Tag: FDA Exam Scam

  • ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ

    ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ

    ಯಾದಗಿರಿ: ಎಫ್‍ಡಿಎ ಪರೀಕ್ಷೆ ಅಕ್ರಮದ (FDA Exam Scam) ತನಿಖೆ ವೇಳೆ ಕಿಂಗ್‍ಪಿನ್ ಆರ್.ಡಿ ಪಾಟೀಲ್ (R.D Patil) ಹೆಸರು ಕೇಳಿ ಬರುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗೆ (Anticipatory Bail) ಅರ್ಜಿ ಸಲ್ಲಿಸಿದ್ದಾನೆ.

    ಈಗಾಗಲೇ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಆರ್.ಡಿ ಪಾಟೀಲ್ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು (Police) ಆತನಿಗಾಗಿ ಭಾರೀ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಆರ್.ಡಿ ಪಾಟೀಲ್ ಯಾದಗಿರಿಯ (Yadgir) ಜಿಲ್ಲಾ ಕೋರ್ಟ್‍ಗೆ ಜಾಮೀನಿಗಾಗಿ ವಕೀಲರ ಮೂಲಕ ಮೊರೆ ಹೋಗಿದ್ದಾನೆ. ಯಾದಗಿರಿ ನಗರ ಠಾಣೆಯಲ್ಲಿ ದಾಖಲಾಗಿರುವ ಐದು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಇದನ್ನೂ ಓದಿ: ಇಲ್ಲೇ ಇದ್ದು ಉತ್ತರ ಪ್ರದೇಶದ ಮೊಬೈಲ್ ಲೊಕೇಶನ್ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಆರ್.ಡಿ ಪಾಟೀಲ್

    ಬಂಧನಕ್ಕೆ ಸಿದ್ಧತೆ ನಡೆಸುತ್ತಿರುವ ಪೊಲೀಸರ ಕಣ್ಣನ್ನು ಪದೇ ಪದೇ ತಪ್ಪಿಸುತ್ತಿರುವ ಆರ್.ಡಿ ಪಾಟೀಲ್ ನಿರಂತರ ಜಾಗ ಬದಲಿಸುತ್ತಿದ್ದಾನೆ. ಬುಧವಾರ ಪೊಲೀಸರು ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿರುವ ಮಾಹಿತಿ ತಿಳಿದು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಹುಡುಕಾಟ ನಡೆಸಿದ್ದರು.

    ಆರೋಪಿ ಆರ್.ಡಿ ಪಾಟೀಲ್ ಮೊಬೈಲ್ ಲೊಕೇಶನ್ ಉತ್ತರ ಪ್ರದೇಶವನ್ನು ತೋರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಉತ್ತರ ಪ್ರದೇಶಕ್ಕೆ ಇನ್ನೊಬ್ಬನ ಬಳಿ ಮೊಬೈಲ್ ಕೊಟ್ಟು ಕಳಿಸಿರುವುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ

  • ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್

    ಕೆಇಎ ಪರೀಕ್ಷೆ ಅಕ್ರಮ ಪ್ರಕರಣ – ಕಿಂಗ್‌ಪಿನ್ ಆರ್‌ಡಿ ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್

    ಕಲಬುರಗಿ: ಕೆಇಎ ಪರೀಕ್ಷಾ ಅಕ್ರಮ (KEA Exam Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್‌ಪಿನ್ ಆರ್‌ಡಿ ಪಾಟೀಲ್ (RD Patil) ಹಾಗೂ ಪೊಲೀಸರ ಕಳ್ಳಾಟ ಬಯಲಾಗಿದೆ. ಆರ್‌ಡಿ ಪಾಟೀಲ್‌ನನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ. ಪಾಟೀಲ್ ಕಾಂಪೌಂಡ್ ಹಾರಿ ಎಸ್ಕೇಪ್ ಆಗುವ ದೃಶ್ಯ ಪಬ್ಲಿಕ್ ಟಿವಿಗೆ ಎಕ್ಸ್‌ಕ್ಲೂಸಿವ್ ಆಗಿ ದೊರೆತಿದೆ.

    ಸಚಿವ ಪ್ರಿಯಾಂಕ್ ಖರ್ಗೆ ತವರು ಕಲಬುರಗಿಯಲ್ಲೇ (Kalaburagi) ಕಿಂಗ್‌ಪಿನ್ ಆರ್‌ಡಿ ಪಾಟೀಲ್ ರಾಜಾತಿಥ್ಯದ ಜೀವನ ನಡೆಸಿದ್ದಾನೆ. ಕಲಬುರಗಿಯ ಅಪಾರ್ಟ್‌ಮೆಂಟ್‌ನಲ್ಲಿಯೇ ಕಿಂಗ್‌ಪಿನ್ ವಾಸವಿದ್ದರೂ ಪೊಲೀಸರು ಬಂಧಿಸಲು ಹಿಂದೇಟು ಹಾಕಿದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ.

    ಆರ್‌ಡಿ ಪಾಟೀಲ್ ಬಗ್ಗೆ ಒಬ್ಬರು ಖಚಿತ ಮಾಹಿತಿ ನೀಡಿದರೂ ಖಾಕಿ ಪಡೆ ಬಂಧಿಸಿಲ್ಲ. ಬೆಳಗ್ಗೆ 10:30ಕ್ಕೆ ಕಲಬುರಗಿಯ ಓರ್ವ ಐಪಿಎಸ್ ಅಧಿಕಾರಿಗೆ ಆತನ ಬಗ್ಗೆ ಮಾಹಿತಿ ನೀಡಲಾಗಿದೆ. ಖಚಿತ ಮಾಹಿತಿ ಸಿಕ್ಕರು ಆತ ನೆಲೆಸಿದ ಅಪಾರ್ಟ್ಮೆಂಟ್‌ಗೆ ತೆರಳಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅವಾಂತರ; ರಸ್ತೆಗಳು ಜಲಾವೃತ – ಧರೆಗುರುಳಿದ ಮರಗಳು

    ಬೆಳಗ್ಗೆ 10:30ಕ್ಕೆ ಐಪಿಎಸ್ ಅಧಿಕಾರಿಗೆ ಮಾಹಿತಿ ನೀಡಿದರೂ ಮಧ್ಯಾಹ್ನ 1:30ರ ಬಳಿಕ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಇನ್ನು ಪೊಲೀಸರ ಬರುವಿಕೆಯ ಮಾಹಿತಿ ಪಡೆದ ಪಾಟೀಲ್, ಪೊಲೀಸರು ಬರುವ ಮುನ್ನವೇ ಕಾಂಪೌಂಡ್ ಹಾರಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಡಿ.ಬಿ.ಚಂದ್ರೇಗೌಡ ನಿಧನ