Tag: family

  • ಮಾಜಿ ಪ್ರಧಾನಿ ದೇವೇಗೌಡರ ಫ್ಯಾಮಿಲಿಯ ಬಿಗ್ ನ್ಯೂಸ್!

    ಮಾಜಿ ಪ್ರಧಾನಿ ದೇವೇಗೌಡರ ಫ್ಯಾಮಿಲಿಯ ಬಿಗ್ ನ್ಯೂಸ್!

    ಬೆಂಗಳೂರು: ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಕುಟುಂಬ ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಹೊಸ ವ್ಯಾಖ್ಯಾನ ಬರೆಯಲು ಹೊರಟಿದ್ದು, ಕುಟುಂಬದಲ್ಲಿ ರಾಜಕೀಯಾಸಕ್ತಿರುವ ಎಲ್ಲರನ್ನೂ ಪೊಲಿಟಿಷಿಯನ್ ಮಾಡಲು ಪ್ಲಾನ್ ಹಾಕುತ್ತಿದ್ದಾರೆ. ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆಗೆ ದೇವೇಗೌಡರು ಚಾಣಕ್ಯ ತಂತ್ರ ಹೆಣೆಯುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

    ಈ ಕುಟುಂಬದಿಂದ ಲೋಕಸಭೆ ಚುನಾವಣಾ ಕಣಕ್ಕೆ ಮೂವರು ಸ್ಪರ್ಧೆ ಮಾಡುತ್ತಿದ್ದಾರೆ. ಮೂವರ ಪೈಕಿ ಮೊದಲನೇಯವರೇ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ. ಇವರು ಈ ಹಿಂದೆ ರಾಜಕೀಯ ಸನ್ಯಾಸ ಕೈಗೊಳ್ಳುತ್ತೀನಿ ಎಂದು ಹೇಳಿದ್ದರು. ಆದರೆ ಈಗ ಮುಂಬರುವ ಲೋಕಸಭೆ ಸಮರದಲ್ಲಿ ಖುದ್ದು ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಅದರಲ್ಲೂ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ನಿಲ್ಲಲಿದ್ದಾರೆ ಎನ್ನಲಾಗಿದೆ.

    ಸಿಎಂ ಕುಮಾರಸ್ವಾಮಿ 2014ರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಈಗ ಮಗ ಸೋತಿದ್ದ ಕ್ಷೇತ್ರದಲ್ಲಿ ಈ ಬಾರಿ ಕಣಕ್ಕೆ ಜಿಗಿಯಲಿದ್ದು, ಚಿಕ್ಕಬಳ್ಳಾಪುರದಲ್ಲಿ ಮಗನ ಸೋಲನ್ನೇ ಮೆಟ್ಟಿ ನಿಂತು ಜಯಿಸಲು ದೇವೇಗೌಡು ನಿರ್ಧಾರ ಮಾಡಿದ್ದಾರೆ. ದೇವೇಗೌಡರ ಸ್ಪರ್ಧೆಯಿಂದ ಕಾಂಗ್ರೆಸ್ಸಿನಲ್ಲಿ ಕುತೂಹಲ ಹುಟ್ಟಿಸಿದ್ದು, ಗೌಡರ ಸ್ಪರ್ಧೆಯಿಂದ ವೀರಪ್ಪ ಮೊಯ್ಲಿಗೆ ಟಿಕೆಟ್ ತಪ್ಪಿಸಲಾಗುತ್ತಾ?, ಗೌಡರ ಸ್ಪರ್ಧೆಗೆ ವೀರಪ್ಪ ಮೊಯ್ಲಿ ಸುಲಭವಾಗಿ ಒಪ್ಪಿಕೊಂಡು ಬಿಡ್ತಾರಾ? ಎನ್ನುವಂತಹ ಪ್ರಶ್ನೆ ಮೂಡಿದೆ. ಆದರೆ ದೇವೇಗೌಡರು ಚಿಕ್ಕಬಳ್ಳಾಪುರ ಟಿಕೆಟ್‍ಗೆ ಈಗಿನಿಂದಲೇ ಲೆಕ್ಕಾಚಾರ ಶುರುವಾಗಿದೆ ಎಂದ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

    ಹಾಸನ ಮತ್ತು ಮಂಡ್ಯದಲ್ಲಿ ಮೊಮ್ಮಕ್ಕಳನ್ನು ಕಣಕ್ಕೆ ಇಳಿಸಲು ದೇವೇಗೌಡರು ನಿರ್ಧಾರ ಮಾಡಿದ್ದು, ಹಾಸನ ಲೋಕಸಭೆ ಕ್ಷೇತ್ರದಲ್ಲಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತು ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಒಕ್ಕಲಿಗ ಮತದಾರರು ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಮೊಮ್ಮಕ್ಕಳನ್ನು ನಿಲ್ಲಿಸಲು ಗೌಡರು ಚಿಂತನೆ ಮಾಡಿದ್ದಾರೆ. ಈ ಮೂಲಕ ಮೊಮ್ಮಕ್ಕಳನ್ನು ಗೆಲ್ಲಿಸಿ, ತಾವೂ ಗೆದ್ದು ಸಂಸತ್ ಪ್ರವೇಶಕ್ಕೆ ದೇವೇಗೌಡರು ಲೆಕ್ಕಾಚಾರ ಹಾಕುತ್ತಿದ್ದಾರೆ ಎನ್ನಲಾಗಿದೆ.

