Tag: Film director

  • ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌

    ಎಲ್ಲಾ ಹೆಣ್ಮಕ್ಕಳು ಮಾಡೋದು ವರದಕ್ಷಿಣೆ ಆರೋಪವೊಂದೇ ತಾನೆ – ಎಸ್‌. ನಾರಾಯಣ್‌

    – ಒಂದು ವರ್ಷದ ಹಿಂದೆಯೇ ಮನೆಬಿಟ್ಟು ಹೋಗಿದ್ದಾರೆ
    – ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪಕ್ಕೆ ಪ್ರತಿಕ್ರಿಯೆ

    ಬೆಂಗಳೂರು: ಒಂದು ವರ್ಷದ ಹಿಂದೆಯೇ ಸೊಸೆ ಮನೆ ಬಿಟ್ಟು ಹೋಗಿದ್ರು. ಈಗ ದೂರು ವರದಕ್ಷಿಣೆ (Dowry0 ಕಿರುಕುಳ ಅಂತ ದೂರು ಕೊಟ್ಟಿದ್ದಾರೆ. ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ ಎಂದ‌ ನಿರ್ದೇಶಕ ಎಸ್‌. ನಾರಾಯಣ್‌ (S Narayana) ಹೇಳಿದ್ದಾರೆ.

    ಸೊಸೆ ಕೊಟ್ಟ ದೂರಿನ ಬಗ್ಗೆ ʻಪಬ್ಲಿಕ್‌ ಟಿವಿʼಗೆ (Public TV0 ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಾವೇನೋ ಹಿಂಸೆ ಕೊಟ್ಟಿದ್ದೇವೆ ಅಂತ ದೂರು ಕೊಟ್ಟಿದ್ದಾರೆ. ಅದು ಕೋರ್ಟಿಗೆ ಹೋಗಿದೆ. ನಾವು ಅದರ ಬಗ್ಗೆ ಹೇಳಿದ್ರೆ ಅವರಿಗೇ ಅವಮಾನ ಮಾಡಿದಂತೆ ಆಗುತ್ತೆ. ಪಾಪ ಹೆಣ್ಮಗು ಅಲ್ವಾ? ಅವರಿಗೆ ತೇಜೋವಧೆ ಮಾಡಬಾರದು ಅಂತ ಹೇಳಿದ್ದಾರೆ. ಇದನ್ನೂ ಓದಿ: ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಇನ್ನೂ ವರದಕ್ಷಿಣ ಕಿರುಕುಳ ಅಂತ ಆರೋಪ ಮಾಡಿದ್ದರೆ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿ, ರೆಗ್ಯೂಲರ್‌ ಆಗಿ ನಮ್ಮ ದೇಶದಲ್ಲಿ ಎಲ್ಲಾ ಹೆಣ್ಮಕ್ಕಳು ಮಾಡೋದು ಅದೊಂದೇ ತಾನೆ. ಬೇರೆ ಇನ್ನೇನಾದ್ರೂ ಸಿಗುತ್ತಾ? ಅವರು ಮನೆ ಬಿಟ್ಟು ಹೋಗಿ ಒಂದು ವರ್ಷ ಆಯ್ತು. ಈಗ ದೂರು ಕೊಟ್ಟಿದ್ದಾರೆ. ಅವರಿಗೆ ಸುಃಖ, ಸಂತೋಷ ಎಲ್ಲಿ ಸಿಗುತ್ತೋ ಅಲ್ಲಿಗೆ ಹೋಗಿದ್ದಾರೆ. ನನ್ನ ವ್ಯಕ್ತಿತ್ವ ಎಲ್ಲರಿಗೂ ಗೊತ್ತು, ನಾವು ಸದಾ ಹೆಣ್ಮಕ್ಕಳನ್ನ ಗೌರವರಿಂದ ಕಾಣುವಂತಹವರು ಅಂತ ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ

    ಎಫ್‌ಐಆರ್‌ ಏಕೆ?
    ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ 2ನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

    ದೂರಿನಲ್ಲಿ ಏನಿದೆ?
    ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

    ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.

  • ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಸೊಸೆಗೆ ವರದಕ್ಷಿಣೆ ಕಿರುಕುಳ ಆರೋಪ – ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್

    ಬೆಂಗಳೂರು: ಸೊಸೆಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಖ್ಯಾತ ಚಿತ್ರ ನಿರ್ದೇಶಕ ಎಸ್.ನಾರಾಯಣ್, ಪತ್ನಿ, ಪುತ್ರನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಈ ಕುರಿತು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಸ್.ನಾರಾಯಣ್ ಅವರ ಎರಡನೇ ಮಗನ ಪತ್ನಿ ಪವಿತ್ರಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಎಸ್.ನಾರಾಯಣ್, ಪತ್ನಿ ಭಾಗ್ಯಲಕ್ಷ್ಮಿ, ಪತಿ ಪವನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ: ದರ್ಶನ್‌ಗೆ 40 ನಿಮಿಷ ಜೈಲಿನಲ್ಲಿ ವಾಕಿಂಗ್‌ಗೆ ಅವಕಾಶ

    ದೂರಿನಲ್ಲಿ ಏನಿದೆ?
    ನಾನು ಹಾಗೂ ಎಸ್.ನಾರಾಯಣ್ ಪುತ್ರ ಪವನ್ 2021ರಲ್ಲಿ ಮದುವೆಯಾದೆವು. ಪವನ್ ಓದಿರದ ಕಾರಣ ಕೆಲಸ ಇಲ್ಲದೆ ಮನೆಯಲ್ಲಿಯೇ ಇದ್ದರು. ಇದರಿಂದಾಗಿ ನಾನೇ ಕೆಲಸಕ್ಕೆ ಹೋಗಿ ಮನೆ ಸಾಗಿಸುತ್ತಿದ್ದೆ. ನಂತರ ಪವನ್ ಕಲಾ ಸಾಮ್ರಾಟ್ ಟೀಂ ಅಕಾಡೆಮಿ ಎಂಬ ಫಿಲ್ಮ್ ಇನ್ಸ್ಟಿಟ್ಯೂಟ್ ಪ್ರಾರಂಭಿಸಬೇಕೆಂದು ಯೋಚಿಸಿದ್ದರು. ಇದಕ್ಕಾಗಿ ನನ್ನ ಬಳಿ ದುಡ್ಡು ಕೇಳಿದ್ದರು. ಆಗ ನನ್ನ ತಾಯಿಯ ಒಡವೆ ಕೊಟ್ಟಿದ್ದೆ. ಆದ್ರೆ ಬಳಿಕ ಲಾಸ್ ಆಗಿ ಇನ್ಸ್ಟಿಟ್ಯೂಟ್ ಮುಚ್ಚಬೇಕಾದ ಪರಿಸ್ಥಿತಿ ಬಂತು.

    ಮದುವೆಯಲ್ಲಿ 1 ಲಕ್ಷ ರೂ. ಮೌಲ್ಯದ ಉಂಗುರ ಹಾಗೂ ಮದುವೆ ಖರ್ಚು ನೋಡಿಕೊಂಡಿದ್ದೆವು. ವರದಕ್ಷಿಣೆ ಕೊಟ್ರೂ ಹಲ್ಲೆ ನಡೆಸಿ ಹೆಚ್ಚಿನ ಹಣಕ್ಕೆ ಒತ್ತಾಯಿಸಿದ್ದಾರೆ. ಹೀಗಾಗಿ ಜಗಳ ಆಗಿ ನನ್ನನ್ನು ಮನೆಯಿಂದ ಆಚೆ ಹಾಕಿದ್ದರು. ಇದರಿಂದ ನನಗೆ ಹಾಗೂ ನನ್ನ ಮಗನಿಗೆ ತೊಂದರೆಯಾಗುತ್ತೆ, ಒಂದು ವೇಳೆ ಏನಾದರೂ ಆದರೆ ಇವರುಗಳೇ ಕಾರಣ ಎಂದು ಆರೋಪಿಸಿ, ಕ್ರಮಕ್ಕಾಗಿ ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಅಮೆರಿಕದಲ್ಲಿ ವಿನಯ್ & ವಂದಿತಾ ಜೊತೆ ರಮ್ಯಾ ಸುತ್ತಾಟ

  • ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಅಲ್ಲು ಅರ್ಜುನ್ ಜೊತೆ ಪ್ರಶಾಂತ್ ನೀಲ್ ʻರಾವಣಂʼ

    ಟಾಲಿವುಡ್‌ನಿಂದ ಧಮಾಕೇದಾರ್ ಸುದ್ದಿಯೊಂದು ಬಂದಿದೆ. ಅದುವೇ ಅಲ್ಲು ಅರ್ಜುನ್ (Allu Arjun) ಹಾಗೂ ಪ್ರಶಾಂತ್ ನೀಲ್ (Prashanth Neel) ಸೂಪರ್ ಕಾಂಬೋ ಸುದ್ದಿ.

    ಹೌದು. ಅಲ್ಲು ಅರ್ಜುನ್ ಮುಂದಿನ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಾರೆ ಎನ್ನಲಾದ ಸುದ್ದಿ ವೈರಲ್ ಆಗಿದೆ. ಪ್ರಸ್ತುತ ಪ್ರಶಾಂತ್ ನೀಲ್ ಜೂ.ಎನ್‌ಟಿಆರ್ (Jr ntr) ಚಿತ್ರವನ್ನ ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಅಲ್ಲು ಅರ್ಜುನ್ ಅಟ್ಲಿ ಚಿತ್ರಕ್ಕೆ ಡೇಟ್ಸ್ ಕೊಟ್ಟಿದ್ದಾರೆ. ಇಬ್ಬರ ವಿಭಿನ್ನ ಚಿತ್ರಗಳು ಮುಗಿದ ಬಳಿಕ ಪ್ರಶಾಂತ್‌ ನೀಲ್‌ ಜೊತೆಗೆ ಕೈಜೋಡಿಸಲಿದ್ದಾರೆ ಎನ್ನಲಾಗುತ್ತಿದ್ದು ಈ ಚಿತ್ರಕ್ಕೆ `ರಾವಣಂ’ ಎಂಬ ಶೀರ್ಷಿಕೆ ಇಡಲಾಗುತ್ತೆ ಅನ್ನೋದು ಇಂಟ್ರೆಸ್ಟಿಂಗ್ ವಿಚಾರ. ಇದನ್ನೂ ಓದಿ: ಭದ್ರತೆಗೆ ಹೊಸ ಬುಲೆಟ್‌ ಪ್ರೂಫ್‌ ಕಾರು ಖರೀದಿಸಿದ ಸಲ್ಮಾನ್ ಖಾನ್

    ಕೆಜಿಎಫ್ ಚಿತ್ರದ ಮೂಲಕ ಸ್ಟಾರ್ ಡೈರೆಕ್ಟರ್ ಆಗಿರುವ ಪ್ರಶಾಂತ್ ನೀಲ್ ಹಾಗೂ ಪುಷ್ಪ-2 (Pushpa 2) ಮೂಲಕ ಇಂಟರ್‌ನ್ಯಾಶನಲ್ ಸ್ಟಾರ್ ಆಗಿರುವ ಅಲ್ಲು ಅರ್ಜುನ್ ಬಿಗ್ ಬಜೆಟ್ ಸಿನಿಮಾ ಮೇಕರ್ಸ್‌ ಎಂದು ಹೆಸರು ಮಾಡಿದವರು. ಇಬ್ಬರು ಒಂದೇ ಚಿತ್ರಕ್ಕಾಗಿ ಕೈಜೋಡಿಸದ್ರೆ ಆ ಸಿನಿಮಾ ಇನ್ನಿಲ್ಲದ ನಿರೀಕ್ಷೆ ಹುಟ್ಟಿಸೋದ್ರಲ್ಲಿ ಅನುಮಾನವೇ ಇಲ್ಲ. ಅಂದಹಾಗೆ ಈ ಸಿನಿಮಾವನ್ನ ಬಿಗ್ ಬಜೆಟ್‌ನಲ್ಲಿ ಟಾಲಿವುಡ್ ಖ್ಯಾತ ನಿರ್ಮಾಪಕ ದಿಲ್‌ರಾಜು ನಿರ್ಮಿಸಲಿದ್ದಾರೆ. ಸಿನಿಮಾ ಶುರುವಾಗೋದು ಇನ್ನೂ ಎರಡು ವರ್ಷದ ಬಳಿಕ ಎನ್ನಲಾಗುತ್ತಿದೆ. ಇದನ್ನೂ ಓದಿ: ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

