Tag: Fazil

  • ಸುರತ್ಕಲ್ ಫಾಜಿಲ್ ಹತ್ಯೆ ಕೇಸಲ್ಲಿ ನಾಲ್ವರು ಭಾಗಿ ಶಂಕೆ

    ಸುರತ್ಕಲ್ ಫಾಜಿಲ್ ಹತ್ಯೆ ಕೇಸಲ್ಲಿ ನಾಲ್ವರು ಭಾಗಿ ಶಂಕೆ

    ಮಂಗಳೂರು: ಸುರತ್ಕಲ್‍ನಲ್ಲಿ ಫಾಜಿಲ್ ಹತ್ಯೆ ಪ್ರಕರಣ ಸ್ಫೋಟಕ ಸುಳಿವು ಪೊಲೀಸರಿಗೆ ಲಭ್ಯವಾಗಿದೆ ಅಂತ ತಿಳಿದು ಬಂದಿದೆ.

    ಸುಹಾಸ್, ಮೋಹನ್, ಗಿರಿ, ಅಮಿತ್ ಎಂಬ ನಾಲ್ವರು ಫಾಜಿಲ್ ಕೊಂದಿದ್ದಾರಾ ಅನ್ನೋದನ್ನು ಪೊಲೀಸರು ತನಿಖೆ ನಡೆಸ್ತಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಎಂಬುದಾಗಿ ಮಾಹಿತಿ ಸಿಕ್ಕಿದ್ದು, ಅಮಿತ್ ಕ್ರಾಸ್ತಾ ಎಂಬಾತ ಕಾರು ಡ್ರೈವರ್ ಆಗಿದ್ದ ಎನ್ನಲಾಗ್ತಿದೆ. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್

    ಇಂದು ನಾಲ್ವರು ಆರೋಪಿಗಳ ಬಂಧನ ಸಾಧ್ಯತೆ ಇದೆ. ಈ ಹಿಂದೆ ಕೊಲೆ ಪ್ರಕರಣಗಳಲ್ಲಿ ಸುಹಾಸ್ ಭಾಗಿಯಾಗಿದ್ದ. ಇನ್ನು, ಹತ್ಯೆಗೆ ಬಳಸಲಾಗಿದ್ದ ಇಯಾನ್ ಕಾರ್ ಉಡುಪಿಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಾಜರಕಟ್ಟೆ ಎಂಬ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಬಿಳಿ ಬಣ್ಣದ ಕಾರ್‍ನ ಮಾಲೀಕ ಅಜಿತ್ ಕ್ರಾಸ್ತಾನನ್ನು ಪೊಲೀಸರು ಬಂಧಿಸಿದ್ದಾರೆ.

    ಈತ ಸುರತ್ಕಲ್‍ನ ಪ್ರೇಮ ನಗರದ ನಿವಾಸಿಯಾಗಿದ್ದು, ಬಾಡಿಗೆ ವಾಹನಗಳನ್ನು ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದ. ಕಾರ್‍ನ ಸೀಟ್‍ಗಳು ರಕ್ತಸಿಕ್ತವಾಗಿದ್ದು, ಕಾರಿನಲ್ಲಿ ಮೈಕ್ರೋ ಸಿಮ್ ಸೇರಿದಂತೆ ವಾಟರ್ ಬಾಟ್ಲಿ, ಒಂದಷ್ಟು ಹಣ ಮತ್ತಿತರ ದಾಖಲೆಗಳು ಪತ್ತೆಯಾಗಿವೆ. ಸಿಕ್ಕಿರೋ ಸಿಮ್ ಯಾರ ಹೆಸರಿನಲ್ಲಿದೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.

