Tag: father in law

  • ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

    ವಿಮೆ ಹಣದ ಮೇಲೆ ಕಣ್ಣು – ಅಳಿಯನನ್ನೇ ಕೊಲೆ ಮಾಡಿದ ಮಾವ & ಗ್ಯಾಂಗ್

    ಹಾವೇರಿ: ಅಳಿಯನ ವಿಮೆ (Insurance) ಹಣದ ಆಸೆಗಾಗಿ ಕೊಲೆ ಮಾಡಿ, ಅಪಘಾತವೆಂದು ಬಿಂಬಿಸಿರುವ ಮಾವ ಹಾಗೂ ಆತನ ಗ್ಯಾಂಗ್ ಅಂದರ್ ಆಗಿರುವ ಘಟನೆ ಹಾವೇರಿಯಲ್ಲಿ (Haveri) ನಡೆದಿದೆ.

    ಜಿಲ್ಲೆ ರಟ್ಟಿಹಳ್ಳಿ (Rattihalli) ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದ ಅಳಿಯ. ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ ಹಾಗೂ ಲೋಕೇಶ ಹಲಗೇರಿ ಕೊಲೆ ಮಾಡಿದ ಆರೋಪಿಗಳು. ಇದನ್ನೂ ಓದಿ: ಮೈಸೂರಲ್ಲಿ ಬಲೂನ್ ಮಾರೋ ಹುಡ್ಗಿ ರೇಪ್ & ಮರ್ಡರ್ – ಕೊಳ್ಳೇಗಾಲದಲ್ಲಿ ಆರೋಪಿ ಅರೆಸ್ಟ್‌


    ಬಸವರಾಜ್‌ನ ತಂದೆ, ತಾಯಿ ಹಾಗೂ ಸಹೋದರರು ಈ ಹಿಂದೆಯೇ ನಿಧನ ಹೊಂದಿದ್ದರಿಂದ ಒಬ್ಬಂಟಿಯಾಗಿ ಜೀವನ ಮಾಡುತ್ತಿದ್ದ. ಮದ್ಯ ವ್ಯಸನಿಯಾಗಿದ್ದ ಬಸವರಾಜ್, ಹೆಸರಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಮನೆ, ಆಸ್ತಿ ಸಹ ಇತ್ತು.

    ಬಸವರಾಜ್ ಮದ್ಯ ವ್ಯಸನಿಯಾಗಿದ್ದನ್ನೇ ಬಂಡವಾಳ ಮಾಡಿಕೊಂಡಿದ್ದ ಮಾವ ಸಿದ್ದನಗೌಡ, ಆತನ 8 ಎಕ್ರೆ ಜಮೀನು ಹಾಗೂ ಮನೆ ಮೇಲೆ ಕಣ್ಣುಹಾಕಿದ್ದ. ಬಸವರಾಜ್‌ನ ಸಹೋದರ ಸಂಬಂಧಿಕರು ಆತನ ಯಾವುದೇ ಆಸ್ತಿ ಮಾರಾಟ ಮಾಡದಂತೆ ಕೋರ್ಟ್ನಿಂದ ಸ್ಟೇ ತಂದಿದ್ದರು. ಇದನ್ನೂ ಓದಿ: ಯಲಹಂಕ ಅಗ್ನಿ ದುರಂತ | ತಾನು ಸುರಿದುಕೊಂಡು ಯುವತಿಗೂ ಪೆಟ್ರೋಲ್ ಹಾಕಲು ಮುಂದಾಗಿದ್ದ ಯುವಕ

    ಈ ವಿಚಾರ ತಿಳಿದ ಸಿದ್ದನಗೌಡ, ರಾಘವೇಂದ್ರ ಎಂಬುವವನಿಗೆ 50,000 ರೂ. ಹಣ ನೀಡಿ ಅಪಘಾತ ವಿಮೆ ಮಾಡಲು ಹೇಳಿದ್ದ. ಆಸ್ತಿ ಸಿಗಲ್ಲ ಎಂದು ತಿಳಿದ ಗ್ಯಾಂಗ್ ಇನ್ಶೂರೆನ್ಸ್ ಹಣದ ಆಸೆಗಾಗಿ ಪ್ಲ್ಯಾನ್ ಮಾಡಿ, ಸೆ.27 ರಂದು ಬಸವರಾಜ್‌ನನ್ನು ಮನೆಯಿಂದ ಕರೆದುಕೊಂಡು ಹೋಗಿದ್ದರು. ಬಳಿಕ ಆತನಿಗೆ ಕಂಠಪೂರ್ತಿ ಕುಡಿಸಿ, ಬೈಕ್‌ನಲ್ಲಿ ಊರಿಗೆ ಕಳುಹಿಸಿದ್ದರು. ಬಳಿಕ ಬಸವರಾಜ್ ಹಿಂದೆಯೇ ಕಾರು ತೆಗೆದುಕೊಂಡು ಹೋಗಿ ಡಿಕ್ಕಿ ಹೊಡೆದು, ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಕೊಲೆ ಮಾಡಿ, ಆರೋಪಿಗಳು ಅಪಘಾತ ಎಂದು ಬಿಂಬಿಸಿದ್ದರು.

