Tag: family

  • ಚಿರು ಜಾಗ ತುಂಬುವುದಕ್ಕೆ ರಾಯನ್‍ಗೂ ಸಾಧ್ಯವಿಲ್ಲ: ಮೇಘನಾ ರಾಜ್

    ಚಿರು ಜಾಗ ತುಂಬುವುದಕ್ಕೆ ರಾಯನ್‍ಗೂ ಸಾಧ್ಯವಿಲ್ಲ: ಮೇಘನಾ ರಾಜ್

    – ನಮ್ಮ ಕುಟುಂಬ ಮಾತ್ರವಲ್ಲ ಚಿರುನಾ ಯಾರು ಮರೆಯಲ್ಲ

    ಚಂದನವನದ ಹೆಸರಾಂತ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ ಎರಡು ವರ್ಷ. ಚಿರು ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳು ಇಂದು ಧ್ರುವ ಫಾರ್ಮ್ ಹೌಸ್‍ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸಿ, ಎರಡನೇ ವರ್ಷದ ಕಾರ್ಯ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದನವನದ ನಟಿ, ಚಿರು ಪತ್ನಿ ಮೇಘನಾ ರಾಜ್ ಭಾವನ್ಮಾಕವಾಗಿ ಮಾತನಾಡಿದ್ದು, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದರು.

    ಮೇಘನಾ ಹೇಳಿದ್ದೇನು?
    ನಾನು ಚಿರುನ ಹೇಗೆ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಮಾತಿನಲ್ಲಿ ಹೇಳುವುದಕ್ಕೆ ಆಗುವುದಿಲ್ಲ. ಅದು ಎಲ್ಲರಿಗೂ ಗೊತ್ತಿದೆ. ಆ ಜಾಗವನ್ನು ಯಾರು ತುಂಬುವುದಕ್ಕೆ ಸಾಧ್ಯವಿಲ್ಲ. ಚಿರು ಜಾಗ ತುಂಬುದಕ್ಕೆ ರಾಯನ್‍ಗೂ ಸಾಧ್ಯವಿಲ್ಲ. ಅದು ಅವರಿಂದ ಮಾತ್ರ ಸಾಧ್ಯ. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

    ಇಂದು ನಾನು ಒಂದು ವಿಷಯ ಹೇಳುವುದಕ್ಕೆ ಇಷ್ಟಪಡುತ್ತೇನೆ. 2 ವರ್ಷ ಅಲ್ಲ, ಇನ್ನೂ ನೂರಾರು ವರ್ಷ ಹೋದ್ರೂ ಚಿರುನಾ ನಮ್ಮ ಕುಟುಂಬ ಮಾತ್ರವಲ್ಲ, ಯಾರಿಂದಲೂ ಮರೆಯುವುದಕ್ಕೆ ಸಾಧ್ಯವಿಲ್ಲ. ನಾವು ಮಾತ್ರವಲ್ಲ ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಚಿರುನನ್ನು ಮರೆಯಲು ಸಾಧ್ಯವಿಲ್ಲ.

    ಇಂದು ಅವರಿಗೋಸ್ಕರ ಬಂದು, ಅವರನ್ನು ದೇವರ ಸ್ಥಾನದಲ್ಲಿಟ್ಟು ನೋಡುತ್ತಿದ್ದಾರೆ. ನಮ್ಮೆಲ್ಲರಿಗೂ ಅವರು ದೇವರೇ, ಈಗ ನೀವೆಲ್ಲ ಅವರನ್ನು ದೇವರ ಸ್ಥಾನದಲ್ಲಿಟ್ಟು ನೋಡುತ್ತಿದ್ದೀರ. ಈ ದಿನವನ್ನು ಅವರಿಗಾಗಿ ಮೀಸಲಿಡಬೇಕು ಎಂದು ಹಲವು ಜನರು ಬರುತ್ತಿರುವುದಕ್ಕೆ ನನ್ನ ಮನಸ್ಸಿನಲ್ಲಿ ಸಣ್ಣದೊಂದು ಖುಷಿಯಿದೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

    meghana raj

    ಅಭಿಮಾನಿಗಳಿಗೆ ಕೇಳಿದ್ದೇನು?
    ಚಿರು ಬಗ್ಗೆ ನಿಮಗೆ ಇರುವಂತಹ ಪ್ರೀತಿ, ರಾಯನ್‍ಗೆ ನೀವು ಕೊಡುವ ಆರ್ಶೀವಾದವನ್ನು ಇದೇ ರೀತಿ ಮುಂದುವರೆಸಬೇಕು. ನಮ್ಮ ಕುಟುಂಬ ಇನ್ನೂ ಮುಂದೆ ಹೋಗುವುದಕ್ಕೆ ನೀವು ನಮಗೆ ಪ್ರೋತ್ಸಾಹ ಕೊಡಬೇಕು. ನಾನು ನಿಮ್ಮನ್ನು ನೋಡಿ ಸ್ಫೂರ್ತಿ ಪಡೆದುಕೊಳ್ಳುತ್ತೇನೆ. ನಾನು ಮುಂದೆ ನುಗ್ಗುವುದಕ್ಕೆ ಶಕ್ತಿಕೊಡಿ ಎಂದು ಕೇಳಿಕೊಳ್ಳುತ್ತೇನೆ. ಚಿರುಗಾಗಿ ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ತಿಳಿಸಿದರು.

