರ: ಸಾಮಾನ್ಯವಾಗಿ ಯೋಗವನ್ನು ಇಚ್ಛೆ ಉಳ್ಳವರು ಮಾಡುತ್ತಾರೆ. ಮನೆಗೆ ಒಬ್ಬರು, ಇಬ್ಬರು ಯೋಗ ಮಾಡೋದು ಸರ್ವೇ ಸಾಮಾನ್ಯ. ಆದರೆ ವಿಜಯಪುರದಲ್ಲಿರುವ ಕುಟುಂಬವೊಂದರ ಎಲ್ಲ ಸದಸ್ಯರು ಪ್ರತಿನಿತ್ಯ ಯೋಗ ಮಾಡುತ್ತಾರೆ. ಜೊತೆಗೆ ಯಾರಾದರೂ ಯೋಗ ಮಾಡುತ್ತೇವೆ ಅಂದರೆ ಅವರಿಗೂ ಉಚಿತವಾಗಿ ಹೇಳಿಕೊಡುತ್ತಾರೆ.

    ವಿಜಯಪುರದ ನಗರ ನಿವಾಸಿ ದತ್ತಾತ್ರೇಯ ಹಿಪ್ಪರಗಿ ಮತ್ತು ಅವರ ಮಂಜುಳಾ ಮತ್ತು ಮಕ್ಕಳಾದ ಶ್ರೀಗಿರಿ ಹಾಗೂ ರಾಘವೇಂದ್ರ ಎಂಬ ನಾಲ್ಕು ಜನರ ಈ ಕುಟುಂಬ ನಿತ್ಯ ಯೋಗ ಮಾಡುವುದನ್ನು ರೂಢಿಸಿಕೊಂಡಿದೆ. ಇದರ ಜೊತೆ ದತ್ತಾತ್ರೇಯ ಅವರು ಓರ್ವ ಫೋಟೋಗ್ರಾಫರ್ ಕೂಡ ಆಗಿದ್ದು ವಿಜಯಪುರ ನಗರದಲ್ಲೇ ಒಂದು ಸ್ಟುಡಿಯೋ ತೆರೆದು ಜೀವನ ನಡೆಸುತ್ತಿದ್ದಾರೆ. ಇದರ ಜೊತೆಗೆ ಆಸಕ್ತಿ ಇರುವವರಿಗೆ ಯೋಗವನ್ನೂ ಹೇಳಿಕೊಡುತ್ತಿದ್ದಾರೆ.

    ದತ್ತಾತ್ರೆಯ ಅವರ ಬಲ ಭುಜಕ್ಕೆ ಪೆಟ್ಟಾಗಿ ಚಿಕಿತ್ಸೆ ಪಡೆದಿದ್ದರೂ ಗುಣಮುಖರಾಗಲಿಲ್ಲ. ಇದರ ಜೊತೆಗೆ ದತ್ತಾತ್ರೇಯ ಅವರಿಗೆ ವೈದ್ಯರು ಸಕ್ಕರೆ ಕಾಯಿಲೆ ಬರುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ ಎಂದು ಹೇಳಿದ್ದರಂತೆ. ಆ ಸಮಯದಲ್ಲಿ ಯೋಗಿ ರಾಮದೇವ್ ಬಾಬಾರ ಯೋಗ ನೋಡಿ ಆಕರ್ಷಿತರಾಗಿ ಯೋಗ ಮಾಡಲು 10 ವರ್ಷದ ಹಿಂದೆ ಪ್ರಾರಂಭ ಮಾಡಿದ್ದಾರೆ. ಅಂದಿನಿಂದ ಇಲ್ಲಿಯವರೆಗೆ ಸಕ್ಕರೆ ಕಾಯಿಲೆ ಆಗಲಿ, ಅಂಗಾಂಗಳ ನೋವಾಗಲಿ ಸುಳಿದಿಲ್ಲ ಎಂದು ಅವರು ಹೇಳುತ್ತಾರೆ.

    ಈ ಕಾರಣದಿಂದಲೇ ಅವರು ತಮ್ಮ ಮಕ್ಕಳಿಗೆ 6 ವರ್ಷದ ಮಕ್ಕಳಿಂದಲೇ ಯೋಗ ಅಭ್ಯಾಸ ಹೇಳಿಕೊಟ್ಟು ಪ್ರತಿನಿತ್ಯ ಇಡೀ ಕುಟುಂಬವೇ ಬೆಳಗ್ಗೆ ಎದ್ದು ಯೋಗ ಮಾಡುತ್ತದೆ. ಇದರಿಂದ ನಮ್ಮ ಕುಟುಂಬ ಆರೋಗ್ಯಕರ ಕುಟುಂಬ ಆಗಿದೆ ಎಂದು ದತ್ತಾತ್ರೇಯ ಅವರ ಪತ್ನಿ ಮಂಜುಳಾ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರ ಮಕ್ಕಳು ಶ್ರೀಗಿರಿ ಮತ್ತು ರಾಘವೇಂದ್ರ ಕೂಡ ತಂದೆ-ತಾಯಿಯನ್ನು ಮೀರಿಸುವ ಮಟ್ಟಿಗೆ ಚಕ್ರಾಸನ, ಪ್ರಾಣಾಯಾಮ, ವೃಚ್ಚಿಕಾಸನ, ಕೌಂಡಿನ್ಯಾಸನ ಸೇರಿದಂತೆ ಕಷ್ಟಕರ ಯೋಗದ ಆಸನಗಳನ್ನು ಮಾಡುತ್ತಾರೆ.

