Tag: Fighter

  • ಒಟಿಟಿಗೆ ಬಂದ ಫೈಟರ್: ಹೃತಿಕ್-ದೀಪಿಕಾ ಕಾಂಬಿನೇಷನ್ ಚಿತ್ರ

    ಒಟಿಟಿಗೆ ಬಂದ ಫೈಟರ್: ಹೃತಿಕ್-ದೀಪಿಕಾ ಕಾಂಬಿನೇಷನ್ ಚಿತ್ರ

    ಬಾಲಿವುಡ್ ನ ಮತ್ತೊಂದು ಸೂಪರ್ ಹಿಟ್ ಸಿನಿಮಾ ಒಟಿಟಿಗೆ ಬಂದಿದೆ. ಹೃತಿಕ್ ರೋಷನ್ (Hrithik Roshan) ಮತ್ತು ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಫೈಟರ್ ಸಿನಿಮಾ ಇಂದಿನಿಂದ ನೀವು ಒಟಿಟಿಯಲ್ಲಿ (OTT) ನೋಡಬಹುದು. ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿದ್ದ ಈ ಚಿತ್ರವು ಹಲವು ವಿವಾದಕ್ಕೂ ಕಾರಣವಾಗಿತ್ತು.

    ಫೈಟರ್ (Fighter) ಸಿನಿಮಾದ ಚುಂಬನ ದೃಶ್ಯ ಕುರಿತಂತೆ ವಾಯುಸೇನಾ ಅಧಿಕಾರಿಯೊಬ್ಬರು ಗರಂ ಆಗಿದ್ದಾರೆ. ವಾಯುಸೇನೆ ಸಮವಸ್ತ್ರ ಧರಿಸಿಕೊಂಡು ಹೃತಿಕ್ ಮತ್ತು ದೀಪಿಕಾ ಚುಂಬಿಸುವ ದೃಶ್ಯವು ವಸ್ತ್ರ ಸಂಹಿತೆ ನೀತಿಯನ್ನು ಉಲ್ಲಂಘಿಸಿದೆ. ಇದರಿಂದಾಗಿ ವಾಯುಸೇನೆಗೆ ಮುಜುಗರ ತರಿಸಿದೆ ಎಂದು ಅಧಿಕಾರಿ ಅಸ್ಸಾಮಿನ ಸೌಮ್ಯ ದೀಪ್ ದಾಸ್ (Soumya Deep Das) ಎನ್ನುವವರು ದೂರು (Complain) ದಾಖಲಿಸಿದ್ದಾರೆ.

    ಫೈಟರ್ ಸಿನಿಮಾ ಕುರಿತಂತೆ ಬಿಡುಗಡೆ ದಿನದಿಂದ ಈವರೆಗೂ ಒಂದಿಲ್ಲೊಂದು ಸಂಕಷ್ಟವನ್ನು ಎದುರಿಸುತ್ತಲೇ ಬಂದಿದೆ.  ಈ ಹಿಂದೆ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿತ್ತು. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ (Bikini) ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿತ್ತು.

     

    ಈ ಹಿಂದೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ಸಿನಿಮಾದಿಂದಲೇ ಆ ದೃಶ್ಯವನ್ನು ಕೈ ಬಿಡಲಾಗಿತ್ತು. ಫೈಟರ್ ಸಿನಿಮಾದಲ್ಲೂ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಳ್ಳಲಿಲ್ಲ. ಇದು ಅಭಿಮಾನಿಗಳ ನಿರಾಸೆ ಕಾರಣವಾಗಿತ್ತು.

  • ಚುಂಬನ ಎಫೆಕ್ಟ್: ‘ಫೈಟರ್’ ಸಿನಿಮಾ ವಿರುದ್ಧ ಸಿಡಿದೆದ್ದ ವಾಯುಸೇನಾ ಅಧಿಕಾರಿ

    ಚುಂಬನ ಎಫೆಕ್ಟ್: ‘ಫೈಟರ್’ ಸಿನಿಮಾ ವಿರುದ್ಧ ಸಿಡಿದೆದ್ದ ವಾಯುಸೇನಾ ಅಧಿಕಾರಿ

    ದೀಪಿಕಾ ಪಡುಕೋಣೆ (Deepika Paduk) ಮತ್ತು ಹೃತಿಕ್ ರೋಷನ್ ಕಾಂಬಿನೇಷನ್ ನ ಫೈಟರ್ (Fighter) ಸಿನಿಮಾದ ಚುಂಬನ ದೃಶ್ಯ ಕುರಿತಂತೆ ವಾಯುಸೇನಾ ಅಧಿಕಾರಿಯೊಬ್ಬರು ಗರಂ ಆಗಿದ್ದಾರೆ. ವಾಯುಸೇನೆ ಸಮವಸ್ತ್ರ ಧರಿಸಿಕೊಂಡು ಹೃತಿಕ್ ಮತ್ತು ದೀಪಿಕಾ ಚುಂಬಿಸುವ ದೃಶ್ಯವು ವಸ್ತ್ರ ಸಂಹಿತೆ ನೀತಿಯನ್ನು ಉಲ್ಲಂಘಿಸಿದೆ. ಇದರಿಂದಾಗಿ ವಾಯುಸೇನೆಗೆ ಮುಜುಗರ ತರಿಸಿದೆ ಎಂದು ಅಧಿಕಾರಿ ಅಸ್ಸಾಮಿನ ಸೌಮ್ಯ ದೀಪ್ ದಾಸ್ (Soumya Deep Das) ಎನ್ನುವವರು ದೂರು (Complain) ದಾಖಲಿಸಿದ್ದಾರೆ.

    ಫೈಟರ್ ಸಿನಿಮಾ ಕುರಿತಂತೆ ಬಿಡುಗಡೆ ದಿನದಿಂದ ಈವರೆಗೂ ಒಂದಿಲ್ಲೊಂದು ಸಂಕಷ್ಟವನ್ನು ಎದುರಿಸುತ್ತಲೇ ಬಂದಿದೆ.  ಈ ಹಿಂದೆ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿತ್ತು. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ (Bikini) ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿತ್ತು.

