Tag: Farm Law

  • ಈಗ ರದ್ದಾಗಿದ್ರೂ ಅಗತ್ಯ ಎನಿಸಿದ್ರೆ ಮತ್ತೆ ಕೃಷಿ ಕಾಯ್ದೆ ಜಾರಿ: ರಾಜಸ್ಥಾನ ರಾಜ್ಯಪಾಲ

    ಈಗ ರದ್ದಾಗಿದ್ರೂ ಅಗತ್ಯ ಎನಿಸಿದ್ರೆ ಮತ್ತೆ ಕೃಷಿ ಕಾಯ್ದೆ ಜಾರಿ: ರಾಜಸ್ಥಾನ ರಾಜ್ಯಪಾಲ

    ಲಕ್ನೋ: ಕೃಷಿ ಕಾನೂನುಗಳನ್ನು ಸರ್ಕಾರ ಈಗ ರದ್ದುಗೊಳಿಸಿದ್ದರೂ ಅಗತ್ಯವೆಂದೆನಿಸಿದಲ್ಲಿ ಮರು ಜಾರಿಗೊಳಿಸಬಹುದು ಎಂದು ರಾಜಸ್ಥಾನ ರಾಜ್ಯಪಾಲ ಕಲ್‌ರಾಜ್ ಮಿಶ್ರಾ ಹೇಳಿದ್ದಾರೆ.

    ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಸ್ವಾಗತಿಸಿದ ಅವರು, ಸರ್ಕಾರವು ರೈತರಿಗೆ ಕೃಷಿ ಕಾನೂನಿನ ಸಾಧಕಗಳನ್ನು ವಿವರಿಸಲು ಪ್ರಯತ್ನಿಸಿತು. ಆದರೆ ರೈತರು ರದ್ದುಪಡಿಸುವಂತೆ ಹಠ ಹಿಡಿದಿದ್ದರು ಎಂದರು.

    ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಸರ್ಕಾರ ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: 1.5 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ – ಇಬ್ಬರು ಅರೆಸ್ಟ್

    ರೈತರ ಪ್ರತಿಭಟನೆಗೆ ಮಣಿದ ಪ್ರಧಾನಿ ನರೇಂದ್ರ ಮೋದಿ ಮೂರು ಕೃಷಿ ಕಾಯ್ದೆಯನ್ನು ವಾಪಸ್‌ ಪಡೆಯುವುದಾಗಿ ಶುಕ್ರವಾರ ಪ್ರಕಟಿಸಿದ್ದರು. ಮುಂದಿನ ಸಂಸತ್‌ ಅಧಿವೇಶನದಲ್ಲಿ ಕಾಯ್ದೆಗಳ ರದ್ದು ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು. ಇದನ್ನೂ ಓದಿ:  ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ

    ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದರೂ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದಿಲ್ಲ. ಚಳಿಗಾಲದ ಅಧಿವೇಶನದ ವೇಳೆ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸುವುದಾಗಿ ಹೇಳಿದ್ದಾರೆ.

  • ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ

    ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡಿ: ಸಿದ್ದರಾಮಯ್ಯ

    ಬೆಂಗಳೂರು: ಹೋರಾಟದಿಂದ ಮೃತಪಟ್ಟ ರೈತರಿಗೆ 25 ಲಕ್ಷ ರೂಪಾಯಿ ಪರಿಹಾರ ಕೊಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 10 ತಿಂಗಳು ಕಾಲ ರೈತರು ಪ್ರತಿಭಟಿಸಿದ್ದಾರೆ. ಕೇಂದ್ರ ಸರ್ಕಾರ ಅಮಾನುಷವಾಗಿ ನಡೆದುಕೊಂಡಿದೆ. ಲಖೀಂಪುರ ಘಟನೆಯೇ ಇದಕ್ಕೆ ಉತ್ತಮ ನಿದರ್ಶನ. ಕೇಂದ್ರ ಸಚಿವರ ಮಗನೇ ಕಾರು ಹತ್ತಿಸಿ ಕೊಂದ. ಇದೀಗ ವಿಧಿ ಇಲ್ಲದೆ ಕಾಯ್ದೆ ವಾಪಸ್ ಪಡೆದಿದೆ. ರೈತರು ಮತ್ತು ವಿರೋಧ ಪಕ್ಷದ ಹೋರಾಟಕ್ಕೆ ಸಿಕ್ಕ ಜಯ. ರೈತರ ವಿರುದ್ಧ ಕಾನೂನು ತೆಗೆದುಕೊಂಡಿತ್ತು ಎಂದರು.

