Tag: farmer

  • ಕೆಜಿಗಟ್ಟಲೆ ದ್ರಾಕ್ಷಿ ತಿನ್ನುತ್ತಿದ್ದೆ, ರೈತರ ರಾಸಾಯನಿಕಗಳಿಂದ ಬಿಟ್ಟೆ: ಶೋಭಾ ಕರಂದ್ಲಾಜೆ

    ಕೆಜಿಗಟ್ಟಲೆ ದ್ರಾಕ್ಷಿ ತಿನ್ನುತ್ತಿದ್ದೆ, ರೈತರ ರಾಸಾಯನಿಕಗಳಿಂದ ಬಿಟ್ಟೆ: ಶೋಭಾ ಕರಂದ್ಲಾಜೆ

    ಕೋಲಾರ: ಈ ಹಿಂದೆ ದಿನಕ್ಕೆ ಕೆಜಿ ಗಟ್ಟಲೆ ದ್ರಾಕ್ಷಿ ತಿನ್ನುತ್ತಿದ್ದೇನು. ಆದರೆ ರೈತರು ರಾಸಾಯನಿಕ ಬಳಕೆ ಮಾಡುವುದನ್ನು ನೋಡಿ ಬಿಟ್ಟೆ ಎಂದು ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಕೋಲಾರದಲ್ಲಿಂದು ಪ್ರವಾಸ ಕೈಗೊಂಡಿದ್ದ ಶೋಭಾ ಕರಂದ್ಲಾಜೆ ರೈತರ ತೋಟಗಳಿಗೆ ಭೇಟಿ ನೀಡಿ ನೂತನ ಕೆವಿಕೆ ಕಟ್ಟಡವನ್ನ ಉದ್ಘಾಟನೆ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ಹಣ್ಣು ತರಕಾರಿಗಳನ್ನ ಬೆಳೆಯುವ ವೇಳೆ ಹೆಚ್ಚೆಚ್ಚು ರಸ ಗೊಬ್ಬರಗಳನ್ನ ಬಳಕೆ ಮಾಡುತ್ತಾರೆ. ಪರಿಣಾಮ ಈ ಹಿಂದೆ ದ್ರಾಕ್ಷಿಯನ್ನ ಹೆಚ್ಚಾಗಿ ಬೆಳೆಯುವ ದೊಡ್ಡಬಳ್ಳಾಪುರದ ರೈತರ ತೋಟಕ್ಕೆ ಭೇಟಿ ನೀಡದ್ದ ವೇಳೆ ಅಲ್ಲಿ ದ್ರಾಕ್ಷಿಯನ್ನ ಗಿಡದಿಂದ ಕೆಳಗಿಳಿಸಿ ರಾಸಾಯನಿಕ ಮಿಶ್ರಣ ಮಾಡುತ್ತಿದ್ದನ್ನ ಕಣ್ಣಾರೆ ಕಂಡೆ. ಅಂದಿನಿಂದ ಅತ್ಯಂತ ಇಷ್ಟವಾದ ದ್ರಾಕ್ಷಿಯನ್ನೆ ತಿನ್ನುವುದನ್ನ ಬಿಟ್ಟಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬಡ್ಡಿ ಹಣ ವಸೂಲಿಗೆ ಬಂದು ತೆಗೆದುಕೊಂಡು ಹೋದ ಬೈಕ್ ತರಲು ಹೋಗಿ ಕೊಲೆಯಾದ್ರು!

    ತಮ್ಮ ದ್ರಾಕ್ಷಿ ಪ್ರೀತಿ ಹಾಗೂ ರೈತರು ಮಾಡುವ ರಾಸಾಯನಿಕ ಮಿಶ್ರಣವನ್ನ ವಿವರಿಸಿದ್ರು. ಅಲ್ಲದೆ ಇದೆ ವೇಳೆ ರೈತರು ತಾವು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸಿಗಬೇಕಾದರೆ ಹೆಚ್ಚೆಚ್ಚು ರಫ್ತಾಗಬೇಕಾದರೆ ಗುಣಮಟ್ಟ ಹಾಗೂ ರಾಸಾಯನಿಕ ಬಳಕೆ ಕಡಿಮೆ ಇರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕೋಮುದ್ವೇಷಕ್ಕೆ ಸಂಚು ರೂಪಿಸಿದ್ದ ಲೋಕಂಡ್ವಾಲಾ ಗ್ಯಾಂಗ್ ಅಂದರ್

  • ಮಂಡ್ಯದಲ್ಲಿ ಧಾರಾಕಾರ ಮಳೆ – 400ಕ್ಕೂ ಹೆಚ್ಚು ಮನೆಗಳಿಗೆ ನೀರು

    ಮಂಡ್ಯದಲ್ಲಿ ಧಾರಾಕಾರ ಮಳೆ – 400ಕ್ಕೂ ಹೆಚ್ಚು ಮನೆಗಳಿಗೆ ನೀರು

    ಮಂಡ್ಯ: ಜಿಲ್ಲೆಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಬೀಡಿ ಕಾಲೋನಿಯಲ್ಲಿ 400ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಬಡಾವಣೆಯ ಜನರು ರಾತ್ರಿ ನಿದ್ರೆ ಇಲ್ಲದೇ ಮನೆಗೆ ನುಗ್ಗಿದ್ದ ನೀರನ್ನು ಹೊರಗೆ ಹಾಕಿದ್ದಾರೆ.

