Tag: Female Students

  • ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ

    ಸ್ವಾಮೀಜಿ ಬಯಕೆ ಈಡೇರಿಸುವಂತೆ ಮಹಿಳಾ ಅಧ್ಯಾಪಕರಿಂದ್ಲೇ ವಿದ್ಯಾರ್ಥಿನಿಯರ ಮೇಲೆ ಒತ್ತಡ – ತನಿಖೆ ತೀವ್ರ

    – ಕೇಸ್‌ ದಾಖಲಾಗ್ತಿದ್ದಂತೆ ತಲೆ ಮರೆಸಿಕೊಂಡ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ
    – 32 ವಿದ್ಯಾರ್ಥಿನಿಯರ ಹೇಳಿಕೆ ದಾಖಲು

    ನವದೆಹಲಿ: ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯೊಂದರಲ್ಲಿ ಹಲವಾರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ (Chaitanyananda Saraswati Swamiji) ವಿರುದ್ಧ ಪ್ರಕರಣ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    ಇದೇ ಆಗಸ್ಟ್‌ 4ದಂದು ವಸಂತ್ ಕುಂಜ್ ಉತ್ತರ ಪೊಲೀಸ್ (Vasant Kunj North Police) ಠಾಣೆಯಲ್ಲಿ 17 ವಿದ್ಯಾರ್ಥಿನಿಯರು ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಶಾರದಾ ಇನ್ಸ್ಟಿಟ್ಯೂಟ್‌ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯರೂ ಆಗಿರುವ ಆರೋಪಿಯು ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದಾನೆ. ಈತನ ಕ್ರಿಮಿನಲ್‌ ಹಿನ್ನೆಲೆ ಕೆದಕಿದಾಗ 2009 ಮತ್ತು 2016 ರಲ್ಲಿ ಸ್ವಾಮೀಜಿ ವಿರುದ್ಧ ಎರಡು ಲೈಂಗಿಕ ಕಿರುಕುಳದ ದೂರು ದಾಖಲಾಗಿವೆ ಅನ್ನೋದು ಬೆಳಕಿಗೆ ಬಂದಿದೆ.  ಇದನ್ನೂ ಓದಿ: 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    ವಿದ್ಯಾರ್ಥಿನಿಯರ ದೂರು ಏನು?
    ಸ್ವಾಮಿ ಚೈತನ್ಯಾನಂದ ಸರಸ್ವತಿ ಪಾರ್ಥ ಸಾರಥಿ, ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದಡಿಯಲ್ಲಿ ಪಿಜಿಡಿಎಂ ಕೋರ್ಸ್‌ಗಳನ್ನು ಕಲಿಯುತ್ತಿರುವ ಮಹಿಳಾ ವಿದ್ಯಾರ್ಥಿಗಳಿಗೆ ಅಶ್ಲೀಲ ಭಾಷೆಯನ್ನು ಬಳಸಿ ನಿಂದಿಸುತ್ತಿದ್ದರು, ಮತ್ತು ವಾಟ್ಸಪ್‌ನಲ್ಲಿ ಅಶ್ಲೀಲ ಸಂದೇಶಗಳನ್ನ ಕಳಿಸುತ್ತಿದ್ದರು. ಅಲ್ಲದೇ ದೈಹಿಕ ಸಂಪರ್ಕಕ್ಕೂ ಪ್ರಯತ್ನಿಸಿದ್ದರು. ಸಂಸ್ಥೆಯಲ್ಲಿನ ಕೆಲ ಮಹಿಳಾ ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳು ಅವರ ಬೇಡಿಕೆ ಈಡೇರಿಸುವಂತೆ ಮಹಿಳಾ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರುತ್ತಿದ್ದರು. ಇದರಿಂದಾಗಿ ಸಾಕಷ್ಟು ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರಿನಲ್ಲಿ ತಿಳಿಸಿದ್ದಾರೆ.

    ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ದೆಹಲಿ ಪೊಲೀಸರು, 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಈ ಪೈಕಿ 17 ಮಂದಿ ತಮ್ಮ ಮೇಲೆ ನಿಂದನೆಯ ಭಾಷೆ ಬಳಸಿದ್ದಾರೆ, ದೈಹಿಕ ಸಂಪರ್ಕಕ್ಕೆ ಒತ್ತಾಯಿಸಿದ್ದಾರೆಂದು ಹೇಳಿಕೊಂಡಿದ್ದಾರೆ. ಇದಕ್ಕೆ ನಾವು ವಿರೋಧ ಮಾಡಿದಾಗ ಕೆಲ ಮಹಿಳಾ ಅಧ್ಯಾಪಕರು ಹಾಗೂ ಆಡಳಿತಾಧಿಕಾರಿಗಳು ಸಹಕರಿಸುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದರು. ಇದು ಒಂದು ದಿನದ ಸಮಸ್ಯೆಯಲ್ಲ ದೀರ್ಘಕಾಲದ ಸಮಸ್ಯೆ ಎಂದು ಹೇಳಿಕೊಂಡಿರುವುದಾಗಿ ದೆಹಲಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

    ತನಿಖೆ ತೀವ್ರ
    ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ಘಟನಾ ಸ್ಥಳ ಮತ್ತು ಆರೋಪಿಯ ಮನೆಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸುತ್ತಿದ್ದಾರೆ. ಸ್ವಾಮೀಜಿ ಮನೆಯಲ್ಲಿದ್ದ ಕಂಪ್ಯೂಟರ್‌ನಿಂದ ಹಾರ್ಡ್‌ ಡಿಸ್ಕ್‌ ವಶಕ್ಕೆ ಪಡೆದು ಅದನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವೋಟರ್‌ ಐಡಿ ದುರುಪಯೋಗ ತಡೆಗೆ ಪರಿಹಾರ; ಇ-ಸೈನ್ ವ್ಯವಸ್ಥೆ ಆರಂಭಿಸಿದ ಚುನಾವಣಾ ಆಯೋಗ

  • 17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    17 ವಿದ್ಯಾರ್ಥಿನಿಯರಿಂದ ಲೈಂಗಿಕ ಕಿರುಕುಳ ಆರೋಪ – ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ FIR