    ಯೋಗದಿಂದ ದತ್ತಾತ್ರೇಯ ಅವರ ಇಬ್ಬರು ಮಕ್ಕಳು ಜಿಲ್ಲೆ ಮತ್ತು ರಾಜ್ಯ ಹಾಗೂ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಗಳಲ್ಲಿ ಸಾಧನೆ ಮಾಡಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಮ್ಮ ಕುಟುಂಬದಂತೆ ಎಲ್ಲರು ಆರೋಗ್ಯಕರವಾಗಿರಬೇಕು ಅನ್ನೋದೇ ಇವರ ಮೂಲ ಉದ್ದೇಶ ಎಂದು ಅವರು ಹೇಳುತ್ತಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ನಡು ರಸ್ತೆಯಲ್ಲೇ ಕಿತ್ತಾಡಿಕೊಂಡ 2 ಕುಟುಂಬ- ಫುಲ್ ಟ್ರಾಫಿಕ್ ಜಾಮ್

    ನಡು ರಸ್ತೆಯಲ್ಲೇ ಕಿತ್ತಾಡಿಕೊಂಡ 2 ಕುಟುಂಬ- ಫುಲ್ ಟ್ರಾಫಿಕ್ ಜಾಮ್

    ಬೀದರ್: ಎರಡು ಕುಟುಂಬಗಳು ನಡು ರಸ್ತೆಯಲ್ಲಿಯೇ ಮಾರಾಮಾರಿ ಮಾಡಿಕೊಂಡ ಘಟನೆ ಬೀದರ್ ನಗರದ ಶಿವಾಜಿ ವೃತ್ತದ ಬಳಿ ನಡೆದಿದೆ.

    ಕೆಲಸದ ನಿಮಿತ್ತ ಬೀದರ್ ನಗರಕ್ಕೆ ಆಗಮಿಸಿದ ಎರಡು ಕುಟುಂಬದ ಸದಸ್ಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಹಣಕಾಸಿನ ವಿಚಾರಕ್ಕೆ ಉಂಟಾದ ವೈಮನಸ್ಸಿನಿಂದ ಪರಸ್ಪರ ಕಿತ್ತಾಡಿಕೊಂಡಿದ್ದಾರೆ ಎನ್ನಲಾಗಿದೆ. ಪರಿಣಾಮ ಕೆಲಕಾಲ ಕೋರ್ಟ್ ಎದುರಿನ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕೂಡ ಆಗಿತ್ತು.

    2 ಕುಟುಂಬದ ಮಾರಾಮಾರಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸ್ಥಳೀಯರು ಎರಡು ಕುಟುಂಬಸ್ಥರನ್ನು ಸಮಾಧಾನಪಡಿಸಿ ಕಳುಹಿಸಿದರು. ಈ ಜಗಳದಿಂದ ಕೆಲ ಕಾಲ ಜನರಿಗೆ ಬಿಟ್ಟಿ ಮನರಂಜನೆ ಸಿಕ್ಕಿದರೆ, ಕೆಲವರು ಈ ಹೈಡ್ರಾಮಾವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿಯುವಲ್ಲಿ ಬ್ಯುಸಿಯಾದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮದ್ವೆಯಾಗಿ ಬೇಡಿ ತೊಟ್ಟರೆ, ಕಳಚಲು ದೇವರ ಅಪ್ಪಣೆಯಾಗಲೇಬೇಕು

    ಮದ್ವೆಯಾಗಿ ಬೇಡಿ ತೊಟ್ಟರೆ, ಕಳಚಲು ದೇವರ ಅಪ್ಪಣೆಯಾಗಲೇಬೇಕು

    – ಬೇಡಿ ಕಳಚೋವರೆಗೆ ಮನೆಗೆ ಹೋಗುವಂತಿಲ್ಲ
    – ದೇವಸ್ಥಾನದಲ್ಲೇ 18 ಜನ ವಾಸ್ತವ್ಯ

    ವಿಜಯಪುರ: ಅಪರಾಧ ಮಾಡಿ ಬೇಡಿ ತೊಟ್ಟ ಕೈದಿ ಜಾಮೀನಿನ ಮೇಲಾದರೂ ಬಿಡುಗಡೆಯಾಗಬಹುದು. ಅದರೆ ಇಲ್ಲಿ ಮದುವೆಯಾಗಿ ಬೇಡಿ ತೊಟ್ಟರೆ ಮುಗೀತು ಯಾರೊಬ್ಬರ ವಕಾಲತ್ತು ನಡೆಯುವುದಿಲ್ಲ. ಬೇಡಿ ಕಳಚಲು ದೇವರ ಅಪ್ಪಣೆಯಾಗಲೇಬೇಕು.

    ಹೌದು. ಅಚ್ಚರಿಯಾದರೂ ಸತ್ಯ. ಇಂಥದ್ದೊಂದು ಸಂಪ್ರದಾಯ ನೂರಾರು ವರ್ಷಗಳಿಂದ ಸದ್ದಿಲ್ಲದೆ ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಯಂಕಂಚಿ ಗ್ರಾಮದಲ್ಲಿ ನಡೆದುಕೊಂಡು ಬಂದಿದೆ. ಮದುವೆಯಾಗಿ ಬೇಡಿ ತೊಟ್ಟು ದೇವಸ್ಥಾನಕ್ಕೆ ಬಂದರೆ ನಂತರ ಬೇಡಿ ಕಳಚಿ ಬೀಳುವವರೆಗೂ ಅವರು ಮನೆಗೆ ಹೋಗುವ ಆಗಿಲ್ಲ.

