Tag: farmer

  • ಪರಾರಿಯಾಗಿದ್ದ ನಟ, ಗಾಯಕ ದೀಪ್ ಸಿಧು ಕೊನೆಗೂ ಬಂಧನ

    ಪರಾರಿಯಾಗಿದ್ದ ನಟ, ಗಾಯಕ ದೀಪ್ ಸಿಧು ಕೊನೆಗೂ ಬಂಧನ

    ನವದೆಹಲಿ: ರೈತರ ಟ್ರ್ಯಾಕ್ಟರ್  ರ‍್ಯಾಲಿ ವೇಳೆ ಹಿಂಸಾಚಾರ ಮತ್ತು ಕೆಂಪು ಕೋಟೆ ಮೇಲೆ ಧಾರ್ಮಿಕ ಧ್ವಜ ಹಾರಿಸಿದ ಸಂಬಂಧ ದೆಹಲಿಯ ವಿಶೇಷ ಪೊಲೀಸ್ ತಂಡ ನಟ, ಗಾಯಕ ದೀಪ್ ಸಿಧುನನ್ನು ಬಂಧಿಸಿದ್ದಾರೆ.

    ಜನವರಿ 26 ರ ದೆಹಲಿಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ‍್ಯಾಲಿ  ವೇಳೆ ಕೆಂಪು ಕೋಟೆಯ ಮೇಲೆ ಖಾಸಗಿ ಧ್ವಜ ಹಾರಿಸಲು ಸಿಧು ಸಹಕರಿಸಿದ್ದನು. ಅಷ್ಟೇ ಅಲ್ಲದೇ ಅಲ್ಲಿಂದಲೇ ಫೇಸ್‍ಬುಕ್ ಲೈವ್ ಮಾಡಿದ್ದ. ಸಿಧುನಿಂದಲೇ ಪ್ರತಿಭಟನೆ ಹಾದಿ ತಪ್ಪಿತು ಎಂದು ರೈತ ಮುಖಂಡರು ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಧು ಬಂಧನವಾಗಿದೆ.

    ಪ್ರಮುಖ ಆರೋಪಿಯಾಗಿರುವ ದೀಪ್ ಸಿಧು ತಲೆ ಮರೆಸಿಕೊಂಡಿದ್ದನು. ಈ ಹಿನ್ನೆಲೆ ಸಿಧು ಗಾಹೂ ಇತರೆ ಮೂವರು ಆರೋಪಿಗಳ ಕುರಿತಾಗಿ ಮಾಹಿತಿ ನೀಡಿದರೆ 1 ಲಕ್ಷ ರೂಪಾಯಿ ನೀಡುವುದಾಗಿ ಪೊಲೀಸರು ಬಹುಮಾನ ಪ್ರಕಟಿಸಿದ್ದರು. ಸಿಧುನ ಹುಡುಕಾಟದಲ್ಲಿರುವ ಪೊಲೀಸರಿಗೆ ಸಿಧು ತನ್ನ ಗೆಳತಿಯ ಫೋನ್ ಬಳಕೆ ಮಾಡುತ್ತಿದ್ದಾನೆ ಎಂದು ಸುಳಿವು ಸಿಕ್ಕಿದೆ. ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸ್ ತಂಡ ಸಿಧು ಇದ್ದ ಸ್ಥಳವನ್ನು ಪತ್ತೆ ಮಾಡಿ ಅರೆಸ್ಟ್ ಮಾಡಿದ್ದಾರೆ.

    ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ರೈತ ಪ್ರತಿಭಟನೆಗೆ ನನ್ನನ್ನೇ ಸಮರ್ಪಿಸಿಕೊಂಡು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನು. ಆದರೆ ಗಣರಾಜ್ಯೋತ್ಸವದ ಗಲಭೆ ನಂತರ ರೈತ ಸಂಘಟನೆಗಳು, ರೈತ ಮುಖಂಡರು ನನ್ನನ್ನು ಕಡೆಗಳಿಸುತ್ತಿದ್ದಾರೆ. ನಾನು ಪಂಜಾಬ್ ಜನರಿಗಾಗಿ ಧ್ವನಿ ಎತ್ತಿದೆ. ಕೆಂಪು ಕೋಟೆಯಲ್ಲಿ ಹಲವು ಗಾಯಕರು, ನಾಯಕರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಜನರು ಇದ್ದರು. ಆದರೆ ನನ್ನನ್ನು ಮಾತ್ರ ಆರೋಪಿ ಸ್ಥಾನದಲ್ಲಿ ನೋಡುತ್ತಿದ್ದಾರೆ. ನಾನೀಗ ಬಿಹಾರದ ಕಾರ್ಮಿಕರೊಂದಿಗೆ ಇದ್ದೇನೆ ಎಂದು ಫೇಸ್‍ಬುಕ್ ವೀಡಿಯೋದಲ್ಲಿ ಕಣ್ಣೀರು ಹಾಕಿದ್ದ.

  • ಟಿಕ್ರಿ ಗಡಿಯಲ್ಲಿ ಆತ್ಮಹತ್ಯೆಗೆ ಶರಣಾದ ರೈತ – 40 ಲಕ್ಷ ಟ್ರ್ಯಾಕ್ಟರ್ ರ‍್ಯಾಲಿಗೆ ಟಿಕಾಯತ್ ಕರೆ

    ಟಿಕ್ರಿ ಗಡಿಯಲ್ಲಿ ಆತ್ಮಹತ್ಯೆಗೆ ಶರಣಾದ ರೈತ – 40 ಲಕ್ಷ ಟ್ರ್ಯಾಕ್ಟರ್ ರ‍್ಯಾಲಿಗೆ ಟಿಕಾಯತ್ ಕರೆ

    ನವದೆಹಲಿ: ಟಿಕ್ರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಹಾಪಂಚಾಯತ್ ಸಭೆಗೂ ಮುನ್ನವೇ ರೈತ ಆತ್ಮಹತ್ಯೆಗೆ ಶರಣಾಗಿದ್ದು, ಸ್ಥಳದಲ್ಲಿ ಡೆತ್ ನೋಟ್ ಲಭ್ಯವಾಗಿದೆ.