    mandya Rain

    ಬೀಡಿ ಕಾಲೋನಿ ನಿರ್ಮಾಣವಾಗಿರುವ ಜಾಗ ಈ ಹಿಂದೆ ಕೆರೆಯಾಗಿದ್ದು, ಸರ್ಕಾರ ಕೆರೆಯನ್ನು ಮುಚ್ಚಿ ಇಲ್ಲಿ ಕಾಲೋನಿಯನ್ನು ನಿರ್ಮಾಣ ಮಾಡಿತ್ತು. ಆದರೆ ಮೂಲಭೂತ ಸೌಕರ್ಯಗಳನ್ನು ಮಾತ್ರ ಸರಿಯಾಗಿ ಒದಗಿಸಿಲ್ಲ. ಸರಿಯಾದ ಒಳ ಚರಂಡಿ ಇಲ್ಲದ ಕಾರಣ ಈ ಬಡಾವಣೆಯ ಮನೆಗಳಿಗೆ ಪ್ರತಿ ಬಾರಿ ಮಳೆ ಬಂದಂತಹ ಸಂದರ್ಭದಲ್ಲಿ ಮಳೆಯ ನೀರು ನುಗ್ಗುತ್ತಿದೆ. ಇಲ್ಲಿನ ಜನರು ನಗರಸಭೆಗೆ ಎಷ್ಟೇ ಅರ್ಜಿಗಳನ್ನು ನೀಡಿದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕ್ಯಾರೆ ಎನ್ನುತ್ತಿಲ್ಲ. ಇದನ್ನೂ ಓದಿ: ಡೊನಾಲ್ಡ್ ಟ್ರಂಪ್ ಫೇಸ್‍ಬುಕ್ ಖಾತೆ 2 ವರ್ಷ ಬ್ಯಾನ್ 

    mandya Rain

    ರಾತ್ರಿ ಸತತ ಮೂರು ಗಂಟೆಗೂ ಅಧಿಕ ಕಾಲ ಧಾರಾಕಾರವಾಗಿ ಮಳೆ ಬಿದ್ದ ಪರಿಣಾಮ ಬೀಡಿ ಕಾಲೋನಿಯ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಇಲ್ಲಿಯ ಜನರು ತಮ್ಮ ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಇಡೀ ರಾತ್ರಿ ಮನೆಗೆ ನುಗ್ಗಿದ ನೀರನ್ನು ಹೊರಹಾಕಿದ್ದಾರೆ. ಇದಲ್ಲದೇ ಮನೆಯಲ್ಲಿ ಇದ್ದ ಪೀಠೋಪಕರಣ, ಎಲೆಕ್ಟ್ರಾನಿಕ್ ವಸ್ತುಗಳು ಸೇರಿದಂತೆ ಎಲ್ಲಾ ವಸ್ತುಗಳು ಮಳೆ ನೀರಿನಲ್ಲಿ ನೆನೆದಿವೆ. ಇದನ್ನೂ ಓದಿ: ಭಾರೀ ಮಳೆ – ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ

    mandya Rain

    ಒಂದು ಕಡೆ ಬೀಡಿ ಕಾಲೋನಿಗೆ ನೀರು ನುಗ್ಗಿದ್ರೆ, ಇನ್ನೊಂದು ಕಡೆ ಧಾರಾಕಾರ ಮಳೆಯಿಂದ ಬೆಳೆಗಳು ಹಾನಿಯಾಗಿವೆ. ಮಂಡ್ಯ, ಮಳವಳ್ಳಿ ತಾಲೂಕು ಸೇರಿದಂತೆ ಹಳ್ಳ-ಕೊಳ್ಳಗಳು ತುಂಬಿಹರಿಯುತ್ತಿರುವ ಕಾರಣ ಅಕ್ಕ-ಪಕ್ಕದ ಜಮೀನಿನಲ್ಲಿ ಇದ್ದ ಬೆಳೆಗಳು ನೀರಿನಲ್ಲಿ ಮುಳುಗಿ ನಾಶವಾಗಿವೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಇದನ್ನೂ ಓದಿ: ಮಧ್ಯರಾತ್ರಿ ಸಿಎಂಗೆ ಝೀರೋ ಟ್ರಾಫಿಕ್‌ – ಅರ್ಧಗಂಟೆ ಸರ್ವಿಸ್‌ ರಸ್ತೆಯಲ್ಲಿ ನಿಂತ ವಾಹನಗಳು

  • ಹಾಡಿನ ಮೂಲಕ ನೋವು ತೋಡಿಕೊಂಡ ರೈತ – ವೀಡಿಯೋ ವೈರಲ್

    ಹಾಡಿನ ಮೂಲಕ ನೋವು ತೋಡಿಕೊಂಡ ರೈತ – ವೀಡಿಯೋ ವೈರಲ್

    ಬೀದರ್: ಮಳೆ ನಿಂತರು ರೈತರ ಜಮೀನಿನಲ್ಲಿ ನೀರು ನಿಂತ್ತಿದ್ದು, ಸೋಯಾ ಬೆಳೆ ಕಳೆದುಕೊಂಡ ರೈತ ಹಾಡಿನ ಮೂಲಕ ತನ್ನ ನೋವು ವ್ಯಕ್ತಪಡಿಸಿದ ವೀಡಿಯೋ ಈಗಾ ವೈರಲ್ ಆಗಿದೆ.

