Tag: Fighter Jets

  • 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ನವದೆಹಲಿ: ಭಾರತ ಸರ್ಕಾರವು (India Government) ಫ್ರಾನ್ಸ್‌ನಿಂದ (France) 26 ರಫೇಲ್ ಎಂ ಯುದ್ಧ ವಿಮಾನಗಳನ್ನು (Rafale – M Fighter Jets) ಖರೀದಿಸುವ 63,000 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದವು ಭಾರತದ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ.

    Rafale

    ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ (Dassault Aviation) ಕಂಪನಿಯು ಭಾರತೀಯ ನೌಕಾಪಡೆಗಾಗಿ 26 ರಫೇಲ್ ಯುದ್ಧ ವಿಮಾನಗಳನ್ನು ಪೂರೈಸಲಿದೆ. ಇದರಲ್ಲಿ 22 ಸಿಂಗಲ್ ಸೀಟರ್ ಹಾಗೂ 4 ಡಬಲ್ ಸೀಟರ್ ಯುದ್ಧ ವಿಮಾನಗಳು ಒಳಗೊಂಡಿದೆ. 2031ರ ವೇಳೆಗೆ 26 ಯುದ್ಧ ವಿಮಾನಗಳು ಪೂರ್ಣ ಪ್ರಮಾಣದಲ್ಲಿ ಭಾರತಕ್ಕೆ ಪೂರೈಕೆ ಆಗುವ ನಿರೀಕ್ಷೆಯಿದೆ. ಈ ವಿಮಾನಗಳಿಂದ ಭಾರತದ ರಕ್ಷಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಾಗಲಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ| ಚೀನಾ ಲಿಂಕ್‌ ಬಗ್ಗೆ ತನಿಖೆಗೆ ಇಳಿದ ಎನ್‌ಐಎ!

    IAF Rafale main

    ರಫೇಲ್ ಮೆರೈನ್ ವಿಮಾನಗಳು ವಿಶ್ವದ ಮುಂದುವರಿದ ಫೈಟರ್‌ ಜೆಟ್‌ಗಳಲ್ಲಿ (Fighter Jet) ಒಂದಾಗಿದೆ. ಪ್ರಸ್ತುತ ಫ್ರಾನ್ಸ್‌ ನೌಕಾಪಡೆ ಮಾತ್ರ ಈ ಜೆಟ್ ಅನ್ನು ಹೊಂದಿದೆ. ಆಧುನಿಕ ತಂತ್ರಜ್ಞಾನ ಮತ್ತು ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಹೊಂದಿದ್ದು, ಇವು ಭಾರತದ ಸಾಗರ ಗಡಿಗಳ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಈ ಖರೀದಿ ಪ್ರಕ್ರಿಯೆಯು ದೀರ್ಘಕಾಲದ ಮಾತುಕತೆಗಳ ನಂತರ ಅಂತಿಮಗೊಂಡಿದ್ದು, ರಕ್ಷಣಾ ಸಚಿವಾಲಯವು ಈ ಒಪ್ಪಂದಕ್ಕೆ ಅಧಿಕೃತವಾಗಿ ಸಹಿಹಾಕಿದೆ. ಇದನ್ನೂ ಓದಿ: ಭಾರತ – ಪಾಕ್‌ ನಡುವೆ ಉದ್ವಿಗ್ನತೆ ಮೇಲೆ ಚೀನಾ ನಿಗಾ – ಪಾಕಿಸ್ತಾನದ ಈ ಬೇಡಿಕೆಗೆ ಬೆಂಬಲ

    Rafale IAF 2

    2016 ರಲ್ಲಿ ಭಾರತೀಯ ವಾಯುಪಡೆಗೆ ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ 59,000 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಒಪ್ಪಂದಂತೆ 36 ರಫೇಲ್‌ ಯುದ್ಧ ವಿಮಾನಗಳು ಈಗಾಗಲೇ ಭಾರತದ ವಾಯುಸೇನೆಯ ಬತ್ತಳಿಕೆಯನ್ನು ಸೇರಿದೆ.

    ಈ ಯುದ್ಧ ವಿಮಾನಗಳನ್ನು ವಿಮಾನವಾಹಕ ನೌಕೆಗಳಾದ ಐಎನ್‌ಎಸ್ ವಿಕ್ರಾಂತ್ ಮತ್ತು ಐಎನ್‌ಎಸ್ ವಿಕ್ರಮಾದಿತ್ಯ ಅಲ್ಲಿ ನಿಯೋಜಿಸಲಾಗುವುದು ಎಂದು ರಕ್ಷಣಾ ಸಚಿವಾಲಯದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Pahalgam Attack | AK-47, M4 ರೈಫಲ್‌ ಹೊತ್ತು, ದಟ್ಟ ಕಾಡಿನಲ್ಲಿ 22 ಗಂಟೆ ನಡೆದುಕೊಂಡೇ ಬಂದಿದ್ದ ಉಗ್ರರು

  • 26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ

    26 ರಫೇಲ್ ಯುದ್ಧ ವಿಮಾನ ಖರೀದಿ – ಭಾರತ ಫ್ರಾನ್ಸ್ ಮಧ್ಯೆ 63,000 ಕೋಟಿ ಡೀಲ್‌ಗೆ ಅನುಮೋದನೆ

    ನವದೆಹಲಿ : ಭಾರತ ಸರ್ಕಾರವು (India Government) ಫ್ರಾನ್ಸ್‌ನಿಂದ (France) 26 ರಫೇಲ್ ಮೆರೈನ್ ಯುದ್ಧ ವಿಮಾನಗಳನ್ನು (Rafale Marine Fighter Jets) ಖರೀದಿಸುವ ಬೃಹತ್ ಒಪ್ಪಂದಕ್ಕೆ ಅಂತಿಮ ಅನುಮೋದನೆ ನೀಡಿದೆ. ಈ ಒಪ್ಪಂದದ ಮೌಲ್ಯ 63,000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಎಂದು ಅಂದಾಜಿಸಲಾಗಿದೆ. ಈ ಒಪ್ಪಂದವು ಭಾರತದ ನೌಕಾಪಡೆಯ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸಲಿದೆ.

    ಈ ಒಪ್ಪಂದದ ಅಡಿಯಲ್ಲಿ, ಫ್ರಾನ್ಸ್‌ನ ಡಸಾಲ್ಟ್ ಏವಿಯೇಷನ್ (Dassault Aviation) ಕಂಪನಿಯು ಭಾರತೀಯ ನೌಕಾಪಡೆಗಾಗಿ 26 ರಫೇಲ್ ಯುದ್ಧ ವಿಮಾನಗಳನ್ನು ಪೂರೈಸಲಿದೆ,‌ ಇದರಲ್ಲಿ 22 ಸಿಂಗಲ್, 4 ಡಬಲ್ ಸೀಟರ್ ವಿಮಾನಗಳು ಒಳಗೊಂಡಿದೆ. ಈ ವಿಮಾನಗಳಿಂದ ಭಾರತದ ರಕ್ಷಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಾಗಲಿದೆ. ಇದನ್ನೂ ಓದಿ: ದೇಶ ತೊರೆಯಿರಿ ಅಥವಾ ಜೈಲು ಶಿಕ್ಷೆ ಅನುಭವಿಸಿ: ವಿದೇಶಿ ಭಯೋತ್ಪಾದಕರಿಗೆ ಅಮೆರಿಕ ಎಚ್ಚರಿಕೆ

    ರಫೇಲ್ ಮೆರೈನ್ ವಿಮಾನಗಳು ಆಧುನಿಕ ತಂತ್ರಜ್ಞಾನ ಮತ್ತು ಸುಧಾರಿತ ಶಸ್ತ್ರಾಸ್ತ್ರ ವ್ಯವಸ್ಥೆಗಳನ್ನು ಹೊಂದಿದ್ದು, ಇವು ಭಾರತದ ಸಾಗರ ಗಡಿಗಳ ಸುರಕ್ಷತೆಯನ್ನು ಖಚಿತಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಈ ಖರೀದಿ ಪ್ರಕ್ರಿಯೆಯು ದೀರ್ಘಕಾಲದ ಮಾತುಕತೆಗಳ ನಂತರ ಅಂತಿಮಗೊಂಡಿದ್ದು, ರಕ್ಷಣಾ ಸಚಿವಾಲಯವು ಈ ಒಪ್ಪಂದವನ್ನು ಅಧಿಕೃತವಾಗಿ ದೃಢೀಕರಿಸಿದೆ.