    ನವದೆಹಲಿ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೆಹಲಿ ಬಾಬಾ ಎಂದೇ ಖ್ಯಾತಿಯಾಗಿದ್ದ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ (Swami Chaitanyananda Saraswati) ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ದೆಹಲಿಯ ವಸಂತ್ ಕುಂಜ್ ಪೊಲೀಸ್ (Vasant Kunj Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ವಾಮಿ ಪಾರ್ಥಸಾರಥಿ, ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್-ರಿಸರ್ಚ್ ಕಾಲೇಜು ನಡೆಸುತ್ತಿರುವ ಸ್ವಾಮೀಜಿ ಸ್ಕಾಲರ್‌ಶಿಪ್ ಹೆಸರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಮೋದಿ ರಾಷ್ಟ್ರಧ್ವಜ ಹಾರಿಸೋದನ್ನ ತಡೆಯಲು ಬಹುಮಾನ ಘೋಷಿಸಿದ್ದ ಪನ್ನುನ್ ವಿರುದ್ಧ ಕೇಸ್

    ವಿಚಾರಣೆಯ ವೇಳೆ ಶ್ರೀ ಶಾರದಾ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನ ಪಡೆಯುತ್ತಿದ್ದ 32 ವಿದ್ಯಾರ್ಥಿನಿಯರ ಹೇಳಿಕೆಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಸ್ವಾಮೀಜಿ ನಿಂದನೀಯ ಭಾಷೆ, ಅಶ್ಲೀಲ ವಾಟ್ಸಾಪ್‌ ಮೆಸೇಜ್ ಮತ್ತು ಅನಗತ್ಯ ದೈಹಿಕ ಸಂಪರ್ಕ ಹೊಂದಿದ್ದರು ಎಂದು 17 ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

    ವಿದ್ಯಾರ್ಥಿನಿಯರ ದೂರಿನ ಅನ್ವಯ ವಸಂತ್ ಕುಂಜ್ ನಾರ್ತ್ ಪೊಲೀಸ್ ಠಾಣೆಯಲ್ಲಿ 75(2)/79/351(2) ಬಿಎನ್‌ಎಸ್ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಸಿಸಿಟಿವಿ ಸೇರಿದಂತೆ ಇತರೆ ಸಾಕ್ಷ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ನಕಲಿ ನಂಬರ್ ಪ್ಲೇಟ್‌ನೊಂದಿಗೆ ರಾಜತಾಂತ್ರಿಕ ವಾಹನ ಬಳಸುತ್ತಿದ್ದ ವಿಚಾರವೂ ಬಯಲಾಗಿದ್ದು, ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ಯುವತಿಯರಿಗೆ ಬಂಪರ್‌ ಬಹುಮಾನ!

    ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ಯುವತಿಯರಿಗೆ ಬಂಪರ್‌ ಬಹುಮಾನ!

    ಮಾಸ್ಕೋ: ದೇಶದಲ್ಲಿ ಜನನ ಪ್ರಮಾಣ ಹೆಚ್ಚಿಸಲು ಚೀನಾ, ಜಪಾನ್‌ ಮಾದರಿಯಲ್ಲೇ ರಷ್ಯಾ (Russia) ಸಹ ಹೊಸ ಹೊಸ ಮಾರ್ಗಗಳನ್ನು ಹುಡುಕುತ್ತಿದೆ. ಈಗಾಗಲೇ ‌ಜನಸಂಖ್ಯಾ ಹೆಚ್ಚಳಕ್ಕೆ ʻಸೆಕ್ಸ್‌ ಸಚಿವಾಲಯʼ ಸ್ಥಾಪಿಸಲು ಮುಂದಾಗಿರುವ ಪುಟಿನ್‌ ನೇತೃತ್ವದ ಸರ್ಕಾರ (Russian Government) ಈಗ ಹೊಸದೊಂದು ಆಫರ್‌ ಘೋಷಣೆ ಮಾಡಿದೆ.

    ಹೌದು.. ಆರೋಗ್ಯಕರ ಮಗುವಿಗೆ ಜನ್ಮ ನೀಡುವ 25 ವರ್ಷದೊಳಗಿನ ವಿದ್ಯಾರ್ಥಿನಿಯರಿಗೆ (Female Students) 1 ಲಕ್ಷ ರುಬೆಲ್ಸ್‌ (ಸುಮಾರು 81,000 ರೂ.) ಪ್ರೋತ್ಸಾಹ ಧನ ನೀಡುವ ಯೋಜನೆಯನ್ನು ಪರಿಚಯಿಸಿದೆ. ಸದ್ಯಕ್ಕೆ ಇಡೀ ದೇಶಾದ್ಯಂತ ಈ ಯೋಜನೆಯನ್ನು ಜಾರಿಗೊಳಿಸಲಾಗಿಲ್ಲ, ರಷ್ಯಾದ ಕರೇಲಿಯಾ ಎಂಬ ಪ್ರದೇಶದಲ್ಲಿ ಮಾತ್ರ ಜಾರಿಗೆ ತರಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದನ್ನೂ ಓದಿ: ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 15,000 ಎಕ್ರೆ ಪ್ರದೇಶಕ್ಕೆ ಬೆಂಕಿ, ಐವರು ಸಜೀವ ದಹನ

    ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಥಳೀಯ ವಿಶ್ವವಿದ್ಯಾಲಯ ಅಥವಾ ಖಾಸಗಿ ಕಾಲೇಜುಗಳಲ್ಲಿ ಪೂರ್ಣ ಸಮಯದ ವಿದ್ಯಾರ್ಥಿಗಳಾಗಿರಬೇಕು. 25 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಹಾಗೂ ಕರೇಲಿಯಾ ಪ್ರದೇಶದ ನಿವಾಸಿಗಳೇ ಆಗಿರಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

    ಕಳೆದ ವರ್ಷ ರಷ್ಯಾದಲ್ಲಿ ಜನನ ಪ್ರಮಾಣವು ಸಾರ್ವಕಾಲಿಕ ಕನಿಷ್ಠ ಮಟ್ಟ ತಲುಪಿದೆ. 2024ರ ಮೊದಲಾರ್ಧದಲ್ಲಿ 5,99,600 ಮಕ್ಕಳ ಜನನವಾಗಿದ್ದು, 2023ರ ಅವಧಿಗಿಂತಲೂ 16,000 ಮಕ್ಕಳ ಜನನ ಕಡಿಮೆಯಾಗಿದೆ ಎಂದು ವರದಿಗಳು ಉಲ್ಲೇಖಿಸಿವೆ. ದನ್ನೂ ಓದಿ: ಜನಸಂಖ್ಯೆ ಹೆಚ್ಚಳಕ್ಕೆ ರಷ್ಯಾದಲ್ಲಿ ʻಸೆಕ್ಸ್‌ ಸಚಿವಾಲಯʼ ಸ್ಥಾಪನೆಗೆ ಪ್ಲ್ಯಾನ್‌ – ಭಾರತದಲ್ಲಿ ಏನಾಗ್ತಿದೆ?

