Tag: film news

  • ನಟ ಚೇತನ್ ಬಂಧನ ಅಕ್ರಮ: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ

    ನಟ ಚೇತನ್ ಬಂಧನ ಅಕ್ರಮ: ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ

    ಕಳೆದ ಮೂರು ದಿನಗಳಿಂದ ನಟ ಚೇತನ್ ಬಂಧನದ ಬಗ್ಗೆ ಪರ ವಿರೋಧ ಚರ್ಚೆ ಶುರುವಾಗಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಸುದೀರ್ಘ ಪತ್ರ ಬರೆದಿರುವ ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ, ಪೊಲೀಸ್ ನಡೆಯ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ನಿರ್ಮಾಪಕರಿಗೇ ಚಮಕ್ ಕೊಟ್ಟ ಫ್ಯಾನ್ಸ್ : ಮೋದಿ ಪತ್ರದ ಅಸಲಿಯತ್ತೇನು?

    ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಎರಡು ಪುಟಗಳ ಪತ್ರ ಬರೆದು, “ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸುವಾಗ ಕೆಲ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುಪ್ರಿಂಕೋರ್ಟ್ ಹೇಳಿದೆ. ಈ ಕ್ರಮಗಳನ್ನು ಮೀರಿ ಚೇತನ್ ಅಹಿಂಸಾರನ್ನು ಶೇಷಾದ್ರಿಪುರಂ ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ. ಈ ಬಗ್ಗೆ ಒಂದು ಸೊಮೋಟೊ ಕಂಟ್ಮೆಂಪ್ಟ್ ಆಫ್ ಕೋರ್ಟ್ ಕೇಸನ್ನು ಶೇಷಾದ್ರಿಪುರಂ ಪೊಲೀಸರ ಮೇಲೆ ಯಾಕೆ ದಾಖಲಿಸಬಾರದು?” ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ : ಅಶರೀರವಾಣಿ ಆಲ್ಬಂಗೆ ನೀನಾಸಂ ಸತೀಶ್ ಸಿಂಗರ್ : ಮಗಳೊಂದಿಗೆ ಹಾಡಿದ ಸ್ಟಾರ್ ನಟ

    https://twitter.com/Anupamashenoy2/status/1496343450564067328

    ಅಲ್ಲದೇ, “ದುರ್ಬಲರು, ಧ್ವನಿ ರಹಿತರ ಪರವಾಗಿ ಧ್ವನಿಯಾಗಲು ಅಥವಾ ಸಾರ್ವಜನಿಕ ವ್ಯವಸ್ಥೆ ಕುಸಿದಾಗ ಪೊಲೀಸರೇ ಸೊಮೊಟೋ ಕೇಸ್ ದಾಖಲಿಸುತ್ತಾರೆ. ಪೊಲೀಸರಿಗೆ ಎಫ್ಐಆರ್ ದಾಖಲಿಸಲು ಕರ್ನಾಟಕದಲ್ಲಿ ಅಪರಾಧಿಗಳ ಕೊರತೆಯಿದ್ದು, ಅದಕ್ಕಾಗಿ ಏನಾದರೂ ನೆಟ್ಟಿಗರ ಮೇಲೆ ಎಫ್‍ಐಆರ್ ದಾಖಲಿಸುತ್ತೀರಿ ಎಂದಾದರೆ, ಪೊಲೀಸ್ ಇಲಾಖೆಯಲ್ಲೇ ನಡೆಯುತ್ತಿರುವ ಭ್ರಷ್ಟಾಚಾರ, ಅನಾಚಾರಗಳ ಮಾಹಿತಿಯನ್ನು ನಾನು ನೀಡುತ್ತೇನೆ. ಅವುಗಳ ಮೇಲೆ ನೀವು ಸೋ ಮೋಟೋ ಎಫ್‍ಐಆರ್ ದಾಖಲಿಸಿ” ಎಂದು ಪೊಲೀಸ್ ಇಲಾಖೆಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ : ನಾನು ರಾಧಿಕಾ ಕುಮಾರಸ್ವಾಮಿ’.. ನಿಮ್ಮೊಂದಿಗೆ..

    ನಟ ಚೇತನ್ ಬಂಧನದ ಕುರಿತು ಅನುಪಮಾ ಶೆಣೈ ಸರಣಿಯಾಗಿವಾಗಿ ಟ್ವಿಟ್ ಮಾಡಿದ್ದು, ಪೊಲೀಸರ ನಡೆ ಅನುಮಾನಾಸ್ಪದವಾಗಿದೆ. ಹಾಗಾಗಿ ಇದು ಸರಿಯಾದ ನಡೆಯಲ್ಲ ಎಂದು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

  • ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು

    ನಟ ಚೇತನ್ ಕಾಣೆಯಾಗಿದ್ದಾರೆ ಎಂದು ಪತ್ನಿ ದೂರು

    ನೆಯಲ್ಲಿದ್ದ ಚೇತನ್ ಅವರನ್ನು ಯಾರೋ ಕಿಡ್ನಾಪ್ ಮಾಡಿದ್ದಾರೆ ಎಂದು ನಟ ಚೇತನ್ ಪತ್ನಿ ಮೇಘಾ ಫೇಸ್ ಬುಕ್ ಲೈವ್ ನಲ್ಲಿ ಹೇಳಿಕೊಂಡಿದ್ದಾರೆ. ಮನೆಯಲ್ಲಿದ್ದವರು ಏಕಾಏಕಿ ಕಾಣಿಸದೇ ಇದ್ದಾಗ, ನಾನು ಮನೆಯಲ್ಲಾ ಹುಡುಕಿದೆ, ಚೇತನ್ ಎಲ್ಲಿ ಎಂದು ಅಲ್ಲೇ ಇದ್ದವರನ್ನು ಕೇಳಿದಾಗ ಪೊಲೀಸ್ ನವರು ಕರೆದುಕೊಂಡು ಹೋದರು ಎಂದು ಹೇಳಿದರು. ನಾನು ಶೇಷಾದ್ರಿಪುರಂ ಪೊಲೀಸ್ ಠಾಣೆಯನ್ನು ಸಂಪರ್ಕ ಮಾಡಿದೆ. ಅವರಿಂದ ಸಕಾರಾತ್ಮಕವಾಗಿ ಉತ್ತರ ಸಿಗುತ್ತಿಲ್ಲ. ಅವರು ಅರೆಸ್ಟ್ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಚೇತನ್ ಮತ್ತು ಅವರ ಅಂಗರಕ್ಷಕರ ಫೋನ್ ಕರೆ ಕೂಡ ಸಿಗುತ್ತಿಲ್ಲ. ನಿಜ ಅರ್ಥದಲ್ಲಿ ನನ್ನ ಪತಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಮೇಘಾ ಆರೋಪ ಮಾಡಿದ್ದಾರೆ. ಇದನ್ನೂ ಓದಿ : ಸಿಂಪಲ್ಲಾಗೊಂದ್ ಲವ್ ಸ್ಟೋರಿಯಲ್ಲಿ ನಟಿಸಿದ್ದ ಆರ್.ಜೆ ರಚನಾ