    ಅಷ್ಟೇ ಅಲ್ಲದೇ ಇದರ ಆಚೆಗೂ ದೇವೇಗೌಡರು ರಾಜಕೀಯ ತಂತ್ರ ಹೆಣೆದಿದ್ದಾರೆ. ಇಬ್ಬರು ಸೊಸೆಯಂದಿರಿಗೂ ರಾಜ್ಯ ರಾಜಕೀಯದಲ್ಲಿ ಗಟ್ಟಿ ವೇದಿಕೆ ಹಾಕಿಕೊಡಲು ಪ್ಲಾನ್ ಮಾಡಿದ್ದು, ಸಿಎಂ ಕುಮಾರಸ್ವಾಮಿ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ರಾಮನಗರ ಫಿಕ್ಸ್ ಆಗಿದೆ. ಹಾಗಾಗಿ ರಾಮನಗರದಲ್ಲಿ ರಾಜಕೀಯ ಭವಿಷ್ಯ ಗಟ್ಟಿಗೊಳಿಸಿಕೊಳ್ಳಲು ದೇವೇಗೌಡರು ರಣತಂತ್ರ ರೂಪಿಸಿದ್ದಾರೆ.

    ಅನಿತಾ ಕುಮಾರಸ್ವಾಮಿ ಅಷ್ಟೇ ಅಲ್ಲ ಸಚಿವ ರೇವಣ್ಣರ ಪತ್ನಿ ಭವಾನಿ ರೇವಣ್ಣರಿಗೂ ರಾಜಕೀಯ ಪ್ರವೇಶಕ್ಕೆ ವೇದಿಕೆ ಮಾಡಿ ಕೊಡಲು ಗೌಡರು ಪ್ಲಾನ್ ಮಾಡಿದ್ದಾರೆ. ಮೊದಲ ಸೊಸೆಗೆ ರಾಜಕೀಯ ಅಸ್ತಿತ್ವ ಕೊಡಿಸಲು ಸೂಕ್ತ ಸನ್ನಿವೇಶಕ್ಕೆ ಕಾಯುತ್ತಿದ್ದಾರೆ. ಸದ್ಯ ಭವಾನಿ ರೇವಣ್ಣರಿಗೆ ರಾಜಕೀಯ ನೆಲೆ ಸಿಕ್ಕಿಬಿಟ್ಟರೆ ಗೌಡರ ಚಾಣಕ್ಯ ತಂತ್ರಕ್ಕೆ ಅಲ್ಪ ವಿರಾಮ ಸಿಗಲಿದೆ ಎಂಬುದಾಗಿ ತಿಳಿದುಬಂದಿದೆ.

    https://www.youtube.com/watch?v=0P2QdVxxhfM

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಆರತಕ್ಷತೆ ಬಳಿಕ ದೇಶದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ಕೊಟ್ಟ ದೀಪ್‍ವೀರ್!

    ಆರತಕ್ಷತೆ ಬಳಿಕ ದೇಶದ ಪ್ರಸಿದ್ಧ ದೇವಾಲಯಕ್ಕೆ ಭೇಟಿ ಕೊಟ್ಟ ದೀಪ್‍ವೀರ್!

    ಮುಂಬೈ: ಬಾಲಿವುಡ್‍ನ ಕ್ಯೂಟ್ ಕಪಲ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್‍ವೀರ್ ಸಿಂಗ್ ಕುಟುಂಬಸ್ಥರೊಂದಿಗೆ ಶುಕ್ರವಾರದಂದು ನಗರದ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

    ದೇವಸ್ಥಾನಕ್ಕೆ ಭೇಟಿ ನೀಡುವ ವೇಳೆ ದೀಪಿಕಾ ಹಾಗೂ ರಣ್‍ವೀರ್ ಇಬ್ಬರು ಮ್ಯಾಚಿಂಗ್ ಬಣ್ಣದ ಉಡುಪನ್ನು ಧರಿಸಿದ್ದರು. ಒಂದೆಡೆ ರಣ್‍ವೀರ್ ಪೈಜಾಮ- ಕುರ್ತಾ ಜೊತೆ ನೆಹರು ಜಾಕೆಟ್ ಧರಿಸಿದ್ದರೆ, ಇನ್ನೊಂದೆಡೆ ದೀಪಿಕಾ ಲಾಂಗ್ ಕುರ್ತಾ ಜೊತೆ ಡಿಸೈನರ್ ದುಪ್ಪಟ್ಟಾದಲ್ಲಿ ಎಲ್ಲರ ಗಮನ ಸೆಳೆದರು.

    ಸಿದ್ಧಿವಿನಾಯಕನ ದರ್ಶನ ಪಡೆದ ನಂತರ ಅಭಿಮಾನಿಗಳು ಕ್ಲಿಕ್ಕಿಸಿದ ಫೋಟೋಗಳಿಗೆ ನವದಂಪತಿ ಖುಷಿಯಾಗಿ ಪೋಸ್ ಕೊಟ್ಟಿದ್ದಾರೆ. ದೀಪಿಕಾ ಅವರ ತಂದೆ ಪ್ರಕಾಶ್ ಪಡುಕೋಣೆ, ತಂಗಿ ಅನಿಷಾ ಹಾಗೂ ರಣ್‍ವೀರ್ ಅವರ ತಂದೆ ಜಗ್ಜೀತ್ ಭಾವ್ನಾನಿ, ತಾಯಿ ಅಂಜು ಮತ್ತು ತಂಗಿ ರಿತಿಕಾ ಕೂಡ ನವಜೋಡಿ ಜೊತೆ ದೇವಸ್ಥಾನಕ್ಕೆ ಬಂದಿದ್ದರು.