    ಆರೋಪಿಗಳ ಬೆರಳಚ್ಚು ಮತ್ತು ಪ್ರಮುಖ ಸಾಕ್ಷಿಗಳು ನಾಶವಾಗಬಾರದು ಎಂಬ ಹಿನ್ನೆಲೆ ಸಂಪೂರ್ಣವಾಗಿ ಪ್ಲಾಸ್ಟಿಕ್‍ನಿಂದ ಕಾರನ್ನು ಮುಚ್ಚಲಾಗಿದೆ. ಇವತ್ತು ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ. ಇದನ್ನೂ ಓದಿ: ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    Live Tv
    [brid partner=56869869 player=32851 video=960834 autoplay=true]

  • ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ

    ದಕ್ಷಿಣ ಕನ್ನಡದಲ್ಲಿ ನಿರ್ಬಂಧ ಇನ್ನೆರಡು ದಿನ ವಿಸ್ತರಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನಗಳ ಅವಧಿಯಲ್ಲಿ 3 ಕೊಲೆಯಾಗಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಇಂತಹ ಸನ್ನಿವೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈಟ್‌ ಕರ್ಫ್ಯೂ ಜಾರಿಗೊಳಿಸಿದ್ದು, ಅದನ್ನು ಇನ್ನೆರಡು ದಿನಗಳ ಕಾಲ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.

    ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಪೊಲೀಸ್‌ ಇಲಾಖೆ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಈ ನಿರ್ಬಂಧವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    ಸಂಜೆ 6ರಿಂದ ಬೆಳಗ್ಗೆ 6 ಗಂಟೆ ಅವಧಿಯಲ್ಲಿ ಯಾವುದೇ ವ್ಯಾಪಾರ ವಹಿವಾಟು ಹಾಗೂ ಅನಗತ್ಯ ವಾಹನಗಳ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಲಾಗಿದೆ.

    ಜಿಲ್ಲೆಯಲ್ಲಿ ಮದ್ಯದ ಅಂಗಡಿ ಮುಚ್ಚುವ ಆದೇಶವನ್ನೂ ಮುಂದುವರಿಸಲಾಗಿದೆ. ಹೀಗಾಗಿ ಮತ್ತೆರಡು ದಿನಗಳ ಕಾಲ ಮದ್ಯದಂಗಡಿಗಳು ಸಂಪೂರ್ಣ ಬಂದ್ ಆಗಿರಲಿವೆ. ಅಲ್ಲದೇ ಆ.6 ರವರೆಗೆ ಜಿಲ್ಲೆಯಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡಿ ಆದೇಶಿಸಲಾಗಿದೆ. ಇದನ್ನೂ ಓದಿ: ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

    ಜಿಲ್ಲೆಯಲ್ಲಿ ಮಸೂದ್‌, ಪ್ರವೀಣ್‌ ನೆಟ್ಟಾರು, ಫಾಝಿಲ್‌ ಎಂಬವರನ್ನು ಒಬ್ಬರಾದ ಮೇಲೊಬ್ಬರಂತೆ 10 ದಿನಗಳ ಅವಧಿಯಲ್ಲಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಸರಣಿ ಕೊಲೆಗಳ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಯಿತು. ಇದರಿಂದ ಎಚ್ಚೆತ್ತ ಪೊಲೀಸ್‌ ಇಲಾಖೆ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆ ಕೂಡ ನಡೆಸಿತು. ಮುನ್ನೆಚ್ಚರಿಕೆ ಕ್ರಮವಾಗಿ ವಿಧಿಸಲಾಗಿದ್ದ ಕರ್ಫ್ಯೂ ಹಾಗೂ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    ಫಾಜಿಲ್ ಹತ್ಯೆ ಪ್ರಕರಣ – ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ!

    ಉಡುಪಿ: ಸುರತ್ಕಲ್‌ನ ಯುವಕ ಫಾಜಿಲ್ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಇಯಾನ್ ಕಾರು ಬಳಸಿರುವ ಮಾಹಿತಿ ಹೊರ ಬಿದ್ದಿತ್ತು. ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಅಪರಿಚಿತ ಕಾರು ಪತ್ತೆಯಾಗಿದ್ದು, ಇದೀಗ ಕಾರಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.