    ಅಪಘಾತದ ಸ್ಥಳಕ್ಕಾಗಮಿಸಿದ್ದ ಬಸವರಾಜ್ ಕುಟುಂಬಸ್ಥರು, ಇದು ಕೊಲೆ ಅನ್ನೋ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ ಪೊಲೀಸರ ತನಿಖೆ ವೇಳೆ ಆಸ್ತಿ, ಮನೆ ಹಾಗೂ ಇನ್ಶೂರೆನ್ಸ್ ಹಣದ ಆಸೆಗಾಗಿ ಆರೋಪಿಗಳು ಕೊಲೆ ಮಾಡಿರುವುದಾಗಿ ಬಯಲಾಗಿದೆ. ಸದ್ಯ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ ಆರೋಪ

    ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ ಆರೋಪ

    – ಅತ್ತೆ – ಮಾವನ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಮಾವನ (Father In law) ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಸೊಸೆಗೆ ಅತ್ತೆಯೇ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಮೇಲೆ ಅತ್ತೆ-ಮಾವನ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

    ಬೆಂಗಳೂರಿನ ಬಿಟಿಎಂ ಲೇಔಟ್ (BTM layout) ನಿವಾಸಿ ಯಾಸೀನ್ ಪಾಷಾ ಮತ್ತು ಪತ್ನಿ ಶಾಸೀಯಾರಿಂದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಬಿಎಸ್‌ಎನ್‌ ಸೆಕ್ಷನ್‌ 351(2), 352,2(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡ್ರಗ್ ಪೆಡ್ಲರ್‌ಗಳ ಜೊತೆಗೆ ಪೊಲೀಸರ ನಂಟು ಆರೋಪ – ಇನ್‌ಸ್ಪೆಕ್ಟರ್‌ ಸೇರಿ 11 ಪೊಲೀಸರು ಸಸ್ಪೆಂಡ್‌

    ಸಾಂದರ್ಭಿಕ ಚಿತ್ರ

    ಮಗ ಯಾಸೀನ್ ಪಾಷಾಗೆ, ಶಾಸೀಯಾ ಅನ್ನೋ ಯುವತಿ ಜೊತೆಗೆ ಕಳೆದ ಮೇ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಮದುವೆ ಮಾಡಲು ಹುಡುಗನ ಪೋಷಕರು ನಿರಾಕರಣೆ ಮಾಡಿದ್ರು. ಪೋಷಕರ ವಿರೋಧದ ನಡುವೆಯೇ ಮಗ ಯಾಸಿನ್ ನಿಶ್ಚಿತಾರ್ಥ ಆಗಿದ್ದ. ಶಾಸೀಯಾ ಜೊತೆಗೆ ಮೈಸೂರಿನಲ್ಲಿ ಮದುವೆಯಾಗಿ ಮನೆಗೆ ಬಂದಿದ್ದ. ಇದರಿಂದ ಕೋಪಗೊಂಡ ಅತ್ತೆ ಹುಮೇರಾ ಹಾಗೂ ಮಲತಂದೆ ಅಕ್ಬರ್ ಸೊಸೆಗೆ ಕಿರುಕುಳ ನೀಡೋಕೆ ಶುರುಮಾಡಿದ್ದಾಳೆ. ಇದನ್ನೂ ಓದಿ: Chikkaballapura | ಇಬ್ಬರು ಹೆಣ್ಣುಮಕ್ಕಳೊಂದಿಗೆ ವಿಷ ಸೇವಿಸಲು ಪ್ಲ್ಯಾನ್‌ – ತಾಯಿ ಸಾವು

    ಮಾವನ ಜೊತೆಗೆ ಅನೈತಿಕ ಸಂಬಂಧ ಹೊಂದುವಂತೆ ಕಿರುಕುಳ ನೀಡಿದ್ದಾಳೆ. ಇದಕ್ಕೆ ಒಪ್ಪದೇ ಇದ್ದಾಗ ಸೊಸೆ ಶಾಸೀಯಾಗೆ ಆತ್ಮಹತ್ಯೆ ಮಾಡಿಕೊಳ್ಳವಂತೆ ಬೆದರಿಕೆ ಹಾಕಿದ್ದಾಲೆ ಅಂತ. ಸೊಸೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

  • ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ

    ಆನ್‌ಲೈನ್ ಗೇಮ್ ಆಡಲು ಹಣಕ್ಕಾಗಿ ಟಾರ್ಚರ್; ಸ್ವಂತ ಅಳಿಯನನ್ನೇ ಕೊಂದ ಮಾವ

    ಬೆಂಗಳೂರು: ಆನ್‌ಲೈನ್ ಗೇಮ್ ಆಡಲು ಹಣ ನೀಡುವಂತೆ ಕಾಟ ಕೊಡುತ್ತಿದ್ದ ಅಕ್ಕನ ಮಗನನ್ನೇ ಮಾವ ಕೊಲೆ ಮಾಡಿ ಸೋಲದೇವನಹಳ್ಳಿ (Soladevanahalli) ಪೊಲೀಸ್ ಠಾಣೆಗೆ ಶರಣಾಗಿರುವ ಘಟನೆ ನಡೆದಿದೆ.

    ಅಮೋಘ ಕೀರ್ತಿ (14) ಕೊಲೆಯಾದ ಬಾಲಕ. ನಾಗಪ್ರಸಾದ್ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಟೋಲ್‌ ಸಿಬ್ಬಂದಿಯನ್ನು ಎಳೆದುಕೊಂಡು ರಸ್ತೆಯಲ್ಲಿ ಡೆಡ್ಲಿರೈಡ್‌

    ಕೊಲೆಯಾದ ಬಾಲಕನು ನಾಗಪ್ರಸಾದ್‌ನ ಸಹೋದರಿಯ ಮಗನಾಗಿದ್ದ. ಮೃತ ಬಾಲಕ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಆತ ಫ್ರೀಫೈರ್ ಆನ್‌ಲೈನ್ ಗೇಮಿಂಗ್‌ನ (Online Gaming) ಚಟಕ್ಕೆ ಬಿದ್ದು, ನಿತ್ಯ ಹಣ ಕೊಡುವಂತೆ ಮಾವ ನಾಗಪ್ರಸಾದ್‌ಗೆ ಕಾಟ ಕೊಡುತ್ತಿದ್ದ. ಬಾಲಕನ ಕಾಟಕ್ಕೆ ನಾಗಪ್ರಸಾದ್ ರೋಸಿಹೋಗಿದ್ದ. ಇದನ್ನೂ ಓದಿ: ʼಡೆತ್‌ನೋಟ್‌ʼ ನೋಡಿ ಡೆತ್‌ನೋಟ್‌ ಬರೆದು 14ರ ಬಾಲಕ ಆತ್ಮಹತ್ಯೆ!