    ಕಳೆದ ನವೆಂಬರ್ 14 ಮತ್ತು 15 ರಂದು ದೀಪಿಕಾ ರಣ್‍ವೀರ್ ಕೊಂಕಣಿ ಹಾಗೂ ಸಿಂಧ್ ಸಂಪ್ರದಾಯದಂತೆ ಇಟಲಿಯಲ್ಲಿ ವಿವಾಹವಾಗಿದ್ದರು. ಬಳಿಕ ಮೊದಲು ಬೆಂಗಳೂರಿನಲ್ಲಿ ಮದುವೆ ಆರತಕ್ಷತೆ ಮುಗಿಸಿಕೊಂಡು ನಂತರ ನವೆಂಬರ್ 28 ರಂದು ಮುಂಬೈನಲ್ಲಿ ಆರತಕ್ಷತೆ ಮಾಡಿಕೊಂಡಿದ್ದರು. ಆದರೆ ಶನಿವಾರ ಚಿತ್ರರಂಗದ ಸ್ನೇಹಿತರಿಗಾಗಿ ಮತ್ತೊಂದು ಆರತಕ್ಷತೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಋತುಚಕ್ರವಾದಾಗ ಮನೆಯಿಂದ ಹೊರಹಾಕಿದ್ರು- ದಾರುಣವಾಗಿ ಮೃತಪಟ್ಟ ಬಾಲಕಿ

    ಋತುಚಕ್ರವಾದಾಗ ಮನೆಯಿಂದ ಹೊರಹಾಕಿದ್ರು- ದಾರುಣವಾಗಿ ಮೃತಪಟ್ಟ ಬಾಲಕಿ

    ಚೆನ್ನೈ: ಋತಚಕ್ರದ ವೇಳೆ ಬಾಲಕಿಯನ್ನು ಕುಟುಂಬದವರು ಹೊರಹಾಕಿದ್ದರಿಂದ ಆ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ತಮಿಳುನಾಡಿನ ಅನಿಕಡು ಗ್ರಾಮದಲ್ಲಿ ನಡೆದಿದೆ.

    ವಿಜಯ(12) ಮೃತಪಟ್ಟ ಬಾಲಕಿ. ವಿಜಯ 7ನೇ ತರಗತಿಯಲ್ಲಿ ಓದುತ್ತಿದ್ದಳು. ನ. 12ರಂದು ಬಾಲಕಿಗೆ ಮೊದಲ ಬಾರಿಗೆ ಋತುಚಕ್ರವಾಗಿದೆ. ವಿಜಯಗೆ ಋತುಚಕ್ರದ ವೇಳೆ ಆಕೆಯ ಕುಟುಂಬದವರು ಮನೆಯೊಳಗೆ ಪ್ರವೇಶಿಸಲು ನಿರ್ಬಂಧಿಸಿದ್ದರು.

    ವಿಜಯ ಕುಟುಂಬದವರು ಆಕೆಯನ್ನು ಮನೆಯಿಂದ ಹೊರಹಾಕಿ ಹತ್ತಿರದಲ್ಲೇ ಒಂದು ಗುಡಿಸಲು ನಿರ್ಮಿಸಿಕೊಟ್ಟಿದ್ದರು. ವಿಜಯ 16 ದಿನ ಈ ಗುಡಿಸಲಲ್ಲಿ ಒಬ್ಬಳೇ ವಾಸಿಸಬೇಕೆಂದು ಆಕೆಯ ಕುಟುಂಬದವರು ಹೇಳಿದ್ದರು ಎಂದು ವರದಿಯಾಗಿದೆ.

                                                                                             ಸಾಂದರ್ಭಿಕ ಚಿತ್ರ

    ನ. 16ರಂದು ವಿಜಯ ಗುಡಿಸಲಲ್ಲಿ ಇದ್ದಳು. ಆ ದಿನ ಜೋರು ಗಜ ಚಂಡಮಾರುತದಿಂದಾಗಿ ಗಾಳಿ ಜೋರಾಗಿ ಬೀಸಿತ್ತು. ಹವಾಮಾನ ಇಲಾಖೆ ಮೊದಲೇ ಜನರಿಗೆ ಮನೆಯಿಂದ ಹೊರಬರಬೇಡಿ, ಮನೆಯ ಒಳಗೆ ಸುರಕ್ಷಿತ ಸ್ಥಳದಲ್ಲಿ ಇರಿ ಎಂದು ಎಚ್ಚರಿಕೆ ನೀಡಿತ್ತು. ಈ ಮುನ್ಸೂಚನೆ ಸಿಕ್ಕಿದ್ದರೂ ಮನೆಯವರು ಇದನ್ನು ಲೆಕ್ಕಿಸದೇ ವಿಜಯಗಾಗಿ ಗುಡಿಸಲು ನಿರ್ಮಿಸಿಕೊಟ್ಟಿದ್ದರು.

