Tag: Farmers Day

  • ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!

    ರೈತರನ್ನು ಬೆಂಬಲಿಸಿ ಮಧ್ಯಾಹ್ನದ ಊಟ ತ್ಯಜಿಸಿದ ಸ್ಯಾಂಡಲ್‍ವುಡ್ ಕ್ವೀನ್!

    ಬೆಂಗಳೂರು: ಇಂದು ರಾಷ್ಟ್ರವ್ಯಾಪಿ ರೈತರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕಾರಣಿಗಳು, ಸೆಲೆಬ್ರಿಟಿಗಳು ಸೇರಿದಂತೆ ಎಲ್ಲರೂ ರೈತರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ. ಈ ನಡುವೆ ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ ಅವರು ವಿಶೇಷವಾಗಿ ರೈತರನ್ನು ಬೆಂಬಲಿಸುವ ಮೂಲಕ ಅವರಿಗೆ ಶುಭಾಶಯ ತಿಳಿಸಿದ್ದಾರೆ.

    ಹೌದು, ಮೋಹಕ ತಾರೆ ರಮ್ಯಾ ಅವರು ಇಂದು ಮಧ್ಯಾಹ್ನದ ಊಟವನ್ನು ತ್ಯಜಿಸುವ ಮೂಲಕ ರೈತರಿಗೆ ತಮ್ಮ ಸಂಪೂರ್ಣ ಬೆಂಬಲ ನೀಡಿದ್ದಾರೆ. ಈ ಸಂಬಂಧ ಇನ್‍ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿರುವ ದಿವ್ಯ ಸ್ಪಂದನ, ಕಿಸಾನ್ ದಿವಸವಾಗಿರುವ ಇಂದು ರೈತರಿಗೆ ಬೆಂಬಲ ಸೂಚಿಸುವ ಹಿನ್ನೆಲೆಯಲ್ಲಿ ನಾನು ಮಧ್ಯಾಹ್ನ ಊಟವನ್ನು ತ್ಯಜಿಸುತ್ತಿದ್ದೇನೆ. ಕೇಂದ್ರದ ಕೃಷಿ ನೀತಿಯನ್ನು ವಿರೋಧಿಸಿ ರೈತರು ಆಗಸ್ಟ್ 9ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಮೋದಿ ಸರ್ಕಾರ ಮಾತ್ರ ನಿಶ್ಚಿಂತೆತೆಯಿಂದ ಇದ್ದು, ಕಾನೂನು ರದ್ದುಗೊಳಿಸಲು ನಿರಾಕರಿಸಿದೆ. ಮೋದಿ ಸರ್ಕಾರ ರೈತರ ಪರ ಇರುವ ಬದಲು ತಮ್ಮ ಕಾರ್ಪೋರೇಟ್ ಸ್ನೇಹಿತರನ್ನು ಮಾತ್ರ ಬೆಂಬಲಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

    ಮತ್ತೊಂದು ಪೋಸ್ಟ್ ನಲ್ಲಿ, ಉತ್ತರಪ್ರದೇಶದಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕೈಟ್ ಅವರು, ದೇಶಾದ್ಯಂತ ರೈತರ ದಿನದಂದು ಮಧ್ಯಾಹ್ನ ಊಟವನ್ನು ತ್ಯಜಿಸಬೇಕು ಎಂದು ಕರೆ ನೀಡಿದ್ದಾರೆ. ಮೋದಿ ಸರ್ಕಾರದ ರೈತ ವಿರೋಧಿ ನೀತಿಯಿಂದ ಇಡೀ ದೇಶಕ್ಕೆ ಅನ್ನ ನೀಡುವ ಅನ್ನದಾತರು ಇಂದು ಹಸಿದಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರ ದಿನಾಚರಣೆಯಂದು ಮನೆಯಲ್ಲಿ ಅಡುಗೆ ಮಾಡದೆ ರೈತರಿಗೆ ಬೆಂಬಲ ನೀಡಿ ಎಂದು ಹೇಳಿರುವುದಾಗಿ ರಮ್ಯಾ ಬರೆದುಕೊಂಡಿದ್ದಾರೆ.