    ಕೆಲ ದಿನಗಳ ಹಿಂದೆಯಷ್ಟೇ ಭಾರತದಲ್ಲಿ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಹೆಚ್ಚು ಮಕ್ಕಳನ್ನು ಹೊಂದುವಂತೆ ಜನರಲ್ಲಿ ಮನವಿ ಮಾಡಿದ್ದರು, 2 ಅಥವಾ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಮಾತ್ರ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವ ಅವಕಾಶ ನೀಡುವಂತಹ ಹೊಸ ಕಾನೂನು ರೂಪಿಸುವುದಾಗಿಯೂ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್‌, ನಮ್ಮ ಪೂರ್ವಜರು 16 ಬಗೆಯ ಸಂಪತ್ತನ್ನು ಹೊಂದುವಂತೆ ಆಶೀರ್ವದಿಸುವ ಬದಲಾಗಿ ʻ16 ಮಕ್ಕಳನ್ನು ಹೊಂದುವಂತೆ ಆಶೀರ್ವದಿಸಬೇಕಾದ ಅನಿವಾರ್ಯತೆ ಇದೆʼ ಎಂದು ಜನಸಂಖ್ಯೆ ಹೆಚ್ಚಳದ ಬಗ್ಗೆ ಹೇಳಿದ್ದರು.

    ಇನ್ನೂ ಜನಸಂಖ್ಯೆ ನಿಯಂತ್ರಿಸಲು ಚೀನಾ, 80ರ ದಶಕದಲ್ಲಿ ‘ಒಂದು ಮಗುವಿನ ನೀತಿ’ಯನ್ನು ಜಾರಿಗೆ ತಂದಿತ್ತು. ಆದ್ರೆ ವೃದ್ಧರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಒಂದು ಮಗುವಿನ ನೀತಿಯನ್ನು ರದ್ದುಗೊಳಿಸಿ, ʻಎರಡು ಮಗು’ ಮತ್ತು ನಂತರ ‘ಮೂರು ಮಗು’ ನೀತಿಯನ್ನು ಜಾರಿಗೆ ತರಲಾಯಿತು. ಇದೀಗ ಹೆಚ್ಚುಮಕ್ಕಳನ್ನು ಹೊಂದಲು ಪ್ರೋತ್ಸಾಹಿಸುತ್ತಿರುವ ಚೀನಾ, ಹೆಚ್ಚು ಮದುವೆಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಅಲ್ಲದೇ ಯುವಕ-ಯುವತಿಯರು ಪ್ರೀತಿಯಲ್ಲಿ ತೊಡಗುವಂತೆ ಮಾಡಲು ಕಾಲೇಜುಗಳಲ್ಲಿ ವಿಶೇಷ ಕೋರ್ಸ್‌ ಸಹ ಆರಂಭಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ದನ್ನೂ ಓದಿ: 20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯ ಫ್ರಿಡ್ಜ್‌ನಲ್ಲಿತ್ತು ಮಾನವನ ತಲೆಬುರುಡೆ, ಅಸ್ಥಿಪಂಜರ!

  • PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    PublicTV Explainer: ಇರಾನ್‌ನಲ್ಲಿ ಹಿಜಬ್‌ ವಿರುದ್ಧದ ಹೋರಾಟದ ಹೊತ್ತಲ್ಲೇ ನೂರಾರು ಶಾಲಾ ವಿದ್ಯಾರ್ಥಿನಿಯರಿಗೆ ವಿಷವಿಕ್ಕಿದ ದುರುಳರು – ಏನಾಗ್ತಿದೆ ಅಲ್ಲಿ?

    ರಾನ್‌ನಲ್ಲಿ (Iran) ಪುರುಷ ಪ್ರಧಾನ ನಿಯಮಗಳ ವಿರುದ್ಧ ಮಹಿಳೆಯರ (Women) ಅಸಮಾಧಾನದ ಕಟ್ಟೆ ಒಡೆದಿದೆ. ಹಿಜಬ್‌ (Hijab) ಧರಿಸಿಲ್ಲ ಎಂಬ ಕಾರಣಕ್ಕೆ ನೈತಿಕ ಪೊಲೀಸ್‌ಗಿರಿಗೆ ಸುಂದರ ಯುವತಿ ಬಲಿಯಾಗಿದ್ದು, ಈ ದೇಶದ ಪ್ರತಿ ಮಹಿಳೆಯ ಒಡಲಲ್ಲಿ ಕಿಚ್ಚು ಹೊತ್ತಿಸಿತು. ಆಗ ಸಾವಿರಾರು ಮಹಿಳೆಯರು ಬೀದಿಗಿಳಿದು ತಮ್ಮ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ದನಿಯೆತ್ತಿದರು. ದೇಶಾದ್ಯಂತ ಪ್ರತಿಭಟನೆ ಭುಗಿಲೆದ್ದಿತು. ಮಹಿಳೆಯರ ಆಕ್ರೋಶಕ್ಕೆ ಅಲ್ಲಿನ ಆಡಳಿತ ವ್ಯವಸ್ಥೆಯೇ ಒಂದು ಕ್ಷಣ ನಡುಗಿ ಹೋಯಿತು. ಇದರ ನಡುವೆಯೇ ಮಹಿಳೆಯರ ಹೋರಾಟ ಹತ್ತಿಕ್ಕಲು ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಯಿತು. ಇತ್ತ ಹೋರಾಟ ತೀವ್ರಗೊಂಡಿದ್ದರೆ ಅತ್ತ ಅದನ್ನು ಹತ್ತಿಕ್ಕುವ ಪ್ರಯತ್ನಗಳು ತೆರೆಮರೆಯಲ್ಲಿ ನಡೆದವು. ಹೆಣ್ಣುಮಕ್ಕಳು ಶಿಕ್ಷಿತರಾದರೆ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಾರೆಂಬ ಆತಂಕ ಇರಾನ್‌ನ ಆಡಳಿತ ವ್ಯವಸ್ಥೆಗೆ ಆತಂಕ ಮೂಡಿಸಿತು. ಹೀಗಾಗಿ ಅವರನ್ನು ಶಿಕ್ಷಣ ವಂಚಿತರನ್ನಾಗಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಅಂತಹ ಘನಘೋರ ಕುಕೃತ್ಯದ ಸನ್ನಿವೇಶಕ್ಕೆ ಇರಾನ್‌ ಸಾಕ್ಷಿಯಾಗಿದೆ.