    ಪೊಲೀಸ್ ನವರು ಅವರನ್ನು ಬಂಧಿಸಿದ್ದರೆ, ಯಾವ ಕಾರಣಕ್ಕಾಗಿ ಎನ್ನುವುದನ್ನು ಸ್ಪಷ್ಟಪಡಿಸಬೇಕಿತ್ತು. ಅಥವಾ ಮನೆಯವರಿಗೆ ಮಾಹಿತಿ ನೀಡಬೇಕಿತ್ತು. ಯಾವುದೇ ನೋಟಿಸ್ ನೀಡದೇ, ಮನೆಯವರಿಗೂ ಮಾಹಿತಿ ಕೊಡದೇ ಏಕಾಏಕಿ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್ ನವರ ಕಸ್ಟಡಿಯಲ್ಲಿ ನನ್ನ ಪತಿ ಇಲ್ಲದೇ ಇದ್ದರೆ, ಅವರನ್ನು ಕಿಡ್ನ್ಯಾಪ್ ಮಾಡಿದ್ದು ಯಾರು ಎಂದಾದರೂ ಗೊತ್ತಾಗಬೇಕಿದೆ ಎಂದಿದ್ದಾರೆ ಮೇಘಾ.

  • ಸಿಂಪಲ್ಲಾಗೊಂದ್ ಲವ್ ಸ್ಟೋರಿಯಲ್ಲಿ ನಟಿಸಿದ್ದ ಆರ್.ಜೆ ರಚನಾ

    ಸಿಂಪಲ್ಲಾಗೊಂದ್ ಲವ್ ಸ್ಟೋರಿಯಲ್ಲಿ ನಟಿಸಿದ್ದ ಆರ್.ಜೆ ರಚನಾ

    ಹೃದಯಾಘಾತದಿಂದ ಇಂದು ನಿಧನರಾಗಿರುವ ಆರ್.ಜೆ. ರಚನಾ ಸಿನಿಮಾದಲ್ಲಿಯೂ ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ವೃತ್ತಿ ಬದುಕಿಗೆ ಬಹುದೊಡ್ಡ ಬ್ರೇಕ್ ನೀಡಿದ್ದ ‘ಸಿಂಪಲ್ಲಾಗೊಂದ್ ಲವ್ ಸ್ಟೋರಿ’ ಸಿನಿಮಾದಲ್ಲಿ ಆರ್.ಜೆ ರಚನಾ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದರು. ಈ ಸಿನಿಮಾದಲ್ಲಿ ಅವರು ಆರ್.ಜೆ ಆಗಿಯೇ ಕಾಣಿಸಿಕೊಂಡಿದ್ದು ವಿಶೇಷ. ಇದನ್ನೂ ಓದಿ : ಸಾವಿನಲ್ಲೂ ಸಾರ್ಥಕತೆ ಮೆರೆದ ರಚನಾ ಕುಟುಂಬ

     

    ಸಿನಿಮಾದ ನಾಯಕನ ಪಾತ್ರ ತನ್ನ ಹುಡುಗಿಯ ಜತೆ ಟ್ರಾವೆಲ್ ಮಾಡಿದರೆ, ರೇಡಿಯೋ ಸ್ಟೇಶನ್ ನಲ್ಲಿ ಕುಳಿತುಕೊಂಡೇ ಇಡೀ ಕಥೆಯನ್ನು ರಚನಾ ಹೇಳುತ್ತಾ ಹೋಗುವುದು ಸಿನಿಮಾದ ವಿಶೇಷಗಳಲ್ಲಿ ಒಂದು. ಇದನ್ನೂ ಓದಿ : ಕಂಚಿನ ಕಂಠದ ಆರ್.ಜೆ ರಚನಾ ಹೃದಯಾಘಾತದಿಂದ ನಿಧನ

    ರಚನಾ ಅವರ ಧ್ವನಿಯೇ ಈ ಪಾತ್ರಕ್ಕೆ ಆಯ್ಕೆ ಮಾಡಿಸಿತ್ತು ಎನ್ನುತ್ತಾರೆ ನಿರ್ದೇಶಕ ಸುನಿ. ರಚನಾ ಅವರ ಧ್ವನಿಯಲ್ಲಿ ಮೋಡಿ ಮಾಡುವಂತಹ ಶಕ್ತಿಯಿದೆ. ಅಲ್ಲದೇ, ಜನರಿಗೆ ಮನದಟ್ಟು ಮಾಡುವಂತಹ ಕಲೆಯೂ ಇದೆ. ಅದನ್ನು ನಾನು ಗುರುತಿಸಿಯೇ ಆ ಪಾತ್ರವನ್ನು ಅವರಿಗೆ ನೀಡಿದ್ದು ಎಂದಿದ್ದರು ಸಿಂಪಲ್ ಸುನಿ. ಇದನ್ನೂ ಓದಿ : ವೇದಿಕಾಗೆ ಸಿಕ್ತು ಬಂಪರ್ ಆಫರ್

    2013ರಲ್ಲಿ ಈ ಸಿನಿಮಾ ತೆರೆ ಕಂಡಾಗ ಸ್ವತಃ ರಚನಾ ಅವರೇ ಸಂಭ್ರಮದಿಂದ ಹಲವು ವಿಷಯಗಳನ್ನು ಹಂಚಿಕೊಂಡಿದ್ದರು. ತಂಡದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದರು. ಮತ್ತೆ ಮತ್ತೆ ಸಿನಿಮಾದಲ್ಲಿ ನಟಿಸುವ ಆಸೆಯನ್ನೂ ಅವರು ವ್ಯಕ್ತ ಪಡಿಸಿದ್ದರು.

