Tag: Faridabad

  • ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಕೇಸ್;‌ ಯುವತಿ, ಆಕೆಗೆ ನಿಶ್ಚಯವಾಗಿದ್ದ ವರ ಬಂಧನ

    ಇನ್ಶೂರೆನ್ಸ್‌ ಏಜೆಂಟ್‌ ಕೊಲೆ ಮಾಡಿ ಚರಂಡಿಗೆ ಎಸೆದ ಕೇಸ್;‌ ಯುವತಿ, ಆಕೆಗೆ ನಿಶ್ಚಯವಾಗಿದ್ದ ವರ ಬಂಧನ

    ನವದೆಹಲಿ: ಫರಿದಾಬಾದ್‌ನಲ್ಲಿ ವಿಮಾ ಏಜೆಂಟ್‌ನನ್ನು ಕೊಲೆ ಮಾಡಿ ಆತನ ದೇಹವನ್ನು ಚರಂಡಿಗೆ ಎಸೆದ ಆರೋಪದಲ್ಲಿ ಯುವತಿ ಮತ್ತು ಆಕೆಯ ನಿಶ್ಚಿತ ವರನನ್ನು ಬಂಧಿಸಲಾಗಿದೆ.

    ಚಂದರ್‌ ಕೊಲೆಯಾದ ವ್ಯಕ್ತಿ. ಪೊಲೀಸರು ಲಕ್ಷ್ಮಿ (29) ಮತ್ತು ಕೇಶವ್ (26) ಅವರನ್ನು ಬಂಧಿಸಿದರು. ಈತ ನನಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಕಾರಣ ಕೊಲೆ ಮಾಡಿರುವುದಾಗಿ ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಅಲ್ ಖೈದಾ ಜೊತೆ ಸಂಪರ್ಕ – ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ ಟೆಕ್ಕಿ ಪುಣೆಯಲ್ಲಿ ಅರೆಸ್ಟ್‌

    ಭಾನುವಾರ ಬೆಳಗ್ಗೆ ಚರಂಡಿಯಲ್ಲಿ ಚಂದರ್ ಅವರ ಶವ ಪತ್ತೆಯಾಗಿತ್ತು. ಸಮೀಪದಲ್ಲಿ ನಿಲ್ಲಿಸಿದ್ದ ಬೈಕ್‌ನ ನೋಂದಣಿ ಸಂಖ್ಯೆಯನ್ನು ಬಳಸಿಕೊಂಡು ಶವವನ್ನು ಗುರುತಿಸಲಾಯಿತು. ಫರಿದಾಬಾದ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಪೂರ್ವ ದೆಹಲಿಯ ವಿನೋದ್ ನಗರದಲ್ಲಿ ಚಂದರ್ ವಾಸಿಸುತ್ತಿದ್ದರು ಎಂದು ಪೊಲೀಸರು ಕಂಡುಕೊಂಡರು. ಅವರ ಕುಟುಂಬವನ್ನು ಸಂಪರ್ಕಿಸಿದರು. ಮೃತದೇಹದ ತಲೆ ಮತ್ತು ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದವು. ಚಂದರ್ ಅವರ ಸಹೋದರ ಮದನ್ ಗೋಪಾಲ್ ನೀಡಿದ ದೂರಿನ ನಂತರ, ಕೊಲೆ ಪ್ರಕರಣ ದಾಖಲಿಸಲಾಯಿತು.

    ಚಂದರ್ ಅವರಿಗೆ ಐದು ವರ್ಷಗಳಿಂದ ಪರಿಚಯವಿರುವುದಾಗಿ ಪೊಲೀಸರ ಬಳಿ ಆರೋಪಿ ಲಕ್ಷ್ಮಿ ಹೇಳಿದ್ದಾಳೆ. ಇತ್ತೀಚೆಗೆ ಕೇಶವ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಇದರಿಂದ ಚಂದರ್ ಬೇಸರಗೊಂಡಿದ್ದ. ಅವನು ಲಕ್ಷ್ಮಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಕೇಶವ್ ಅವರನ್ನು ಮದುವೆಯಾಗಬೇಡಿ ಎಂದು ಹೇಳಿದ್ದ. ಈ ಬ್ಲ್ಯಾಕ್‌ಮೇಲ್‌ನಿಂದ ಬೇಸತ್ತ ಆಕೆ ಮತ್ತು ಕೇಶವ್ ಇಬ್ಬರೂ ಚಂದರ್‌ನನ್ನು ಕೊಲ್ಲಲು ಯೋಜಿಸಿದ್ದರು ಎಂದು ಪೊಲೀಸ್ ವಕ್ತಾರ ಯಶ್ಪಾಲ್ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ಅ.25 ರಂದು ಲಕ್ಷ್ಮಿ, ಚಂದರ್‌ನನ್ನು ದೆಹಲಿಯ ಮಿಥಾಪುರಕ್ಕೆ ಕರೆದಳು. ಅಲ್ಲಿಂದ ಆತನ ಜೊತೆ ಬೈಕ್‌ನಲ್ಲಿ ಫರಿದಾಬಾದ್‌ನ ಆತ್ಮದ್‌ಪುರದಲ್ಲಿರುವ ನಿರ್ಜನ ಪ್ರದೇಶಕ್ಕೆ ಹೋದಳು. ಅಲ್ಲಿ, ಕೇಶವ್ ಮತ್ತು ಅವನ ಇಬ್ಬರು ಸ್ನೇಹಿತರು ಚಂದರ್ ಮೇಲೆ ಹಲ್ಲೆ ನಡೆಸಿದರು. ಆತ ಸತ್ತ ನಂತರ ಆರೋಪಿಗಳು ಶವವನ್ನು ಚರಂಡಿಯಲ್ಲಿ ಎಸೆದು ಸ್ಥಳದಿಂದ ಪರಾರಿಯಾಗಿದ್ದರು.

  • ಹರಿಯಾಣ | ಎಸಿ ಸ್ಫೋಟ – ಒಂದೇ ಕುಟುಂಬದ ಮೂವರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    ಹರಿಯಾಣ | ಎಸಿ ಸ್ಫೋಟ – ಒಂದೇ ಕುಟುಂಬದ ಮೂವರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    ಚಂಡೀಗಢ: ಹರಿಯಾಣದ (Haryana) ಫರಿದಾಬಾದ್‌ನ (Faridabad) ಕಟ್ಟಡ ಒಂದರಲ್ಲಿ ಎಸಿಯ ಕಂಪ್ರೆಸರ್ ಸ್ಫೋಟಗೊಂಡು (AC Blast) ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಅವರ ಸಾಕು ನಾಯಿ ಕೂಡ ಸಾವಿಗೀಡಾಗಿದೆ.

    ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರ (ಸೆ.8) ಬೆಳಗಿನ ಜಾವ 1:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಈ ವೇಳೆ, ಅವರು ವಾಸವಾಗಿದ್ದ ಎರಡನೇ ಮಹಡಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಳ್ಳಾರಿಯ ಜ್ಯುವೆಲ್ಲರಿ ಅಂಗಡಿಯಲ್ಲಿ ಎಸಿ ಸ್ಫೋಟ – ಮೂವರಿಗೆ ಗಂಭೀರ ಗಾಯ

    ಮತ್ತೊಂದು ಕೋಣೆಯಲ್ಲಿ ಸಚಿನ್‌ ಅವರ ಮಗ ಬಚಾವ್‌ ಆಗಲು ಕಿಟಕಿಯಿಂದ ಹಾರಿದ್ದಾನೆ. ಆತ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ಶಬ್ಧಕ್ಕೆ ಅಕ್ಕಪಕ್ಕದ ಜನ ಎದ್ದು ಕಟ್ಟಡದಲ್ಲಿದ್ದ ಇತರರನ್ನು ರಕ್ಷಿಸಿದ್ದಾರೆ.

    ಆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ 7 ಜನ ವಾಸವಾಗಿದ್ದರು. ಇನ್ನೂ ಮೊದಲನೇ ಮಹಡಿಯನ್ನು ಸಚಿನ್‌ ಕಪೂರ್‌ ಕಚೇರಿಯಾಗಿ ಮಾಡಿಕೊಂಡಿದ್ದರು. ಅಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕಾರ್ ಡ್ರೈವರ್‌ನ ಭೀಕರ ಕೊಲೆ – ಸ್ನೇಹಿತರಿಂದಲೇ ಹತ್ಯೆ ಶಂಕೆ

  • ಕೊಲೆಗೂ ಮುಂಚೆ ಸೊಸೆಯ ರೇಪ್ – ಮಗನ ಜೊತೆಗೂಡಿ 10 ಅಡಿ ಗುಂಡಿಯಲ್ಲಿ ಶವ ಹೂತಿಟ್ಟ ಕಿಲಾಡಿ ಮಾವ

    ಕೊಲೆಗೂ ಮುಂಚೆ ಸೊಸೆಯ ರೇಪ್ – ಮಗನ ಜೊತೆಗೂಡಿ 10 ಅಡಿ ಗುಂಡಿಯಲ್ಲಿ ಶವ ಹೂತಿಟ್ಟ ಕಿಲಾಡಿ ಮಾವ

    – ವಿಚಾರಣೆ ವೇಳೆ ಮಗನಿಗೂ ಗೊತ್ತಿರದ ಅತ್ಯಾಚಾರ ವಿಷಯ ಬಾಯ್ಬಿಟ್ಟ ದುಷ್ಟ

    ಚಂಡೀಗಢ: ಸೊಸೆಯನ್ನು ರೇಪ್ ಮಾಡಿ ಆನಂತರ ಕೊಲೆ ಮಾಡಿ, ಬಳಿಕ ಮಗನ ಜೊತೆಗೂಡಿ 10 ಅಡಿ ಆಳದ ಗುಂಡಿಯಲ್ಲಿ ಶವ ಹೂತು ಹಾಕಿರುವ ಘಟನೆಯೊಂದು ಹರಿಯಾಣದ (Haryana) ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ.

    ಮೃತ ಮಹಿಳೆಯನ್ನು ಉತ್ತರ ಪ್ರದೇಶದ (Uttara Pradesh) ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್‌ನ ತನು (24) ಎಂದು ಗುರುತಿಸಲಾಗಿದೆ. 2023ರ ಜುಲೈನಲ್ಲಿ ಹರಿಯಾಣ ಮೂಲದ ವ್ಯಕ್ತಿಯ ಜೊತೆ ಸಂತ್ರಸ್ತೆಯ ವಿವಾಹವಾಗಿತ್ತು. ಆದರೆ ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಆಕೆಗೆ ತೀವ್ರ ಕಿರುಕುಳ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

    ಕೊಲೆ ನಡೆದಿದ್ದು ಹೇಗೆ?
    ಅಪ್ಪ-ಮಗ ಸೇರಿಕೊಂಡು ಏ.14ರಂದು ಸಂತ್ರಸ್ತ ಯುವತಿಯನ್ನು ಕೊಲ್ಲಲು ಸರಿಯಾಗಿ ಪ್ಲ್ಯಾನ್‌ ಮಾಡಿದ್ದರು. ಈ ಪ್ಲ್ಯಾನ್‌ನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲು ಮಗ ತನ್ನ ಅಮ್ಮನನ್ನು ಉತ್ತರ ಪ್ರದೇಶದ ಇಟಾನಗರಕ್ಕೆ ಮದುವೆಗೆಂದು ಕಳುಹಿಸಿದ್ದ. ಏ.21ರಂದು ರಾತ್ರಿ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ, ಸಂತ್ರಸ್ತೆಗೆ ಹಾಗೂ ಆಕೆಯ ಸಹೋದರಿಗೆ ನೀಡಿದ್ದರು. ಬಳಿಕ ಇಬ್ಬರು ಬೇರೆ ಬೇರೆ ಕೋಣೆಯಲ್ಲಿ ಮಲಗಿದ್ದರು.

    ಕೊಲೆ ಮಾಡುವ ಉದ್ದೇಶದಿಂದ ಮಾವ ಕೋಣೆಗೆ ತೆರಳಿದ್ದಾಗ ಸೊಸೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಳು. ಇದನ್ನು ಕಂಡು ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿದ್ದಾನೆ. ನಂತರ ತನ್ನ ಮಗನನ್ನು ಕೋಣೆಗೆ ಕರೆದಿದ್ದಾನೆ. ಆದರೆ ಅತ್ಯಾಚಾರದ ವಿಷಯವನ್ನು ತಿಳಿಸಿರಲಿಲ್ಲ. ಶವವನ್ನ ಬಟ್ಟೆಯೊಂದರಲ್ಲಿ ಸುತ್ತಿ ಇಬ್ಬರು ಸೇರಿ ಎತ್ತಿಕೊಂಡು ಮನೆಯ ಹೊರಗೆ ಬಂದಿದ್ದಾರೆ. ಕೊಲೆಗೂ ಮುನ್ನವೇ ನೆರೆಹೊರೆಯವರನ್ನು ನಂಬಿಸಲು ಒಳಚರಂಡಿ ಕೆಲಸಕ್ಕಾಗಿ ಎಂದು ತಿಳಿಸಿ 10 ಅಡಿ ಆಳದ ಗುಂಡಿ ತೋಡಿಸಿದ್ದರು. ಅದೇ ಗುಂಡಿಗೆ ಹೆಣವನ್ನು ಬಿಸಾಕಿ ಬಳಿಕ ಅದರ ಮೇಲೆ ಇಟ್ಟಿಗೆ ಇರಿಸಿ, ಮಣ್ಣಿನಿಂದ ಮುಚ್ಚಿದ್ದರು. ಕೆಲವು ದಿನಗಳ ಬಳಿಕ ಅದರ ಮೇಲೆ ಕಾಂಕ್ರೀಟ್ ಹಾಕಿ ಮುಚ್ಚಲಾಗಿತ್ತು. ಇದೆಲ್ಲ ಆದ ಬಳಿಕ ಏ.25 ರಂದು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಿದ್ದರು.