    ಸೋಯಾ ಬೆಳೆದಿದ್ದ ಬೆಳೆ ಕೊಳೆತು ಹೋಗಿರುವ ಜಮೀನಿನಲ್ಲಿ ನಿಂತ ರೈತ ಹಾಡು ಹಾಡುತ್ತಾ ತನ್ನ ಅಳಲು ತೋಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕುಂಟೆಸಿರ್ಸಿ ಗ್ರಾಮದ ರೈತರ ಕಿರಣ್ ಖಂಡ್ರೆ ವೀಡಿಯೋ ಮಾಡಿದ್ದು, ರೈತರ ಗೋಳನ್ನು ಈ ವೀಡಿಯೋದಲ್ಲಿ ಅನಾವರಣಗೊಳಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

    ರೈತರ ಗೋಳು ಕೇಳೋರು ಯಾರಣ್ಣ, ದೇಶಕ್ಕೆ ಅನ್ನ ಹಾಕುವರು ನಮ್ಮ ರೈತರು ಎಂದು ಹೇಳೋರು ನಮ್ಮ ಪ್ರಧಾನಿ ಮೋದಿಯಣ್ಣ, ರಾಜಕೀಯ ನಾಯಕರು ತಮ್ಮ ಡೊಂಬರಾಟ ಮಾಡಿ ಹೋಗುವರಣ್ಣ ಎಂದು ಹಾಡು ಹಾಡುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ರೈತ ಹಿಡಿಶಾಪ ಹಾಕಿದ್ದಾರೆ. ಈಗಾಗಲೇ ಮಹಾ ಮಳೆ ಹಾಗೂ ನೆರೆಗೆ ಲಕ್ಷಾಂತರ ಎಕರೆ ಬೆಳೆ ಕಳೆದುಕೊಂಡು ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನ ವಾಹನದ ಮೇಲೆ ಬಾಂಬ್ ಎಸೆಯಲೆತ್ನಿಸಿದ ಐವರ ಬಂಧನ

  • ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವು ರಕ್ಷಣೆ – ಕಾಡಿಗೆ ಬಿಟ್ಟ ಸ್ನೇಕ್ ರಾಘವೇಂದ್ರ

    ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವು ರಕ್ಷಣೆ – ಕಾಡಿಗೆ ಬಿಟ್ಟ ಸ್ನೇಕ್ ರಾಘವೇಂದ್ರ

    ಕೊಪ್ಪಳ: ಜಿಲ್ಲೆಯ ಗಂಗಾವತಿಯ ದೇವಘಾಟ್ ಬಳಿ ರೈತನ ಹೊಲದಲ್ಲಿ ಕಾಣಿಸಿಕೊಂಡ ಬರೋಬ್ಬರಿ 50 ಕೆಜಿ ತೂಕದ ಹೆಬ್ಬಾವೊಂದನ್ನು ಸ್ನೇಕ್ ಪುಟ್ಟು ಅಲಿಯಾಸ್ ಸಿರಿಗೇರಿ ರಾಘವೇಂದ್ರ ರಕ್ಷಣೆ ಮಾಡಿ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

    Snake

    ಗಂಗಾವತಿಯ ಲಯನ್ಸ್ ಕ್ಲಬ್ ಅಧ್ಯಕ್ಷ ಡಿ.ಎಂ ಅಭಿಷೇಕ್ ಎಂಬವರ ಹೊಲದಲ್ಲಿ ಈ ಹಾವು ಕಾಣಿಸಿಕೊಂಡಿತ್ತು. ಸ್ಥಳೀಯರೊಬ್ಬರು ಹಾವಿನ ಚಿತ್ರ ಸೆರೆ ಹಿಡಿದು ಸಿರಿಗೇರಿ ರಾಘವೇಂದ್ರ ಅವರಿಗೆ ಕಳುಹಿಸಿದ್ದರು.  ಇದನ್ನೂ ಓದಿ: ನನ್ನ ಅಭಿಮಾನಿಗಳಿಂದಲೇ ನಾನು ಇಲ್ಲಿ ಇರೋದು: ಕಿಚ್ಚ

    Snake

    ಕೂಡಲೇ ಸ್ಥಳಕ್ಕೆ ತೆರಳಿದ ಸ್ನೇಕ್ ಪುಟ್ಟು, ರೋಚಕ ಕಾರ್ಯಾಚರಣೆ ನಡೆಸಿ ಭತ್ತದ ಗದ್ದೆಯಲ್ಲಿ ನುಸುಳಿಕೊಂಡು ಹೋಗುತ್ತಿದ್ದ ಹೆಬ್ಬಾವನ್ನು ಸೆರೆ ಹಿಡಿದಿದ್ದಾರೆ ಮತ್ತು ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ನೆರವಿನಿಂದ ಸಂರಕ್ಷಿತ ಪ್ರದೇಶಕ್ಕೆ ಹಾವನ್ನು ಬಿಟ್ಟು ಬರಲಾಯಿತು.

    Snake

    ಸ್ನೇಕ್ ಪುಟ್ಟು ಅವರು ಈವರೆಗೆ ಸುಮಾರು ಮೂರು ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಿಸಿದ್ದಾರೆ. ಯಾರಿಂದಲೂ ಹಣ ಪಡೆಯದೇ ಕೇವಲ ವನ್ಯಜೀವಿಗಳ ರಕ್ಷಣೆಗೆ ಮುಂದಾಗಿರುವ ಇವರ ಕಾರ್ಯ ಎಲ್ಲರಿಗೂ ಮಾದರಿಯಾಗಿದೆ.  ಇದನ್ನೂ ಓದಿ: ಪ್ರತಿ ವಲಯದಲ್ಲೂ ಸಂಶೋಧನೆ ಅಭಿವೃದ್ಧಿಗೆ ಆದ್ಯತೆ: ಬೊಮ್ಮಾಯಿ