    ಒಂದು ವಾರದ ಹಿಂದೆ ಮಾವ ನಾಗಪ್ರಸಾದ್ ಬಳಿ ಹಣ ಕೊಡುವಂತೆ ಹೇಳಿ ಬಾಲಕ ಹಲ್ಲೆ ನಡೆಸಿದ್ದ. ಇದರಿಂದ ಮನನೊಂದಿದ್ದ ನಾಗಪ್ರಸಾದ್ ಸೋಮವಾರ ಮುಂಜಾನೆ 4:30ರ ಸುಮಾರಿಗೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ್ದ.

    ಕೊಲೆ ಮಾಡಿದ ಬಳಿಕ ಆತನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ. ಬಳಿಕ ಎಲ್ಲಿಗೂ ಹೋಗಲು ಆತನ ಬಳಿ ಹಣವಿಲ್ಲದಿದ್ದ ಕಾರಣ ಮೆಜೆಸ್ಟಿಕ್‌ನಲ್ಲೇ ಮೂರು ದಿನ ಕಾಲ ಕಳೆದಿದ್ದ. ನಂತರ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ ಎನ್ನಲಾಗಿದೆ.

    ಇದೀಗ ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಆರೋಪಿಯನ್ನ ಬಂಧಿಸಿದ್ದಾರೆ.

  • ಕೊಲೆಗೂ ಮುಂಚೆ ಸೊಸೆಯ ರೇಪ್ – ಮಗನ ಜೊತೆಗೂಡಿ 10 ಅಡಿ ಗುಂಡಿಯಲ್ಲಿ ಶವ ಹೂತಿಟ್ಟ ಕಿಲಾಡಿ ಮಾವ

    ಕೊಲೆಗೂ ಮುಂಚೆ ಸೊಸೆಯ ರೇಪ್ – ಮಗನ ಜೊತೆಗೂಡಿ 10 ಅಡಿ ಗುಂಡಿಯಲ್ಲಿ ಶವ ಹೂತಿಟ್ಟ ಕಿಲಾಡಿ ಮಾವ

    – ವಿಚಾರಣೆ ವೇಳೆ ಮಗನಿಗೂ ಗೊತ್ತಿರದ ಅತ್ಯಾಚಾರ ವಿಷಯ ಬಾಯ್ಬಿಟ್ಟ ದುಷ್ಟ

    ಚಂಡೀಗಢ: ಸೊಸೆಯನ್ನು ರೇಪ್ ಮಾಡಿ ಆನಂತರ ಕೊಲೆ ಮಾಡಿ, ಬಳಿಕ ಮಗನ ಜೊತೆಗೂಡಿ 10 ಅಡಿ ಆಳದ ಗುಂಡಿಯಲ್ಲಿ ಶವ ಹೂತು ಹಾಕಿರುವ ಘಟನೆಯೊಂದು ಹರಿಯಾಣದ (Haryana) ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ.

    ಮೃತ ಮಹಿಳೆಯನ್ನು ಉತ್ತರ ಪ್ರದೇಶದ (Uttara Pradesh) ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್‌ನ ತನು (24) ಎಂದು ಗುರುತಿಸಲಾಗಿದೆ. 2023ರ ಜುಲೈನಲ್ಲಿ ಹರಿಯಾಣ ಮೂಲದ ವ್ಯಕ್ತಿಯ ಜೊತೆ ಸಂತ್ರಸ್ತೆಯ ವಿವಾಹವಾಗಿತ್ತು. ಆದರೆ ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಆಕೆಗೆ ತೀವ್ರ ಕಿರುಕುಳ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

    ಕೊಲೆ ನಡೆದಿದ್ದು ಹೇಗೆ?
    ಅಪ್ಪ-ಮಗ ಸೇರಿಕೊಂಡು ಏ.14ರಂದು ಸಂತ್ರಸ್ತ ಯುವತಿಯನ್ನು ಕೊಲ್ಲಲು ಸರಿಯಾಗಿ ಪ್ಲ್ಯಾನ್‌ ಮಾಡಿದ್ದರು. ಈ ಪ್ಲ್ಯಾನ್‌ನ್ನು ಸರಿಯಾಗಿ ಕಾರ್ಯರೂಪಕ್ಕೆ ತರಲು ಮಗ ತನ್ನ ಅಮ್ಮನನ್ನು ಉತ್ತರ ಪ್ರದೇಶದ ಇಟಾನಗರಕ್ಕೆ ಮದುವೆಗೆಂದು ಕಳುಹಿಸಿದ್ದ. ಏ.21ರಂದು ರಾತ್ರಿ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ, ಸಂತ್ರಸ್ತೆಗೆ ಹಾಗೂ ಆಕೆಯ ಸಹೋದರಿಗೆ ನೀಡಿದ್ದರು. ಬಳಿಕ ಇಬ್ಬರು ಬೇರೆ ಬೇರೆ ಕೋಣೆಯಲ್ಲಿ ಮಲಗಿದ್ದರು.