    ರೈತರ ಮೇಲಿನ ಎಲ್ಲಾ ಕೇಸ್ ಗಳನ್ನು ವಾಪಸ್ ಪಡೆಯಿರಿ. ಉಪಚುನಾವಣೆಯಲ್ಲಿ ಸೋತಿದ್ದಕ್ಕೆ ಪೆಟ್ರೋಲ್ ಕಡಿಮೆ ಮಾಡಿದ್ರು. ಚುನಾವಣೆಯಲ್ಲಿ ಸೋಲುವ ಭಯಕ್ಕೆ ಇದೀಗ ಕಾಯ್ದೆ ವಾಪಸ್ ಪಡೆದಿದ್ದಾರೆ. ನಿರಂತರ ಹೋರಾಟದಿಂದ ಜಯ ಸಾಧಿಸಿದ್ದಾರೆ. ರೈತರನ್ನು ದೇಶದ್ರೋಹಿಗಳು ಅಂದರು. ಬಿಜೆಪಿಗೆ ಸೋಲಾಗಿದೆ. ಇದು ರೈತರಿಗೆ ಸಿಕ್ಕ ಜಯ. ಮತ್ತೊಂದು ಸ್ವಾತಂತ್ರ್ಯ ಹೋರಾಟದ ಜಯ ಇದು. ಬಿಜೆಪಿಗೆ ವಕ್ರ ದೆಶೆ, ಕಾಂಗ್ರೆಸ್ಸಿಗೆ ಶುಕ್ರ ದೆಶೆ ಅಂತ ಹೇಳುವುದಿಲ್ಲ. ಒಟ್ಟಿನಲ್ಲಿ ಇದು ರೈತರ ಜಯ ಅಷ್ಟೇ ಎಂದು ಸಿದ್ದರಾಮಯ್ಯ ತಿಳಿಸಿದರು.

    ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ವಾಪಸ್ ಪಡೆದಿದ್ದಾರೆ. ಮುಂದಿನ ವರ್ಷ ಚುನಾವಣೆ ನಡೆಯಲಿದೆ. ಹಾಗಾಗಿ ಹೆದರಿ ಈ ಕಾಯ್ದೆ ಹಿಂಪಡೆದಿದ್ದಾರೆ. ಬೆಲೆ ಇಳಿಸಿದ್ದೂ ಚುನಾವಣೆ ಸೋತಿದ್ದಕ್ಕೆ. ರೈತರ ಹೋರಾಟಕ್ಕೆ ಮಣಿದಿದ್ದಾರೆ. ಹೋರಾಟ ಹತ್ತಿಕ್ಕಲು ಬಹಳ ಪ್ರಯತ್ನ ಮಾಡಿದ್ರು. ಇವರ ಪ್ರಯತ್ನಕ್ಕೆ ರೈತರು ಮಣಿಯಲಿಲ್ಲ. ಇವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ. ಇವರಿಗೆ ತೀವ್ರ ಮುಖಭಂಗವಾಗಿದೆ. ಈ ಜಯ ರೈತರಿಗೆ ಸಿಕ್ಕ 2ನೇ ಸ್ವಾತಂತ್ರ್ಯ. ಕಾಂಗ್ರೆಸ್ ಅಭಿಪ್ರಾಯದಂತೆ ಇದು ಸ್ವಾತಂತ್ರ್ಯ ಹೋರಾಟ ಎಂದು ಬಣ್ಣಿಸಿದರು.