  • ಮೊಗ್ಗಿನ ಮನಸು ಚಿತ್ರಕ್ಕೂ ಲವ್ 360 ಸಿನಿಮಾಗೂ ಇರೋ ಸಂಬಂಧ ಏನು?

    ಮೊಗ್ಗಿನ ಮನಸು ಚಿತ್ರಕ್ಕೂ ಲವ್ 360 ಸಿನಿಮಾಗೂ ಇರೋ ಸಂಬಂಧ ಏನು?

    ನ್ನಡದ ಹೆಸರಾಂತ ನಿರ್ದೇಶಕ ಶಶಾಂಕ್ ಸದ್ದಿಲ್ಲದೇ ತಮ್ಮ ‘ಲವ್ 360’ ಹೊಸ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ಕ್ಯೂಟ್ ಆಗಿರೋ ಲವ್ ಸ್ಟೋರಿಯನ್ನು ಸಿನಿಮಾವಾಗಿಸಿರುವ ಅವರು ಈ ಸಿನಿಮಾದಲ್ಲೂ ಹೊಸ ಹೊಸ ಪ್ರಯೋಗಗಳನ್ನು ಮಾಡಿದ್ದಾರೆ. ಸಿನಿಮಾದ ನಾಯಕ ತನ್ನ ಹುಡುಗಿಗಾಗಿ 360 ಡಿಗ್ರಿ ಯೋಚಿಸುವಂತಹ ಕಥಾ ಹಂದರವನ್ನು ಈ ಚಿತ್ರ ಹೊಂದಿದ್ದು, ಇಬ್ಬರು ಹೊಸ ಕಲಾವಿದರು ಈ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಪರಿಚಯವಾಗುತ್ತಿದ್ದಾರೆ. ಇದನ್ನೂ ಓದಿ : ನಾಗಿಣಿ 2 ಧಾರಾವಾಹಿಗೆ ಬಂದ ತಿಥಿ ಖ್ಯಾತಿಯ ಸೆಂಚ್ಯುರಿ ಗೌಡ, ಗಡ್ಡಪ್ಪ

    ಶಶಾಂಕ್ ಅಂದಾಕ್ಷಣ ಥಟ್ಟನೆ ನೆನಪಾಗುವ ಚಿತ್ರ ಮೊಗ್ಗಿನ ಮನಸು. ಬಾಕ್ಸ್ ಆಫೀಸಿನಲ್ಲಿ ಭಾರೀ ಸದ್ದು ಮಾಡಿದ ಚಿತ್ರವಿದು. ಶತದಿನೋತ್ಸವ ಕಂಡ ಎವರ್ ಗ್ರೀನ್ ಸಿನಿಮಾ. ಅನೇಕ ಕಲಾವಿದರ ವೃತ್ತಿ ಬದುಕಿಗೆ ಬಹುದೊಡ್ಡ ತಿರುವು ನೀಡಿದ ಹೆಗ್ಗಳಿಕೆ ಈ ಚಿತ್ರದ್ದು. ಈ “ಮೊಗ್ಗಿನ ಮನಸು” ಚಿತ್ರಕ್ಕೂ ಶಶಾಂಕ್ ಅವರು ಈಗ ನಿರ್ದೇಶನ ಮಾಡಿರುವ “ಲವ್ 360” ಚಿತ್ರಕ್ಕೂ ಸಂಬಂಧವಿದೆ. ಇದನ್ನೂ ಓದಿ : ಪುನೀತ್ ಅವರ ದ್ವಿತ್ವ ಸಿನಿಮಾದ ಮೇಲೆ ಹಲವರ ಕಣ್ಣು

    ಯಶ್-ರಾಧಿಕಾಗೆ ಬ್ರೇಕ್ ನೀಡಿದ್ದ ಶಶಾಂಕ್

    ಮೊಗ್ಗಿನ ಮನಸು ಸಿನಿಮಾದ ಮೂಲಕ ಯಶ್ ಮತ್ತು ರಾಧಿಕಾ ಪಂಡಿತ್ ಅವರ ವೃತ್ತಿ ಬದುಕಿಗೆ ಬ್ರೇಕ್ ನೀಡಿದವರು ಶಶಾಂಕ್. ಈ ಸಿನಿಮಾದಿಂದಾಗಿ ಈ ಇಬ್ಬರೂ ಕಲಾವಿದರು ಸಿನಿಮಾ ರಂಗದಲ್ಲಿ ಗಟ್ಟಿಯಾಗಿ ನೆಲೆಯೂರಿದರು. ಶಶಾಂಕ್ ಅವರ ಮೊದಲ ಸಿನಿಮಾ ಸಿಕ್ಸರ್ ಕೂಡ ಪ್ರಜ್ವಲ್ ದೇವರಾಜ್ ಬಹುದೊಡ್ಡ ಬ್ರೇಕ್ ನೀಡಿತ್ತು. ತಮ್ಮ ಮೊದಲೆರಡು ಚಿತ್ರಗಳಲ್ಲಿ ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿರುವ ಶಶಾಂಕ್, ಲವ್ 360 ಚಿತ್ರದಲ್ಲೂ ಹೊಸ ನಾಯಕ ನಾಯಕಿಯರನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : ಹರ್ಷ ಸಾವಿಗೆ ಸ್ಯಾಂಡಲ್ ವುಡ್, ಬಾಲಿವುಡ್ ಕಲಾವಿದರ ಆಕ್ರೋಶ