    ನಟ ದರ್ಶನ್ ಕೂಡ ರೈತರ ದಿನಾಚರಣೆಯ ಪ್ರಯುಕ್ತ ಶುಭಾಶಯ ತಿಳಿಸಿದ್ದು, ರೈತರು ನಿಜವಾದ ವೀರರಾಗಿದ್ದಾರೆ ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ. ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ದೇಶದ 5ನೇ ಪ್ರಧಾನಿ ಮತ್ತು ರೈತ ನಾಯಕ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿವರ್ಷ ರಾಷ್ಟ್ರೀಯ ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ. ಚರಣ್ ಸಿಂಗ್ ರವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದಾರೆ. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಅವರು ಸ್ವತಹಃ ರೈತ ಕುಟುಂಬಕ್ಕೆ ಸೇರಿದವರಾಗಿದ್ದರಿಂದ ರೈತರ ಕಷ್ಟಗಳನ್ನು ಅರಿತವರಾಗಿದ್ದರು. ಒಟ್ಟಿನಲ್ಲಿ ಭಾರತದ ಗ್ರಾಮೀಣ ಜನಸಂಖ್ಯೆಯ ಶೇ.80 ಕ್ಕಿಂತ ಹೆಚ್ಚು ಜನರಿಗೆ ಕೃಷಿಯೇ ಆದಾಯದ ಮುಖ್ಯ ಮೂಲವಾಗಿದೆ. ರೈತ ದಿನ ಅಥವಾ ರಾಷ್ಟ್ರೀಯ ರೈತ ದಿನಾಚರಣೆ ಅಥವಾ ಕಿಸಾನ್ ದಿವಸ್ ಅನ್ನು ಪ್ರತಿವರ್ಷ ಡಿಸೆಂಬರ್ 23 ರಂದು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ.

  • ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ- ರೈತರಿಗೆ ದರ್ಶನ್ ಶುಭಾಶಯ

    ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ- ರೈತರಿಗೆ ದರ್ಶನ್ ಶುಭಾಶಯ

    ಬೆಂಗಳೂರು: ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಇಂದು ರೈತರ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೈತರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

    ಈ ಸಂಬಂಧ ತಮ್ಮ ಫೇಸ್‍ಬುಕ್ ಲ್ಲಿ ಬರೆದುಕೊಂಡಿರುವ ದಾಸ, ರೈತರ ಕಠಿಣ ಶ್ರಮಕ್ಕೆ ಧನ್ಯವಾದಗಳನ್ನು ಧನ್ಯವಾದಗಳನ್ನು ಸಮರ್ಪಿಸೋಣ ಎಂದು ಕರೆ ನೀಡಿದ್ದಾರೆ.