  • ರೈತರ ಭಾವನೆಗೆ ಬೆಲೆ ಕೊಟ್ಟಿದ್ದು, ಇದಕ್ಕೂ ಪಂಚರಾಜ್ಯ ಚುನಾವಣೆಗೂ ಸಂಬಂಧವಿಲ್ಲ: ಬೊಮ್ಮಾಯಿ

    ರೈತರ ಭಾವನೆಗೆ ಬೆಲೆ ಕೊಟ್ಟಿದ್ದು, ಇದಕ್ಕೂ ಪಂಚರಾಜ್ಯ ಚುನಾವಣೆಗೂ ಸಂಬಂಧವಿಲ್ಲ: ಬೊಮ್ಮಾಯಿ

    ಬೆಂಗಳೂರು: ರೈತರ ಭಾವನೆಗಳಿಗೆ ಬೆಲೆ ಕೊಟ್ಟಿದ್ದು, ಇದಕ್ಕೂ ಪಂಚರಾಜ್ಯ ಚುನಾವಣೆಗಳಿಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೃಷಿ ಕಾಯ್ದೆ ವಾಪಸ್ ಪಡೆದ ವಿಚಾರಕ್ಕೆ ಪ್ರತಿಕ್ರಿಯಿಸಿ, ಯುಪಿಎ ಅವಧಿಯಲ್ಲಿ ಜಾಗತೀಕರಣ, ಉದಾರೀಕರಣ ಆದ ಮೇಲೆ ಹೊಸ ಕಾಯ್ದೆ ಬಂದಿವೆ. ಯುಪಿಎ ಸರ್ಕಾರದಲ್ಲಿ ಕರಡು ಇತ್ತು. ಎಲ್ಲಾ ರಾಜ್ಯಗಳ ಅಭಿಪ್ರಾಯ ಪಡೆದು ಜಾರಿ ಮಾಡಲಾಗಿತ್ತು. ಪಂಜಾಬ್, ಹರಿಯಾಣದ ರೈತರು ವಿರೋಧ ಮಾಡಿದ್ರು. ಪ್ರಧಾನಿಗಳು ಈಗ ಕಾಯ್ದೆ ವಾಪಸ್ ಪಡೆಯುತ್ತೇವೆ ಅಂತ ಹೇಳಿದ್ದಾರೆ. ಇದು ಸ್ಪಂದನಾಶೀಲ ಸರ್ಕಾರ ಇದು. ಹೀಗಾಗಿ ರೈತರ ಭಾವನೆಗೆ ಬೆಲೆ ಕೊಟ್ಟಿದ್ದೇವೆ. ಇದಕ್ಕೂ ಪಂಚರಾಜ್ಯ ಚುನಾವಣೆಗೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆ ಮೂರು ವಿವಾದಿತ ಕೃಷಿ ಕಾಯ್ದೆ ಯಾವುದು?- ರೈತರ ಹೋರಾಟಕ್ಕೆ ಜಯ ಸಿಕ್ಕಿದ್ದೇಗೆ?

    ದೇಶದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿದೆ. ಹೀಗಾಗಿ ಚುನಾವಣೆ ದೃಷ್ಟಿಯಿಂದ ಪ್ರಧಾನಿಗಳು ಈ ನಿರ್ಧಾರ ಮಾಡಿಲ್ಲ. ರೈತರಿಗೆ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿಯವರು ಮಾಡಿದರು. ಆದರೆ ಅದು ಹೋರಾಟ ಮಾಡೋರಿಗೆ ಅರ್ಥ ಆಗಿರಲಿಲ್ಲ. ಹೀಗಾಗಿ ವಿಶ್ವಾಸ ಬರಬೇಕು ಅನ್ನೋ ದೃಷ್ಟಿಯಿಂದ ಈ ಕಾಯ್ದೆ ವಾಪಸ್ ಪಡೆದಿದ್ದಾರೆ ಎಂದರು.

    ಚಳಿಗಾಲದ ಅಧಿವೇಶನದಲ್ಲಿ ಕಾಯ್ದೆ ವಾಪಸ್ ಪಡೆಯೋದಾಗಿ ಪಿಎಂ ಹೇಳಿದ್ದಾರೆ. ಮೋದಿ ಸರ್ಕಾರ ಸ್ಪಂದನಶೀಲ ಸರ್ಕಾರವಾಗಿದ್ದು, ಹೀಗಾಗಿ ರೈತರ ಮಾತಿಗೆ ಬೆಲೆ ಕೊಟ್ಟಿದೆ ಎಂದು ಸಿಎಂ ಹೇಳಿದರು. ಇದನ್ನೂ ಓದಿ:   ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

  • ನಾಳೆ ಕರ್ನಾಟಕ ಬಂದ್‌ – ಏನಿರುತ್ತೆ? ಏನು ಇರಲ್ಲ?

    ನಾಳೆ ಕರ್ನಾಟಕ ಬಂದ್‌ – ಏನಿರುತ್ತೆ? ಏನು ಇರಲ್ಲ?

    ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನಾಳೆ ಭಾರತ್ ಬಂದ್ ನಡೆಸಲಾಗುತ್ತಿದೆ. ಇದರ ಭಾಗವಾಗಿ ಕರ್ನಾಟಕ ಬಂದ್‌ಗೂ ಕರೆ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಹೋರಾಟಗಾರರು ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಿದ್ದು, ಸಂಘಟನೆಗಳು ನೈತಿಕ ಬೆಂಬಲ ನೀಡಿವೆ. ಹೀಗಾಗಿ ಕರ್ನಾಟಕದಲ್ಲಿ ಬಂದ್‌ ಬಿಸಿ ನಾಳೆ ಇರಲ್ಲ.

    ಬಂದ್‌ ಯಾಕೆ?
    ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುಂತೆ ಒತ್ತಾಯಿಸಿ, ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ನಾಳೆಗೆ ನಾಲ್ಕು ತಿಂಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಬಂದ್ ಯಶಸ್ವಿಗೊಳಿಸಲು, ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ವತಿಯಿಂದ ಮನವಿ ಮಾಡಲಾಗಿದೆ.

    ಕರ್ನಾಟಕದಲ್ಲೂ ಬಂದ್ ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ. ರಾಜ್ಯದ ಎಲ್ಲ ನಾಗರೀಕರು ಬಂದ್‌ಗೆ  ಬೆಂಬಲ ಸೂಚಿಸುವಂತೆ ಸಂಯುಕ್ತ ಹೋರಾಟ ಕರ್ನಾಟಕದ ಸಂಯೋಜಕ ಮತ್ತು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

    ಬಂದ್‌ ಇರಲ್ಲ:  ಕಳೆದ ಆರು ತಿಂಗಳಿಂದ ಕರ್ನಾಟಕದಲ್ಲಿ 3- 4 ಬಾರಿ ಬಂದ್ ಆಚರಣೆ ಮಾಡಲಾಗಿದೆ. ಇದಕ್ಕೆ ರಾಜ್ಯದ ಜನರು ರೈತರು ಅಂದು ಅಭೂತಪೂರ್ವ ಬೆಂಬಲ ನೀಡಿದ್ದಾರೆ ಆದರೆ ಈ ಬಾರಿಯ ಬಂದ್ ಬಗ್ಗೆ ಪೂರ್ವಯೋಜಿತವಾಗಿ ರಾಜ್ಯದ ಎಲ್ಲ ರೈತ, ಜನಪರ ಸಂಘಟನೆಗಳು ಚರ್ಚಿಸಿದೆ ಇರುವ ಕಾರಣ ಯಶಸ್ವಿ ಬಂದ್ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ. ನಾವು ರಾಜ್ಯದಲ್ಲಿ ಬಂದ್ ಕಾರ್ಯಕ್ರಮದ ಬದಲು ಎಲ್ಲಾ ಜಿಲ್ಲೆಯಲ್ಲಿ ಕೃಷಿ ಕಾಯ್ದೆಗಳ ಶವಯಾತ್ರೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ. ರಾಷ್ಟ್ರೀಯ ಕಿಸಾನ್ ಸಂಯುಕ್ತ ಮೋರ್ಚಾ ಕರೆಯನ್ನು ಈ ರೀತಿಯಲ್ಲಿ ಕರ್ನಾಟಕದ ರೈತರು ಬೆಂಬಲಿಸಲಿದ್ದೇವೆ ಅಂತ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

    ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಜನಪರ ಸಂಘಟನೆಗಳ ಜೊತೆ ಚರ್ಚಿಸದೇ ಭಾರತ್ ಬಂದ್ ಗೆ ಕರೆ ನೀಡಿದೆ. ಹೀಗಾಗಿ ನಾಳೆ ರಾಜ್ಯದಲ್ಲಿ ಬಂದ್ ನಡಸದಿರಲು ರಾಜ್ಯ ರೈತ ಸಂಘಟನೆಗಳು ತೀರ್ಮಾನ ಮಾಡಲಾಗಿದೆ. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