    ಹರಿಯಾಣದ ಜಿಂದ್ ಜಿಲ್ಲೆಯ ಕರ್ಮವೀರ್ ಸಿಂಗ್ (52) ಆತ್ಮಹತ್ಯೆಗೆ ಶರಣಾದ ರೈತ. ಹರಿಯಾಣದ ಚರಕಿ ದಾದ್ರಿ ಮೈದಾನದಲ್ಲಿ ಈ ಘಟನೆ ನಡೆದಿದೆ. ಭಾರತ್ ಕಿಸಾನ್ ಯೂನಿಯನ್ ಜಿಂದಾಬಾದ್, ಸಮಸ್ಯೆ ಇತ್ಯರ್ಥಗೊಳಿಸದ ಮೋದಿ ಸರ್ಕಾರ ದಿನಾಂಕಗಳ ದಿನ ನೀಡುತ್ತಾ ಹೋಗುತ್ತಿದೆ. ಈ ಕಾನೂನುಗಳನ್ನ ಹಿಂಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಮೃತ ರೈತ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ.

    40 ಲಕ್ಷ ಟ್ರ್ಯಾಕ್ಟರ್: ಇತ್ತ ಮಹಾಪಂಚಾಯತ್ ನಲ್ಲಿ ಮಾತನಾಡಿದ ಭಾರತ್ ಕಿಸಾನ್ ಯೂನಿಯನ್ ಮುಂದಾಳು ರಾಕೇಶ್ ಟಿಕಾಯತ್, 2021ರ ರೈತ ಕ್ರಾಂತಿಗೆ ಕರೆ ಕೊಟ್ಟರು. ಜನವರಿ 26ರಂದು 20 ಸಾವಿರ ಟ್ರ್ಯಾಕ್ಟರ್ ಸೇರಿಸುವುದು ನಮ್ಮ ಗುರಿಯಾಗಿತ್ತು. ಆದ್ರೆ ಅನ್ನದಾತರು 2021ರ ಕಿಸಾನ್ ಕ್ರಾಂತಿಗೆ ಸಿದ್ಧರಾಗಬೇಕಿದೆ. ಈಗ 40 ಲಕ್ಷ ಟ್ರ್ಯಾಕ್ಟರ್ ಗಳ ರ‍್ಯಾಲಿ ನಡೆಸೋದು ನಮ್ಮ ಮುಂದಿನ ಗುರಿ ಎಂದು ಕರೆ ನೀಡಿದ್ದಾರೆ.

  • ಹುಲ್ಲಿನ ಬಣವೆಗೆ ಬೆಂಕಿ – ಕೃಷಿ ಉತ್ಪನ್ನಗಳು, ಉಪಕರಣಗಳು ಭಸ್ಮ

    ಹುಲ್ಲಿನ ಬಣವೆಗೆ ಬೆಂಕಿ – ಕೃಷಿ ಉತ್ಪನ್ನಗಳು, ಉಪಕರಣಗಳು ಭಸ್ಮ

    ಚಿಕ್ಕಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ ಲಕ್ಷಾಂತರ ರೂಪಾಯಿ ಮೌಲ್ಯದ ಕೃಷಿ ಉತ್ಪನ್ನಗಳು ಕೃಷಿ ಉಪಕರಣಗಳು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕು ಸಡ್ಲವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.

    ಹುಲ್ಲಿನ ಬಣವೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೃಷಿ ಉತ್ಪನ್ನಗಳು ಹಾಗೂ ಕೃಷಿ ಉಪಕರಣಗಳು ಬೆಂಕಿಗಾಹುತಿಯಾಗಿದೆ. ಗ್ರಾಮದ ಲಕ್ಷ್ಮಮ್ಮ ಲಕ್ಷ್ಮಣ್ಣರೆಡ್ಡಿ ಎಂಬುರಿಗೆ ಸೇರಿದ ಬಣವೆಗಳಿಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಆಗ ಸಮೀಪದಲ್ಲಿದ್ದ ಹನಿ ನೀರಾವರಿ ಉಪಕರಣಗಳು, ಈರುಳ್ಳಿ ಘಟಕ ಸೇರಿ ಕೃಷಿ ಉಪಕರಣಗಳು ಸುಟ್ಟು ಕರಕಲಾಗಿವೆ.

    ಸುಮಾರು 4 ಲಕ್ಷಕ್ಕೂ ಅಧಿಕ ಮೌಲ್ಯದ ಕೃಷಿ ಉತ್ಪನ್ನಗಳು, ಕೃಷಿ ಉಪಕರಣಗಳು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಅನುಮಾನ ವ್ಯಕ್ತವಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಸೇತುವೆ ಕಟ್ಟಿ ಗೋಡೆಗಳನ್ನಲ್ಲ: ರಾಹುಲ್ ಗಾಂಧಿ

    ಸೇತುವೆ ಕಟ್ಟಿ ಗೋಡೆಗಳನ್ನಲ್ಲ: ರಾಹುಲ್ ಗಾಂಧಿ

    ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರ ಸೇತುವೆ ನಿರ್ಮಿಸಬೇಕೆ ಹೊರತು ಗೋಡೆಗಳನ್ನಲ್ಲ ಎಂದು ಟ್ವೀಟ್ ಮಾಡುವ ಮೂಲಕವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟವನ್ನು ಮುಂದುವರಿಸಿದ್ದಾರೆ. ಸುತ್ತಮುತ್ತಲಿನ ಗ್ರಾಮಗಳಿಂದ ಬಂದು ರೈತರು ಕೈಜೋಡಿಸುತ್ತಿದ್ದಾರೆ. ಈ ವಿಚಾರವಾಗಿ ರಾಹುಲ್ ಗಾಂಧಿ ಸರ್ಕಾರ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಭಾರತೀಯ ಸರ್ಕಾರ ಸೇತುವೆಗಳನ್ನು ಕಟ್ಟಿಸಿ, ಗೋಡೆಗಳನ್ನಲ್ಲ ಎಂದು ಒಂದೇ ಸಾಲಿನಲ್ಲಿ ಬರೆದುಕೊಂಡು ರೈತರ ಹೋರಾಟ ತಡೆಯಲು ನಿರ್ಮಿತವಾದ ಕೆಲವು ತಡೆಗೋಡೆಗಳ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಚಾಟಿ ಬೀಸಿದ್ದಾರೆ.