    ದರ್ಶನ್ ಹೇಳಿದ್ದೇನು..?
    ರೈತರು ನಿಜವಾದ ವೀರರಾಗಿದ್ದಾರೆ ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ, ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ ಅವರು ತಮ್ಮ ಹೃದಯ ಮತ್ತು ಆತ್ಮವನ್ನು ಮಣ್ಣಿನಲ್ಲಿ ಇರಿಸಿ ಅದನ್ನು ಜೀವಿಸಲು ಮತ್ತು ನಮಗೆ ಆಹಾರವನ್ನು ಕೊಡುತ್ತಾರೆ. ಅವರ ಪ್ರಯತ್ನಕ್ಕೆ ಧನ್ಯವಾದಗಳು ಮತ್ತು ಅವರ ಕಠಿಣ ಪರಿಶ್ರಮಕ್ಕೆ ನಮಸ್ಕರಿಸೋಣ. ರೈತ ದಿನಾಚರಣೆಯ ಶುಭಾಶಯಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ದೇಶದ 5ನೇ ಪ್ರಧಾನಿ ಮತ್ತು ರೈತ ನಾಯಕ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವಾದ ಡಿಸೆಂಬರ್ 23 ರಂದು ಪ್ರತಿವರ್ಷ ರಾಷ್ಟ್ರೀಯ ರೈತ ದಿನವನ್ನಾಗಿ ಆಚರಿಸಲಾಗುತ್ತಿದೆ. ಚರಣ್ ಸಿಂಗ್ ರವರು ತಮ್ಮ ಅವಧಿಯಲ್ಲಿ ದೇಶದ ಅನ್ನದಾತರ ಸಾಮಾಜಿಕ ಹಾಗೂ ಆರ್ಥಿಕ ಸಬಲೀಕರಣಕ್ಕಾಗಿ ಹತ್ತಾರು ನೀತಿಗಳನ್ನು ಜಾರಿಗೆ ತಂದಿದ್ದಾರೆ. ಆಧುನಿಕ ಕೃಷಿ ಪದ್ಧತಿ ಅಳವಡಿಕೆಗೆ ಪ್ರೋತ್ಸಾಹ ನೀಡಿದ್ದರು. ಅವರು ಸ್ವತಹಃ ರೈತ ಕುಟುಂಬಕ್ಕೆ ಸೇರಿದವರಾಗಿದ್ದರಿಂದ ರೈತರ ಕಷ್ಟಗಳನ್ನು ಅರಿತವರಾಗಿದ್ದರು. ಸ್ವಾತಂತ್ರ್ಯ ಪೂರ್ವದಿಂದ ಸ್ವಾತಂತ್ಯ್ರ ನಂತರದವರೆಗೂ ಕೃಷಿಗೆ ಅವರ ಕೊಡುಗೆ ಅಪಾರವಾಗಿದೆ.

    ಭಾರತದ ಗ್ರಾಮೀಣ ಜನಸಂಖ್ಯೆಯ ಶೇ.80 ಕ್ಕಿಂತ ಹೆಚ್ಚು ಜನರಿಗೆ ಕೃಷಿಯೇ ಆದಾಯದ ಮುಖ್ಯ ಮೂಲವಾಗಿದೆ. ರೈತ ದಿನ ಅಥವಾ ರಾಷ್ಟ್ರೀಯ ರೈತ ದಿನಾಚರಣೆ ಅಥವಾ ಕಿಸಾನ್ ದಿವಸ್ ಅನ್ನು ಪ್ರತಿವರ್ಷ ಡಿಸೆಂಬರ್ 23 ರಂದು ರಾಷ್ಟ್ರವ್ಯಾಪಿ ಆಚರಿಸಲಾಗುತ್ತದೆ.

     

  • ರೇಷ್ಮೆನಗರಿ ರೈತರ ದಿನಾಚರಣೆ – ಮುಂದಿನ ವರ್ಷ ಸರ್ಕಾರದಿಂದ ಆಚರಿಸುವಂತೆ ರೈತರ ಆಗ್ರಹ

    ರೇಷ್ಮೆನಗರಿ ರೈತರ ದಿನಾಚರಣೆ – ಮುಂದಿನ ವರ್ಷ ಸರ್ಕಾರದಿಂದ ಆಚರಿಸುವಂತೆ ರೈತರ ಆಗ್ರಹ

    ರಾಮನಗರ: ರಾಜ್ಯದಲ್ಲಿ ಜಾತಿಗೊಂದು ಜಯಂತಿಯನ್ನು ಆಚರಿಸಲಾಗುತ್ತಿದೆ. ಆದರೆ ವರ್ಷಕೊಮ್ಮೆಯಾದರೂ ಅನ್ನದಾತರನ್ನ ನೆನೆಯುವ ಕಾಯಕವನ್ನ ಸರ್ಕಾರ ಮಾಡುತ್ತಿಲ್ಲ. ಹೀಗಾಗಿ ಸರ್ಕಾರ ಮುಂದಿನ ವರ್ಷದಿಂದ ರೈತ ದಿನವನ್ನು ಆಚರಿಸಬೇಕು ಎಂದು ರಾಮನಗರದ ರೈತ ಮುಖಂಡರು ಆಗ್ರಹಿಸಿದ್ದಾರೆ.