  • ಬೆಳೆಹಾನಿ ಬಗ್ಗೆ ಅಳಲು ತೋಡಿಕೊಂಡ ರೈತರ ವಿಡಿಯೋಗಳು ಫುಲ್ ವೈರಲ್

    ಬೆಳೆಹಾನಿ ಬಗ್ಗೆ ಅಳಲು ತೋಡಿಕೊಂಡ ರೈತರ ವಿಡಿಯೋಗಳು ಫುಲ್ ವೈರಲ್

    ಬೀದರ್: ಮಹಾರಾಷ್ಟ್ರದ ಧನ್ನೆಗಾಂವ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಮಾಂಜ್ರಾನದಿಗೆ ಬಿಡುಗಡೆ ಮಾಡಿದ ಹಿನ್ನೆಲೆ ಮಾಂಜ್ರಾನದಿ ದಡದಲ್ಲಿರುವ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

    ಬೆಳೆಹಾನಿ ಬಗ್ಗೆ ಗಡಿ ಜಿಲ್ಲೆ ಬೀದರ್ ನ ರೈತರು ವೀಡಿಯೋ ಮಾಡಿ ಅಳಲು ತೋಡಿಕೊಂಡ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಪುಲ್ ವೈರಲ್ ಆಗಿವೆ. ಕಮಲನಗರ ತಾಲೂಕಿನ ಸೋನಾಳ ಗ್ರಾಮದ ರೈತರ ಸೋಯಾಬೀನ್ ಬೆಳೆಗೆ ನೀರು ನುಗ್ಗಿದ್ದು, ಜಲಾವೃತವಾದ ಬೆಳೆ ಮಧ್ಯೆ ನಿಂತು ರೈತನೋರ್ವ ಮರಾಠಿ ಭಾಷೆಯಲ್ಲಿ, ಸಾಲ ಮಾಡಿಕೊಂಡ ರೈತ ಬದುಕುವುದು ಹೇಗೆ? ಎಂದು ಹಾಡು ಹಾಡಿದ್ದಾರೆ. ಅವರು ಹಾಡಿದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಡುವ ಮೂಲಕ ರೈತ ನೋವು ತೋಡಿಕೊಂಡಿಕೊಂಡಿದ್ದಾರೆ. ಇದನ್ನೂ ಓದಿ: ಬೀದಿ ಹುಡುಗನ ಡ್ಯಾನ್ಸ್ ಗೆ ವಿಸ್ಮಯಗೊಂಡ ನೆಟ್ಟಿಗರು – ವೀಡಿಯೋ ವೈರಲ್

    ಭಾಲ್ಕಿ ತಾಲೂಕಿನ ಲಖನಗಾಂವ್ ಹೋಬಳಿ ವ್ಯಾಪ್ತಿಯ ಸೋಮಪುರ ಗ್ರಾಮದ ಇನ್ನೊಬ್ಬ ರೈತ ಉತ್ತಮ ಬಿರಾದರ್ ಕೂಡಾ ವೀಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೈತನ ಎಂಟು ಎಕರೆ ಸೋಯಾಬೀನ್ ಬೆಳೆ ಸಹ ನೀರು ಪಾಲಾಗಿದ್ದು, ಬೆಳೆಗೆ ಪರಿಹಾರ ನೀಡುವಂತೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ, ಯಾರೊಬ್ಬರು ಸ್ಪಂದಿಸುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಿದ ಎರಡನೇ ಆರೋಪಿ ಅಂಬಿಕಾ

    ರೈತರ ಸಂಕಷ್ಟ ಪ್ರಧಾನಿ ನೇರಂದ್ರ ಮೋದಿ ತನಕ ಹೋಗಲಿ ಎಂದು ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.

     

  • ರೈತನ ಮನೆಯಲ್ಲಿ ಕಡೆಗೋಲು ಹಿಡಿದು ಮಜ್ಜಿಗೆ ತಯಾರಿಸಿದ ಬಿ.ಸಿ ಪಾಟೀಲ್

    ರೈತನ ಮನೆಯಲ್ಲಿ ಕಡೆಗೋಲು ಹಿಡಿದು ಮಜ್ಜಿಗೆ ತಯಾರಿಸಿದ ಬಿ.ಸಿ ಪಾಟೀಲ್

    ಚಿಕ್ಕೋಡಿ: ರೈತನ ಮನೆಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ತಾವೇ ಖುದ್ದು ಮಜ್ಜಿಗೆ ತಯಾರಿಸಿದ್ದಾರೆ. ಇದನ್ನೂ ಓದಿ: ತಾಲಿಬಾನ್‍ಗೂ, RSSಗೂ ವ್ಯತ್ಯಾಸ ಇದೆ: ಸಿದ್ದರಾಮಯ್ಯಗೆ ಅರಗ ಜ್ಞಾನೇಂದ್ರ ತಿರುಗೇಟು

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವರು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಪ್ರವೀಣ ಶಾ ಎಂಬ ರೈತನ ಮನೆಯಲ್ಲಿ ಕಡೆಗೋಲು ಹಿಡಿದು ಉತ್ತರ ಕರ್ನಾಟಕದ ಶೈಲಿಯಲ್ಲಿ ಕುಳಿತು ಮೊಸರು ಕಡಿದು ಮಜ್ಜಿಗೆ ತಯಾರಿಸಿದ್ದಾರೆ. ಇದನ್ನೂ ಓದಿ: ಕೆರೆಯ ಬಳಿ ಮದ್ಯಪಾನ ಮಾಡಿ ಗುಂಡಿನ ದಾಳಿ – FSL ತಂಡದಿಂದ ಪರಿಶೀಲನೆ