    ಈ ಹಿಂದೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ಸಿನಿಮಾದಿಂದಲೇ ಆ ದೃಶ್ಯವನ್ನು ಕೈ ಬಿಡಲಾಗಿತ್ತು. ಫೈಟರ್ ಸಿನಿಮಾದಲ್ಲೂ ಬಿಕಿನಿಯಲ್ಲಿ ದೀಪಿಕಾ ಕಾಣಿಸಿಕೊಳ್ಳಲಿಲ್ಲ. ಇದು ಅಭಿಮಾನಿಗಳ ನಿರಾಸೆ ಕಾರಣವಾಗಿತ್ತು.

    ಒಂದು ಕಡೆ ಬಿಕಿನಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದರೆ ಮತ್ತೊಂದು ಕಡೆ ಚಿತ್ರತಂಡ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಲಾವಿದರ ಸಂಭಾವನೆಯಿಂದ ಚಿತ್ರದ ಬಜೆಟ್ ಮಿತಿ ಮೀರಿದೆ ಎಂದು ಈ ಹಿಂದೆ ಸಿನಿಮಾ ವಿಶ್ಲೇಷಕ ಕಮಾಲ್ ಆರ್. ಖಾನ್ ಟ್ವೀಟ್ ಮಾಡಿದ್ದರು.

     

    ಹೃತಿಕ್ ರೋಷನ್ (Hrithik Roshan) ನಟನೆಯ ‘ಫೈಟರ್’ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ.. ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು 40 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಹೃತಿಕ್ ರೋಷನ್ ಸಂಭಾವನೆ 85 ಕೋಟಿ ರೂಪಾಯಿ, ದೀಪಿಕಾ ಪಡುಕೋಣೆ ಸಂಭಾವನೆ 20 ಕೋಟಿ ರೂಪಾಯಿ. ಇನ್ನುಳಿದ ಕಲಾವಿದರಿಗೆ 15 ಕೋಟಿ ರೂಪಾಯಿ ನೀಡಲಾಗುತ್ತಿದೆ. ಅಂದರೆ, ಸಂಭಾವನೆ ಮೊತ್ತವೇ 160 ಕೋಟಿ ರೂಪಾಯಿ ತಲುಪಲಿದೆ’ ಎಂದು ಕಮಾಲ್ ಆರ್.ಖಾನ್ ಟ್ವೀಟ್ ಮಾಡಿದ್ದರು.

  • ದೀಪಿಕಾ ಬಿಕಿನಿಗೆ ಮತ್ತೆ ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ

    ದೀಪಿಕಾ ಬಿಕಿನಿಗೆ ಮತ್ತೆ ಕತ್ತರಿ ಹಾಕಿದ ಸೆನ್ಸಾರ್ ಮಂಡಳಿ

    ವಿಶ್ವದಾದ್ಯಂತ ನಾಳೆ ಫೈಟರ್ (Fighter) ರಿಲೀಸ್ ಆಗುತ್ತಿದೆ. ಹೃತಿಕ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ಕಾಂಬಿನೇಷನ್ ನ ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಹೊತ್ತಲ್ಲಿ ಸೆನ್ಸಾರ್ ಮಂಡಳಿಯು ಚಿತ್ರದ ಎರಡು ದೃಶ್ಯಗಳನ್ನು ಕತ್ತರಿಸುವಂತೆ ಸೂಚಿಸಲಾಗಿದ್ದ ವಿಷಯ ಮುನ್ನೆಲೆಗೆ ಬಂದಿದೆ. ಅದರಲ್ಲೂ ದೀಪಿಕಾ ಪಡುಕೋಣೆ ಬಿಕಿನಿ (Bikini) ಹಾಕಿದ ದೃಶ್ಯಕ್ಕೆ ಕತ್ತರಿ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಧರಿಸಿದ್ದರು. ಅದು ವಿವಾದಕ್ಕೆ ಕಾರಣವಾಗಿತ್ತು. ನಂತರ ಸಿನಿಮಾದಿಂದಲೇ ಆ ದೃಶ್ಯವನ್ನು ಕೈ ಬಿಡಲಾಗಿತ್ತು. ಫೈಟರ್ ಸಿನಿಮಾದಲ್ಲೂ ಬಿಕಿನಿಯಲ್ಲಿ ದೀಪಿಕಾ ಕಾಣಿಸುವುದಿಲ್ಲ ಎನ್ನುವುದು ಸದ್ಯದ ವರ್ತಮಾನ.

    ಒಂದು ಕಡೆ ಬಿಕಿನಿ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದರೆ ಮತ್ತೊಂದು ಕಡೆ ಚಿತ್ರತಂಡ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಕಲಾವಿದರ ಸಂಭಾವನೆಯಿಂದ ಚಿತ್ರದ ಬಜೆಟ್ ಮಿತಿ ಮೀರಿದೆ ಎಂದು ಈ ಹಿಂದೆ ಸಿನಿಮಾ ವಿಶ್ಲೇಷಕ ಕಮಾಲ್ ಆರ್. ಖಾನ್ ಟ್ವೀಟ್ ಮಾಡಿದ್ದರು.

    ಬಾಲಿವುಡ್‌ನ ಬಹುನಿರೀಕ್ಷಿತ ಚಿತ್ರ ‘ಪಠಾಣ್’ಗೆ ಸಿದ್ಧಾರ್ಥ್ ಆನಂದ್ ನಿರ್ದೇಶನ ಮಾಡ್ತಿದ್ದಾರೆ. ಹೃತಿಕ್-ದೀಪಿಕಾ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿದ್ದಾರೆ. ಹಾಗಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸ್ಟಾರ್ ಕಲಾವಿದರ ದುಬಾರಿ ಸಂಭಾವನೆ ವಿಷ್ಯವಾಗಿ ಫೈಟರ್ ಸುದ್ದಿಯಲ್ಲಿದೆ.