    ಈ ಒಪ್ಪಂದದ ಭಾಗವಾಗಿ, ತರಬೇತಿ, ದುರಸ್ತಿ, ಮತ್ತು ತಾಂತ್ರಿಕ ಸಹಾಯವನ್ನು ಒಳಗೊಂಡಂತೆ ಹಲವು ಸೌಲಭ್ಯಗಳನ್ನು ಫ್ರಾನ್ಸ್ ಒದಗಿಸಲಿದೆ. ಈ ಯುದ್ಧ ವಿಮಾನಗಳ ಸೇರ್ಪಡೆಯು ಭಾರತೀಯ ನೌಕಾಪಡೆಯ ಆಧುನೀಕರಣದಲ್ಲಿ ಮಹತ್ವದ ಮೈಲಿಗಲ್ಲು ಎಂದು ರಕ್ಷಣಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಈ ಒಪ್ಪಂದವು ಭಾರತದ ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಮತ್ತು ಆಧುನಿಕೀಕರಣದ ದಿಕ್ಕಿನಲ್ಲಿ ಮತ್ತೊಂದು ಪ್ರಗತಿಯನ್ನು ಸೂಚಿಸುತ್ತದೆ. ಇದನ್ನೂ ಓದಿ: ಸತತ 2ನೇ ಬಾರಿ ರೆಪೋ ದರ ಕಡಿತ – ಇಳಿಕೆಯಾಗಲಿದೆ ಗೃಹ ಸಾಲ, ಇಎಂಐ

    ಈ ಒಪ್ಪಂದವು ರಕ್ಷಣಾ ವಲಯಕ್ಕೆ ಮಾತ್ರವಲ್ಲದೆ, ಭಾರತೀಯ ಕಾರ್ಯತಂತ್ರದ ಶಕ್ತಿಗೆ ಹೊಸ ದಿಕ್ಕನ್ನು ನೀಡುತ್ತದೆ. ಇದು ವಾಯುಪಡೆ ಮತ್ತು ನೌಕಾಪಡೆಯ ಸಾಮರ್ಥ್ಯಗಳನ್ನು ಹೆಚ್ಚಿಸುವುದಲ್ಲದೆ, ಚೀನಾ ಮತ್ತು ಪಾಕಿಸ್ತಾನದಂತಹ ಶಕ್ತಿಗಳ ವಿರುದ್ಧ ಹೋರಾಟಕ್ಕೆ ಭಾರತಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ.

    2016 ರಲ್ಲಿ ಭಾರತೀಯ ವಾಯುಪಡೆಗೆ ರಫೇಲ್‌ ಯುದ್ಧ ವಿಮಾನ ಖರೀದಿ ಸಂಬಂಧ 59,000 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿತ್ತು. ಈ ಒಪ್ಪಂದಂತೆ 36 ರಫೇಲ್‌ ಯುದ್ಧ ವಿಮಾನಗಳು ಈಗಾಗಲೇ ಭಾರತದ ವಾಯುಸೇನೆಯ ಬತ್ತಳಿಕೆಯನ್ನು ಸೇರಿದೆ.

    ಒಪ್ಪಂದಕ್ಕೆ ಸಹಿ ಹಾಕಿದ 37 ರಿಂದ 65 ತಿಂಗಳೊಳಗೆ ಡಸಾಲ್ಟ್‌ ಕಂಪನಿ ಭಾರತಕ್ಕೆ ಯುದ್ಧ ವಿಮಾನಗಳನ್ನು ಹಸ್ತಾಂತರಿಸಬೇಕಾಗುತ್ತದೆ. ಎಲ್ಲಾ ಎಲ್ಲಾ ಜೆಟ್‌ಗಳು 2030-31 ರ ವೇಳೆಗೆ ವಿತರಣೆಯಾಗುವ ಸಾಧ್ಯತೆಯಿದೆ.

  • Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

    Bengaluru | ಏರ್‌ ಶೋ ಹಿನ್ನೆಲೆ ಟ್ರಾಫಿಕ್ ಜಾಮ್ ಬಿಸಿ – ಕಿಲೋಮೀಟರ್‌ಗಟ್ಟಲೆ ನಿಂತ ವಾಹನಗಳು

    ಬೆಂಗಳೂರು: ನೋಡುಗರ ಹೃದಯ ಬಡಿತ ಹೆಚ್ಚಿಸುವ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಇಂದಿನಿಂದ ಶುರುವಾಗಿದೆ. ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಚಾಲನೆ ನೀಡಿದ್ದಾರೆ. ಐದು ದಿನಗಳ ಕಾಲ ಏರ್‌ ಶೋ ನಡೆಯಲಿದ್ದು, ಮೊದಲ ದಿನವೇ ಬೆಂಗಳೂರಿಗರಿಗೆ ಟ್ರಾಫಿಕ್‌ ಜಾಮ್‌ ಬಿಸಿ ತಟ್ಟಿದೆ.

    ಏರ್ ಶೋ ನಡೆಯುವ ಸ್ಥಳದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ಬೆಳ್ಳಂಬೆಳಗ್ಗೆಯೇ ವಾಹನ ಸವಾರರು ಪರದಾಡುವಂತಾಗಿದೆ. ಕಿಲೋಮೀಟರ್‌ಗಟ್ಟಲೇ ವಾಹನಗಳು ನಿಂತ ಹಿನ್ನೆಲೆಯಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಏರ್ ಶೋ ಉದ್ಘಾಟನಾ ಕಾರ್ಯಕ್ರಮದ ಸ್ಟಾಲ್‌ಗಳಿಗೆ ಬರುವ ಗಣ್ಯರಿಗೂ ಟ್ರಾಫಿಕ್ ಬಿಸಿ ತಟ್ಟಿದೆ. ಕಳೆದ ಎರಡು ಗಂಟೆಯಿಂದ ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ದನ್ನೂ ಓದಿ: ಮದುವೆಯಲ್ಲಿ ಡಾನ್ಸ್‌ ಮಾಡುತ್ತಿದ್ದಾಗಲೇ ಹೃದಯ ಸ್ತಂಭನ – ವೇದಿಕೆಯಲ್ಲೇ ಎಂಬಿಎ ಪದವೀಧರೆ ಸಾವು

    ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು:
    ಇನ್ನೂ ಇಂದಿನಿಂದ ಏರ್ ಶೋ ಆರಂಭ ಹಿನ್ನೆಲೆ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಓಡಾಟವನ್ನ ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರೋ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ. ದನ್ನೂ ಓದಿ: ಜನಾಂಗೀಯ ಹಿಂಸಾಚಾರ; ಬಿಕ್ಕಟ್ಟಿನ ರಾಜ್ಯದ ಸಿಎಂ ರಾಜೀನಾಮೆ – ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯಾಗುತ್ತಾ?

    ಯಾವೆಲ್ಲ ವಾಹನಗಳಿಗೆ ಸಂಚಾರ ನಿಷೇಧ
    * ಲಾರಿ, ಟ್ರಕ್, ಬಸ್, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ
    * ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್‌ವರೆಗೆ ಸಂಚಾರ ನಿಷೇಧ
    * ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್‌ವರೆಗೆ ನಿಷೇಧ
    * ನಾಗವಾರ ಜಂಕ್ಷನ್‌ನಿಂದ ರೇವಾ ಕಾಲೇಜ್ ಜಂಕ್ಷನ್‌ವರೆಗೆ ಸಂಚಾರ ನಿಷೇಧ
    * ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧ
    * ಜಿಕೆವಿಕೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ

  • ಗಮನಿಸಿ – ಏರ್‌ ಶೋ ಹಿನ್ನೆಲೆ ಬೆಂಗಳೂರು ಏರ್‌ಪೋರ್ಟ್‌ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ‌

    ಗಮನಿಸಿ – ಏರ್‌ ಶೋ ಹಿನ್ನೆಲೆ ಬೆಂಗಳೂರು ಏರ್‌ಪೋರ್ಟ್‌ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ‌

    ಬೆಂಗಳೂರು: ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಇಂದಿನಿಂದ ಆರಂಭಗೊಳ್ಳುತ್ತಿದೆ. ಈ ಹಿನ್ನೆಲೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