    ಪಡುಬಿದ್ರಿ ಠಾಣೆ ವ್ಯಾಪ್ತಿಯ ಕಾಜರಕಟ್ಟೆಯ ನಿರ್ಜನ ಪ್ರದೇಶದಲ್ಲಿ ಕಾರು ಅನುಮಾನಾಸ್ಪದವಾಗಿ ಪತ್ತೆಯಾಗಿದ್ದು, ಅದರಲ್ಲಿ ಮೈಕ್ರೋ ಸಿಮ್ ಪತ್ತೆಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ರಕ್ತದ ಕಲೆಗಳೂ ಪತ್ತೆಯಾಗಿದೆ.

    ನೀರಿನ ಬಾಟಲಿ, ಚಿಲ್ಲರೆ ಹಣವೂ ಕಾರಿನಲ್ಲಿದ್ದು, ಆರೋಪಿಗಳು ಈ ಕಾರನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಇನ್ನೊಂದು ಕಾರಿನಲ್ಲಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರ ಕಣ್ತಪ್ಪಿಸಲು ಆರೋಪಿಗಳು ಟೋಲ್ ಗೇಟ್ ಅನ್ನು ತಪ್ಪಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ISIS ನಂಟು – ತುಮಕೂರಿನಲ್ಲೂ ಶಂಕಿತ ಉಗ್ರನ ಸೆರೆ

    ಫಾಜಿಲ್ ಹತ್ಯೆ ಸಂಬಂಧ 51 ಜನರನ್ನು ವಿಚಾರಣೆ ಮಾಡಲಾಗಿತ್ತು. 8 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಘಟನೆಯ ಬಳಿಕ ಸಿಸಿಟಿವಿ ದೃಶ್ಯ ಆಧರಿಸಿ 8 ಇಯಾನ್ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಸಿಸಿಟಿವಿಯಲ್ಲಿ ಕಾರಿನ ನಂಬರ್ ಸ್ಪಷ್ಟವಾಗಿ ಕಾಣಿಸದ ಕಾರಣ ಕಾರಿನ ಇತರ ಗುರುತುಗಳನ್ನು ಹಿಡಿದು ತನಿಖೆ ಮಾಡಲಾಗಿತ್ತು.

    ಇದೀಗ ಪತ್ತೆಯಾಗಿರುವ ಕಾರನ್ನೇ ಆರೋಪಿಗಳು ಬಳಸಿದ್ದರೆಯೇ ಎಂಬುದು ಇನ್ನೂ ದೃಢವಾಗಿಲ್ಲ. ಇದನ್ನೂ ಓದಿ: ಕಾಳಿ ಸ್ವಾಮಿ ವಿರುದ್ಧ ಕಾನೂನು ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

    Live Tv
    [brid partner=56869869 player=32851 video=960834 autoplay=true]

  • ಫಾಜಿಲ್ ಹತ್ಯೆ ಪ್ರಕರಣ – ಓರ್ವ ಆರೋಪಿ ವಶಕ್ಕೆ

    ಫಾಜಿಲ್ ಹತ್ಯೆ ಪ್ರಕರಣ – ಓರ್ವ ಆರೋಪಿ ವಶಕ್ಕೆ

    ಮಂಗಳೂರು: ಸುರತ್ಕಲ್‍ನ ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆರೋಪಿ ಅಜಿತ್‌ ಎಂಬಾತ ಹತ್ಯೆ ಬಳಿಕ ಆರೋಪಿಗಳನ್ನು ಕಾರ್‌ನಲ್ಲಿ ಕರೆದೊಯ್ದಿದ್ದ. ಕಾರ್ ಚಾಲಕನಾಗಿದ್ದ ಕಾರಣಕ್ಕೆ ಪೊಲೀಸರು‌ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ದ.ಕ ಜಿಲ್ಲೆಯಲ್ಲಿ 3 ದಿನಗಳ ಕಾಲ ಕಟ್ಟೆಚ್ಚರ – ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ

    ಘಟನೆ ವಿವರ:
    ಜುಲೈ 28 ರಂದು ಮಂಗಳೂರು ಬಳಿಯ ಸುರತ್ಕಲ್‍ನಲ್ಲಿ ಕಾರ್‌ನಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಬಟ್ಟೆ ಅಂಗಡಿಗೆ ನುಗ್ಗಿ ಮಹಮ್ಮದ್ ಫಾಜಿಲ್ (23)ನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ಗ್ಯಾಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಫಾಸಿಲ್ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಫಾಜಿಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದ. ಇದನ್ನೂ ಓದಿ:  ಪ್ರವೀಣ್‌ ಹತ್ಯೆ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಯುವಕನ ಬರ್ಬರ ಹತ್ಯೆ

    ಸುರತ್ಕಲ್ ಕಾಟಿಪಳ್ಳ ಮಂಗಳಪೇಟೆ ನಿವಾಸಿ ಮಹಮ್ಮದ್ ಫಾಜಿಲ್ ಜುಲೈ 28ರ ರಾತ್ರಿ 8 ಗಂಟೆಯ ಸುಮಾರಿಗೆ ಎಂಆರ್‌ಪಿಎಲ್ ರಸ್ತೆಯ ಸುರತ್ಕಲ್ ಮಾರುಕಟ್ಟೆ ಸನಿಹದ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಗೆ ಹೋಗುತ್ತಿರುವ ಸಂದರ್ಭದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿತ್ತು. ಆ ಬಳಿಕ ಕರಾವಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಮತ್ತೆ ಪರಿಸ್ಥಿತಿ ತಿಳಿಗೊಂಡಿದ್ದು, ಪೊಲೀಸರು ಶಾಂತಿಯುತ ವಾತಾವರಣ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ: ಸಿ.ಎಂ ಇಬ್ರಾಹಿಂ

    ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ: ಸಿ.ಎಂ ಇಬ್ರಾಹಿಂ

    ಬೀದರ್: ಮುಸ್ಲಿಂ ಎಂಬ ಕಾರಣಕ್ಕೆ ಸಿಎಂ ಫಾಝಿಲ್ ಮನೆಗೆ ಹೋಗದೆ ತಾರತಮ್ಯ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಪಕ್ಷ ಸಂಘಟನೆಗೆಂದು ಬೀದರ್‌ಗೆ ಬಂದಿದ್ದ ಸಿ.ಎಂ ಇಬ್ರಾಹಿಂ, ಮುಸ್ಲಿಂ ಎಂಬ ಕಾರಣಕ್ಕೆ ಫಾಝಿಲ್ ಮನೆಗೆ ಸಿಎಂ ಹೋಗಿಲ್ಲ. ಆದರೆ ಪ್ರವೀಣ್ ಮನೆಗೆ ಮಾತ್ರ ಹೋಗಿದ್ದಾರೆ. ಇದು ಮನುಷ್ಯತ್ವನಾ, ಒಬ್ಬ ಮಾಜಿ ಮುಖ್ಯಮಂತ್ರಿ ಎಸ್.ಆರ್ ಬೊಮ್ಮಾಯಿ ಅವರ ಮಗನಾಗಿ ಈ ರೀತಿ ಮಾಡಿದ್ದು ಸರಿಯಲ್ಲ. ಎಲ್ಲರೂ ಮನುಷ್ಯರೆ ಅಲ್ವಾ? ನೀವು ಯಾರನ್ನು ತೃಪ್ತಿ ಪಡಿಸಲು ಸಿಎಂ ಆಗಿದ್ದೀರಿ? ಗೃಹ ಸಚಿವರು ಹಾಗೂ ಸಿಎಂ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಂಬಂಧಿ ಜೊತೆ ಸೇರಿ ಪತ್ನಿ ಮೇಲೆ ಅತ್ಯಾಚಾರ ಎಸಗಿ ತಲಾಖ್‌ ನೀಡಿದ ಪತಿ