     

    ಘಾಜಿಪುರ್ ಗಡಿಯಲ್ಲಿ ನೂರಾರು ಪೊಲೀಸರು ಸೈನಿಕರಂತೆ ನಿಂತಿದ್ದಾರೆ. ಹತ್ತಾರು ಅಡಿಗಳಷ್ಟು ದೂರ ಸಿಮೆಂಟ್ ಬ್ಯಾರಿಕೇಡ್‍ಗಳನ್ನು ಜೋಡಿಸಲಾಗಿದೆ. ಬ್ಯಾರಿಕೇಡ್‍ನ ಮಧ್ಯೆ ಸಿಮೆಂಟ್ ಹಾಕಲಾಗಿದೆ. ಕಬ್ಬಿಣದ ಬ್ಯಾರಿಕೇಡ್‍ಗಳನ್ನು ಹಾಕಿ ರಾಡುಗಳನ್ನು ಹಿಡಿದು ನಿಂತಿದ್ದಾರೆ. ರೈತರ ಪ್ರತಿಭಟನೆ ತೀವ್ರವಾಗದಂತೆ ತಡೆಯಲು ಹಾಗೂ ದೆಹಲಿಯನ್ನು ಪ್ರವೇಶಿಸದಂತೆ ತಡೆಯಲು ಪೊಲೀಸರು ಭದ್ರಕೋಟೆ ನಿರ್ಮಿಸಿರುವ ಫೋಟೋಗಳನ್ನು ರಾಹುಲ್ ಗಾಂಧಿ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದಾರೆ.

  • 2 ಸಾವಿರ ಸಂಬಳ ಪಡೆಯುತ್ತಿದ್ದ ವ್ಯಕ್ತಿಯ ಟರ್ನ್ ಓವರ್ ಒಂದು ಕೋಟಿಗೂ ಅಧಿಕ

    2 ಸಾವಿರ ಸಂಬಳ ಪಡೆಯುತ್ತಿದ್ದ ವ್ಯಕ್ತಿಯ ಟರ್ನ್ ಓವರ್ ಒಂದು ಕೋಟಿಗೂ ಅಧಿಕ

    ಭೂಮಿ ತಾಯಿಯನ್ನ ನಂಬಿ ಕೆಟ್ಟವರಿಲ್ಲ. ತನ್ನನ್ನು ನಂಬಿ ಬಂದ ಎಲ್ಲರಿಗೂ ಭೂ ತಾಯಿ ಆಶ್ರಯ ನೀಡಿ ಸಾಕಿ ಸಲಹುತ್ತಾಳೆ ಅನ್ನೋ ಮಾತಿದೆ. ಭೂ ತಾಯಿ ನಂಬಿ ಬದುಕು ಕಟ್ಟಿಕೊಂಡ ಯಶಸ್ವಿ ರೈತನ ಜೀವನ ಕಥೆ ಇಲ್ಲಿದೆ. ಮಹಾರಾಷ್ಟ್ರದ ಉಸ್ಮಾನಾಬಾದ್ ನಿವಾಸಿ ರಾಜಶೇಖರ್ ಪಾಟೀಲ್ ಕೃಷಿಯಿಂದಲೇ ಕೋಟಿ ಕೋಟಿ ಅದಾಯವನ್ನ ತಮ್ಮದಾಗಿಸಿಕೊಂಡಿದ್ದಾರೆ.

    ರಾಜಶೇಖರ್ ಪಾಟೀಲ್ ಕೃಷಿ ಕುಟುಂಬದವರು. 30 ಎಕರೆ ಜಮೀನು ಹೊಂದಿದ್ದರೂ ಮಳೆಯ ಕೊರತೆಯಿಂದಾಗಿ ಉತ್ತಮ ಇಳುವರಿ ಇರಲಿಲ್ಲ. ಹಾಗಾಗಿ ಪದವಿ ಬಳಿಕ ಸರ್ಕಾರಿ ಉದ್ಯೋಗಕ್ಕಾಗಿ ರಾಜಶೇಖರ್ ಪ್ರಯತ್ನಿಸಿದ್ದರು. ಆದ್ರೆ ಸರ್ಕಾರಿ ಉದ್ಯೋಗ ಸಿಗದ ಹಿನ್ನೆಲೆ ರಾಜಶೇಖರ್ ಖಾಸಗಿ ಕಂಪನಿಯತ್ತ ಮುಖ ಮಾಡಿದ್ದರು. ಆದರೂ ಉತ್ತಮ ಸಂಬಳ ಸಿಗದಿದ್ದಾಗ ರಾಜಶೇಖರ್ ಅವರಿಗೆ ಹೊಳೆದಿದ್ದು ಬಿದಿರು ಕೃಷಿ ಐಡಿಯಾ. ಇದೇ ಐಡಿಯಾ ರಾಜಶೇಖರ್ ಅವರನ್ನ ಕೋಟ್ಯಧಿಪತಿಯನ್ನಾಗಿ ಮಾಡಿದ್ದು, ಸದ್ಯ 54 ಎಕರೆ ಜಮೀನಿನಲ್ಲಿ ಬಂಬೂ ಬೆಳೆಯುತ್ತಿದ್ದಾರೆ.

    ಆರಂಭದಲ್ಲಿ ಇಲ್ಲಿ ವಿದ್ಯುತ್ ಸಂಪರ್ಕ ಮತ್ತು ಜಲ ಮೂಲವೇ ಇರಲಿಲ್ಲ. ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸಿದ್ರೂ ನೌಕರಿ ಸಿಗಲಿಲ್ಲ. ಕೊನೆಗೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ರಾಲೇಗನ್‍ಗೆ ತೆರಳಿದೆ. ಅವರಿಗೆ ಗ್ರಾಮದ ಕೆಲಸಕ್ಕಾಗಿ ಕೆಲ ಯುವಕರ ಅಗತ್ಯವಿತ್ತು. ಆದ್ರೆ ಅಲ್ಲಿಯೂ ನನ್ನ ಸೆಲೆಕ್ಷನ್ ಆಗಲಿಲ್ಲ. ನನ್ನ ಮನವಿ ಬಳಿಕ ಅಣ್ಣಾ ಹಜಾರೆ ಅವರು ಮಣ್ಣಿನ ಸಂರಕ್ಷಣೆ ಮತ್ತು ನಿರ್ವಹಣೆಯ ಕೆಲಸ ನೀಡಿದ್ದರು. ಈ ಕೆಲಸಕ್ಕೆ ತಿಂಗಳಿಗೆ ಎರಡು ಸಾವಿರ ರೂಪಾಯಿ ಸಿಗುತ್ತಿತ್ತು. ನಾಲ್ಕೈದು ವರ್ಷ ಅವರ ಬಳಿ ಕೆಲಸ ಮಾಡಿದ್ದರಿಂದ ಕೃಷಿಯಲ್ಲಿ ಮಿತ ಜಲ ಬಳಕೆ ಸೇರಿದಂತೆ ತೋಟಗಾರಿಕೆಯ ಮಾಹಿತಿ ಸಿಕ್ತು ಎಂದು 52 ವರ್ಷದ ರಾಜಶೇಖರ್ ಪಾಟೀಲ್ ಹೇಳುತ್ತಾರೆ.