    ಹೃತಿಕ್ ರೋಷನ್ (Hrithik Roshan) ನಟನೆಯ ‘ಫೈಟರ್’ ಸಿನಿಮಾದ ಬಜೆಟ್ 350 ಕೋಟಿ ರೂಪಾಯಿ ತಲುಪಿದೆ. ಇದನ್ನು ಮರಳಿ ಪಡೆಯುವುದು ಬಹುತೇಕ ಅಸಾಧ್ಯ. ನಿರ್ದೇಶಕ ಸಿದ್ದಾರ್ಥ್ ಆನಂದ್ ಅವರು 40 ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಹೃತಿಕ್ ರೋಷನ್ ಸಂಭಾವನೆ 85 ಕೋಟಿ ರೂಪಾಯಿ, ದೀಪಿಕಾ ಪಡುಕೋಣೆ ಸಂಭಾವನೆ 20 ಕೋಟಿ ರೂಪಾಯಿ. ಇನ್ನುಳಿದ ಕಲಾವಿದರಿಗೆ 15 ಕೋಟಿ ರೂಪಾಯಿ ನೀಡಲಾಗುತ್ತಿದೆ. ಅಂದರೆ, ಸಂಭಾವನೆ ಮೊತ್ತವೇ 160 ಕೋಟಿ ರೂಪಾಯಿ ತಲುಪಲಿದೆ’ ಎಂದು ಕಮಾಲ್ ಆರ್.ಖಾನ್ ಟ್ವೀಟ್ ಮಾಡಿದ್ದರು.

     

    ಗಲ್ಲಾಪೆಟ್ಟಿಗೆಯಲ್ಲಿ ಪಠಾಣ್ ಕೋಟಿ ಕೋಟಿ ಲೂಟಿ ಮಾಡಿರೋದ್ರಿಂದ ಸಹಜವಾಗಿ ಸಿದ್ಧಾರ್ಥ್ ಆನಂದ್ ನಿರ್ದೇಶನದ ಫೈಟರ್ ಮೇಲೆ ನಿರೀಕ್ಷೆ ಡಬಲ್ ಆಗಿದೆ. ನಾಳೆಯೇ ಸಿನಿಮಾ ರಿಲೀಸ್ ಆಗುತ್ತಿರುವುದರಿಂದ ಸಿನಿಮಾ ಕಲಾವಿದರ ಸಂಭಾವನೆ ಮೀರಿ ಕಲೆಕ್ಷನ್ ಮಾಡುವ ‘ಫೈಟರ್’ ದಾಖಲೆ ಬರೆಯುತ್ತಾ ಎಂದು ಕಾದುನೋಡಬೇಕಿದೆ.

  • ದುನಿಯಾ ವಿಜಯ್ ಅವರನ್ನ ನಾಶ ಮಾಡಿದ್ದು ಯಾರು?: ನಟ ಹೇಳಿದ ಶಾಕಿಂಗ್ ನ್ಯೂಸ್

    ದುನಿಯಾ ವಿಜಯ್ ಅವರನ್ನ ನಾಶ ಮಾಡಿದ್ದು ಯಾರು?: ನಟ ಹೇಳಿದ ಶಾಕಿಂಗ್ ನ್ಯೂಸ್

    ಭೀಮ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿರುವ ದುನಿಯಾ ವಿಜಯ್ (Duniy Vijay), ಫೈಟರ್ ಸಿನಿಮಾದ ಕಾರ್ಯಕ್ರಮದಲ್ಲಿ ಆತಂಕದ ಸಂಗತಿಯೊಂದನ್ನು ಹಂಚಿಕೊಂಡಿದ್ದಾರೆ. ತಮ್ಮನ್ನು ಅವಮಾನಿಸಿದ ವಿಚಾರದ ಜೊತೆಗೆ ತಮ್ಮನ್ನು ನಾಶ ಮಾಡುವುದಕ್ಕೆ ಪ್ರಯತ್ನಿಸಿದರು ಎನ್ನುವ ಸಂಗತಿಯನ್ನೂ ಅವರು ಹೇಳಿಕೊಂಡಿದ್ದಾರೆ. ಜೊತೆಗೆ ತಮ್ಮನ್ನು ಬೆಳೆಸಿದವರಿಗೆ ಕೃತಜ್ಞತೆಯನ್ನೂ ತಿಳಿಸಿದ್ದಾರೆ.

    ಟೈಗರ್ ಪ್ರಭಾಕರ್ ಪುತ್ರ ವಿನೋದ್ ಪ್ರಭಾಕರ್ ನಟನೆಯ ಸಿನಿಮಾ ಫೈಟರ್ (Fighter). ಈ ಸಿನಿಮಾದ ಕಾರ್ಯಕ್ರಮಕ್ಕೆ ವಿಜಯ್ ಅತಿಥಿಯಾಗಿ ಆಗಮಿಸಿದ್ದರು. ಟೈಗರ್ ಪ್ರಭಾಕರ್ ಅವರನ್ನು, ಅವರ ಸಾಹಸ ದೃಶ್ಯಗಳನ್ನು ಇಷ್ಟ ಪಡುತ್ತಿದ್ದ ವಿಜಯ್, ಈ ಸಂದರ್ಭದಲ್ಲಿ ಪ್ರಭಾಕರ್ ಅವರನ್ನು ನೆನಪಿಸಿಕೊಂಡರು. ಪ್ರಭಾಕರ್ ಅವರು ಎದುರಿಗೆ ಬಂದರೆ ಹುಲಿ ಬಂದ ಹಾಗೆ ಇರುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ:ತಲಕಾವೇರಿಗೆ ವಿಶೇಷ ಪೂಜೆ ಸಲ್ಲಿಸಿದ ಅಭಿಷೇಕ್, ಅವಿವಾ ದಂಪತಿ

    ನಂತರ ಸಿನಿಮಾಗೆ ಪ್ರವೇಶ ಮಾಡಿದಾಗ ನಾನು ಫೈಟರ್. ಆ ಕಾರಣಕ್ಕಾಗಿ ಅವಮಾನಕ್ಕೆ ಒಳಗಾದೆ. ಫೈಟರ್ ಆಗಿ ಅದೇನ್ ಮಾಡ್ತಾನೋ ನೋಡೋಣ ಅಂದರು. ಫೈಟರ್ ಒಬ್ಬನು ನಟನಾದ ಅಷ್ಟೇ ಅಂದು ನೋವು ಕೊಟ್ಟರು. ನಟನಾಗಿ ಬೆಳೆದಾಗ ನನ್ನನ್ನು ನಾಶ ಮಾಡಲು ಪ್ರಯತ್ನ ಪಟ್ಟರು. ಕೆಲವರು ಕೈ ಹಿಡಿದು ಬೆಳೆಸಿದರು ಎಂದು ಭಾವುಕರಾಗಿ ಮಾತನಾಡಿದರು ವಿಜಯ್.