    ಈ ಘಟನೆಯಾದ ಸುಮಾರು 2 ತಿಂಗಳ ಬಳಿಕ ಜೂ.21ರಂದು ಮನೆಯ ಹೊರಗೆ 10 ಅಡಿ ಆಳದ ಗುಂಡಿಯಲ್ಲಿ ಶವ ಪತ್ತೆಯಾಗಿತ್ತು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಈ ಕುರಿತು ಸಂತ್ರಸ್ತೆಯ ಸಹೋದರಿ ಮಾತನಾಡಿ, ಮದುವೆಯಾದಾಗಿನಿಂದ ನನ್ನ ಸಹೋದರಿ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿದ್ದಾರೆ. ಈ ನೋವಿನಿಂದಾಗಿ ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಆಕೆ ತವರು ಮನೆಗೆ ಬಂದಿದ್ದಳು. ಅದಾದ ಒಂದು ವರ್ಷದ ಬಳಿಕ ಮತ್ತೆ ಆಕೆ ಅತ್ತೆ ಮನೆಗೆ ಬಂದಿದ್ದಳು. ಆಕೆಗೆ ನೀಡಿರುವ ವರದಕ್ಷಿಣೆ ಅತ್ತೆ ಮಾವನಿಗೆ ಸಾಕಾಗಿರಲಿಲ್ಲ. ಇನ್ನೂ ಹೆಚ್ಚಿನ ಹಣ, ಒಡವೆ ತರಲು ಯಾವಾಗಲೂ ಒತ್ತಡ ಹಾಕುತ್ತಿದ್ದರು ಎಂದು ತಿಳಿಸಿದ್ದಾರೆ.

    ಈ ಆಧಾರದ ಮೇಲೆ ಮನೆಯವರನ್ನು ವಿಚಾರಣೆಗೆ ಒಳಪಡಿಸಿದಾಗ ಸಂತ್ರಸ್ತೆಯ ಮಾವ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಸಂತ್ರಸ್ತೆಯ ಮಾವ, ಅತ್ತೆ, ಪತಿ ಮತ್ತು ಅತ್ತಿಗೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!

  • 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

    10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

    –  ಗುಂಡಿಯಲ್ಲಿ ಹೂತು ಕಾಂಕ್ರೀಟ್‌ ಹಾಕಿದ್ದ ರಾಕ್ಷಸರು
    – ಎರಡು ತಿಂಗಳ ಬಳಿಕ ಪತ್ತೆಯಾದ ಶವ

    ಚಂಡೀಗಢ: ಮನೆಯ ಪಕ್ಕದಲ್ಲೇ 10 ಅಡಿ ಆಳದ ಗುಂಡಿ ತೆಗೆದು ಮಹಿಳೆಯನ್ನು ಹೂತು ಹಾಕಿದ ಘಟನೆ ಹರಿಯಾಣದ (Haryana) ಫರಿದಾಬಾದ್‌ನಲ್ಲಿ (Faridabad) ನಡೆದಿದೆ. ಮಹಿಳೆಯ ಕೊಳೆತ ಶವ ಪತ್ತೆಯಾಗಿದ್ದು, ಮೃತ ಮಹಿಳೆಯನ್ನು ಉತ್ತರ ಪ್ರದೇಶದ ಶಿಕೋಹಾಬಾದ್ ನಿವಾಸಿ ತನು (24) ಎಂದು ಗುರುತಿಸಲಾಗಿದೆ.

    ತನು ಫರಿದಾಬಾದ್‌ನ ರೋಶನ್ ನಗರದ ನಿವಾಸಿ ಅರುಣ್‌ನನ್ನು ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದಳು. ಇತ್ತೀಚೆಗೆ ಆಕೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ ಎಂದು ಆಕೆಯ ಪತಿ ಕುಂಟುಂಬಸ್ಥರು ಕತೆ ಕಟ್ಟಿದ್ದರು. ಆದರೆ ಮನೆಯ ಪಕ್ಕದಲ್ಲೇ ಆಕೆಯ ಶವ ಪತ್ತೆಯಾಗಿದೆ.  ಮನೆಯ ಪಕ್ಕದಲ್ಲಿ ಸುಮಾರು 10 ಅಡಿ ಗುಂಡಿ ತೆಗೆದು ಆಕೆಯ ಶವವನ್ನು ಹೂತು ಹಾಕಿ ಮೇಲೆ ಕಾಂಕ್ರೀಟ್‌ ಹಾಕಲಾಗಿತ್ತು. ಮಹಿಳೆಯ ಶವವನ್ನು ಜೆಸಿಬಿ ಬಳಸಿ ತೆಗೆಯಲಾಗಿದೆ. ಇದನ್ನೂ ಓದಿ: ಹಸುವಿನ ಕೆಚ್ಚಲು ಕೊಯ್ದು ಹೀನ ಕೃತ್ಯ – ಜಮೀನಿನಲ್ಲೇ ನರಳಿ ಪ್ರಾಣ ಬಿಟ್ಟ ಹಸು

    ತ್ಯಾಜ್ಯ ನೀರು ಹರಿಯಲು ಚರಂಡಿ ನಿರ್ಮಾಣಕ್ಕಾಗಿ ಸುಮಾರು ಎರಡು ತಿಂಗಳ ಹಿಂದೆ ಈ ಜಾಗವನ್ನು ಅಗೆಯಲಾಗಿತ್ತು. ಚರಂಡಿಗೆ ಕೊಳಚೆ ನೀರು ಸರಿಯಾಗಿ ಹೊಗುತ್ತಿಲ್ಲ ಎಂದು ಮಹಿಳೆಯ ಮಾವ ಅಲ್ಲಿ ಗುಂಡಿ ತೆಗೆಸಿದ್ದರು. ಬಳಿಕ ಆತುರಾತುರವಾಗಿ ಮುಚ್ಚಿ, ಕಾಂಕ್ರೀಟ್‌ ಹಾಕಿದ್ದರು. ಇದಾದ ಬಳಿಕ ತನು ಎಲ್ಲೂ ಕಾಣಿಸಿರಲಿಲ್ಲ. ನಮಗೆ ಏನೋ ಯಡವಟ್ಟಾಗಿದೆ ಎನಿಸುತ್ತಿತ್ತು. ಆದರೆ ಈ ರೀತಿ ಆಗಿದೆ ಎಂಬುದನ್ನು ಊಹಿಸಿರಲಿಲ್ಲ ಎಂದು ನೆರೆಹೊರೆಯವರು ಪೊಲೀಸರಿಗೆ ತಿಳಿಸಿದ್ದಾರೆ.