    ರೈತರ ದಿನಾಚರಣೆಯನ್ನ ಜಿಲ್ಲೆಯ ಹಲವೆಡೆ ಸಂಭ್ರಮದಿಂದ ರೈತರು ಆಚರಿಸಿದ್ರು. ರಾಮನಗರದ ಎಪಿಎಂಸಿ ಮಾರುಕಟ್ಟೆ, ರೇಷ್ಮೆಗೂಡು ಮಾರುಕಟ್ಟೆ, ಮಾಗಡಿಯ ಕೆಂಪೇಗೌಡ ಕೋಟೆ ಆವರಣ, ಹಾರೋಹಳ್ಳಿ ಸೇರಿದಂತೆ ಹಲವೆಡೆ ಕರ್ನಾಟಕ ಪ್ರಾಂತ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಆಚರಿಸಿದರು.

    ರೇಷ್ಮೆ ಗೂಡು ಮಾರುಕಟ್ಟೆ ಆವರಣದಲ್ಲಿ ಜಿಲ್ಲಾ ರೇಷ್ಮೆ ಬೆಳೆಗಾರರ ಹಿತ ರಕ್ಷಣಾ ಸಮಿತಿ ಹಾಗೂ ಜಯ ಕರ್ನಾಟಕ ಸಂಘಟನೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ರೈತ ದಿನಾಚರಣೆಯಲ್ಲಿ ರೈತ ಮುಖಂಡ ಲಕ್ಷ್ಮಣ ಸ್ವಾಮಿ ಅವರು ಮಾತನಾಡಿ, ವಿಶ್ವದಲ್ಲಿ ಬೇರೆಲ್ಲಾ ದಿನಾಚರಣೆಗಳಿಗಿಂತ ರೈತ ದಿನಾಚರಣೆಗೆ ಎಲ್ಲರೂ ಹೆಚ್ಚಿನ ಮಹತ್ವ ನೀಡಬೇಕಿದೆ. ರೈತ ದೇಶ ಮಾತ್ರವಲ್ಲ, ಮನುಕುಲದ ಬೆನ್ನೆಲುಬು. ಇದೇ ಕಾರಣಕ್ಕೆ ರೈತ ಬಿತ್ತದಿದ್ದರೆ ಬಿಕ್ಕುವುದು ಜಗವೆಲ್ಲಾ ಎಂಬ ನಾಣ್ಣುಡಿ ಬಂದಿದೆ. ಆತನ ಶ್ರಮದಿಂದಲೇ ನಾವೆಲ್ಲಾ ಇಂದು ನಿರಂತರವಾಗಿ ಆಹಾರ ದಕ್ಕಿಸಿಕೊಳ್ಳುತ್ತಿದ್ದೇವೆ. ಬೆಳೆ ಬೆಳೆಯುವ ರೈತರನ್ನು ಹಾಗೂ ಅವರ ಕುಟುಂಬವನ್ನು ಗೌರವ ಭಾವದಿಂದ ಕಾಣಬೇಕು. ಕೃಷಿಕರ ನೆರವಿಗೆ ವಿಶಿಷ್ಟ ಯೋಜನೆ ರೂಪಿಸಿ ನೆರವಾಗಬೇಕು. ಸಾಲಮನ್ನಾ ಮಾಡಿ, ಕಡಿಮೆ ಬಡ್ಡಿ ದರದಲ್ಲಿ ಹೊಸ ಸಾಲ ವಿತರಿಸಬೇಕು. ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ರೈತರ ಏಳಿಗೆಗೆ ಬ್ಯಾಂಕ್‍ಗಳು ಕೈಜೋಡಿಸಬೇಕು ಎಂದರು.

