Tag: Farmers’ Union

  • ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ

    ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ

    ಹಾವೇರಿ: ಜಿಲ್ಲೆಯ ಶಿಗ್ಗಾಂವಿ, ಹಾನಗಲ್ ಮತ್ತು ಬ್ಯಾಡಗಿ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿಕೊಳ್ಳಬೇಕು ಎಂದು ರೈತ ಸಂಘ (Farmers Union) ಒತ್ತಾಯಿಸಿದೆ. ಈ ವಿಚಾರವಾಗಿ ಈ ಮೂರು ಕ್ಷೇತ್ರಗಳ ಶಾಸಕರ ಕಾರ್ಯಕ್ರಮಗಳಿಗೆ ಘೇರಾವ್ ಹಾಕುವಂತೆ ಜನರಿಗೆ ರೈತ ಮುಖಂಡರು ಮನವಿ ಮಾಡಿದ್ದಾರೆ.

    ಜಿಲ್ಲೆಯಲ್ಲಿ (Haveri) ಬರಗಾಲದ ಛಾಯೆ ಆವರಿಸಿದೆ. ಎಂಟು ತಾಲೂಕುಗಳಲ್ಲಿ ಐದನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲಾಗಿದೆ. ಆದರೆ ಮೂರು ತಾಲೂಕುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಬೆಳೆಗಳು ದಿನದಿಂದ ದಿನಕ್ಕೆ ಒಣಗಿ ಹೋಗುತ್ತಿವೆ. ಈಗಾಗಲೇ ರೈತರು ಮೂರು ಬಾರಿ ಬಿತ್ತನೆ ಮಾಡಿ ಕೈಸುಟ್ಟುಕೊಂಡಿದ್ದಾರೆ. ಆದರೆ ಸರ್ಕಾರ ಬರಗಾಲ ಘೋಷಿಸದೆ ವಂಚಿಸಿದೆ ಎಂದು ರೈತ ಸಂಘ ದೂರಿದೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು- ಕಾರಣ ನಿಗೂಢ

    ಈ ವಿಚಾರವನ್ನು ಈ ಮೂರು ಕ್ಷೇತ್ರದ ಶಾಸಕರು ರಾಜ್ಯ ಸರ್ಕಾರದ ಗಮನಕ್ಕೆ ತರಬೇಕು. ಇದಕ್ಕಾಗಿ ಮೂರು ತಾಲೂಕುಗಳ ಶಾಸಕರ ಕಾರ್ಯಕ್ರಮಗಳಿಗೆ ರೈತರು ಘೇರಾವ್ ಹಾಕಬೇಕು. ಶಿಗ್ಗಾಂವಿ ಶಾಸಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಹಾಗೂ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಕಾರ್ಯಕ್ರಮಗಳಿಗೆ ರೈತರು ಘೇರಾವ್ ಹಾಕಬೇಕು. ಈ ಮೂಲಕ ರಾಜ್ಯ ಸರ್ಕಾರಕ್ಕೆ ಸಂದೇಶ ರವಾನಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

    ಬಿತ್ತನೆ ಮಾಡಿರುವ ಬೆಳೆಗಳು ಮಳೆ ಇಲ್ಲದೆ ಹಾಳಾಗಿವೆ. ಇದರಿಂದ ರೈತರು ಸಾಲಕ್ಕೆ ಗುರಿಯಾಗಿದ್ದಾರೆ. ಇದಕ್ಕಾಗಿ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯಿಸಿದೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

    ಭಾರತ್ ಬಂದ್ ದಿನ ಕರ್ನಾಟಕ ಬಂದ್‍ಗೆ ಕರೆ ಕೊಟ್ಟ ರೈತರು- ಯಾರ ಬೆಂಬಲವಿದೆ, ಯಾರದ್ದು ಇಲ್ಲ..?

    ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ಮತ್ತೆ ರೈತರು ರಣಕಹಳೆ ಮೊಳಗಿಸಲಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದೆ. ಭಾರತ್ ಬಂದ್ ದಿನ ಕರ್ನಾಟಕ ಬಂದ್ ಗೆ ರೈತರು ಕರೆಕೊಟ್ಟಿದ್ದಾರೆ.