    ಕೊಲೆ ಮಾಡುವ ಉದ್ದೇಶದಿಂದ ಮಾವ ಕೋಣೆಗೆ ತೆರಳಿದ್ದಾಗ ಸೊಸೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದಳು. ಇದನ್ನು ಕಂಡು ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿದ್ದಾನೆ. ನಂತರ ತನ್ನ ಮಗನನ್ನು ಕೋಣೆಗೆ ಕರೆದಿದ್ದಾನೆ. ಆದರೆ ಅತ್ಯಾಚಾರದ ವಿಷಯವನ್ನು ತಿಳಿಸಿರಲಿಲ್ಲ. ಶವವನ್ನ ಬಟ್ಟೆಯೊಂದರಲ್ಲಿ ಸುತ್ತಿ ಇಬ್ಬರು ಸೇರಿ ಎತ್ತಿಕೊಂಡು ಮನೆಯ ಹೊರಗೆ ಬಂದಿದ್ದಾರೆ. ಕೊಲೆಗೂ ಮುನ್ನವೇ ನೆರೆಹೊರೆಯವರನ್ನು ನಂಬಿಸಲು ಒಳಚರಂಡಿ ಕೆಲಸಕ್ಕಾಗಿ ಎಂದು ತಿಳಿಸಿ 10 ಅಡಿ ಆಳದ ಗುಂಡಿ ತೋಡಿಸಿದ್ದರು. ಅದೇ ಗುಂಡಿಗೆ ಹೆಣವನ್ನು ಬಿಸಾಕಿ ಬಳಿಕ ಅದರ ಮೇಲೆ ಇಟ್ಟಿಗೆ ಇರಿಸಿ, ಮಣ್ಣಿನಿಂದ ಮುಚ್ಚಿದ್ದರು. ಕೆಲವು ದಿನಗಳ ಬಳಿಕ ಅದರ ಮೇಲೆ ಕಾಂಕ್ರೀಟ್ ಹಾಕಿ ಮುಚ್ಚಲಾಗಿತ್ತು. ಇದೆಲ್ಲ ಆದ ಬಳಿಕ ಏ.25 ರಂದು ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವುದಾಗಿ ದೂರು ದಾಖಲಿಸಿದ್ದರು.

    ಈ ಘಟನೆಯಾದ ಸುಮಾರು 2 ತಿಂಗಳ ಬಳಿಕ ಜೂ.21ರಂದು ಮನೆಯ ಹೊರಗೆ 10 ಅಡಿ ಆಳದ ಗುಂಡಿಯಲ್ಲಿ ಶವ ಪತ್ತೆಯಾಗಿತ್ತು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಈ ಕುರಿತು ಸಂತ್ರಸ್ತೆಯ ಸಹೋದರಿ ಮಾತನಾಡಿ, ಮದುವೆಯಾದಾಗಿನಿಂದ ನನ್ನ ಸಹೋದರಿ ಮೇಲೆ ನಿರಂತರವಾಗಿ ದೌರ್ಜನ್ಯ ಎಸಗಿದ್ದಾರೆ. ಈ ನೋವಿನಿಂದಾಗಿ ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಆಕೆ ತವರು ಮನೆಗೆ ಬಂದಿದ್ದಳು. ಅದಾದ ಒಂದು ವರ್ಷದ ಬಳಿಕ ಮತ್ತೆ ಆಕೆ ಅತ್ತೆ ಮನೆಗೆ ಬಂದಿದ್ದಳು. ಆಕೆಗೆ ನೀಡಿರುವ ವರದಕ್ಷಿಣೆ ಅತ್ತೆ ಮಾವನಿಗೆ ಸಾಕಾಗಿರಲಿಲ್ಲ. ಇನ್ನೂ ಹೆಚ್ಚಿನ ಹಣ, ಒಡವೆ ತರಲು ಯಾವಾಗಲೂ ಒತ್ತಡ ಹಾಕುತ್ತಿದ್ದರು ಎಂದು ತಿಳಿಸಿದ್ದಾರೆ.

    ಈ ಆಧಾರದ ಮೇಲೆ ಮನೆಯವರನ್ನು ವಿಚಾರಣೆಗೆ ಒಳಪಡಿಸಿದಾಗ ಸಂತ್ರಸ್ತೆಯ ಮಾವ ತಪ್ಪೊಪ್ಪಿಕೊಂಡಿದ್ದಾನೆ. ಸದ್ಯ ಸಂತ್ರಸ್ತೆಯ ಮಾವ, ಅತ್ತೆ, ಪತಿ ಮತ್ತು ಅತ್ತಿಗೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!

  • ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

    ಮಹಿಳೆ ಕೊಲೆ ಮಾಡಿ ಬೈಕ್ ಅಪಘಾತವೆಂದು ಬಿಂಬಿಸಿದ ಪತಿ, ಮಾವ, ಅತ್ತೆ ಅರೆಸ್ಟ್

    ಚಿಕ್ಕೋಡಿ: ಮಕ್ಕಳಾಗಿಲ್ಲ ಎಂದು ಮಹಿಳೆಯನ್ನು ಭೀಕರವಾಗಿ ಕೊಲೆ (Murder) ಮಾಡಿ ಇದು ಕೊಲೆಯಲ್ಲ ಬೈಕ್ ಅಪಘಾತವೆಂದು (Accident) ಬಿಂಬಿಸಿಸಲು ಯತ್ನಿಸಿದ‌ ಮಹಿಳೆಯ ಪತಿ, ಮಾವ, ಹಾಗೂ ಅತ್ತೆಯನ್ನ ಪೊಲೀಸರು ಅರೆಸ್ಟ್ ಮಾಡಿ ಜೈಲಿಗಟ್ಟಿದ್ದಾರೆ.

    ಅಥಣಿ ತಾಲೂಕಿನ ಮಲಬಾದ ಗ್ರಾಮದ ರೇಣುಕಾ ಸಂತೋಷ ಹೋನಕಾಂಡೆ (27) ಮೃತ ಮಹಿಳೆಯಾಗಿದ್ದು. ಶನಿವಾರ ತಡ ರಾತ್ರಿ ಕೊಲೆ‌ ಮಾಡಿ ಅಪಘಾತವೆಂದು ಬಿಂಬಿಸಲಾಗಿತ್ತು. ಇದನ್ನೂ ಓದಿ: ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್‌ಗೆ ಟ್ವಿಸ್ಟ್ – 2 ಮಕ್ಕಳ ತಂದೆಯೊಂದಿಗೆ ಪ್ರೇಮ ವೈಫಲ್ಯ

     

    ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹಾಗೂ ಅತ್ತೆ ಜಯಶ್ರೀಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ನಕಲಿ ಬಾಂಬ್ ಬ್ಲಾಸ್ಟ್ ಮಾಡಲು ಸಂಚು – ಇಬ್ಬರು ಶಂಕಿತ ಉಗ್ರರ ಬಂಧನ