     

    ತಮ್ಮನ್ನು ಯಾರು ನಾಶ ಮಾಡಲು ಪ್ರಯತ್ನಿಸಿದರು, ತಮ್ಮನ್ನು ಹಿಯಾಳಿಸಿದವರು ಯಾರು ಎನ್ನುವ ಮಾಹಿತಿಯನ್ನು ಅವರು ಬಿಟ್ಟುಕೊಡಲಿಲ್ಲ. ಆದರೆ ,ತಮಗಾದ ಸಂಕಟವನ್ನು ಎಲ್ಲರೊಂದಿಗೂ ಹಂಚಿಕೊಂಡರು ವಿಜಯ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೈಟರ್ ಚಿತ್ರದ ‘ಐ ವಾನ ಫಾಲೋ ಯು’ ಸಾಂಗ್ ರಿಲೀಸ್

    ಫೈಟರ್ ಚಿತ್ರದ ‘ಐ ವಾನ ಫಾಲೋ ಯು’ ಸಾಂಗ್ ರಿಲೀಸ್

    ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ (Nutan Umesh) ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ (Fighter) ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ ‘ಐ ವಾನ ಫಾಲೋ ಯು’ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚೆಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ (ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ, ಗೌರೀಶ್ ಹಾಗೂ ಹಿರಿಯ ಪತ್ರಕರ್ತರಾದ ಕೆ.ಎಸ್ ವಾಸು, ಕೆ.ಎನ್.ನಾಗೇಶ್ ಕುಮಾರ್ ಮುಂತಾದ ಗಣ್ಯರು ‘ಐ ವಾನ ಫಾಲೋ ಯು’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

    ಈ ಹಾಡಿನ ಮೊದಲ ಪದ ‘ಐ ವಾನ ಫಾಲೋ’ ಎಂಬುದನ್ನು ನಿರ್ದೇಶಕರು ಹೇಳಿದಾಗ ಫಾಲೋ ಎಂಬ ಪದದಿಂದಲೇ ಈ ಹಾಡು ಆರಂಭವಾಯಿತು.  ವಿಶೇಷವೆಂದರೆ,  ಈ  ಹಾಡಿನಲ್ಲಿ ಬರುವ ಪದಗಳಿಗೆ ಎರಡು ಅರ್ಥಗಳಿದೆ. ಕವಿರಾಜ್ ಅದ್ಭುತವಾಗಿ ಹಾಡು ಬರೆದಿದ್ದಾರೆ. ಚೈತ್ರ ಸೊಗಸಾಗಿ ಹಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಹಾಡಿನ ಬಗ್ಗೆ ಮಾಹಿತಿ ನೀಡಿದರು.

    ಈ ಹಾಡನ್ನು ಪಾಂಡಿಚೇರಿಯಲ್ಲಿ ಚಿತ್ರಿಸಲಾಗಿದೆ. ಗುರುಕಿರಣ್ ಅವರ ಸಂಗೀತ, ಕವಿರಾಜ್ ಅವರ ಸಾಹಿತ್ಯ, ಮೋಹನ್  ನೃತ್ಯ ನಿರ್ದೇಶನ ಹಾಗೂ ವಿನೋದ್ ಪ್ರಭಾಕರ್, ಲೇಖಾ ಚಂದ್ರ ಅವರ ಅಭಿನಯ ಎಲ್ಲವೂ ಸೇರಿ ಈ ‘ಫಾಲೋ ಯು’ ಹಾಡು ಅದ್ಭುತವಾಗಿ ಹಾಗೂ ಅದ್ದೂರಿಯಾಗಿ ಮೂಡಿಬಂದಿದೆ. ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಚಿತ್ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಗಲಿದೆ ಎನ್ನುತ್ತಾರೆ ನಿರ್ದೇಶಕ ನೂತನ್ ಉಮೇಶ್.

    ಚಿತ್ರದ ಮುಹೂರ್ತಕ್ಕೆ ಬಂದು ಹಾರೈಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನೆನೆಯುತ್ತಾ ಮಾತು ಆರಂಭಿಸಿದ ನಾಯಕ ವಿನೋದ್ ಪ್ರಭಾಕರ್, ಈ ಫೈಟರ್ ಅನ್ಯಾಯದ ವಿರುದ್ಧ ಹಾಗೂ ರೈತರ ಪರವಾಗಿ ಹೋರಾಡುವ ಫೈಟರ್. ನಿರ್ಮಾಪಕ ಸೋಮಶೇಖರ್ ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕರು ಅಷ್ಟೇ ಚೆನ್ನಾಗಿ ಕಥೆ ,ಚಿತ್ರಕಥೆ ಬರೆದಿದ್ದಾರೆ. ಇಂದು ಬಿಡುಗಡೆಯಾದ ಹಾಡಿನ ಚಿತ್ರೀಕರಣ ಮಾರ್ಚ್ ನಲ್ಲಿ ಪಾಂಡಿಚೇರಿಯಲ್ಲಿ ಚಿತ್ರೀಕರಣವಾಗಿದ್ದು, ಅಲ್ಲಿನ ಬಿಸಿಲು ತಡೆಯುವುದು ಕಷ್ಟ.   ಎಲ್ಲರ ಶ್ರಮದಿಂದ ಈ ಹಾಡು ಚೆನ್ನಾಗಿ ಬಂದಿದೆ. ನಿರ್ಮಾಪಕ ಸೋಮಶೇಖರ್ ಅವರಿಗೆ ಈ ಚಿತ್ರ ದೊಡ್ಡ ಯಶಸ್ಸು ತಂದು ಕೊಡಲಿ. ಅವರಿಂದ ಸಾಕಷ್ಟು ಚಿತ್ರಗಳು ನಿರ್ಮಾಣವಾಗಲಿ ಎಂದು ಹಾರೈಸಿದರು.