    ಇಂದು (ಸೋಮವಾರ) ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 4ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ. ಫೆಬ್ರವರಿ 11 ಮತ್ತು 12 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರ ವರೆಗೆ, ಫೆಬ್ರವರಿ 13 ಮತ್ತು 14ರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ, ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೂಲಗಳು ತಿಳಿಸಿವೆ. ಏರ್‌ಶೋನಲ್ಲಿ ವೈಮಾನಿಕ ಪ್ರದರ್ಶನ ಹಿನ್ನೆಲೆಯಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    ಯಲಹಂಕ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್‌ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಈ ಬಾರಿಯ ವಿಶೇಷತೆ ಏನು? 
    ಈ ಬಾರಿ 42,438 ವಿಸ್ತೀರ್ಣದಲ್ಲಿ ಏರ್ ಶೋ ನಡೆಯುತ್ತಿದ್ದು, ವಿವಿಧ 30 ದೇಶಗಳ ರಕ್ಷಣಾ ಸಚಿವರು, ವಿವಿಧ ದೇಶಗಳ 43 ಮಂದಿ ಸೇನಾ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಒಟ್ಟಾರೆ 90 ದೇಶಗಳು ಏರೋ ಇಂಡಿಯಾದವನ್ನು ಪ್ರತಿನಿಧಿಸಲಿವೆ. 70 ಯುದ್ಧ ವಿಮಾನಗಳು, ಸರಕು, ತರಬೇತಿ ವಿಮಾನಗಳು, 30 ವಿಮಾನಗಳು, ಹೆಲಿಕಾಫ್ಟರ್‌ ಹೃದಯ ಬಡಿತ ಹೆಚ್ಚಿಸುವ ಕಸರತ್ತು ನಡೆಸಲಿವೆ. ರಷ್ಯನ್ & ಅಮೆರಿಕನ್ ಯುದ್ಧ ವಿಮಾನಗಳು ಈ ಪ್ರದರ್ಶನದ ಆಕರ್ಷಣೆಯಾಗಿವೆ. ಇದನ್ನೂ ಓದಿ: IND vs ENG, 2nd ODI: ರೋಹಿತ್‌ ಅಬ್ಬರದ ಶತಕ, ಜಡೇಜಾ ಸ್ಪಿನ್‌ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

    ಅಲ್ಲದೇ ವಿವಿಧ ದೇಶಗಳ 900ಕ್ಕೂ ಹೆಚ್ಚು ಉತ್ಪಾದಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಎಐ, ಡ್ರೋನ್‌, ಸೈಬರ್ ಸೆಕ್ಯೂರಿಟಿ, ಗ್ಲೋಬರ್ ಏರೋಸ್ಪೇಸ್, ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಿದ್ದಾರೆ. ಆತ್ಮನಿರ್ಭರ ಭಾರತ ಉತ್ಪನ್ನಗಳು ಈ ಬಾರಿಯ ಶೋನಲ್ಲಿ ಇರಲಿವೆ. 100 ವಿವಿಧ ಕಂಪನಿಗಳ ಸಿಇಒಗಳು, 50 ವಿದೇಶಿ ಓಎಂಎಸ್ ಭಾಗಿಯಾಗಲಿದ್ದಾರೆ. ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯದ ಬಗ್ಗೆ ಚರ್ಚೆ ನಡೆಯಲಿದೆ. 10 ವಿವಿಧ ವಿಷಯಗಳನ್ನ ಒಳಗೊಂಡ ಸೆಮಿನಾರ್‌ಗಳು ಇರಲಿದೆ. 70ಕ್ಕೂ ಹೆಚ್ಚು ಫ್ಲೈಯಿಂಗ್ ಡಿಸ್‌ಪ್ಲೇಗಳು ಏರ್ ಶೋನಲ್ಲಿ ಇರಲಿವೆ. 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.

  • Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    Aero India 2025 | ವೈಮಾನಿಕ ಪ್ರದರ್ಶನಕ್ಕಿಂದು ಚಾಲನೆ – ರಷ್ಯಾ, ಅಮೆರಿಕ ಸೇರಿ 90 ದೇಶಗಳು ಭಾಗಿ

    – 70 ಯುದ್ಧ ವಿಮಾನ, 100ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ
    – ಏರ್‌ಪೋರ್ಟ್‌ ಸುತ್ತಮುತ್ತ ಹಲವು ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

    ಬೆಂಗಳೂರು: ನೋಡುಗರ ಹೃದಯ ಬಡಿತ ಹೆಚ್ಚಿಸುವ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ 2025ʼ (Aero India 2025) ಸೋಮವಾರ ಶುರುವಾಗಲಿದೆ.

    ಯಲಹಂಕ ವಾಯುನೆಲೆಯಲ್ಲಿ (Yelahanka Air Base) ಇಂದು ಬೆಳಗ್ಗೆ 9:30ರ ವೇಳೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ – ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಏರ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರ ವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯನ್‌ ಸೇರಿದಂತೆ ವಿವಿಧ ದೇಶಗಳ ಯುದ್ಧ ವಿಮಾನಗಳು ಭಾಗಿಯಾಗಲಿವೆ. ಇದನ್ನೂ ಓದಿ: IND vs ENG, 2nd ODI: ರೋಹಿತ್‌ ಅಬ್ಬರದ ಶತಕ, ಜಡೇಜಾ ಸ್ಪಿನ್‌ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

    ಈ ಬಾರಿ ʻರನ್ ವೇ ಟು ಬಿಲಿಯನ್ ಆಪರ್ಚುನಿಟಿ ಟ್ಯಾಗ್ ಲೈನ್ʼನಲ್ಲಿ ಏರ್ ಶೋ ಜರುಗಲಿದೆ. 100ಕ್ಕೂ ಹೆಚ್ಚು ದೇಶಗಳ, 900ಕ್ಕೂ ಹೆಚ್ಚು ಉತ್ಪಾದಕರು ಭಾಗಿಯಾಗುತ್ತಿದ್ದು, ಎಐ, ಡ್ರೋನ್‌, ಗ್ಲೋಬಲ್ ಏರೋ ಸ್ಪೇಸ್, ಸೇರಿದಂತೆ ನೂತನ ತಂತ್ರಜ್ಞಾನದ ವಿವಿಧ ವಸ್ತುಪ್ರದರ್ಶನಗಳನ್ನ ಕಣ್ತುಂಬಿಕೊಳ್ಳುವ ಅವಕಾಶ ಇರಲಿದೆ. ಕೊನೆಯ ಎರಡು ದಿನ ಸಾರ್ವಜನಿಕರಿಗೆ ಮುಕ್ತ ಅವಕಾಶ ಇರಲಿದೆ.

    ಈ ಬಾರಿಯ ವಿಶೇಷತೆ ಏನು?
    ಈ ಬಾರಿ 42,438 ವಿಸ್ತೀರ್ಣದಲ್ಲಿ ಏರ್ ಶೋ ನಡೆಯುತ್ತಿದ್ದು, ವಿವಿಧ 30 ದೇಶಗಳ ರಕ್ಷಣಾ ಸಚಿವರು, ವಿವಿಧ ದೇಶಗಳ 43 ಮಂದಿ ಸೇನಾ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಒಟ್ಟಾರೆ 90 ದೇಶಗಳು ಏರೋ ಇಂಡಿಯಾದವನ್ನು ಪ್ರತಿನಿಧಿಸಲಿವೆ. 70 ಯುದ್ಧ ವಿಮಾನಗಳು, ಸರಕು, ತರಬೇತಿ ವಿಮಾನಗಳು, 30 ವಿಮಾನಗಳು, ಹೆಲಿಕಾಫ್ಟರ್‌ ಹೃದಯ ಬಡಿತ ಹೆಚ್ಚಿಸುವ ಕಸರತ್ತು ನಡೆಸಲಿವೆ. ರಷ್ಯನ್ & ಅಮೆರಿಕನ್ ಯುದ್ಧ ವಿಮಾನಗಳು ಈ ಪ್ರದರ್ಶನದ ಆಕರ್ಷಣೆಯಾಗಿವೆ. ಇದನ್ನೂ ಓದಿ: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

