Tag: Farmers’ Loan Waiver

  • ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಬೆಂಗಳೂರು: ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಲು ಆದೇಶ ಹೊರಡಿಸಲು ಸಾಧ್ಯವಿಲ್ಲ ಎಂದು ಸಹಕಾರ ಸಚಿವ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಸಾಲಮನ್ನಾ ಸಾಧ್ಯವಿಲ್ಲ ಎಂದಿದ್ದಾರೆ.

    ಕೋವಿಡ್‍ನಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು. ಈಗಾಗಲೇ ರೈತರ ಮನೆಯಲ್ಲಿ ದೀಪ ಹಾರಿ ಹೋಗಿದೆ. ಹೀಗಾಗಿ ಸರ್ಕಾರ ಕೊರೊನಾದಿಂದ ಮೃತರಾದ ರೈತರ ಸಾಲಮನ್ನಾ ಮಾಡಬೇಕು ಅಂತ ಒತ್ತಾಯ ಬಿಜೆಪಿ ಸದಸ್ಯ ಮುನಿರಾಜುಗೌಡ ಒತ್ತಾಯ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವ ಸೋಮಶೇಖರ್, ರಾಜ್ಯದಲ್ಲಿ 1-2 ಕೊರೊನಾ ಅಲೆಯಲ್ಲಿ ಮೃತಪಟ್ಟ ರೈತರ ಪೈಕಿ 10,437 ರೈತರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಗ್ರಾಮೀಣಾಭಿವೃದ್ಧಿ ಗಳಲ್ಲಿ ಸಾಲ ಪಡೆದಿರುತ್ತಾರೆ. ಮೃತರಾದ ರೈತರ ಸಾಲದ ಮೊತ್ತ 91.97 ಕೋಟಿ ಇದೆ ಅಂತ ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ, ನಮ್ಮ ದೇಶಭಕ್ತಿ ಗೆಲ್ಲುತ್ತೆ: ಝೆಲೆನ್ಸ್ಕಿ

    ಕೊರೊನಾದಿಂದ ಮೃತರಾದ ರೈತರು ಸಹಕಾರ ಸಂಘಗಳಲ್ಲಿ ಪಡೆದಿದ್ದ ಸಾಲಮನ್ನಾ ಮಾಡುವ ಆದೇಶ ಇಲಾಖೆ ಹೊರಡಿಸಿಲ್ಲ. ಕೊರೊನಾದಿಂದ ಮೃತಪಟ್ಟ ರೈತರು ಸೇರಿದಂತೆ ಎಲ್ಲಾ ಕುಟುಂಬಕ್ಕೆ 1.5 ಲಕ್ಷ ಆರ್ಥಿಕ ಸಹಾಯ ಸರ್ಕಾರದಿಂದ ಮಾಡಲಾಗಿದೆ. ರೈತರು ಸಾಲ ಮರುಪಾವತಿ ಮಾಡಲು ಕಂತು ಅವಧಿ ವಿಸ್ತರಣೆ ಮಾಡಲಾಗಿದೆ. ಬಡ್ಡಿ ಸಹಾಯಧನವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯು ಕೊರೊನಾದಿಂದ ಮೃತಪಟ್ಟ ರೈತರ ವಾರಸುದಾರರಿಗೂ ಅನ್ವಯ ಆಗುತ್ತದೆ ಎಂದು ತಿಳಿಸಿದರು. ಇದಲ್ಲದೇ ಲಾಭದಲ್ಲಿರುವ ಡಿಸಿಸಿ ಬ್ಯಾಂಕ್‍ಗಳು ತಮ್ಮಲ್ಲಿರುವ ಹಣವನ್ನು ಮೃತ ರೈತ ಸಾಲಮನ್ನಾಗೆ ಬಳಕೆ ಮಾಡಲು ಓರಲ್ ಆಗಿ ಅನುಮತಿ ನೀಡಲಾಗಿದೆ ಎಂದರು. ಇದನ್ನೂ ಓದಿ: ವಸತಿ ಕಟ್ಟಡಗಳ ಮೇಲೆ ಎಕ್ಸ್ ಗುರುತಿನ ಚಿಹ್ನೆ- ಕಟ್ಟಡ ತೊರೆಯುವಂತೆ ಅಧಿಕಾರಿಗಳ ಸೂಚನೆ

  • ಲಕ್ಷಕ್ಕೂ ಹೆಚ್ಚು ರೈತರಿಗಿಲ್ಲ ಸಾಲಮನ್ನಾ ಸೌಲಭ್ಯ

    ಲಕ್ಷಕ್ಕೂ ಹೆಚ್ಚು ರೈತರಿಗಿಲ್ಲ ಸಾಲಮನ್ನಾ ಸೌಲಭ್ಯ

    ಬೆಂಗಳೂರು: ಬಹು ಚರ್ಚಿತ ಸಾಲ ಮನ್ನಾ ಯೋಜನೆಯಿಂದ 1.10 ಲಕ್ಷ ರೈತರಿಗೆ ಕೊಕ್ ನೀಡಲಾಗಿದೆ. 1.10 ಲಕ್ಷ ರೈತರನ್ನು ಸಾಲ ಮನ್ನಾ ಯೋಜನೆಯಿಂದ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. ಇದಕ್ಕೆ ಕಾರಣ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಭೂ ದಾಖಲೆಗಳಲ್ಲಿನ ಲೋಪ.