    ಹೌದು. ಸೋಮವಾರ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಗಳು ಭಾರತ್ ಬಂದ್ ಗೆ ಕರೆಕೊಟ್ಟಿದ್ದು ರಾಜ್ಯದಲ್ಲಿ ಕರ್ನಾಟಕ ಬಂದ್ ಮಾಡೋದಾಗಿ ರೈತ ಸಂಘಟನೆಗಳು ಹೇಳಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಕೋಡಿಹಳ್ಳಿ ಚಂದ್ರಶೇಖರ್ ರಾಜ್ಯದಲ್ಲಿ ಬಂದ್ ನಡೆಸುತ್ತೇವೆ ಎಲ್ಲರ ಬೆಂಬಲ ಕೋರುತ್ತೇವೆ. ಈಗಾಗಲೇ ದಲಿತ ಸಂಘ, ಕಾರ್ಮಿಕ ಸಂಘ ಕೆಲ ಆಟೋ ಸಂಘ ಕನ್ನಡ ಸಂಘಗಳು ಬೆಂಬಲ ಕೊಟ್ಟಿದೆ ಅಂದ್ರು.

    ರೈತ ಸಂಘದ ಪ್ಲಾನ್ ಏನು..?
    ಬೆಂಗಳೂರಿನ ಪ್ರಮುಖ ಹೆದ್ದಾರಿ ಸೇರಿದಂತೆ ರಾಜ್ಯದ್ಯಾಂತ ಹೆದ್ದಾರಿ ತಡೆ. ಬೆಂಗಳೂರಿನಲ್ಲಿ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ರ‍್ಯಾಲಿ. ಒಟ್ಟು 700ಕ್ಕೂ ಹೆಚ್ಚು ಕ್ಯಾಂಟರ್ ವಾಹನದಲ್ಲಿ ನಗರದಲ್ಲಿ ರ‍್ಯಾಲಿ ನಡೆಸಲು ಪ್ಲಾನ್ ಮಾಡಿದ್ದಾರೆ. ಇದನ್ನೂ ಓದಿ: ಭಾರತ-ಅಮೆರಿಕ ಸಂಬಂಧ ವೃದ್ಧಿಗೆ ಬೀಜ ಬಿತ್ತಲಾಗಿದೆ: ಪ್ರಧಾನಿ ಮೋದಿ

    ಕುರುಬೂರು ಶಾಂತಕುಮಾರ್ ಬಣ ಬಂದ್ ದಿನ ಯಾವ ಮಾದರಿಯ ಹೋರಾಟ ನಡೆಸಬೇಕು ಎನ್ನುವ ಬಗ್ಗೆ ಇಂದು ಸಭೆ ನಡೆಸಿ ರೂಪುರೇಷೆ ಹಾಕೋದಾಗಿ ಹೇಳಿದ್ರು. ಕೊರೊನಾ ಕಾರಣದಿಂದ ರೈತರ ಪ್ರತಿಭಟನೆಗೆ ಸಂಘಟನೆಗಳಿಂದ ನಿರೀಕ್ಷಿತ ಬೆಂಬಲ ವ್ಯಕ್ತವಾಗಿಲ್ಲ. ಹೀಗಾಗಿ ಬಂದ್ ಗೆ ಬಹುತೇಕ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ.

    ಎಪಿಎಂಸಿ ತರಕಾರಿ ಮಾರುಕಟ್ಟೆ ವರ್ತಕರ ಸಂಘ ಬಂದ್ ಗೆ ಬೆಂಬಲ ಕೊಟ್ಟಿದೆ. ಹೀಗಾಗಿ ಕಲಾಸಿಪಾಳ್ಯ, ಯಶವಂತ ಪುರ, ದಾಸನಪುರ ಮಾರ್ಕೆಟ್ ಬಂದ್ ಆಗುವ ಸಾಧ್ಯತೆ ಇದೆ. ಕೆಲವು ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಕೊಟ್ಟಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕಾಂಗ್ರೆಸ್ ಕಿಸಾನ್ ಘಟಕದಿಂದ ಬೆಂಬಲ ಪ್ರತಿಭಟನೆ ಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ವಾಟಾಳ್ ನೇತೃತ್ವದ ಕನ್ನಡ ಒಕ್ಕೂಟದಿಂದಲೂ ಬೆಂಬಲ ಸಿಕ್ಕಿದೆ.

