Tag: FDA Exam

  • ಕಲಬುರಗಿಯಲ್ಲಿ ಪರೀಕ್ಷಾ ಅಕ್ರಮ ಕೇಸ್ – ಸಿಐಡಿ ಫುಲ್ ಅಲರ್ಟ್

    ಕಲಬುರಗಿಯಲ್ಲಿ ಪರೀಕ್ಷಾ ಅಕ್ರಮ ಕೇಸ್ – ಸಿಐಡಿ ಫುಲ್ ಅಲರ್ಟ್

    ಯಾದಗಿರಿ/ಕಲಬುರಗಿ: ಎಫ್‍ಡಿಎ ಪರೀಕ್ಷೆಯಲ್ಲಿ ಅಕ್ರಮ ನಡೆಸಿ ಈಗಾಗಲೇ ಕಲಬುರಗಿ ಹಾಗೂ ಯಾದಗಿರಿ (Yadagiri) ಜಿಲ್ಲೆಯಲ್ಲಿ 23 ಆರೋಪಿಗಳು ಬಂಧಿತರಾಗಿದ್ದಾರೆ. ಆರ್ ಡಿ ಪಾಟೀಲ್‍ನನ್ನೂ (RD Patil) ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

    ಈಗ ಆರ್ ಡಿ ಪಾಟೀಲ್ ಸೇರಿ ಮೂವರನ್ನು 4 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆದರೆ ಇಡೀ ಪ್ರಕರಣದಲ್ಲಿ ಸಿದ್ರಾಮ ಆರ್ ಡಿ ಪಾಟೀಲನಿಗೆ ದಾಳವಾಗಿ ಬಳಕೆಯಾಗಿದ್ದ. ಈತನೇ 24 ಅಭ್ಯರ್ಥಿಗಳನ್ನ ಹುಡುಕಿ ಅವರೆಲ್ಲರಿಗೂ ಬ್ಲೂಟೂತ್ ಡಿವೈಸ್ ಹಾಗೂ ಮೊಬೈಲ್ ಕೊಟ್ಟಿದ್ದ. ಇನ್ನೂ ಈ ಸಿದ್ರಾಮನ ರೀತಿಯಲ್ಲೇ ಬಹುದೊಡ್ಡ ಸಂಚು ಮಾಡಿದ್ದ ಆರ್ ಡಿ ಪಾಟೀಲನ ಮತ್ತೊಬ್ಬ ಸಹಚರ ಸಾಗರ್ ಹಂಚಿನಾಳ. ಈತನೂ 20ಕ್ಕೂ ಹೆಚ್ಚು ಅಭ್ಯರ್ಥಿಗಳನ್ನ ಹುಡುಕಿ ಆರ್ ಪಾಟೀಲನ ಬಳಿ ಕರೆದೊಯ್ದಿದ್ದ. ಅದಕ್ಕಾಗಿ ವಾಟ್ಸಪ್ ಗ್ರೂಪ್ ಕ್ರಿಯೆಟ್ ಮಾಡಿ ಕಮ್ಯೂನಿಕೇಷನ್ ಮಾಡುತ್ತಿದ್ದ. ಇದೆಲ್ಲಾ ಸಿದ್ರಾಮನ ಮೊಬೈಲ್ ತಪಾಸಣೆ ಮಾಡಿದಾಗ ಪೊಲೀಸರಿಗೆ ಅಸಲಿ ಸತ್ಯ ಗೊತ್ತಾಗಿದೆ.

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಈ ಸಾಗರ್ ತಲೆಮರೆಸಿಕೊಂಡಿದ್ದು, ಈತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಸದ್ಯ ಕೇಸ್ ಅನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಬಂಧಿತ ಆರೋಪಿಗಳ ಬಳಿ ಸಿಕ್ಕ ಸಾಕ್ಷ್ಯಗಳ ಪ್ರಕಾರ ಅಕ್ರಮ ನಡೆದಿರೋದು ಕೇವಲ ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಮಾತ್ರ ಅಲ್ಲ. ಇದರ ವ್ಯಾಪ್ತಿ ಉತ್ತರ ಕರ್ನಾಟಕದ ಎಂಟತ್ತು ಜಿಲ್ಲೆಗಳಿಗೆ ವ್ಯಾಪಿಸಿದೆ. ಇದನ್ನೂ ಓದಿ: ವಿಜಯದ ನಾಗಾಲೋಟದತ್ತ ಟೀಂ ಇಂಡಿಯಾ- ಕೊನೆಯ ಲೀಗ್ ಮ್ಯಾಚ್‍ಗೆ ಸಾಕ್ಷಿಯಾಗಲಿದೆ ಚಿನ್ನಸ್ವಾಮಿ ಸ್ಟೇಡಿಯಂ