    ಹಿಜಬ್ ವಿರೋಧಿಸಿ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದ ಬಳಿಕ ಇದೀಗ ದೇಶದಲ್ಲಿ ಮತ್ತೊಂದು ವಿವಾದ ಭುಗಿಲೆದ್ದಿದೆ. ಹೆಣ್ಣುಮಕ್ಕಳು ವಿದ್ಯಾಭ್ಯಾಸ (Education) ಮಾಡಬಾರದು ಎಂಬ ಕಾರಣಕ್ಕೆ ಕೆಲ ಕಿಡಿಗೇಡಿಗಳು ನೂರಾರು ವಿದ್ಯಾರ್ಥಿನಿಯರಿಗೆ ವಿಷಪ್ರಾಶನ (Poisoning) ಮಾಡಿರುವುದು ಈಚೆಗೆ ವರದಿಯಾಗಿ ಸದ್ದು ಮಾಡಿತ್ತು. ಇರಾನ್‌ನಲ್ಲಿ ಹೆಣ್ಣುಮಕ್ಕಳ ಮೇಲೆ ಈ ರೀತಿ ದೌರ್ಜನ್ಯ ಏಕೆ ನಡೆಯುತ್ತಿದೆ? ಇದೆಲ್ಲ ಏಕೆ ನಡೆಯುತ್ತಿದೆ? ಇದಕ್ಕೆ ಮೂಲ ಕಾರಣವೇನು ಎಂಬೆಲ್ಲ ಪ್ರಶ್ನೆಗಳು ಕಾಡದೇ ಇರದು.

    ಹೆಣ್ಣುಮಕ್ಕಳಿಗೆ ವಿಷವಿಕ್ಕಿದ್ರಾ ದುರುಳರು?
    ಕೆಲ ದಿನಗಳ ಹಿಂದೆ ಇಸ್ಲಾಮಿಕ್ ರಾಷ್ಟ್ರದ ಶಾಲೆಯೊಂದರಲ್ಲಿ ನೂರಾರು ವಿದ್ಯಾರ್ಥಿನಿಯರಿಗೆ ವಿಷವುಣಿಸಲಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಗೆ ಇರಾನ್‌ನ ಉಪ ಆರೋಗ್ಯ ಸಚಿವ ಯುನೆಸ್ ಪನಾಹಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕೆಲ ಕಿಡಿಗೇಡಿಗಳು ಹೆಣ್ಣುಮಕ್ಕಳ ಶಿಕ್ಷಣವನ್ನು ಸ್ಥಗಿತಗೊಳಿಸುವ ಉದ್ದೇಶದಿಂತ ಇಂತಹ ಕೃತ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದ್ದರು.

    ಹೆಣ್ಣುಮಕ್ಕಳಿಗೆ ವಿಷ ನೀಡಿರುವಂತಹ ಪ್ರಕರಣ ಇರಾನ್‌ನಲ್ಲಿ ಇದೇ ಮೊದಲ ಬಾರಿಗೆ ನಡೆದಿಲ್ಲ. ಕಳೆದ ವರ್ಷ ನವೆಂಬರ್‌ನಿಂದ ಇಂತಹ ಆಪಾದಿತ ಘಟನೆಗಳು ವರದಿಯಾಗುತ್ತಲೇ ಇದೆ. 2022ರ ನವೆಂಬರ್‌ನಿಂದ ಇರಾನ್‌ನಾದ್ಯಂತ ಸುಮಾರು 700 ವಿದ್ಯಾರ್ಥಿಗಳು ವಿಷಪ್ರಾಶನ ಮಾಡಲಾಗಿದೆ ಎನ್ನಲಾಗಿದೆ.

    ನವೆಂಬರ್ 30 ರಂದು ಮೊದಲ ಘಟನೆ ಕೋಮ್ ನಗರದ ನೂರ್ ತಾಂತ್ರಿಕ ಶಾಲೆಯಲ್ಲಿ ವರದಿಯಾಗಿತ್ತು. ಅಂದು 18 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಫೆಬ್ರವರಿ ತಿಂಗಳಲ್ಲಿ ಬೊರುಜೆರ್ಡ್ ನಗರದ 4 ಶಾಲೆಗಳಲ್ಲಿ 194 ವಿದ್ಯಾರ್ಥಿನಿಯರಿಗೆ ವಿಷವುಣಿಸಲಾಗಿತ್ತು. ರಾಜಧಾನಿ ಟೆಹ್ರಾನ್ ಬಳಿಯ ಪಾರ್ಡಿಸ್‌ನಲ್ಲಿರುವ ಖಯ್ಯಾನ್ ಬಾಲಕಿಯರ ಶಾಲೆಯಲ್ಲಿ 37 ವಿದ್ಯಾರ್ಥಿಗಳು ವಿಷಪ್ರಾಶನಕ್ಕೊಳಗಾಗಿದ್ದರು ಎಂದು ವರದಿಯಾಗಿದೆ.

    ವಿಷಪ್ರಾಶನಕ್ಕೆ ನೂರಾರು ವಿದ್ಯಾರ್ಥಿನಿಯರು ಒಳಗಾಗಿದ್ದರೂ ಇಲ್ಲಿಯವರೆಗೆ ಯಾವುದೇ ಸಾವುಗಳು ವರದಿಯಾಗಿಲ್ಲ. ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ವಿಷ ಅಲ್ಪ ಪ್ರಮಾಣದಲ್ಲಿ ಹಾನಿ ಮಾಡುವಂತದ್ದಾಗಿದೆ. ಆದರೆ ವಿಷ ಸೇವಿಸಿದ ಬಳಿಕ ವಿದ್ಯಾರ್ಥಿಗಳಲ್ಲಿ ಉಸಿರಾಟದ ತೊಂದರೆ, ವಾಕರಿಕೆ, ತೆಲೆ ತಿರುಗುವಿಕೆ, ಆಯಾಸದಿಂದ ಬಳಲಿದ್ದಾರೆಂದು ವರದಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ಪೋಷಕರು, ಹೋರಾಟಗಾರರ ಆಕ್ರೋಶ
    ವಿದ್ಯಾರ್ಥಿನಿಯರಿಗೆ ವಿಷವುಣಿಸಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೋಷಕರು, ಹೋರಾಟಗಾರರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ದೇಶಾದ್ಯಂತ ಸಂತ್ರಸ್ತರ ಪೋಷಕರು ಶಿಕ್ಷಣಾಧಿಕಾರಿ ಹಾಗೂ ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿರುವ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈ ಎಲ್ಲಾ ಅವಾಂತರಗಳಿಗೂ ಅಧಿಕಾರಿಗಳು ಉತ್ತರ ನೀಡಬೇಕೆಂದು ಪೋಷಕರು ಪಟ್ಟು ಹಿಡಿದಿದ್ದಾರೆ.