    ಹತ್ಯೆ ವಿಷಯದಲ್ಲಿ ಯಾಕೆ ಇಂಟೆಲಿಜೆನ್ಸ್? ಪೊಲೀಸರು ಫೇಲಾಗಿದ್ದಾರೆ ಎಂದು ಸಿಎಂ ಇದನ್ನು ನ್ಯಾಯಾಂಗ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು. ಕೇಶವ ಕೃಪಾ ಹಾಗೂ ಬಸವ ಕೃಪಾ ಹೊಡೆದಾಟ ಶುರುವಾಗಿದ್ದು, ಅದನ್ನು ಮುಗಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಬಾರ್ ಆರೋಪ- ಸ್ಮೃತಿ ಪುತ್ರಿ ವಿರುದ್ಧದ ಟ್ವೀಟ್‌ಗಳನ್ನು 24 ಗಂಟೆಯೊಳಗೆ ಅಳಿಸಲು ನ್ಯಾಯಾಲಯ ಆದೇಶ

    Live Tv
    [brid partner=56869869 player=32851 video=960834 autoplay=true]

  • ದಯವಿಟ್ಟು ಯಾರೂ ಪ್ರಚೋದನೆ ಕೊಡುವಂತಹ ಹೇಳಿಕೆ ಕೊಡಬೇಡಿ: ಯು.ಟಿ ಖಾದರ್

    ದಯವಿಟ್ಟು ಯಾರೂ ಪ್ರಚೋದನೆ ಕೊಡುವಂತಹ ಹೇಳಿಕೆ ಕೊಡಬೇಡಿ: ಯು.ಟಿ ಖಾದರ್

    ಮಂಗಳೂರು: ಸರಣಿ ಕೊಲೆಗಳಿಂದ ಈ ಭಾಗದ ಜನರು ಆತಂಕದಿಂದ ಭಯದ ವಾತಾವರಣದಲ್ಲಿ ಇದ್ದಾರೆ. ಆತ್ಮವಿಶ್ವಾಸ ಮಾತು ಹಾಗೂ ಜನರು ನಿರ್ಭಯದಲ್ಲಿ ಓಡಾಡುವಂತಹ ಕೆಲಸ ಸರ್ಕಾರ ಮಾಡಬೇಕಿದೆ. ದಯವಿಟ್ಟು ಯಾರೂ ಪ್ರಚೋದನೆ ಕೊಡುವಂತಹ ಹೇಳಿಕೆ ಕೊಡಬೇಡಿ ಎಂದು ಮಾಜಿ ಸಚಿವ ಯು.ಟಿ ಖಾದರ್ ಮನವಿ ಮಾಡಿಕೊಂಡಿದ್ದಾರೆ.

    ಸುರತ್ಕಲ್‍ನಲ್ಲಿ ಫಾಝಿಲ್ ಅಂತಿಮ ದರ್ಶನ ಪಡೆದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, 10 ದಿನಗಳ ಅಂತರದಲ್ಲಿ ಮೂವರ ಹತ್ಯೆ ನಡೆದಿದೆ. ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಮೂವರು ಅಮಾಯಕರು ಬಲಿಯಾಗಿದ್ದಾರೆ. ಈ ಸರ್ಕಾರದಿಂದ ಜನರಿಗೆ ರಕ್ಷಣೆ ಇಲ್ಲ ಎಂದು ಗೊತ್ತಾಗಿದೆ. ಫಾಝೀಲ್ ಎಂ.ಬಿ.ಎ ಮಾಡಿ ಫೈರ್ ಸೇಫ್ಟಿ ಕೋರ್ಸ್ ಮಾಡಿದ್ದ. ಉದ್ಯೋಗ ಸಿಗದೆ ಗ್ಯಾಸ್ ಲೋಡ್ ಅನ್ ಲೋಡಿಂಗ್ ಕೆಲಸ ಮಾಡ್ತಿದ್ದ. ಇಂತಹ ಅಮಾಯಕರ ಕೊಲೆಯಾಗಿದೆ. ಸರ್ಕಾರ ಇಂತಹ ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪರಿಹಾರ ನೀಡುವ ವಿಚಾರದಲ್ಲಿಯೂ ಸರ್ಕಾರ ತಾರತಮ್ಯ ಮಾಡಬಾರದು ಎಂದರು.