    ಇಲ್ಲಿನ ಮುಜಾವರ್ ಎಂಬ ಕುಟುಂಬದಲ್ಲಿ ಗಂಡು ಮಕ್ಕಳಿಗೆ ಮದುವೆ ಆದರೆ ಈ ರೀತಿ ಕಾಲಿಗೆ ಕಬ್ಬಿಣದ ಕೋಳ ಹಾಕಿಕೊಳ್ಳುವ ಸಂಪ್ರದಾಯವಿದೆ. ಇದರ ಪ್ರಕಾರ ಬೇಡಿ ತೊಟ್ಟ ಸುಮಾರು 18 ಜನ ದೇವಸ್ಥಾನದಲ್ಲೇ ವಾಸ್ತವ್ಯ ಹೂಡಿದ್ದಾರೆ. ಕಳೆದ 15 ದಿನಗಳಿಂದ ಕಾಲಿಗೆ ಕಬ್ಬಿಣದ ಸಣ್ಣ ಸರಳಿನಿಂದ ಮಾಡಿದ ಬೇಡಿ ಕಟ್ಟಿಕೊಂಡು ದೇವಸ್ಥಾನದಲ್ಲೇ ಅಡ್ಡಾಡುತ್ತಿದ್ದಾರೆ. ಎಷ್ಟೇ ದಿನಗಳಾಗಲಿ ಬೇಡಿ ತನ್ನಿಂತಾನೆ ಕಳಚುವವರೆಗೂ ಮನೆಗೆ ಹೋಗುವಂತಿಲ್ಲ.

    ಸ್ಥಳೀಯ ದಾವಲ್‍ಮಲ್ಲಿಕ್ ದೇವಸ್ಥಾನದ ಅರ್ಚಕರಾದ ಹಿಂದೂ ಕುರುಬ ಸಮುದಾಯ ಅರ್ಜುನ ಮುಜಾವರ್ ಆಗಿದ್ದಾರೆ. ಮುಜಾವರ ಕುಟುಂಬ ಸದ್ಯಸರೇ ಬೇಡಿ ಹಾಕಿಕೊಂಡು ದೇವರ ಅಪ್ಪಣೆಗಾಗಿ ಕಾಯುತ್ತಿದ್ದಾರೆ. ಮುಜಾವರ್ ಕುಟುಂಬದಲ್ಲಿ ಗಂಡು ಮಕ್ಕಳಿಗೆ ಮದುವೆ ಆದರೆ ಈ ರೀತಿ ಕಾಲಿಗೆ ಕಬ್ಬಿಣದ ಕೋಳ ಹಾಕಿಕೊಳ್ಳುವ ಸಂಪ್ರದಾಯವಿದೆ. ಕಾಲಿಗೆ ಕೋಳ ಹಾಕಿಕೊಂಡು ದಾವಲ್‍ಮಲ್ಲಿಕ್ ದೇವರ ಮೊರೆ ಹೋಗುತ್ತಾರೆ.

    ದೇವರು ಅಪ್ಪಣೆ ಕೊಟ್ಟು ತನ್ನಿಂದ ತಾನೇ ಕೋಳ ಮುರಿಯುವ ವರೆಗೂ ಯಾವೊಬ್ಬ ಕುಟುಂಬದ ಸದಸ್ಯ ಕೂಡ ಮನೆಗೆ ಹೋಗಿ ಸಂಸಾರ ಮಾಡುವಂತಿಲ್ಲ. ಈಗಾಗಲೇ 6 ಜನರ ಬೇಡಿ ಕಳಚಿದ್ದು ಇನ್ನುಳಿದ 18 ಜನ ದೇವರ ಕೃಪೆಗಾಗಿ ಕಾದಿದ್ದಾರೆ.

  • ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

    ಮಂಡ್ಯ ಬಸ್ ದುರಂತ ಕೇಂದ್ರ ಸರ್ಕಾರದಿಂದ ನೆರವು- ನನಗೆ ಕ್ರೆಡಿಟ್ ಬೇಡ ಎಂದ ಸುಮಲತಾ

    ಮಂಡ್ಯ: 2018 ನವೆಂಬರ್ 24ರಂದು ಜಿಲ್ಲೆಯ ಪಾಂಡವಪುರದ ಕನಗನಮರಡಿ ಎಂಬ ಗ್ರಾಮದಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಜನರು ಸಾವನ್ನಪಿದ್ದರು. ಈ ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂ. ಹಣ ಬಂದಿದೆ. ಆದರೆ ಈ ವಿಚಾರ ಈಗ ರಾಜಕೀಯ ತಿರುವು ಪಡೆದು ಚರ್ಚೆಗೆ ಕಾರಣವಾಗಿದೆ. ಇದೀಗ ಎಲ್ಲ ಗೊಂದಲಗಳಿಗೆ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ.

    https://www.facebook.com/permalink.php?story_fbid=2502437746650334&id=100006523990844

    ಮಂಡ್ಯದಲ್ಲಿ ಈ ಹಣ ಕೇಂದ್ರ ಸರ್ಕಾರದಿಂದ ಬರಲು ನೂತನ ಸಂಸದೆ ಸುಮಲತಾ ಕಾರಣ ಎಂದು ಸುಮಲತಾ ಬೆಂಬಲಿಗರು ಮತ್ತು ಈ ನೆರವು ಬರಲು ಕಾರಣ ರಾಜ್ಯ ಸರ್ಕಾರದ ಸಿಎಂ ಕಾರಣ ಎಂದು ಜೆಡಿಎಸ್ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ಮಾಡುತ್ತಿದ್ದಾರೆ. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸುಮಲತಾ ಅವರು ನನಗೆ ಆ ಕ್ರೆಡಿಟ್ ಬೇಡ ಎಂದು ಹೇಳಿದ್ದಾರೆ.

    ಇಂದು ಜಿಲ್ಲೆಯ ಮಾಚಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ದುರಂತದ ಸಂಗತಿ. ಆ ಕುಟುಂಬಗಳಿಗೆ ಅನುದಾನ ತಲುಪಿರೋದು ಮುಖ್ಯ. ಯಾರು ಕೊಟ್ಟಿದ್ದಾರೆ, ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ. ಆ ರೀತಿ ತಪ್ಪು ಯಾರೂ ಮಾಡಬಾರದು ನಾನಂತೂ ಆ ತಪ್ಪು ಮಾಡೋದಿಲ್ಲ ಎಂದು ಹೇಳಿದ್ದಾರೆ.