  • ಹೆಂಡತಿ ಸೀಮಂತ ಕಾರ್ಯಕ್ರಮಕ್ಕೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮರಣ

    ಹೆಂಡತಿ ಸೀಮಂತ ಕಾರ್ಯಕ್ರಮಕ್ಕೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಮರಣ

    ಬೆಳಗಾವಿ: ಪತ್ನಿಯ ಸೀಮಂತ ಕಾರ್ಯಕ್ಕೆ ರಜೆಯ ಮೇಲೆ ಬಂದಿದ್ದ ಯೋಧರೊಬ್ಬರು ನಿನ್ನೆ ತಡರಾತ್ರಿ ಬೈಕ್ ಮೇಲೆ ಮರಳುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಲಗಾ ಬಳಿಯ ರೈಸ್ ಮಿಲ್ ಹತ್ತಿರ ನಡೆದಿದೆ.

    ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದ ಭಾರತೀಯ ಸೇನೆಯ ಯೋಧ ಪ್ರಕಾಶ್ ಮಡಿವಾಳಪ್ಪ ಸಂಗೊಳ್ಳಿ (28) ಮೃತ ಯೋಧ. ಮಡಿವಾಳಪ್ಪ ಅವರು ಕಳೆದ 9 ವರ್ಷಗಳಿಂದ ಬೆಳಗಾವಿಯ ಮರಾಠಾ ಲೈಟ್ ಇನ್‍ಫೇಂಟರಿ 9ನೇ ರೆಜಿಮೆಂಟ್‍ನಲ್ಲಿ ಸೈನಿಕನಾಗಿ ಬೆಳಗಾವಿಯಲ್ಲಿ ಸೇವೆಯಲ್ಲಿದ್ದರು. ಇದನ್ನೂ ಓದಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    ಕಳೆದ ಎರಡು ವರ್ಷಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅವರು ಮಗುವಿನ ನಿರೀಕ್ಷೆಯಲ್ಲಿದ್ದರು. ಪತ್ನಿಯ ಸೀಮಂತ ಕಾರ್ಯವನ್ನು ಜೂ. 12ರಂದು ಅದ್ಧೂರಿಯಾಗಿ ಜರುಗಿಸಲು ರಜೆ ಪಡೆದು ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ನಿನ್ನೆ ತಡರಾತ್ರಿ ಬೆಳಗಾವಿಯಿಂದ ಬೈಕ್‍ನಲ್ಲಿ ಬರುತ್ತಿದ್ದ ವೇಳೆ ಹಲಗಾ ಬಳಿಯ ರೈಸ್ ಮಿಲ್ ಹತ್ತಿರ ಅಪರಿಚಿತ ವಾಹನೊಂದು ಡಿಕ್ಕಿ ಹೊಡೆದು ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಸೀಮಂತ ಕಾರ್ಯಕ್ರಮದ ಸಂತೋಷದಲ್ಲಿ ಇರಬೇಕಿದ್ದ ಯೋಧನ ಕುಟುಂಬವಿಗಾ ಕಣ್ಣೀರಿಡುವಂತಾಗಿದೆ. ಇತ್ತ ಯೋಧನ ಪಾರ್ಥಿವ ಶರೀರ ಬೈಲಹೊಂಗಲ ಪಟ್ಟಣದಿಂದ ಗ್ರಾಮಕ್ಕೆ ತೆರಳುವಾಗ ಯೋಧನ ಗೆಳೆಯರು, ಗ್ರಾಮದ ಯುವಕರು ನೂರಾರು ಸಂಖ್ಯೆಯಲ್ಲಿ ಸೇರಿ ಬೈಕ್ ರ್ಯಾಲಿ ಮಾಡುವ ಮೂಲಕ ಗ್ರಾಮಕ್ಕೆ ಕೊಂಡೊಯ್ದರು. ಪ್ರಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕುಟುಂಬಸ್ಥರ, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತು.

    ಯೋಧನ ಪತ್ನಿಯ ಆಕ್ರಂದನ ಕಂಡು ಅಂತ್ಯಕ್ರಿಯೆಯಲ್ಲಿ ಸೇರಿದ್ದ ಜನರು ಕೂಡ ಕಣ್ಣೀರು ಹಾಕಿದರು. ಬಳಿಕ ಯೋಧನ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಯೋಧನ ಮನೆ ಮುಂಭಾಗದಲ್ಲಿ ಇರಿಸಿ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

  • ಸಹೋದರಿಯ ಸ್ನೇಹಿತೆಯನ್ನೇ ಗರ್ಭಿಣಿ ಮಾಡಿ, ಗರ್ಭಪಾತವನ್ನೂ ಮಾಡಿಸಿದ!

    ಸಹೋದರಿಯ ಸ್ನೇಹಿತೆಯನ್ನೇ ಗರ್ಭಿಣಿ ಮಾಡಿ, ಗರ್ಭಪಾತವನ್ನೂ ಮಾಡಿಸಿದ!

    ಪಾಟ್ನಾ: ವ್ಯಕ್ತಿಯೊಬ್ಬ ಮದುವೆಯಾಗುವ ನೆಪದಲ್ಲಿ ಸಹೋದರಿಯ ಸ್ನೇಹಿತೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ್ದಲ್ಲದೇ ಅವಳಿಗೆ ಮತ್ತು ಬರುವ ಪಾನೀಯ ನೀಡಿ ಗರ್ಭಪಾತ ಮಾಡಿಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.