    ಈ ಸಿನಿಮಾದ ಮೂಲಕ ಪ್ರವೀಣ್ ಎಂಬ ಹೊಸ ಕಲಾವಿದ ಸ್ಯಾಂಡಲ್ ವುಡ್ ಗೆ ಪರಿಚಯ ಆಗುತ್ತಿದ್ದಾರೆ. ವೈದ್ಯಕೀಯ ಪದವಿ ಮುಗಿಸಿರುವ ಪ್ರವೀಣ್ ಗೆ ಲವ್ 360 ಚೊಚ್ಚಲು ಸಿನಿಮಾ. ಅಲ್ಲದೇ, ನಾಯಕಿಯಾಗಿ ರಚನಾ ಇಂದರ್ ಅವರಿಗೆ ಇದು ಹೊಸ ಸಿನಿಮಾ. ಹಾಗಾಗಿ ಮೊಗ್ಗಿನ ಮನಸು ಸಿನಿಮಾದಷ್ಟೇ ಈ ಚಿತ್ರ ಕೂಡ ಫ್ರೆಶ್ ಆಗಿ ಇರಲಿದೆಯಂತೆ.  ಇದನ್ನೂ ಓದಿ : ಸ್ಮಾರಕವಾಗಲಿದೆ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಮನೆ

    ಮೊಗ್ಗಿನ ಮನಸು ಚಿತ್ರೀಕರಣದ ನೆನಪು

    ಸಿನಿಮಾದ ಕಥೆ ನಡೆಯುವುದು ಗೋಕರ್ಣದಲ್ಲಿ. ಹಾಗಾಗಿ ಆ ಭಾಗದಲ್ಲೇ ಅತೀ ಹೆಚ್ಚು ದೃಶ್ಯಗಳನ್ನು ಸೆರೆ ಹಿಡಿದಿದ್ದಾರಂತೆ ಶಶಾಂಕ್. ಮಂಗಳೂರು, ಕಾಸರಗೋಡು, ಬೆಂಗಳೂರು ಸೇರಿದಂತೆ ಹಲವು ಕಡೆ ಈ ಸಿನಿಮಾದ ಚಿತ್ರೀಕರಣ ನಡೆದಿದೆ. ಮೊಗ್ಗಿನ ಮನಸು ಸಿನಿಮಾದ ಶೂಟಿಂಗ್ ಕೂಡ ಇದೇ ಭಾಗದಲ್ಲೇ ನಡೆದಿರುವುದು ವಿಶೇಷ. “ಲವ್ 360 ಸಿನಿಮಾದ ಶೂಟಿಂಗ್ ಗಾಗಿ ಕರಾವಳಿಯ ಅನೇಕ ಭಾಗಗಳನ್ನು ಸುತ್ತಾಡಿದೆ.

    ದಶಕದ ಹಿಂದೆ ಈ ಜಾಗಗಳಲ್ಲೇ ನಾನು ಮೊಗ್ಗಿನ ಮನಸು ಚಿತ್ರೀಕರಣ ಮಾಡಿದ್ದೆ. ಹಲವು ನೆನಪುಗಳು ಮತ್ತೆ ಮರುಕಳಿಸಿದೆವು. ಹೊಸ ಸಿನಿಮಾ ಕ್ಯೂಟ್ ಲವ್ ಸ್ಟೋರಿಯನ್ನು ಒಳಗೊಂಡಿದೆ. ಹಾಗಾಗಿ ಕರಾವಳಿಯ ಪ್ರದೇಶವೇ ಶೂಟಿಂಗ್ ಗೆ ಬೇಕಾಗಿತ್ತು” ಎನ್ನುತ್ತಾರೆ ಶಶಾಂಕ್.

  • ಪುನೀತ್ ಅವರ ದ್ವಿತ್ವ ಸಿನಿಮಾದ ಮೇಲೆ ಹಲವರ ಕಣ್ಣು

    ಪುನೀತ್ ಅವರ ದ್ವಿತ್ವ ಸಿನಿಮಾದ ಮೇಲೆ ಹಲವರ ಕಣ್ಣು

    ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಪುನೀತ್ ರಾಜ್ ಕುಮಾರ್ ‘ದ್ವಿತ್ವ’ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಬೇಕಿತ್ತು. ಸಿನಿಮಾದ ಟೈಟಲ್ ಲಾಂಚ್ ಮಾಡಿದ್ದರು, ಫಸ್ಟ್ ಲುಕ್ ಬಿಡುಗಡೆ ಕೂಡ ಆಗಿತ್ತು. ಸ್ಕ್ರಿಪ್ಟ್ ವರ್ಕ್ ಬಹುತೇಕ ಮುಗಿದಿತ್ತು. ಪುನೀತ್ ನಿಧನಕ್ಕೂ ಎರಡು ದಿನ ಮುಂಚೆ ಕಾಸ್ಟ್ಯೂಮ್ ಬಗ್ಗೆ ನಿರ್ದೇಶಕ ಲೂಸಿಯಾ ಪವನ್ ಕುಮಾರ್ ಜತೆ ಮಾತೂ ಕೂಡ ಆಡಿದ್ದರು. ವಿಧಿಯಾಟಕ್ಕೆ ಪುನೀತ್ ಬಲಿಯಾದರು. ಇದನ್ನೂ ಓದಿ : ಹರ್ಷ ಸಾವಿಗೆ ಸ್ಯಾಂಡಲ್ ವುಡ್, ಬಾಲಿವುಡ್ ಕಲಾವಿದರ ಆಕ್ರೋಶ