    ವಿಷಪ್ರಾಶನಕ್ಕೆ ಕಾರಣವೇನು?
    ಇರಾನ್‌ನಲ್ಲಿ ವಿದ್ಯಾರ್ಥಿನಿಯರಿಗೆ ವಿಷವುಣಿಸಲು ಕಾರಣವೇನು ಎಂಬುದಕ್ಕೆ ನಿರ್ದಿಷ್ಟವಾದ ಉತ್ತರವಿಲ್ಲ. ಕೆಲವರು ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ದೂರವಿರಿಸಲು ಈ ರೀತಿಯ ಕಿಡಿಗೇಡಿತನದ ಕೆಲಸ ಮಾಡುತ್ತಿದ್ದಾರೆ ಎಂಬುದು ಕೆಲವರ ಮಾತು. ಹೆಣ್ಣುಮಕ್ಕಳ ಪೋಷಕರನ್ನು ಭಯಭೀತಗೊಳಿಸಲು ಹಾಗೂ ತಮ್ಮ ಮಕ್ಕಳನ್ನು ಶಾಲೆಗೆ ಹೋಗದಂತೆ ತಡೆಯಲು ಹೀಗೆ ಮಾಡಲಾಗುತ್ತಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಇನ್ನೂ ಕೆಲವರ ಅಭಿಪ್ರಾಯವೇನೆಂದರೆ, ಕಳೆದ ವರ್ಷ ಹಿಜಬ್ ಧರಿಸಿಲ್ಲ ಎಂದು ನೈತಿಕ ಪೊಲೀಸ್‌ಗಿರಿಗೆ ಯುವತಿಯೊಬ್ಬಳು ಬಲಿಯಾಗಿದ್ದಳು. ಹಿಜಬ್ ಅನ್ನು ವಿರೋಧಿಸಿದ್ದ ಯುವತಿ ಮಹ್ಸಾ ಆಮಿನಿ ಸಾವಿನ ಬಳಿಕ ಇರಾನ್‌ನಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು. ಯುವತಿ ಪರವಾಗಿ ಹಾಗೂ ಹಿಜಬ್ ವಿರೋಧಿಸಿ ನಡೆಸಲಾದ ಹಿಂಸಾಚಾರದಲ್ಲಿ ನೂರಾರು ಜನರ ಸಾವೂ ಸಂಭವಿಸಿತ್ತು. ಇದನ್ನೂ ಓದಿ: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

    ಸರ್ಕಾರ ಹೇಳೋದೇನು?
    ವಿಷಪ್ರಾಶನದ ಪ್ರಕರಣಗಳು ಬೆಳಕಿಗೆ ಬಂದ ಸಂದರ್ಭದಲ್ಲಿ, ಈ ಘಟನೆಗಳು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿಲ್ಲ ಎಂದು ಸರ್ಕಾರ ತಿಳಿಸಿತ್ತು. ಶಾಲೆಗಳಲ್ಲಿ ಚಳಿಗಾಲದ ವೇಳೆ ವಾತಾವರಣವನ್ನು ಬೆಚ್ಚಗಿಡಲು ನೈಸರ್ಗಿಕ ಅನಿಲ ಬಿಸಿ ಮಾಡಲಾಗುತ್ತದೆ. ಇದರ ಕಾರ್ಬನ್ ಮಾನಾಕ್ಸೈಡ್ ವಿದ್ಯಾರ್ಥಿನಿಯರ ಮೇಲೆ ಪರಿಣಾಮ ಬೀರಿದೆ ಎಂದು ಆಪಾದನೆಯಿಂದ ಜಾರಿಕೊಳ್ಳುವ ಹೇಳಿಕೆಯನ್ನು ಸರ್ಕಾರ ನೀಡಿತ್ತು. ದೇಶದ ಶಿಕ್ಷಣ ಸಚಿವರೂ ಆರೋಪಗಳನ್ನು ವದಂತಿ ಎಂದು ತಳ್ಳಿ ಹಾಕಿದ್ದರು.

    ಉಪ ಆರೋಗ್ಯ ಸಚಿವರು ಹೇಳ್ತಿರೋದೇನು?
    ವಿಷ ಸೇವನೆಯ ಘಟನೆಗಳು ದೇಶದ ಹಲವೆಡೆ ವರದಿಯಾಗುತ್ತಿದ್ದಂತೆ ಇದು ಆಕಸ್ಮಿಕವಲ್ಲ ಎಂಬ ಅನುಮಾನ ಹೆಚ್ಚಾಗಿತ್ತು. ಬಳಿಕ ಇರಾನ್‌ನ ಪ್ರಾಸಿಕ್ಯೂಟರ್ ಜನರಲ್ ತನಿಖೆಗೆ ಆದೇಶಿಸಿದ್ದು, ಉದ್ದೇಶಪೂರ್ವಕವಾಗಿಯೇ ಇಂತಹ ಅಪರಾಧಗಳನ್ನು ಮಾಡುತ್ತಿರುವ ಸಾಧ್ಯತೆಯಿದೆ ಎಂದು ಹೇಳಿದ್ದರು. ಘಟನೆ ಬಗ್ಗೆ ಗುಪ್ತಚರ ಸಚಿವಾಲಯವೂ ತನಿಖೆ ನಡೆಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ ಘಟನೆಯನ್ನು ಉದ್ದೇಶಪೂರ್ವಕ ಕೃತ್ಯ ಎಂದು ಇರಾನ್‌ನ ಉಪ ಆರೋಗ್ಯ ಸಚಿವ ಯುನೆಸ್ ಪನಾಹಿ ಹೇಳಿದ್ದು, ಇದನ್ನು ಅಧಿಕೃತವಾಗಿ ದೃಢಪಡಿಸಲಾಗಿದೆ. ಕೋಮ್ ಶಾಲೆಯಲ್ಲಿ ವಿದ್ಯಾರ್ಥಿನಿಯರು ಅಸ್ವಸ್ಥರಾದ ಬಳಿಕ ಬಾಲಕಿಯರ ಶಾಲೆಯನ್ನು ಮುಚ್ಚಬೇಕೆಂದು ಕೆಲವರು ಆಗ್ರಹಿಸಿರುವುದು ತಿಳಿದುಬಂದಿದೆ. ಆದರೆ ಇಲ್ಲಿಯವರೆಗೆ ಘಟನೆಗೆ ಸಂಬಂಧಿಸಿದಂತೆ ಯಾವ ಆರೋಪಿಗಳನ್ನೂ ಬಂಧಿಸಲಾಗಿಲ್ಲ.