    ಸಚಿವರ ಬಳಿಕ ಶಶಿಕಲಾ ಜೊಲ್ಲೆ ಹಾಗೂ ಅಣ್ಣಾಸಾಹೇಬ್ ಜೊಲ್ಲೆ ಕೂಡ ಮಜ್ಜಿಗೆ ತಯಾರಿ ಮಾಡಿದ್ದಾರೆ. ಕೊನೆಗೆ ಮಜ್ಜಿಗೆ ಕುಡಿದು ಬಿ.ಸಿ ಪಾಟೀಲ್ ಖುಷಿ ಪಟ್ಟರು. ಬೆಳಿಗ್ಗಿನಿಂದಲೂ ಬಿ.ಸಿ ಪಾಟೀಲ್ ಹಾಗೂ ಶಶಿಕಲಾ ಜೊಲ್ಲೆ ನಿಪ್ಪಾಣಿ ಕ್ಷೇತ್ರದ ರೈತರ ಜಮೀನುಗಳಿಗೆ ತೆರಳಿ ರೈತರು ಅಳವಡಿಸಿಕೊಂಡಿರುವ ವಿಶೇಷ ತಂತ್ರಜ್ಞಾನಗಳನ್ನ ಪರಿಶೀಲಿಸಿ ರೈತರಿಗೆ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಹಿರಿಯ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.

  • ರೇಷ್ಮೆ ಬೆಳೆಗಾರರಿಗೆ ವಿಶಿಷ್ಟ ಗುರುತಿನ ಚೀಟಿ: ನಾರಾಯಣಗೌಡ

    ರೇಷ್ಮೆ ಬೆಳೆಗಾರರಿಗೆ ವಿಶಿಷ್ಟ ಗುರುತಿನ ಚೀಟಿ: ನಾರಾಯಣಗೌಡ

    – ವಿಮಾನ ನಿಲ್ದಾಣಗಳಲ್ಲೂ ರೇಷ್ಮೆ ಉತ್ಪನ್ನ ಮಾರಾಟ ಮಳಿಗೆ
    – ರೈತರನ್ನು ಅಧಿಕಾರಿಗಳು ಪ್ರೀತಿಯಿಂದ ನಡೆಸಿಕೊಳ್ಳಬೇಕು

    ಶಿವಮೊಗ್ಗ: ರೇಷ್ಮೆಯನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗುವಾಗ ಯಾವುದೇ ರೀತಿಯ ಸಮಸ್ಯೆ ಆಗಬಾರದು. ಮಾರುಕಟ್ಟೆಗೆ ತೆರಳುವ ರೈತರು ಪೊಲೀಸರು ಮತ್ತು ದಲ್ಲಾಳಿಗಳಿಂದ ಬೇಸತ್ತಿದ್ದು, ಅವರಿಗೆ ತೊಂದರೆ ಆಗದಂತೆ ವಿಶೇಷ ಗುರುತಿನ ಚೀಟಿ ನೀಡುವುದಾಗಿ ರೇಷ್ಮೆ ಸಚಿವ ಡಾ.ನಾರಾಯಣಗೌಡ ಹೇಳಿದರು.

    ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ರೇಷ್ಮೆ ಬೆಳೆಗಾರರ ಜೊತೆ ಸಚಿವರು ಸಂವಾದ ನಡೆಸಿದರು. ರೇಷ್ಮೆ ಗಿಡಗಳಿಗೆ ತ್ರಿಪ್ಸ್ ಆ್ಯಂಡ್ ಮೈಟ್ಸ್ ಎನ್ನುವ ಎಲೆ ತಿನ್ನುವ ಕೀಟದ ಸಮಸ್ಯೆ ಕಾಣಿಸಿಕೊಂಡಿದೆ. ಇದನ್ನು ಹೇಗೆ ತಡೆಗಟ್ಟುವುದು ಮತ್ತು ಹೆಚ್ಚಿನ ಇಳುವರಿ ಕುರಿತು ಮಾಹಿತಿ ನೀಡಲು ವಿಜ್ಞಾನಿಗಳನ್ನು ಕರೆಸಿ ರೈತರಿಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಸಚಿವರು ರೇಷ್ಮೆ ಹೊಲಕ್ಕೆ ರೈತರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಉಚಿತವಾಗಿ ನುವಾನ್ ಮತ್ತು ರೋಗಾರ್ ಎನ್ನುವ ಔಷಧವನ್ನು ಸಿಂಪಡಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಈ ವೇಳೆ ಅತ್ಯುತ್ತಮ ರೇಷ್ಮೆ ಬೆಳೆಗಾರರಿಗೆ ಪ್ರಶಸ್ತಿ ನೀಡುವುದಾಗಿ ತಿಳಿಸಿದರು. ಇದನ್ನೂ ಓದಿ:  ಭಾರತ್ ಬಂದ್ ಮಾಡಿದ್ದು ರೈತರಲ್ಲ, ಮಧ್ಯವರ್ತಿಗಳು: ನಾರಾಯಣಗೌಡ