    ಸಿನಿಮಾ ಆರಂಭಕ್ಕೂ ಮುನ್ನವೇ ಅಲ್ಲು ನೀಲ್ ಕಾಂಬಿನೇಶನ್ ಚಿತ್ರದ ಶೀರ್ಷಿಕೆ ರಿವೀಲ್ ಆಗಿರುವುದು ವಿಶೇಷ. ಸಾಮಾನ್ಯವಾಗಿ ಬಿಗ್‌ಸ್ಟಾರ್‌ಗಳ ಚಿತ್ರಕ್ಕೆ ಆರಂಭದಲ್ಲೇ ಟೈಟಲ್ ರಿವೀಲ್ ಮಾಡೋದಿಲ್ಲ. ಕಾನ್ಸೆಪ್ಟ್ ಪ್ರಕಾರ ಮಾಡಲಾಗುತ್ತೆ. ಹೀಗಾಗಿ ಶೀರ್ಷಿಕೆ ವಿಚಾರಕ್ಕೆ ಗೊಂದಲ ಇದೆ. ಹಿಂದೆ ಸಂದರ್ಶನವೊಂದರಲ್ಲಿ ಪ್ರಶಾಂತ್ ನೀಲ್ ತಾವು ಚಿತ್ರ ಮಾಡಬೇಕೆನ್ನುವ ಹೀರೋ ಜೊತೆ ಲವ್ ಆದ್ರೆ ಮಾತ್ರ ಅವರ ಜೊತೆ ಸಿನಿಮಾ ಮಾಡ್ತೀನಿ ಎಂದಿದ್ರು. ಇದನ್ನೂ ಓದಿ: ಸುದೀಪ್ `ಬಿಲ್ಲ ರಂಗ ಬಾಷ’ ಸೆಟ್ ರಿವೀಲ್!

    ಹೀಗಾಗಿ ನಿರ್ದೇಶಕ ನೀಲ್ ಆಯ್ಕೆ ಮಾಡಿಕೊಳ್ಳುವ ಹೀರೋ ಇಂಟ್ರೆಸ್ಟಿಂಗ್ ಆಗಿರ್ತಾರೆ. ಇದೀಗ ಅಲ್ಲು ಜೊತೆ ಪ್ರಶಾಂತ್ ನೀಲ್ ಕೈ ಜೋಡಿಸಿರುವುದು ಆರಂಭಿಕ ಮಾತುಕತೆಯಲ್ಲಿ ರಿವೀಲ್ ಆಗಿದೆ. ಇದನ್ನೂ ಓದಿ: ನನ್ನ ಹಂಸಲೇಖ ನಡುವೆ ಮನಸ್ತಾಪ ಯಾಕೆ ಗೊತ್ತಾ – ಕ್ರೇಜಿಸ್ಟಾರ್ ಮನದಾಳ

  • ಆಸ್ಕರ್ ಪ್ರಶಸ್ತಿ ಪುರಸ್ಕೃತ, ಹಾಲಿವುಡ್ ನಿರ್ದೇಶಕ ಪೀಟರ್ ಬಾಗ್ಡಾನವಿಚ್ ನಿಧನ

    ಆಸ್ಕರ್ ಪ್ರಶಸ್ತಿ ಪುರಸ್ಕೃತ, ಹಾಲಿವುಡ್ ನಿರ್ದೇಶಕ ಪೀಟರ್ ಬಾಗ್ಡಾನವಿಚ್ ನಿಧನ

    ವಾಷಿಂಗ್ಟನ್‌: ಆಸ್ಕರ್ ಪ್ರಶಸ್ತಿ ಪುರಸ್ಕೃತ, ಖ್ಯಾತ ಹಾಲಿವುಡ್ ನಿರ್ದೇಶಕ ಪೀಟರ್ ಬಾಗ್ಡಾನವಿಚ್ ನಿಧನವಾಗಿದ್ದಾರೆ. ಹಾಲಿವುಡ್ ಮಂದಿ ಕಂಬನಿ ಮಿಡಿದಿದ್ದಾರೆ.