    ಅಲ್ಲದೇ ವಿವಿಧ ದೇಶಗಳ 900ಕ್ಕೂ ಹೆಚ್ಚು ಉತ್ಪಾದಕರು ಇದರಲ್ಲಿ ಭಾಗಿಯಾಗಲಿದ್ದಾರೆ. ಎಐ, ಡ್ರೋನ್‌, ಸೈಬರ್ ಸೆಕ್ಯೂರಿಟಿ, ಗ್ಲೋಬರ್ ಏರೋಸ್ಪೇಸ್, ನೂತನ ತಂತ್ರಜ್ಞಾನಗಳನ್ನು ಪರಿಚಯಿಸಲಿದ್ದಾರೆ. ಆತ್ಮನಿರ್ಭರ ಭಾರತ ಉತ್ಪನ್ನಗಳು ಈ ಬಾರಿಯ ಶೋನಲ್ಲಿ ಇರಲಿವೆ. 100 ವಿವಿಧ ಕಂಪನಿಗಳ ಸಿಇಒಗಳು, 50 ವಿದೇಶಿ ಓಎಂಎಸ್ ಭಾಗಿಯಾಗಲಿದ್ದಾರೆ. ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯದ ಬಗ್ಗೆ ಚರ್ಚೆ ನಡೆಯಲಿದೆ. 10 ವಿವಿಧ ವಿಷಯಗಳನ್ನ ಒಳಗೊಂಡ ಸೆಮಿನಾರ್‌ಗಳು ಇರಲಿದೆ. 70ಕ್ಕೂ ಹೆಚ್ಚು ಫ್ಲೈಯಿಂಗ್ ಡಿಸ್‌ಪ್ಲೇಗಳು ಏರ್ ಶೋನಲ್ಲಿ ಇರಲಿವೆ. 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ವೀಕ್ಷಕರು ಆಗಮಿಸುವ ನಿರೀಕ್ಷೆ ಹೊಂದಲಾಗಿದೆ.

    ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ:
    ಇನ್ನೂ ಇಂದಿನಿಂದ ಏರ್ ಶೋ ಆರಂಭ ಹಿನ್ನೆಲೆ 5 ದಿನಗಳ ಕಾಲ ಏರ್‌ಪೋರ್ಟ್ ರಸ್ತೆಯ ಸವಾರರಿಗೆ ಟ್ರಾಫಿಕ್ ಬಿಸಿ ತಟ್ಟುವ ಸಾಧ್ಯತೆ ಇದೆ. ವಿದೇಶಿ ಗಣ್ಯರು ಆಗಮಿಸುವ ಕಾರಣ ಎಲಿವೇಟೆಡ್ ರಸ್ತೆಯ ಓಡಾಟವನ್ನ ಕೆಲ ಕಾಲ ಬಂದ್ ಮಾಡಲಾಗುತ್ತೆ. ಸರ್ವೀಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಿರೋ ಕಾರಣ ಆ ಭಾಗದ ವಾಹನ ಸವಾರರು 5 ದಿನಗಳ ಕಾಲ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಇನ್ನೂ, ಏರ್ ಪೋರ್ಟ್ ರಸ್ತೆ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಿ ಸಂಚಾರಿ ಪೊಲೀಸರು ಆದೇಶಿಸಿದ್ದಾರೆ. ಇದನ್ನೂ ಓದಿ: Hassan | ಮದುವೆಯಾಗಲು ಪ್ರಿಯತಮೆ ನಿರಾಕರಣೆ – ವಿಷ ಸೇವಿಸಿ ಯುವಕ ಆತ್ಮಹತ್ಯೆ

    ಯಾವೆಲ್ಲ ವಾಹನಗಳಿಗೆ ಸಂಚಾರ ನಿಷೇಧ
    * ಲಾರಿ, ಟ್ರಕ್, ಬಸ್, ಸರಕು ಸಾಗಾಣಿಕೆ ವಾಹನಗಳಿಗೆ ಸಂಚಾರ ನಿರ್ಬಂಧ
    * ಮೇಖ್ರಿ ವೃತ್ತದಿಂದ-ಎಂವಿಐಟಿ ಕ್ರಾಸ್‌ವರೆಗೆ ಸಂಚಾರ ನಿಷೇಧ
    * ಗೊರಗುಂಟೆಪಾಳ್ಯದಿಂದ ಹೆಬ್ಬಾಳ ಮಾರ್ಗವಾಗಿ ಹೆಣ್ಣೂರು ಕ್ರಾಸ್‌ವರೆಗೆ ನಿಷೇಧ
    * ನಾಗವಾರ ಜಂಕ್ಷನ್‌ನಿಂದ ರೇವಾ ಕಾಲೇಜ್ ಜಂಕ್ಷನ್‌ವರೆಗೆ ಸಂಚಾರ ನಿಷೇಧ
    * ಹೆಸರಘಟ್ಟ, ಚಿಕ್ಕಬಾಣಾವರ ಕಡೆಯಿಂದ ಬೆಂಗಳೂರು ಕಡೆಗೆ ಸಂಚಾರ ನಿಷೇಧ
    * ಜಿಕೆವಿಕೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕರಿಗೆ ಉಚಿತ ಪಾರ್ಕಿಂಗ್ ವ್ಯವಸ್ಥೆ

  • ಹಿಜ್ಬುಲ್ಲಾದ 100 ರಾಕೆಟ್ ಲಾಂಚರ್‌ ಉಡೀಸ್‌ – ಪ್ರತೀಕಾರದ ದಾಳಿಗೂ ಮುನ್ನವೇ ಪೆಟ್ಟುಕೊಟ್ಟ ಇಸ್ರೇಲ್‌

    ಹಿಜ್ಬುಲ್ಲಾದ 100 ರಾಕೆಟ್ ಲಾಂಚರ್‌ ಉಡೀಸ್‌ – ಪ್ರತೀಕಾರದ ದಾಳಿಗೂ ಮುನ್ನವೇ ಪೆಟ್ಟುಕೊಟ್ಟ ಇಸ್ರೇಲ್‌

    ಬೈರುತ್‌: ಲೆಬನಾನ್‌ನಲ್ಲಿ ಪೇಜರ್‌, ವಾಕಿಟಾಕಿ ಸ್ಫೋಟಗೊಂಡ ಬೆನ್ನಲ್ಲೇ ಹಿಜ್ಜುಲ್ಲಾ ಸಂಘಟನೆ ಇಸ್ರೇಲ್ ಮೇಲೆ ಪ್ರತಿ ದಾಳಿಗೆ ಸಿದ್ಧತೆ ನಡೆಸಿತ್ತು. ಆದ್ರೆ ಹಿಜ್ಜುಲ್ಲಾದ (Hezbollah) ಸಿದ್ಧತೆಗೆ ಆರಂಭದಲ್ಲೇ ಇಸ್ರೇಲ್ (Israel) ಪೆಟ್ಟು ಕೊಟ್ಟಿದೆ.

    ಇಸ್ರೇಲ್‌ ರಕ್ಷಣಾ ಪಡೆ (IDF) ಯುದ್ಧವಿಮಾನಗಳು ಸುಮಾರು 1000 ಬ್ಯಾರೆಲ್‌ಗಳನ್ನು ಒಳಗೊಂಡಿರುವ ಸುಮಾರು 100 ರಾಕೆಟ್ ಲಾಂಚರ್‌ಗಳನ್ನು (Hezbollah Rocket launcher) ಹೊಡೆದುರುಳಿಸಿವೆ. ಅಲ್ಲದೇ ಹಿಜ್ಬುಲ್ಲಾದ ರಕ್ಷಣಾ ಘಟಕವನ್ನೂ ಹೊಡೆದುರುಳಿಸಿದೆ ಎಂದು ವರದಿಯಾಗಿದೆ. ಈ ಕ್ಷಿಪಣಿ ಲಾಂಚರ್‌ಗಳು ಇಸ್ರೇಲ್‌-ಲೆಬನಾನ್‌ ಗಡಿಯಲ್ಲಿ ಸಿದ್ಧವಾಗಿದ್ದವು ಎಂದು ಇಸ್ರೇಲಿ ಮಿಲಿಟರಿ ಪಡೆ ಹೇಳಿಕೊಂಡಿದೆ.