    ಏನಿದು ಹಿಜಬ್‌ ವಿರೋಧಿ ಹೋರಾಟ?
    ಮಹ್ಸಾ ಅಮಿನಿ ಯುವತಿ ಹಿಜಬ್‌ ಧರಿಸಿಲ್ಲ ಎಂಬ ಕಳೆದ ವರ್ಷ ಕಾರಣಕ್ಕೆ ಆಕೆಯನ್ನು ಬಂಧಿಸಲಾಗಿತ್ತು. ನೈತಿಕ ಪೊಲೀಸ್‌ಗಿರಿಗೆ ಆಕೆ ಬಲಿಯಾಗಿದ್ದಳು. ಸಾವಿನ ಸುದ್ದಿ ಬಹಿರಂಗವಾಗುತ್ತಿದ್ದಂತೆ ಇರಾನ್‌ನಲ್ಲಿ ಸಾವಿರಾರು ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು. ಯುವತಿ ಸಾವಿನ ಬಳಿಕ ಇರಾನ್‌ನಲ್ಲಿ ಹಿಜಬ್ ವಿರೋಧಿ ಪ್ರತಿಭಟನೆ ನಡೆಸಿದ್ದಕ್ಕಾಗಿ ಸುಮಾರು 14,000 ಮಂದಿಯನ್ನು ಆಗ ಬಂಧಿಸಲಾಗಿತ್ತು. ಅವರಲ್ಲಿ ಸಾವಿರಾರು ಪುರುಷರು, ಮಹಿಳೆಯರು, ಮಕ್ಕಳೂ ಸೇರಿದ್ದರು. ಮಾತ್ರವಲ್ಲದೇ ಹಿಜಬ್ ವಿರೋಧಿ ಪ್ರತಿಭಟನೆಯನ್ನು ಬೆಂಬಲಿಸಿ ಹಲವರು ಮಹಿಳೆಯರು ತಮ್ಮ ಕೂದಲನ್ನು ಕತ್ತರಿಸಿಕೊಂಡು, ನಡುರಸ್ತೆಯಲ್ಲೇ ಹಿಜಬ್‌ ಸುಟ್ಟು ಆಕ್ರೋಶ ಹೊರಹಾಕಿದ್ದರು. ಈ ಎಲ್ಲಾ ಘಟನೆ ವಿರುದ್ಧ ಸೇಡು ತೀರಿಸಿಕೊಳ್ಳಲು ಹಾಗೂ ಹೆಣ್ಣುಮಕ್ಕಳನ್ನು ನಿಯಂತ್ರಣದಲ್ಲಿರಿಸುವ ಸಲುವಾಗಿ ವಿಷವುಣಿಸುವಂತಹ ಕೃತ್ಯ ನಡೆಸಲಾಗುತ್ತಿದೆ ಮಾತು ಕೇಳಿಬರುತ್ತಿದೆ. ಇದನ್ನೂ ಓದಿ: PublicTV Explainer: ಟರ್ಕಿಯಲ್ಲೇ ಹೆಚ್ಚು ಭೂಕಂಪ ಯಾಕೆ? – ಇಲ್ಲಿದೆ ವೈಜ್ಞಾನಿಕ ಕಾರಣ..

    (2014ರಲ್ಲಿ ಇರಾನ್‌ನ ಇಸ್ಫಹಾನ್ ನಗರದಲ್ಲಿ ಮಹಿಳೆಯರ ಮೇಲೆ ಸರಣಿ ಆಸಿಡ್ ದಾಳಿ ನಡೆದಿತ್ತು. ಸಂತ್ರಸ್ತರಲ್ಲಿ ಹೆಚ್ಚಿನವರು ಇಸ್ಲಾಮಿಕ್ ಮಾನದಂಡಗಳಿಗೆ ಅನುಗುಣವಾಗಿ ಬಟ್ಟೆ, ಹಿಜಬ್ ಅನ್ನು ಧರಿಸಿರಲಿಲ್ಲ ಎಂಬುದು ಕಂಡುಬಂದಿದೆ.)

  • ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್

    ಮಹಿಳಾ ಶಿಕ್ಷಣಕ್ಕೆ ನಿಷೇಧ – ವಿದ್ಯಾರ್ಥಿನಿಯರಿಗೆ ಯುನಿವರ್ಸಿಟಿ ಪ್ರವೇಶ ಪರೀಕ್ಷೆಗೆ ಅವಕಾಶವಿಲ್ಲ ಎಂದ ತಾಲಿಬಾನ್

    ಕಾಬೂಲ್: ಮಹಿಳಾ ಶಿಕ್ಷಣಕ್ಕೆ (Women’s Education) ನಿಷೇಧ ಹೇರಿರುವ ತಾಲಿಬಾನ್ (Taliban) ಸರ್ಕಾರ ಇದೀಗ ಅಘ್ಘಾನಿಸ್ತಾನದಲ್ಲಿ (Afghanistan) ವಿಶ್ವವಿದ್ಯಾಲಯದ (University) ಪ್ರವೇಶ ಪರೀಕ್ಷೆಗೆ (Entrance Exam) ವಿದ್ಯಾರ್ಥಿನಿಯರು (Female Students) ಹಾಜರಾಗದಂತೆ ಸೂಚಿಸಿದೆ.