    ಮೊದಲ ವರ್ಷದಲ್ಲೇ 20 ಲಕ್ಷ ಟರ್ನ್ ಓವರ್:
    ರಾಜಶೇಖರ್ ಅವರ ತಂದೆ ಪಾರ್ಶ್ವವಾಯುಗೆ ತುತ್ತಾಗುತ್ತಾರೆ. ಹಾಗಾಗಿ ಕೆಲ ವರ್ಷಗಳ ಹಿಂದೆ ವೃತ್ತಿ ಜೀವನ ಆರಂಭಿಸಿದ್ದ ರಾಜಶೇಖರ್ ಗ್ರಾಮಕ್ಕೆ ಹಿಂದಿರುಗಿದ್ದರಿಂದ ತಮ್ಮ ಜಮೀನಿನಲ್ಲಿಯೇ ಕೃಷಿ ಕೆಲಸದಲ್ಲಿ ತೊಡಗಿಕೊಳ್ಳುತ್ತಾರೆ. ಈ ವೇಳೆ ಪಕ್ಕದೂರಿನ ಓರ್ವ ರೈತ ನಷ್ಟದ ಹಿನ್ನೆಲೆ ತನ್ನ ಹೊಲದಲ್ಲಿಯ ಬಿದಿರು ನಾಶಗೊಳಿಸಲು ಮುಂದಾದ ವಿಷಯ ರಾಜಶೇಖರ್ ಅವರಿಗೆ ಗೊತ್ತಾಗುತ್ತೆ. ರಾಜಶೇಖರ್ ಸುಮಾರು 10 ಸಾವಿರ ರೂ. ನೀಡಿ ಅಲ್ಲಿಯ ಬಿದಿರು ಸಸಿಗಳನ್ನ ತಂದು ತಮ್ಮ ಜಮೀನಿನಲ್ಲಿ ನಾಟಿ ಮಾಡ್ತಾರೆ. ಮೂರು ವರ್ಷದ ಬಳಿಕ ಬಿದಿರು ಮಾರಿದಾಗ ಮೊದಲ ವರ್ಷದ ಆದಾಯವೇ 20 ಲಕ್ಷ ರೂ. ಆಗಿರುತ್ತೆ.

    ಸಾಂದರ್ಭಿಕ ಚಿತ್ರ

    ವಿದೇಶಿ ತಳಿ ಸೇರಿದಂತೆ 50 ಬಗೆಯ ಬಿದಿರು: ಮೊದಲ ವರ್ಷವೇ ಅತ್ಯಧಿಕ ಲಾಭ ಪಡೆದ ರಾಜಶೇಖರ್ ಅವರ ಆತ್ಮವಿಶ್ವಾಸ ಹೆಚ್ಚಾಗಿತ್ತು. ಮತ್ತೆ ಬಿದಿರು ನಾಟಿ ಮಾಡಿ, 10 ಕಿಲೋ ಮೀಟರ್ ಉದ್ದದ ಕಾಲುವೆಯನ್ನ ಸ್ವಚ್ಛಗೊಳಿಸಿ, ಮಳೆಯ ನೀರು ಒಂದೆಡೆ ಸಂಗ್ರಹವಾಗುವಂತೆ ಮಾಡಿಕೊಂಡರು. ಇದರಿಂದಲೇ ಗ್ರಾಮಸ್ಥರ ದಾಹ ತಣಿಸಿದ್ದಾರೆ. ಇಂದು ರಾಜಶೇಖರ್ ಅವರ ತೋಟದ ಬಿದಿರು ಖರೀದಿಗಾಗಿ ಗ್ರಾಹಕರ ದೂರ ದೂರ ಊರುಗಳಿಂದ ಇಲ್ಲಿಗೆ ಬರುತ್ತಾರೆ. ಸದ್ಯ ರಾಜಶೇಖರ್ ತೋಟದಲ್ಲಿ ವಿದೇಶಿ ತಳಿ ಸೇರಿದಂತೆ 50 ಬಗೆಯ ಬಿದಿರು ಬೆಳೆಯಲಾಗುತ್ತದೆ. ಇಷ್ಟು ಮಾತ್ರವಲ್ಲದೇ ರಾಜಶೇಖರ್ ಜಮೀನಿನಲ್ಲಿಯೇ ನರ್ಸರಿ ಆರಂಭಿಸಿದ್ದು, ಬಿದಿರು ಸಸಿಗಳನ್ನ ಬೆಳೆಯಲಾಗುತ್ತದೆ.

    ಸಾಂದರ್ಭಿಕ ಚಿತ್ರ

    ಕೃಷಿ ಜೊತೆಗೆ ತಮ್ಮ ತೋಟಕ್ಕೆ ಆಗಮಿಸುವ ವಿದ್ಯಾರ್ಥಿಗಳು, ರೈತರಿಗೆ ರಾಜಶೇಖರ್ ತರಬೇತಿ ನೀಡುವ ಕೆಲಸ ಮಾಡುತ್ತಾರೆ. ನಾಗ್ಪುರದಲ್ಲಿ ನಡೆದ ಆಗ್ರೋ ವಿಸನ್ ಕಾನ್ಫೆರನ್ಸ್ ನಲ್ಲಿ ಮುಖ್ಯ ಅತಿಥಿಯನ್ನಾಗಿ ರಾಜಶೇಖರ್ ಅವರನ್ನ ಆಹ್ವಾನಿಸಲಾಗಿತ್ತು. ಇಂಡಿಯನ್ ಬಂಬೂ ಮಿಶನ್ ನಲ್ಲಿ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ 100ಕ್ಕೂ ಹೆಚ್ಚು ಜನ ರಾಜಶೇಖರ್ ಅವರ ತೋಟದಲ್ಲಿ ಕೆಲಸ ಮಾಡುತ್ತಿದ್ದಾರೆ.