    ಇಸ್ರೇಲ್ ರಕ್ಷಣಾ ಪಡೆ ತನ್ನ ಎಕ್ಸ್ ಖಾತೆಯಲ್ಲೂ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಹಿಜ್ಬುಲ್ಲಾದವರು ಸುಮ್ಮನಿರದಿದ್ದರೇ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಸಹ ಎಚ್ಚರಿಸಿದೆ. ಇದೇ ವೇಳೆ ಗಾಜಾ ಯುದ್ಧ ಮುಗಿಯುವವರೆಗೂ ಇಸ್ರೇಲ್ ಉತ್ತರದ ಕಡೆ (ಲೆಬನಾನ್ ಗಡಿಯತ್ತ) ಬರುವುದಿಲ್ಲ ದಾಳಿ ನಡೆಸಿ ಎಂದು ಹಿಜ್ಜುಲ್ಲಾ ಮುಖಂಡರು ತಮ್ಮ ಸಂಘಟನೆಯನ್ನು ಪ್ರಚೋದಿಸಿದ್ದಾರೆ. ಇನ್ನೊಂದೆಡೆ ತಕ್ಷಣವೇ ಕದನ ವಿರಾಮ ಘೋಷಿಸಿ ಎಂದು ಬ್ರಿಟನ್ ಇಸ್ರೇಲ್ ಹಾಗೂ ಲೆಬನಾನ್‌ಗೆ ಕರೆ ನೀಡಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಮಿಡಲ್ ಈಸ್ಟ್‌ನಲ್ಲಿ ಅಮೆರಿಕದ ಸೇನಾಪಡೆಗಳು ಅಲರ್ಟ್ ಸ್ಥಿತಿಯಲ್ಲಿವೆ ಎಂದು ಪೆಂಟಗಾನ್ ವಕ್ತಾರೆ ಸರ್ಬಿನಾ ಸಿಂಗ್ ಹೇಳಿದ್ದಾರೆ

    ಇತ್ತೀಚೆಗೆ ಉತ್ತರ ಗಡಿ ಭಾಗದಲ್ಲಿ ಇಸ್ರೇಲ್ ಹೆಚ್ಚಿನ ಪಡೆಗಳನ್ನು ನಿಯೋಜಿಸುತ್ತಿದೆ. ಗಾಜಾ ಗಡಿಯಿಂದ ಸೇನಾ ಪಡೆಗಳನ್ನು ಉತ್ತರದ ಗಡಿ ಭಾಗಕ್ಕೆ ಸ್ಥಳಾಂತರಿಸುವುದರಲ್ಲಿ ತೊಡಗಿದೆ. ಇದರ ನಡುವೆ ಅಧಿಕಾರಿಗಳು ವಾಗ್ದಾಳಿಯನ್ನೂ ಹೆಚ್ಚಿಸಿದ್ದಾರೆ. ಈ ಹಿಂದೆಯೂ ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಹೋರಾಟವು ಹಲವು ಭಾರಿ ಉಲ್ಬಣಗೊಂಡಿದ್ದಿದೆ.

    ಲೆಬನಾನ್‌ನಲ್ಲಿ ಮಂಗಳವಾರ ಮತ್ತು ಬುಧವಾರ ಪೇಜರ್‌ಗಳು, ವಾಕಿ-ಟಾಕಿಗಳು ಮತ್ತು ಇತರ ಸಾಧನಗಳು ಸ್ಫೋಟಗೊಂಡು ಕನಿಷ್ಠ 20 ಮಂದಿ ಮೃತಪಟ್ಟದ್ದಾರೆ. ಸಹಸ್ರಾರು ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಸ್ಫೋಟಗಳಿಗೆ ಇಸ್ರೇಲ್ ಕಾರಣ ಎಂಬುದು ಹಿಜ್ಜುಲ್ಲಾದ ಆರೋಪವಾಗಿದೆ. ಅಲ್ಲದೆ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಿಜ್ಜುಲ್ಲಾ ಶಪಥ ಕೂಡ ಮಾಡಿದೆ.

  • ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

    ಶತ್ರು ಸೇನೆಗಳಿಂದ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಫೈಟರ್‌ ಜೆಟ್‌ಗಳಿಗೆ ಶೀಘ್ರವೇ ಬರಲಿದೆ ಡಿಜಿಟಲ್‌ ನಕ್ಷೆ

    ಬೆಂಗಳೂರು: ಕಾರ್ಯನಿರ್ವಹಣೆಯ ಸಂದರ್ಭದಲ್ಲಿ ಪೈಲಟ್‌ಗಳಿಗೆ ದಿಕ್ಕು ತಪ್ಪಿಸುವುದನ್ನು ತಡೆಯಲು ಫೈಟರ್‌ಜೆಟ್‌ಗಳಿಗೆ ಶೀಘ್ರದಲ್ಲೇ ಡಿಜಿಟಲ್‌ ನಕ್ಷೆ (India Made Digital Maps) ಗಳನ್ನು ಅಳವಡಿಸಲು ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (HAL) ಸಜ್ಜಾಗಿರುವುದಾಗಿ ಹೆಚ್‌ಎಎಲ್‌ನ ಉನ್ನತ ಅಧಿಕಾರಿ ತಿಳಿಸಿದ್ದಾರೆ.

    ಡಿಜಿಟಲ್‌ ನಕ್ಷೆ (Digital Maps) ಹೊಂದುವುದರಿಂದ ಪೈಲಟ್‌ಗಳು ಅಚಾನಕ್ಕಾಗಿ ಗಡಿ ದಾಟುವುದಿಲ್ಲ. ಗ್ರೂಪ್‌ ಕ್ಯಾಪ್ಟನ್‌ ಅಭಿನಂದನ್‌ ಅವರ ರೀತಿ ಮತ್ತೊಂದು ಘಟನೆ ಸಂಭವಿಸಬಾರದು. ಅದಕ್ಕಾಗಿ ಈ ಡಿಜಿಟಲ್‌ ನಕ್ಷೆಯನ್ನು ಸಿದ್ಧಪಡಿಸಲಾಗಿದೆ. ಇನ್ಮುಂದೆ ಅವರು ತಮ್ಮ ಕೈಯಲ್ಲಿ ಮ್ಯಾಪ್‌ ಹಿಡಿದಿಟ್ಟುಕೊಳ್ಳುವ ಅಗತ್ಯವಿರುವುದಿಲ್ಲ ಎಂದು ಹೆಚ್‌ಎಎಲ್‌ನ ಎಂಜಿನಿಯರಿಂಗ್‌ ಮತ್ತು ಆರ್‌&ಡಿ ವಿಭಾಗದ ನಿರ್ದೇಶಕ ಡಿ.ಕೆ ಸುನೀಲ್‌ ಹೇಳಿದ್ದಾರೆ.

    ಡಿಜಿಟಲ್‌ ನಕ್ಷೆಯಿಂದ ಏನು ಅನುಕೂಲ?
    ಡಿಜಿಟಲ್‌ ನಕ್ಷೆಯಿಂದ ವಿಮಾನ ಹಾರಾಟ ಸಂದರ್ಭದಲ್ಲಿ ಪೈಲಟ್‌ಗಳು ಕಾಕ್‌ಪಿಟ್ ಡಿಸ್‌ಪ್ಲೇನಲ್ಲಿ (Cockpit Display) ನಕ್ಷೆಯನ್ನು ಪರಿಶೀಲಿಸಬಹುದು. 2ಡಿ ಮತ್ತು 3ಡಿ ರೂಪದಲ್ಲಿ ನಕ್ಷೆ ಲಭ್ಯವಿರಲಿದ್ದು, ಪೈಲಟ್‌ಗಳು ಗುಡ್ಡಗಾಡು ಪ್ರದೇಶದಲ್ಲಿದ್ದರೆ ಮೊದಲೇ ಎಚ್ಚರಿಸುತ್ತದೆ. ಹಾಗಾಗಿ ಎತ್ತರದ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಉಂಟಾಗುವ ಅಪಘಾತಗಳನ್ನು ತಡೆಯಲು ನೆರವಾಗುತ್ತದೆ. ಶತ್ರು ಸೇನಾ ನೆಲೆಗಳ ಬಗ್ಗೆಯೂ ಈ ನಕ್ಷೆ ಮಾಹಿತಿ ನೀಡುತ್ತದೆ ಎಂದು ಡಿ.ಕೆ ಸುನೀಲ್‌ ತಿಳಿಸಿದ್ದಾರೆ.

    ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಹೆಚ್ಚಿಸಲು ಡಿಜಿಟಲ್ ನಕ್ಷೆಗಳನ್ನು ಭಾರತದಲ್ಲಿ ವಿನ್ಯಾಸಗೊಳಿಸಿ ಉತ್ಪಾದಿಸಲಾಗುತ್ತದೆ. ಎಲ್ಲಾ ಫೈಟರ್‌ ಜೆಟ್‌ಗಳಲ್ಲೂ ಡಿಜಿಟಲ್‌ ನಕ್ಷೆಯನ್ನು ಅಳವಡಿಸಲಾಗುತ್ತದೆ. ಅದಕ್ಕೆ ಬೇಕಾದ ಎಲ್ಲಾ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್‌ಗಳನ್ನೂ ದೇಶದಲ್ಲೇ ತಯಾರಿಸಲಾಗಿದೆ. ಈ ಮೊದಲು, ಈ ನಕ್ಷೆಗಳನ್ನು ವಿದೇಶದಲ್ಲಿ ಮಾತ್ರ ತಯಾರಿಸಲಾಗುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೋದಿಯನ್ನ ಹೆಸರಿಸಬಹುದು ಅಂತ ಊಹಿಸೋಕು ಸಾಧ್ಯವಿಲ್ಲ – ಹಾಡಿ ಹೊಗಳಿದ ಪುಟಿನ್‌

    ಶತ್ರು ಸೇನೆ ವಿರುದ್ಧ ಪರಾಕ್ರಮ ಮೆರೆದಿದ್ದ ಅಭಿನಂದನ್‌:
    2019ರ ಫೆಬ್ರವರಿ 14ರಂದು 40 ಸಿಆರ್‌ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡಿದ್ದ ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಕಾರವಾಗಿ ಏರ್‌ಸ್ಟ್ರೈಕ್ ನಡೆಸಿ ಭಾರತ ಪ್ರತಿಕಾರ ತೀರಿಸಿಕೊಂಡಿತ್ತು. ಪಾಕಿಸ್ತಾನದ ಖೈಬರ್ ಪಕ್ತುಂಕ್ವಾ ಪ್ರದೇಶದ ಬಾಲಾಕೋಟ್‌ನಲ್ಲಿ ಜೈಷೆ ಮೊಹಮದ್ ಸಂಘಟನೆಗಳ ಉಗ್ರರ ಶಿಬಿರಗಳ ಮೇಲೆ 2019 ರ ಫೆಬ್ರವರಿ 26 ರಂದು ಭಾರತ ವೈಮಾನಿಕ ದಾಳಿ ನಡೆಸಿತ್ತು. ಇದನ್ನೂ ಓದಿ: ದೇಶ-ವಿದೇಶಗಳಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ವೈರಸ್‌ಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಫೆ.26ರ ನಸುಕಿನ ಜಾವ 3.30 ರಿಂದ 3.55ರ ನಡುವೆ ಪಾಕಿಸ್ತಾನದ ಬಾಲಾಕೋಟ್‌ನಲ್ಲಿದ್ದ ಜೈಷ್ ಉಗ್ರರ ಶಿಬಿರಗಳ ಮೇಲೆ 12 ಮಿರಾಜ್-2000 ಯುದ್ಧ ವಿಮಾನಗಳು ದಾಳಿ ನಡೆಸಿದ್ದವು. ಗಡಿ ನಿಯಂತ್ರಣ ರೇಖೆ ದಾಟಿ ಸುಮಾರು 85 ಕಿಮೀ ಒಳನುಗ್ಗಿ ಭಾರತೀಯ ವಾಯುಪಡೆ ಈ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು 300 ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಭಾರತ ತನ್ನ ನೆಲದಲ್ಲಿ ದೊಡ್ಡ ದಾಳಿ ನಡೆಸಿದೆ ಎಂದು ಗೊತ್ತಾದ ತಕ್ಷಣ ಪಾಕ್ ಕೂಡ ಪ್ರತಿ ದಾಳಿ ಮಾಡಿತ್ತು. ಪಾಕ್‌ನ ಪ್ರತಿದಾಳಿಯ ವೇಳೆ ವಿಂಗ್ ಕಮಾಂಡರ್ ಆಗಿದ್ದ ಅಭಿನಂದನ್ ವರ್ಧಮಾನ್ ಅವರು ತಮ್ಮ ಮಿಗ್-21 ರಿಂದ ಪಾಕಿಸ್ತಾನದ ಎಫ್-16 ಜೆಟ್ ವಿಮಾನವನ್ನು ಹೊಡೆದುರುಳಿಸಿದ್ದರು. ಅದಾದ ಬಳಿಕ ಅಭಿನಂದನ್‌ ಜೆಟ್‌ಗೆ ಹಾನಿಯಾಗಿತ್ತು. ಮಿಗ್-21 ಹಾನಿಗೀಡಾದ ಕಾರಣ ಪ್ಯಾರಾಚೂಟ್ ಸಹಾಯದಿಂದ ಕೆಳಗೆ ಜಿಗಿದು, ಸಿಕ್ಕಿಬಿದ್ದಿದ್ದರು. ಮೂರ್ನಾಲ್ಕು ದಿನಗಳ ಬಳಿಕ ಅವರನ್ನು ಭಾರತಕ್ಕೆ ಕರೆತರಲಾಯಿತು.

    ಇಂತಹ ಯುದ್ಧದ ಸಂದರ್ಭದಲ್ಲಿ ಡಿಜಿಟಲ್‌ ನಕ್ಷೆಗಳು ಪೈಲಟ್‌ಗಳಿಗೆ ಅನುಕೂಲವಾಗುತ್ತವೆ, ಪೈಲಟ್‌ಗಳು ದಿಕ್ಕು ತಪ್ಪಿಹೋಗದಂತೆ ನೋಡಿಕೊಳ್ಳುತ್ತವೆ. ಗಡಿಯೊಳಗೆ ತನ್ನ ನಿಯಂತ್ರಣ ಕಾಯ್ದುಕೊಳ್ಳಲು ಸಹಾಯಕವಾಗುತ್ತದೆ. ಆದ್ದರಿಂದ ಯುದ್ಧ ವಿಮಾನಗಳಿಗೆ ಡಿಜಿಟಲ್‌ ನಕ್ಷೆಯನ್ನು ಅಳವಡಿಸಲು ಹೆಚ್‌ಎಎಲ್‌ ಮುಂದಾಗಿದೆ. ಈಗಾಗಲೇ ಈ ಕಾರ್ಯ ಆರಂಭಗೊಂಡಿದೆ. ಇದನ್ನೂ ಓದಿ: ಪಾಕಿಸ್ತಾನದ ಮೇಲೆ ಪರಾಕ್ರಮ ಮೆರೆದಿದ್ದ ಭಾರತದ ಮಿಗ್-21 ಫೈಟರ್ ಜೆಟ್ ಸೇನೆಯಿಂದ ನಿವೃತ್ತಿ

  • ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಮೈಸೂರಿನಲ್ಲಿಂದು ದಸರಾ ಏರ್‌ಶೋ ರಿಹರ್ಸಲ್‌ – ಸಾರ್ವಜನಿಕರಿಗೆ ಇಂದು ಉಚಿತ, ನಾಳೆ ಪಾಸ್‌ ಖಚಿತ

    ಮೈಸೂರು: ಪ್ರತಿಷ್ಠಿತ ಮೈಸೂರು ದಸರಾ (Mysuru Dasara) ಮಹೋತ್ಸವದ ಪ್ರಯುಕ್ತ ವೈಮಾನಿಕ ಪ್ರದರ್ಶನ ಅಕ್ಟೋಬರ್‌ 23 ರಂದು ನಡೆಯಲಿದೆ. ಏರ್‌ ಶೋನಲ್ಲಿ (Dasara Air Show) ಲೋಹದ ಹಕ್ಕಿಗಳ ಹಾರಾಟದೊಂದಿಗೆ ಸೈನಿಕರ ನಾನಾ ಸಾಹಸಗಳನ್ನು ಜನರು ಕಣ್ತುಂಬಿಕೊಳ್ಳಬಹುದಾಗಿದೆ. ಅ.23ರಂದು ನಡೆಯುವ ಏರ್‌ ಶೋನ ರಿಹರ್ಸಲ್‌ 22ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ.