    ಚಂಡಮಾರುತದ ಕಾರಣ ಜೋರಾಗಿ ಗಾಳಿ ಬೀಸಿ ಅಲ್ಲಿದ್ದ ತೆಂಗಿನಮರ ವಿಜಯ ಮಲಗಿದ್ದ ಗುಡಿಸಲಿನ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿಜಯ ಮೃತಪಟ್ಟಿದ್ದಾಳೆ. ಜನರು ಬೆಳಗ್ಗೆ ಎದ್ದು ಬಂದು ನೋಡಿದ್ದಾಗ ವಿಜಯಳ ಮೃತದೇಹ ಪತ್ತೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಸ್ತಿಗಾಗಿ ಅತ್ತೆಯನ್ನೇ ಮನೆಯಿಂದ ಹೊರದಬ್ಬಿದ ಸೊಸೆ – ಮಗನ ಹೆಂಡ್ತಿಯಿಂದಾಗಿ ಬೀದಿಗೆ ಬಿದ್ದ ವೃದ್ಧರು

    ಆಸ್ತಿಗಾಗಿ ಅತ್ತೆಯನ್ನೇ ಮನೆಯಿಂದ ಹೊರದಬ್ಬಿದ ಸೊಸೆ – ಮಗನ ಹೆಂಡ್ತಿಯಿಂದಾಗಿ ಬೀದಿಗೆ ಬಿದ್ದ ವೃದ್ಧರು

    ಬೆಂಗಳೂರು: ಆಸ್ತಿಗಾಗಿ ಅತ್ತೆ ಮಾವನನ್ನ ಸೊಸೆಯೇ ಮನೆಯಿಂದ ಹೊರದಬ್ಬಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕಾಸರಘಟ್ಟ ಗ್ರಾಮದಲ್ಲಿ ನಡೆದಿದೆ.

    ಇಲ್ಲಿನ ನಿವಾಸಿಗಳಾದ ವೃದ್ದ ದಂಪತಿ ನಂಜಪ್ಪ ಮತ್ತು ಚಿಕ್ಕಮ್ಮ, ಆಸ್ತಿಗಾಗಿ ತನ್ನ ಎರಡನೇ ಮಗ ಸುರೇಶ್‍ಕುಮಾರ್ ಹೆಂಡತಿ ಮಂಗಳಾ ತಮ್ಮನ್ನು ಮನೆಯಿಂದ ಹೊರ ಹಾಕಿದ್ದಾಗಿ ಆರೋಪ ಮಾಡಿದ್ದಾರೆ. ವೃದ್ಧೆ ಚಿಕ್ಕಮ್ಮ ತನ್ನ ಕೈನಲ್ಲಿರುವ ಬೆರಳುಗಳನ್ನು ಕಳೆದುಕೊಂಡಿದ್ದು, ಕೈಲಾಗದ ಪರಿಸ್ಥಿತಿಯಲಿದ್ದಾರೆ. ವೃದ್ಧ ನಂಜಪ್ಪನ ಹೆಸರಿನಲ್ಲಿ 1 ಎಕರೆ 7 ಗುಂಟೆ ಜಮೀನಿದೆ. ಈ ಜಮೀನನ್ನು ಸೊಸೆ ಮಂಗಳ ಮಾರಾಟ ಮಾಡಲು ಇಂತಹ ಹೀನ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ. ಹೀಗಾಗಿ ಕಟ್ಟಿಕೊಂಡ ಗಂಡ ಹಾಗೂ ಅತ್ತೆ ಮಾವರನ್ನು ಸಹ ಮನೆಯಿಂದ ಹೊರಗೆ ಹಾಕಿದ್ದಲ್ಲದೆ ಥಳಿಸಿದ್ದಾಳೆ ಎಂದು ದಂಪತಿಗಳು ಬೀದಿ ಬದಿಯಲ್ಲಿ ಕಣ್ಣೀರಿಡುತ್ತಿದ್ದಾರೆ.

    ವೃದ್ಧ ದಂಪತಿ ಡಾಬಸ್‍ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದರೆ, ಪೊಲೀಸರು ವೃದ್ಧ ದಂಪತಿಯನ್ನೆ ಹೀಯಾಳಿಸಿ, ನಿಮ್ಮ ಸಮಸ್ಯೆಯನ್ನ ನಾವು ಬಗೆಹರಿಸಲು ಆಗುವುದಿಲ್ಲ ಎಂದು ಹಾರಿಕೆ ಉತ್ತರ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ರಕ್ಷಣೆ ನೀಡಬೇಕಾದ ಪೊಲೀಸರೇ ನಮ್ಮನ್ನು ಕಡೆಗಣಿಸುತ್ತಿದ್ದಾರೆ. ಅಲ್ಲದೇ ಸೊಸೆ ಮಂಗಳಾ ಅತ್ತೆ ಮಾವ ಹಾಗೂ ಗಂಡನಿಗೆ ತನ್ನ ಸಹೋದರರಿಂದ ಕೊಲೆ ಮಾಡುವುದಾಗಿ ಧಮ್ಕಿ ಹಾಕಿಸುತ್ತಾರಂತೆ ಎಂದು ತಿಳಿಸಿದ್ದಾರೆ.

    ಸೊಸೆಯ ಈ ಕೃತ್ಯದಿಂದ ಬೀದಿ ಪಾಲಾಗಿರುವ ವೃದ್ಧೆ ಸದ್ಯ ಮತ್ತೊಬ್ಬ ಮಗನ ಆಶ್ರಯ ಪಡೆದಿದ್ದು, ಬೆಂಗಳೂರಿನ ಜೀವನಕ್ಕೆ ಹೊಂದಿಕೊಳ್ಳಲಾಗದ ಇವರು ತಮ್ಮ ಜೀವನಕ್ಕಾಗಿ ಕೃಷಿ ಮಾಡಲು ಅವಕಾಶ ಕೊಡಬೇಕು ಹಾಗೂ ವಾಸಿಸಲು ಮನೆಯಲ್ಲಿ ಜಾಗ ಕೊಡಬೇಕು ಎಂದು ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ವಿಧಾನ ಪರಿಷತ್ ಸದಸ್ಯನ ಪುತ್ರಿ ಮದ್ವೆಯಲ್ಲಿ ಎಚ್‍ಎಚ್‍ಡಿ ಕುಟುಂಬ

    ವಿಧಾನ ಪರಿಷತ್ ಸದಸ್ಯನ ಪುತ್ರಿ ಮದ್ವೆಯಲ್ಲಿ ಎಚ್‍ಎಚ್‍ಡಿ ಕುಟುಂಬ

    ಮಂಗಳೂರು: ಉದ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಪುತ್ರಿಯ ಮದುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ನಡೆದಿದೆ.