    ಸಾಲ ಮನ್ನಾ ಯೋಜನೆಗಾಗಿ ರೈತರು ಕಡ್ಡಾಯವಾಗಿ ಈ ಮೂರು ದಾಖಲೆಗಳನ್ನು ಸಲ್ಲಿಸಲೇಬೇಕಾಗಿತ್ತು. ದಾಖಲೆಗಳಲ್ಲಿನ ಲೋಪದೋಷದ ಕಾರಣ ಸಾಲಮನ್ನಾ ಯೋಜನೆಯಿಂದ ಕೈಬಿಡಲಾಗಿದೆ ಎಂದು ಆರ್ಥಿಕ ಇಲಾಖೆ ಅಧಿಕಾರಿಗಳ ಸ್ಪಷ್ಟನೆಯಾಗಿದೆ.

    ರೈತರನ್ನು ಜನವರಿಯೊಳಗೆ ಸಂಪರ್ಕಿಸಿ ಅರ್ಹರಾಗಿದ್ದರೆ ಅವರನ್ನು ಪರಿಗಣಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ನೀಡಿದ್ದ ಗಡುವು ಮುಕ್ತಾಯ ಹಿನ್ನೆಲೆ 1.10 ಲಕ್ಷ ರೈತರಿಗೆ ಕೊಕ್ ನೀಡಲಾಗಿದೆ. 2019-20ನೇ ಆರ್ಥಿಕ ವರ್ಷದೊಳಗೆ ಸಾಲಮನ್ನಾ ಯೋಜನೆಗೆ ಇತಿಶ್ರೀ ಹಾಡಲು ಸರ್ಕಾರ ನಿರ್ಧರಿಸಿದೆ.

    ಸರ್ಕಾರದ ಅಂಕಿ ಅಂಶದ ಪ್ರಕಾರ ಸಾಲಮನ್ನಾ ಯೋಜನೆಯಡಿ ಈಗಾಗಲೇ ರಾಷ್ಟ್ರೀಯ ಬ್ಯಾಂಕುಗಳಿಗೆ ಸುಮಾರು 6,859 ಕೋಟಿ ರೂ.ಯನ್ನು ಪಾವತಿಸಲಾಗಿದೆ. ಈವರೆಗೆ 9,16,592 ರೈತರ ಖಾತೆಗಳಿಗೆ ಸಾಲದ ಹಣ ಜಮಾ ಆಗಿದೆ. ಫೆಬ್ರವರಿ 14ಕ್ಕೆ ಕೊನೆಯ ಕಂತನ್ನು ಬ್ಯಾಂಕ್ ಗಳಿಗೆ ಸರ್ಕಾರ ಪಾವತಿ ಮಾಡಿದೆ. ಸಹಕಾರ ಬ್ಯಾಂಕುಗಳಿಗೆ ಈವರೆಗೆ ಒಟ್ಟು 7,434 ಕೋಟಿ ರೂ ಪಾವತಿ ಮಾಡಲಾಗಿದೆ.

    ಏಪ್ರಿಲ್ 2009ರಿಂದ ಡಿಸೆಂಬರ್ 2017ರ ವರೆಗೆ ಬೆಳೆ ಸಾಲ ಪಡೆದ ರೈತರ ಸಾಲವನ್ನು ಮನ್ನಾ ಮಾಡಲು ಅಂದಿನ ಸಿಎಂ ಕುಮಾರಸ್ವಾಮಿ ನಿರ್ಧರಿಸಿದ್ದರು. ರಾಷ್ಟ್ರೀಕೃತ ಬ್ಯಾಂಕ್ ಗಳ ಒಂದು ಲಕ್ಷದ ವರೆಗಿನ ಬೆಳೆ ಸಾಲ, ಸಹಕಾರ ಬ್ಯಾಂಕಿನ 1 ಲಕ್ಷ ರೂ. ಸಾಲಮನ್ನಾ ಮಾಡಲು ನಿರ್ಧರಿಸಿದ್ದರು. ಜೊತೆಗೆ ಚಾಲ್ತಿ ಬೆಳೆ ಸಾಲ ಮಾಡಿದ್ದ ರೈತರಿಗೆ 25,000 ರೂ. ಪ್ರೋತ್ಸಾಹ ಕೊಡುವುದಾಗಿ ಘೋಷಿಸಿದ್ದರು. ಸುಮಾರು 42 ಲಕ್ಷ ರೈತರ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಅಂತಿಮವಾಗಿ ಸಾಲಮನ್ನಾ ಯೋಜನೆಯ ಲಾಭ ಪಡೆದ ರೈತರ ಸಂಖ್ಯೆ 25.17 ಲಕ್ಷ ಇತ್ತು. ಸುಮಾರು 46,000 ಕೋಟಿ ರೂ. ಬೆಳೆ ಸಾಲಮನ್ನಾ ಎಂದಿದ್ದ ಯೋಜನೆ ಇದೀಗ ಕೇವಲ 14,293 ಕೋಟಿ ರೂ.ಗೆ ಮಾತ್ರ ಸೀಮಿತವಾಗಿದೆ.