    5 ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಲೋಕದ ಹಕ್ಕಿಗಳ ಆರ್ಭಟ ಶುರುವಾಗುತ್ತಿದ್ದು, ಬಾನಂಗಳದಲ್ಲಿ ಭಾರತೀಯ ವಾಯುಸೇನೆ ಶಕ್ತಿ ಪ್ರದರ್ಶನ ತೋರಲಿದೆ. ಅ.23 ರಂದು (ಸೋಮವಾರ) ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಏರ್‌ ಶೋ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ದಂಧೆ ಪ್ರಶ್ನಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ – ನದಿಗೆ ಎಸೆಯಲು ಪ್ಲಾನ್

    ಏರ್‌ ಶೋನಲ್ಲಿ ವಾಯು ಸೇನೆಯ ನಾನಾ ಯುದ್ಧ ವಿಮಾನಗಳು (Fighter Jets), ಲಘು ವಿಮಾನಗಳು ಭಾಗವಹಿಲಿಸಲಿದ್ದು, ನಾನಾ ಸಾಹಸಗಳನ್ನ ಪ್ರದರ್ಶಿಸಲಿದ್ದಾರೆ. ಜೊತೆಗೆ ವಾಯುಸೇನೆಯ ಯೋಧರು ಪ್ಯಾರಾಚೂಟ್‌ ಮೂಲಕ ವಿಮಾನದಿಂದ ಜಿಗಿದು ಅಮೋಘ ಸಾಹಸ ಪ್ರದರ್ಶಿಸಲಿದ್ದಾರೆ. ಸೂರ್ಯಕಿರಣ್ ಏರೋಬ್ಯಾಟಿಕ್ ತಂಡದಿಂದಲೂ ವಿಶೇಷ ಸಾಹಸ ಪ್ರದರ್ಶನ ಇರಲಿದೆ. ಇದನ್ನೂ ಓದಿ: ಹಮಾಸ್ ಉಗ್ರರ ಕಾರ್ಯತಂತ್ರವನ್ನೇ ಅನುಸರಿಸಿದ ಇಸ್ರೇಲ್ – ಇಂದು ಇಬ್ಬರು ಒತ್ತೆಯಾಳುಗಳ ರಿಲೀಸ್‌ಗೆ ಸಿದ್ಧತೆ

    ಅ.23ರಂದು ನಡೆಯುವ ಏರ್‌ ಶೋನ ರಿಹರ್ಸಲ್‌ 22ರಂದು (ಭಾನುವಾರ) ಸಂಜೆ 4 ಗಂಟೆಗೆ ನಡೆಯಲಿದೆ. ರಿಹರ್ಸಲ್‌ ವೀಕ್ಷಣೆಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಮೂರುಗಂಟೆ ಒಳಗೆ ವೀಕ್ಷಣೆಗೆ ಬಂದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಸುಮಾರು 1 ಗಂಟೆಗಳ ಕಾಲ ಸಾಹಸ ಪ್ರದರ್ಶನ ನಡೆಯಲಿದೆ. ಅ.23 ರಂದು ಅದೇ ಪಂಜಿನ ಕವಾಯತು ಮೈದಾನದಲ್ಲಿ ಅಂತಿಮ ಹಂತದ ಏರ್‌ಶೋ ನಡೆಯಲಿದ್ದು, ಪಾಸ್ ಇದ್ದವರಿಗಷ್ಟೇ ವೀಕ್ಷಣೆಗೆ ಅವಕಾಶ ಇರಲಿದೆ. ಇದನ್ನೂ ಓದಿ: ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆಶಿ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    G-20 ಶೃಂಗಸಭೆ ಹಿನ್ನೆಲೆ ಸೆ.14ರ ವರೆಗೆ ಚೀನಾ-ಪಾಕ್ ಗಡಿಯಲ್ಲಿ ಡ್ರಿಲ್ಲಿಂಗ್ ಕಾರ್ಯಾಚರಣೆ ಸ್ಥಗಿತ

    – ಭದ್ರತೆಗೆ ಸುಧಾರಿತ ಯುದ್ಧ ವಿಮಾನಗಳ ನಿಯೋಜನೆ

    ಶ್ರೀನಗರ: ಜಿ20 ಶೃಂಗಸಭೆಗೆ (G20 Summit) ಭಾರತ ಸಂಪೂರ್ಣ ಸಿದ್ಧವಾಗಿದೆ. ಬರುವ ಗಣ್ಯರಿಗೆ ವಾಸ್ತವ್ಯದೊಂದಿಗೆ ಹಲವು ಹಂತಗಳಲ್ಲಿ ಭದ್ರತೆ ನಿಯೋಜನೆ ಮಾಡಲಾಗಿದೆ. ಈ ನಡುವೆ ಭಾರತೀಯ ವಾಯುಸೇನೆಯು (IAF) ಉತ್ತರ ವಲಯದಲ್ಲಿ ನಡೆಯುತ್ತಿರುವ ತ್ರಿಶೂಲ್ ವ್ಯಾಯಾಮಕ್ಕೆ (ಡ್ರಿಲ್ಲಿಂಗ್) ವಿರಾಮ ನೀಡಿದೆ. ಸೆಪ್ಟೆಂಬರ್ 10ರ ವರೆಗೆ ಯಾವುದೇ ಯುದ್ಧ ವಿಮಾನಗಳು (Fighter Jets) ಹಾರಾಟ ನಡೆಸುವುದಿಲ್ಲ. ಡ್ರಿಲ್ಲಿಂಗ್ ಕಾರ್ಯಾಚರಣೆಯನ್ನು ಮೊಟಕುಗೊಳಿಸಲಾಗುವುದು ಎಂದು ಐಎಎಫ್ ಅಧಿಕಾರಿಗಳು ಹೇಳಿದ್ದಾರೆ.

    ಇದೇ ಅವಧಿಯಲ್ಲಿ G20 ಶೃಂಗಸಭೆ (G-20 Summit) ನಡೆಯಲಿದ್ದು ರಾಜಧಾನಿಯ ವಾಯು ಪ್ರದೇಶವನ್ನು ರಕ್ಷಿಸಲು ಹಾಗೂ ದೇಶಾದ್ಯಂತ ವಾಯುನೆಲೆಗಳಲ್ಲಿ ಹೆಚ್ಚಿನ ನಿಗಾ ಇರಿಸಲು ಫಾಲ್ಕನ್ ಅವಾಕ್ಸ್ ವಿಮಾನವನ್ನ ಕಾರ್ಯಾಚರಣೆಗೆ ಇಳಿಸಲು ನಿರ್ಧರಿಸಲಾಗಿದೆ. ಇದರೊಂದಿಗೆ ರಫೇಲ್ ಸೇರಿದಂತೆ ಇತರೆ ಸುಧಾರಿತ ಯುದ್ಧ ವಿಮಾನಗಳನ್ನ ವಾಯುನೆಲೆಗಳಲ್ಲಿ ಭದ್ರತೆಗೆ ನಿಯೋಜಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಿ20ಯಲ್ಲಿ ಭಾಗಿಯಾಗುವ ಗಣ್ಯರಿಗೆ ಭವ್ಯ ಭೋಜನ – ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಊಟದ ವ್ಯವಸ್ಥೆ

    ಜಿ20 ಶೃಂಗಸಭೆ ಹಿನ್ನೆಲೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಆದ್ದರಿಂದ ಶತ್ರು ವಿಮಾನ ಭಾರತಕ್ಕೆ ನುಸುಳಿದರೆ ಅಥವಾ ಡ್ರೋನ್ ಮೂಲಕ ದಾಳಿ ನಡೆಸುವ ಪ್ರಯತ್ನಗಳು ನಡೆದರೆ ತಕ್ಷಣವೇ ಹೊಡೆದುರುಳಿಸಲು ಸುಧಾರಿತ ಯುದ್ಧವಿಮಾನಗಳ ನಿಯೋಜನೆ ಮಾಡಲಾಗಿದೆ. ಅದಕ್ಕಾಗಿ ದೆಹಲಿಯ ಸುತ್ತಮುತ್ತಲಿನ ವಾಯುನೆಲೆಗಳಲ್ಲೂ ಯುದ್ಧ ವಿಮಾನಗಳ ನಿಯೋಜನೆ ಮಾಡಲಾಗಿದೆ ಎಂದು ವಾಯುಪಡೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: G20 ಸಭೆಗೆ ಆಗಮಿಸುತ್ತಿರೋ ಜೋ ಬೈಡನ್‌ಗಾಗಿ ಮೂರು ಹಂತದ ಭದ್ರತೆ

