Tag: film award

  • ಚಲನಚಿತ್ರ ರಾಜ್ಯ ಪ್ರಶಸ್ತಿ 2017: ನಾಲ್ಕು ವರ್ಷಗಳ ನಂತರ ಕಣ್ತೆರೆದ ಸರಕಾರ

    ಚಲನಚಿತ್ರ ರಾಜ್ಯ ಪ್ರಶಸ್ತಿ 2017: ನಾಲ್ಕು ವರ್ಷಗಳ ನಂತರ ಕಣ್ತೆರೆದ ಸರಕಾರ

    2017ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ನಾಲ್ಕು ವರ್ಷಗಳ ನಂತರ ಸರಕಾರ ಪ್ರದಾನ ಮಾಡಲಾಗುತ್ತಿದೆ. ಡಾ.ರಾಜ್ ಕುಮಾರ್ ಹುಟ್ಟು ಹಬ್ಬದ ದಿನದಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು 2017ನೇ ಸಾಲಿನ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ಪ್ರತಿ ವರ್ಷವೂ ಆಯಾ ಕ್ಯಾಲೆಂಡರ್ ವರ್ಷದ ಚಲನಚಿತ್ರ ಪ್ರಶಸ್ತಿಯನ್ನು ನೀಡುತ್ತಾ ಬಂದಿರುವುದು ವಾಡಿಕೆ ಆಗಿತ್ತು. 2017ರಿಂದ ಈವರೆಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿಲ್ಲ. 2017ರಲ್ಲಿ ಎರಡು ಬಾರಿ ಪ್ರದಾನ ಸಮಾರಂಭವನ್ನು ಹಮ್ಮಿಕೊಂಡಿದ್ದರೂ, ನಾನಾ ಕಾರಣಗಳಿಂದಾಗಿ ನಿಗದಿತ ದಿನಾಂಕಗಳಂದು ಅವುಗಳು ನಡೆಯಲಿಲ್ಲ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    2018 ನವೆಂಬರ್ 24 ರಂದು ಬೆಂಗಳೂರಿನಲ್ಲಿ 2017ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಿತ್ತು. ಮಂಡ್ಯದ ಬಳಿ ಬಸ್ಸೊಂದು ಕೆರೆಗೆ ಬಿದ್ದು ಹಲವರು ಪ್ರಾಣ ಕಳೆದುಕೊಂಡರು. ಜತೆಗೆ ಅಂದೇ ಅಂಬರೀಶ್ ಕೂಡ ನಿಧನರಾದರು. ಹಾಗಾಗಿ ಪ್ರದಾನ ಸಮಾರಂಭ ನಡೆಯಲಿಲ್ಲ. ನಂತರ ಕೊರೋನಾ ಮತ್ತಿತರ ಕಾರಣಗಳನ್ನು ಕೊಟ್ಟು ಪ್ರಶಸ್ತಿ ವಿತರಿಸಲಿಲ್ಲ. ಕೊನೆಗೂ ಏ.24 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಈ ಸಮಾರಂಭದಲ್ಲಿ ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಜಿ.ಎನ್.ಲಕ್ಷ್ಮೀಪತಿ, ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ನಿರ್ದೇಶಕಿ ಲಕ್ಷ್ಮಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ಎಸ್.ನಾರಾಯಣ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆದರ್ಶ ಈಶ್ವರಪ್ಪ ಅವರ ಶುದ್ದಿ, ಕೋಡ್ಲು ರಾಮಕೃಷ್ಣ ಅವರ ಮಾರ್ಚ್ 24 ಮತ್ತು ಅಭಯ ಸಿಂಹ ನಿರ್ದೇಶನದ ಪಡ್ಡಾಯಿ ಕ್ರಮವಾಗಿ ಪ್ರಥಮ, ದ್ವಿತಿಯಾ, ತೃತಿಯ ಪ್ರಶಸ್ತಿಗಳು ಪಡೆದಿವೆ. ಅತ್ಯುತ್ತಮ ಮನರಂಜನಾ ಸಿನಿಮಾವಾಗಿ ಪುನೀತ್ ರಾಜ್ ಕುಮಾರ್ ನಟನೆಯ ‘ರಾಜಕುಮಾರ’ ಆಯ್ಕೆಯಾಗಿದೆ.

  • ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

    ಅಕ್ಷಯ್ ಕುಮಾರ್‍ಗೆ ಶ್ರೇಷ್ಠ ನಟ ಪ್ರಶಸ್ತಿ, ಕನ್ನಡದ ಅಲ್ಲಮ ಚಿತ್ರಕ್ಕೆ ಎರಡು ಪ್ರಶಸ್ತಿ

    ನವದೆಹಲಿ: 64ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಗೊಂಡಿದ್ದು, ‘ರುಸ್ತುಮ್’ ಚಿತ್ರದ ಮನೋಜ್ಞ ಅಭಿನಯಕ್ಕಾಗಿ ಬಾಲಿವುಡ್ ನಟ ಕುಮಾರ್‍ಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಸಿಕ್ಕಿದೆ.

    ಟಿ.ಎಸ್.ನಾಗಾಭರಣ ನಿರ್ದೇಶನದ ಅಲ್ಲಮ ಚಿತ್ರ ಎರಡು ರಾಷ್ಟ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿಯನ್ನು  ಬಾ.ಪು. ಪದ್ಮನಾಭ ಗೆದ್ದುಕೊಂಡರೆ, ಅತ್ಯುತ್ತಮ ಮೇಕಪ್ ಪ್ರಶಸ್ತಿ ಎನ್.ಕೆ.ರಾಮಕೃಷ್ಣನ್  ಅವರಿಗೆ ಸಿಕ್ಕಿದೆ.

    ಮಲೆಯಾಳಂ ಭಾಷೆಯಲ್ಲಿರುವ ‘ಮಿನ್ನಮಿನುಗು’ ಚಿತ್ರದ ಅಭಿನಯಕ್ಕಾಗಿ ಸುರಭಿ ಲಕ್ಷ್ಮಿ ಅವರಿಗೆ ಅತ್ಯುತ್ತಮ ನಾಯಕಿ ನಟಿ ಪ್ರಶಸ್ತಿ ಸಿಕ್ಕಿದೆ. ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ‘ರಿಸರ್ವ್‍ವೇಶನ್’ಗೆ ಲಭಿಸಿದ್ದರೆ, ಸೋನಂ ಕಪೂರ್ ಅಭಿನಯದ ‘ನೀರ್ಜಾ’ ಹಿಂದಿಯ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

    ಮದಿಪುಗೆ ಅತ್ಯುತ್ತಮ ತುಳು ಚಿತ್ರ ಪ್ರಶಸ್ತಿ ಸಿಕ್ಕಿದರೆ, ಅತ್ಯುತ್ತಮ ಕೊಂಕಣಿ ಚಿತ್ರ ಡಿ ಝರಾ ಝರಾಗೆ ಸಿಕ್ಕಿದೆ. ಸಾಮಾಜಿಕ ವಿಭಾಗದಲ್ಲಿ ಅಮಿತಾಬ್ ಬಚ್ಚನ್ ಅಭಿನಯದ ಪಿಂಕು ಚಿತ್ರಕ್ಕೆ ಪ್ರಶಸ್ತಿ ಲಭಿಸಿದೆ.

    ದಂಗಲ್ ಚಿತ್ರದ ಅಭಿನಯಕ್ಕಾಗಿ ಜೈರಾ ವಾಸಿಂಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಸಿಕ್ಕಿದೆ. ಅಕ್ಷಯ್ ಕುಮಾರ್ ಅವರು ಇದೇ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಸಿನಿ ಉದ್ಯಮಕ್ಕೆ ಸ್ನೇಹ ರಾಜ್ಯ ಪ್ರಶಸ್ತಿಯನ್ನು ಉತ್ತರಪ್ರದೇಶ ಗೆದ್ದುಕೊಂಡಿದೆ.

    ನಿರ್ದೇಶಕ, ನಿರ್ಮಾಪಕ ಪ್ರಿಯದರ್ಶನ್ ನೇತೃತ್ವದ ಸಮಿತಿ ಈ ಪ್ರಶಸ್ತಿಗಳನ್ನು ಆಯ್ಕೆ ಮಾಡಿದೆ.