    2023 ರಲ್ಲಿ ತನು ಮದುವೆಯಾದ ನಂತರ ವರದಕ್ಷಿಣೆಗಾಗಿ (Dowry) ಪತಿ ಕುಟುಂಬದವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರು. ನಮ್ಮ ಕುಟುಂಬವು ಸಾಧ್ಯವಾದಷ್ಟು ಅವರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಿತ್ತು. ಆದರೆ ಪದೇ ಪದೇ ಒತ್ತಡ ಹೇರಲಾಗುತ್ತಿತ್ತು. ಇದರಿಂದ ಆಕೆ ಬೇಸತ್ತು ತವರು ಮನೆಗೆ ಬಂದು ಒಂದು ವರ್ಷಕ್ಕೂ ಹೆಚ್ಚು ಕಾಲ ಇದ್ದಳು. ಬಳಿಕ ಆಕೆಯನ್ನು ಪತಿ ಮನೆಗೆ ಕಳುಹಿಸಲಾಗಿತ್ತು. ಇದಾದ ಬಳಿಕ ಆಕೆಗೆ ಚಿತ್ರಹಿಂಸೆ ನೀಡಲಾಗುತ್ತಿತ್ತು. ಆಕೆಗೆ ಫೋನ್‌ ಸಹ ಮಾಡಲು ಬಿಡುತ್ತಿರಲಿಲ್ಲ ಎಂದು ಮೃತ ಮಹಿಳೆಯ ಸಹೋದರಿ ಪ್ರೀತಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ಕಳೆದ ಏಪ್ರಿಲ್ 23 ರಂದು, ತನು ಮನೆಯಿಂದ ಓಡಿಹೋಗಿದ್ದಾಳೆಂದು ಅತ್ತೆ-ಮಾವಂದಿರು ನಮ್ಮ ಕುಟುಂಬಕ್ಕೆ ತಿಳಿಸಿದ್ದರು. ನಮ್ಮ ಕುಟುಂಬ ಪೊಲೀಸರನ್ನು ಸಂಪರ್ಕಿಸಿದರೂ, ವಾರಗಳವರೆಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

    ಈ ಸಂಬಂಧ ಪೊಲೀಸರು ಮಹಿಳೆಯ ಪತಿ, ಮಾವ, ಅತ್ತೆ ಮತ್ತು ಸಂಬಂಧಿಯೊಬ್ಬನನ್ನು ಬಂಧಿಸಿದ್ದಾರೆ. ಮಹಿಳೆಯ ಸಾವಿಗೆ ನಿಖರ ಕಾರಣ ತಿಳಿಯಲು ಶವವನ್ನು ಪೊಲೀಸರು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ: ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

  • ಹರಿಯಾಣ: 1 ಗಂಟೆ ಅವಧಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

    ಹರಿಯಾಣ: 1 ಗಂಟೆ ಅವಧಿಯಲ್ಲಿ ಎರಡು ಬಾರಿ ಕಂಪಿಸಿದ ಭೂಮಿ

    ಹರಿಯಾಣ: ಹರಿಯಾಣದ (Haryana) ಫರೀದಾಬಾದ್ (Faridabad) ಜಿಲ್ಲೆಯಲ್ಲಿ ಒಂದರ ಹಿಂದೊಂದರಂತೆ ಭೂಕಂಪನಗಳು ಸಂಭವಿಸಿದೆ. ದೆಹಲಿ-ಎನ್‌ಸಿಆರ್‌ನಾದ್ಯಂತ ಕಂಪನದ ಅನುಭವವಾಗಿದೆ.

    ಫರಿದಾಬಾದ್ ಜಿಲ್ಲೆಯಲ್ಲಿ ಗುರುವಾರ ಎರಡು ಬಾರಿ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪನಶಾಸ್ತ್ರದ ಕೇಂದ್ರದ ಮಾಹಿತಿಯ ಪ್ರಕಾರ, ಮೊದಲ ಕಂಪನವು ಬೆಳಗ್ಗೆ 10.54ಕ್ಕೆ ಸಂಭವಿಸಿದೆ, ಇದಾಗಿ ಗಂಟೆಯೊಳಗೆ ಎರಡನೆಯ ಬಾರಿಗೆ 11.43ಕ್ಕೆ ಭೂಮಿ ಕಂಪಿಸಿದೆ. ಇದನ್ನೂ ಓದಿ: ಜೈಲಿಂದ ಹೊರಬಂದ ಬಳಿಕ ಹೆಚ್‌ಡಿಕೆ ಭೇಟಿಯಾದ ದೇವರಾಜೇಗೌಡ – ಪೆನ್‌ಡ್ರೈವ್‌ ಕೇಸ್ ಬಗ್ಗೆ ಮಾತುಕತೆ

    ದೇಶದ ರಾಜಧಾನಿ ದೆಹಲಿ-ಎನ್‌ಸಿಆರ್‌ನ ಹಲವಾರು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

  • ದೇಶದ ಅತಿ ದೊಡ್ಡ ಆಸ್ಪತ್ರೆ ಉದ್ಘಾಟಿಸಿದ ಮೋದಿ

    ದೇಶದ ಅತಿ ದೊಡ್ಡ ಆಸ್ಪತ್ರೆ ಉದ್ಘಾಟಿಸಿದ ಮೋದಿ

    ಚಂಡೀಗಢ: ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ, ಕೇಂದ್ರೀಕೃತ ಸಂಪೂರ್ಣ ಸ್ವಯಂಚಾಲಿತ ಪ್ರಯೋಗಾಲಯ ಸೇರಿದಂತೆ 2,600 ಹಾಸಿಗೆಯುಳ್ಳ ನೂತನ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಹರಿಯಾಣದ ಫರಿದಾಬಾದ್‌ನಲ್ಲಿರುವ ಹೊಸ ‘ಅಮೃತ’ ಆಸ್ಪತ್ರೆ ದೇಶದ ಅತಿ ದೊಡ್ಡ ಖಾಸಗಿ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.

    ಈ ವೇಳೆ ಮಾತನಾಡಿದ ಮೋದಿ, ಭಾರತ ಆರೋಗ್ಯ ಹಾಗೂ ಆಧ್ಯಾತ್ಮಿಕತೆಯ ನಿಕಟ ಸಂಬಂಧ ಹೊಂದಿರುವ ದೇಶವಾಗಿದೆ. ಈ ಸಂಬಂಧಕ್ಕೆ ಕೋವಿಡ್-19 ಒಂದು ಅತ್ಯುತ್ತಮ ಉದಾಹರಣೆ. ಇದು ಜನರಲ್ಲಿ ಜಾಗೃತಿ ಮೂಡಿಸಲು ಹಾಗೂ ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವನ್ನು ಕಾರ್ಯಗತಗೊಳಿಸಲು ಸಹಾಯ ಮಾಡಿದೆ ಎಂದರು.

    ತಂತ್ರಜ್ಞಾನ ಮತ್ತು ಆಧುನೀಕರಣದ ಸಂಯೋಜನೆ ದೇಶದ ಆರೋಗ್ಯ ಕ್ಷೇತ್ರದಲ್ಲಿ ಪ್ರಗತಿಗೆ ಕಾರಣವಾಗಿದೆ. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಜನರನ್ನು ಮುಂದೆ ತರಲು ಭಾರತ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: 10 ಮಹಾನಗರ ಪಾಲಿಕೆಗಳ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ – ನಿಮ್ಮ ನಗರಕ್ಕೆ ಯಾರು?