    ಯುವತಿಯು ಗರ್ಭಿಣಿಯಾದ ನಂತರ ಮದುವೆಯಾಗುವಂತೆ ಅವನಿಗೆ ಹಲವು ಬಾರಿ ಒತ್ತಾಯಿಸಿದ್ದಳು. ಆದರೆ ಆರೋಪಿ ಅದಕ್ಕೆ ನಿರಾಕರಿಸಿದ್ದನು ಎನ್ನಲಾಗಿದೆ. ನಂತರ ಅವನು ಆಕೆಗೆ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿದ್ದಲ್ಲದೇ ಅವಳಿಗೆ ಅಮಲು ಪದಾರ್ಥ ನೀಡಿ ಆಸ್ಪತ್ರೆಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದಾನೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಈ ಹಿಂದೆ ಯುವತಿಯು ತನ್ನ ಹೆತ್ತವರಿಗೆ ಹುಡುಗನನ್ನು ಮದುವೆಯಾಗುವಂತೆ ಕೇಳಲು ಒತ್ತಾಯಿಸಿದಳು. ಆದರೆ ಅವಳ ಕುಟುಂಬವು ಸಹ ಈ ಬಗ್ಗೆ ಯಾವುದೇ ಗಮನವನ್ನು ನೀಡಲಿಲ್ಲ. ಗರ್ಭಪಾತದ ನಂತರ ಆಕೆಯ ಆರೋಗ್ಯ ಹದಗೆಟ್ಟಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಕುರಿತು ಯುವತಿಯು ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಬಳಿಕ ಎಫ್‍ಐಆರ್ ದಾಖಲಿಸಲಾಗಿದೆ. ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ನೀಡಿದ ಅರ್ಜಿ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಎಸ್‍ಎಚ್‍ಒ ಕುಮಾರ್ ಬ್ರಜೇಶ್ ತಿಳಿಸಿದ್ದಾರೆ. ಇದನ್ನೂ ಓದಿ:  ಕಪಿಲೇಶ್ವರ ಮಂದಿರ ಕೆಡವಿ ಏನು ಕಟ್ಟಿದ್ದಾರೆ ಎಂಬ ಬಗ್ಗೆಯೂ ಸರ್ವೇ ಆಗಲಿ: ಲತೀಫ್‍ಖಾನ್ ಹೊಸ ಬಾಂಬ್ 

    ಸದ್ಯ ಆರೋಪಿಯು ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ನಡೆಯುತ್ತಿದೆ.

  • ಅನ್ಯಕೋಮಿನ ಯುವತಿಯನ್ನ ಪ್ರೀತಿಸಿದ್ದಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ಅನ್ಯಕೋಮಿನ ಯುವತಿಯನ್ನ ಪ್ರೀತಿಸಿದ್ದಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

    ಕಲಬುರಗಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನ ನಡುರಸ್ತೆಯಲ್ಲಿ ಬರ್ಬರವಾಗಿ ಕೊಚ್ಚಿ ಕೋಲೆಗೈದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.

    ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೊಲೆಗೀಡಾದ ಯುವಕ. ವಿಜಯ ಅನ್ಯಕೋಮಿನ ಯುವತಿಯನ್ನು ಪ್ರೀತಿ ಮಾಡುತ್ತಿದ್ದನು. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ವಿಜಯನನ್ನು ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

    ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನು ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಇಂದು ರಾಜ್ಯಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ

    POLICE JEEP

    ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಿಜೆಪಿ ಮುಖಂಡ ಆತ್ಮಹತ್ಯೆ ಪ್ರಕರಣ – ಅನಂತರಾಜು ಜೊತೆಗಿನ ಖಾಸಗಿ ವೀಡಿಯೋ ಇದೆ ಎಂಬ ಗೆಳತಿ ಚಾಟಿಂಗ್ ವೈರಲ್

  • ವರದಕ್ಷಿಣೆ ಕಿರುಕುಳ – ಮಗುವನ್ನು ಕೊಲೆಗೈದು ತಾಯಿ ಆತ್ಮಹತ್ಯೆ

    ವರದಕ್ಷಿಣೆ ಕಿರುಕುಳ – ಮಗುವನ್ನು ಕೊಲೆಗೈದು ತಾಯಿ ಆತ್ಮಹತ್ಯೆ

    ಹೈದರಾಬಾದ್: ವರದಕ್ಷಿಣೆ ಕಿರುಕುಳದ ಆರೋಪದ ಹಿನ್ನೆಲೆ ಮಹಿಳೆಯೊಬ್ಬರು ತಮ್ಮ 2 ವರ್ಷದ ಮಗುವನ್ನು ಹತ್ಯೆಗೈದಿದಲ್ಲದೇ ತಾವೂ ಕೂಡಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಾರ್ಕೆಟ್‍ಪಲ್ಲಿ ಮಂಡಲದಲ್ಲಿ ನಡೆದಿದೆ.