    ಬೆಂಗಳೂರು ವಲಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕುಮಾರ್ ಅವರು ಮಾತನಾಡಿ, ಸಮಗ್ರ ಕೃಷಿಯಲ್ಲಿ ತಾಂತ್ರಿಕ ಅಂಶಗಳನ್ನು ಅಳವಡಿಸಿಕೊಳ್ಳಲು ರೈತರೇ ವಿಜ್ಞಾನಿಗಳಾಬೇಕು. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲ ಎರಡು ಸಾವಿರ ಅಡಿ ತಲುಪಿದರೂ ರೇಷ್ಮೆ ಮತ್ತು ಮಾವು ಬೆಳೆಯಲ್ಲಿ ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದುಕೊಂಡಿದೆ ಎಂದು ಹೇಳಿದರು.

    ರಾಮನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರಿಗೆ ಕುಮಾರಣ್ಣ ಅಭಿಮಾನಿಗಳ ಬಳಗದಿಂದ ತೆಂಗಿನ ಸಸಿಗಳನ್ನು ವಿತರಣೆ ಮಾಡುವ ಮೂಲಕ ರೈತರಿಗೆ ಶುಭಾಶಯ ಕೋರಿ, ಮಾರುಕಟ್ಟೆಯ ಜೊತೆ ಉತ್ತಮ ಒಡನಾಟ ಇಟ್ಟುಕೊಂಡಿರುವ ರೈತರ ನೆರವಿಗೆ ನಿಲ್ಲುವ ರೈತ ಮುಖಂಡರು ಹಾಗೂ ಮಾದರಿ ರೈತರನ್ನು ಸನ್ಮಾನಿಸಲಾಯಿತು.

    ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ, ಹಾಲಿ ಶಾಸಕ ಎ.ಮಂಜುನಾಥ್ ಸಹ ಭಾಗಿಯಾಗಿ, ಪ್ರಗತಿಪರ ರೇಷ್ಮೆ ಬೆಳೆಗಾರರನ್ನು, ರೈತ ಮುಖಂಡರನ್ನ, ಉದೋನ್ಮುಖ ರೈತರು, ಮಾದರಿ ರೈತರನ್ನ ಸನ್ಮಾನಿಸಿದರು.

  • ವಿಶೇಷವಾಗಿ ರೈತ ದಿನಾಚರಣೆ ಆಚರಿಸಿದ ಅನ್ನದಾತರು

    ವಿಶೇಷವಾಗಿ ರೈತ ದಿನಾಚರಣೆ ಆಚರಿಸಿದ ಅನ್ನದಾತರು

    ಚಿಕ್ಕೋಡಿ: ಕಾಯಕವೇ ಕೈಲಾಸ ಎಂಬಂತೆ ಕಬ್ಬು ನಾಟಿ ಮಾಡಿ, ಎತ್ತುಗಳೊಂದಿಗೆ ಹೊಲದಲ್ಲಿಯೇ ರೈತರ ದಿನಾಚಾರಣೆಯನ್ನು ಆಚರಿಸುವ ಮೂಲಕ ರೈತರು ಇತರರಿಗೆ ಮಾದರಿಯಾಗಿದ್ದಾರೆ.

    ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೆಳಕೂಡ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಉನ್ನತಿ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಕಬ್ಬು ನಾಟಿ ಮಾಡುವ ಮೂಲಕ ವಿಶಿಷ್ಟವಾಗಿ ರೈತ ದಿನ ಆಚರಿಸಲಾಯಿತು.