    ಇಡೀ ಚಿತ್ರತಂಡದ ಶ್ರಮದಿಂದ ಫೈಟರ್ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ‌ಇಂದು ಹಾಡು ಬಿಡುಗಡೆಯಾಗಿದೆ. ಚಿತ್ರತಂಡಕ್ಕೆ ಹಾಗೂ ಆಗಮಿಸಿರುವ ಗಣ್ಯರಿಗೆ ನನ್ನ ಧನ್ಯವಾದ ಎನ್ನುತ್ತಾರೆ ನಿರ್ಮಾಪಕ ಸೋಮಶೇಖರ್ ಕಟ್ಟಿಗೇನಹಳ್ಳಿ. ಹಾಡು ಬರೆದಿರುವ ಕವಿರಾಜ್, ಹಾಡಿರುವ ಚೈತ್ರ ಹಾಗೂ ನಾಯಕಿ ಲೇಖಾ ಚಂದ್ರ  ಫಾಲೋ ಯು ಹಾಡಿನ ಬಗ್ಗೆ ಮಾತನಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ಅಭಿನಯದ, ನೂತನ್ ಉಮೇಶ್ (Nutan Umesh) ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ ‘ಫೈಟರ್’ (Fighter) ಚಿತ್ರದ ಟೀಸರ್ (Teaser) ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ಮಾಪಕ ಸೋಮಶೇಖರ್ ಅವರ ತಂದೆ ಕೃಷ್ಣಪ್ಪ ಟೀಸರ್ ಬಿಡುಗಡೆ ಮಾಡಿದರು.

    ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ನೂತನ್ ಉಮೇಶ್, ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು.  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು.  ಈಗ ಟೀಸರ ಅನ್ನು ನಿರ್ಮಾಪಕರ ತಂದೆಯವರು ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೈಲರ್ ಹೊರಬರಲಿದ್ದು, ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಫೈಟರ್ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ಫೈಟರ್ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ‌. ಪಾವನ ಹಾಗೂ ಲೇಖ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ . ಸುಮಾರು ವರ್ಷಗಳ ನಂತರ ನಟಿ ನಿರೋಷ  ಈ ಚಿತ್ರದಲ್ಲಿ  ಅಭಿನಯಿಸಿದ್ದಾರೆ ಎಂದರು. ಇದನ್ನೂ ಓದಿ:ವರಮಹಾಲಕ್ಷ್ಮಿ ಹಬ್ಬ ಆಚರಿಸಿದ ರಿಷಬ್ ಶೆಟ್ಟಿ ದಂಪತಿ

    ಫೈಟರ್ ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ  ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನ ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನನ್ನನ್ನು ನಿರ್ದೇಶಕರು ನನ್ನ ಹಿಂದಿನ ಚಿತ್ರಗಳಿಗಿಂತ ತುಂಬಾನೇ ಸ್ಟೈಲಿಷ್ ಆಗಿ ತೋರಿಸಿದ್ದಾರೆ. ನಿರ್ಮಾಪಕರು ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್ ನಾನು ಎಂದು ವಿನೋದ್ ಪ್ರಭಾಕರ್ ತಿಳಿಸಿದರು.

    ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ (Pavana) ತಮ್ಮ ಪಾತ್ರದ ಕುರಿತು ಮಾತನಾಡಿದರು. ಬಹಳ ದಿನಗಳ ನಂತರ ಕನ್ನಡ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ನಿರೋಷ ಸಂತಸಪಟ್ಟರು. ಚಿತ್ರದಲ್ಲಿ  ಹಾಡುಗಳಿದ್ದು ಎರಡೂ ವಿಭಿನ್ನವಾಗಿವೆ ಎಂದು ಸಂಗೀತ ನಿರ್ದೇಶಕ ಗುರುಕಿರಣ್ ತಿಳಿಸಿದರು. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಫೈಟರ್ ಚಿತ್ರದ ಸಾಹಸ ದೃಶ್ಯಗಳ ಕುರಿತು ಮಾಹಿತಿ ನೀಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಗಸ್ಟ್ 25ಕ್ಕೆ ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರದ ಬಿಗ್ ಅಪ್‌ಡೇಟ್

    ಆಗಸ್ಟ್ 25ಕ್ಕೆ ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ಚಿತ್ರದ ಬಿಗ್ ಅಪ್‌ಡೇಟ್

    ಸ್ಯಾಂಡಲ್‌ವುಡ್‌ನ (Sandalwood) ಮರಿ ಟೈಗರ್ ವಿನೋದ್ ಪ್ರಭಾಕರ್ ‘ಫೈಟರ್’ (Fighter) ಅವತಾರ ತಾಳಿದ್ದಾರೆ. ಹೊಸ ಬಗೆಯ ಗೆಟಪ್‌ನಲ್ಲಿ ಮಿಂಚಲು ವಿನೋದ್ ಪ್ರಭಾಕರ್ (Vinod Prabhakar) ರೆಡಿಯಾಗಿದ್ದಾರೆ. ಇದೀಗ ಚಿತ್ರತಂಡದ ಕಡೆಯಿಂದ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಫೈಟರ್ ಸಿನಿಮಾ ಮೊದಲ ಝಲಕ್ ರಿವೀಲ್ ಟೀಮ್ ನಿರ್ಧರಿಸಿದೆ.

    ನೂತನ್ ಉಮೇಶ್ ನಿರ್ದೇಶನದ ‘ಫೈಟರ್’ ಸಿನಿಮಾ ಬಗ್ಗೆ ಆಗಸ್ಟ್ 25ಕ್ಕೆ ಬಿಗ್ ಅಪ್‌ಡೇಟ್ ಕೊಡೋದಾಗಿ ಚಿತ್ರತಂಡ ತಿಳಿಸಿದೆ. ನಾಳೆ ಶುಕ್ರವಾರದಂದು ಫೈಟರ್ ಸಿನಿಮಾ ಖಡಕ್ ಟೀಸರ್‌ವೊಂದು ರಿವೀಲ್ ಆಗಿದೆ. ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿರೋ ಚಿತ್ರತಂಡ ಟೀಸರ್ ಝಲಕ್ ಮೂಲಕ ಫ್ಯಾನ್ಸ್‌ಗೆ ದರ್ಶನ ಕೊಡಲಿದ್ದಾರೆ. ಇದನ್ನೂ ಓದಿ:ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಹರ್ಷಿಕಾ ಪೂಣಚ್ಚ- ಭುವನ್