    BRIBE

    ಮಹಿಳೆಯನ್ನು ಲಾಸ್ಯ ಎಂದು ಗುರುತಿಸಲಾಗಿದ್ದು, ಮೊದಲು ತಮ್ಮ 2 ವರ್ಷದ ಮಗು ಸಾತ್ವಿಕ್‍ನನ್ನು ಸೀಲಿಂಗ್ ಫ್ಯಾನ್‍ಗೆ ನೇಣು ಹಾಕಿ ಹತ್ಯೆಗೈದಿದ್ದಾರೆ. ನಂತರದಲ್ಲಿ ತಾವೂ ಕೂಡಾ ಅದೇ ಫ್ಯಾನ್‍ಗೆ ನೇಣು ಬಿಗಿದುಕೊಂಡಿದ್ದಾರೆ. ಘಟನೆಯನ್ನು ಗಮನಿಸಿದ ನೆರೆಹೊರೆಯವರು ಧಾವಿಸಿ ಅವರನ್ನು ಕೆಳಗಿಳಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಇಬ್ಬರೂ ಸಾವನ್ನಪ್ಪಿದ್ದರು ಎಂದು ನಾರ್ಕೆಟ್‍ಪಲ್ಲಿ ಸರ್ಕಲ್ ಇನ್ಸ್‍ಪೆಕ್ಟರ್ (ಸಿಐ) ಶಿವರಾಮಿ ರೆಡ್ಡಿ ತಿಳಿಸಿದ್ದಾರೆ.

    ಲಾಸ್ಯ ಅವರು ನಾರ್ಕೆಟ್‍ಪಲ್ಲಿಯ ಔರವಾಣಿ ಗ್ರಾಮದ ರೈಲ್ವೆ ಕಾರ್ಮಿಕನಾದ ನರೇಶ್‍ನನ್ನು ಮೂರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಈ ಹಿಂದೆ ಲಾಸ್ಯ ಕುಟುಂಬ ವರದಕ್ಷಿಣೆಯಾಗಿ 35 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿತ್ತು. ಆರಂಭದಲ್ಲಿ ನರೇಶ್ ಕುಟುಂಬಕ್ಕೆ ಮಹಿಳೆಯ ಕುಟುಂಬವು 10 ಲಕ್ಷ ರೂ. ನೀಡಿದ್ದರು. ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ರೈಲ್ವೆ ಕಾರ್ಮಿಕನಾಗಿ ನೇಮಕಗೊಂಡಿದ್ದ ನರೇಶ್, ರಾಜ್ಯ ನಾಗರಿಕ ಸೇವಾ ಪರೀಕ್ಷೆಗೆ ತಯಾರಿ ನಡೆಸಲು ರಜೆ ಪಡೆದು ಹೈದರಾಬಾದ್‍ನಲ್ಲಿ ತಂಗಿದ್ದನು. ಇದನ್ನೂ ಓದಿ: 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    ನರೇಶ್‍ನಿಗೆ ರೈಲ್ವೆ ಕೆಲಸದಲ್ಲಿ ಆಸಕ್ತಿ ಇರಲಿಲ್ಲ. ಈ ವಿಷಯವನ್ನು ಮನೆಯವರಿಗೆ ತಿಳಿಸಿ ಉಳಿದ ವರದಕ್ಷಿಣೆ ಹಣವನ್ನು ಕೋಳಿ ವ್ಯಾಪಾರ ಮಾಡಲು ಕೇಳಿದ್ದಾನೆ. ಹಾಗಾಗಿ ಅಳಿಯನ ಒತ್ತಡಕ್ಕೆ ಮಣಿದು ಲಾಸ್ಯ ಕುಟುಂಬದವರು 20 ದಿನಗಳ ಹಿಂದೆ 20 ಲಕ್ಷ ರೂ. ನೀಡಿದ್ದರು. ಇದನ್ನೂ ಓದಿ: ಯಡಿಯೂರಪ್ಪಗೆ ಕೊಟ್ಟು ಗೊತ್ತೇ ಹೊರತು ಬೇಡಿ ಪಡೆದು ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ

    ಹಣ ನೀಡಿದ್ದರೂ ನರೇಶ್ ತನ್ನ ಹೆಂಡತಿಗೆ ಕಿರುಕುಳ ನೀಡುವುದನ್ನು ಮುಂದುವರೆಸಿದ್ದ. ಹೀಗಾಗಿ ಮನನೊಂದ ಲಾಸ್ಯ ಅವರು ಭಾನುವಾರ, ಅವರ ಅತ್ತೆ ಮನೆಯಿಂದ ಹೊರಬಂದ ನಂತರ ಮೊದಲು ತನ್ನ ಎರಡು ವರ್ಷದ ಮಗನನ್ನು ನೇಣು ಹಾಕಿ ನಂತರ ತಾವೇ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು ಯಾರನ್ನೂ ಬಂಧಿಸಲಾಗಿಲ್ಲ.

  • ಕಲ್ಯಾಣಮಂಟಪದಿಂದ ಪ್ರಿಯಕರನ ಜೊತೆ ವಧು ಎಸ್ಕೇಪ್ – ಮುರಿದುಬಿತ್ತು ಮದುವೆ

    ಕಲ್ಯಾಣಮಂಟಪದಿಂದ ಪ್ರಿಯಕರನ ಜೊತೆ ವಧು ಎಸ್ಕೇಪ್ – ಮುರಿದುಬಿತ್ತು ಮದುವೆ

    ಚಿಕ್ಕಬಳ್ಳಾಪುರ: ಮೊನ್ನೆ ಮೊನ್ನೆಯಷ್ಟೇ ಮೈಸೂರಿನಲ್ಲಿ ತಾಳಿ ಕಟ್ಟೋ ಕೊನೆ ಘಳಿಗೆಯಲ್ಲಿ ವಧು ತಲೆ ಸುತ್ತಿ ಬಿದ್ದು ನಾಟಕ ಮಾಡುವ ಮೂಲಕ ಮದುವೆ ಮುರಿದಿದ್ದಳು. ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲೂ ರಾತ್ರಿ ಆರತಕ್ಷತೆಯಲ್ಲಿ ಭಾಗಿಯಾದ ವಧು ರಾತ್ರೋ ರಾತ್ರಿ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದು, ಮದುವೆ ಮುರಿದುಬಿದ್ದಿದೆ.