    ರೈತರೊಂದಿಗೆ ಹೊಲದಲ್ಲಿ ನಿಂತುಕೊಂಡೇ ಸಂವಾದ ನಡೆಸಿದ ಸಚಿವರು: ರೈತರು ಶ್ರಮ ಜೀವಿಗಳು. ಅವರೊಂದಿಗೆ ಅಧಿಕಾರಿಗಳು ಗೌರವದಿಂದ ನಡೆದುಕೊಳ್ಳಬೇಕು. ರೈತರನ್ನು ಅಧಿಕಾರಿಗಳು ಪ್ರೀತಿಯಿಂದ ನಡೆಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ರೇಷ್ಮೆಗೆ ಉತ್ತಮ ದರ ಸಿಗುತ್ತಿದೆ. ವಿಮಾನ ನಿಲ್ದಾಣಗಳಲ್ಲೂ ರೇಷ್ಮೆ ಉತ್ಪನ್ನ ಮಾರಾಟ ಮಳಿಗೆ ಮಾಡುತ್ತೇವೆ. ರೈತರಿಗೆ ನಷ್ಟವಾಗದಂತೆ ತಡೆಯಲು ಹೈಟೆಕ್ ಮಾರುಕಟ್ಟೆ ಕೂಡ ಮಾಡುತ್ತಿದ್ದೇವೆ. ರೈತರಿಗೆ ಅಗತ್ಯವಿರುವ ಎಲ್ಲ ಸೌಲಭ್ಯ ನೀಡುತ್ತೇವೆ ಎಂದರು. ಇದನ್ನೂ ಓದಿ:   ಭಾರತ್ ಬಂದ್ ನಡುವೆ ಕಾರ್ಖಾನೆಗೆ ಬೀಗ ಹಾಕಲು ರೈತರ ಯತ್ನ

    ಸುಮಾರು ಮುಕ್ಕಾಲುಗಂಟೆಗಳ ಕಾಲ ರೈತರೊಂದಿಗೆ ನಿಂತುಕೊಂಡೇ ಸಚಿವರು ಸಂವಾದ ನಡೆಸಿದರು. ರೇಷ್ಮೆ ಬೆಳೆಗಾರರ ಸಮಸ್ಯೆ ಬಗ್ಗೆ ಅರಿವಿದೆ. ಈಗ ದರ ಏರಿಕೆ ಆಗಿದೆ. ರೇಷ್ಮೆ ಬೆಳೆಗಾರರೊಂದಿಗೆ ನಾನು ಸದಾ ಇರುತ್ತೇನೆ. ಯಾವುದೇ ಸಂದರ್ಭಲ್ಲೂ ರೈತರ ಜೊತೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದರು.

    ರೈತರೊಂದಿಗೆ ಊಟ ಮಾಡಿದ ಸಚಿವರು: ರೇಷ್ಮೆ ಬೆಳೆಗಾರರೊಂದಿಗೆ ಸಂವಾದ ನಡೆಸಿದ ಸಚಿವರು, ಬಳಿಕ ರೈತರ ಮನೆಗೆ ತೆರಳಿ ಅವರೊಂದಿಗೆ ಊಟ ಸವಿದರು. ಸಚಿವರು ತಮ್ಮ ಊರಿಗೆ ಬಂದು ತಮ್ಮೊಂದಿಗೇ ಕುಳಿತು ಊಟ ಮಾಡಿದ್ದಕ್ಕಾಗಿ ರೈತರು ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ:  ಬಸ್- ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು

    ಶಿವಮೊಗ್ಗದ ಕಾಚಿನಕಟ್ಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮಪಂಚಾಯತ್ ಅಧ್ಯಕ್ಷೆ ಶ್ವೇತ, ಹಿರಿಯ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

  • ಹೂವಿನ ಬೆಲೆ ಕುಸಿತ, ಗುಲಾಬಿ ತೋಟಕ್ಕೆ ಬೆಂಕಿ ಇಟ್ಟ ರೈತ

    ಹೂವಿನ ಬೆಲೆ ಕುಸಿತ, ಗುಲಾಬಿ ತೋಟಕ್ಕೆ ಬೆಂಕಿ ಇಟ್ಟ ರೈತ

    ಚಿಕ್ಕಬಳ್ಳಾಪುರ: ಒಂದು ಕಡೆ ರೈತ ಸಂಘಟನೆಗಳು ನಾಳೆ ಭಾರತ್ ಬಂದ್‍ಗೆ ಸಕಲ ತಯಾರಿಯಲ್ಲಿದ್ದರೇ ಇತ್ತ ಹೂವಿನ ಬೆಲೆ ಪಾತಾಳಕ್ಕೆ ಕುಸಿದ ಹಿನ್ನಲೆ ರೈತರೊಬ್ಬರು ತನ್ನ ಗುಲಾಬಿ ತೋಟಕ್ಕೆ ಬೆಂಕಿ ಇಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

    ತಾಲೂಕಿನ ಡಿ. ಹೊಸೂರು ಗ್ರಾಮದ ರೈತ ಪಿಳ್ಳೇಗೌಡ ಅವರು ತಮ್ಮ ಒಂದು ಎಕೆರೆಯಲ್ಲಿ ಬೆಳೆದಿದ್ದ 1300 ಗುಲಾಬಿ ಗಿಡಗಳನ್ನ ಕಟಾವು ಮಾಡಿ ಬೆಂಕಿ ಇಟ್ಟಿದ್ದಾರೆ. ಸದ್ಯ ಪಿತೃ ಪಕ್ಷದ ಎಫೆಕ್ಟ್ ನಿಂದ ಮಾರುಕಟ್ಟೆಯಲ್ಲಿ ಹೂ ಕೇಳೋರೇ ಇಲ್ಲ. ಕೆಜಿ 5 ರೂಪಾಯಿಗೂ ಖರೀದಿ ಮಾಡೋರಿಲ್ಲದಂತಾಗಿದ್ದು, ನೊಂದ ರೈತ ಪಿಳ್ಳೇಗೌಡ ಅವರು ಇಡೀ ಗುಲಾಬಿ ತೋಟವನ್ನ ಬುಡದವರೆಗೂ ಕಟಾವು ಮಾಡಿ ಬೆಂಕಿ ಇಟ್ಟು ಸುಟ್ಟು ಹಾಕಿದ್ದಾರೆ. ಇದನ್ನೂ ಓದಿ:  DNA ಲಸಿಕೆ ಅಭಿವೃದ್ಧಿಪಡಿಸಿದ ಮೊದಲ ದೇಶ ಭಾರತ: ಮೋದಿ