    ವರ್ಷಕ್ಕೆ ಒಂದೇ ಸಿನಿಮಾ ಮಾಡಿದ್ರು ಕಥೆ ಭಿನ್ನವಾಗಿರಬೇಕು ಎನ್ನುವ ನಿಲುವು ವಿನೋದ್ ಪ್ರಭಾಕರ್ ಅವರದ್ದು. ಎಂದೂ ಕಾಣಿಸಿಕೊಂಡಿರದ ಭಿನ್ನ ಪಾತ್ರದಲ್ಲಿ ವಿನೋದ್ ನಟಿಸಿದ್ದಾರೆ. ‘ಫೈಟರ್’ ಸಿನಿಮಾವನ್ನು ಸೋಮಶೇಖರ್ ನಿರ್ಮಾಣ ಮಾಡಿದ್ದಾರೆ. ಸದ್ಯದಲ್ಲೇ ಸಿನಿಮಾ ತೆರೆಗೆ ಬರಲಿದೆ.

    ‘ಫೈಟರ್’ ಒಂದು ಪಕ್ಕಾ ಫ್ಯಾಮಿಲಿ, ಕಮರ್ಷಿಯಲ್ ಚಿತ್ರವಾಗಿದ್ದು, ಚಿತ್ರದ ನಾಯಕನ ರೈಟರ್, ಫೈಟರ್ ಮತ್ತು ಶೂಟರ್ ಎಂಬ ಮೂರು ವಿಭಿನ್ನ ಛಾಯೆಗಳಲ್ಲಿ ಕಾಣಿಸಿಕೊಂಡು ಸಾಮಾಜಿಕ ಕಳಕಳಿಯಿಂದ ಹೊರಡುತ್ತಾನೆ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದಾರೆ. ನಾವು ನಿಜ ಜೀವನದಲ್ಲಿ ಹಲವು ವಿಷಯಗಳಿಗೆ ಫೈಟ್ ಮಾಡುತ್ತೇವೆ. ಅದು ತುಂಬಾ ಸಹಜವಾಗಿ ಈ ಚಿತ್ರದಲ್ಲಿ ಮೂಡಿ ಬರಲಿದೆ. ಇದರಲ್ಲಿ ಮಾರ್ಷಲ್ ಆರ್ಟ್ ಇದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ನನ್ನ ಕೈಯಲ್ಲಿ ಭಾರತದ ಲಸಿಕೆಯಿದೆ: ಬ್ರಿಟನ್ ಪ್ರಧಾನಿ ಬೋರಿಸ್

    ನವದೆಹಲಿ: ಭಾರತದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಂದು ಸುದೀರ್ಘ ಮಾತುಕತೆ ನಡೆಸಿದರು. ರಕ್ಷಣಾ ಕ್ಷೇತ್ರ, ವ್ಯಾಪಾರ ಹಾಗೂ ಸ್ವಚ್ಛ ಇಂಧನದಲ್ಲಿ ಸಹಕಾರ ವಿಸ್ತರಿಸುವ ನಿಟ್ಟಿನಲ್ಲಿ ಚರ್ಚಿಸಿದ್ದಾರೆ.

    ಇದೇ ವೇಳೆ ಮಾತನಾಡಿರುವ ಅವರು, ನನ್ನ ಕೈಯ್ಯಲ್ಲಿ ಭಾರತದ ಲಸಿಕೆಯಿದೆ. ಅದು ನನಗೆ ಒಳ್ಳೆಯದನ್ನು ಮಾಡಿದೆ. ನಾನು ಭಾರತಕ್ಕೆ ಧನ್ಯವಾದ ಹೇಳುತ್ತೇನೆ. ನನ್ನ ವಿಶೇಷ ಗೆಳಯ ಪ್ರಧಾನಿ ನರೇಂದ್ರಮೋದಿ ಅವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದೂ ಹೇಳಿದ್ದಾರೆ. ಇದನ್ನೂ ಓದಿ: ಹೊಸ ಆತಂಕ ಹುಟ್ಟಿಸಿದ ಓಮಿಕ್ರಾನ್ BA.2.12 ತಳಿ

    MODI MET BORIS

    ನಾವು ರಕ್ಷಣಾ ಪಾಲುದಾರಿಕೆಯೊಂದಿಗೆ ಆರೋಗ್ಯ ಪಾಲುದಾರಿಕೆಯ ಬಗ್ಗೆಯೂ ಚರ್ಚಿಸಿದ್ದೇವೆ. ಉದಾಹರಣೆಗೆ ಅಸ್ಟ್ರಾಜೆನಿಕಾ ಸೀರಂ ಸಂಸ್ಥೆಯು ಕೋವಿಡ್ ವಿರುದ್ಧ ಹೋರಾಡಲು ಶತಕೋಟಿ ಜನರಿಗೆ ಲಸಿಕೆ ನೀಡಿದೆ. ಅಲ್ಲದೆ, ಅದು ಭಾರತಕ್ಕೂ ಸಹಾಯ ಮಾಡಿದೆ. ಅದಕ್ಕಾಗಿ ವಿಶ್ವದ ಅತಿದೊಡ್ಡ ಲಸಿಕಾ ತಯಾರಕರಾದ ಸೀರಂ ಇನ್‌ಸ್ಟಿಟ್ಯೂಟ್ ಕೋವಿಡ್ ಲಸಿಕೆಯನ್ನು ಅಭಿವೃದ್ಧಿಪಡಿಸಲು ಸ್ವೀಡಿಷ್ ಅಸ್ಟ್ರಾಜೆನಿಕ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