    ಹೌದು ಗೌರಿಬಿದನೂರು ನಾಗರೆಡ್ಡಿ ಬಡಾವಣೆಯ ವಧು ವೆನ್ನಲ ಹಾಗೂ ಕರೇಕಲ್ಲಹಳ್ಳಿಯ ವರ ಸುರೇಶ್ ಮದುವೆ ನಿಶ್ಚಯವಾಗಿತ್ತು. ಗುರು ಹಿರಿಯರ ನಿಶ್ಚಯಿಸಿದಂತೆ ವಿದುರಾಶ್ವತ್ಥ ಗ್ರಾಮದ ಚನ್ನರಾಯಸ್ವಾಮಿ ಕಲ್ಯಾಣಮಂಟಪದಲ್ಲಿ ರಾತ್ರಿ ಆರತಕ್ಷತೆಯೂ ನೇರವೇರಿತ್ತು. ಆದರೆ ರಾತ್ರೋರಾತ್ರಿ ವಧು ವೆನ್ನಲ ತನ್ನ ಪ್ರಿಯಕರ ಸೋದರ ಮಾವ ಪ್ರವೀಣ್ ಜೊತೆ ಎಸ್ಕೇಪ್ ಆಗಿದ್ದಾಳೆ. ಇದನ್ನೂ ಓದಿ: ಐಶ್ವರ್ಯ ರಜನೀಕಾಂತ್ ನಿರ್ದೇಶನದಲ್ಲಿ ಸೌರವ್ ಗಂಗೂಲಿ ಬಯೋಪಿಕ್

    ಇದರಿಂದ ಇಂದು ನಡೆಯಬೇಕಿದ್ದ ಮದುವೆ ಮುರಿದುಬಿದ್ದಿದೆ. ಹೀಗಾಗಿ ಸಂಬಂಧಿಕರು ಗೌರಿಬಿದನೂರು ನಗರ ಪೊಲೀಸರ ಮೊರೆ ಹೋಗಿದ್ದು ವಧು ನಾಪತ್ತೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ. ಸದ್ಯ ವಧುವರರ ಸಂಬಂಧಿಕರು ಪೊಲೀಸ್ ಠಾಣೆ ಬಳಿ ಸೇರಿದ್ದು. ಪರಾರಿಯಾದ ವಧು ಹಾಗೂ ಪ್ರಿಯಕರ ಪ್ರವೀಣ್ ಸಹ ಠಾಣೆಗೆ ಬರುವುದಾಗಿ ತಿಳಿಸಿದ್ದಾರಂತೆ. ಹೀಗಾಗಿ ವಧು ಹಾಗೂ ಪ್ರಿಯಕರ ಬಂದ ನಂತರ ಮುಂದೇನಾಗುತ್ತೋ ಕಾದು ನೋಡಬೇಕಿದೆ. ಇದನ್ನೂ ಓದಿ: ತಾಳಿ ಕಟ್ಟುವಾಗ ಕುಸಿದುಬಿದ್ದಂತೆ ವಧು ನಾಟಕ – ಕೊನೆ ಕ್ಷಣದಲ್ಲಿ ಮುರಿದುಬಿತ್ತು ಮದುವೆ

  • ನಮ್ಮ ಮಗಳನ್ನು ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬಸ್ಥರ ಆಕ್ರೋಶ

    ನಮ್ಮ ಮಗಳನ್ನು ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬಸ್ಥರ ಆಕ್ರೋಶ

    ಹಾಸನ: ಗೃಹಿಣಿಯೊಬ್ಬರು ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಗಂಡನ ಮನೆಯವರೇ ಹತ್ಯೆ ಮಾಡಿ ನೇಣು ಹಾಕಿದ್ದಾರೆಂದು ಆರೋಪಿಸಿ ವ್ಯಕ್ತಿಯೊಬ್ಬರಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಹಾಸನದ ವಿದ್ಯಾನಗರದಲ್ಲಿ ನಡೆದಿದೆ.

    ಕಳೆದ ಹತ್ತು ವರ್ಷದ ಹಿಂದೆ ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆ ಗ್ರಾಮದ ರಂಜಿತಾ ಅವರನ್ನು, ಹಾಸನದ ವಿದ್ಯಾನಗರ ನಿವಾಸಿ ಅಕ್ಷಯ್‍ಗೆ ಮದುವೆ ಮಾಡಿಕೊಡಲಾಗಿತ್ತು. ಹತ್ತು ವರ್ಷ ಕಳೆದರೂ ದಂಪತಿಗೆ ಮಕ್ಕಳಿರಲಿಲ್ಲ. ಗಂಡ ಅಕ್ಷಯ್ ಹಾಗೂ ಮನೆಯವರು ನಿರಂತರವಾಗಿ ರಂಜಿತಾಗೆ ಕಿರುಕುಳ ನೀಡಿ, ದೈಹಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ರಂಜಿತಾ ಪೋಷಕರು ಆರೋಪ ಮಾಡುತ್ತಿದ್ದಾರೆ. ಇದನ್ನೂ ಓದಿ: ಎಷ್ಟು ಹೇಳಿದ್ರೂ ಓದ್ಲಿಲ್ಲ, ಸತ್ತವರ ಮನೆ ಮುಂದೆ ತಮಟೆ ಬಡಿಯಲು ಹೋಗ್ತಿದ್ರಿ – ಶಿಕ್ಷಕರ ಕ್ಲಾಸ್