    ದಿನಾಚಣೆಯ ಅಂಗವಾಗಿ ಪಾಶ್ಚಾಪೂರೆ ಅವರ ತೋಟದಲ್ಲಿ ಎತ್ತುಗಳಿಗೆ ವಿಶೇಷ ಪೂಜೆ ಮಾಡಿ, ನಂತರ ಕಬ್ಬು ನಾಟಿ ಮಾಡಲಾಯಿತು. ಪ್ರತ್ಯೇಕ ವೇದಿಕೆ ನಿರ್ಮಿಸದೆ ನೆಲದ ಮೇಲೆಯೇ ಕುಳಿತು ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ರೈತ ಸಾಧಕರಾದ ಕಾಶೀನಾಥ ಪಾಶ್ಚಾಪೂರೆ, ಅಪ್ಪಾಸಾಬ ತಬಕೆರೆ, ರಾಜೇಂದ್ರ ಪಾಶ್ವಾಪೂರೆ, ಸಿದ್ಧಲಿಂಗ ಪಾಶ್ಚಾಪೂರೆ ಅವರಿಗೆ ಶಾಲು ಹೊದಿಸಿ, ಮೆಕ್ಕೆ ಜೋಳದ ತೆನೆ ನೀಡಿ ಸನ್ಮಾನಿಸಲಾಯಿತು. ಅಲ್ಲದೆ ರೈತರೆಲ್ಲರೂ ನೆಲದ ಮೇಲೆಯೇ ಕುಳಿತು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

    ರೈತ ದಿನಾಚರಣೆ ಎಂದು ಕೈ ಕಟ್ಟಿ ಕೂರದೆ, ದಿನಾಚರಣೆ ನೆಪದಲ್ಲಿ ಸಮಯ, ದಿನ ವ್ಯರ್ಥ ಮಾಡದೆ, ಕಾರ್ಯಕ್ರಮದ ನಂತರ ಉಳಿಮೆ ಮಾಡುವ ಕೆಲಸದಲ್ಲಿ ತೊಡಗಿದರು. ದೈನಂದಿನ ಕೆಲಸ ಮಾಡುತ್ತಲೇ ಆಚರಣೆ ಮಾಡುವ ಮೂಲಕ ಇತರರಿಗೆ ಮಾದರಿಯಾದರು.

  • ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ರೈತ ದಿನಾಚರಣೆ ಆಚರಿಸಿದ ಅನ್ನದಾತರು

    ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ ರೈತ ದಿನಾಚರಣೆ ಆಚರಿಸಿದ ಅನ್ನದಾತರು

    ಹಾವೇರಿ: ರೈತರು ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸುವ ಮೂಲಕ  ರೈತ ದಿನಾಚಾರಣೆಯನ್ನು ಆಚರಿಸಿದ್ದಾರೆ.

    ನಗರದ ಜಿಲ್ಲಾ ಆಸ್ಪತ್ರೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ರೈತ ಮುಖಂಡನಾದ ಸುರೇಶ್ ಚಲವಾದಿ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಿನ ರೋಗಿಗಳಿಗೆ ಹಣ್ಣುಗಳನ್ನು ವಿತರಿಸುವ ಮೂಲಕ ರೈತ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ.

    ಈ ವೇಳೆ ಮಾತನಾಡಿದ ಸುರೇಶ್ ಚಲವಾದಿ, ಜಗತ್ತಿನ ನಾಗರಿಕತೆ ಆರಂಭದಿಂದ ಹಿಡಿದು ಪೂರ್ವಜರ ಕಾಲಕ್ಕೂ ಮತ್ತು ಇಂದಿಗೂ ಈ ಜೀವನ ನಿಂತಿರುವುದು ವ್ಯವಸಾಯದಿಂದ. ನಾವೆಲ್ಲಾ ಬದುಕಿ ಬೆಳೆದಿದ್ದು ರೈತರಿಂದ, ನಾವಿಲ್ಲದೇ ದೇಶದಲ್ಲಿ ಯಾವ ಒಂದು ಶಕ್ತಿ ಕೂಡ ಮುಂದುವರಿಯಲೂ ಸಾಧ್ಯವಿಲ್ಲ ಎಂದರು.