  • ಕೊಟ್ಟ ಮಾತು ಉಳಿಸಿಕೊಳ್ಳದ ರಾಹುಲ್ ಕ್ಷಮೆ ಕೇಳಲಿ- ಕೈ ನಾಯಕ, ದಿಗ್ವಿಜಯ್ ಸಿಂಗ್ ಸಹೋದರ

    ಕೊಟ್ಟ ಮಾತು ಉಳಿಸಿಕೊಳ್ಳದ ರಾಹುಲ್ ಕ್ಷಮೆ ಕೇಳಲಿ- ಕೈ ನಾಯಕ, ದಿಗ್ವಿಜಯ್ ಸಿಂಗ್ ಸಹೋದರ

    ಭೋಪಾಲ್: ಸಾಲ ಮನ್ನಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ಗಾಂಧಿ ಮಾತು ತಪ್ಪಿದ್ದು, ಈ ಕುರಿತು ಜನತೆ ಬಳಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಕಿರಿಯ ಸಹೋದರ ಲಕ್ಷ್ಮಣ್ ಸಿಂಗ್ ಒತ್ತಾಯಿಸಿದ್ದಾರೆ.

    ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ಮಧ್ಯಪ್ರದೇಶದ ರೈತರ ಬಾಕಿ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ನೀಡಿದ್ದ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿದ್ದು, ಹೀಗಾಗಿ ರಾಹುಲ್ ಗಾಂಧಿ ಜನತೆಯ ಬಳಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

    ಭರವಸೆ ಈಡೇರಿಸದೇ ದೂರ ಇರುವುದರಿಂದ ಹಾಗೂ 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡದಿರುವುದರಿಂದ ಕ್ಷಮೆಯಾಚಿಸಬೇಕು. ಇಂತಹ ಭರವಸೆಗಳನ್ನು ನೀಡಬಾರದು. ಭರವಸೆ ನೀಡುವ ಬದಲು ರೈತರ ಸಂಪೂರ್ಣ ಸಾಲವನ್ನು ಯಾವಾಗ ಮನ್ನಾ ಮಾಡಲಾಗುವುದು ಎಂದು ಸಮಯದ ಚೌಕಟ್ಟನ್ನು ನಿಗದಿಪಡಿಸಬೇಕು ಎಂದು ಲಕ್ಷ್ಮಣ್ ಸಿಂಗ್ ಹೇಳಿದ್ದಾರೆ.

    ಕಳೆದ ವರ್ಷ ಜೂನ್‍ನಲ್ಲಿ ರಾಜ್ಯದ ಮಂಡ್‍ಸೌರ್ ಜಿಲ್ಲೆಯಲ್ಲಿ ನಡೆದ ರೈತರ ರ್ಯಾಲಿಯನ್ನುದ್ದೇಶಿಸಿ ಮಾತನಾಡುವಾಗ ರಾಹುಲ್ ಗಾಂಧಿ ಈ ಭರವಸೆ ನೀಡಿದ್ದರು. ಆಗ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ, ರಾಜಸ್ಥಾನ ಮತ್ತು ಚತ್ತಿಸ್‍ಗಢದಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತಂದರೆ ಆಡಳಿತ ವಹಿಸಿಕೊಂಡ 10 ದಿನಗಳಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ತಿಳಿಸಿದ್ದರು.

    ನನ್ನನ್ನೂ ಸೇರಿದಂತೆ ಎಲ್ಲ ಕಾಂಗ್ರೆಸ್ ಶಾಸಕರು ಪ್ರತಿದಿನ ರೈತರನ್ನು ಭೇಟಿಯಾಗುತ್ತೇವೆ. ರಾಜ್ಯ ಸರ್ಕಾರ ಅವರಿಗೆ ಸಾಲ ಮನ್ನಾ ಪತ್ರಗಳನ್ನು ನೀಡಿದ್ದರೂ, ಸಂಬಂಧಪಟ್ಟ ಬ್ಯಾಂಕ್ ಆಡಳಿತದ ಮಟ್ಟದಲ್ಲಿ ಇನ್ನೂ ಸಾಲ ಮನ್ನಾ ಆಗಿಲ್ಲ ಎಂದು ನಮ್ಮ ಬಳಿ ಹೇಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಏನು ಮಾಡಲು ಸಾಧ್ಯ ಎಂದು ಲಕ್ಷಣ್ ಸಿಂಗ್ ಬೇಸರ ವ್ಯಕ್ತಪಡಿಸಿದ್ದಾರೆ.

    ಚಚೋಡಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಲಕ್ಷ್ಮಣ್ ಸಿಂಗ್ ಅವರು, ಕಮಲ್‍ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಸ್ಥಾನಮಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ. ಕಳೆದ ತಿಂಗಳು ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಹ ಅವರು ಹಾಡಿಹೊಗಳಿದ್ದರು.