    ಈ ಬಗ್ಗೆ ಮಾಜಿ ಸಚಿವ ರೇವಣ್ಣ ಅವರ ಬಳಿ ಕಷ್ಟ ಹೇಳಿಕೊಂಡಾಗ, ಹುಡುಗನ ಮನೆಯವರಿಗೆ ಬುದ್ದಿವಾದ ಹೇಳಿದ್ದರಂತೆ. ಆದರೂ ಗಂಡನ ಮನೆಯವರ ಕಿರುಕುಳ ತಪ್ಪಿರಲಿಲ್ಲ. ಇದೀಗ ರಂಜಿತಾ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಗಂಡನ ಮನೆಯವರೇ ಕೊಲೆ ಮಾಡಿ, ನೇಣು ಹಾಕಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿದ್ದ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲು

    ಅಷ್ಟೇ ಅಲ್ಲದೇ ರಂಜಿತಾ ಮನೆಯ ಕಿಟಕಿ ಗಾಜು, ಪಾಟ್‍ಗಳನ್ನು ಒಡೆದು ಹಾಕಿದ್ದಾರೆ. ರಂಜಿತಾ ಗಂಡ ಅಕ್ಷಯ್ ಮನೆಯವರ ಪರವಾಗಿ ಮಾತನಾಡಲು ಬಂದವರ ಮೇಲೂ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ವೇಳೆ ತಡೆಯಲು ಬಂದ ಪೊಲೀಸರನ್ನೂ ತಳ್ಳಾಟ ನೂಕಾಟ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.

  • ವಿವಾಹಿತೆಯ ಅನುಮಾನಾಸ್ಪದ ಸಾವು

    ವಿವಾಹಿತೆಯ ಅನುಮಾನಾಸ್ಪದ ಸಾವು

    ದಾವಣಗೆರೆ: ಮನೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದಾವಣಗೆರೆಯ ಎಸ್.ಎಂ ಕೃಷ್ಣಾ ನಗರದಲ್ಲಿ ನಡೆದಿದೆ.

    ಯಶೋಧ(30) ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ ಮಹಿಳೆ. ಧನ್ಯಕುಮಾರ್ ಜೊತೆ 9 ವರ್ಷಗಳ ಹಿಂದೆ ಯಶೋಧ ವಿವಾಹವಾಗಿತ್ತು. ಮದುವೆಯಾದಾಗಿನಿಂದ ಪತಿ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಅಕ್ಷಯ್ ಕುಮಾರ್ ಗೆ ಕೊರೋನಾ: ಕೇನ್ಸ್ ಚಿತ್ರೋತ್ಸವದಿಂದ ದೂರ

    MARRIAGE

    ತವರು ಮನೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಿಂದ ಯಶೋಧ ಭಾನುವಾರ ಗಂಡನ ಮನೆಗೆ ಬಂದಿದ್ದರು. ಇಂದು ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಗಂಡನೇ ಹೊಡೆದು ಸಾಯಿಸಿ ನೇಣು ಹಾಕಿದ್ದಾನೆ ಎಂದು ಮಹಿಳೆಯ ಮನೆಯವರು ಗಂಭೀರ ಆರೋಪ ಮಾಡುತ್ತಿದ್ದಾರೆ. ಸ್ಥಳಕ್ಕೆ ಗಾಂಧಿನಗರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿ: ಬರಗೂರು ನನ್ನ ಜೊತೆ ಚರ್ಚೆಗೆ ಬರಲಿ – ರೋಹಿತ್‌ ಚಕ್ರತೀರ್ಥ ಓಪನ್‌ ಚಾಲೆಂಜ್‌

  • ಆ್ಯಸಿಡ್ ಆರೋಪಿಗೆ ಎನ್‍ಕೌಂಟರ್ ಮಾಡಿ, ನರಳಿ ನರಳಿ ಸಾಯ್ಬೇಕು- ಸಂತ್ರಸ್ತೆ ಪೋಷಕರ ಆಗ್ರಹ

    ಆ್ಯಸಿಡ್ ಆರೋಪಿಗೆ ಎನ್‍ಕೌಂಟರ್ ಮಾಡಿ, ನರಳಿ ನರಳಿ ಸಾಯ್ಬೇಕು- ಸಂತ್ರಸ್ತೆ ಪೋಷಕರ ಆಗ್ರಹ

    ಬೆಂಗಳೂರು: ಆ್ಯಸಿಡ್ ದಾಳಿಗೆ ಒಳಗಾದ ಯುವತಿ ಕೊಂಚ ಚೇತರಿಸಿಕೊಂಡಿದ್ದಾಳೆ. ಆದರೆ ಕಳೆದ 16 ದಿನಗಳಿಂದ ನರಳಾಡ್ತಿದ್ದಾಳೆ. ಇತ್ತ ದಾಳಿಕೋರನಿಗೆ ತಕ್ಕ ಶಿಕ್ಷೆ ಆಗ್ಬೇಕು ಅಂತ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಆರೋಪಿಯನ್ನು ಚಿತ್ರಹಿಂಸೆ ನೀಡಿ ಸಾಯಿಸ್ಬೇಕು ಅಂತ ಕುಟುಂಬಸ್ಥರು ಆಗ್ರಹಿಸ್ತಿದ್ದಾರೆ.