    ಬೆಂಬಲ ನೀಡಿದವರು ಯಾರು?
    ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ನಾಳೆ ಬೆಳಿಗ್ಗೆ 11.30ಕ್ಕೆ ಮೆಜೆಸ್ಟಿಕ್ ನಲ್ಲಿ ಪ್ರತಿಭಟನೆ ಮಾಡಲಿದೆ. ನಮ್ಮ ಚಾಲಕರ ಟ್ರೇಡ್ ಯೂನಿಯನ್, ಅದರ್ಶ ಆಟೋ ಚಾಲಕರ ಮತ್ತು ಮಾಲೀಕರ ಸಂಘ, ರಾಷ್ಟ್ರೀಯ ವಾಹನ ಚಾಲಕರ ಒಕ್ಕೂಟ, ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ ಸಂಘ, ಕರವೇ ಪ್ರವೀಣ್ ಶೆಟ್ಟಿ ಬಣ, ಆಟೋ ಚಾಲಕರ ಸಂಘ, ಪೀಸ್ ಆಟೋ ಚಾಲಕ ಸಂಘ, ಹೋಟೆಲ್ ಮಾಲೀಕರು ನೈತಿಕ ಬೆಂಬಲ ಸೂಚಿಸಿದ್ದಾರೆ.

    ನಾಳೆ ಏನಿರತ್ತೆ?
    ಎಂದಿನಂತೆ ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಬಸ್ ಸಂಚಾರ ಇರಲಿದೆ. ಮೆಟ್ರೋ, ಆಟೋ ಸಂಚಾರ ಕೂಡ ಎಂದಿನಂತೆ ಇರಲಿದೆ. ಓಲಾ-ಊಬರ್, ಖಾಸಗಿ ಬಸ್, ರೈಲ್ವೇ ಸಂಚಾರದಲ್ಲಿ ವ್ಯತ್ಯಯ ಇಲ್ಲ . ಶಾಲೆ, ಕಾಲೇಜುಗಳಿಗೆ ರಜೆ ನೀಡಿಲ್ಲ.

    ಮಾರುಕಟ್ಟೆ ವ್ಯಾಪಾರ ವಹಿವಾಟಿಗೆ ಯಾವುದೇ ಅಡ್ಡಿ ಇಲ್ಲ. ಮೆಡಿಕಲ್ ಅಂಗಡಿ ಮತ್ತು ಹಾಲಿನ‌ ಮಳಿಗೆಗಳು ಎಂದಿಂತೆ ತೆರಿದಿರುತ್ತವೆ. ಲಾರಿ ಮಾಲೀಕರಿಂದ ಬೆಂಬಲ ನೀಡದ ಕಾರಣ ಎಂದಿನಂತೆ ಲಾರಿಗಳು ಸಂಚರಿಸಲಿವೆ.

    ನಾಳೆ ಏನಿರಲ್ಲ?
    ರಾಷ್ಟ್ರೀಯ ಚಾಲಕರ ವೇದಿಕೆ ಮತ್ತು ನಮ್ಮ ಚಾಲಕರ ಟ್ರೇಡ್ ಯೂನಿಯನ್ (ಟ್ಯಾಕ್ಸಿ) ಬಂದ್‌ಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಕಡೆ ಹೋಗುವ ಟ್ಯಾಕ್ಸಿಗಳ ಜೊತೆ ಬೇರೆ ಬೇರೆ ಜಿಲ್ಲೆಗಳಿಗೆ ಹೋಗಲು ವಾಹನಗಳು ಸಿಗುವುದು ಅನುಮಾನ.

  • ಆಲೂಗೆಡ್ಡೆ, ಮಧ್ಯವರ್ತಿ, ಫ್ಯಾಕ್ಟರಿ ಬಗ್ಗೆ ಭಾಷಣ – ರಾಹುಲ್ ದ್ವಿಮುಖ ನೀತಿ ಪ್ರಶ್ನಿಸಿದ ನಡ್ಡಾ

    ಆಲೂಗೆಡ್ಡೆ, ಮಧ್ಯವರ್ತಿ, ಫ್ಯಾಕ್ಟರಿ ಬಗ್ಗೆ ಭಾಷಣ – ರಾಹುಲ್ ದ್ವಿಮುಖ ನೀತಿ ಪ್ರಶ್ನಿಸಿದ ನಡ್ಡಾ

    – ಹಳೇ ವಿಡಿಯೋ ಪೋಸ್ಟ್ ಮಾಡಿ ನಡ್ಡಾ ಲೇವಡಿ
    – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

    ನವದೆಹಲಿ: ಕೃಷಿ ಕಾನೂನಿನ ಕುರಿತು ರೈತರ ಹೋರಾಟ ತೀವ್ರಗೊಳ್ಳುತ್ತಿದ್ದು, ಇನ್ನೊಂದೆಡೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರಮಣ ಮಾಡುತ್ತಿವೆ. ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಹುಲ್ ಗಾಂಧಿ ಸಂಸತ್‍ನಲ್ಲಿ ಮಾತನಾಡಿದ ಹಳೇ ವಿಡಿಯೋ ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ.

    ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಧ್ಯವರ್ತಿಗಳ ಕುರಿತು ಮಾತನಾಡಿರುವ ವಿಡಿಯೋ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ. ವಿಡಿಯೋದಲ್ಲಿ ರಾಹುಲ್ ಗಾಂಧಿ, ರೈತರು ಮಧ್ಯವರ್ತಿಗಳಿಂದ ಕಂಗಾಲಾಗಿದ್ದು, ನೇರವಾಗಿ ಕೈಗಾರಿಕೆಗಳಿಗೆ ಮಾರಾಟ ಮಾಡುವ ವ್ಯವಸ್ಥೆ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ.

    ರಾಹುಲ್ ಗಾಂಧಿ ಹೇಳಿದ್ದು ಏನು?
    ಕೆಲ ವರ್ಷಗಳ ಹಿಂದೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರು ನನ್ನನ್ನು ಪ್ರಶ್ನಿಸಿ, 1 ಪ್ಯಾಕೆಟ್ ಚಿಪ್ಸ್‍ಗೆ 10 ರೂ. ಅದೇ ರೈತರು 10 ರೂ.ಗೆ ಎರಡು ಕೆ.ಜಿ. ಆಲೂಗಡ್ಡೆ ಮಾರುತ್ತಾರೆ. ಇದರ ಹಿಂದಿನ ಜಾದೂ ಏನು ವಿವರಿಸಿ ಎಂದು ಕೇಳಿದರು. ಇದಕ್ಕೆ ಕಾರಣವೇನು ಎಂದು ನಾನು ಅವರನ್ನೇ ಪ್ರಶ್ನಿಸಿದೆ. ಆಗ ರೈತರು ಉತ್ತರಿಸಿ, ಫ್ಯಾಕ್ಟರಿಗಳು ನಮ್ಮಿಂದ ತುಂಬಾ ದೂರ ಇವೆ. ಹೀಗಾಗಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದೆ. ನಾವೇನಾದರೂ ನೇರವಾಗಿ ಫ್ಯಾಕ್ಟರಿಗಳಿಗೆ ಆಲೂಗಡ್ಡೆಗಳನ್ನು ಮಾರಾಟ ಮಾಡಿದರೆ, ಎಲ್ಲ ಹಣವನ್ನು ನಾವೇ ಪಡೆಯುತ್ತೇವೆ. ಇದರಿಂದ ಮಧ್ಯವರ್ತಿಗಳಿಗೆ ನೀಡುವ ಹಣ ಉಳಿಯುತ್ತದೆ ಎಂದು ವಿವರಿಸಿದ್ದರು.

    ರಾಹುಲ್ ಗಾಂಧಿ ಅಮೇಥಿ ಸಂಸದರಾಗಿದ್ದಾಗ ಲೋಕಸಭಾ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಈಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಹಂಚಿಕೊಂಡು ಜೆ.ಪಿ.ನಡ್ಡಾ ಅವರು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ. ರೈತರ ಪ್ರತಿಭಟನೆಯಲ್ಲಿ ರಾಜಕೀಯ ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