    PM MEET

    ಅಲ್ಲದೆ, ದೇಶೀಯವಾಗಿ ಯುದ್ಧ ವಿಮಾನಗಳ ತಯಾರಿಕೆ ಸಾಮಗ್ರಿಗಳ ಕ್ಷಿಪ್ರ ಪೂರೈಕೆ ಸೇರಿದಂತೆ ರಕ್ಷಣಾ ವ್ಯವಸ್ಥೆಯಲ್ಲಿ ಭಾರತಕ್ಕೆ ಸಹಕಾರ ನೀಡಲು ಬ್ರಿಟನ್ ಮುಂದಾಗಿದೆ. ಪ್ರಸ್ತುತ ಭಾರತಕ್ಕೆ ಅಗತ್ಯವಿರುವ ರಕ್ಷಣಾ ಸಾಮಗ್ರಿಗಳ ಪೈಕಿ ಅರ್ಧಕ್ಕಿಂತ ಹೆಚ್ಚು ರಷ್ಯಾದಿಂದ ಪೂರೈಕೆಯಾಗುತ್ತಿದೆ. ಹಿಂದೂ ಮಹಾಸಾಗರದಲ್ಲಿ ಅಪಾಯಗಳನ್ನು ಎದುರಿಸಲು ಅಗತ್ಯವಿರುವ ಹೊಸ ತಂತ್ರಜ್ಞಾನ ಹಾಗೂ ಯುದ್ಧ ವಿಮಾನಗಳ ಅಭಿವೃದ್ಧಿಯಲ್ಲಿ ಪೂರ್ಣ ಸಹಕಾರ ನೀಡುವುದಾಗಿ ಬ್ರಿಟಿಷ್ ಹೈ ಕಮಿಷನ್ ಹೇಳಿದೆ ಎನ್ನಲಾಗಿದೆ.

    ಕ್ಷಿಪ್ರಗತಿಯಲ್ಲಿ ರಕ್ಷಣಾ ಸಾಮಗ್ರಿಗಳ ಸಾಗಣೆಗೆ ಅನುವಾಗುವ ನಿಟ್ಟಿನಲ್ಲಿ ಭಾರತಕ್ಕೆ ಬ್ರಿಟನ್ ಮುಕ್ತ ಸಾರ್ವತ್ರಿಕ ರಫ್ತು ಪರವಾನಗಿ (OGEL) ಒದಗಿಸುವುದಾಗಿ ತಿಳಿಸಿದೆ. ಇದರಿಂದಾಗಿ ರಕ್ಷಣಾ ಸಾಮಗ್ರಿಗಳ ಪೂರೈಕೆ ಅವಧಿ ಕಡಿತಗೊಳ್ಳಲಿದೆ. ಇದನ್ನೂ ಓದಿ: ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ‘ಹವಾಮಾನ ಬದಲಾವಣೆಯಿಂದ ಹಿಡಿದು ಇಂಧನ, ಭದ್ರತೆ ಹಾಗೂ ರಕ್ಷಣಾ ವಲಯಗಳಲ್ಲಿ ನಮ್ಮ ಪಾಲುದಾರಿಗೆ ಉಭಯ ರಾಷ್ಟ್ರಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾಗಿದೆ. ಗೆಳೆಯ ನಿಮ್ಮನ್ನು ಭಾರತದಲ್ಲಿ ಕಂಡು ಪುಳಕಿತನಾಗಿರುವೆ…’ ಎಂದು ಪ್ರಧಾನಿ ಮೋದಿ ಅವರು ಬೋರಿಸ್ ಅವರನ್ನು ಭೇಟಿಯಾದ ಚಿತ್ರದೊಂದಿ ಟ್ವೀಟ್ ಮಾಡಿದ್ದಾರೆ.

  • ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು: ನಟ ಅಜಯ್ ರಾವ್

    – ಹೈಟೆನ್ಷನ್ ವೈರ್ ಇರೋದು ಫೈಟರ್ ಮಾಸ್ಟರ್​​​ಗೆ ಗೊತ್ತಿರಬೇಕಿತ್ತು

    ಬೆಂಗಳೂರು: ಹೈಟೆನ್ಷನ್ ವೈರ್ ತಗುಲಿದ್ದರಿಂದ ಫೈಟರ್ ಸಾವಾಯ್ತು. ಸಾಹಸ ದೃಶ್ಯಗಳ ಚಿತ್ರೀಕರಣ ಮಾಡುವಾಗ ಫೈಟ್ ಮಾಸ್ಟರ್ ವಿನೋದ್ ಗಮನಿಸಬೇಕಿತ್ತು. ಈ ಮೊದಲು ಅಲ್ಲಿ ಹೈಟೆನ್ಷನ್ ವೈರ್ ಇದ್ದಿದ್ದರಿಂದ ನಾನು ಆ ದೃಶ್ಯ ಮಾಡಲ್ಲ ಅಂತ ಹೇಳಿದ್ದೆ ಎಂದು ಲವ್ ಯು ರಚ್ಚು ಸಿನಿಮಾದ ನಾಯಕ ನಟ ಅಜಯ್ ರಾವ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅಜಯ್ ರಾವ್, ಅಲ್ಲಿ ನನ್ನ ಸೀನ್ ಇರದ ಕಾರಣ ದೂರದಲ್ಲಿ ಕುಳಿತಿದ್ದೆ. ಇದ್ದಕ್ಕಿದ್ದಂತೆ ಶಾರ್ಟ್ ಸಕ್ರ್ಯೂಟ್ ರೀತಿಯಲ್ಲಿ ಸೌಂಡ್ ಕೇಳಿಸಿದಾಗ, ನನ್ನ ಹುಡುಗರು ಬಂದು ವಿಷಯ ಹೇಳಿದರು. ಕಳೆದ ಐದು ದಿನಗಳಿಂದ ಈಗಲ್ ಟನ್ ಬಳಿಯಲ್ಲಿ ಸಾಹಸ ಚಿತ್ರೀಕರಣ ನಡೆಯುತ್ತಿತ್ತು. ಕೋವಿಡ್ ಸಂದರ್ಭದಲ್ಲಿ ಚಿತ್ರೀಕರಣ ನಡೆಸೋದು ಕಷ್ಟದ ಕೆಲಸ. ನಮ್ಮ ಟೀಂ ನಿರ್ಮಿಸಿದ ವಾಟರ್ ಟ್ಯಾಂಕ್ ಬಳಿ ಫೈಟ್ ಸೀನ್ ಇತ್ತು. ಆದ್ರೆ ನಾನು ಬೇಡ ಅಂತ ಹೇಳಿದ್ದಕ್ಕೆ ಅಜಯ್ ಎಲ್ಲದಕ್ಕೂ ಹಿಂದೇಟು ಹಾಕ್ತಾರೆ ಅನ್ನೋ ಮಾತುಗಳು ಕೇಳಿ ಬಂದವು ಎಂದು ಬೇಸರದ ಮಾತುಗಳನ್ನಾಡಿದರು.