    ಹೌದು. 16 ದಿನಗಳ ಬಳಿಕ ಆ್ಯಸಿಡ್ ಸೈಕೋ ನಾಗೇಶ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಇತ್ತ ಮಗಳ ಸ್ಥಿತಿ ಕಂಡು ಕಣ್ಣೀರಲ್ಲಿ ಕೈತೊಳೆಯುತ್ತಿರುವ ಯುವತಿಯ ಕುಟುಂಬಸ್ಥರು ಆ್ಯಸಿಡ್ ನಾಗನಿಗೆ ತಕ್ಕ ಶಿಕ್ಷೆ ಆಗಬೇಕು. ಅವನು ಒಂದೇ ಸಲ ಅಲ್ಲ, ನರಳಿ ನರಳಿ ಸಾಕಬೇಕು. ಅಂತಹ ಶಿಕ್ಷೆ ಕೊಡಿ ಅಂತ ಆಗ್ರಹಿಸಿದ್ದಾರೆ.

    ಆ್ಯಸಿಡ್ ಸಂತ್ರಸ್ತೆಯ ಕುಟುಂಬಸ್ಥರು ಪಬ್ಲಿಕ್ ಟಿವಿ ಜೊತೆ ತಮ್ಮ ನೋವು ಹಂಚಿಕೊಂಡಿದ್ದಾರೆ. ಯುವತಿಯ ದೊಡ್ಡಮ್ಮ ಮಾತಾಡಿ, ಚಾಮುಂಡಿ ಮಹಿಷಾಸುರನ ಕೊಂದ ಹಾಗೆ ಆ್ಯಸಿಡ್ ನಾಗನನ್ನ ಕೊಲ್ಲಬೇಕು. ಒಂದೇ ಸಲ ಸಾಯಿಸಬೇಡಿ, ನಮ್ಮ ಮಗಳ ನೋವು ಅವನಿಗೂ ಗೊತ್ತಾಗಬೇಕು. ಅವನಿಗೆ ಕ್ರೂರಾತೀ ಕ್ರೂರ ಶಿಕ್ಷೆ ಕೊಡಬೇಕು ಅಂತಾ ಆಗ್ರಹಿಸಿದ್ರು. ಅವನ ಕಾಲು ಮುರಿದು ಭಿಕ್ಷೆ ಬೇಡಲು ಹಾಕ್ಬೇಕು. ನನ್ನ ಮಗಳ ಮುಖ ನೋಡಿ 15 ದಿನಗಳಾಯ್ತು ಅಂತ ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

    ಆ ಪಾಪಿ ನಾಗೇಶ್ ಬೇರೆ ಹೆಣ್ಣು ಮಗಳನ್ನಲ್ಲ, ಅವನ ತಾಯಿ ಮುಖ ನೋಡೋದಕ್ಕೂ ಹೆದರಬೇಕು. ಅಂತಹ ಶಿಕ್ಷೆ ಅವನಿಗೆ ಆಗಬೇಕು ಅಂತ ಯುವತಿ ಚಿಕ್ಕಮ್ಮ ಆಗ್ರಹಿಸಿದರು. ಸಂತ್ರಸ್ತೆಯ ಚಿಕ್ಕಪ್ಪ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದ್ರು. ಪೊಲೀಸ್ ಇಲಾಖೆಗೆ ತುಂಬಾ ಧನ್ಯವಾದ, ಪೊಲೀಸರು ಧೈರ್ಯ ತುಂಬಿದ್ರು. ಹೇಳಿದಂತೆ ಅವನನ್ನ ಅರೆಸ್ಟ್ ಮಾಡಿದ್ದಾರೆ ಧನ್ಯವಾದ ಅಂದ್ರು. ಇತ್ತ ಯುವತಿಯ ಸಹೋದರಿ, ನನ್ನ ತಂಗಿ ಅಲ್ಲಿ ನರಳಾಡ್ತಿದ್ದಾಳೆ. ಅವನು ನನ್ನ ತಂಗಿ ಕಣ್ಣ ಮುಂದೆಯೇ ಸಾಯ್ಬೇಕು ಅಂತ ಒತ್ತಾಯಿಸಿದರು.

    ಯುವತಿಯ ತಂದೆ, ನಾನು ನಾಗೇಶ್ ಜೊತೆ ನಾಲ್ಕು ಮಾತಾಡಬೇಕು. ಅವನು ಹೀಗೆ ಮಾಡಿದ್ದೇಕೆ ಅಂತ ಕೇಳಬೇಕು. ಇನ್ನೂ ಅವಳು ಊಟ ತಿಂತಿಲ್ಲ. ಪೈಪ್ ಮೂಲಕವೇ ಲಿಕ್ವಿಡ್ ಫುಡ್ ಕೊಡ್ತಿದ್ದೀವಿ ಅಂತ ಕಣ್ಣೀರು ಹಾಕಿದ್ರು. ಇದನ್ನೂ ಓದಿ: ಬೆಂಗಳೂರಿಗೆ ಕರೆತರುವಾಗ ಎಸ್ಕೇಪ್ ಆಗಲು ಯತ್ನ- ಆ್ಯಸಿಡ್ ನಾಗನ ಕಾಲಿಗೆ ಗುಂಡೇಟು

    ಒಟ್ಟಿನಲ್ಲಿ ಕಿರಾತಕ ಆ್ಯಸಿಡ್ ನಾಗ ಯುವತಿ ಹಾಗೂ ಕುಟುಂಬ ಜೀವನ ಪೂರ್ತಿಯಾಗಿ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿ ತಾನು ಕಾವಿಧಾರಿ ವೇಷ ಹಾಕಿಕೊಂಡು ನಾಟಕ ಆಡುತ್ತಿದ್ದ ಆರೋಪಿಗೆ ಪೊಲೀಸರು ತಕ್ಕ ಶಿಕ್ಷೆ ನೀಡಲಿ ಅನ್ನೋದೆ ಎಲ್ಲರ ಆಶಯ.