    ಯಾವ ಜಾದೂ ನಡೆಯುತ್ತಿದೆ ರಾಹುಲ್ ಜೀ, ಇದೀಗ ವಿರೋಧ ವ್ಯಕ್ತಪಡಿಸುವವರು ಆಗ ಏಕೆ ಸಮರ್ಥಿಸಿಕೊಂಡಿರಿ. ರೈತರ ಹಾಗೂ ದೇಶದ ಹಿತಾಸಕ್ತಿ ನಿಮಗೆ ಸಂಬಂಧವಿಲ್ಲ. ನೀವು ಕೇವಲ ರಾಜಕೀಯ ಮಾಡಬೇಕು. ಆದರೆ ನಿಮ್ಮ ಬೂಟಾಟಿಕೆ ಕೆಲಸ ಮಾಡುವುದಿಲ್ಲ ಎಂಬುದು ನಿಮ್ಮ ದುರದೃಷ್ಟ. ದೇಶದ ಜನ ಹಾಗೂ ರೈತರು ನಿಮ್ಮ ಡಬಲ್ ಸ್ಟ್ಯಾಂಡರ್ಡ್ ಅನ್ನು ಗುರುತಿಸಿದ್ದಾರೆ ಎಂದು ನಡ್ಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ರೈತ ಕಾಯ್ದೆಗೆ ವಿರೋಧ – ಉಡುಪಿಯಲ್ಲಿ ಬೃಹತ್ ಹೋರಾಟಕ್ಕೆ ಎಡಪಕ್ಷ ಸಿದ್ಧತೆ

    ರೈತ ಕಾಯ್ದೆಗೆ ವಿರೋಧ – ಉಡುಪಿಯಲ್ಲಿ ಬೃಹತ್ ಹೋರಾಟಕ್ಕೆ ಎಡಪಕ್ಷ ಸಿದ್ಧತೆ

    ಉಡುಪಿ: ದೇಶದ ಸುಮಾರು ಮುನ್ನೂರು ರೈತ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8ರ ಭಾರತ ಬಂದ್‍ಗೆ ಉಡುಪಿ ಜಿಲ್ಲೆಯಲ್ಲಿ ಎಡಪಕ್ಷಗಳು ಬೆಂಬಲ ಘೋಷಿಸಿದೆ. ಉಡುಪಿಯಲ್ಲಿ ಸಭೆ ಸೇರಿದ ಸಿಐಟಿಯು ಸಂಘಟನೆಯ ಸದಸ್ಯರು, ರೈತರ ಹೋರಾಟಕ್ಕೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.

    ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ನೂತನ ರೈತರ ಕಾಯ್ದೆ ತಿದ್ದುಪಡಿ ರೈತ ವಿರೋಧಿಯಾಗಿದೆ. ಕಾರ್ಪೊರೇಟ್ ಕಂಪೆನಿಗಳ ಪರವಾಗಿರುವ ಈ ತಿದ್ದುಪಡಿಯನ್ನು ನಾವು ವಿರೋಧಿಸುತ್ತೇವೆ ಎಂದು ಸಿಪಿಎಂ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.

    ಉಡುಪಿಯಲ್ಲಿ ಮಾತನಾಡದ ಅವರು, ಅದಾನಿ, ಅಂಬಾನಿಗೆ ಬೆಂಬಲ ನೀಡುವ ಇಂತಹ ಕಾಯ್ದೆಗಳಿಗೆ ನಮ್ಮ ಬೆಂಬಲವಿಲ್ಲ. ಕೇಂದ್ರ ಸರ್ಕಾರದ ಜೊತೆ ಆರು ಸುತ್ತುಗಳ ಮಾತುಕತೆ ನಡೆದರೂ ಫಲ ನೀಡದ ಕಾರಣ ಭಾರತ ಬಂದ್ ನಡೆಸುವುದು ಅನಿವಾರ್ಯವಾಗಿದೆ. ಮೋದಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಕೇಂದ್ರ ಸರ್ಕಾರವು ರೈತ ವಿರೋಧಿ ಕಾಯಿದೆಗಳನ್ನು ವಾಪಸ್ ಪಡೆಯಲು ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಕಳೆದ 11 ದಿನಗಳಿಂದ ದೆಹಲಿಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ ಮುಂದಿನ ಹೋರಾಟದ ಭಾಗವಾಗಿ 300 ರೈತ ಸಂಘಟನೆಗಳು ರೈತರ ಬೇಡಿಕೆಗಳಿಗಾಗಿ ಡಿ.8 ರಂದು ಜನತಾ ಕಫ್ರ್ಯೂ- ಅಖಿಲಭಾರತ ಬಂದ್ ಗೆ ಕರೆ ನೀಡಿರುವುದನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ. ಈ ಕಾಯಿದೆಗಳು ಜಾರಿಯಾದಲ್ಲಿ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿರುವ ರೈತರು, ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಡಿ.8ರಂದು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಸಿಐಟಿಯು ಅಧ್ಯಕ್ಷ ಶಂಕರ್, ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದ್ದಾರೆ.