    ಮಂಗಳೂರು ನಗರ ಹೊರವಲಯದ ಉಳ್ಳಾಲದ ಸಮುದ್ರ ದಂಡೆಯಲ್ಲಿ ಫಾರೂಕ್ ಕಟ್ಟಿಸಿರುವ ನೂತನ ರೆಸಾರ್ಟ್ ಸ್ಯಾಂಡ್ ಬೀಚ್ ನಲ್ಲಿ ಮದುವೆ ಕಾರ್ಯ ನಡೆದಿದೆ. ಕೇರಳದ ಹುಡುಗನ ಜೊತೆಗಿನ ಮದುವೆ ಕಾರ್ಯ ಮೂರು ದಿನ ನಡೆಯಲಿದ್ದು, ಇಂದು ಕೂಡ ಗಣ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ.

    ಮದುವೆ ಗಣ್ಯರು ಬರುವ ಕಾರಣ ಮಂಗಳೂರಿನ ಐಷಾರಾಮಿ ಹೋಟೆಲ್ ಗಳನ್ನು ಮೂರು ದಿನಗಳ ಕಾಲ ತಿಂಗಳ ಮೊದಲೇ ಬುಕ್ ಮಾಡಲಾಗಿದೆ. ಸಚಿವ ಯು.ಟಿ. ಖಾದರ್ ಸ್ವ-ಕ್ಷೇತ್ರದಲ್ಲಿ ಫಾರೂಕ್ ಕಟ್ಟಿಸಿರುವ ರೆಸಾರ್ಟ್ ಈಗ ಜನಮನ ಸೆಳೆಯುವಂತಾಗಿದೆ.

    ಈ ಮದುವೆಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ, ಜೆಡಿಎಸ್ ವರುಷ್ಠ ದೇವೇಗೌಡ, ಪತ್ನಿ ಚನ್ನಮ್ಮ, ಶಾಸಕಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್, ಸಚಿವ ಎಚ್.ಡಿ. ರೇವಣ್ಣ, ಪುತ್ರ ಪ್ರಜ್ವಲ್ ಮತ್ತು ಸಚಿವ ಬಸವರಾಜ್ ಹೊರಟ್ಟಿ, ಸಚಿವ ಜಮೀರ್ ಅಹ್ಮದ್ ಸೇರಿದಂತೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಪಾಲ್ಗೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್‍ನೋಟ್‍ನಲ್ಲಿ ಏನಿತ್ತು?

    ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್‍ನೋಟ್‍ನಲ್ಲಿ ಏನಿತ್ತು?

    ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ.

    ಜನಾರ್ದನ್(52), ಸುಷ್ಮಿತ(48), ಸುದರ್ಶಿನಿ(29) ಹಾಗೂ ಸೋನಿಕ(6) ಮೃತ ವ್ಯಕ್ತಿಗಳು. ಒಂದೇ ಮನೆಯ ದುರಂತ ಸಾವುಗಳನ್ನು ಕಂಡರೆ ಎಲ್ಲರೂ ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುವುದು ಪೊಲೀಸರಿಗೆ ಅನುಮಾನ ಮೂಡಿದೆ. ಏಕೆಂದರೆ ಮೃತರ ಪೈಕಿ ಜನಾರ್ದನ್ ಮತ್ತು ಸುಮಿತ್ರ ಮಾತ್ರೆ ಸೇವನೆ ಮಾಡಿ ಮೃತ ಪಟ್ಟಿದರೆ, ಮಗುವನ್ನು ಉಸಿರು ಕಟ್ಟಿಸಿ ಕೊಲೆ ಮಾಡಿ ನಂತರ ಸುಧಾರಾಣಿ ಮುಖಕ್ಕೆ ಪ್ಲಾಸ್ಟಿಕ್ ಕವರ್ ನಲ್ಲಿ ಬಿಗಿದುಕೊಂಡು ಸಾವನಪ್ಪಿದ್ದಾರೆ. ಸಾವಿಗೂ ಮುನ್ನ ಸುಧಾರಾಣಿ ಬರೆದಿರುವ ಡೆತ್ ನೋಟ್ ಹಲವು ವಿಚಾರಗಳನ್ನು ಹೊರ ಹಾಕಿದೆ.