    ಅಥಣಿಯಿಂದ ಬೈಕ್ ಮೇಲೆ ಹೊರಟಾಗ ಬೈಕ್ ಚಕ್ರಕ್ಕೆ ಸೀರೆ ಸಿಲುಕಿ ಮಹಿಳೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಹೊರಟ ಹಂತಕರನ್ನ ಸಂಶಯಾಸ್ಪದವಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಇದು ಅಪಘಾತವಲ್ಲ ಕೊಲೆ ಎಂದು ಬೆಳಕಿಗೆ ಬಂದಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಪತಿ, ಮಾವ ಕೈ,ಕಾಲು ಕಟ್ಟಿ ಥಳಿಸಿದ್ದಲ್ಲದೇ ಬಲವಂತವಾಗಿ ಮಹಿಳೆಯ ಬಾಯಿಗೆ ಕೀಟನಾಶಕ ಸುರಿದ್ರು!

    ಪತಿ, ಮಾವ ಕೈ,ಕಾಲು ಕಟ್ಟಿ ಥಳಿಸಿದ್ದಲ್ಲದೇ ಬಲವಂತವಾಗಿ ಮಹಿಳೆಯ ಬಾಯಿಗೆ ಕೀಟನಾಶಕ ಸುರಿದ್ರು!

    – ತಡೆಯಲು ಹೋದ ಸಹೋದರನ ಮೇಲೆಯೂ ಹಲ್ಲೆ

    ಲಕ್ನೋ: ಪತಿ ಮತ್ತು ಮಾವ ಸೇರಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಥಳಿಸಿದ್ದಲ್ಲದೇ ಆಕೆಯ ಬಾಯಿಗೆ ಕೀಟನಾಶಕವನ್ನು ಸುರಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ (Uttarpradesh) ಹಾಪುರ ಜಿಲ್ಲೆಯಲ್ಲಿ ನಡೆದಿದೆ.

    ಪತಿ ಮತ್ತು ಮಾವ ಮಹಿಳೆಗೆ ಥಳಿಸಿದ್ದಲ್ಲದೆ, ಆಕೆಯನ್ನು ಕೊಲ್ಲುವ ಉದ್ದೇಶದಿಂದ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಸುರಿದಿದ್ದಾರೆ. ಈ ವೇಳೆ ಸಹೋದರ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆತನಿಗೂ ಥಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಘಟನೆ ವಿವರ: ಹಾಪುರ್ ಜಿಲ್ಲೆಯ ಗರ್ಮುಕ್ತೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಗದ್‌ಪುರ ಗ್ರಾಮದ ನಿವಾಸಿ ಶೀಲಾ ಅವರು ಗಜ್ರೌಲಾ ಪೊಲೀಸ್ ಠಾಣಾ ವ್ಯಾಪ್ತಿಯ ಫಿರೋಜ್‌ಪುರ ಗ್ರಾಮದ ಸುರೇಂದ್ರ ಎಂಬಾತನನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಪೋಷಕರಿಗೆ ಶೀಲಾಳ ಮೇಲೆ ನಡೆದ ಹಲ್ಲೆಯ ಬಗ್ಗೆ ಮಾಹಿತಿ ಲಭಿಸಿದೆ.

    ವಿಚಾರ ಗೊತ್ತಾಗುತ್ತಿದ್ದಂತೆಯೇ ಶೀಲಾಳ ಸಹೋದರ ಜಯಪ್ರಕಾಶ್ ತನ್ನ ಸ್ನೇಹಿತನ ಜೊತೆ ನೇರವಾಗಿ ಆಕೆಯ ಮನೆಗೆ ಬಂದರು. ಈ ವೇಳೆ ಸಹೋದರನ ಮುಂದೆಯೇ ಪತಿ ಮತ್ತು ಮಾವ ಸೇರಿ ಆಕೆಯ ಕೈಕಾಲು ಕಟ್ಟಿ ಥಳಿಸಿದ್ದಾರೆ. ಇದನ್ನು ಕಣ್ಣಾರೆ ಕಂಡ ಸಹೋದರ ತಡೆಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸಹೋದರನ ಸಮ್ಮುಖದಲ್ಲಿಯೇ ಆರೋಪಿಗಳಿಬ್ಬರೂ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಬಲವಂತವಾಗಿ ಸುರಿದಿದ್ದಾರೆ. ಪರಿಣಾಮ ಆಕೆಯ ಸ್ಥಿತಿ ಹದಗೆಟ್ಟಿದೆ. ಇದನ್ನೂ ಓದಿ: ಅಧಿಕಾರಿ ಆತ್ಮಹತ್ಯೆ ಪ್ರಕರಣ: ನಾಗೇಂದ್ರ ರಾಜೀನಾಮೆ, ಕೇಂದ್ರ ಏಜೆನ್ಸಿಯಿಂದ ತನಿಖೆಗೆ ಗೋವಿಂದ ಕಾರಜೋಳ ಆಗ್ರಹ

    ಕೂಡಲೇ ಮಹಿಳೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾರಿ ಇನ್ಸ್‌ಪೆಕ್ಟರ್ ಹರೀಶ್ ವರ್ಧನ್ ಸಿಂಗ್ ತಿಳಿಸಿದ್ದಾರೆ.

  • ಅತ್ತೆ, ಮಾವನ ಮೇಲಿನ‌ ಸಿಟ್ಟಿಗೆ ಅಡಿಕೆ ಮರಗಳನ್ನು ಕಡಿದು ಹಾಕಿದ ಸೊಸೆ!

    ಅತ್ತೆ, ಮಾವನ ಮೇಲಿನ‌ ಸಿಟ್ಟಿಗೆ ಅಡಿಕೆ ಮರಗಳನ್ನು ಕಡಿದು ಹಾಕಿದ ಸೊಸೆ!