    ಆಸ್ಪತ್ರೆ ವಿಶೇಷತೆಯೇನು?
    ಸುಮಾರು 130 ಎಕರೆಯ ವಿಶಾಲವಾದ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ಅಮೃತ ಆಸ್ಪತ್ರೆ, 7 ಅಂತಸ್ತಿನ ಸಂಶೋಧನಾ ಬ್ಲಾಕ್ ಅನ್ನು ಹೊಂದಿದೆ. ಮಾತಾ ಅಮೃತಾನಂದಮಯಿ ಟ್ರಸ್ಟ್ ವತಿಯಿಂದ 6 ವರ್ಷಗಳ ಅವಧಿಯಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.

    ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 500 ಹಾಸಿಗೆಗಳನ್ನು ಈಗಾಗಲೇ ಬಳಕೆಗೆ ತೆರೆಯಲಾಗಿದೆ. ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಒಮ್ಮೆ ಸಂಪೂರ್ಣವಾಗಿ ಈ ಆಸ್ಪತ್ರೆ ಕಾರ್ಯ ನಿರ್ವಹಿಸಲು ಪ್ರಾರಂಭಿಸಿದರೆ, ದೇಶದ ಅತಿ ದೊಡ್ಡ ಖಾಸಗಿ ಆಸ್ಪತ್ರೆಯಾಗಲಿದೆ. ಇದನ್ನೂ ಓದಿ: ನಿವೃತ್ತಿ ಹೊಂದಿರುವ, ನಿವೃತ್ತಿ ಹೊಂದಲಿರುವ ವ್ಯಕ್ತಿಗೆ ಭಾರತದಲ್ಲಿ ಯಾವುದೇ ಮೌಲ್ಯವಿಲ್ಲ: ಸಿಜೆಐ ರಮಣ

    ಆಸ್ಪತ್ರೆಯ ಕಟ್ಟಡಗಳನ್ನು 36 ಲಕ್ಷ ಚದರ ಅಡಿ ಪ್ರದೇಶದಲ್ಲಿ ನಿರ್ಮಿಸಲಾಗಿದೆ. 14 ಮಹಡಿಗಳುಳ್ಳ ಕಟ್ಟಡದಲ್ಲಿ ಪ್ರಮುಖ ವೈದ್ಯಕೀಯ ಸೌಲಭ್ಯಗಳು ಇವೆ. ಮೇಲ್ಛಾವಣಿಯಲ್ಲಿ ಹೆಲಿಪ್ಯಾಡ್ ಕೂಡ ಇದೆ.

    ದೆಹಲಿ-ಮಥುರಾ ರಸ್ತೆಯ ಬಳಿ ಫರಿದಾಬಾದ್‌ನ ಸೆಕ್ಟರ್ 88ರಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು, ಇದರ ಕ್ಯಾಂಪಸ್‌ನಲ್ಲಿ ವೈದ್ಯಕೀಯ ಕಾಲೇಜು ಕೂಡಾ ಇದೆ. ಕಟ್ಟಡದ 7 ಅಂತಸ್ತಿನಲ್ಲಿ ಸಂಶೋಧನಾ ವಿಭಾಗ, ಗ್ಯಾಸ್ಟ್ರೋ ವಿಜ್ಞಾನ, ಮೂತ್ರಪಿಂಡ ವಿಜ್ಞಾನ, ಮೂಳೆ ರೋಗಗಳು, ಅಪಘಾತ, ಕಸಿ ಮತ್ತು ತಾಯಿ-ಮಗುವಿನ ಆರೈಕೆ ಸೇರಿದಂತೆ 8 ವಿವಿಧ ಕೇಂದ್ರಗಳು ಕ್ಯಾಂಪಸ್‌ನಲ್ಲಿವೆ.

    Live Tv 
    [brid partner=56869869 player=32851 video=960834 autoplay=true]

  • ಆನ್‍ನೈಲ್‍ನಲ್ಲಿ 100ಕ್ಕೂ ಹೆಚ್ಚು ಜನರಿಗೆ ವಂಚನೆ – 4 ಮಂದಿ ಅರೆಸ್ಟ್

    ಆನ್‍ನೈಲ್‍ನಲ್ಲಿ 100ಕ್ಕೂ ಹೆಚ್ಚು ಜನರಿಗೆ ವಂಚನೆ – 4 ಮಂದಿ ಅರೆಸ್ಟ್

    ಫರಿದಾಬಾದ್: ಆನ್‍ಲೈನ್‍ನಲ್ಲಿ 100ಕ್ಕೂ ಹೆಚ್ಚು ಜನರಿಗೆ ವಂಚಿಸಿದ ಆರೋಪದ ಮೇಲೆ ಫರಿದಾಬಾದ್ ಪೊಲೀಸರು ಶುಕ್ರವಾರ ನಾಲ್ವರನ್ನು ಬಂಧಿಸಿದ್ದಾರೆ.

    ವರದಿಯ ಪ್ರಕಾರ, ಆರೋಪಿಗಳ ಗ್ಯಾಂಗ್ ಲಾಟರಿ ಮತ್ತು ಕ್ರೆಡಿಟ್ ಕಾರ್ಡ್ ಆಕ್ಟಿವ್ ಮಾಡುವ ನೆಪದಲ್ಲಿ ಗ್ರಾಹಕರಿಗೆ ಬಹುಮಾನಗಳನ್ನು ನೀಡುತ್ತೇವೆ ಎಂದು ಆಸೆಯನ್ನು ಹುಟ್ಟಿಸುತ್ತಾರೆ. ಈ ಹಿನ್ನೆಲೆ ಗ್ರಾಹಕರು ಸಹ ಅವರು ಹೇಳಿದಕ್ಕೆ ಮರುಳಾಗಿ ಆರೋಪಿಗಳು ಕೇಳಿದ ಎಲ್ಲ ಮಾಹಿತಿಗಳನ್ನು ಕೊಡುತ್ತಾರೆ. ಅಲ್ಲದೆ ನಿಮಗೆ ಬಹುಮಾನ ಸಿಗಬೇಕಾದರೆ ಜಿಎಸ್‍ಟಿ ಹಣ ಕಟ್ಟಬೇಕು ಎಂದು ಕೇಳುತ್ತಾರೆ. ಅದರಂತೆ ಗ್ರಾಹಕರು ಸಹ ಹಣವನ್ನು ಕಟ್ಟುತ್ತಿದ್ದಂತೆ ತಮ್ಮ ಫೋನ್ ಸ್ವಿಚ್ ಆಫ್ ಮಾಡಿಕೊಂಡಿಕೊಳ್ಳುತ್ತಾರೆ ಎಂಬುದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ. ಇದನ್ನೂ ಓದಿ:  ಕಾಲಿನ ಮಂಡಿಯಲ್ಲಿ ಒಂದೂವರೆ ಕೆಜಿ ಚಿನ್ನ ಸಾಗಿಸುತ್ತಿದ್ದವ ಅರೆಸ್ಟ್!