    ಪೀಟರ್ ಬಾಗ್ಡಾನವಿಚ್( 82) ಅವರು ಗುರುವಾರ (ಜ.6) ಇಹಲೋಕ ತ್ಯಜಿಸಿದ್ದಾರೆ. ಹಲವಾರು ಜನಪ್ರಿಯ ಹಾಲಿವುಡ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಪೀಟರ್ ಬಾಗ್ಡಾನವಿಚ್ ಅವರು ವಿಶ್ವಾದ್ಯಂತ ಅಭಿಮಾನಿಗಳನ್ನು ಹೊಂದಿದ್ದರು. ಅನೇಕ ನಿರ್ದೇಶಕರಿಗೆ ಅವರು ಸ್ಫೂರ್ತಿ ಆಗಿದ್ದರು. ಸಿನಿಮಾ ನಿರ್ದೇಶಕ ಆಗುವುದಕ್ಕೂ ಮುನ್ನ ಅವರು ವಿಮರ್ಶಕನಾಗಿ ಫೇಮಸ್ ಆಗಿದ್ದರು.

    ನಟನಾಗಿಯೂ ಪೀಟರ್ ಬಾಗ್ಡಾನವಿಚ್ ಫೇಮಸ್ ಆಗಿದ್ದರು. ಅನೇಕ ಸಾಕ್ಷ್ಯಚಿತ್ರಗಳನ್ನೂ ಅವರು ನಿರ್ದೇಶಿಸಿದ್ದರು. ಸಿನಿಮಾ ಸಂಬಂಧಿತ ಹಲವು ಕೃತಿಗಳನ್ನು ಕೂಡ ಅವರ ರಚಿಸಿದ್ದರು. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

    ಪ್ರಶಸ್ತಿಗಳು: ಗೋಲ್ಡನ್ ಗ್ಲೋಬ್, ಆಸ್ಕರ್, ಗ್ರ್ಯಾಮಿ ಅವಾರ್ಡ್ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಅವರು ಪಡೆದುಕೊಂಡಿದ್ದರು. 1968ರಲ್ಲಿ ಅವರು ನಿರ್ದೇಶಕನಾಗಿ ಕೆಲಸ ಆರಂಭಿಸಿದರು. 1971ರಲ್ಲಿ ಅವರು ನಿರ್ದೇಶಿಸಿದ ದಿ ಲಾಸ್ಟ್ ಪಿಕ್ಚರ್ ಶೋ ಸಿನಿಮಾ ಸೂಪರ್ ಹಿಟ್ ಆಗಿತ್ತು. 8 ವಿಭಾಗಳಲ್ಲಿ ಆಸ್ಕರ್ ಪ್ರಶಸ್ತಿಗೆ ಆ ಚಿತ್ರ ನಾಮಿನೇಟ್ ಆಗಿತ್ತು. ಇದನ್ನೂ ಓದಿ: ವಯೋಮಿತಿ ಏರಿಕೆ ಭೀತಿ- ಮುಸ್ಲಿಮರು ತರಾತುರಿ ಲಗ್ನ

    ಸಿನಿಮಾಗಳು: ದಿ ಲಾಸ್ಟ್ ಪಿಕ್ಚರ್ ಶೋ, ವಾಟ್ಸಪ್ ಡಾಕ್, ಪೇಪರ್ ಮೂನ್, ಸೇಂಟ್ ಜಾಕ್, ದೇ ಆಲ್ ಲಾಫ್ಡ್, ಮಾಸ್ಕ್ ಹೀಗೆ ಮುಂತಾದ ಸಿನಿಮಾಗಳಾಗಿವೆ. ಇದನ್ನೂ ಓದಿ: ಗರ್ಭಿಣಿ ಅಂತಾ ಸುಳ್ಳಿ ಹೇಳಿ ಮಗುವಿಗೆ ಜನ್ಮ ಕೊಟ್ಟಳು- ಆದರೆ ಕಂದಮ್ಮ ಇಲ್ಲ

  • ಪತ್ನಿಯ ಹುಟ್ಟುಹಬ್ಬಕ್ಕೆ ಶುಭಕೋರಿ ವಿಶೇಷ ಮನವಿ ಸಲ್ಲಿಸಿದ ಪವನ್ ಒಡೆಯರ್

    ಪತ್ನಿಯ ಹುಟ್ಟುಹಬ್ಬಕ್ಕೆ ಶುಭಕೋರಿ ವಿಶೇಷ ಮನವಿ ಸಲ್ಲಿಸಿದ ಪವನ್ ಒಡೆಯರ್

    ಬೆಂಗಳೂರು: ನಿರ್ದೇಶಕ ಪವನ್ ಒಡೆಯರ್ ತಮ್ಮ ಪತ್ನಿ, ನಟಿ ಅಪೇಕ್ಷಾ ಪುರೋಹಿತ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ ವಿಶೇಷ ಮನವಿಯೊಂದನ್ನು ಸಲ್ಲಿಸಿದ್ದಾರೆ.

    ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪತ್ನಿಯ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿರುವ ಪವನ್ ಒಡೆಯರ್, ಅದ್ಭುತ ಸ್ನೇಹಿತೆ, ಮಹಾನ್ ವಾಗ್ಮಿ, ಈ ಒಡೆಯರ್‍ನ ಸಂಪೂರ್ಣ ಜೀವನದ ಒಡತಿ. ಈ ನಿನ್ನ ಹುಟ್ಟುಹಬ್ಬದ ದಿನದಂದು ನನ್ನ ಒಂದು ಬಿನ್ನಹ, ಗೂಗಲ್‍ಗೂ ಕನ್‍ಫ್ಯೂಸ್ ಮಾಡುವಂಥ ಪ್ರಶ್ನೆಗಳನ್ನು ಸ್ವಲ್ಪ ಕಡಿಮೆ ಮಾಡ್ಕೋ ಬಂಗಾರಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಎಂತಹ ಕಷ್ಟ ಬಂದ್ರೂ ಎದುರಿಸೋದನ್ನ ಕಲಿಸಿರುವುದೇ ದರ್ಶನ್ ಸರ್: ಪವನ್ ಒಡೆಯರ್

    ಪತ್ನಿಯ ಹುಟ್ಟುಹಬ್ಬಕ್ಕೆ ಪವನ್ ಒಡೆಯರ್ ಕಾರ್ ಗಿಫ್ಟ್ ನೀಡಿದ್ದಾರೆ. ಪವನ್ ಒಡೆಯರ್ ಮತ್ತು ನಟಿ ಅಪೇಕ್ಷಾ ಅವರು 2018ರ ಮೇ 20ರಂದು ಬಾಗಲಕೋಟೆ ಜಿಲ್ಲೆಯ ವಿದ್ಯಾಗಿರಿಯಲ್ಲಿರುವ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದರು.

    ಅಪೇಕ್ಷಾ ಪುರೋಹಿತ್ ಬಾಗಲಕೋಟೆಯ ಮೂಲದವರಾಗಿದ್ದು, ಕನ್ನಡದ ಕಿರುತೆರೆ ನಟಿಯಾಗಿ ‘ತ್ರಿವೇಣಿ ಸಂಗಮ’, ‘ಕಿನ್ನರಿ’, ‘ಸಾಗುತ ದೂರ ದೂರ’ ‘ಮರಳಿ ಬಂದಳು ಸೀತೆ’ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. ಅಲ್ಲದೇ ಟಿಎನ್ ಸೀತಾರಾಮ್ ಅವರ `ಕಾಫೀ ತೋಟ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಬೆಳ್ಳಿ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು.

    ನಿರ್ದೇಶಕ ಪವನ್ ಒಡೆಯರ್ ‘ರಣವಿಕ್ರಮ’, ‘ನಟರಾಜ ಸರ್ವಿಸ್’, ‘ಗೂಗ್ಲಿ’, ‘ಗೋವಿಂದಾಯ ನಮಃ’ ಹಾಗೂ ‘ನಟ ಸಾರ್ವಭೌಮ’ ಸಿನಿಮಾಗಳನ್ನು ಮಾಡಿದ್ದಾರೆ.