    ಬಸ್ ದುರಂತವನ್ನು ಪ್ರಚಾರಕ್ಕೆ ಬಳಸೋದು ನನಗಿಷ್ಟ ಇಲ್ಲ. ಹಿಂದೆಯಿಂದಲೂ ನಾನು ಸಾಕಷ್ಟು ಬಾರಿ ಹೇಳಿದ್ದೀನಿ ಸಾಧನೆಗಳು ನಮ್ಮ ಬಗ್ಗೆ ಮಾತಾಡಬೇಕು. ನಾವು ನಮ್ಮ ಸಾಧನೆಗಳ ಬಗ್ಗೆ ಮಾತಾಡಬಾರದು. ಯಾರೇ ಮಾಡಿರಲಿ ಅದನ್ನು ಹೇಳಿಕೊಳ್ಳಬಾರದು. ಈ ವಿಚಾರದಲ್ಲಿ ಯಾರು ಬೇಕಾದರೂ ಕ್ರೆಡಿಟ್ ತೆಗೆದುಕೊಳ್ಳಲಿ ನನಗೆ ಆ ಬಗ್ಗೆ ಬೇಜಾರ್ ಏನೂ ಇಲ್ಲ. ನನ್ನ ಕೆಲಸ ಈಗಷ್ಟೇ ಆರಂಭವಾಗಿದೆ. ಅದನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಹೋಗುವ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಇದೇ ವೇಳೆ ಸಂಸತ್ ಅಧಿವೇಶನದ ಬಳಿಕ ಕ್ಷೇತ್ರ ಪ್ರವಾಸ ಮಾಡುತ್ತೇನೆ. ಬಜೆಟ್‍ನಲ್ಲಿ ಸಾಕಷ್ಟು ನಿರೀಕ್ಷೆ ಇದೆ, ಸಾಕಷ್ಟು ಕೊಡುಗೆ ನೀಡೋ ವಿಶ್ವಾಸ ಇದೆ. ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ಮಂಡ್ಯದ ಸಮಸ್ಯೆ ಬಗೆಹರಿಸಲು ಮತ್ತು ಮಂಡ್ಯ ರೈತರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನ ಮಾಡುತ್ತೇನೆ. ಮಂಡ್ಯದ ಶುಗರ್ ಸಕ್ಕರೆ ಕಾರ್ಖಾನೆ ಖಾಸಗೀಕರಣ ರೈತರಿಗೆ ಒಳ್ಳೆಯದಾಗುವಂತ ನಿರ್ಧಾರ ತೆಗೆದುಕೊಂಡರೆ ಸಹಕಾರ ನೀಡುತ್ತೇನೆ. ಇದರ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡಿ ಮಾಹಿತಿ ಪಡೆದು ಯಾವುದು ಸೂಕ್ತ ಅನ್ನೋದನ್ನು ನಂತರ ತೀರ್ಮಾನ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

    https://www.youtube.com/watch?v=XpZzL4RaCWk

    ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರದಿಂದ ಮಂಡ್ಯ ನಿರ್ಲಕ್ಷ್ಯ ವಿಚಾರದ ಬಗ್ಗೆ ಕೇಳಿದಾಗ, ಈ ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಈಗಷ್ಟೇ ಚುನಾವಣೆ ಮುಗಿದಿದೆ. ಆ ವೇಳೆ ಸಾಕಷ್ಟು ಭರವಸೆ ಕೂಡ ಕೊಟ್ಟಿದ್ದರು. ಎಲ್ಲಾ ಭರವಸೆ ಈಡೇರಿಸೋ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಏನ್ ಮಾಡುತ್ತಾರೆ ಅನ್ನೋದನ್ನು ಕಾದು ನೋಡೋಣ ಎಂದರು. ಮಣಿಗೆರೆಯಲ್ಲಿ ಮೂವರ ದುರ್ಮರಣ ಪ್ರಕರಣದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಯಾರಿಂದ ಪರಿಹಾರ ಕೊಡಿಸಬೇಕೋ ಅವರಿಂದ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

  • ಡ್ರಗ್ಸ್ ನಶೆಯಲ್ಲಿ ಕುಟುಂಬದವರನ್ನೇ ಕೊಂದು ಫೇಸ್‍ಬುಕ್ ಲೈವ್ ಹೋದ

    ಡ್ರಗ್ಸ್ ನಶೆಯಲ್ಲಿ ಕುಟುಂಬದವರನ್ನೇ ಕೊಂದು ಫೇಸ್‍ಬುಕ್ ಲೈವ್ ಹೋದ

    ಕೋಲ್ಕತ್ತಾ: ಡ್ರಗ್ಸ್ ನಶೆಯಲ್ಲಿದ್ದ ಯುವಕನೊಬ್ಬ ತನ್ನ ಕುಟುಂಬದವರಿಗೆ ಚಾಕು ಇರಿದು ಹಲ್ಲೆ ನಡೆಸಿ, ತನ್ನ ಅಜ್ಜಿಯನ್ನು ಕೊಲೆ ಮಾಡಿ ಅದನ್ನ ಫೇಸ್‍ಬುಕ್ ಲೈವ್ ಮಾಡಿದ ಅಮಾನವೀಯ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ.