    ಪುನೀತ್ ರಾಜ್ ಕುಮಾರ್ ನಿಧನಕ್ಕೂ ಮುನ್ನ ಐದು ಚಿತ್ರಗಳನ್ನು ಒಪ್ಪಿಕೊಂಡಿದ್ದರು. ಮೊದಲು ದ್ವಿತ್ವ ಆಗಬೇಕಿತ್ತು. ನಂತರ ತಮ್ಮದೇ ಬ್ಯಾನರ್ ನ ಚಿತ್ರದಲ್ಲಿ ಅವರು ನಟಿಸಬೇಕಿತ್ತು. ಈ ಚಿತ್ರಕ್ಕೆ ಜೇಕಬ್ ವರ್ಗಿಸ್ ನಿರ್ದೇಶಕರು. ಸ್ವತಃ ಪುನೀತ್ ಅವರೇ ಈ ಚಿತ್ರದ ಕಥೆಯಲ್ಲಿ ಭಾಗಿಯಾಗಿದ್ದರು. ನಂತರ ಮಾಡಬೇಕಾಗಿದ್ದ ಚಿತ್ರ ಸಿನಿಮಾಟೋಗ್ರಾಫರ್ ಕಂ ನಿರ್ದೇಶಕ ಕೃಷ್ಣ ಅವರ ಜತೆಗಿನ ಸಿನಿಮಾ. ಇವುಗಳ ಹೊರತಾಗಿಯೂ ದಿನಕರ್ ತೂಗುದೀಪ್, ಸಂತೋಷ್ ಆನಂದ್ ರಾಮ್ ಜತೆಯೂ ಅವರು ಒಂದೊಂದು ಸಿನಿಮಾ ಮಾಡಬೇಕಿತ್ತು. ಇವೆಲ್ಲವನ್ನೂ ಬದಿಗೆ ಸರಿಸಿ ಅಪ್ಪು ಹೊರಟೇ ಬಿಟ್ಟರು. ಇದನ್ನೂ ಓದಿ : ಸ್ಮಾರಕವಾಗಲಿದೆ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಮನೆ

    ಪುನೀತ್ ರಾಜ್ ಕುಮಾರ್ ಇಲ್ಲದೇ ನನ್ನ ಕಥೆಯನ್ನು ಸಿನಿಮಾ ಮಾಡಲಾರೆ ಎಂದು ನಿರ್ದೇಶಕ ಜೇಕಬ್ ಘೋಷಿಸಿಯಾಗಿದೆ. ಉಳಿದವರು ಇನ್ನೂ ಕಥೆ ಹೆಣೆಯುವುದರಲ್ಲಿ ಇದ್ದರು. ಆದರೆ, ಇನ್ನೇನು ಶುರುವಾಗಬೇಕಿದ್ದ ‘ದ್ವಿತ್ವ’ ಸಿನಿಮಾ ಏನಾಗುತ್ತದೆ ಎನ್ನುವ ಚರ್ಚೆ ಗಾಂಧಿನಗರದಲ್ಲಿ ಶುರುವಾಗಬೇಕಿತ್ತು. ಅದಕ್ಕೀಗ ಉತ್ತರ ಸಿಗುವ ಕಾಲ ಬಂದಿದೆ. ಇದೇ ಸಿನಿಮಾವನ್ನು ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವ ರಾಜ್ ಕುಮಾರ್ ಮಾಡಲಿ ಎನ್ನುವುದು ಅಭಿಮಾನಿಗಳ ಆಸೆ ಕೂಡ ಆಗಿದೆ. ಜತೆಗೆ ಸ್ಟಾರ್ ನಟರಿಗೂ ಈ ಕಥೆಯ ಮೇಲೆ ಕಣ್ಣು ಬಿದ್ದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್

    ಯಾವುದೇ ಕಾರಣಕ್ಕೂ ಈ ಸಿನಿಮಾ ನಿಲ್ಲುವುದಿಲ್ಲ. ಸಮರ್ಥ ಕಲಾವಿದರನ್ನು ಆಯ್ಕೆ ಮಾಡಿಕೊಂಡು ಚಿತ್ರವನ್ನು ಮುಂದುವರೆಸುತ್ತೇವೆ. ಪುನೀತ್ ಅವರ ನೆನಪಿನಲ್ಲಿಯೇ ಈ ಸಿನಿಮಾ ಮಾಡುತ್ತೇವೆ ಎನ್ನುವ ಮೂಲಕ ಚಿತ್ರ ಆಗುವ ಕುರಿತು ಮುನ್ಸೂಚನೆ ನೀಡಿದೆ ಚಿತ್ರತಂಡ.

  • ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್

    ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್

    ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳ ಹೊಂದಿರುವ ನಟ ಕಿರಣ್ ರಾಜ್ ಇದೀಗ ‘ಬಡ್ಡೀಸ್’ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದು, ಯು.ಎಸ್.ಎ ವಾಸಿ‌ ನಿಭಾ ಶೆಟ್ಟಿ‌ ಈ ಚಿತ್ರದ ಮೂಲಕ ಸಿನಿಮಾಟೋಗ್ರಾಫರ್ ಆಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಸಿನಿಮಾಗಳಿಗೆ ಹಾಗೂ ಜಾಹೀರಾತು ಚಿತ್ರಗಳಿಗೆ ಈಗಾಗಲೇ ನಿಭಾ ಶೆಟ್ಟಿ ಕೆಲಸ ಮಾಡಿದ್ದು, ಇವರು ಪ್ರತಿಷ್ಠಿತ ಎಮ್ಮಿ ಅವಾರ್ಡ್ ಗೆ ನಾಮಿನೇಟರ್ ಎನ್ನುವುದು ವಿಶೇಷ. ಇದನ್ನೂ ಓದಿ : ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿದ ಕಾಮಿಡಿ ಕಿಲಾಡಿ ಜೋಡಿ


    ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದ್ದು ಬೆಂಗಳೂರು, ಮಂಗಳೂರು, ಗೋವಾ, ತುಮಕೂರು ಮುಂತಾದ ಕಡೆ ಚಿತ್ರೀಕರಣ ನಡೆಸಿದೆ. ಇನ್ನೂ ಕೆಲವೇ ದಿನಗಳಲ್ಲೇ ಫಸ್ಟ್ ಲುಕ್ ಕೂಡ ರಿಲೀಸ್ ಆಗಲಿದೆ ಎಂದಿದೆ ಚಿತ್ರತಂಡ. ಇದನ್ನೂ ಓದಿ : ನಟ ಧನ್ವೀರ್ ಮೇಲೆ ನಿಲ್ಲುತ್ತಿಲ್ಲ ದಾಳಿ : ದಾಳಿ ಹಿಂದೆ ಸ್ಟಾರ್ ನಟರ ಕೈವಾಡ?