    ಮಾರ್ಕೆಟ್‍ನಲ್ಲಿ ರೇಟ್ ಇಲ್ಲ, ಗಿಡದಲ್ಲಿ ಹೂವು ಹಾಗೆ ಬಿಟ್ಟರೆ ಗಿಡ ಹಾಳಾಗುತ್ತದೆ. ಹೂವು ಕಟಾವು ಮಾಡೋಣ ಎಂದರೆ ಕೂಲಿ ಹಣನೂ ಸಿಗಲ್ಲ. ಇದರ ಜೊತೆಗೆ ಗಿಡಗಳನ್ನ ಕಾಪಾಡಿಕೊಳ್ಳೋಕೆ ಫರ್ಟಿಲೈಸರ್ಸ್ ಖರೀದಿ ಮಾಡಬೇಕು. ಅವು ಸಹ ದುಬಾರಿ ಬೆಲೆ, ಏನ್ ಮಾಡೋದು ಸರ್ ಲಾಭ ಇಲ್ಲ ಎಲ್ಲವೂ ನಷ್ಟವಾಗಿದೆ. ಹೀಗಾಗಿ ಗಿಡಗಳನ್ನ ಕಟಾವು ಮಾಡಿ ಬೆಂಕಿ ಇಟ್ಟಿದ್ದೇವೆ ಎಂದು ರೈತ ಪಿಳ್ಳೇಗೌಡ ಅವರು ಹೇಳಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಪಂಜಾಬ್‍ನಲ್ಲಿ ನೂತನ ಸಚಿವ ಸಂಪುಟ ರಚನೆ ಕಸರತ್ತು- ಐವರು ಹಳೆ ಸಚಿವರಿಗೆ ಕೊಕ್

     

    ಕೆಜಿ 5 ರೂಪಾಯಿಗೂ ಕೇಳೋರಿಲ್ಲ:

    ಚಿಕ್ಕಬಳ್ಳಾಪುರ ತಾಲೂಕಿನಾದ್ಯಂತ ಸಾವಿರಾರು ಎಕೆರೆ ಪ್ರದೇಶದಲ್ಲಿ ಪುಷ್ಪೋದ್ಯಮ ಮಾಡಲಾಗುತ್ತದೆ. ಗುಲಾಬಿ, ಚೆಂಡು ಹೂವು, ಸೇವಂತಿಗೆ ಸೇರಿದಂತೆ ತರಹೇವಾರಿ ಹೂವುಗಳನ್ನ ಬೆಳೆಯಲಾಗುತ್ತದೆ. ಇನ್ನೂ ಕೊರೊನಾ ಹೊಡೆತಕ್ಕೆ ಪುಷ್ಪೋದ್ಯಮ ನಲುಗಿ ಹೋಗಿದೆ. ಇತ್ತೀಚೆಗೆ ಶ್ರಾವಣ ಮಾಸ ಸಾಲು ಸಾಲು ಹಬ್ಬಗಳಿಂದ ಚೇತರಿಸಿಕೊಂಡಿತ್ತು. ಆದರೆ ಪಕ್ಷದ ಕಾರಣ ಹೂಗಳಿಗೆ ಬೇಡಿಕೆ ಇಲ್ಲದಂತಾಗಿದೆ. ಮಾರುಕಟ್ಟೆಯಲ್ಲಿ ಗುಲಾಬಿ ಹೂವು ಕೆಜಿ 5 ರೂಪಾಯಿಗೂ ಕೇಳೋರಿಲ್ಲ. ಬಲವಂತ ಮಾಡಿ ನಾವೇ ಕೊಟ್ಟು ಬರಬೇಕಾಗಿದೆ ಅಂತಾರೆ ರೈತ ಸುನೀಲ್. ಮತ್ತೊಂದೆಡೆ ಚೆಂಡು ಹೂ ಸಹ ಕೇಳೋರು ಇಲ್ಲ, ಹೀಗಾಗಿ ಚಿಕ್ಕಬಳ್ಳಾಪುರ ನಗರದ ಹೂವು ಮಾರುಕಟ್ಟೆಯಲ್ಲಿ ರಾಶಿ ರಾಶಿ ಚೆಂಡು ಹೂವು ಎಲ್ಲಂದರಲ್ಲಿ ಬಿಸಾಡಲಾಗಿದೆ. ರೈತರೊಬ್ಬರು ಟ್ರ್ಯಾಕ್ಟರ್ ತುಂಬಾ ಗುಲಾಬಿ ಹೂವನ್ನ ರಸ್ತೆ ಬದಿ ಸುರಿದು ಹೋಗಿದ್ದ. ಮಾರುಕಟ್ಟೆಯಲ್ಲಿ ಎತ್ತ ನೋಡಿದರು ಈಗ ರಾಶಿ ರಾಶಿ ಹೂವುಗಳು ಕಣ್ಣಿಗೆ ಕಾಣುತ್ತಿವೆ.