    ನೈಜ್ಯ ಅಪರಾಧಿಗಳನ್ನ ಪತ್ತೆ ಹಚ್ಚುವಂತಹ ಕೆಲಸ ಸರ್ಕಾರ ಮಾಡಬೇಕು. ಈ ಘಟನೆಗಳಿಗೆ ಕುಮ್ಮಕ್ಕು ಕೊಟ್ಟವರು, ಸಹಕರಿಸಿದವರನ್ನ ಪತ್ತೆ ಹಚ್ಚುವಂತ ಕೆಲಸ ಸರ್ಕಾರ ಹಾಗೂ ಪೊಲೀಸರು ಮಾಡಬೇಕು. ಈ ಮೂಲಕ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಸರ್ಕಾರ ಯಾವುದೇ ತಾರತಮ್ಯ ಮಾಡದೆ ಸಮಾನತೆಯಿಂದ ಸರಣಿ ಕೊಲೆಗಳ ಬಗ್ಗೆ ತನಿಖೆ ನಡೆಸಬೇಕು. ಅವರಿಗೆ ಕೊಡುವ ಪರಿಹಾರದಲ್ಲೂ ತಾರತಮ್ಯ ಮಾಡದೆ ಸರ್ಕಾರದ ವಿಶ್ವಾಸ ಬರುವಂತ ಕೆಲಸ ಮಾಡಬೇಕು ಎಂದು ಹೇಳಿದರು.

    ಇದು ಪೊಲೀಸರ ವೈಫಲ್ಯ ಅಲ್ಲ, ಸರ್ಕಾರದ ವೈಫಲ್ಯ. ಸರ್ಕಾರ ಹಸ್ತಕ್ಷೇಪ ಮಾಡದೆ ಪೊಲೀಸರಿಗೆ ಸ್ವಾತಂತ್ರ್ಯ ತನಿಖೆ ಮಾಡಲು ಬಿಡಬೇಕು. ಆಗ ಪೊಲೀಸರು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಾರೆ. ಸರ್ಕಾರ ಯಾವುದೇ ತಾರತಮ್ಯ ಇಲ್ಲದ, ಸೌಹರ್ದತೆ ನಿಲುವನ್ನ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಕೊಲೆಗಳಾದಾಗ ಯಾವ ರೀತಿ ನಿಭಾಯಿಸಬೇಕು ಅಂತಾ ನಮಗೆ ಗೊತ್ತಿದೆ: ಬೊಮ್ಮಾಯಿ ಕಿಡಿ

    ಇದೇ ವೇಳೆ ಯುಪಿ ಮಾದರಿಯಲ್ಲಿ ಕಾನೂನು ಜಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಖಾದರ್, ಕರ್ನಾಟಕ ದೇಶಕ್ಕೇ ಮಾದರಿ. ಯುಪಿ ಮಾದರಿ ಏನು ಎಂದು ಅಲ್ಲಿ ಹೋದರೆ ಗೊತ್ತಾಗುತ್ತೆ. ನಾವು ಬೇರೆಯವರನ್ನ ನೋಡಿ ಕಲಿಯಬೇಕಿಲ್ಲ, ನಾವು ದೇಶಕ್ಕೆ ಮಾದರಿಯಾಗಬೇಕು. ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ, ಧಿಟ್ಟವಾದ ನಿರ್ಧಾರ ತೆಗೆದುಕೊಳ್ಳಿ. ಪ್ರಚೋದನಕಾರಿ ಹೇಳಿಕೆ, ವಿಷ ಬೀಜ ಬಿತ್ತುವವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಮದು ಆಗ್ರಹಿಸಿದರು.

    Live Tv
    [brid partner=56869869 player=32851 video=960834 autoplay=true]

  • ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

    ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟ: ಸಿದ್ದರಾಮಯ್ಯ

    ಬೆಂಗಳೂರು: ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಎಂದು ಫಾಜಿಲ್ ಹತ್ಯೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಜಿಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ. ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?

    ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಸಿಎಂ ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿದೆ. ಆದರೆ, ರಾಜ್ಯ ಬಿಜೆಪಿ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ

    Live Tv
    [brid partner=56869869 player=32851 video=960834 autoplay=true]