    ಡೆತ್‍ನೋಟ್‍ನಲ್ಲಿ ಏನಿದೆ?
    ನಾನು ಸುಧಾರಾಣಿ. ನಮ್ಮ ಸಾವಿಗೆ ಬೇರೆ ಯಾರು ಕಾರಣ ಅಲ್ಲ ನಾನೇ ಕಾರಣ. ನನಗೆ ಒಂದು ಮನೆ ತೆಗೆದುಕೊಳ್ಳುವ ಕನಸು ಇತ್ತು. ಹೀಗಿರುವಾಗ ಒಬ್ಬನನ್ನು ನಂಬಿದ್ದೆ. ಅದೇ ನಂಬಿಕೆ ಮೇಲೆ ಆತನಿಗೆ 25 ಲಕ್ಷ ಹಣ ಕೊಟ್ಟಿದ್ದೆ. ಆದರೆ ಆ ವ್ಯಕ್ತಿ ಹಣ ತೆಗೆದುಕೊಂಡು ಹೋಗುತ್ತಿರುವಾಗಲೇ ಅಪಘಾತವಾಗಿ ಸಾವನ್ನಪ್ಪಿದ. ನನ್ ಹಣ ಹೋಯ್ತು. ಅಪ್ಪ ಅಮ್ಮನಿಗೆ ವಿಚಾರ ತಿಳಿಸಿದ್ದೆ. ನಂತರ ಹಣ ವಾಪಸ್ ಸಿಗಬಹುದು ಅಂತ ಸಾಕಷ್ಟು ಪ್ರಯತ್ನ ಪಟ್ಟೆ. ತುಂಬಾ ಜನರ ಬಳಿ ಕೇಳಿ ಕೊಂಡಿದ್ದೆ. ಆದರೆ ಪರಿಹಾರ ಸಿಗಲಿಲ್ಲ. ಹಣ ವಾಪಸ್ ಬರುತ್ತೆ ಎನ್ನುವ ನಂಬಿಕೆ ಬರಲಿಲ್ಲ.

    ಕೊನೆಗೆ ಅಪ್ಪ-ಅಮ್ಮನ ಜೊತೆ ಮಾತನಾಡಿ ತೀರ್ಮಾನ ಮಾಡಿದ್ವಿ. ಅಪ್ಪ ಅಮ್ಮನಿಗೆ ಶನಿವಾರ ಮಾತ್ರೆ ಕೊಟ್ಟೆ, ಅವರು ಸಾಯುವ ಮೊದಲು ನಾವೇನಾದರು ಸತ್ತಿಲ್ಲಾ ಅಂದರೆ ನಮ್ಮನ್ನು ಕೊಂದುಬಿಡು ಎಂದು ಹೇಳಿದರು. ನಂತರ ಅಪ್ಪ-ಅಮ್ಮ ಮಾತ್ರೆ ಸೇವಿಸಿದ ನಂತರ ನಾನು ಮಗಳನ್ನು ಕರೆದುಕೊಂಡು ಮನೆ ಬೀಗ ಹಾಕಿಕೊಂಡು ಗಂಡನ ಮನೆಗೆ ಹೋಗಿದ್ದೆ ಅಲ್ಲಿ ಅಡುಗೆ ಮಾಡಿಟ್ಟು, ಸಂಜೆ ವಾಪಸ್ ಬಂದೆ. ಅಷ್ಟರಲ್ಲಿ ಅಪ್ಪ-ಅಮ್ಮ ಸತ್ತು ಹೋಗಿದ್ದರು. ನಂತರ ನಾನು ಮೊದಲೇ ತೀರ್ಮಾನ ಮಾಡಿದ ಹಾಗೆ, ಮನೆ ಒಳಗಿನಿಂದ ಬೀಗ ಹಾಕಿ ಮಗಳು ಮೋನಿಕಾಳನ್ನು ಉಸಿರುಗಟ್ಟಿಸಿ ಕೊಂದೆ. ಇವಾಗ ನಾನು ಸಾಯುತ್ತೇನೆ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸದ್ಯ ಮೂರು ಕೊಲೆ ಮತ್ತು ಒಂದು ಅನುಮಾನಸ್ಪದ ಸಾವು ಪ್ರಕರಣ ದಾಖಲು ಮಾಡಿಕೊಂಡಿರುವ ವಿದ್ಯಾರಣ್ಯಪುರ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.

    ಈ ಸಾವಿಗೆ ಕೇವಲ ಹಣ ಮಾತ್ರ ಕಾರಣವಾ ಇಲ್ಲಾ ಅದಕ್ಕೂ ಮೀರಿದ್ದು ಏನಾದರೂ ಇದೆಯಾ ಅನ್ನೋದು ಪೊಲೀಸರ ತನಿಖೆಯಿಂದ ಹೊರಬರಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    ಬೆಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

    ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಜನಾರ್ದನ್(52), ಸುಷ್ಮಿತ, ಸುದರ್ಶಿನಿ(29) ಹಾಗೂ ಸೋನಿಕ(6) ಮೃತ ವ್ಯಕ್ತಿಗಳು. ತಂದೆ, ತಾಯಿ, ಮಗಳು ಹಾಗೂ ಮೊಮ್ಮಗಳು ಮೃತಪಟ್ಟಿದ್ದು, ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಅಲ್ಲದೇ ಮಗುವಿನ ಮುಖಕ್ಕೆ ಪ್ಲಾಸ್ಟಿಕ್ ಹಾಕಿ ಉಸಿರುಗಟ್ಟಿ ಕೊಲೆ ಮಾಡಿದ್ದಾರೆ.

    ಜನಾರ್ದನ್ ಮನೆ ತೆಗೆದುಕೊಳ್ಳುವ ಸಲುವಾಗಿ 25 ಲಕ್ಷ ರೂ. ಹಣವನ್ನು ನೀಡಿದ್ದರು. ಆದರೆ ಹಣ ಪಡೆದ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದರು. ಹಣ ಪಡೆದ ವ್ಯಕ್ತಿ ಸಾವನ್ನಪ್ಪಿದ್ದರಿಂದ ನಮ್ಮ ಹಣ ವಾಪಸ್ ಬರುವುದಿಲ್ಲ ಎಂದು ಬೇಸರ ಜನಾರ್ದನ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಜನಾರ್ದನ್ ತನ್ನ ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಡೆತ್ ನೋಟ್ ಬರೆದಿದ್ದು, ಅದರಲ್ಲಿ ಮನೆ ಖರೀದಿ ಬಗ್ಗೆ ಉಲ್ಲೇಖಿಸಿದ್ದಾರೆ. ಸದ್ಯ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ.

    ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರಣ್ಯಪುರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನೈತಿಕ ಸಂಬಂಧವಿಲ್ಲ ಎಂದು ತಬ್ಬಿಕೊಂಡು ಪ್ರಾಣ ಬಿಟ್ಟ ಜೋಡಿ

    ಅನೈತಿಕ ಸಂಬಂಧವಿಲ್ಲ ಎಂದು ತಬ್ಬಿಕೊಂಡು ಪ್ರಾಣ ಬಿಟ್ಟ ಜೋಡಿ

    ಹುಬ್ಬಳ್ಳಿ: ಇಬ್ಬರ ನಡುವೆ ಅನೈತಿಕ ಸಂಬಂಧ ಇದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದ ಯುವಕ, ಯುವತಿ ಬಾವಿಗೆ ಹಾರಿ ಪ್ರಾಣ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆ ಕುಂದಗೋಳ ತಾಲೂಕಿನ ಗುರುವಿನ ಹಳ್ಳಿಯಲ್ಲಿ ನಡೆದಿದೆ.

    ರವಿ ಇಂಗಳಹಳ್ಳಿ (22) ಮತ್ತು ಮೇಘಾ ಪಾಟೀಲ್ (22) ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಮಧ್ಯ ಅನೈತಿಕ ಸಂಬಂಧ ಇದೆ ಮನೆಯವರು ಶಂಕೆ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದ ಇಬ್ಬರು ಒಬ್ಬರಿಗೊಬ್ಬರು ತಬ್ಬಿ ವೇಲ್ ಕಟ್ಟಿಕೊಂಡು ಬಾವಿಗೆ ಹಾರಿ ಪ್ರಾಣಬಿಟ್ಟಿದ್ದಾರೆ.

    ಕಳೆದ ಮೂರು ದಿನಗಳ ಹಿಂದೆಯೇ ಇಬ್ಬರು ನಾಪತ್ತೆಯಾಗಿದ್ದರು, ಈ ವೇಳೆ ಹುಟುಕಾಟ ನಡೆಸಿದ್ದ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ಲಭಿಸಿರಲಿಲ್ಲ. ಆದರೆ ಇಂದು ಬೆಳಗ್ಗೆ ಊರಿನ ಗ್ರಾಮಸ್ಥರು ಬಾವಿಯಲ್ಲಿ ಮೃತದೇಹಗಳು ತೇಲುತ್ತಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಅಂದಹಾಗೇ ಸಂಬಂಧದಲ್ಲಿ ಮೃತ ರವಿ ಸೋದರ ಮಾವನ ಹೆಂಡತಿ ಮೇಘಾ ಪಾಟೀಲ್ ಆಗಿದ್ದು, ನಮ್ಮ ಇಬ್ಬರ ಮಧ್ಯೆ ಅನೈತಿಕ ಸಂಬಂಧ ಇಲ್ಲ. ನಾಬಿಬ್ಬರು ಸಹೋದರ, ಸಹೋದರಿ ರೀತಿ ಇದ್ದೇವೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಇಬ್ಬರ ನಡುವೆ ಅನೈತಿಕ ಸಂಬಂಧ ಇರುವ ಕುರಿತು ಈಗಾಗಲೇ ಎರಡು ಬಾರಿ ಕುಟುಂಬಸ್ಥರು ರಾಜಿ ಪಂಚಾಯಿತಿ ನಡೆಸಿ ಎಚ್ಚರಿಕೆ ನೀಡಿದ್ದರು. ಇದಾದ ಬಳಿಕ ಇಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದರು ಎನ್ನಲಾಗಿದೆ.

    ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಇಬ್ಬರ ಮೃತದೇಹಗಳನ್ನು ಬಾವಿಯಿಂದ ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಘಟನೆ ಕುರಿತು ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಶಕ್ತಿಧಾಮದ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡ ಶಿವಣ್ಣ!

    ಶಕ್ತಿಧಾಮದ ಮಕ್ಕಳೊಂದಿಗೆ ಸಿಹಿ ಹಂಚಿಕೊಂಡ ಶಿವಣ್ಣ!

    ಮೈಸೂರು: ಸ್ಯಾಂಡಲ್‍ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಕುಟುಂಬದ ಸದಸ್ಯರು ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದಾರೆ.

    ಶುಕ್ರವಾರ ದಸರಾ ವೀಕ್ಷಣೆಗೆ ಮೈಸೂರಿಗೆ ತೆರಳಿದ್ದ ಶಿವರಾಜ್ ಕುಮಾರ್ ಅವರು ಇಂದು ಶಕ್ತಿಧಾಮಕ್ಕೆ ಭೇಟಿ ಕೊಟ್ಟಿದ್ದಾರೆ. ಅವರ ಜೊತೆಗೆ ಅವರ ಕುಟುಂಬದ ಸದಸ್ಯರಾದ ಪತ್ನಿ ಗೀತಾ ಅವರು ಮತ್ತು ಮಗಳು ಹಾಗೂ ಸಿನಿಮಾದ ಸದಸ್ಯರು ಕೂಡ ಹೋಗಿದ್ದರು.