    ಬಂಧಿತ ಆರೋಪಿಗಳನ್ನು ಫರಿದಾಬಾದ್‍ನ ದೀಪಕ್ ಝಾ, ದೆಹಲಿಯ ದೀಕ್ಷಾ, ಉತ್ತರ ಪ್ರದೇಶದ ಸುಹೇಲ್ ಮತ್ತು ದೆಹಲಿಯ ದೀಪಕ್ ಸಿಂಗ್ ಎಂದು ನಗರ ಪೊಲೀಸರು ಗುರುತಿಸಿದ್ದಾರೆ.

    ಮೋಸ ಹೋದ ಗ್ರಾಹಕರು ಪೊಲೀಸರಿಗೆ ದೂರು ನೀಡಿದ್ದು, ಅವರ ಜಾಲವನ್ನು ಪೊಲೀಸರು ಹುಡುಕಲು ಪ್ರಾರಂಭಿಸಿದ್ದಾರೆ. ತನಿಖೆ ವೇಳೆ ಪೊಲೀಸರಿಗೆ, ಆರೋಪಿಗಳು ತಮ್ಮನ್ನು ಬಚಾವ್ ಮಾಡಿಕೊಳ್ಳಲು ಸ್ಕಾರ್ಪಿಯೋ ಕಾರನ್ನು ಬಳಸುತ್ತಿರುವುದು ಗಮನಕ್ಕೆ ಬಂದಿದೆ. ಈ ಗ್ಯಾಂಗ್ ಕಾರನ್ನು ‘ವರ್ಚುವಲ್ ಕಾಲ್ ಸೆಂಟರ್’ ಆಗಿ ಬಳಸುತ್ತಿದ್ದು, ಅದರ ನೋಂದಣಿ ಸಂಖ್ಯೆಯನ್ನು ಬದಲಾಯಿಸುತ್ತಲೇ ಇರುತ್ತಾರೆ ಎಂದು ತಿಳಿದುಕೊಂಡಿದ್ದಾರೆ.

    ಪೊಲೀಸರು ಈ ಕುರಿತು ಮಾಹಿತಿ ನೀಡಿದ್ದು, ವಂಚನೆಗೆ ಸಂಬಂಧಿಸಿದಂತೆ ಸೆಕ್ಟರ್ 31 ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜನರನ್ನು ವಂಚಿಸುವ ಸಲುವಾಗಿ, ಆರೋಪಿಗಳ ಗ್ಯಾಂಗ್ ಜನರಿಗೆ ಕರೆ ಮಾಡಿ ಅವರು ಸ್ಮಾರ್ಟ್ ವಾಚ್, ಕಾರು ಅಥವಾ ಮೋಟಾರ್‍ಸೈಕಲ್ ಗೆದ್ದಿದ್ದೇವೆ ಎಂದು ತಿಳಿಸುತ್ತಿದ್ದರು. 18% ಜಿಎಸ್‍ಟಿ ಪಾವತಿಸಿದ ನಂತರ ಬಹುಮಾನದ ಹಣವನ್ನು ಕ್ಲೈಮ್ ಮಾಡಬಹುದು ಎಂದು ಹೇಳುವ ಮೂಲಕ ಗ್ರಾಹಕರ ಬಳಿ ಹಣವನ್ನು ವಂಚಿಸುತ್ತಿದ್ರು ಎಂದು ವಿವರಿಸಿದರು. ಇದನ್ನೂ ಓದಿ:  ಫೋನ್‌ನಲ್ಲಿ ಮಾತನಾಡುವಾಗ ಬಾಂಬ್ ಹಾಕುತ್ತಿದ್ದಾರೆ ಎಂದು ಬಂಕರ್‌ಗೆ ಓಡಿ ಹೋದ: ಪೋಷಕರ ಅಳಲು

    ವಿಚಾರಣೆಯ ವೇಳೆ ಆರೋಪಿಗಳು ಹಲವಾರು ರಾಜ್ಯಗಳಲ್ಲಿ 100 ಕ್ಕೂ ಹೆಚ್ಚು ಜನರನ್ನು ವಂಚಿಸಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ದಾಳಿ ವೇಳೆ ಆರೋಪಿಗಳ ನಕಲಿ ಸಿಮ್ ಕಾರ್ಡ್, ಸಂಪರ್ಕಗಳ ಪಟ್ಟಿಯನ್ನು ಹೊಂದಿರುವ ಪೆನ್ ಡ್ರೈವ್ ಮತ್ತು ನಾಲ್ಕು ಸೆಲ್ ಫೋನ್‍ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

  • ಯುವತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಮತಾಂತರಕ್ಕೆ ಒಪ್ಪದ್ದಕ್ಕೆ ಕೊಲೆ, ಲವ್ ಜಿಹಾದ್ ಎಂದ ಪೋಷಕರು

    ಯುವತಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಮತಾಂತರಕ್ಕೆ ಒಪ್ಪದ್ದಕ್ಕೆ ಕೊಲೆ, ಲವ್ ಜಿಹಾದ್ ಎಂದ ಪೋಷಕರು

    – ವಿವಾಹವಾಗಿ, ಮತಾಂತರವಾಗುವಂತೆ ಒತ್ತಡ
    – ಯುವತಿ ಒಪ್ಪದ್ದಕ್ಕೆ ಅಪಹರಣಕ್ಕೆ ಯತ್ನ, ತಪ್ಪಿಸಿಕೊಂಡಿದ್ದಕ್ಕೆ ಗುಂಡೇಟು

    ಚಂಡೀಗಢ: 21 ವರ್ಷದ ಯುವತಿ ಪರೀಕ್ಷೆ ಬರೆದು ಹೊರಗೆ ಬರುತ್ತಿದ್ದಂತೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಇದೀಗ ದೇಶಾದ್ಯಂತ ತಲ್ಲಣ ಸೃಷ್ಟಿಸಿದ್ದು, ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ.