    ದಾವಣಗೆರೆ: ಐನಾತಿ ಸೊಸೆಯೊಬ್ಬಳು ತನ್ನ ಅತ್ತೆ ಹಾಗೂ ಮಾವನ ಮೇಲಿನ ಸಿಟ್ಟಿನಿಂದ ಅಡಿಕೆ ಮರಗಳನ್ನೇ ಕಡಿದು ಹಾಕಿದ ಪ್ರಸಂಗವೊಂದು ದಾವಣಗೆರೆಯಲ್ಲಿ (Davanagere) ನಡೆದಿದೆ.

    ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೂಪಾ ಕುಮಾರಸ್ವಾಮಿ ಅಡಿಕೆ ಮರಗಳನ್ನು (Arecanut Tree) ಕಡಿದು ಹಾಕಿದ ಆರೋಪಿ ಸೊಸೆ.

    ಘಟನೆ ವಿವರ: ಚಿದಾನಂದ ಸ್ವಾಮಿ ಹಾಗೂ ಶಿವನಾಗಮ್ಮ ದಂಪತಿಗೆ ಮೂವರು ಪುತ್ರರಿದ್ದಾರೆ. ಹಿರಿಯ ಪುತ್ರ ಕುಮಾರಸ್ವಾಮಿಗೆ ರೂಪಾಳೊಂದಿಗೆ ಮದುವೆ ಮಾಡಿಸಲಾಗಿತ್ತು. ಆದರೆ ಮದುವೆಯಾದ ಬಳಿಕ ರೂಪಾ, ಹಲವಾರು ಬಾರಿ ಆಸ್ತಿಯಲ್ಲಿ ಪಾಲು ಕೇಳಿತ್ತಿದ್ದಳು. ಅಲ್ಲದೇ ಮಾವ ಚಿದಾನಂದಸ್ವಾಮಿ ಬಳಿ 8 ಲಕ್ಷ ರೂಪಾಯಿ ‌ಪಡೆದು ಮನೆ ಕೂಡ ಕಟ್ಟಿಸಿಕೊಂಡಿದ್ದಳು. ಸದ್ಯ ಈಕೆ ಮೂರು ವರ್ಷದ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕುವ ಮೂಲಕ ಸಿಟ್ಟು ಹೊರಹಾಕಿದ್ದಾಳೆ. ಇದನ್ನೂ ಓದಿ: ಬೀದಿಬದಿ ವ್ಯಾಪಾರಿಗಳ ಮೇಲೆ ಪೊಲೀಸ್ ದರ್ಪ- ಸೊಪ್ಪನ್ನ ರಸ್ತೆಗೆ ಚೆಲ್ಲಿ ವಿಕೃತಿ!

    ಈ ಸಂಬಂಧ ಚಿದಾನಂದ ಸ್ವಾಮಿಯವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ, ನಮಗೆ ವಯಸ್ಸಾಗಿದೆ. ನಮ್ಮನ್ನ ಸರಿಯಾಗಿ ನೋಡಿಕೊಳ್ಳದೆ ಸೊಸೆ ನಮ್ಮ ಮೇಲೆ ಹಲ್ಲೆ ಮಾಡುತ್ತಿದ್ದಾಳೆ. ಸಾಲದು ಎಂಬಂತೆ ಮಚ್ಚು ತಂದು ಅಡಿಕೆ ಮರಗಳನ್ನು ಕಡಿದು ಹಾಕಿದ್ದಾಳೆ ಎಂದು ಆರೋಪಿಸಿದ್ದಾರೆ.

    ಘಟನೆ ಸಂಬಂಧ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೊತೆಗೆ ಆರೋಪಿ ರೂಪಾಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

  • ಅಮ್ಮನನ್ನು ನಿಂದಿಸ್ತಿದ್ದ ಮಾವನನ್ನೇ ಕೊಂದ ಅಳಿಯ!

    ಅಮ್ಮನನ್ನು ನಿಂದಿಸ್ತಿದ್ದ ಮಾವನನ್ನೇ ಕೊಂದ ಅಳಿಯ!

    ಹಾಸನ: ಸ್ವಂತ ಮಾವನನ್ನೇ ಅಳಿಯನೊಬ್ಬ ಚಾಕುವಿನಿಂದ ಇರಿದು ಕೊಂದ ಘಟನೆ ಹಾಸನ (Hassan) ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ.

    ಪ್ರಭುಸ್ವಾಮಿ (50) ಕೊಲೆಯಾದ ಮಾವ. ಈತನನ್ನು ಅಳಿಯ ಅಜಯ್ (22) ಕೊಲೆ ಮಾಡಿದ್ದಾನೆ.

    ಕೊಲೆಯಾದ ಪ್ರಭುಸ್ವಾಮಿ ತಂಗಿ ಸಾವಿತ್ರಮ್ಮ ಏಳೆಂಟು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ತವರು ಮನೆಯಲ್ಲಿ ನೆಲೆಸಿದ್ದಳು. ಗಂಜಿಗೆರೆ ಗ್ರಾಮದಲ್ಲಿ ಅಕ್ಕಪಕ್ಕದ ಮನೆಯಲ್ಲಿ ಅಣ್ಣ-ತಂಗಿ ವಾಸವಾಗಿದ್ದರು. ಹೀಗಾಗಿ ಆಸ್ತಿ ವಿಚಾರವಾಗಿ ಪ್ರಭುಸ್ವಾಮಿಯು ತನ್ನ ಸಾವಿತ್ರಮ್ಮ ಜೊತೆ ಆಗಾಗ ಜಗಳವಾಡುತ್ತಿದ್ದನು. ಇದನ್ನೂ ಓದಿ: ಸರ್ಯು ನದಿಯಲ್ಲಿ ದೋಣಿ ಮುಳುಗಿ ಇಬ್ಬರ ದುರ್ಮರಣ, 7 ಮಂದಿ ನಾಪತ್ತೆ

    ಕಂಠಪೂರ್ತಿ ಮದ್ಯಸೇವಿಸಿ ಬಂದ ಪ್ರಭುಸ್ವಾಮಿ, ಒಡಹುಟ್ಟಿದ ತಂಗಿ ಹಾಗೂ ಆಕೆಯ ಮಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ. ಇದರಿಂದ ಸಾವಿತ್ರಮ್ಮ ಬೇಸತ್ತು ಹೋಗಿದ್ದಳು. ತನ್ನ ಮಗನಿಗೆ ಮಾವ ಜಗಳವಾಡುವ ವಿಷಯ ತಿಳಿಸಿದ್ದಳು. ಇಂದು ಕೂಡ ತಂಗಿಯೊಂದಿಗೆ ಜಗಳವಾಡಿ ಕೆಟ್ಟ ಪದಗಳಿಂದ ಪ್ರಭುಸ್ವಾಮಿ ನಿಂದಿಸಿದ್ದನು.