    ಆರೋಪಿಯನ್ನು ಇಂದ್ರನೀಲ್ ರಾಯ್ (27) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಡ್ರಗ್ಸ್ ನಶೆಯಲ್ಲಿದ್ದ ಯುವಕ ತನ್ನ ಕುಟುಂಬಸ್ಥರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೆ ಈ ವೇಳೆ ಇಂದ್ರನೀಲ್ ಅಜ್ಜಿ ಆರತಿ ರಾಯ್ (80) ಮೃತಪಟ್ಟಿದ್ದು, ಇತರರು ಗಾಯಗೊಂಡಿದ್ದಾರೆ. ಡ್ರಗ್ಸ್ ನಶೆಯಲ್ಲಿ ಮುಳುಗಿದ್ದ ಯುವಕ ತಾನು ಏನು ಮಾಡುತ್ತಿದ್ದೇನೆ ಎಂಬ ಅರಿವಿಲ್ಲದೆ ತಾನು ಮಾಡಿದ ದುಷ್ಕೃತ್ಯ ವನ್ನು ಫೇಸ್‍ಬುಕ್ ಲೈವ್ ಕೂಡ ಮಾಡಿದ್ದಾನೆ ಎಂದು ಮಾಹಿತಿ ದೊರಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯುವಕನ ಹಲ್ಲೆಯಿಂದ ಅವರ ಪೋಷಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಆದರೆ ಈಗ ಅವರು ಕ್ಷೇಮವಾಗಿದ್ದಾರೆ. ಅಲ್ಲದೆ ಆರೋಪಿಯನ್ನು ನಾವು ಬಂಧಿಸಿ, ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    ಇಂದ್ರನೀಲ್ ಡ್ರಗ್ಸ್ ನಶೆಯಲ್ಲಿ ಮುಳುಗಿಹೋಗಿದ್ದ. ಹೀಗಾಗಿ ಕೆಲವು ದಿನಗಳಿಂದ ವಿಚಿತ್ರವಾಗಿ ವರ್ತಿಸುತ್ತಿದ್ದನು. ಆದರೆ ಈ ರೀತಿ ಕುಟುಂಬಸ್ಥರ ಮೇಲೆಯೇ ಹಲ್ಲೆ ನಡೆಸುತ್ತಾನೆ ಎಂದು ನಾವು ಊಹಿಸಿರಲಿಲ್ಲ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.

    ಈ ಬಗ್ಗೆ ಮನೋರೋಗ ತಜ್ಞರೊಬ್ಬರು ಪ್ರತಿಕ್ರಿಯಿಸಿ, ಯುವಕ ಡ್ರಗ್ಸ್ ನಶೆಯಲ್ಲಿ ಈ ರೀತಿ ಮಾಡಿದ್ದಾನೋ ಅಥವಾ ಅವನು ಮಾನಸಿಕ ಅಸ್ವಸ್ಥನಾಗಿದ್ದನೊ ಎನ್ನುವ ಬಗ್ಗೆ ಪರಿಶೀಲಿಸಿ, ನಂತರ ಆತನ ವಿರುದ್ಧ ಕ್ರಮಕೈಗೊಳ್ಳಿ ಎಂದು ಪೊಲೀಸರಿಗೆ ಸಲಹೆ ನೀಡಿದ್ದಾರೆ.

  • ಒಳಚರಂಡಿ ವಿವಾದ- ಕುಟುಂಬಸ್ಥರ ಎದುರೇ 12ರ ಬಾಲಕಿ ಮೇಲೆ  ಗ್ಯಾಂಗ್‍ರೇಪ್

    ಒಳಚರಂಡಿ ವಿವಾದ- ಕುಟುಂಬಸ್ಥರ ಎದುರೇ 12ರ ಬಾಲಕಿ ಮೇಲೆ ಗ್ಯಾಂಗ್‍ರೇಪ್

    ಗೋರಖ್ಪುರ: ಒಳಚರಂಡಿ ವಿಚಾರವಾಗಿ ಜಗಳವಾಡಿ, ಕುಟುಂಬಸ್ಥರ ಎದುರಲ್ಲೇ 12 ವರ್ಷದ ಬಾಲಕಿ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರ ಸಂಜೆ ಅಹಿರುಲಿ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಶುಕ್ರವಾರ ಬೆಳಗ್ಗೆ ಒಳಚರಂಡಿ ವ್ಯವಸ್ಥೆ ನಿರ್ಮಾಣದ ಬಗ್ಗೆ ಬಾಲಕಿಯ ಕುಟುಂಬದೊಂದಿಗೆ ಜಗಳಕ್ಕಿಳಿದಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಗಳು ಕೋಪಗೊಂಡಿದ್ದರು. ಸಂಜೆ 6 ಮಂದಿ ಆರೋಪಿಗಳು ಸೇರಿಕೊಂಡು ಬಾಲಕಿಯ ಕುಟುಂಬದ ಕಣ್ಣೆದುರೇ ಆಕೆಯ ಮೇಲೆ ಅತ್ಯಾಚಾರವೆಸೆಗಿ ದುಷ್ಟತನ ಮೆರೆದಿದ್ದಾರೆ.

    ಅಲ್ಲದೆ ಈ ವೇಳೆ ಕುಟುಂಬಸ್ಥರು ಈ ಅನ್ಯಾಯವನ್ನು ತಡೆಯಲು ಪ್ರಯತ್ನಿಸಿದಾಗ ಅವರ ಮೇಲೆಯೇ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಶನಿವಾರ ಬೆಳಗ್ಗೆ ಬಾಲಕಿಯ ತಾಯಿ ಈ ಘಟನೆ ಕುರಿತು ಪೊಲೀಸರಿಗೆ ಲಿಖಿತ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಬಳಿಕ ಆರೋಪಿಗಳಿಗೆ ಬಲೆ ಬೀಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇನ್ನೂ ಇಬ್ಬರು ಆರೋಪಿಗಳಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಆರು ಮಂದಿ ಆರೋಪಿಗಳ ವಿರುದ್ಧವೂ ಕೂಡ ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಪೋಕ್ಸೋ ಮತ್ತು ಎಸ್‍ಸಿ/ಎಸ್‍ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಆರ್.ಎನ್ ಮಿಶ್ರಾ ತಿಳಿಸಿದ್ದಾರೆ.