  • ಸಿಸಿಟಿವಿ ಕ್ಯಾಮೆರಾ ಹೊಡೆದು ಮಹಿಳೆಯಿಂದ ಕಳ್ಳತನಕ್ಕೆ ಯತ್ನ

    ಸಿಸಿಟಿವಿ ಕ್ಯಾಮೆರಾ ಹೊಡೆದು ಮಹಿಳೆಯಿಂದ ಕಳ್ಳತನಕ್ಕೆ ಯತ್ನ

    ಮಂಡ್ಯ: ಮಹಿಳೆಯೊಬ್ಬಳು ತೋಟದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ನಾಶ ಮಾಡಿ ಕಳ್ಳತನ ಮಾಡಲು ಮುಂದಾಗಿದ್ದ ಘಟನೆ ಮಂಡ್ಯ ಜಿಲ್ಲೆಯ  ಕೆಆರ್‌ಪೇಟೆ ತಾಲೂಕಿನ ಬಂಡಿಹೊಳೆ ಗ್ರಾಮದಲ್ಲಿ ಜರುಗಿದೆ. ಇದನ್ನೂ ಓದಿ:  ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

    Woman CCTV Camera

    ಬಂಡಿಹೊಳೆ ಗ್ರಾಮದ ರೈತ ಕೆ.ರಾಮೇಗೌಡ ಅವರು ತಮ್ಮ ತೋಟದಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ತಡೆಗಟ್ಟಲು ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದರು. ಶುಕ್ರವಾರ ತೋಟಕ್ಕೆ ಬಂದ ಮಹಿಳೆಯೊಬ್ಬಳು ಸಿಸಿಟಿವಿ ಕ್ಯಾಮೆರಾವನ್ನು ಕೋಲಿನಿಂದ ಹೊಡೆದು ಹಾಕಿರುವ ದೃಶ್ಯ ಅದೇ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳ್ಳತನಕ್ಕೆ ಬಂದಿರುವ ಮಹಿಳೆ ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿ ಕಳ್ಳತನ ಮಾಡಿಕೊಂಡು ಹೋಗಿದ್ದಾಳೆ ಎಂದು ಕೂಡ ಆರೋಪಿಸಲಾಗಿದೆ. ಇದನ್ನೂ ಓದಿ:ಕೈ ಸನ್ನೆ ಮಾಡಿ ಕರೆದೊಯ್ದೊಳು- ಹಲ್ಲೆ ಮಾಡಿ ಹಣ ದೋಚಿದ್ರು

    ಸಿಸಿಟಿವಿ ಕ್ಯಾಮೆರಾವನ್ನು ಹೊಡೆದು ಹಾಕಿರುವ ಮಹಿಳೆ ಬಂಡಿಹೊಳೆ ಗ್ರಾಮದ ರಶ್ಮಿ ಎಂದು ಗುರುತಿಸಲಾಗಿದ್ದು, ಈ ಕುರಿತು ರಾಮೇಗೌಡರು ಕೆಆರ್‍ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಸದ್ಯ ಸಿಸಿಟಿವಿ ಕ್ಯಾಮೆರಾದಲ್ಲಿನ ದೃಶ್ಯದ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

  • ಮಂಡ್ಯದಲ್ಲಿ 20 ಮೇಕೆಗಳ ನಿಗೂಢ ಸಾವು

    ಮಂಡ್ಯದಲ್ಲಿ 20 ಮೇಕೆಗಳ ನಿಗೂಢ ಸಾವು

    ಮಂಡ್ಯ: ಕೊಟ್ಟಿಗೆಯಲ್ಲಿ ಕೂಡಿ ಹಾಕಿದ್ದ 20 ಮೇಕೆಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಪಾಲಹಳ್ಳಿ ಗ್ರಾಮದಲ್ಲಿ ಆಡುಗಳನ್ನು ಸಾಕಿ ಜೀವನ ಸಾಗಿಸುತ್ತಿದ್ದ, ಶ್ರೀನಿವಾಸು ಅವರಿಗೆ ಸೇರಿದ ಈ ಮೇಕೆಗಳು ಇಂದು ಬೆಳಿಗ್ಗೆ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ನೆನ್ನೆ ಸಂಜೆ ಮೇಕೆಗಳನ್ನು ಮೇಯಿಸಿಕೊಂಡು ಬಂದು ಕೊಟ್ಟಿಗೆಗೆ ಕೂಡಿ ಹಾಕಲಾಗಿತ್ತು. ಇದನ್ನೂ ಓದಿ:  ಫಟಾಫಟ್ ಅಂತ ಮಾಡಿ ಬಿಸಿ ಬಿಸಿಯಾದ ಅನ್ನದ ಪಕೋಡ

    ಮೇಕೆಗಳ ನಿಗೂಢ ಸಾವಿನಿಂದ ಮೇಕೆಗಳನ್ನು ಸಾಕಿದ್ದ ವ್ಯಕ್ತಿ ಕಂಗಾಲಾಗಿದ್ದು, ಪರಿಹಾರಕ್ಕಾಗಿ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ. ಸ್ಥಳಕ್ಕೆ ಪಶುವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಷದ ಪದಾರ್ಥ ತಿಂದು ಸಾವನ್ನಿಪ್ಪಿರಬೇಕೆಂದು ಶಂಕಿಸಿದ್ದಾರೆ.