    ವಿಷಯ ತಿಳಿದು ಗಂಜಿಗೆರೆ ಗ್ರಾಮಕ್ಕೆ ಆಗಮಿಸಿದ ಅಜಯ್, ಮನೆಯಲ್ಲಿಯಿದ್ದ ಮಾವ ಪ್ರಭುಸ್ವಾಮಿಯನ್ನು ಚಾಕುವಿನಿಂದ ಇರಿದು ಕೊಂದೇ ಬಿಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಅಳಿಯನನ್ನು ಪ್ರಶ್ನಿಸಿದ ಮಾವನೇ ಮಟಾಶ್!

    ಮಗಳಿಗೆ ನಿತ್ಯ ಕಿರುಕುಳ ಕೊಡುತ್ತಿದ್ದ ಅಳಿಯನನ್ನು ಪ್ರಶ್ನಿಸಿದ ಮಾವನೇ ಮಟಾಶ್!

    – ಇಬ್ಬರು ಆರೋಪಿಗಳ ಬಂಧನ

    ಕೋಲಾರ: ಆತ ತನ್ನ ಕೊನೆಯ ಮಗಳು (Daughter) ಎಂದು ಪ್ರೀತಿಯಿಂದ ಸಾಕಿ ಸಲಹಿ ಶಕ್ತಿ ಮೀರಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಆದರೆ ಆತ ತನ್ನ ಮಗಳಿಗೆ ಮಾಡಿದ್ದ ಮದುವೆಯೇ ಆತನಿಗೆ ಮರಣ ಶಾಸನವಾಗಿ ಮಾರ್ಪಾಟಾಗಿತ್ತು. ಮದುವೆ ಮಾಡಿದ ಕೇವಲ 40 ದಿನಕ್ಕೆ ತನ್ನ ಮಗಳು ಗಂಡನ ಮನೆ ಬಿಟ್ಟು ಬಂದರೆ, ಅತ್ತ ಆ ತಂದೆ (Father) ತನ್ನ ಅಳಿಯನ ಕೈಯಿಂದಲೇ ಕೊಲೆಯಾಗಿದ್ದಾನೆ.

    ಕೋಲಾರದ (Kolar) ಷಹೀದ್ ನಗರ ನಿವಾಸಿ ಬಾಬು ಷರೀಫ್‍ನನ್ನು ಅಳಿಯನೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. 40 ದಿನಗಳ ಹಿಂದೆ ಮಗಳು ಸಾನಿಯಾ ಖಾನಂಳನ್ನು ತಬರೇಜ್ ಪಾಷಾಗೆ ಕೊಟ್ಟು ಮದುವೆ ಮಾಡಿದ್ರು. ತನ್ನ ಕೊನೆಯ ಮಗಳು ಎಂದು ಬಾಬು ಷರೀಫ್ ಸುಮಾರು 20 ಲಕ್ಷಕ್ಕೂ ಹೆಚ್ಚು ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ಕೇಳಿದಷ್ಟು ಒಡವೆ, ಹುಡುಗನಿಗೊಂದು ಬೈಕ್ ಎಲ್ಲವನ್ನೂ ಕೊಟ್ಟು ಮದುವೆ ಮಾಡಿದ್ರು. ಇದನ್ನೂ ಓದಿ: ಮುಗಿಯದ ಶಿವಾಜಿ‌ ಮೂರ್ತಿ ಗಲಾಟೆ – ಬಾಗಲಕೋಟೆ ಬಂದ್‌ಗೆ ಮುಂದಾದ ಬಿಜೆಪಿಗರು

    ಮದುವೆಯಾದ ಎರಡೇ ದಿನಕ್ಕೆ ತಬರೇಜ್ ಪಾಷಾ ಸಾನಿಯಾ ಖಾನಂಗೆ ಕಿರುಕುಳ ನೀಡಲು ಶುರು ಮಾಡಿಕೊಂಡಿದ್ದ. ನಿಮ್ಮಪ್ಪ ಕೋಟಿ ಕೋಟಿ ಕೊಟ್ಟು ಮದುವೆ ಮಾಡಿ ಕೊಟ್ಟಿಲ್ಲ ಮನೆಯಲ್ಲಿ ನಾನು ಹೇಳಿದಂತೆ ಕೇಳಿಕೊಂಡು ಮನೆ ಕೆಲಸ ಮಾಡಿಕೊಂಡಿರಬೇಕು ಎಂದು ತಾಕೀತು ಮಾಡುತ್ತಿದ್ದ. ಹೊಡೆಯೋದು ಬಡಿಯೋದು, ಗ್ಯಾಸ್ ಆನ್ ಮಾಡಿ ಬ್ಲಾಸ್ಟ್ ಮಾಡಿ ಸಾಯಿಸಿಬಿಡ್ತೀನಿ ಎಂದೆಲ್ಲಾ ಕಿರುಕುಳ ನೀಡಲು ಆರಂಭಿಸಿದ್ದ. ಇದನ್ನು ಸಹಿಸಿಕೊಳ್ಳಲಾಗದೆ ಆಗಸ್ಟ್ 11 ರಂದು ಸಾನಿಯಾ ತವರು ಮನೆಗೆ ವಾಪಸ್ ಬಂದಿದ್ದಳು. ಅಷ್ಟಕ್ಕೆ ಸುಮ್ಮನಾಗದ ತಬರೇಜ್ ಸಾನಿಯಾ ಫೋನ್‍ಗೆ ಮೆಸೇಜ್ ಮಾಡಿ ನಿನ್ನ ಬಿಡೋದಿಲ್ಲ ನಿಮ್ಮ ಅಪ್ಪನನ್ನು ಸಾಯಿಸ್ತೀನಿ ಎಂದೆಲ್ಲಾ ಧಮ್ಕಿ ಹಾಕುತ್ತಿದ್ದನಂತೆ.