    ಸ್ನೇಹದ ಮಹತ್ವ ಸಾರುವ ಸಿನಿಮಾ ಇದಾಗಿದ್ದು, ಸ್ನೇಹಕ್ಕೆ ಪ್ರಾಣವನ್ನೇ ಕೊಡುವಂತ ಸ್ನೇಹಿತನ ಪಾತ್ರದಲ್ಲಿ ಕಿರಣ್ ಕಾಣಿಸಿಕೊಂಡಿದ್ದಾರೆ. ಮಂಗಳೂರು ಮೂಲದ ಭಾರತಿ ಶೆಟ್ಟಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಇವರು ಪ್ರಸ್ತುತ ದುಬೈ ನಿವಾಸಿಯಾಗಿದ್ದಾರೆ. ಅಲ್ಲಿ ಜಾಹೀರಾತು ಸಂಸ್ಥೆಯೊಂದನ್ನು ನಡೆಸುತ್ತಿದ್ದಾರೆ‌. ಇದನ್ನೂ ಓದಿ : ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?


    ಗುರುತೇಜ್ ಶೆಟ್ಟಿ ಈ ಸಿನಿಮಾದ ನಿರ್ದೇಶಕರು. ಈ ಹಿಂದೆ ಗುರುವೇಂದ್ರ ಶೆಟ್ಟಿ ಎಂಬ ಹೆಸರಿನಿಂದ ಚಿತ್ರವೊಂದನ್ನು ಇವರು ನಿರ್ದೇಶಿಸಿದ್ದರು.
    ಕಿರಣ್ ರಾಜ್ ಗೆ ನಾಯಕಿಯಾಗಿ ಸಿರಿ ಪ್ರಹ್ಲಾದ್ ನಟಿಸಿದ್ದು ಗೋಪಾಲ್ ದೇಶಪಾಂಡೆ, ಅರವಿಂದ್ ಬೋಳಾರ್, ವಿನಯ್ ರೋಹನ್ ಸಾಯಿ, ಗಿರೀಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

  • ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?

    ಶಬ್ದ ಚಿತ್ರದ ವಿಭಿನ್ನ ಪಾತ್ರದಲ್ಲಿ ಮೇಘನಾ ರಾಜ್ : ನಿರ್ದೇಶಕ ಕಾಂತ ಹೇಳಿದ್ದೇನು?

    ತಿ ಚಿರಂಜೀವಿ ಸರ್ಜಾ ನಿಧನಾನಂತರ ನಟಿ ಮೇಘನಾ ರಾಜ್ ಯಾವುದೇ ಸಿನಿಮಾಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಪನ್ನಗಭರಣ ಚಿತ್ರದಲ್ಲಿ ಅವರು ನಟಿಸಲಿದ್ದಾರೆ ಎನ್ನುವ ಸುದ್ದಿಯಿದ್ದರೂ, ಅದಿನ್ನೂ ತಡ. ಅದಕ್ಕೂ ಮುನ್ನ ಅವರು ‘ಶಬ್ದ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಈಗಾಗಲೇ ಮೂರು ದಿನಗಳ ಕಾಲ ಸಿನಿಮಾದ ಶೂಟಿಂಗ್ ಕೂಡ ನಡೆದಿದ್ದು, ಈ ಕುರಿತು ಪಬ್ಲಿಕ್ ಟಿವಿ ಜತೆ ನಿರ್ದೇಶಕ ಕಾಂತ ಕನ್ನಳ್ಳಿ ಮಾತನಾಡಿದ್ದಾರೆ. ಇದನ್ನೂ ಓದಿ : ಡಿಸೆಂಬರ್ ನಲ್ಲಿ ರಶ್ಮಿಕಾ ಮಂದಣ್ಣ -ದೇವರಕೊಂಡ ಮದುವೆ? ಏನಿದು ಮ್ಯಾರೇಜ್ ಕಹಾನಿ

    ಕ್ರೈಂ ಥಿಲ್ಲರ್ ಸ್ಟೋರಿ
    ಮೇಘನಾ ರಾಜ್ ನಟಿಸುತ್ತಿರುವ ಶಬ್ದ ಸಿನಿಮಾ ಮಿಸ್ಟೀರಿಯಸ್ ಕ್ರೈಂ ಥ್ರಿಲ್ಲರ್ ಕಥಾನಕ ಹೊಂದಿದೆ. ಮೊದಲ ಬಾರಿಗೆ ಮೇಘನಾ ರಾಜ್ ಇಂಥದ್ದೊಂದು ಪಾತ್ರ ನಿರ್ವಹಿಸುತ್ತಿರುವುದು ವಿಶೇಷ. ಬರೋಬ್ಬರಿ ನಾಲ್ಕು ಗೆಟಪ್ ಗಳಲ್ಲಿ ಅವರ ಪಾತ್ರವನ್ನು ನೋಡಬಹುದಂತೆ. ನಾಲ್ಕೂ ಗೆಟಪ್ ಬಂದಾಗಲೂ ವಿಶೇಷ ರೀತಿಯ ಕಾಸ್ಟ್ಯೂಮ್ ನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ : ಜೀ ಕನ್ನಡ ವಾಹಿನಿಗೆ ಜಿಗಿದ ರಚಿತಾ ರಾಮ್ – Exclusive

    ಕಾಂತ ಜತೆ ಎರಡನೇ ಸಿನಿಮಾ
    ಮೇಘನಾ ರಾಜ್ ಮತ್ತು ನಿರ್ದೇಶಕ ಕಾಂತ ಕನ್ನಳ್ಳಿ ಕಾಂಬಿನೇಷನ್ ನ ಎರಡನೇ ಸಿನಿಮಾ ಶಬ್ದ. ಈ ಹಿಂದೆ ‘ಇರುವುದೆಲ್ಲವ ಬಿಟ್ಟು’ ಚಿತ್ರದಲ್ಲಿ ಜೋಡಿ ಒಂದಾಗಿತ್ತು. ಕಾಂತಾ ಅವರ ಕಾರ್ಯವೈಖರಿಗೆ ಮಾರು ಹೋಗಿರುವ ಮೇಘನಾ ರಾಜ್, ಪತಿಯ ಕಳೆದುಕೊಂಡ ದುಃಖದಲ್ಲಿದ್ದರೂ, ಕಥೆಯ ಕಾರಣದಿಂದಾಗಿ ಮತ್ತೆ ನಟಿಸಲು ಮುಂದಾಗಿದ್ದಾರೆ. ಸಿನಿಮಾ ಇಡೀ ಕಥೆ ಮೇಘನಾ ಅವರ ಪಾತ್ರದ ಸುತ್ತಲೇ ಹೆಣೆದಿರುವುದು ಮತ್ತೊಂದು ವಿಶೇಷ. ಇದನ್ನೂ ಓದಿ : ಸಾರ್ವಕಾಲಿಕ ಶ್ರೇಷ್ಠ ಸಿನಿಮಾ ಒಲವಿನ ಉಡುಗೊರೆಗೆ 35 ವರ್ಷ