    ಫೆಬ್ರವರಿ ತಿಂಗಳಲ್ಲಿ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದೆ. ಈ ನಡುವೆ ಇದೀಗ ವಿದ್ಯಾರ್ಥಿನಿಯರು ಯುನಿವರ್ಸಿಟಿ ಪ್ರವೇಶ ಪರೀಕ್ಷೆ ಬರೆಯಲು ಅವಕಾಶವಿಲ್ಲ ಎಂದು ತಾಲಿಬಾನ್ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇರಾನ್‌ನಲ್ಲಿ ಪ್ರಬಲ ಭೂಕಂಪ – 7 ಮಂದಿ ಸಾವು, 400ಕ್ಕೂ ಹೆಚ್ಚು ಜನರಿಗೆ ಗಾಯ

    ತಾಲಿಬಾನ್ ಶಿಕ್ಷಣ ಸಚಿವಾಲಯ ಹೊರಡಿಸಿದ ಆದೇಶದಲ್ಲಿ, ಸರ್ಕಾರ ಆದೇಶ ಹೊರಡಿಸುವವರೆಗೆ ಮಹಿಳಾ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆ ಬರೆಯುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: `ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಶೈಲಿಯಲ್ಲಿ ಪತ್ನಿ ಕೊಲೆ – ಆರೋಪಿ ಪತಿಯಿಂದ ರೋಚಕ ರಹಸ್ಯ ಬಯಲು

    ಡಿಸೆಂಬರ್‌ನಲ್ಲಿ ತಾಲಿಬಾನ್ ಸರ್ಕಾರ ಮುಂದಿನ ಸೂಚನೆ ಬರುವವರೆಗೆ ಎಲ್ಲಾ ಮಹಿಳೆಯರಿಗೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಿಗೆ ಹಾಜರಾಗುವುದನ್ನು ನಿಷೇಧಿಸಿತ್ತು. ಅಫ್ಘಾನಿಸ್ತಾನದಲ್ಲಿ 6ನೇ ತರಗತಿಯ ನಂತರ ಶಿಕ್ಷಣವನ್ನು ಮುಂದುವರಿಸುವ ವಿದ್ಯಾರ್ಥಿನಿಯರ ಮೇಲೆ ಸಂಪೂರ್ಣ ನಿಷೇಧಕ್ಕೆ ತಾಲಿಬಾನ್ ಸರ್ಕಾರ ಮುಂದಾಗಿದೆ ಎಂದು ಪ್ರತಿಭಟನೆಗಳು ನಡೆದಿತ್ತು. ವಿದ್ಯಾರ್ಥಿನಿಯರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದರು.

    ತಾಲಿಬಾನ್‍ನ ಉನ್ನತ ಶಿಕ್ಷಣ ಸಚಿವಾಲಯ ಮಹಿಳಾ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳ ಮೇಲೆ ಇತ್ತೀಚೆಗೆ ದಬ್ಬಾಳಿಕೆಯನ್ನು ಹೆಚ್ಚಿಸುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ವಿಶ್ವವಿದ್ಯಾಲಯ ಶಿಕ್ಷಣದ ಮೇಲೆ ನಿಷೇಧವನ್ನು ಹೇರಿದೆ. ಇದು ಅಂತಾರಾಷ್ಟ್ರೀಯವಾಗಿ ಭಾರೀ ಟೀಕೆಗೆ ಕಾರಣವಾಗಿದೆ. 2021ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ಇಸ್ಲಾಮಿಕ್ ಕಾನೂನಿನ ಕಟ್ಟುನಿಟ್ಟಿನ ಕ್ರಮಗಳನ್ನು ವ್ಯಾಪಕವಾಗಿ ಜಾರಿಗೆ ತಂದಿದೆ. ಪ್ರಾರಂಭದಲ್ಲಿ ಮಧ್ಯಮ ಹಾಗೂ ಪ್ರೌಢಶಾಲೆಯಿಂದ ಹುಡುಗಿಯರನ್ನು ನಿಷೇಧಿಸಲಾಗಿತ್ತು. ಬಳಿಕ ಉದ್ಯೋಗದಿಂದ ಮಹಿಳೆಯರನ್ನು ನಿರ್ಬಂಧಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ರೆಕಾರ್ಡ್ ಮಾಡಿದ್ದವ ಅರೆಸ್ಟ್

    ಹಾಸ್ಟೆಲ್ ವಿದ್ಯಾರ್ಥಿನಿಯರ ಸ್ನಾನದ ವೀಡಿಯೋ ರೆಕಾರ್ಡ್ ಮಾಡಿದ್ದವ ಅರೆಸ್ಟ್

    ಜೈಪುರ: ಬಾಲಕಿಯರ ಹಾಸ್ಟೆಲ್‍ನಲ್ಲಿ ತಂಗಿದ್ದ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ವೀಡಿಯೋ ಮಾಡಿದ್ದಾನೆ ಎಂದು ಆರೋಪಿಸಿದ ಹಿನ್ನೆಲೆ ಕಾನ್ಪುರ ಪೊಲೀಸರು (Kanpur Police) ಕಸ ಗುಡಿಸುವವನನ್ನು (Sweeper) ಬಂಧಿಸಿದ್ದಾರೆ.

    ಸಾಯಿ ನಿವಾಸ್ ಬಾಲಕಿಯರ ಹಾಸ್ಟೆಲ್‍ನಲ್ಲಿ (Sai Niwas Girls Hostel) ಉಳಿದುಕೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಕಸ ಗುಡಿಸುವ ಸಿಬ್ಬಂದಿ ತಾನು ಸ್ನಾನ ಮಾಡುತ್ತಿರುವಾಗ ವೀಡಿಯೋ ಮಾಡಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ ಮೊದಲಿಗೆ ಪೊಲೀಸರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಇತರ ಹುಡುಗಿಯರು ತಾವು ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಆರೋಪಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಿದ ನಂತರ ಈ ವಿಚಾರವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.