    ಆಟೋ, ಊಬರ್, ಓಲಾ ಸಂಘಟನೆಗಳಿಂದ ನೈತಿಕ ಬೆಂಬಲ ನೀಡಿವೆ. ಕೊರೊನಾ ಕಾರಣದಿಂದ ಬಂದ್ ದಿನ ವಾಹನ ಸ್ಥಗಿತಗೊಳಿಸಲ್ಲ. ಎಂದಿನಂತೆ ಸಂಚಾರ ವ್ಯವಸ್ಥೆ ಇರಲಿದೆ. ಸಾರಿಗೆ ಯೂನಿಯನ್ ಗಳು ಬಂದ್ ಗೆ ಬೆಂಬಲ ಕೊಟ್ಟಿಲ್ಲ. ರೈತರ ಪ್ರತಿಭಟನೆಗೆ ಸಾರಿಗೆ ನೌಕರರು ಪಾಲ್ಗೊಳ್ಳಲ್ಲ. ಬಸ್ ಸಂಚಾರ ಯಥಾ ಸ್ಥಿತಿ ಇರುತ್ತೆ. ಈ ಹಿನ್ನೆಲೆಯಲ್ಲಿ ದೂರದ ಊರುಗಳಿಗೂ ಬಸ್ ಸೇವೆ ಲಭ್ಯವಿರಲಿವೆ.

    ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಹೋಟೆಲ್ ಗಳ ಬೆಂಬಲ ಇಲ್ಲ. ಯಾಕೆಂದರೆ ಕೊರೊನಾ ಕಾರಣದಿಂದ ಈಗಾಗಲೇ ನಷ್ಟದ ಹೊಡೆತ ತಿಂದಿದ್ದೇವೆ. ಹೀಗಾಗಿ ಯಾವ ಬಂದ್ ಗೂ ಬೆಂಬಲ ಕೊಡಲ್ಲ ಅನ್ನೋದು ಹೋಟೆಲ್ ಮಾಲೀಕರ ಸಂಘದ ಅಭಿಪ್ರಾಯವಾಗಿದೆ.

    ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಕೇವಲ ನೈತಿಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಶಾಲಾ- ಕಾಲೇಜು ಎಂದಿನಂತೆ ತೆರೆಯಲಿದೆ. ಮಾಲ್ ಅಸೋಸಿಯೇಷನ್ ನವರು ಇಂದು ಅಂತಿಮ ತೀರ್ಮಾನ ಹೇಳೋದಾಗಿ ಹೇಳಿದ್ದಾರೆ. ಆದರೆ ಬಹುತೇಕ ಬೆಂಬಲ ಕೊಡದೇ ಇರಲು ತೀರ್ಮಾನ ಮಾಡಿದ್ದಾರೆ. ತುಂಬಾ ಕಾಲ ಬಂದ್ ಆಗಿದ್ದ ಮಾಲ್ ನಷ್ಟದ ಕಾರಣವೊಡ್ಡಿ ಬಂದ್ ದಿನ ಒಪನ್ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಬೀದಿ ಬದಿ ವ್ಯಾಪಾರ ಕೂಡ ಎಂದಿನಂತೆ ನಡೆಯಲಿದೆ. ಇತ್ತ ಕನ್ನಡ ಸಂಘಟನೆಗಳು ಇನ್ನು ಅಂತಿಮ ನಿರ್ಧಾರ ಪ್ರಕಟಿಸಿಲ್ಲ. ಪ್ರತಿಭಟನೆ ಗೆ ಬೆಂಬಲದ ಬಗ್ಗೆ ಕರವೇ ನಾರಾಯಣ ಗೌಡ ಹಾಗೂ ಪ್ರವೀಣ್ ಶೆಟ್ಟಿ ಬಣ ಇನ್ನು ತಮ್ಮ ಅಂತಿಮ ನಿರ್ಧಾರ ತಿಳಿಸಿಲ್ಲ. ಒಟ್ಟಾರೆ ಕೊರೋನಾ ಸಂದರ್ಭದಲ್ಲಿ ಬಂದ್ ಎಷ್ಟರಮಟ್ಟಿಗೆ ಸಫಲವಾಗುತ್ತೆ ಅನ್ನೋದನ್ನು ನೋಡಬೇಕಾಗಿದೆ.