    ಹರಿಯಾಣದ ಫರಿದಾಬಾದ್ ನಲ್ಲಿ ಘಟನೆ ನಡೆದಿದ್ದು, ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಇದೀಗ ಟ್ವಿಸ್ಟ್ ಪಡೆದುಕೊಂಡಿದೆ. ಮತಾಂತರಗೊಂಡು ವಿವಾಹವಾಗುವಂತೆ ಆರೋಪಿ ಬಲವಂತ ಮಾಡಿ, ಬೆದರಿಕೆ ಹಾಕಿದ್ದ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಪರೀಕ್ಷೆ ಮುಗಿಸಿ ಹೊರಬರುತ್ತಿದ್ದಂತೆಯೇ ಗುಂಡಿಕ್ಕಿ ಯುವತಿಯ ಕೊಲೆ

    ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಯುವತಿ ನಿಖಿತಾ ತೋಮರ್ ಬಿ.ಕಾಂ ಅಂತಿಮ ವರ್ಷದ ಪರೀಕ್ಷೆ ಬರೆದು ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ಆರೋಪಿಗಳು ದಾಳಿ ಮಾಡಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಘಟನೆ ನಡೆಯುತ್ತಿದ್ದಂತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗಳಾಗಿದ್ದರಿಂದ ಸಾವನ್ನಪ್ಪಿದ್ದಾಳೆ ಎಂದು ಬಲ್ಲಬ್‍ಘರ್ ಎಸಿಪಿ ಜೈವೀರ್ ಸಿಂಗ್ ರಥಿ ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ತೌಸಿಫ್ ಹಾಗೂ ಆತನ ಸಹಚರನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

    ಘಟನೆ ಕುರಿತು ಯುವತಿಯ ಕುಟುಂಬಸ್ಥರು ಮೌನ ಮುರಿದಿದ್ದು, ಆರೋಪಿ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ, ಒತ್ತಡ ಹೇರಿದ್ದ. ಯುವತಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವುದನ್ನು ನಿರಾಕರಿಸಿದ್ದಕ್ಕೆ ಆರೋಪಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ತಪ್ಪಿಸಿಕೊಂಡಿದ್ದು, ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಆರೋಪಿಗಳು ಕಾರಿನಲ್ಲಿ ಆಗಮಿಸಿದ್ದು, ಯುವತಿಯನ್ನು ಸಹ ಕಾರಿನಲ್ಲಿ ಕೂರುವಂತೆ ಬಲವಂತ ಮಾಡಿದ್ದಾರೆ. ಆದರೆ ಆಕೆ ನಿರಾಕರಿಸಿದ್ದಾಳೆ. ಈ ವೇಳೆ ಗುಂಡು ಹಾರಿಸಿದ್ದಾರೆ. ಅಲ್ಲದೆ ನಾನು ಈ ಕುರಿತು 2018 ರಲ್ಲೇ ಆರೋಪಿ ತೌಸಿಫ್ ವಿರುದ್ಧ ಕಿರುಕುಳದ ದೂರು ನೀಡಿದ್ದೆ ಎಂದು ಯುವತಿಯ ತಂದೆ ಹೇಳಿದ್ದಾರೆ.

    ಈ ಕುರಿತು ಸ್ವತಃ ನಿಖಿತಾ ತಂದೆ ಬಳಿ ಹೇಳಿದ್ದು, ಆರೋಪಿ ನನ್ನನ್ನು ಅಪಹರಿಸಲು ಬಂದಿದ್ದ ಎಂದು ತಿಳಿಸಿರುವುದಾಗಿ ಅವರ ತಂದೆ ಹೇಳಿದ್ದಾರೆ. ನಾನು ದೂರು ನೀಡಿದ್ದಕ್ಕೆ ತೌಸಿಫ್ ನನ್ನ ಮಗಳ ಮೇಲೆ ಒತ್ತಡ ಹೇರಿದ್ದ. ಅಲ್ಲದೆ ದೂರನ್ನು ವಾಪಸ್ ಪಡೆಯುವಂತೆ ಕುಟುಂಬದ ಮೇಲೆ ತುಂಬಾ ಒತ್ತಡ ಹೇರಿದ್ದ, ಹೀಗಾಗಿ ದೂರು ವಾಪಸ್ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ.

    ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ನಿಖಿತಾ ಆರೋಪಿಯ ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಹಾಗೂ ಕರೆಗಳನ್ನು ಸ್ವೀಕರಿಸದ್ದಕ್ಕೆ ತೌಸಿಫ್ ತುಂಬಾ ಸಿಟ್ಟಿಗೆದ್ದಿದ್ದ. ಬಳಿಕ ನಿಖಿತಾ ಪರೀಕ್ಷೆ ಬರೆಯಲು ಕಾಲೇಜಿಗೆ ಆಗಮಿಸುತ್ತಾಳೆ ಎಂಬುದನ್ನು ಅರಿತಿದ್ದ ತೌಸಿಫ್, ಕಾರ್ ತೆಗೆದುಕೊಂಡು ಬಂದು ಸ್ನೇಹಿತರೊಂದಿಗೆ ಕಾಲೇಜ್ ಹೊರಗೆ ನಿಂತಿದ್ದ. ಬಳಿಕ ದಾಳಿ ಮಾಡಿದ್ದಾನೆ.

    ಪ್ರಕರಣವನ್ನು ಪೊಲೀಸರು ಅಪರಾಧ ವಿಭಾಗಕ್ಕೆ ವರ್ಗಾಯಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಪ್ರಕರಣವನ್ನು ಬಿಜೆಪಿ ವಕ್ತಾರ ರಮಣ್ ಮಲಿಕ್ ಖಂಡಿಸಿದ್ದು, ಇದು ಜಿಹಾದಿ ರೀತಿಯ ಚಟುವಟಿಕೆಯಾಗಿದೆ. ಪೊಲೀಸರು ಎಲ್ಲ ಸಂದರ್ಭದಲ್ಲೂ, ಎಲ್ಲ ಕಡೆಯೂ ಇರಲು ಸಾಧ್ಯವಿಲ್ಲ ಎಂದಿದ್ದಾರೆ. ಅಗರ್ವಾಲ್ ಕಾಲೇಜು ಬಳಿ, ಪ್ರಕರಣ ನಡೆದ ಸ್ಥಳದಲ್ಲಿ ನಿಖಿತಾ ಸ್ನೇಹಿತರು ಹಾಗೂ ಇತರರು ಪ್ರತಿಭಟನೆ ನಡೆಸುತ್ತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಇದರಿಂದಾಗಿ ಹೈವೇ ಸಂಪೂರ್ಣ ಬಂದ್ ಆಗಿದ್ದು, ಪಲ್ಲಾಭ್‍ಘರ್-ಸಿಹ್ನಾ ರಸ್ತೆ ಬಂದ್ ಆಗಿದೆ. ಸಾಕಷ್ಟು ಟ್ರಾಫಿಕ್ ಜಾಮ್ ಸಂಭವಿಸಿದೆ.