    ಸಾಂದರ್ಭಿಕ ಚಿತ್ರ

    ಬಿದಿರು ಕೃಷಿ ಹೇಗೆ?:
    ಬಿದಿರು ಬೆಳೆಯಲು ನಿರ್ದಿಷ್ಟ ಫಲವತ್ತತೆಯ ಜಮೀನು ಬೇಕಿಲ್ಲ. ಅತಿ ಹೆಚ್ಚು ನೀರು, ಆರೈಕೆಯ ಬಿದಿರು ಕೇಳಲ್ಲ. ಸಾಮಾನ್ಯವಾಗಿ ಜುಲೈನಲ್ಲಿ ಬಿದಿರು ನೆಡಲಾಗುತ್ತದೆ. ಮೂರು ವರ್ಷದ ಬಳಿಕ ಇಳುವರಿ ನಿಮ್ಮ ಕೈ ಸೇರುತ್ತದೆ. ಮಾರುಕಟ್ಟೆಯಲ್ಲಿ ಬೆಲೆ ಸಹ ನೀವು ಬೆಳೆದ ಬಿದಿರಿನ ಜಾತಿಯ ಮೇಲೆ ನಿರ್ಧರವಾಗುತ್ತದೆ. ಹಾಗಾಗಿ ಆರಂಭದಲ್ಲಿ ಯಾವ ವಿಧದ ಬಿದಿರು ಬೆಳೆಯಲಾಗ್ತಿದೆ ಎಂಬುದನ್ನ ತಿಳಿದುಕೊಳ್ಳಬೇಕು. ಬಿದಿರುಗಳ ನಡುವೆ ಮೂರರಿಂದ ನಾಲ್ಕು ಮೀಟರ್ ಅಂತರವಿರುವಂತೆ ನೋಡಿಕೊಳ್ಳಬೇಕು. ಈ ಜಾಗದಲ್ಲಿ ಬೇರೆ ಬೆಳೆಗಳನ್ನ ಬೆಳೆದುಕೊಳ್ಳಬಹುದು. ಬಿದಿರು ಬೆಳೆಯಲು ಇಚ್ಛಿಸುವ ರೈತರು ರಾಷ್ಟ್ರೀಯ ಬಂಬೂ ಮಿಶನ್ ಸಹಾಯ ಪಡೆದುಕೊಳ್ಳಬಹುದು ಎಂದು ರಾಜಶೇಖರ್ ಹೇಳುತ್ತಾರೆ.

    ಸಾಂದರ್ಭಿಕ ಚಿತ್ರ

    ಇಂದು ಮಾರುಕಟ್ಟೆಯಲ್ಲಿ ಬಿದಿರು ಉತ್ಪನ್ನಗಳು ಬೇಡಿಕೆಯನ್ನ ಹೊಂದಿದೆ. ಕೇವಲ ಗೋವಾ ಅಲ್ಲದೇ ದೇಶದ ಪ್ರತಿ ಭಾಗದಲ್ಲಿ ಮನೆಯ ಅಲಂಕಾರಿಕ ವಸ್ತುಗಳಿಗಾಗಿ ಬಿದಿರು ಬಳಸುತ್ತಾರೆ. ಏಣಿ, ಚಾಪೆ, ಪೀಠೋಪಕರಣ, ಆಟಿಕೆ ಸೇರಿದಂತೆ ಹಲವು ವಸ್ತುಗಳ ಉತ್ಪಾದನೆಯಲ್ಲಿ ಬಿದಿರು ಬಳೆಕೆಯಾಗುತ್ತದೆ. ರಾಜಶೇಖರ್ ಅವರು ಹೇಳುವಂತೆ, ದೇಶದಲ್ಲಿ ಬಿದಿರು ಉತ್ಪಾದನೆ ಕಡಿಮೆ. ಆದ್ರೆ ಬೇಡಿಕೆ ಹೆಚ್ಚು. ಒಂದು ಎಕರೆ ಬಿದಿರು ಹಚ್ಚಲು ಸುಮಾರು 10 ಸಾವಿರ ರೂ. ವ್ಯಯವಾಗುತ್ತೆ. ಅದೇ ಮೂರು ವರ್ಷಗಳ ನಂತ್ರ ಲಕ್ಷ ಲಕ್ಷ ನಿಮ್ಮ ಹಣ ಜೇಬು ಸೇರುತ್ತೆ. ಒಮ್ಮೆ ಬಿದಿರು ಹಚ್ಚಿದ್ರೆ ಮುಂದಿನ 30 ರಿಂದ 40 ವರ್ಷ ಇರುತ್ತೆ. ಗುಣಮಟ್ಟದ ಆಧಾರದ ಮೇಲೆ ಒಂದು ಬಿದಿರು ಬೆಲೆ 20 ರೂ.ಯಿಂದ 100 ರೂ.ವರೆಗೆ ಲಭ್ಯವಾಗುತ್ತದೆ.

  • ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು

    ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು

    ನವದೆಹಲಿ: ಆಸ್ಟ್ರೇಲಿಯಾದಲ್ಲಿ ಉನ್ನತವ್ಯಾಸಂಗ ಮಾಡುತ್ತಿದ್ದ ಯುವಕ, ದೆಹಲಿಯ ಕೃಷಿಕಾನೂನು ವಿರೋಧಿಸಿ ನಡೆಯುತ್ತಿರುವ ರ‍್ಯಾಲಿಯಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

    ಮೃತನನ್ನು ನರ್ವೀತ್ ಸಿಂಗ್ (27) ಎಂದು ಗುರುತಿಸಲಾಗಿದೆ. ಈತ ಆಸ್ಟ್ರೇಲಿಯಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದನು. ಇದೀಗ ರೈತ ರ‍್ಯಾಲಿ ಪ್ರಭಟನೆ ವೇಳೆ ಟ್ರ್ಯಾಕ್ಟರ್ ಮಗುಚಿ ಬಿದ್ದು ಸಾವನ್ನಪ್ಪಿದ್ದಾನೆ.

    ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ ಇತ್ತೀಚೆಗಷ್ಟೇ ಹಿಂದಿರುಗಿದ್ದನು. ರಾಂಪುರದ ಬಿಲಾಸ್ ಪುರ್ ಪ್ರದೇಶದಲ್ಲಿ ನಡೆಯುತ್ತಿರುವ ರೈತ ಪ್ರತಿಭಟನಾ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳಿದ್ದನು. ಆದರೆ ಯುವಕ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ವಿಚಾರ ಈತನ ಕುಟುಂಬದವರಿಗೆ ತಿಳಿದಿರಲಿಲ್ಲ. 3 ದಿನಗಳ ಹಿಂದೆ ದೆಹಲಿಗೆ ಹೋಗಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾನೆ. ರ‍್ಯಾಲಿ ವೇಳೆ ಟ್ರ್ಯಾಕ್ಟರ್ ಮಗುಚಿಬಿದ್ದ ಪರಿಣಾಮ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