    ಕಲಬುರಗಿ, ಯಾದಗಿರಿ, ಬಿಜಾಪುರ, ಬಾಗಲಕೋಟ, ರಾಯಚೂರು, ಸುತ್ತಮುತ್ತಲ ಜಿಲ್ಲೆಗಳಿಗೆ ಈ ಜಾಲ ವ್ಯಾಪಿಸಿರೋ ಸತ್ಯ ಬಯಲಾಗಿದೆ. ಹೀಗಾಗಿ ಅಕ್ರಮಕ್ಕೆ ಬುಕ್ ಆದವ್ರೆಲ್ಲಾ ಯಾವ ಯಾವ ಕೇಂದ್ರದಲ್ಲಿ ಪರೀಕ್ಷೆ ಬರೆದ್ರು, ಯಾರೆಲ್ಲಾ ಆರ್ ಡಿ ಪಾಟೀಲ್ ಜೊತೆ ಬುಕ್ ಆಗಿದ್ರು ಅನ್ನೋದರ ಬಗ್ಗೆ, ವಾಟ್ಸಪ್ ಗ್ರೂಪ್ ಜಾಡು ಹಿಡಿದು ತನಿಖೆ ಆರಂಭಿಸಿದ್ದ ಯಾದಗಿರಿ ಪೊಲೀಸರು ಭಾಗಶಃ ಮಾಹಿತಿ ಕಲೆ ಹಾಕಿದ್ದಾರೆ. ಅದನ್ನ ಸಿಐಡಿ ತಂಡಕ್ಕೂ ಹಸ್ತಾಂತರ ಮಾಡಲಿದ್ದಾರೆ.

  • ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯ

    ಎಫ್‍ಡಿಎ ಪರೀಕ್ಷೆ ಅಕ್ರಮ – ಸರ್ಕಾರಕ್ಕೆ ಮಾಹಿತಿ ಇದ್ದರೂ ನಿರ್ಲಕ್ಷ್ಯ

    ಯಾದಗಿರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಎಫ್‍ಡಿಎ ಪರೀಕ್ಷೆಯ (FDA Exam) ಅಕ್ರಮದ ಬಗ್ಗೆ 15 ದಿನಗಳ ಮೊದಲೇ ಸಚಿವ ಪ್ರಿಯಾಂಕ್ ಖರ್ಗೆ (Mallikarjun Kharge) ಅವರಿಗೆ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಸಂಘದ ಮುಖಂಡ ರವಿಶಂಕರ್ ಮಾಲೀಪಾಟೀಲ್ ಗಮನಕ್ಕೆ ತಂದಿದ್ದರು ಎಂಬ ವಿಚಾರ ತಿಳಿದು ಬಂದಿದೆ.

    ಪರೀಕ್ಷೆಗಳಲ್ಲಿ ಬ್ಲೂಟೂತ್ ದುರ್ಬಳಕೆ ಜೊತೆಗೆ ಪಿಎಸ್‍ಐ ಅಕ್ರಮ ಮಾದರಿಯಲ್ಲೇ ಉತ್ತರಗಳ ಜಾಗ ಖಾಲಿ ಬಿಟ್ಟು ನಂತರ ತುಂಬುವ ಸಂಚು ನಡೆಯುತ್ತಿದೆ. ಇದನ್ನು ತಡೆಗಟ್ಟಬೇಕೆಂದು ರವಿಶಂಕರ್ ಅ.13 ರಂದು ಸಚಿವ ಪ್ರಿಯಾಂಕ ಖರ್ಗೆ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರು. ಇದನ್ನೂ ಓದಿ: ಹೆಚ್‌ಡಿಕೆ ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಹೆಚ್‌ಸಿ ಬಾಲಕೃಷ್ಣ

    ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಮಾದರಿಯಲ್ಲೇ, ವಿವಿಧ ನಿಗಮ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯಲ್ಲೂ ಅಕ್ರಮ ನಡೆದಿದೆ. ಈ ಅಕ್ರಮದ ಸುಳಿವಿದ್ದರೂ ಕೂಡ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕಿದ್ದ ಪ್ರಾಧಿಕಾರ ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಈ ಪ್ರಕರಣದಲ್ಲಿ ಅಧಿಕಾರಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತಪಡಿಸಿದ್ದ ರವಿ ಶಂಕರ್ ಅಕ್ರಮ ತಡೆಗಟ್ಟಬೇಕೆಂದು ಮನವಿ ಮಾಡಿದ್ದರು. ಇದೀಗ ತಪಾಸಣೆಯಲ್ಲೂ ನಿರ್ಲಕ್ಷವಹಿಸಿದ್ದಾರೆ ಎಂಬ ಆರೋಪ ಸಹ ಕೇಳಿ ಬಂದಿದೆ. ಇದನ್ನೂ ಓದಿ: ಬ್ಲೂಟೂತ್ ಬಳಸಿ ಕೆಪಿಎಸ್‍ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ವಶಕ್ಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]