    ಕಳೆದ ರಾತ್ರಿ ಕೂಡಾ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ವಿಷಯ ತಿಳಿದ ಷರೀಫ್ ಕೇಳೋದಕ್ಕೆಂದು ತಬರೇಜ್ ಮನೆಗೆ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ ತಬರೇಜ್ ಹಾಗೂ ಆತನ ತಾಯಿ ಜಬೀನಾ ತಾಜ್ ಬಾಬು ಷರೀಫ್‍ಗೆ ಚಾಕುವಿನಿಂದ ಇರಿದಿದ್ದಾರೆ. ಈ ವೇಳೆ ತಕ್ಷಣ ಬಾಬು ಷರೀಫ್‍ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ್ರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಳಿಕ ಕೇಸ್ ದಾಖಲಿಸಿಕೊಂಡ ಪೊಲೀಸರು ಪರಾರಿಯಾಗಲು ಯತ್ನಿಸಿದ ತಬರೇಜ್ ಪಾಷ ಹಾಗೂ ತಾಯಿ ಜಬೀನಾ ತಾಜ್‍ನನ್ನು ಬಂಧಿಸಿದ್ದಾರೆ.

    ಮಗಳು ಸುಖವಾಗಿರಲಿ ಅಂತ ಕಷ್ಟುಪಟ್ಟು ದುಡಿದ ಹಣವನ್ನೆಲ್ಲಾ ಖರ್ಚು ಮಾಡಿ ಅದ್ದೂರಿಯಾಗಿ ಮದುವೆ ಮಾಡಿದ್ದ ಬಾಬು ಷರೀಫ್‍ಗೆ, ತನ್ನ ಮಗಳ ಮದುವೆ0iÉುೀ ಮಸಣದ ಹಾದಿಯನ್ನು ತೋರಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಗುವನ್ನು ನೋಡಲೆಂದು ಪತ್ನಿ ಮನೆಗೆ ಹೋದಾಗ ಹಲ್ಲೆಗೈದು ಹಲ್ಲು ಕಿತ್ತ ಮಾವ!

    ಮಗುವನ್ನು ನೋಡಲೆಂದು ಪತ್ನಿ ಮನೆಗೆ ಹೋದಾಗ ಹಲ್ಲೆಗೈದು ಹಲ್ಲು ಕಿತ್ತ ಮಾವ!

    ತಿರುವನಂತಪುರಂ: ವ್ಯಕ್ತಿಯೊಬ್ಬ ದೂರವಾದ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ (Kerala) ನಡೆದಿದೆ.

    ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕುರುತಲಿಕಾಡ್ ಪೊಲೀಸರು ಆರೋಪಿ ವಿಜಯನ್ (58) ಎಂಬಾತನನ್ನು ಬಂಧಿಸಿದ್ದಾರೆ. ಗಾಯಾಳುವನ್ನು ರಾಜ್‍ಮೋಹನ್ ಎಂದು ಗುರುತಿಸಲಾಗಿದೆ.

    ಕಳೆದ ವರ್ಷಗಳಿಂದ ರಾಜ್ ಮೋಹನ್ ತನ್ನ ಪತ್ನಿಯಿಂದ ದೂರವಾಗಿದ್ದು, ಆಕೆ ತವರು ಮನೆ ಸೇರಿಕೊಂಡಿದ್ದಳು. ಈ ದಂಪತಿಗೆ ಮಗು ಕೂಡ ಇತ್ತು. ಹೀಗಾಗಿ 4 ವರ್ಷಗಳ ಬಳಿಕ ರಾಜ್ ಮೋಹನ್ ತನ್ನ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ.

    ರಾಜ್ ಮೋಹನ್ ಪತ್ನಿ ಮನೆಗೆ ಹೋಗುತ್ತಿದ್ದಂತೆಯೇ ಅಲ್ಲಿ ಪತ್ನಿ ಇರಲಿಲ್ಲ. ಆಕೆ ಅಲ್ಲಿ ಮಗುವನ್ನು ಬಿಟ್ಟು ಬೇರೊಬ್ಬನ ಜೊತೆ ಹೋಗಿದ್ದಳು. ಇತ್ತ ಅಳಿಯ ಬಂದಿದ್ದನ್ನು ನೋಡಿದ ಮಾವ ಕಬ್ಬಿಣದ ರಾಡ್‍ನಿಂದ ಹಿಗ್ಗಾಮುಗ್ಗವಾಗಿ ಹಲ್ಲೆ ಮಾಡಿದ್ದಾನೆ. ರಾಡ್‍ನಿಂದ ಮುಖಕ್ಕೆ ಹೊಡೆದ ಪರಿಣಾಮ ರಾಜ್ ಮೋಹನ್ ಹಲ್ಲುಗಳೇ ಕಿತ್ತು ಹೊರಬಂದಿವೆ. ಇದನ್ನೂ ಓದಿ: ಪತ್ನಿಯ ಬೆರಳನ್ನೇ ಕಚ್ಚಿ ತಿಂದ ಪತಿ

    ಸದ್ಯ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆರೋಪಿಯನ್ನು ಬಂಧಿಸಿರುವುದಾಗಿ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಬೈಜು ಬಿಂದುರಾಜ್ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]