    ರೈತರು ಪ್ರತಿಭಟನೆ ವೇಳೆ ಟ್ರ್ಯಾಕ್ಟರ್‍ನನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿದ್ದರು. ಹೀಗಾಗಿ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‍ಗೆ ಗುದ್ದಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ನಾವು ರಕ್ಷಣೆಗೆ ತೆರಳುವ ವೇಳೆ ಪರಿಸ್ಥಿತಿ ಇನ್ನಷ್ಟು ಬಿಗಿಡಾಯಿಸಿತ್ತು. ಈ ಅಪಘಾತದಲ್ಲಿ ನರ್ವೀತ್ ಸಿಂಗ್ ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಇತ್ತ ರೈತರು ಪೊಲೀಸರು ಟಿಯರ್ ಗ್ಯಾಸ್ ಪ್ರಯೋಗಿಸಿದ್ದರಿಂದ ಟ್ರ್ಯಾಕ್ಟರ್ ಮೇಲೆ ನಿಯಂತ್ರಣ ಕಳೆದುಕೊಂಡೆವು. ಆಗ ಅಪಘಾತದಲ್ಲಿ ನರ್ವೀತ್ ಸಿಂಗ್ ಸಾವನ್ನಪ್ಪಿದ್ದಾನೆ ಎಂದು ಆರೋಪಿಸುತ್ತಿದ್ದಾರೆ.

  • ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ ಸಂಬಂಧ 15 ಎಫ್‍ಐಆರ್

    ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರ ಸಂಬಂಧ 15 ಎಫ್‍ಐಆರ್

    ನವದೆಹಲಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ ಸಂಬಂಧ ಪೊಲೀಸರಿಗೆ ಗಾಯ ಮತ್ತು ಹಲವು ವಾಹನಗಳನ್ನು ಧ್ವಂಸ ಮಾಡಿರುವ ಹಿನ್ನೆಲೆ 15 ಎಫ್‍ಐಆರ್ ದಾಖಲು ಮಾಡಲಾಗಿದೆ.

    ಕೃಷಿ ಕಾನೂನು ವಿರೋಧಿಸಿ ನಡೆಯುತ್ತಿರುವ ರೈತರ ಟ್ರ್ಯಾಕ್ಟರ್ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಪೊಲೀಸರು 15 ಎಫ್‍ಐಆರ್ ದಾಖಲು ಮಾಡಿದ್ದಾರೆ. ಇನ್ನು ಹೆಚ್ಚಿನ ಎಫ್‍ಐಆರ್ ದಾಖಲಾಗುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ದೆಹಲಿಯ ಮುಖರ್ಬಾ ಚೌಕ್, ಗಾಝಿಫುರ್, ಐಟಿಓ ಸೀಮ್ ಪುರಿ, ನಾಂಗ್ಲೋಯಿ ಟಿ ಪಾಯಿಂಟ್, ಟಿಕ್ರಿ ಗಡಿ, ಕೆಂಪುಕೋಟೆ ಮುಂತಾದ ಕಡೆಯಲ್ಲಿ ಗಲಭೆ ನಿರ್ಮಾಣವಾಗಿತ್ತು. ಈ ವೇಳೆ 7 ಬಸ್, 17 ಖಾಸಗಿವಾಹನಗಳು ಸೇರಿದಂತೆ ಒಟ್ಟು 17 ವಾಹನಗಳನ್ನು ಧ್ವಂಸವಾಗಿವೆ. 86ಕ್ಕೂ ಹೆಚ್ಚು ಪೋಲಿಸರಿಗೆ ಗಾಯಗಳಾಗಿವೆ. ಗಾಜಿಪುರ್ ಮತ್ತು ಟಿಕ್ರಿ ಗಡಿ ಭಾಗಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‍ಗಳನ್ನು ಧ್ವಂಸ ಮಾಡಲಾಗಿದೆ.

    ಶಾಂತಿಯುತವಾದ ರ‍್ಯಾಲಿಯನ್ನು ನಡೆಸಲು ದೆಹಲಿ ಪೊಲೀಸರು ಸಂಯುಕ್ತ ಕಿಸಾನ್ ಮೋರ್ಚಾ ಜೊತೆಯಲ್ಲಿ ಮಾತುಕಥೆಯನ್ನು ನಡೆಸಿತ್ತು. ಆದರೆ ರ‍್ಯಾಲಿ ಪ್ರಾರಂಭವಾಗುತ್ತಿದ್ದಂತೆ ಸ್ವರೂಪವೇ ಬದಲಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಪ್ರಯತ್ನಿಸಿದ್ರು ವಿಫಲರಾದರು.

  • ಜೋಳದ ಬೆಳೆಗೆ ದುಷ್ಕರ್ಮಿಗಳಿಂದ ಬೆಂಕಿ – 3 ಎಕರೆ ಬೆಳೆ ನಾಶ

    ಜೋಳದ ಬೆಳೆಗೆ ದುಷ್ಕರ್ಮಿಗಳಿಂದ ಬೆಂಕಿ – 3 ಎಕರೆ ಬೆಳೆ ನಾಶ

    ಗದಗ: ದುಷ್ಕರ್ಮಿಗಳು ರೈತ ಬೆಳೆದ ಜೋಳದ ಬೆಳೆಗೆ ಬೆಂಕಿ ಇಟ್ಟು ಫಸಲು ನಾಶ ಮಾಡಿರುವ ಘಟನೆ ಗದಗದ ಲಕ್ಷ್ಮೇಶ್ವರ ತಾಲೂಕಿನ ಪುಟ್ಗಾಂವ್ ಬಡ್ನಿ ಗ್ರಾಮದಲ್ಲಿ ನಡೆದಿದೆ.

    ಬಡ್ನಿ ಗ್ರಾಮದ ರೈತ ಭರಮಪ್ಪ ಕಾಂಬಳೆ ಅವರ ಬೆಳೆ ಹಾನಿಗೊಳಗಾಗಿದೆ. ಜೋಳದ ಫಸಲಿದ್ದ ಹೊಲಕ್ಕೆ ಬೆಂಕಿ ಬಿದ್ದ ಪರಿಣಾಮ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಕೈಗೆ ಬಂದಿರುವ ಬೆಳೆ ನಾಶವಾಗಿರುವ ಕುರಿತಾಗಿ ರೈತರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.

    ಮೂರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಿಳಿಜೋಳ ದುಷ್ಕರ್ಮಿಗಳ ಹೀನ ಕೃತ್ಯಕ್ಕೆ ಬೆಳೆಯಲ್ಲಾ ಸರ್ವನಾಶವಾಗಿದೆ. ವಾರದ ಹಿಂದಷ್ಟೇ ಅಕಾಲಿಕ ಮಳೆಗೆ ಜೋಳ ಬಿದ್ದು ಹಾಳಾಗಿತ್ತು. ಅಲ್ಪ-ಸ್ವಲ್ಪ ಉಳಿದ ಬೆಳೆ ಇನ್ನೇನು ಸಂಪೂರ್ಣ ಕಟಾವಿಗೆ ಬಂದಿತ್ತು. ಇನ್ನೊಂದು ವಾರದಲ್ಲಿ ಕಟಾವು ಮಾಡಬೇಕೆಂದುಕೊಂಡಿದ್ದರು. ಆದರೆ ಅಷ್ಟರಲ್ಲಿ ಬೆಂಕಿ ಬಿದ್ದು ಫಸಲು ನಾಶವಾಗಿದೆ. ಜಾನುವಾರುಗಳಿಗೂ ತಿನ್ನಲೂ ಬರದಂತೆ ಸುಟ್ಟುಕರಕಲಾಗಿದೆ. ಇದನ್ನು ಕಂಡ ಅನ್ನದಾತರ ಕಣ್ಣೀರು ಹಾಕುತ್ತಿದ್ದಾರೆ. ನೊಂದ ರೈತರಿಗೆ ಸರ್ಕಾರ ಪರಿಹಾರ ನೀಡಿ ಕೈಹಿಡಿದು ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ಕಾಲು ಸ್ವಾಧೀನ ಕಳೆದುಕೊಂಡರೂ ಯಶಸ್ವಿ ಕೃಷಿಕನಾದ ಕಾರ್ಮಿಕ

    ಕಾಲು ಸ್ವಾಧೀನ ಕಳೆದುಕೊಂಡರೂ ಯಶಸ್ವಿ ಕೃಷಿಕನಾದ ಕಾರ್ಮಿಕ

    – ಯಾರ ಸಹಾಯವಿಲ್ಲದೆ ಕೆಲಸ

    ಚಿತ್ರದುರ್ಗ: ಅಂಗಾಂಗಗಳೆಲ್ಲ ಸರಿ ಇದ್ದರೂ ಸರಿಯಾಗಿ ಕೆಲಸ ಮಾಡದೆ ಸೋಮಾರಿತನ ತೋರುವ ಯುವಕರನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಅಂಗವಿಕಲ ರೈತ ಕಾಲುಗಳು ಸ್ವಾಧೀನ ಕಳೆದುಕೊಂಡರೂ ಯಾರ ನೆರವಿಲ್ಲದೆ ಕೃಷಿ ಮಾಡುತ್ತಿದ್ದಾರೆ. ಈ ಮೂಲಕ ಇತರ ಯುವಕರಿಗೆ ಮಾದರಿಯಾಗಿದ್ದಾರೆ.

    ಜಿಲ್ಲೆಯ ಹಿರಿಯೂರು ತಾಲೂಕಿನ ಸೂರಪ್ಪನಹಟ್ಟಿ ಗ್ರಾಮದ ಬಾಲಣ್ಣ ವಿಶೇಷಚೇತನರಾಗಿದ್ದು, ಕಾಲುಗಳು ಸ್ವಾಧೀನ ಕಳೆದುಕೊಂಡಿವೆ. ಆದರೂ ಎದೆಗುಂದದೆ, ಯಾರ ನೆರವಿಲ್ಲದೆ ಜಮೀನಿನಲ್ಲಿ ಉಳುಮೆ ಮಾಡಿ ಬದುಕಿನ ಬಂಡಿ ಸಾಗಿಸುವ ಮೂಲಕ ಪತ್ನಿ ಹಾಗೂ ಮಗನನ್ನು ಸಾಕುತ್ತಿದ್ದಾರೆ.

    ಓಡಾಡಲು ಕಾಲಿಲ್ಲದೆ, ಎದ್ದು ನಿಲ್ಲಲು ಸೊಂಟವಿಲ್ಲದೇ ನೆಲದ ಮೇಲೆ ತೆವಳುವ ರೈತ ಬಾಲಣ್ಣ, ವಿಶೇಷಚೇತನನಾದರೂ ಮತ್ತೊಬ್ಬರ ಸಹಾಯ ಪಡೆಯದೇ ತುಂಡು ಭೂಮಿಯಲ್ಲಿ ಉಳುಮೆ ಮಾಡಿ ಸೌತೆಕಾಯಿ, ಮೆಣಸಿನಕಾಯಿ ಸೇರಿದಂತೆ ವಿವಿಧ ತರಕಾರಿ ಬೆಳೆಯುತ್ತ ಬದುಕು ಕಟ್ಟಿಕೊಂಡು ಛಲಗಾರ ಎನಿಸಿದ್ದಾರೆ. ಕಳೆದ ಹತ್ತು ವರ್ಷಗಳ ಹಿಂದೆ ಮಂಗಳೂರಿನ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ಜರುಗಿದ ಅವಘಡದಿಂದಾಗಿ ಕಾಲುಗಳು ಸ್ವಾಧೀನ ಕಳೆದುಕೊಂಡವು.

    ಅಂದಿನಿಂದಲೂ ಎದೆಗುಂದದೆ ಛಲದಿಂದ ಬದುಕುತ್ತಿರುವ ಬಾಲಣ್ಣ, ಯಾರ ಹಂಗಿನಲ್ಲೂ ಇರದೇ ತನ್ನ ತುಂಡು ಭೂಮಿಯಲ್ಲಿ ಉಳುಮೆ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಮಗನನ್ನು ವಿದ್ಯಾವಂತನನ್ನಾಗಿಸಬೇಕು ಹೀಗಾಗಿ ಭೂತಾಯಿ ನಂಬಿಕೊಂಡು ದುಡಿಯುತಿದ್ದೇನೆ ಎನ್ನುತ್ತಾರೆ ಬಾಲಣ್ಣ. ಯಾವುದೇ ಸುಲಭ ದಾರಿಗಳತ್ತ ಚಿಂತಿಸದೆ, ಕುಟುಂಬಸ್ಥರು ಹಾಗೂ ಗ್ರಾಮದ ಬೇರೆಯವರ ನೆರವು ಪಡೆಯದೆ ಶ್ರಮಿವಹಿಸಿ ತಮ್ಮ ಜಮೀನಿನಲ್ಲಿ ದುಡಿಯುವ ಮೂಲಕ ಸ್ವಾವಲಂಬಿಯಾಗಿ ಬದುಕು ಸಾಗಿಸುವ ಮೂಲಕ ಇತರರಿಗೆ ಮಾದರಿ ರೈತ ಎನಿಸಿದ್ದಾರೆ.