  • ನಾಪತ್ತೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಹೊರಟ ತಂದೆ

    ನಾಪತ್ತೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಹೊರಟ ತಂದೆ

    ನವದೆಹಲಿ: ನಾಪತ್ತೆಯಾಗಿರುವ ವಾಯುಸೇನೆ ವಿಮಾನದಲ್ಲಿದ್ದ ಫ್ಲೈಟ್ ಲೆಫ್ಟಿನೆಂಟ್ ಶೀಘ್ರವೇ ಮನೆಗೆ ಮರಳುತ್ತಾನೆ ಎನ್ನುವ ನಿರೀಕ್ಷೆಯಲ್ಲಿ ಕುಟುಂಬದ ಸದಸ್ಯರು ಈಗ ದಿನದೂಡುತ್ತಿದ್ದಾರೆ.

    13 ಜನರನ್ನು ಹೊತ್ತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಸೋಮವಾರ ಮಧ್ಯಾಹ್ನ ಕಾಣೆಯಾಗಿತ್ತು. ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಪಂಜಾಬ್‍ನ ಪಟಿಯಾಲ ಜಿಲ್ಲೆಯ ಮೋಹಿತ್ ಗಾರ್ಗ್ ಅವರು ಭಾರತೀಯ ವಾಯುಪಡೆಯಲ್ಲಿ ಫ್ಲೈಟ್ ಲೆಫ್ಟಿನೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

    ಮೋಹಿತ್ ಅವರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಮಗ ಕಾಣೆಯಾಗಿರುವ ವಿಚಾರವನ್ನು ಕುಟುಂಬದ ಸದಸ್ಯರು ತಾಯಿಗೆ ಇಲ್ಲಿಯವರೆಗೆ ತಿಳಿಸಿಲ್ಲ. ಮೋಹಿತ್ ಅವರು ಐದು ವರ್ಷದಿಂದ ಅಸ್ಸಾಂ ರಾಜ್ಯದ ಜೋರ್ಹತ್‍ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

    ಕಳೆದ ವರ್ಷ ಅಸ್ತ ಗಾರ್ಗ್ ಅವರನ್ನು ಮೋಹಿತ್ ಮದುವೆಯಾಗಿದ್ದರು. ಕೊನೆಯದಾಗಿ ದೀಪಾವಳಿ ಹಬ್ಬದ ಸಮಯದಲ್ಲಿ ಮನೆಗೆ ಬಂದಿದ್ದ ಮೋಹಿತ್ ನಂತರ ಬಂದಿರಲಿಲ್ಲ.

    ಈಗ ಮಗನನ್ನು ಹುಡುಕಲು ತಂದೆ ಸುರೇಂದ್ರಪಾಲ್ ಗಾರ್ಗ್ ಜೋರ್ಹತ್‍ಗೆ ಹೋಗಿದ್ದಾರೆ. ನನಗೆ ನನ್ನ ಮಗ ವಾಪಸ್ ಬೇಕು. ಮೋಹಿತ್ ಸಿಗುವ ತನಕ ಹುಡುಕುತ್ತೇನೆ. ನಾನು ಇದನ್ನು ಬಿಟ್ಟರೆ ಈಗ ಬೇರೆ ಏನೂ ಹೇಳುವುದಿಲ್ಲ. ನನ್ನ ಮಗನ ಬಗ್ಗೆ ಯಾವ ಮಾಹಿತಿಯೂ ಸಿಕ್ಕಿಲ್ಲ. ನನಗೆ ನನ್ನ ಮಗ ವಾಪಸ್ ಬೇಕು ಎಂದು ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಮೋಹಿತ್ ಅವರ ಹಿರಿಯ ಸಹೋದರ ಆಶ್ವಿನ್, ಈ ರೀತಿಯ ಘಟನೆ ಮುಂದೆ ನಡೆಯಬಾರದು. ನಮ್ಮ ಸೇನೆಗೆ ನೀಡುವ ಉಪಕರಣಗಳು ಆಧುನಿಕವಾಗಿರಬೇಕು ಮತ್ತು ಸಮಯಕ್ಕೆ ತಕ್ಕಂತೆ ನವೀಕರಣವಾಗಿರಬೇಕು. ಈ ದೇಶವನ್ನು ರಕ್ಷಿಸುವ ಸೈನಿಕರನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು.

    ಮೂರು ದಿನ ಕಳೆದರೂ ಯಾವುದೇ ಮಾಹಿತಿ ಸಿಗದ ಕಾರಣ ಅವರ ಚಿಕ್ಕಪ್ಪ ರಿಷಿಪಾಲ್ ಗಾರ್ಗ್ ಅವರು ಮೋಹಿತ್ ಪತ್ನಿ ಅಸ್ತ ಗಾರ್ಗ್ ಅವರನ್ನು ಕರೆದುಕೊಂಡು ಜೋರ್ಹತ್ ಹೋಗಿದ್ದಾರೆ. ಏನಾದರೂ ಪವಾಡ ನಡೆದು ತಮ್ಮ ಮಗ ಮನೆಗೆ ವಾಪಸ್ ಬರಲಿ ಎಂದು ಕುಟುಂಬದ ಸದಸ್ಯರು ಈಗ ದೇವರನ್ನು ಬೇಡಿಕೊಳ್ಳುತ್ತಿದ್ದಾರೆ.