    ಭಾರತೀಯ ವಾಯುಪಡೆಯು ಸೆಪ್ಟೆಂಬರ್ 4 ರಿಂದ ಚೀನಾ ಮತ್ತು ಪಾಕಿಸ್ತಾನ ಗಡಿಯುದ್ಧಕ್ಕೂ ಉತ್ತರ ವಲಯದಲ್ಲಿ ತ್ರಿಶೂಲ್ ವ್ಯಾಯಾಮ (ಡ್ರಿಲ್ಲಿಂಗ್) ನಡೆಸುತ್ತಿದೆ. ಲಡಾಖ್, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಮತ್ತು ಪಂಜಾಬ್ ಸೇರಿದಂತೆ ಉತ್ತರ ವಲಯದಲ್ಲಿ ಡ್ರಿಲ್ಲಿಂಗ್ ನಡೆಯುತ್ತಿದ್ದು, ಸೆಪ್ಟೆಂಬರ್ 14ರಂದು ಇದು ಮುಕ್ತಾಯಗೊಳ್ಳಲಿದೆ. ರಫೇಲ್, ಮಿರಾಜ್-2000, SU-30MKI, ಹೆವಿ-ಲಿಫ್ಟ್ ಸಾರಿಗೆ ವಿಮಾನಗಳು, ಚಿನೂಕ್ಸ್ ಮತ್ತು ಅಪಾಚೆ ಸೇರಿದಂತೆ ಚಾಪರ್‌ಗಳು ತರಬೇತಿಯಲ್ಲಿ ಪಾಲ್ಗೊಳ್ಳುತ್ತಿವೆ. ಸೆಪ್ಟೆಂಬರ್ 10ರ ವರೆಗೆ ಈ ತರಬೇತಿಗೆ ವಿರಾಮ ನೀಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾರವಾರ ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ 35 ಯುದ್ಧ ವಿಮಾನಗಳ ಹಾರಾಟ- INS ವಿಕ್ರಮಾದಿತ್ಯ, INS ವಿಕ್ರಾಂತ್ ಸಾಮರ್ಥ್ಯ ಪ್ರದರ್ಶನ

    ಕಾರವಾರ ಅರಬ್ಬಿ ಸಮುದ್ರದಲ್ಲಿ ಏಕಕಾಲಕ್ಕೆ 35 ಯುದ್ಧ ವಿಮಾನಗಳ ಹಾರಾಟ- INS ವಿಕ್ರಮಾದಿತ್ಯ, INS ವಿಕ್ರಾಂತ್ ಸಾಮರ್ಥ್ಯ ಪ್ರದರ್ಶನ

    ಕಾರವಾರ: ಏಷ್ಯಾದ ಅತಿದೊಡ್ಡ ನೌಕಾನೆಲೆ ಎಂದೇ ಗುರುತಿಸಿಕೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆ ಇದೀಗ ಭಾರತದ ನೌಕಾಪಡೆಯ ಸಾಮರ್ಥ್ಯವನ್ನ ದುಪ್ಪಟ್ಟು ಮಾಡಿದ ಕೀರ್ತಿಗೂ ಪಾತ್ರವಾಗಿದೆ.

    ಕಾರವಾರದ ಅರಬ್ಬಿ ಸಮುದ್ರದ ನೌಕಾನೆಲೆಯಲ್ಲಿ ಶನಿವಾರ ಯುದ್ಧ ವಿಮಾನವಾಹಕ ನೌಕೆಯಾದ INS ವಿಕ್ರಮಾದಿತ್ಯ ಹಾಗೂ INS ವಿಕ್ರಾಂತ್ ಹಡಗುಗಳ ಶಕ್ತಿ ಸಾಮರ್ಥ್ಯ ಪರೀಕ್ಷಿಸಲಾಯಿತು. ಇದನ್ನೂ ಓದಿ: ಫಸ್ಟ್‌ ಟೈಂ ಕಾರವಾರಕ್ಕೆ ಬಂತು ಐಎನ್‌ಎಸ್‌ ವಿಕ್ರಾಂತ್‌ – ನಿಲುಗಡೆಯಾಗುತ್ತಿರುವುದು ಯಾಕೆ?

    ಭಾರತೀಯ ನೌಕಾಪಡೆಯ INS ವಿಕ್ರಮಾದಿತ್ಯ ಹಾಗೂ INS ವಿಕ್ರಾಂತ್ ವಿಮಾನವಾಹಕ ಹಡಗಿನಲ್ಲಿ 35ಕ್ಕೂ ಹೆಚ್ಚು ಯುದ್ಧ ವಿಮಾನಗಳು ಯಶಸ್ವಿಯಾಗಿ ಹಾರಾಟ ನಡೆಸಿದವು. ವಿಕ್ರಮಾದಿತ್ಯ ಹಾಗೂ ವಿಕ್ರಾಂತ್ ಹಡಗಿನಲ್ಲಿ ಲ್ಯಾಂಡಿಂಗ್ ಆಗುವ ಮೂಲಕ ತಡೆರಹಿತ ಯುದ್ಧ ವಾಹಕದ ಪರೀಕ್ಷೆಯನ್ನು ನೌಕಾದಳ ಯಶಸ್ವಿಗೊಳಿಸಿತು.

    ಕಾರವಾರ ಅರಬ್ಬಿ ಸಮುದ್ರದಲ್ಲಿ ಯುದ್ಧ ವಾಹಕ ಹಡಗಿನಲ್ಲಿ MiG-29K ಫೈಟರ್ ಜೆಟ್‌ಗಳು, MH60R, Kamov, ಸೀ ಕಿಂಗ್, ಚೇತಕ್ ಮತ್ತು ALH ಹೆಲಿಕಾಪ್ಟರ್‌ಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಯುದ್ಧ ವಿಮಾನಗಳ ಹಾರಾಟ ಪರೀಕ್ಷೆಗೆ ವಿಕ್ರಾಂತ್‌ ಹಾಗೂ ವಿಕ್ರಮಾದಿತ್ಯ ಅವಕಾಶ ಕಲ್ಪಿಸಿಕೊಟ್ಟು, ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿತು.

    ಕದಂಬ ನೌಕಾನೆಲೆಯಲ್ಲಿ ಸ್ಥಾನ ಪಡೆದಿರುವ INS ವಿಕ್ರಮಾದಿತ್ಯ ಹಾಗೂ INS ವಿಕ್ರಾಂತ್ ಹಡಗು ಮತ್ತೊಮ್ಮೆ ಯುದ್ಧ ಸನ್ನದ್ಧತೆಗೆ ಸಿದ್ದವಾಗಿದೆ. ಶನಿವಾರ ನಡೆದ ಸಾಮರ್ಥ್ಯ ಪರೀಕ್ಷೆ ಯಶಸ್ವಿಯಾಗಿದ್ದು, ಈ ಮೂಲಕ ಸಮುದ್ರ ಭಾಗದ ಗಡಿಯನ್ನು ಕಾಯಲು ಹಾಗೂ ಶತ್ರು ರಾಷ್ಟ್ರದ ದಾಳಿಯನ್ನು ಎರಡೂ ವಿಮಾನವಾಹಕಗಳು ಏಕ ಕಾಲದಲ್ಲಿ ಎದುರಿಸಬಲ್ಲ ವಿಶ್ವಾಸ ಮೂಡಿಸಿವೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ದೋಣಿ ಮುಳುಗಡೆ – 12 ಮೀನುಗಾರರ ರಕ್ಷಣೆ

    2025ಕ್ಕೆ ದೇಶಕ್ಕೆ ಸಮರ್ಪಣೆ
    ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾದಲ್ಲಿ ಕದಂಬ ನೌಕಾನೆಲೆಯು ಏಷ್ಯಾದಲ್ಲೇ ಅತೀ ದೊಡ್ಡ ನೌಕಾನೆಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಭೂ ಪ್ರದೇಶ ವೈರಿಗಳಿಗೆ ಚಿತ್ತ ಕಾಣದಂತೆ ಮಾಡಿ ಶತ್ರುಗಳ ಮೇಲೆ ಮುಗಿಬೀಳಲು ಸುವ್ಯವಸ್ಥಿತ ನೌಕಾ ತಾಣವಾಗಿ ಮಾರ್ಪಡುತಿದ್ದು ಇದೀಗ ನೌಕಾ ನೆಲೆಯಲ್ಲಿ ಎರಡನೇ ಹಂತದ ಕಾಮಗಾರಿಗಳು ಮುಕ್ತಾಯದ ಹಂತ ತಲುಪಿದೆ. ಒಂದು ಲಕ್ಷ ಸಿಬ್ಬಂದಿಗೆ ವಸತಿ ನಿಲಯ ,ಕಚೇರಿ ಸಂಕೀರ್ಣ, ರಿಪೇರಿ ಯಾರ್ಡ್‌ಗಳು ಈಗಾಗಲೇ ನಿರ್ಮಾಣದ ಅಂತಿಮ ಹಂತ ತಲುಪಿದ್ದು ನೌಕಾ ದಳದ ಮಾಹಿತಿ ಪ್ರಕಾರ 2025ರ ವೇಳೆಗೆ ದೇಶಕ್ಕೆ ಸಮರ್ಪಣೆಗೊಳ್ಳಲಿದೆ.