    ಭಾವುಕರಾದ ಕಾಂತ
    ಮೊದಲ ದಿನ ಮೇಘನಾ ರಾಜ್ ಚಿತ್ರೀಕರಣಕ್ಕೆ ಬಂದಾಗ ನಿರ್ದೇಶಕ ಕಾಂತ ಭಾವುಕರಾದರಂತೆ. ಮೇಘನಾ ಅವರಿಗೆ ಮುಖಕೊಟ್ಟು ಮಾತನಾಡಲು ಆಗದಷ್ಟು ಸಂಕಟವಾಗುತ್ತಿತ್ತಂತೆ. ತಮ್ಮ ಮೊದಲ ಚಿತ್ರದಲ್ಲಿ ನೋಡಿದ ಮೇಘನಾ ಮತ್ತು ಇದೀಗ ಇರುವ ಮೇಘನಾರನ್ನು ನೆನಪಿಸಿಕೊಳ್ಳುವುದೇ ಕಷ್ಟ ಎನ್ನುತ್ತಾರೆ ನಿರ್ದೇಶಕರು.
    ಬೆಂಗಳೂರಿನಲ್ಲಿಯೇ ಒಂದು ಹಂತದ ಶೂಟಿಂಗ್ ಆಗಿದ್ದು, ಇದೀಗ ಬ್ರೇಕ್ ನೀಡಲಾಗಿದೆ. ವಿಜಯ್ ಎಮ್.ಎನ್ ಶೆಟ್ಟಿ ನಿರ್ಮಾಣದಲ್ಲಿ ಚಿತ್ರ ಮೂಡಿ ಬಂದಿದ್ದು, ಪಿ.ಕೆ.ಎಚ್ ದಾಸ್ ಅವರ ಸಿನಿಮಾಟೋಗ್ರಫಿ ಚಿತ್ರಕ್ಕಿದೆ.

  • ಜೀ ಕನ್ನಡ ವಾಹಿನಿಗೆ ಜಿಗಿದ ರಚಿತಾ ರಾಮ್ – Exclusive

    ಜೀ ಕನ್ನಡ ವಾಹಿನಿಗೆ ಜಿಗಿದ ರಚಿತಾ ರಾಮ್ – Exclusive

    ಲರ್ಸ್ ವಾಹಿನಿಯ ಮಜಾ ಭಾರತ ಕಾಮಿಡಿ ರಿಯಾಲಿಟಿ ಶೋ ನಲ್ಲಿ ಜಡ್ಜ್ ಆಗಿ ಹಲವು ಸೀಸನ್ ಗಳನ್ನು ನಡೆಸಿಕೊಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್, ಇದೀಗ ಜೀ ಕನ್ನಡ ವಾಹಿನಿಗೆ ಜಿಗಿದಿದ್ದಾರೆ. ಇನ್ನೇನು ಶುರುವಾಗಬೇಕಿರುವ ಡ್ರಾಮಾ ಜ್ಯೂನಿಯರ್ಸ್ ಸೀಸನ್ 4ರಲ್ಲಿ ರಚಿತಾ ಜಡ್ಜ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೇ ಸದ್ದಿಲ್ಲದೇ ರಚಿತಾ ರಾಮ್ ಅವರ ಪ್ರೋಮೋ ಶೂಟಿಂಗ್ ಕೂಡ ವಾಹಿನಿ ಮಾಡಿದೆ. ಇದನ್ನೂ ಓದಿ : ಸಾರ್ವಕಾಲಿಕ ಶ್ರೇಷ್ಠ ಸಿನಿಮಾ ಒಲವಿನ ಉಡುಗೊರೆಗೆ 35 ವರ್ಷ


    ಕಳೆದ ಮೂರು ಸೀಸನ್ ಗಳಲ್ಲಿ ಹಿರಿಯ ನಟಿ ಲಕ್ಷ್ಮೀ, ಮುಖ್ಯಮಂತ್ರಿ ಚಂದ್ರು ಹಾಗೂ ವಿಜಯ ರಾಘವೇಂದ್ರ ನಿರ್ಣಾಯಕರಾಗಿದ್ದರು. ಈ ಬಾರಿ ಮೂವರು ಜಡ್ಜ್ ಆಗಿ ಇರುವುದಿಲ್ಲ ಎನ್ನುವ ಸುದ್ದಿಯಿದೆ. ರವಿಚಂದ್ರನ್, ರಚಿತಾ ರಾಮ್ ಮತ್ತು ಇನ್ನೋರ್ವ ಖ್ಯಾತ ಕಲಾವಿದರು ಈ ಸ್ಥಾನವನ್ನು ತುಂಬಲಿದ್ದಾರೆ.
    ಈಗಾಗಲೇ ರವಿಚಂದ್ರನ್ ಅವರ ಪ್ರೋಮೋ ಶೂಟ್ ಕೂಡ ಆಗಿದೆ. ಮಕ್ಕಳು ರವಿಚಂದ್ರನ್ ಅವರನ್ನು ಕಿಡ್ನ್ಯಾಪ್ ಮಾಡಿದ ವಿಡಿಯೋಗಳು ಹರಿದಾಡುತ್ತಿವೆ. ಕೆಲವೇ ದಿನಗಳಲ್ಲಿ ರಚಿತಾ ರಾಮ್ ಅವರ ಪ್ರೋಮೋ ಕೂಡ ಬರಲಿದೆಯಂತೆ. ಇದನ್ನೂ ಓದಿ : ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ


    ಹೈದರಾಬಾದ್ ವಿಮಾನ ನಿಲ್ದಾಣ, ರಾಮೋಜಿರಾವ್ ಫಿಲ್ಮಸಿಟಿಯಲ್ಲಿ ರಚಿತಾ ರಾಮ್ ಇರುವ ಪ್ರೋಮೋವನ್ನು ಚಿತ್ರೀಕರಿಸಿದ್ದಾರೆ ರೋಮೋ ಚಿತ್ರಖ್ಯಾತಿಯ ಶೇಖರ್. ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿ ಈ ಭಾಗದ ಚಿತ್ರೀಕರಣ ನಡೆದಿದೆ. ಇದನ್ನೂ ಓದಿ : ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?