    ಒಬ್ಬ ಹುಡುಗ ಹೈಟೆನ್ಷನ್ ವೈರ್ ಬಳಿಯಲ್ಲಿದ್ದನಾ ಅಥವಾ ರೂಪ್ ಎಳೆಯುತ್ತಿದ್ದನಾ ಅಂತ ಸ್ಪಷ್ಟವಾಗಿ ಗೊತ್ತಿಲ್ಲ. ಮತ್ತೋರ್ವ ಹುಡುಗ ಬಿದ್ದು ಗಾಯಗೊಂಡಿದ್ದು ಮಾತ್ರ ಕಾಣಿಸಿತು. ಸದ್ಯ ಆ ಹುಡುಗ ಹುಷಾರಾಗಿದ್ದಾನೆ. ಅಷ್ಟರಲ್ಲಿ ಫೈಟರ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈಗಲೂ ಕೂಡ ನನ್ನ ಕೈಕಾಲು ನಡಗುತ್ತಿದೆ. ಇದಾದ ಕೆಲವೇ ನಿಮಿಷದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಫೈಟ್ ಮಾಸ್ಟರ್ ಅವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ನನ್ನಿಂದ ಏನಾದ್ರೂ ಸಹಾಯ ಬೇಕಾದ್ರೆ ಬರುತ್ತೇನೆ ಎಂದು ಹೇಳಿ ಮನೆಗೆ ಬಂದಿದ್ದೇನೆ ಎಂದು ತಿಳಿಸಿದರು.

    ಏನಿದು ಘಟನೆ?:
    ಬಿಡದಿಯ ಈಗಲ್‍ಟನ್ ರೆಸಾರ್ಟ್ ಬಳಿಯಲ್ಲಿ ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿನಯಿಸುತ್ತಿರುವ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣ ನಡೆಯುತ್ತಿತ್ತು. ಫೈಟ್ ಮಾಸ್ಟರ್ ವಿನೋದ್ ಸಾಹಸ ನಿರ್ದೇಶನದಲ್ಲಿ ಚಿತ್ರೀಕರಣ ನಡೆಯುತ್ತಿತ್ತು. ಚಿತ್ರಕ್ಕೆ ಗುರುದೇಶಪಾಂಡೆ ನಿರ್ಮಾಣವಿದೆ. ಇಂದು ಮಧ್ಯಾಹ್ನ ಸುಮಾರು 12 ಗಂಟೆಗೆ ಹೈಟೆನ್ಷನ್ ವೈರ್ ತಗುಲಿ 35 ವರ್ಷದ ವಿವೇಕ್ ಎಂಬವವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.

  • ತರಬೇತಿ ವೇಳೆ ಸಮುದ್ರಕ್ಕಪ್ಪಳಿಸಿದ ಯುದ್ಧ ವಿಮಾನ – ಪೈಲಟ್ ಕಣ್ಮರೆ

    ತರಬೇತಿ ವೇಳೆ ಸಮುದ್ರಕ್ಕಪ್ಪಳಿಸಿದ ಯುದ್ಧ ವಿಮಾನ – ಪೈಲಟ್ ಕಣ್ಮರೆ

    ನವದೆಹಲಿ: ಭಾರತೀಯ ನೌಕಾಪಡೆಯ ಮಿಗ್-29ಕೆ ತರಬೇತುದಾರ ವಿಮಾನವು ಅರಬ್ಬಿ ಸಮುದ್ರದಲ್ಲಿ ಗುರುವಾರ ಅಪಘಾತಕ್ಕೀಡಾಗಿದ್ದು, ಓರ್ವ ಪೈಲಟ್ ಕಾಣೆಯಾಗಿದ್ದಾರೆ.

    ಭಾರತೀಯ ನೌಕಾಪಡೆಯ ಮಾಹಿತಿ ಪ್ರಕಾರ, ಅರಬ್ಬಿ ಸಮುದ್ರದಲ್ಲಿ ಐಎನ್‍ಎಸ್ ವಿಕ್ರಮಾದಿತ್ಯ ನೌಕೆಯಿಂದ ಕಾರ್ಯನಿರ್ವಹಿಸುತ್ತಿರುವ ಮಿಗ್-29ಕೆ ತರಬೇತುದಾರ ವಿಮಾನವು ನವೆಂಬರ್ 26ರಂದು ಸಂಜೆ 5 ಗಂಟೆಗೆ ಅಪಘಾತಕ್ಕೀಡಾಗಿದೆ. ಈ ಯುದ್ಧವಿಮಾನದಲ್ಲಿದ್ದ ಇಬ್ಬರು ಪೈಲಟ್‍ಗಳ ಪೈಕಿ ಒಬ್ಬರು ಸಿಕ್ಕಿದ್ದು, ಇನ್ನೊಬ್ಬರು ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ ಎಂದು ತಿಳಿಸಿದೆ.

    ಈ ಅಪಘಾತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆಗೆ ಆದೇಶ ಮಾಡಿದ್ದಾರೆ. ಕಳೆದ ವರ್ಷ ನವೆಂಬರಿನಲ್ಲಿ ಪಕ್ಷಿಯೊಂದು ವಿಮಾನಕ್ಕೆ ಬಡಿದ ಕಾರಣ ಗೋವಾದಲ್ಲಿ ನೌಕಾಪಡೆಯ ಮಿಗ್-29ಕೆ ಯುದ್ಧವಿಮಾನ ಸಮುದ್ರಕ್ಕೆ ಅಪ್ಪಳಿಸಿತ್ತು. ಭಾರತೀಯ ನೌಕಪಡೆಯು 40 ಮಿಗ್-29ಕೆ ಯುದ್ಧ ವಿಮಾನಗಳನ್ನು ಹೊಂದಿದ್ದು, ಅವು ಗೋವಾ ಮತ್ತು ಅರಬ್ಬಿ ಸಮುದ್ರದಲ್ಲಿ ಐಎನ್‍ಎಸ್ ವಿಕ್ರಮಾದಿತ್ಯ ನೌಕೆಯ ಜೊತೆ ಕಾರ್ಯನಿರ್ವಹಿಸುತ್ತವೆ.