    ಹಬ್ಬದ ಪ್ರಯುಕ್ತ ಶಿವರಾಜ್ ಕುಮಾರ್ ಮತ್ತು ಕುಟುಂಬದವರು ಶಕ್ತಿಧಾಮಕ್ಕೆ ತೆರಳಿ ಮಕ್ಕಳಿಗೆ ಸಿಹಿ ಹಂಚಿ ಜೊತೆಯಲ್ಲಿ ಸಮಯ ಕಳೆದರು. ಅಷ್ಟೇ ಅಲ್ಲದೇ ನಿರ್ದೇಶಕರಾದ ರಘು ರಾಮ್ ಅವರು ಕೂಡ ಜೊತೆಗೆ ಹೋಗಿದ್ದು, ಅವರು ಮಕ್ಕಳಿಗೆ ಕಥೆಗಳು ಪದ್ಯಗಳನ್ನು ಹೇಳಿಕೊಡುವ ಮೂಲಕ ಅವರೊಂದಿಗೆ ಸಿಹಿ ಕ್ಷಣಗಳನ್ನು ಕಳೆದಿದ್ದಾರೆ.

    ಶುಕ್ರವಾರ ನಡೆದ ಜಂಬೂ ಸವಾರಿ ವೀಕ್ಷಿಸಲು ಶಿವಣ್ಣ ಹಾಗೂ ಅವರ ಕುಟುಂಬ ಮೈಸೂರಿಗೆ ಭೇಟಿ ನೀಡಿದ್ದರು. ಈ ವೇಳೆ ಹೈವೇ ವೃತ್ತದ ಬಳಿ ರಸ್ತೆ ಬದಿ ಖಾಸಗಿ ಹೋಟೆಲ್ ಒಂದರ ಮುಂಭಾಗ ರಸ್ತೆ ಬದಿ ಚೇರ್‍ನಲ್ಲಿ ಶಿವರಾಜ್‍ಕುಮಾರ್ ದಂಪತಿ ಹಾಗೂ ರಘು ರಾಮ್ ಅವರ ಕುಟುಂಬಸ್ಥರು ಕುಳಿತು ವೀಕ್ಷಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದಸರಾ ದಿನವೇ ಮೈಸೂರು ಒಡೆಯರ್ ಕುಟುಂಬದಲ್ಲಿ ಮತ್ತೊಂದು ಸಾವು

    ದಸರಾ ದಿನವೇ ಮೈಸೂರು ಒಡೆಯರ್ ಕುಟುಂಬದಲ್ಲಿ ಮತ್ತೊಂದು ಸಾವು

    ಬೆಂಗಳೂರು: ದಸರಾ ದಿನವೇ ಮೈಸೂರು ಒಡೆಯರ್ ಕುಟುಂಬದಲ್ಲಿ ಮತ್ತೊಂದು ಸಾವು ಸಂಭವಸಿದ್ದು, ದಿ.ಶ್ರೀಕಂಠದತ್ತ ಒಡೆಯರ್ ಸಹೋದರಿ ವಿಶಾಲಾಕ್ಷಿ ಅವರು ವಿಧಿವಶರಾಗಿದ್ದಾರೆ.

    ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಶಾಲಾಕ್ಷಿ (58) ಅವರು ಇಂದು ಸಂಜೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ವಿಶಾಲಾಕ್ಷಿ ಅವರು ಬಳಲುತ್ತಿದ್ದರು ಎನ್ನಲಾಗಿದ್ದು, ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಲಭಿಸಿದೆ.

    ಕಳೆದ ಎರಡು ದಿನಗಳ ಹಿಂದೆಯೇ ವಿಶಾಲಾಕ್ಷಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತೀವ್ರ ನೀಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

    ಇಂದು ಬೆಳಗ್ಗೆಯಷ್ಟೇ ಸಮಸ್ತ ನಾಡಿನ ಜನತೆಯೂ ಜಂಬೂಸವಾರಿಗೆ ಕಾತುರದಿಂದ ಕಾಯುತ್ತಿದ ವೇಳೆ ಪ್ರಮೋದಾ ದೇವಿ ಅವರ ತಾಯಿ ವಿಧಿವಶರಾಗಿದ್ದರು. ರಾಜವಂಶಸ್ಥೆ ಪ್ರಮೋದಾ ದೇವಿ ಅವರ ತಾಯಿ ಪುಟ್ಟಚಿನ್ನಮ್ಮಣಿ(98) ಅವರು ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

    ವಿಜಯದಶಮಿ ದಿನವಾದ ಶುಕ್ರವಾರ ಬೆಳಗ್ಗೆ ಪುಟ್ಟಚಿನ್ನಮ್ಮಣಿ ಅವರ ಸಾವು ಮೈಸೂರು ರಾಜ ವಂಶಸ್ಥರ ಕುಟುಂಬಸ್ಥರನ್ನು ದುಃಖ ಸಾಗರದಲ್ಲಿ ಮುಳುಗಿಸಿತ್ತು. ಈಗ ಸಂಜೆ ವಿಶಾಲಾಕ್ಷಿ ಅವರು ವಿಧಿವಶರಾಗಿದ್ದಾರೆ. ಇದನ್ನು ಓದಿ: ರಾಜಮಾತೆಗೆ ಮಾತೃವಿಯೋಗ- ಇದು ಯಾವುದರ ಸಂಕೇತ…? ಶ್ರೀ ರೇಣುಕಾರಾಧ್ಯ ಗುರೂಜಿ ಸ್ಪಷ್ಟನೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv