Tag: fighting

  • ಗದಗ| ಹಾಡಹಗಲೇ ನಡುಬೀದಿಯಲ್ಲಿ ಚಾಕು ಸಮೇತ ಹೊಡೆದಾಡಿದ ಯುವಕರು

    ಗದಗ| ಹಾಡಹಗಲೇ ನಡುಬೀದಿಯಲ್ಲಿ ಚಾಕು ಸಮೇತ ಹೊಡೆದಾಡಿದ ಯುವಕರು

    ಗದಗ: ಹಾಡಹಗಲೇ ನಡುಬೀದಿಯಲ್ಲಿ ಇಬ್ಬರು ಯುವಕರು ಚಾಕು ಸಮೇತ ಹೊಡೆದಾಡಿದ ಘಟನೆ ಗದಗ (Gadag) ನಗರದ ಚೆನ್ನಮ್ಮ ಸರ್ಕಲ್ ಬಳಿ ನಡೆದಿದೆ.

    ಹಣಕಾಸು (Finance) ಹಾಗೂ ಕೌಟುಂಬಿಕ (Family) ವಿಚಾರವಾಗಿ ಫಕೀರೇಶ ನಂದಿಹಳ್ಳಿ ಹಾಗೂ ಗಂಗಾಧರ ಹಿರೇಮಠ ಕಿತ್ತಾಡಿದ್ದಾರೆ. ಈ ಇಬ್ಬರು ಮೂಲತಃ ಮುಂಡರಗಿ ತಾಲೂಕಿನ ಚಿರ್ಚಿಹಾಳ ಗ್ರಾಮದ ನಿವಾಸಿಗಳು. ಕಳೆದ ನಾಲ್ಕೈದು ವರ್ಷಗಳಿಂದ ಗದಗ ನಗರದ ಹುಡೋ ಕಾಲೋನಿಯಲ್ಲಿ ವಾಸವಾಗಿದ್ದಾರೆ. ಇಬ್ಬರು ನಡುವೆ ಹಣಕಾಸು ವಿಚಾರವಾಗಿ ಆಗಾಗ ಗಲಾಟೆ ಆಗುತ್ತಿತ್ತು. ಇದರ ಜೊತೆಗೆ ಫಕೀರೇಶನ ಮಗಳು ಗಂಗಾಧರನ ಮನೆಗೆ ಬಂದು ತಂದೆ ಬಗ್ಗೆ ದೂರು ಹೇಳಿದ್ದಾಳೆ.

     

    ನನ್ನ ತಾಯಿ ಹಾಗೂ ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ. ವಿನಾಕಾರಣ ಕಿರುಕುಳ ಕೊಡ್ತಿದ್ದಾನೆ ಎಂದು ದೂರಿದ್ದಾಳೆ. ಇದರಿಂದ ಕೊಪಿತಗೊಂಡ ಗಂಗಾಧರ್ ಫಕೀರೇಶನೊಂದಿಗೆ ಜಗಳವಾಡಿದ್ದಾನೆ. ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿದೆ. ನಂತರ ಒಬ್ಬರನೊಬ್ಬರು ರಸ್ತೆಯಲ್ಲೇ ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ದೆಹಲಿ ಚುನಾವಣೆಗೆ ಕಾಂಗ್ರೆಸ್ ಜೊತೆ ಆಪ್ ಮೈತ್ರಿ ಇಲ್ಲ – ಅರವಿಂದ್ ಕೇಜ್ರಿವಾಲ್

    ಗಲಾಟೆಯಲ್ಲಿ ಫಕೀರೇಶನ ಕುತ್ತಿಗೆ, ಮುಖ, ಎದೆಗೆ ಗಂಗಾಧರ್ ಎಂಬಾತ ಚಾಕು ಇರಿದಿದ್ದಾನೆ. ಫಕೀರೇಶನಿಗೆ ಗಂಭೀರ ಗಾಯವಾಗಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಯಿಂದ ಸ್ಥಳಿಯರು ಬೆಚ್ಚಿ ಬಿದ್ದಿದ್ದಾರೆ. ಪೊಲೀಸರು ಯಾವುದೇ ಭಯವೇ ಇಲ್ಲದೇ ಇಬ್ಬರು ಹೊಡೆದಾಡಿದ ವಿಡಿಯೋ ವೈರಲ್ ಆಗಿದೆ. ಈ ಕುರಿತು ಗದಗ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಕಾಂಗ್ರೆಸ್ ಚಿಂತನಾ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ – ರಕ್ತಸ್ರಾವ, ಆಸ್ಪತ್ರೆಗೆ ದಾಖಲು

    ಕಾಂಗ್ರೆಸ್ ಚಿಂತನಾ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ – ರಕ್ತಸ್ರಾವ, ಆಸ್ಪತ್ರೆಗೆ ದಾಖಲು

    ದಾವಣಗೆರೆ: ಕಾಂಗ್ರೆಸ್ ಚಿಂತನಾ ಸಭೆಯಲ್ಲಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ನಿಂದ ದಾವಣಗೆರೆ ನಗರದ ಬಾಪೂಜಿ ಎಂಬಿಎ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಈ ಘಟನೆ ನಡೆದಿದೆ.

    ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹೂವಿನಮಡು ಚನ್ನಬಸಪ್ಪ ಮಾತನಾಡುವ ವೇಳೆ ಕಾಂಗ್ರೆಸ್ ಮುಖಂಡ ಮುದೇಗೌಡ ಗಿರೀಶ್ ಹಾಗೂ ಬೆಂಬಲಿಗರು ಅಡ್ಡಿ ಪಡಿಸಿದ್ದಾರೆ. ಇದೇ ವೇಳೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು, ಜಗಳ ಹಲ್ಲೆಗೆ ತಿರುಗಿದೆ. ಇದನ್ನೂ ಓದಿ: ಮೋದಿ ಯೋಗಕ್ಕೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ- ಇಲ್ಲಿದೆ ಕಾರ್ಯಕ್ರಮದ ವಿವರ

    ಮುದೇಗೌಡ ಗಿರೀಶ್ ಬೆಂಬಲಿಗ ಮಲ್ಲಿಕಾರ್ಜುನ್ ಕೈ ಕಾರ್ಯಕರ್ತ ಶ್ರೀನಿವಾಸ್ ರವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಶ್ರೀನಿವಾಸ್‌ಗೆ ಗಾಯಗಳಾಗಿದ್ದು, ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗಿದೆ.

    ದಲಿತರು ಮಾತನಾಡುವಾಗ ಧ್ವನಿ ಅಡಗಿಸುವ ಕೆಲಸ ಕಾಂಗ್ರೆಸ್‌ನ ಕೆಲ ಮುಖಂಡರು ಮಾಡುತ್ತಿದ್ದಾರೆ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಶ್ರೀನಿವಾಸ್ ವಿದ್ಯಾನಗರ ಠಾಣೆಯಲ್ಲಿ ದೂರು ದಾಖಲು ಮಾಡಿದ ಬೆನ್ನಲ್ಲೇ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಇದನ್ನೂ ಓದಿ: ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

    ಹಲ್ಲೆ ನಡೆಸಿದ ಮಲ್ಲಿಕಾರ್ಜುನ್‌ನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸ್ ಮೇಲೆ ಹಳೇ ದ್ವೇಷದಿಂದ ಸುಖಾಸುಮ್ಮನೆ ಹಲ್ಲೆ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

  • ಬಾಂಡ್ ರವಿಗಾಗಿ ಭರ್ಜರಿ ಹೊಡೆದಾಡಿದ ಪ್ರಮೋದ್

    ಬಾಂಡ್ ರವಿಗಾಗಿ ಭರ್ಜರಿ ಹೊಡೆದಾಡಿದ ಪ್ರಮೋದ್

    ಪ್ರೀಮಿಯರ್ ಪದ್ಮನಿ ಸಿನಿಮಾದ ಮೂಲಕ ಭರವಸೆ ಮೂಡಿಸಿರುವ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗಲೇ 70ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಬೆಂಗಳೂರಿನ HMTಯಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿದೆ. ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಾಹಸ ಸಂಯೋಜನೆಯಲ್ಲಿ ಭರ್ಜರಿ  ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಭರ್ಜರಿ ಆಕ್ಷನ್ ಸೀನ್ಸ್ ಭಾಗಿಯಾಗಿದ್ದರು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದೊಂದು ಕಮರ್ಷಿಯಲ್, ಆಕ್ಷನ್-ಲವ್ ಸ್ಟೋರಿ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದಾರೆ. ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು. ಪ್ರಮೋದ್ ಗೆ ಜೋಡಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ನಟಿಸ್ತಿದ್ದಾರೆ. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ಮಲ್ಲಿಕಾರ್ಜುನ್ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ಖ್ಯಾತ ನಟ ರವಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್ & ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಮಧುರ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಸಿನಿಮಾಕ್ಕಿದೆ.

  • ಬಂಡೀಪುರದಲ್ಲಿ ಸರಹದ್ದಿಗಾಗಿ ವ್ಯಾಘ್ರಗಳ ನಡುವೆ ಕಾದಾಟ- ಗಂಡು ಹುಲಿ ಸಾವು

    ಬಂಡೀಪುರದಲ್ಲಿ ಸರಹದ್ದಿಗಾಗಿ ವ್ಯಾಘ್ರಗಳ ನಡುವೆ ಕಾದಾಟ- ಗಂಡು ಹುಲಿ ಸಾವು

    ಚಾಮರಾಜನಗರ: ಎರಡು ಹುಲಿಗಳ ನಡುವೆ ನಡೆದ ಕಾದಾಟದಲ್ಲಿ ಗಂಡು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

    ಸರಹದ್ದಿನ ಕದನದಲ್ಲಿ ಹುಲಿಯೊಂದು ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಎಲಚೆಟ್ಟಿ ಗಸ್ತಿನ ಆಲದಮರದ ಹಳ್ಳದಲ್ಲಿ ನಡೆದಿದೆ. ಅಂದಾಜು 4 ರಿಂದ 5 ವರ್ಷದ ಗಂಡು ಹುಲಿ ಮೃತಪಟ್ಟಿದ್ದು, ಹುಲಿಗಳ ನಡುವಿನ ಸರಹದ್ದಿನ ಕಾದಾಟದಲ್ಲಿ ಸತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಮೃತ ಹುಲಿ ಮೈಮೇಲೆ ತೀವ್ರತರ ಗಾಯಗಳಾಗಿದ್ದು, ಉಗುರು, ಹಲ್ಲುಗಳು, ಅಂಗಾಂಗಗಳು ಸುರಕ್ಷಿತವಾಗಿವೆ.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಎನ್‍ಟಿಸಿಎ ಪ್ರತಿನಿಧಿ, ಪಶು ವೈದ್ಯರ ಸಮ್ಮುಖದಲ್ಲಿ ಹುಲಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಸುಡಲಾಗಿದೆ.

  • ಎಣ್ಣೆ ಮತ್ತಿಗೆ ಬಟ್ಟೆಹರಿದುಕೊಂಡು ಬಡಿದಾಡಿದ ಕುಡುಕರು – ತಪ್ಪಿಸಲು ಹೋದವರಿಗೂ ಬಿತ್ತು ಗೂಸಾ

    ಎಣ್ಣೆ ಮತ್ತಿಗೆ ಬಟ್ಟೆಹರಿದುಕೊಂಡು ಬಡಿದಾಡಿದ ಕುಡುಕರು – ತಪ್ಪಿಸಲು ಹೋದವರಿಗೂ ಬಿತ್ತು ಗೂಸಾ

    ಮಡಿಕೇರಿ: ಕಂಠಪೂರ್ತಿ ಕುಡಿದು ನಡುಬೀದಿಯಲ್ಲೇ ಕುಡುಕರು ಬಡಿದಾಡಿಕೊಂಡು, ಹೊಡೆದಾಟ ತಪ್ಪಿಸಲು ಹೋದವರಿಗೂ ಗೂಸಾ ಕೊಟ್ಟು ರಂಪಾಟ ನಡೆಸಿದ್ದಾರೆ.

    ವಿರಾಜಪೇಟೆ ನಗರದ ಬಸ್ ನಿಲ್ದಾಣದ ಬಳಿ ಕುಡುಕರು ಬೀದಿ ರಂಪಾಟ ಮಾಡಿದ್ದಾರೆ. ಕಂಠಪೂರ್ತಿ ಕುಡಿದು ಕುಸ್ತಿ, ಬಾಕ್ಸಿಂಗ್ ಕಣದಲ್ಲಿದ್ದಾರೆನೋ ಎನ್ನುವ ಹಾಗೆ ಬಡಿದಾಡಿಕೊಂಡಿದ್ದಾರೆ. ಓರ್ವ ಕುಡುಕನಂತೂ ಮೈಮೇಲೆ ಧರಿಸಿದ್ದ ಬಟ್ಟೆಯನ್ನು ಹರಿದುಕೊಂಡು ಎಗರಿ ಎಗರಿ ಇನ್ನೋರ್ವನ ಮೇಲೆ ಹೊಡೆದಾಟಕ್ಕೆ ಹೋಗುತ್ತಿದ್ದನ್ನ ನೋಡಿ ಸ್ಥಳದಲ್ಲಿ ನೆರೆದವರು ಜಗಳ ಬಿಡಿಸಲು ಹೋದರೆ, ಅವರಿಗೆ ಕುಡುಕ ಏಟು ನೀಡಿದ್ದಾನೆ.

    ಈ ದೃಶ್ಯವನ್ನು ಕೆಲವರು ವಿಡಿಯೋ ಮಾಡಿಕೊಂಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗಿದ್ದು, ಕುಡುಕರ ರಂಪಾಟ ನೆಟ್ಟಿಗರಿಗೆ ಮನರಂಜನೆ ನೀಡಿದೆ.

  • ಧರ್ಮಸ್ಥಳದಲ್ಲಿ ಭದ್ರತಾ ಸಿಬ್ಬಂದಿ, ಭಕ್ತರ ನಡುವೆ ಹೊಡೆದಾಟ: ವಿಡಿಯೋ ವೈರಲ್

    ಧರ್ಮಸ್ಥಳದಲ್ಲಿ ಭದ್ರತಾ ಸಿಬ್ಬಂದಿ, ಭಕ್ತರ ನಡುವೆ ಹೊಡೆದಾಟ: ವಿಡಿಯೋ ವೈರಲ್

    ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿದ್ದು, ಭಕ್ತರು ಮತ್ತು ಭದ್ರತಾ ಸಿಬ್ಬಂದಿ ಹೊಡೆದಾಡಿದ ಘಟನೆ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಭಕ್ತರ ದಟ್ಟಣೆ ಹೆಚ್ಚಿರುವಾಗ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಹೋಗಬೇಕಾಗುತ್ತದೆ. ದೇವಸ್ಥಾನದ ಬಲ ಬದಿಯಿಂದ ಆರಂಭಿಸಿ ಒಂದು ಸುತ್ತು ಸಾಲು ಇರುತ್ತದೆ. ಈ ಸರತಿ ಸಾಲಿನ ಮಧ್ಯೆ ಮಾತಿಗೆ ಮಾತು ಬೆಳೆದು ಭದ್ರತಾ ಸಿಬ್ಬಂದಿ ಹಾಗೂ ಭಕ್ತರು ಹೊಡೆದಾಡಿದ್ದಾರೆ. ಮಹಿಳೆಯರು, ಯುವಕರು ಸೇರಿ ಭದ್ರತಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಲ್ಲದೇ, ದೇವಸ್ಥಾನ ಎನ್ನುವುದನ್ನು ಲೆಕ್ಕಿಸದೇ ಬೈದಾಡಿಕೊಂಡಿದ್ದರು. ಕೊನೆಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿ ಮತ್ತು ಧರ್ಮಸ್ಥಳ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಗಲಾಟೆ ನಡೆಸಿದ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳವನ್ನು ನೋಡಿ ಕಲಿಯಿರಿ: ಪುರಿ ದೇವಾಲಯಕ್ಕೆ ಸುಪ್ರೀಂ ಸೂಚನೆ

    ಎರಡು ದಿನಗಳ ಹಿಂದೆ ನಡೆದಿದ್ದ ಘಟನೆಯನ್ನು ಸಾಲಿನಲ್ಲಿ ನಿಂತಿದ್ದ ಭಕ್ತರು ಮೊಬೈಲಿನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಭದ್ರತಾ ಸಿಬ್ಬಂದಿ ದರ್ಪದಿಂದಾಗಿ ಘಟನೆ ಸಂಭವಿಸಿದೆ ಎನ್ನುವಂತೆ ಫೇಸ್ ಬುಕ್‍ನಲ್ಲಿ ಅಪ್ಲೋಡ್ ಮಾಡಲಾಗಿದೆ. ಯುವಕರ ವರ್ತನೆಗೆ ಟೀಕೆ ವ್ಯಕ್ತವಾಗಿದೆ.

    https://youtu.be/JZTfaP1hyss

  • ಪ್ರೇಮ್ ಅಡ್ಡದಲ್ಲಿ ಶಿವಣ್ಣ, ಕಿಚ್ಚನ ಕಾಳಗ ಶುರು- ನಿಜವಾದ ‘ವಿಲನ್’ ಯಾರು?

    ಪ್ರೇಮ್ ಅಡ್ಡದಲ್ಲಿ ಶಿವಣ್ಣ, ಕಿಚ್ಚನ ಕಾಳಗ ಶುರು- ನಿಜವಾದ ‘ವಿಲನ್’ ಯಾರು?

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರಿ ಕುತೂಹಲ ಹಟ್ಟುಸಿರೋ ‘ದಿ-ವಿಲನ್’ ಚಿತ್ರ ಅಭಿಮಾನಿಗಳ ಮನದಲ್ಲಿ ಹಲ್‍ಚಲ್ ಎಬ್ಬಿಸಿದೆ. ಕರಿಯ, ಎಕ್ಸ್‍ಕ್ಯೂಸ್ ಮಿ, ಜೋಗಿ ಸಿಸಿಮಾಗಳಂತಹ ಸೂಪರ್ ಡೂಪರ್ ಹಿಟ್ ಕೊಟ್ಟಂತ ನಿರ್ದೇಶಕ ಪ್ರೇಮ್, ಶಿವಣ್ಣ ಹಾಗೂ ಕಿಚ್ಚ ಸುದೀಪ್‍ರನ್ನು ಹಾಕಿಕೊಂಡು ಏನ್ ಮಾಡುತ್ತಾರೆ ಎನ್ನುವ ಕುತೂಹಲ ಆಕಾಶ ಮುಟ್ಟಿದೆ.

    ದಿನೇ ದಿನೇ ಒಂದಿಲ್ಲೊಂದು ಸೆನ್ಸೆಷನಲ್ ಸಮಾಚಾರ ‘ದಿ-ವಿಲನ್’ ತಂಡದಿಂದ ಹೊರಬರುತ್ತಿದೆ. ಬೆಂಗಳೂರು, ಚಿಕ್ಕಮಗಳೂರು, ಉತ್ತರ ಕರ್ನಾಟಕ ಹಾಗೂ ಲಂಡನ್‍ನಲ್ಲಿ ಶೂಟಿಂಗ್ ಮುಗಿಸಿಕೊಂಡು ಬಂದು ಈಗ ಕೊನೆಯ ಹಂತದ ಶೂಟಿಂಗ್‍ಗೆ ಚಿತ್ರತಂಡ ಅಣಿಯಾಗಿದೆ. ಆ ಕೊನೆಯ ಹಂತದ ರೋಚಕ ಚಿತ್ರೀಕರಣವೇ ವಿಲನ್ಸ್ ಕಾಳಗ ಎಂದು ಹೇಳಲಾಗಿದೆ.

    `ದಿ-ವಿಲನ್’ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಶೂಟಿಂಗ್ ನಲ್ಲಿ ಶಿವಣ್ಣ ಹಾಗೂ ಸುದೀಪ್ ನಡುವೆ ಕಾಳಗದ ದೃಶ್ಯವಿದೆ. ಈ ಸೀನ್‍ಗಾಗಿ ಅದ್ಧೂರಿಯಾಗಿ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಸೆಟ್ ಹಾಕಲಾಗಿದೆ.

    ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ಸಾರಥ್ಯದಲ್ಲಿ ಈ ಫೈಟಿಂಗ್ ಸೀನ್ ಶೂಟಿಂಗ್ ನಡೆಯುತ್ತಿದೆ. ಡಿಫರೆಂಟ್ ಆಗಿ ವಿಲನ್‍ಗಳು ಈ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದು, ಅಸಲಿ ವಿಲನ್ ಯಾರು ಎನ್ನುವುದನ್ನು ಈ ದೃಶ್ಯ ಸಾಬೀತು ಮಾಡಲಿದೆ.

    ಸಿ.ಆರ್. ಮನೋಹರ್ ನಿರ್ಮಾಣದಲ್ಲಿ ಬರೋಬ್ಬರಿ 6 ಭಾಷೆಯಲ್ಲಿ `ದಿ-ವಿಲನ್’ ಮೂಡಿಬರುತ್ತಿದೆ. ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣದಲ್ಲಿ ಚಿತ್ರತಂಡ ಮಗ್ನವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಕುತೂಹಲ ಮೂಡಿಸುವ ಟೀಸರ್ ಪ್ರೇಕ್ಷಕರ ಮುಂದೆ ಇಡಲಿದ್ದಾರೆ.

  • `ದಿ ವಿಲನ್’ ಸಿನಿಮಾದಲ್ಲಿ ಶಿವಣ್ಣನ ಆಕ್ಷನ್ ಶುರು

    `ದಿ ವಿಲನ್’ ಸಿನಿಮಾದಲ್ಲಿ ಶಿವಣ್ಣನ ಆಕ್ಷನ್ ಶುರು

    ಬೆಂಗಳೂರು: ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವಣ್ಣ ಅವರು ಒಟ್ಟಾಗಿ ಅಭಿನಯಿಸುತ್ತಿರುವ `ದಿ ವಿಲನ್’ ಸಿನಿಮಾದ ಶೂಟಿಂಗ್ ಭರ್ಜರಿಯಾಗಿಯೇ ನಡೆಯುತ್ತಿದೆ.

    ಇಷ್ಟು ದಿನ ಕಿಚ್ಚನ ಪಾತ್ರವನ್ನು ಚಿತ್ರೀಕರಣ ಮಾಡುತ್ತಿದ್ದ ಚಿತ್ರತಂಡ ಈಗ ಶಿವಣ್ಣ ಅವರ ಪಾತ್ರದ ಶೂಟಿಂಗ್ ಅನ್ನು ಭರದಿಂದಲೇ ಮಾಡುತ್ತಿದೆ. ಚಿತ್ರತಂಡ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ಶಿವಣ್ಣ ಅವರ ಸಾಹಸ ದೃಶ್ಯಗಳನ್ನು ಚಿತ್ರಿಕರಣ ಮಾಡಿ ಮುಗಿಸಿದೆ. ಈಗ ಬ್ಯಾಂಕಾಕ್‍ನಲ್ಲಿ ಶಿವಣ್ಣ ಅವರ ಕಾರ್ ಚೇಸಿಂಗ್ ದೃಶ್ಯವನ್ನು ಚಿತ್ರೀಕರಣವನ್ನು ಮಾಡಿ ಮುಗಿಸಿದೆ.

    ಶೂಟಿಂಗ್ ಮುಗಿಸಿ ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡಿದ್ದು, ಚಿತ್ರತಂಡದೊಂದಿಗೆ ಸೇರಿ ಅಪರೂಪದ ಕ್ಷಣಗಳನ್ನು ಕಳಿಯುತ್ತಿದ್ದಾರೆ. ಕಾರ್ ಚೇಸಿಂಗ್ ಶೂಟಿಂಗ್‍ನಲ್ಲಿ ಚಿತ್ರತಂಡ ಶಿವಣ್ಣ ಅವರನ್ನು ರಸ್ತೆಯ ಮಧ್ಯೆದಲ್ಲಿ ಓಡಾಡುವ ಕಾರು, ಲಾರಿಗಳ ಮೇಲೆ ಜಂಪ್ ಮಾಡಿಸಿ ಫೈಟಿಂಗ್ ಮಾಡಿಸುತ್ತಿದ್ದಾರೆ. ಅವರ ಈ ಫೈಟಿಂಗ್ ನೋಡಿದರೆ ಸಿನಿಮಾದಲ್ಲಿ ಶಿವಣ್ಣ ತಮ್ಮ ಹವವನ್ನು ಸೃಷ್ಟಿಸಿದ್ದಾರೆ ಎನಿಸುತ್ತದೆ.

    ಶಿವಣ್ಣ ಅವರ ಸಾಹಸ ದೃಶ್ಯಗಳಿಗೆ ನಿರ್ದೇಶಕ ರವಿವರ್ಮ ಅವರು ನಿರ್ದೇಶನ ಮಾಡುತ್ತಿದ್ದಾರೆ. ಅವರಿಗೆ ತಕ್ಕಂತೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ.

    ಸ್ಯಾಂಡಲ್‍ವುಡ್‍ನ ಬಹು ನಿರೀಕ್ಷಿತ `ದಿ ವಿಲನ್’ ಸಿನಿಮಾವು ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ಇದೊಂದು ಮಲ್ಟಿ ಸ್ಟಾರ್‍ಗಳ ಚಿತ್ರವಾಗಿದೆ. ಇದರಲ್ಲಿ ವಿಶೇಷತೆ ಎಂದರೆ ಕಿಚ್ಚ ಮತ್ತು ಶಿವಣ್ಣ ಒಟ್ಟಾಗಿ ಆಭಿನಯಿಸುತ್ತಿರುವುದು. ಈ ಸಿನಿಮಾದಲ್ಲಿ ಬಹುಭಾಷ ನಟಿ ಆಮಿ ಜಾಕ್ಸನ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅರ್ಜುನ ಜನ್ಯ ಅವರ ಸಂಗೀತದಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಮುಂದಿನ ವರ್ಷ ಫೆ. 14 ರಂದು ತೆರೆಗೆ ಬರುವ ಸಾಧ್ಯತೆಗಳಿವೆ.

     

  • ಗಾಂಧಿ ಜಯಂತಿ ವೇಳೆ ಸಚಿವ, ಶಾಸಕರ ಎದುರೇ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

    ಗಾಂಧಿ ಜಯಂತಿ ವೇಳೆ ಸಚಿವ, ಶಾಸಕರ ಎದುರೇ ಕಾಂಗ್ರೆಸ್ ಕಾರ್ಯಕರ್ತರ ಗಲಾಟೆ

    ಬಾಗಲಕೋಟೆ: ಗಾಂಧಿ ಜಯಂತಿ ದಿನವೇ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಚಿವರು, ಶಾಸಕರ ಎದುರೇ ಕೈ ಕಾರ್ಯಕರ್ತರು ಬಾಗಲಕೋಟೆಯಲ್ಲಿ ಗಲಾಟೆ ಮಾಡಿದ್ದಾರೆ.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಫೋಟೋ ತೆಗೆಯುವ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ನಾಗರಾಜ್ ಹದ್ಲಿ ಮತ್ತು ನಗರಸಭೆ ಸದಸ್ಯ ಗೋವಿಂದ ಬಳ್ಳಾರಿ ಪರಸ್ಪರ ಏಕವಚನದಲ್ಲಿ ಮಾತಾನಾಡುವ ಮೂಲಕ ವಾಗ್ವಾದ ಮಾಡಿದ್ದಾರೆ.

    ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಕೈ ಕೈ ಮಿಲಾಯಿಸುವಷ್ಟರ ಮಟ್ಟಿಗೆ ಗಲಾಟೆ ನಡೆದಿದೆ. ಇತ್ತ ಕಾರ್ಯಕ್ರಮದಲ್ಲಿ ಇದ್ದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಶಾಸಕ ಎಚ್.ವೈ.ಮೇಟಿ ಅವರ ಎದುರೇ ಈ ಗಲಾಟೆ ನಡೆಸಿದ್ದು, ತೀವ್ರ ಮುಜಗರ ಪಟ್ಟುಕೊಳ್ಳುವಂತಾಗಿದೆ. ಈ ಮೂಲಕ ಮೂಲ ಕಾಂಗ್ರೆಸ್ಸಿಗರು, ವಲಸೆ ಕಾಂಗ್ರೆಸ್ಸಿಗರ ಮಧ್ಯೆ ಮತ್ತೆ ಭಿನ್ನಮತ ಸ್ಫೋಟವಾಗಿದೆ.

    ಈ ಗಲಾಟೆಯ ಬಗ್ಗೆ ಸಚಿವ ಆರ್.ಬಿ ತಿಮ್ಮಾಪುರ ಪ್ರತಿಕ್ರಿಯಿಸಿ, ವೈಯಕ್ತಿಕ ವಿಚಾರಕ್ಕೆ ಗಲಾಟೆಯಾಗಿದ್ದು ನಿಜ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಪಕ್ಷದ ಶಿಸ್ತನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

    https://youtu.be/iyOiyLIam98

  • ಗಲಾಟೆ ವೇಳೆ ಗರ್ಭಿಣಿಯ ಹೊಟ್ಟೆಗೆ ಕಲ್ಲುಬಿದ್ದು ಗರ್ಭಪಾತ!

    ಗಲಾಟೆ ವೇಳೆ ಗರ್ಭಿಣಿಯ ಹೊಟ್ಟೆಗೆ ಕಲ್ಲುಬಿದ್ದು ಗರ್ಭಪಾತ!

    ಚಿತ್ರದುರ್ಗ: ಹಳೆ ದ್ವೇಷ ವೈಷಮ್ಯ ಹಿನ್ನಲೆಯಲ್ಲಿ ಒಂದೇ ಕೋಮಿನ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಗುರುವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹೊರವಲಯದ ಬಬ್ಬೂರು ಬೋವಿ ಕಾಲೋನಿಯಲ್ಲಿ ನಡೆದಿದೆ.

    ಈ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಎರಡು ಕಾರುಗಳ ಗಾಜು ಜಖಂ ಆಗಿದೆ. ಗಲಾಟೆಯನ್ನು ನೋಡಲು ಬಂದ ಮಹಿಳೆಯ ಮೇಲೆ ಅಕಸ್ಮಾತ್ ಆಗಿ ಕಲ್ಲು ಬಂದು ಬಿದಿದ್ದು, ಘಟನೆಯಲ್ಲಿ ಹೊಟ್ಟೆಯಲ್ಲಿದ್ದ ಎರಡು ತಿಂಗಳ ಭ್ರೂಣ ಹತ್ಯೆಯಾಗಿ ಗರ್ಭಪಾತವಾಗಿದೆ.

    ಗುಂಪು ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದ ಮಣಿ, ಮಂಜುನಾಥ್, ಹರೀಶ್ ನನ್ನು ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.