    ವಿಶೇಷ ಚೇತನ ಬಾಲಣ್ಣ ಅವರಿಗೆ ಸರ್ಕಾರದಿಂದ ಅಂಗವಿಕಲರ ಪಿಂಚಣಿ ಬಂದರೂ ಸರಿಯಾಗಿ ಇವರ ಕೈ ಸೇರಿಲ್ಲ. ಅಲ್ಲದೆ ಬದುಕಲ್ಲಿ ಇನ್ನಷ್ಟು ಸಾಧಿಸುವ ಹಂಬಲವಿರುವ ಬಾಲಣ್ಣ ಅಂಗವಿಕಲರ ಕಲ್ಯಾಣ ಇಲಾಖೆಯಿಂದ ತ್ರಿಚಕ್ರ ವಾಹನ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ. ಆದರೆ ಈವರೆಗೆ ಬೈಕ್ ಸಿಕ್ಕಿಲ್ಲ. ಇವರ ಶ್ರಮ ಕಂಡು ನಿಬ್ಬೆರಗಾಗಿರುವ ಗ್ರಾಮದ ಯುವಕರು ಬಾಲಣ್ಣನ ಕಾರ್ಯ ಮೆಚ್ಚಿ ಮನಸಾರೆ ಹೊಗಳುತಿದ್ದು, ನಮಗೆಲ್ಲ ಇವರು ಸ್ಫೂರ್ತಿ ಎನ್ನುತ್ತಿದ್ದಾರೆ. ಅಲ್ಲದೆ ಇಂತಹ ಸಾಧಕನಿಗೆ ಸರ್ಕಾರದಿಂದ ಒಂದು ಮನೆ ಹಾಗೂ ತ್ರಿಚಕ್ರ ವಾಹನ ನೀಡಬೇಕೆಂದು ಮನವಿ ಮಾಡಿದ್ದಾರೆ.

  • ಅಗಲಿದ ರಾಮನಿಗೆ ಅದ್ಧೂರಿ ಮೆರವಣಿಗೆ, ಅಂತ್ಯಸಂಸ್ಕಾರ

    ಅಗಲಿದ ರಾಮನಿಗೆ ಅದ್ಧೂರಿ ಮೆರವಣಿಗೆ, ಅಂತ್ಯಸಂಸ್ಕಾರ

    ಹುಬ್ಬಳ್ಳಿ: ಗಣ್ಯ ವ್ಯಕ್ತಿಗಳು ನಿಧನರಾದಾಗ ಊರೆಲ್ಲಾ ಮೆರವಣಿಗೆ ಮಾಡಿ ಅಂತ್ಯ ಸಂಸ್ಕಾರ ಕಾರ್ಯ ಮಾಡುವುದನ್ನು ನೋಡಿದ್ದೇವೆ. ಆದರೆ ಇಲ್ಲೊಂದು ರೈತ ಕುಟುಂಬ ಮನೆಯಲ್ಲಿ 27 ವರ್ಷಗಳ ಕಾಲ ಸಾಕಷ್ಟು ದುಡಿದ ಎತ್ತು ಸಾವನ್ನಪ್ಪಿದ ನಂತರ ಅದ್ಧೂರಿ ಮೆರವಣಿಗೆ ಮಾಡಿ ವಿಧಿ ವಿಧಾನದ ಮೂಲಕ ಅಂತ್ಯಕ್ರೀಯೆ ನೆರವೇರಿಸಿದೆ.

    ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ರೈತ ಅಶೋಕ ಗಾಮನಗಟ್ಟಿ ಅವರ ಕುಟುಂಬ ತಮ್ಮ ಮನೆಯಲ್ಲಿಯೇ ಜನಸಿದ ಕರುವಿಗೆ ರಾಮ ಎಂದು ನಾಮಕರಣ ಮಾಡಿ ಪ್ರತಿವರ್ಷ ಹುಟ್ಟು ಹಬ್ಬವನ್ನು ಆಚರಣೆ ಮಾಡುವ ಮೂಲಕ ಮನೆಯ ಸದಸ್ಯರಲ್ಲಿ ಒಬ್ಬನಂತೆ ನೋಡುತ್ತಿದ್ದರು. ಆದರೆ ಮನೆಯ ಮಗನಂತೆ ಜೋಪಾನ ಮಾಡಿ, 27 ವರ್ಷಗಳ ಕಾಲ ದುಡಿದ ರಾಮ ಇಂದು ಸಾವನ್ನಪ್ಪಿದ ಪರಿಣಾಮ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಹಲವು ವರ್ಷಗಳ ಕಾಲ ಮನೆಯ ಸದಸ್ಯನಾಗಿ ಜಮೀನಿನಲ್ಲಿ ದುಡಿದ ರಾಮ, ಸಾವನಪ್ಪಿದ ಪರಿಣಾಮ ರೈತನ ಕುಟುಂಬ ಸಕಲ ವಾದ್ಯ ಮೇಳದೊಂದಿಗೆ ಊರಲ್ಲಿ ಮೆರವಣಿಗೆ ಮಾಡಿ, ವಿಧಿ ವಿಧಾನಗಳ ಮೂಲಕ ರಾಮನ ಅಂತ್ಯ ಸಂಸ್ಕಾರ ನೆರವೇರಿಸಿ ಮೂಕಪ್ರಾಣಿಗೆ ವಿಶಿಷ್ಟವಾಗಿ ಗೌರವ ಸಲ್ಲಿಸಿದ್ದಾರೆ.

    ಎತ್ತಿನ ಜೊತೆಗೆ ರೈತ ಕುಟುಂಬ ಉತ್ತಮ ಬಾಂಧವ್ಯ ಹೊಂದಿದ್ದನ್ನು ಕಂಡ ಗ್ರಾಮಸ್ಥರಲ್ಲಿಯೂ ರಾಮನ ಸಾವು ಶೋಕವನ್ನುಂಟು ಮಾಡಿದೆ. ಹೀಗಾಗಿ ರಾಮ ಎನ್ನುವ ಎತ್ತಿನ ಅಂತ್ಯಸಂಸ್ಕಾರದಲ್ಲಿ ಗ್ರಾಮಸ್ಥರೂ ಪಾಲ್ಗೊಂಡು ರಾಮ ಅಮರ್ ರಹೇ ಎಂದು ಘೋಷಣೆ ಕೂಗಿದ್ದು, ರೈತನಿಗೆ ಜಾನುವಾರುಗಳ ಮೇಲಿನ ಪ್ರೀತಿ ಅದೆಷ್ಟು ಗಾಢ ಎನ್ನುವುದನ್ನು ಸಾರಿಸಾರಿ ಹೇಳುವಂತಿತ್ತು.