  • ಪರೀಕ್ಷೆ ಮುಗಿಸಿ ಹೊರಬರುತ್ತಿದ್ದಂತೆಯೇ ಗುಂಡಿಕ್ಕಿ ಯುವತಿಯ ಕೊಲೆ

    ಪರೀಕ್ಷೆ ಮುಗಿಸಿ ಹೊರಬರುತ್ತಿದ್ದಂತೆಯೇ ಗುಂಡಿಕ್ಕಿ ಯುವತಿಯ ಕೊಲೆ

    – ಬಲವಂತವಾಗಿ ಕಾರೊಳಗೆ ದೂಡಿ ಅಪಹರಣಕ್ಕೆ ಯತ್ನ

    ಚಂಡೀಗಢ: ಕಾಲೇಜಿನ ಹೊರಗಡೆಯೇ 21 ವರ್ಷದ ಯುವತಿಯೊಬ್ಬಳನ್ನು ಗುಂಡಿಕ್ಕಿ ಕೊಲೆ ಮಾಡಿದ ಭಯಾನಕ  ಘಟನೆ ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ನಡೆದಿದ್ದು, ಯುವತಿಯನ್ನು ನಿಖಿತಾ ಎಂದು ಗುರುತಿಸಲಾಗಿದೆ. ಪರೀಕ್ಷೆ ಬರೆದು ಕಾಲೇಜಿನಿಂದ ಹೊರಬರುತ್ತಿದ್ದಂತೆಯೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಯುವತಿಯ ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

    ಯುವತಿಯ ಕಾಲೇಜಿನ ಹೊರಗಡೆ ವಾಹನದಲ್ಲಿ ಬಂದಿದ್ದ ಆರೋಪಿ ಆಕೆಯನ್ನು ಬಲವಂತಾಗಿ ಕಾರೊಳಗೆ ಹಾಕಿ ಅಪಹರಿಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಆರೋಪಿಗೆ ಮತ್ತೊಬ್ಬ ಸಾಥ್ ನೀಡಿದ್ದು, ಯುವತಿ ಮೇಲೆ ಗುಂಡು ಹಾರಿಸಿರುವುದಾಗಿ ಬಲ್ಲಬ್ಗರ್ ಎಸಿಪಿ ಜೈವೀರ್ ಸಿಂಗ್ ರಾತಿ ತಿಳಿಸಿದ್ದಾರೆ.

    ಆರೋಪಿಗಳು ಯುವತಿ ಮೇಲೆ ಗುಂಡು ಹಾರಿಸಿ ವಾಹನ ಹತ್ತಿ ಪರಾರಿಯಾಗಿದ್ದಾರೆ. ಇತ್ತ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದರಿಂದ ಯುವತಿ ಮೃತಪಟ್ಟಿದ್ದಾಳೆ ಎಂದು ಎಸಿಪಿ ವಿವರಿಸಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಇಂದು ಬಂಧಿಸಲಾಗಿದೆ. ಬಂಧಿತ ಮಿವಾತ್ ಸಿವಾಸಿಯಾಗಿದ್ದಾನೆ. ಯುವತಿ ಹಾಗೂ ಓರ್ವ ಆರೋಪಿ ಪರಿಚಯಸ್ಥರು ಎಂಬುದಾಗಿ ಪ್ರಾಥಮಿಕ ತನಿಖೆಯ ವೇಳೆ ತಿಳಿದುಬಂದಿದೆ. ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂಬುದಾಗಿ ಎಸಿಪಿ ಹೇಳಿದ್ದಾರೆ.

  • ತಂತ್ರ ಮಂತ್ರದ ಮೊರೆಗಾಗಿ 8 ವರ್ಷದ ಮಗಳನ್ನ ಕೊಂದ ತಾಯಿ

    ತಂತ್ರ ಮಂತ್ರದ ಮೊರೆಗಾಗಿ 8 ವರ್ಷದ ಮಗಳನ್ನ ಕೊಂದ ತಾಯಿ

    -ನನ್ನಲ್ಲಿ ದಿವ್ಯಶಕ್ತಿ ಇದೆ ಎಂದ ಮಹಿಳೆ

    ಲಕ್ನೋ: ತಂತ್ರ ಮಂತ್ರದ ಮೊರೆಗಾಗಿ ಮಹಿಳೆ ತನ್ನ ಎಂಟು ವರ್ಷದ ಮಗಳನ್ನ ಕೊಲೆಗೈದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ಮಗು ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿಯನ್ನ ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧನಕ್ಕೊಳಾಗದ ಮಹಿಳೆ ಆರಂಭದಲ್ಲಿ ತನಗೆ ದಿವ್ಯಶಕ್ತಿಯ ಬಲವಿದೆ ಎಂಬಿತ್ಯಾದಿ ಮಾತುಗಳನ್ನಾಡಿದ್ದಾಳೆ. ನಂತರ ತೀವ್ರ ವಿಚಾರಣೆಗೆ ಒಳಪಡಿಸಿದಾಗ ಮಗಳನ್ನ ಕೊಂದು ಶವವನ್ನ ಬಿಸಾಡಿರುವ ರಸ್ತೆಯನ್ನ ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಮಗಳ ಮನೆಗೆ ಬಂದು ಏಕಾಏಕಿ ಪುತ್ರಿ, ಅಳಿಯನ ಮೇಲೆ ಗುಂಡು ಹಾರಿಸಿದ ತಂದೆ

    ಪಲ್ವಲ್ ವ್ಯಾಪ್ತಿಯ ಬಗೋಲಾ ಗ್ರಾಮದ ಅರಣ್ಯ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಆರಂಭದಲ್ಲಿ ಮೂಢನಂಬಿಕೆ ಮಾತುಗಳನ್ನಾಡಿದ್ದ ಮಹಿಳೆ ಕೊನೆಗೆ ತಪ್ಪೊಪ್ಪಿಕೊಂಡಿದ್ದಾಳೆ. ಈ ಮೊದಲು ನೀರಿನ ಟ್ಯಾಂಕ್ ನಲ್ಲಿ ಮಗಳನ್ನ ಮುಳುಗಿಸಿ ಕೊಲ್ಲಲುಪ್ರಯತ್ನಿಸಿದ್ದಳು. ಆದ್ರೆ ಜನರು ಬಂದು ಬಾಲಕಿಯನ್ನ ರಕ್ಷಣೆ ಮಾಡಿದ್ದರು. ಇದನ್ನೂ ಓದಿ: ಫೋನ್ ಕರೆ ಸ್ವೀಕರಿಸಲು ಗೆಳತಿ ನಕಾರ- ಮನನೊಂದು ಯುವಕ ಆತ್ಮಹತ್ಯೆಗೆ ಯತ್ನ

    ಮೂರು ದಿನಗಳ ಮಗಳು ಕಾಣೆಯಾಗಿರುವ ಬಗ್ಗೆ ಬಾಲಕಿಯ ತಂದೆ ರಾಜೇಶ್, ಸಂಜಯ್ ಕಾಲೋನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರಿಗೆ ಆತನ ಪತ್ನಿಯ ಮೇಲೆ ಅನುಮಾನ ವ್ಯಕ್ತವಾಗಿತ್ತು. ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಶವ ಪರೀಕ್ಷೆ ಬಳಿಕ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಮೂಢನಂಬಿಕೆಯಲ್ಲಿರುವ ತಾಯಿ ತಂತ್ರ ಮಂತ್ರಗಳ ಮೊರೆಗಾಗಿ ಮಗಳನ್ನ ಕೊಲೆ ಮಾಡಿರೋದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಕ್ರೈಂ ಬ್ರಾಂಚ್ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.  ಇದನ್ನೂ ಓದಿ: ಸ್ನೇಹಿತನ ಪತ್ನಿಗೆ ಮತ್ತು ಬರೋ ಔಷಧಿ ನೀಡಿ ರೇಪ್ – ಗೆಳೆಯನ ಮಗಳನ್ನೂ ಬಿಡದ ಕಾಮುಕ