    ಈ ದೇಶದ ಇತ್ತೀಚಿನ ಆಡಳಿತ ಹುನ್ನಾರದಿಂದ ರೈತರಿಗೆ ಅನ್ಯಾಯವಾಗುತ್ತಿದೆ. ಇದಕ್ಕೆಲ್ಲಾ ರೈತರ ತಾಳ್ಮೆ , ಮುಗ್ಧತೆ, ಒಗ್ಗಟ್ಟಿನ ಕೊರತೆ ಕಾರಣ. ಆದ್ದರಿಂದ ರೈತರು ಇನ್ನಾದರೂ ಎಚ್ಚೆತ್ತುಕೊಂಡು ದೇಶದಲ್ಲಿ ರೈತಪರ ನಾಯಕರನ್ನು ಆಯ್ಕೆ ಮಾಡಬೇಕು. ಇಲ್ಲದಿದ್ದರೇ ಬ್ರಿಟಿಷರ ಕಾಲದಲ್ಲಿದ್ದ ಗುಲಾಮಗಿರಿ ಮರಳಿ ಬಂದರೆ ಆಶ್ವರ್ಯ ಪಡಬೇಕಿಲ್ಲ ಎಂದು ಈಗಿನ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಜಾವಗಲ್ಲ, ಶಿವಬಸಪ್ಪ ಗೋವಿ, ಹಾಲೇಶ ಕೇರೂಡಿ, ಸೇರಿದಂತೆ ಇನ್ನೂ ಮುಂತಾದವರು ಭಾಗವಹಿಸಿದ್ದರು.

  • ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನಿಗೆ ಸುರೇಶ್ ಕುಮಾರ್ ಸನ್ಮಾನ

    ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತನಿಗೆ ಸುರೇಶ್ ಕುಮಾರ್ ಸನ್ಮಾನ

    ಹಾವೇರಿ: ಇವತ್ತು ರಾಷ್ಟ್ರೀಯ ರೈತರ ದಿನಾಚರಣೆ ದಿನ. ವರ್ಷವಿಡೀ ಕೆಲಸ ಮಾಡುವ ಅನ್ನದಾತರ ದಿನ. ಅದೆಷ್ಟು ರೈತರಿಗೆ ರೈತ ದಿನ ಅನ್ನೋದು ಗೊತ್ತಿಲ್ಲ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜಮೀನಿನಲ್ಲಿ ಕೆಲಸ ಮಾಡುವ ರೈತನಿಗೆ ಸನ್ಮಾನ ಮಾಡಿ ಗೌರವಿಸಿದ್ದಾರೆ.

    ಸುರೇಶ್ ಕುಮಾರ್ ಹಾವೇರಿ ತಾಲೂಕು ನೆಲೋಗಲ್ಲ ಗ್ರಾಮದ ಪ್ರೌಢ ಶಾಲೆಗೆ ಹೋಗುತ್ತಿದ್ದರು. ಈ ವೇಳೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಚನ್ನಬಸನಗೌಡ ಹೊಂಬರಡಿಗೆ ಶಾಲು ಹೊದಿಸಿ ನಮನ ಸಲ್ಲಿಸಿದ್ದಾರೆ. ಅಲ್ಲದೆ ಆ ಪೋಟೋವನ್ನ ತಮ್ಮ ಫೇಸ್‍ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ರೈತರು ಚೆನ್ನಾಗಿದ್ರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತೆ: ದರ್ಶನ್

    ಜೊತೆಗೆ “ಧಾರವಾಡಕ್ಕೆ ನನ್ನ ಇಲಾಖೆಯ ಕಾರ್ಯಾಗಾರದ ನಿಮಿತ್ತ ಹೊರಟಿದ್ದೆ. ದಾರಿಯ ಪಕ್ಕದಲ್ಲಿ ಈ ‘ಅನ್ನದಾತ’ ಕಣ್ಣಿಗೆ ಬಿದ್ದರು. ನೆಲೋಗಲ್ ಗ್ರಾಮದ ರೈತ ಚನ್ನಬಸನಗೌಡ ಹೊಂಬರಡಿ ಅವರಿಗೆ ‘ರೈತರ ದಿನ’ ದಂದು ಗೌರವ ಸಲ್ಲಿಸಿ ಮುಂದಕ್ಕೆ ಹೊರಟೆ” ಎಂದು ಬರೆದುಕೊಂಡಿದ್ದಾರೆ. ಸಚಿವ ಸುರೇಶ್ ಕುಮಾರ್ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.