  • ಬೆಂಗ್ಳೂರಿಗರೆ ಗಮನಿಸಿ, ನಕಲಿ ಹಕ್ಕು ಪತ್ರ ಸೃಷ್ಟಿಸಿ ಟೋಪಿ ಹಾಕ್ತಾರೆ ಎಚ್ಚರ

    ಬೆಂಗ್ಳೂರಿಗರೆ ಗಮನಿಸಿ, ನಕಲಿ ಹಕ್ಕು ಪತ್ರ ಸೃಷ್ಟಿಸಿ ಟೋಪಿ ಹಾಕ್ತಾರೆ ಎಚ್ಚರ

    – 1 ಸಾವಿರ ಮಂದಿಯಿಂದ 15 ಸಾವಿರ ಪಡೆದು ವಂಚನೆ
    – 50 ಜನರಿಗೆ ನಕಲಿ ಹಕ್ಕು ಪತ್ರ ವಿತರಣೆ

    ಬೆಂಗಳೂರು: ನಿವೇಶನಗಳಿಗೆ ನಕಲಿ ಹಕ್ಕು ಪತ್ರಗಳನ್ನು ಸೃಷ್ಟಿಸಿಕೊಂಡು ಸಾರ್ವಜನಿಕರಿಗೆ ಸೈಟ್ ಹಂಚುತ್ತೇವೆ ಎಂದು ಸುಳ್ಳು ಹೇಳಿ ಹಣ ಬಾಚುತ್ತಿದ್ದ ಜಾಲವೊಂದನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

    ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯನ್ನು ವಿಜಯನಂದಸ್ವಾಮಿ ಎಂದು ಗುರುತಿಸಲಾಗಿದೆ. ಈತ ಉತ್ತರ ಕರ್ನಾಟಕ ಪ್ರದೇಶ ರೈತ ಸಂಘ ಓಪನ್ ಮಾಡಿಕೊಂಡು ಬೆಂಗಳೂರು ಮೂಲಕ ರಮೇಶ್ ಎಂಬಾತನನ್ನು ಪರಿಚಯ ಮಾಡಿಕೊಂಡು ಇಬ್ಬರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಾಡಪ್ರಭು ಕೆಂಪೇಗೌಡ ಬಡವಾಣೆಯಲ್ಲಿ ಸೈಟ್ ಕೊಡಿಸುವುದಾಗಿ ಹೇಳಿ ವಂಚಿಸುತ್ತಿದ್ದ.

    ನಿಮಗೆ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ಕೊಡಿಸುತ್ತೇವೆ ಎಂದು ವಿಜಯಾನಂದ ಸ್ವಾಮಿ ಮತ್ತು ರಮೇಶ್ ಜನರನ್ನು ನಂಬಿಸಿದ್ದಾರೆ. ಜೊತೆಗೆ ತನ್ನ ರೈತ ಸಂಘದ ಹೆಸರಿನಲ್ಲಿ ಸದ್ಯರನ್ನಾಗಿ ನೋಂದಾಯಿಸಕೊಳ್ಳುವುದಾಗಿ ಹೇಳಿ ಸುಮಾರು 1000 ಜನರ ಬಳಿ ತಲಾ 15 ಸಾವಿರ ರೂ.ಗಳನ್ನು ಪಡೆದುಕೊಂಡಿದ್ದಾನೆ. ಜೊತೆಗೆ ಅವರಿಗೆ ನಿವೇಶನದ ನಕಲಿ ಹಕ್ಕು ಪತ್ರವನ್ನು ನೀಡಿದ್ದಾರೆ. ಇವನ ಮಾತು ನಂಬಿ ಸುಮಾರು ಸಾವಿರ ಜನ ಮೋಸ ಹೋಗಿದ್ದಾರೆ.

    ಅಲ್ಲದೇ ಈಗಾಗಲೇ 50 ಜನರಿಗೆ ನಕಲಿ ಹಕ್ಕು ಪತ್ರಗಳನ್ನು ಹಂಚಿದ್ದಾರೆ. ಈ ಪತ್ರದಲ್ಲಿ ಬಿಡಿಎ ನಕಲಿ ರಬ್ಬರ್ ಸ್ಟಾಂಪ್ ಹಾಕಲಾಗಿದೆ ಹಾಗೂ ಅಯುಕ್ತರ ಸಹಿಯನ್ನು ಕೂಡ ನಕಲಿ ಮಾಡಲಾಗಿದೆ. ಜನರಿಗೆ ನಿವೇಶನ ಪತ್ರ ನೀಡಿ ಅವರಿಂದ 50 ಸಾವಿರದಿಂದ 3 ಲಕ್ಷದವರೆಗೆ ಹಣ ಪಡೆದಿದ್ದಾರೆ. ಈಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸುಮಾರು 3000 ಜನಕ್ಕೆ ಈ ರೀತಿ ಮೋಸ ಮಾಡುವ ಯೋಜನೆ ಹೊಂದಿದ್ದರು ಎಂದು ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    3 ಲಕ್ಷ ಕೊಟ್ಟು ಒಟ್ಟು ಆರು ನಿವೇಶದ ನಕಲಿ ಹಕ್ಕು ಪತ್ರಗಳನ್ನು ಪಡೆದುಕೊಂಡ ವ್ಯಕ್ತಿಯೊಬ್ಬರು ಪತ್ರದ ಅಸಲೀತವನ್ನು ಚೆಕ್ ಮಾಡಲು ಬೆಂಗಳೂರು ಪ್ರಾಧಿಕಾರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಅಧಿಕಾರಿಗಳಿಗೆ ಹಕ್ಕು ಪತ್ರವನ್ನು ನೀಡಿದಾಗ ಇವು ನಕಲಿ ಪತ್ರ ಎಂದು ತಿಳಿದಿದೆ. ಆಗ ತಕ್ಷಣ ಅಧಿಕಾರಿಗಳು ಕಾರ್ಯಚರಣೆ ಇಳಿದು ನಕಲಿ ಜಾಲವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಾನಂದ ಕಚೇರಿಗೆ ದಾಳಿ ಮಾಡಿ ನಕಲಿ ಹಕ್ಕು ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