    ಭಾರತೀಯ ವಾಯು ಪಡೆಯ ಸರಕು ಸಾಗಾಟ ವಿಮಾನದಲ್ಲಿ 8 ಮಂದಿ ಸಿಬ್ಬಂದಿ ಮತ್ತು 5 ಮಂದಿ ಪ್ರಯಾಣಿಕರಿದ್ದರು. ಅರುಣಾಚಲ ಪ್ರದೇಶದ ಮೆಚುಕಾ ವಾಯುನೆಲೆಯಿಂದ ಸೋಮವಾರ ಮಧ್ಯಾಹ್ನ 12.25ಕ್ಕೆ ಟೇಕಾಫ್ ಆಗಿದ್ದ ವಿಮಾನ 35 ನಿಮಿಷಗಳ ಕಾಲ ಸಂಪರ್ಕದಲ್ಲಿತ್ತು. ಆದರೆ ಮಧ್ಯಾಹ್ನ 1 ಗಂಟೆಯ ವೇಳೆ ಸಂಪರ್ಕ ಕಳೆದುಕೊಂಡಿದೆ. ಮೂರು ದಿನಗಳಿಂದಲೂ ವಿಮಾನಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ.

  • ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

    ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

    ಚಿತ್ರದುರ್ಗ: ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ.

    ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

    ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ ಕೈಗೊಂಡಿದೆ. ಅಲ್ಲದೆ ನಿವೇಶನಕ್ಕಾಗಿ ಸ್ಥಳೀಯರ ಕಿರುಕುಳ ಕೂಡ ತಾಳಲಾರದೇ ಮಂಜುನಾಥ್ ಕುಟುಂಬ ಕಂಗಾಲಾಗಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರ ನೆರವಿನಿಂದ ಈ ಅನಾಹುತ ತಪ್ಪಿದೆ.

    ಮಂಜುನಾಥ್ ತಂದೆ ನಿಂಗಪ್ಪನವರ ಹೆಸರಿನಲ್ಲಿ ಈ ಖಾಲಿ ನಿವೇಶನ ಇತ್ತು. ತಿಮ್ಮಣ್ಣನ ಮಕ್ಕಳಿಂದ ಮಂಜುನಾಥ್ ಮೇಲೆ ದೌರ್ಜನ್ಯ ಹಾಗೂ ಅಕ್ರಮ ನಿವೇಶನ ಬಳಕೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪ್ರಾಣವನ್ನೇ ಪಣಕ್ಕಿಟ್ಟು ತೆಪ್ಪದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಮಹಿಳೆಯರು

    ಪ್ರಾಣವನ್ನೇ ಪಣಕ್ಕಿಟ್ಟು ತೆಪ್ಪದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಮಹಿಳೆಯರು

    ಚಿಕ್ಕಬಳ್ಳಾಪುರ: ಬಡತನ ಎಂಬುದು ಮನುಷ್ಯನ ಕೈಯಲ್ಲಿ ಏನ್ ಬೇಕಾದರೂ ಮಾಡಿಸುತ್ತದೆ ಎಂಬುವುದಕ್ಕೆ ಈ ಮಹಿಳೆಯರೇ ಸಾಕ್ಷಿ. ಮೂರು ಹೊತ್ತು ನೆಮ್ಮದಿಯಾಗಿ ಊಟ ಮಾಡಲು ಮೂವರು ಮಹಿಳೆಯರು ತೆಪ್ಪದಲ್ಲಿ ಕೆರೆಗೆ ಸಾಗಿ ಮೀನು ಹಿಡಿಯುತ್ತಿದ್ದಾರೆ.

    ಈ ಸಾಹಸಿ ಮಹಿಳೆಯರು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವೆಂಕಟಾಪುರ ಕೆರೆಯಲ್ಲಿ. ಇಲ್ಲಿನ ಆಂಧ್ರ ಮೂಲದ ಈ ಮಹಿಳೆಯರು ಸಾಹಸ ಎಲ್ಲರೂ ಹುಬ್ಬೇರುವಂತೆ ಮಾಡಿದೆ.

    ಆ ಮಹಿಳೆಯರು ಗಂಡ-ಮಕ್ಕಳು ಸಂಸಾರ ಎಲ್ಲವನ್ನು ಕಟ್ಟಿಕೊಂಡು ತೆಪ್ಪ ಏರಿದ್ದಾರೆ ಅಂದರೆ ಸಾಕು ಹೊಟ್ಟೆ ತುಂಬುವವರೆಗೂ ಭೂಮಿ ಮೇಲೆ ಬರಲ್ಲ. ಪ್ರತಿ ದಿನ ಬದುಕಿನ ಬಂಡಿ ಸಾಗಿಸಲು ಇರುವ ಹಳೆ ತೆಪ್ಪದಲ್ಲೇ ಕೆರೆಗೆ ಸಾಗುವ ಮಹಿಳೆಯರು ಭರ್ಜರಿ ಮೀನುಗಳನ್ನು ಹಿಡಿದು ಮರಳಿ ದಡಕ್ಕೆ ವಾಪಸಾಗುತ್ತಾರೆ. ಪ್ರತಿದಿನ ಕೆರೆಗೆ ಸಾಗಿ ಮೀನು ತರುವ ಮಹಿಳೆಯರ ಕಾಯಕ ಕಂಡ ಜನ ಮಹಿಳೆಯರ ಸಾಹಸ ಕಂಡು ಮೆಚ್ಚುಗೆ ಜೊತೆ ಆಶ್ಚರ್ಯ ಮತ್ತು ಆತಂಕವನ್ನೂ ವ್ಯಕ್ತಪಡಿಸ್ತಾರೆ.

    ಬದುಕಿನ ಬಂಡಿ ಸಾಗಿಸಲು ಗಂಡ ಮಕ್ಕಳು ಕುಟುಂಬ ಸಮೇತ ಚಿಕ್ಕಬಳ್ಳಾಪುರ ಜಿಲ್ಲೆಯತ್ತ ಬಂದಿರೋ ಈ ಮಹಿಳೆಯರು ಪ್ರತಿದಿನ ಒಂದಲ್ಲ ಒಂದು ಕೆರೆಯಲ್ಲಿ ಮೀನು ಹಿಡಿಯುವ ಕಾಯಕ ಮಾಡುತ್ತಾರೆ. ಮೀನು ಸಾಕಿರುವ ಗುತ್ತಿಗೆದಾರನಿಗೆ ತಂದ ಮೀನು ಕೊಟ್ಟು ತಲಾ ಕೆಜಿಗೆ 20 ರೂಪಾಯಿ ಪಡೆಯುತ್ತಾರೆ. ಹೀಗೆ ಬಂದ ಹಣದಿಂದಲೇ ತಮ್ಮ ಜೀವನ ಸಾಗಿಸುತ್ತಾ ತೆಪ್ಪದಲ್ಲೊಂದು ಬದುಕು ಕಂಡುಕೊಂಡಿದ್ದಾರೆ.