    POLICE JEEP

    ಇದೀಗ ಆರೋಪಿಯ ಬಳಿ ಇದ್ದ ಮೊಬೈಲ್ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡು ವಿಧಿವಿಜ್ಞಾನ ವಿಶ್ಲೇಷಣೆಗೆ ಕಳುಹಿಸಲಾಗಿದೆ ಎಂದು ಕಲ್ಯಾಣಪುರದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಡಿಕೆ ಶುಕ್ಲಾ ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ಸ್ನಾನದ ವೀಡಿಯೋ ಮಾಡಿದ್ದಾರೆ – ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಠಾಣೆ ಎದುರು ವಿದ್ಯಾರ್ಥಿನಿಯರ ಪ್ರತಿಭಟನೆ

    ಹಾಸ್ಟೆಲ್ ಸಿಬ್ಬಂದಿಯ ಮೊಬೈಲ್‍ನಲ್ಲಿ ಅಶ್ಲೀಲ ವೀಡಿಯೋಗಳಿವೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋಗಳು ಹೆಚ್ಚಾಗಿವೆ ಎಂದು ಆರೋಪಿಸಲಾಗಿತ್ತು. ಹಾಸ್ಟೆಲ್ ಕಟ್ಟಡದ ಸ್ಕೈಲೈಟ್‍ನಿಂದ ಉದ್ಯೋಗಿ ವೀಡಿಯೊಗಳನ್ನು ಚಿತ್ರೀಕರಿಸಿದ್ದಾನೆ. ಸುಮಾರು 8 ವರ್ಷಗಳಿಂದ ಆರೋಪಿ ಈ ಕೆಲಸ ಮಾಡಿಕೊಂಡು ಬಂದಿದ್ದಾನೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿ ಸುಮಾರು 8 ವರ್ಷಗಳಿಂದ ಹಾಸ್ಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿಸಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಮತ್ತು ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಪಡಿತರ ಚೀಟಿ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್ ಕೊಟ್ಟ ಆಹಾರ ಇಲಾಖೆ

    Live Tv
    [brid partner=56869869 player=32851 video=960834 autoplay=true]

  • ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ನೀಟ್ ಪರೀಕ್ಷೆ: ಒಳಉಡುಪು ಕಳಚಿಡುವಂತೆ ಒತ್ತಾಯಿಸಿದ್ದ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆಗೆ ಅನುಮತಿ

    ತಿರುವನಂತಪುರಂ: ವೈದ್ಯಕೀಯ ಪ್ರವೇಶ ಪರೀಕ್ಷೆ (ನೀಟ್) ವೇಳೆ ತಮ್ಮ ಒಳ ಉಡುಪುಗಳನ್ನು ಕಳಚಿಟ್ಟು ಬರುವಂತೆ ಹೇಳಲಾಗಿದ್ದ ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆಯನ್ನು ಪುನಃ ನಡೆಸಲಾವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‍ಟಿಎ) ತಿಳಿಸಿದೆ.

    ವಿದ್ಯಾರ್ಥಿನಿಯರು ಸೆಪ್ಟೆಂಬರ್ 4 ರಂದು ಪರೀಕ್ಷೆಯನ್ನು ತೆಗೆದುಕೊಳ್ಳುವ ಆಯ್ಕೆಯನ್ನು ಮಾಡಬಹುದು. ಈ ಬಗ್ಗೆ ವಿದ್ಯಾರ್ಥಿನಿಯರಿಗೆ ಎನ್‍ಟಿಎ ಇಮೇಲ್ ಅನ್ನು ಕಳುಹಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ

    ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯರಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವ ಮುನ್ನ ತಮ್ಮ ಒಳಉಡುಪುಗಳನ್ನು ಕಳಚಿಡುವಂತೆ ಹೇಳಲಾಗಿತ್ತು. ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಜುಲೈನಲ್ಲಿ ವ್ಯಕ್ತಿಯೊಬ್ಬರು ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದರು ಮತ್ತು ಚಾತಮಂಗಲಂನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ಮುನ್ನ ತಮ್ಮ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಬ್ರಾಗಳನ್ನು ತೆಗೆಯುವಂತೆ ಹೇಳಿದ್ದಾರೆ ಎಂದು ಆರೋಪಿಸಿದ್ದರು.

    EXAM

     

    ಪರೀಕ್ಷಾ ಕೇಂದ್ರದೊಳಗೆ ಲೋಹದ ವಸ್ತು ತೆಗೆದುಕೊಂಡು ಹೋಗುವಂತಿಲ್ಲ ಎನ್ನುವ ನಿಯಮವಿದೆ. ಹಲವು ವಿದ್ಯಾರ್ಥಿನಿಯರು ತೊಟ್ಟಿದ್ದ ಬ್ರಾದಲ್ಲಿ ಅಂಡರ್‌ವೈರಿಂಗ್ ಇದ್ದು, ಅದು ಮೆಟಲ್ ಡಿಟೆಕ್ಟರ್‌ನಲ್ಲಿ ಡಿಟೆಕ್ಟ್ ಆಗಿದೆ. ಆ ಹಿನ್ನೆಲೆ ಸುಮಾರು 100 ವಿದ್ಯಾರ್ಥಿನಿಯರಿಗೆ ಬ್ರಾ ತೆಗೆದಿಟ್ಟು ಪರೀಕ್ಷೆ ಬರೆಸಲಾಗಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದರು. ಈ ವಿಚಾರವಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿಗಳನ್ನು ಪರಿಶೀಲನೆ ಮಾಡುವ ಕೆಲಸವನ್ನು ಬೇರೊಂದು ಏಜೆನ್ಸಿಗೆ ವಹಿಸಲಾಗಿತ್ತು ಎಂದು ಪರೀಕ್ಷಾ ಕೇಂದ್ರ ಹೇಳಿತ್ತು.

    ನಂತರ ಕುರಿತಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಹೆಂಗಸಿನ ಮಾನಭಂಗ ಮಾಡುವ ಉದ್ದೇಶದಿಂದ ಅವಳ ಮೇಲೆ ಹಲ್ಲೆ ಅಥವಾ ಆಪರಾಧಿಕ ಬಲಪ್ರಯೋಗ ಮಾಡುವುದು) ಮತ್ತು 509 (ಒಬ್ಬ ಮಹಿಳೆಯ ಮಾನಕ್ಕೆ ಕುಂದುಂಟು ಮಾಡುವ ಉದ್ದೇಶವಿರುವ ಶಬ್ದ, ಸಂಜ್ಞೆ ಅಥವಾ ಕೃತ್ಯ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: NEET ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ- ತನಿಖೆ ಆರಂಭಿಸಿದ ಪೊಲೀಸರು

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದರು. ಬಂಧಿತರಲ್ಲಿ ನೀಟ್ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದ ಇಬ್ಬರು ಕಾಲೇಜು ಸಿಬ್ಬಂದಿ ಮತ್ತು ಕೇಂದ್ರದ ಭದ್ರತೆಯನ್ನು ವಹಿಸಿಕೊಂಡಿದ್ದ ಏಜೆನ್ಸಿಯ ಮೂವರು ಸೇರಿದ್ದಾರೆ. ಕೊನೆಗೆ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ.

    Live Tv
    [brid partner=56869869 player=32851 video=960834 autoplay=true]