  • ಜನರನ್ನ ಸೆಳೆಯುವ ದುಂದು ವೆಚ್ಚದ ಕಾರ್ಯಕ್ರಮವೇ ಗ್ರಾಮ ವಾಸ್ತವ್ಯ: ಕೊಡಿಹಳ್ಳಿ ಚಂದ್ರಶೇಖರ್

    ಜನರನ್ನ ಸೆಳೆಯುವ ದುಂದು ವೆಚ್ಚದ ಕಾರ್ಯಕ್ರಮವೇ ಗ್ರಾಮ ವಾಸ್ತವ್ಯ: ಕೊಡಿಹಳ್ಳಿ ಚಂದ್ರಶೇಖರ್

    ಯಾದಗಿರಿ: ಸಿಎಂ ಮಾಡುತ್ತಿರುವ ಗ್ರಾಮ ವಾಸ್ತವ್ಯ ದುಂದು ವೆಚ್ಚವಾಗಿದ್ದು, ಜನರ ಗಮನವನ್ನು ತಮ್ಮತ್ತ ಸೆಳೆಯಲು ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ.

    ಜಿಲ್ಲೆಯಲ್ಲಿ ರೈತ ಸಂಘದ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಮೈತ್ರಿ ಸರ್ಕಾರ ರಾಜ್ಯದ ಜನರ ಮನಸ್ಸಿನಲ್ಲಿ ಅಸ್ಥಿರಗೊಂಡಿದೆ. ಹೀಗಾಗಿ ಜನರ ಗಮನ ಸೆಳೆಯಲು ಸಿಎಂ ಈ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡರು.

    ಸಿಎಂ ವಿಧಾನಸೌಧಲ್ಲಿಯೇ ಕುಳಿತು ಗ್ರಾಮಗಳ ಅಭಿವೃದ್ಧಿಗೆ ಸೂಕ್ತ ಕಾನೂನು ತಂದು ಹಳ್ಳಿಗಳನ್ನು ಅಭಿವೃದ್ಧಿಪಡಿಸಬಹುದು. ಆದರೆ ಗ್ರಾಮ ವಾಸ್ತವ್ಯ ಮಾಡಿ ಜನರ ಮನಸ್ಸು ಬೇರೆ ರೀತಿಗೆ ತಿರುಗಿಸಲು ಸಿಎಂ ಮುಂದಾಗಿದ್ದಾರೆ. ಇನ್ನೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡದೆ, ಸಿಎಂ ಗ್ರಾಮ ವಾಸ್ತವ್ಯ ಮಾಡುತ್ತಿರುವುದಕ್ಕೆ ನಮ್ಮ ವಿರೋಧವಿದೆ ಎಂದು ಗುಡುಗಿದರು.

    ಸಿಎಂ ಜಿಲ್ಲೆಗೆ ಗ್ರಾಮ ವಾಸ್ತವ್ಯಕ್ಕೆ ಬರುವ ದಿನ ರೈತ ಸಂಘದಿಂದ ಉಗ್ರ ಹೋರಾಟ ಮಾಡುತ್ತೇವೆ ಎಂದು ಮುಖ್ಯಮಂತ್ರಿಗಳಿಗೆ ಎಚ್ಚರಿಕೆ ನೀಡಿದರು.