    ಒಟ್ಟಿನಲ್ಲಿ ಮಹಿಳೆಯರು ಯಾರಿಗೇನು ಕಮ್ಮಿಯಿಲ್ಲ ಬಾಹ್ಯಾಕಾಶಕ್ಕೆ ಹಾರಿದವರು ಉಂಟು, ಆಗಸದಲ್ಲಿ ವಿಮಾನ ಹಾರಿಸದವರು ಉಂಟು ಆದರೆ ಕಡುಬಡತನದ ಈ ಮಹಿಳೆಯರು ತಮ್ಮ ಬದುಕಿನ ಬಂಡಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟು ತೆಪ್ಪದಲ್ಲೊಂದು ಬದುಕು ಕಟ್ಟಿಕೊಂಡಿದ್ದಾರೆ. ಇವರ ಬದುಕು ಸಾಹಸ ಹಲವು ಮಂದಿಗೆ ಸ್ಪೂರ್ತಿಯಾಗಲಿದೆ.

  • ಕೆರೆಯಲ್ಲಿ ಮುಳುಗಿದ ಎತ್ತಿನ ಗಾಡಿ – ದಂಪತಿ ಸೇರಿ ಇಬ್ಬರು ಮಕ್ಕಳು ದುರ್ಮರಣ

    ಕೆರೆಯಲ್ಲಿ ಮುಳುಗಿದ ಎತ್ತಿನ ಗಾಡಿ – ದಂಪತಿ ಸೇರಿ ಇಬ್ಬರು ಮಕ್ಕಳು ದುರ್ಮರಣ

    ಹಾಸನ: ಕರೆಯಲ್ಲಿ ಎತ್ತಿನ ಗಾಡಿ ಮುಳುಗಿದ ಪರಿಣಾಮ ಜಮೀನಿನ ಕಡೆಗೆ ಹೊರಟಿದ್ದ ರೈತ ದಂಪತಿ ಸೇರಿದಂತೆ ಇಬ್ಬರು ಮಕ್ಕಳು ದುರ್ಮರಣ ಹೊಂದಿರುವ ಘಟನೆ ಹೊಳೆನರಸೀಪುರದದಲ್ಲಿ ನಡೆದಿದೆ.

    ಮೃತ ರೈತ ದಂಪತಿಯನ್ನು ರಾಜೇಗೌಡ (48), ಶಾರದಮ್ಮ (40), ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ ಎಂದು ಮೈಸೂರಿನಿಂದ ಅಜ್ಜಿ ಮನೆಗೆ ಬಂದಿದ್ದ  ದೃತಿ (5) ಮೃತ  ಎಂಬ ಬಾಲಕಿರು ಈ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

    ಬೇಸಿಗೆ ಸಮಯವಾಗಿದ್ದರಿಂದ ಕೆರೆಯ ನೀರಿನ ಪ್ರಮಾಣ ಕಡಿಮೆಯಾಗಿತ್ತು. ನೀರಿಲ್ಲದ ಸಂದರ್ಭದಲ್ಲಿ ಕರೆಯೊಳಗೆ ಎತ್ತಿನ ಗಾಡಿಯಲ್ಲಿ ಹೋಗುತ್ತಿದ್ದರು. ಆದರೆ ಇತ್ತೀಚೆಗೆ ಮಳೆ ಬಂದ ಕಾರಣ ಕೆರೆಯಲ್ಲಿ ನೀರು ತುಂಬಿತ್ತು. ಇಂದು ಈ ದಡದಿಂದ ಆ ದಡಕ್ಕೆ ಹೋಗಲು ಹತ್ತಿರವಾಗುತ್ತೆ ಎಂಬ ಕಾರಣಕ್ಕೆ ನೀರಿನೊಳಗೆ ಎತ್ತಿನಗಾಡಿಯನ್ನು ಹೊಡೆಯಲಾಗಿದೆ. ಆದರೆ ನೀರಿನ ಮಧ್ಯ ಎತ್ತುಗಳು ಗಾಬರಿಗೊಂಡು ಅಲ್ಲಿ ಮುಂಚೆಯೇ ಇದ್ದ ಗುಂಡಿಯೊಳಗೆ ಗಾಡಿ ಬಿದ್ದಿದೆ. ಈ ಪರಿಣಾಮ ಈಜು ಬಾರದ ಒಂದೇ ಕುಟುಂಬದ ಎಲ್ಲರು ಮೃತ ಪಟ್ಟಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿದ ಹಳ್ಳಿ ಮೈಸೂರು ಪೊಲೀಸರು ಶಾರದಮ್ಮ ಮೃತದೇಹ ಮತ್ತು ಎತ್ತಿನ ಗಾಡಿಯನ್ನು ಕೆರೆಯಿಂದ ಹೊರಕ್ಕೆ ತೆಗಿದಿದ್ದಾರೆ. ಇನ್ನುಳಿದ ಮೃತದೇಹಗಳ ಶೋಧಕಾರ್ಯ ಮುಂದುವರೆದಿದೆ. ಎತ್ತುಗಳು ಬಂಡಿಯಿಂದ ಹೊರ ಬಂದು ದಡ ಸೇರಿವೆ. ಈ ಸಂಬಂಧ ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.