  • ಮಗನ ಮುಂದೆಯೇ 79 ದಿನಗಳ ಕಾಲ ತಾಯಿಯ ಮೇಲೆ ನಿರಂತರ ಅತ್ಯಾಚಾರ

    ಮಗನ ಮುಂದೆಯೇ 79 ದಿನಗಳ ಕಾಲ ತಾಯಿಯ ಮೇಲೆ ನಿರಂತರ ಅತ್ಯಾಚಾರ

    ಭುವನೇಶ್ವರ್: ಮಹಿಳೆಯೊಬ್ಬರು ಎರಡೂವರೆ ವರ್ಷದ ಮಗನ ಮುಂದೆ ವ್ಯಕ್ತಿಯೊಬ್ಬನಿಂದ 79 ದಿನಗಳ ಕಾಲ ಸತತ ಅತ್ಯಾಚಾರಕ್ಕೊಳಗಾದ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದಿದೆ.

    ಪೊಲೀಸರು ಶುಕ್ರವಾರ ಸಂತ್ರಸ್ತೆ ಮತ್ತು ಮಗನನ್ನು ಆರೋಪಿ ಕೋಣೆಯಿಂದ ರಕ್ಷಿಸಿದ್ದಾರೆ. ಈ ವೇಳೆ ಆರೋಪಿಯು ತಲೆಮರೆಸಿಕೊಂಡಿದ್ದು, ಆತನನ್ನು ಹಿಡಿಯಲು ಪೊಲೀಸರು ಜಾಲ ಬೀಸಿದ್ದಾರೆ. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

    police (1)

    2017 ರಲ್ಲಿ ವಿವಾಹವಾದ ಮಹಿಳೆ, ವರದಕ್ಷಿಣೆಗಾಗಿ ತನ್ನ ಅತ್ತೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಆರೋಪಿಯು ಮಹಿಳೆಯ ಕುಟುಂಬಕ್ಕೆ ಭಿನ್ನಾಭಿಪ್ರಾಯವನ್ನು ಬಗೆಹರಿಸುವದಾಗಿ ಭರವಸೆ ನೀಡಿ, ಮಹಿಳೆಯನ್ನು ಕರೆದುಕೊಂಡು ಹೋಗಲು ಸಿದ್ಧನಾಗಿದ್ದನು. ಆದರೆ ಅವರು ಆರೋಪಿ ಜೊತೆ ಹೋಗಲು ನಿರಾಕರಿಸಿದರು. ಈ ಹಿನ್ನೆಲೆ ಅತ್ತೆ ಮಹಿಳೆಯನ್ನು ಪ್ರಜ್ಞೆ ಹೋಗುವಂತೆ ಥಳಿಸಿ ವ್ಯಕ್ತಿಯ ಕೋಣೆಯಲ್ಲಿ ಕೂಡಿಟ್ಟಿದ್ದರು. ಪ್ರಜ್ಞೆ ಬಂದ ನಂತರದಲ್ಲಿ ಮಹಿಳೆ ತನ್ನ ಮಗನನ್ನು ಹುಡುಕಲು ಆರಂಭಿಸಿದ್ದು, ಮಗ ಆರೋಪಿಯ ಕೋಣೆಯಲ್ಲಿ ಸಿಕ್ಕಿದ್ದಾನೆ. ಇದನ್ನೂ ಓದಿ: ಪತಿ ಆಸೆ ಈಡೇರಿಸಿದ ಪತ್ನಿ: ಹುತಾತ್ಮ ಯೋಧನ ಪತ್ನಿ ಈಗ ಲೆಫ್ಟಿನೆಂಟ್

    ಏಪ್ರಿಲ್ 28 ರಂದು ಆರೋಪಿಯು ತನ್ನ ಮೊಬೈಲ್ ಫೋನ್ ಅನ್ನು ಕೋಣೆಯಲ್ಲಿಯೇ ಬಿಟ್ಟು ಹೋಗಿರುವುದನ್ನು ಮಹಿಳೆ ಕಂಡುಕೊಂಡು ಕೂಡಲೇ ಪೋಷಕರಿಗೆ ಕರೆ ಮಾಡಿ ತನ್ನ ಕಷ್ಟವನ್ನು ವಿವರಿಸಿದ್ದಾರೆ. ಈ ವೇಳೆ ಮಹಿಳೆಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಸ್ಥಳಕ್ಕೆ ತಲುಪುವಷ್ಟರಲ್ಲಿ ಆರೋಪಿಯು ಪರಾರಿಯಾಗಿದ್ದನು. ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಹಲವು ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಮಹಿಳೆಯು ಎಫ್‍ಐಆರ್‌ನಲ್ಲಿ ತನ್ನ ಪತಿ, ಅವನ ಸಹೋದರ ಮತ್ತು ಅತ್ತೆ, ಮಾವನನ್ನು ಹೆಸರಿಸಿದ್ದಾರೆ. ಆದರೆ ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.