    ರಚಿತಾ ರಾಮ್ ಜೀ ಕನ್ನಡ ವಾಹಿನಿಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಇದೇ ಮೊದಲೇನೂ ಅಲ್ಲ. ಹತ್ತು ವರ್ಷಗಳ ಹಿಂದೆ ಪ್ರಸಾರವಾದ ‘ಅರಸಿ’ ಧಾರಾವಾಹಿಯಲ್ಲಿ ನಟಿಸಿದ್ದರು. ಅದು ಅವರ ಮೊದಲ ಸೀರಿಯಲ್ ಕೂಡ ಆಗಿತ್ತು. ಹತ್ತು ವರ್ಷಗಳ ನಂತರ ಅವರು ಮತ್ತೆ ಜೀ ಕನ್ನಡ ವಾಹಿನಿಯ ಬಳಗಕ್ಕೆ ಸೇರಿದ್ದಾರೆ.

  • ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

    ಈ ಹುಡುಗಿಗೆ ಜಿಮ್ ನಲ್ಲಿ ಸಿಕ್ತಂತೆ ನಟಿಸೋಕೆ ಅವಕಾಶ

    ಸಿನಿಮಾ ರಂಗದಲ್ಲಿ ಹೊಸ ಕಲಾವಿದರಿಗೆ ಸಾಮಾನ್ಯವಾಗಿ ಆಡಿಷನ್ ಮಾಡಿಯೇ ಸಿನಿಮಾಗೆ ಆಯ್ಕೆ ಮಾಡಿಕೊಳ್ಳುತ್ತಾರೆ. ಆದರೆ, ಈ ಹುಡುಗಿಗೆ ನಟಿಸಲು ಅದೃಷ್ಟ ಒಲಿದು ಬಂದಿದ್ದು ಜಿಮ್ ನಲ್ಲಿ. ಈ ರೀತಿಯಲ್ಲಿ ಆಯ್ಕೆ ಮಾಡಿಕೊಂಡವರು ಕಿಚ್ಚ ಸುದೀಪ್ ಅಭಿಮಾನಿ ಸಂಘದ ಉಪಾಧ್ಯಕ್ಷ ಮತ್ತು ದಶಕಗಳಿಂದ ಸಿನಿಮಾ ರಂಗದ ಜತೆ ಒಡನಾಟ ಇಟ್ಟುಕೊಂಡಿರುವ ಜಗ್ಗಿ ಎನ್ನುವುದು ವಿಶೇಷ. ಇದನ್ನೂ ಓದಿ : ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?


    ಇತ್ತೀಚೆಗಷ್ಟೇ ‘ಮರ್ದಿನಿ’ ಸಿನಿಮಾದ ಟ್ರೇಲರ್ ಬಿಡುಗಡೆ ಆಯಿತು. ನಟ ಕಿಚ್ಚ ಸುದೀಪ್ ವಿಡಿಯೋ ಸಂದೇಶದ ಮೂಲಕ ಟ್ರೇಲರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಈ ಸಿನಿಮಾದ ನಾಯಕಿ ರಿತನ್ಯ ಹೂವಣ್ಣ ಇದನ್ನೂ ಓದಿ : ಉಪೇಂದ್ರ ಅಣ್ಣನ ಮಗನ ಬೆನ್ನುಬಿದ್ದ ಸ್ಯಾಂಡಲ್ ವುಡ್

    “ಈ ಸಿನಿಮಾದ ನಿರ್ಮಾಪಕ ಜಗ್ಗಿ ಅವರು ನನಗೆ ಜಿಮ್ ನಲ್ಲಿ ಭೇಟಿಯಾದರು. ಅಲ್ಲಿಯೇ ಅವರ ಪರಿಚಯವಾಗಿದ್ದು. ಒಂದು ದಿನ ಏಕಾಏಕಿ, ನೀವು ನಮ್ಮ ಸಿನಿಮಾದ ನಾಯಕ ಎಂದು ಅಚ್ಚರಿ ಮೂಡಿಸಿದರು. ಹುಡುಗಿಗೆ ಇವರು ನಾಯಕ ಅನ್ನುತ್ತಿದ್ದಾರಲ್ಲ ಎಂಬ ಪ್ರಶ್ನೆ ನನ್ನಲ್ಲಿ ಮೂಡಿತ್ತು. ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ನೀವು ನಾಯಕ ಕಂ ನಾಯಕಿ ಎಂದಾಗ ನಕ್ಕಿದೆ. ಮುಂದೊಂದು ದಿನ ಅದೇ ನಿಜವಾಯಿತು. ನನಗೆ ಈ ಚಿತ್ರಕ್ಕೆ ಅವಕಾಶ ಸಿಕ್ಕಿದ್ದು ಹೀಗೆ” ಎಂದರು. ರಿತನ್ಯ ಹೂವಣ್ಣ ಈ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಇದನ್ನೂ ಓದಿ : ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!


    ಈ ಹಿಂದೆ ಪ್ರಥಮ್ ಅಭಿನಯದ “ದೇವ್ರಂಥ ಮನುಷ್ಯ” ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದ ಕಿರಣ್ ಕುಮಾರ್ ಅವರೇ ಈ ಚಿತ್ರದ ನಿರ್ದೇಶಕರು. ಎರಡನೇ ಸಿನಿಮಾದಲ್ಲಿಯೇ ಅವರು ಸಸ್ಪೆನ್ಸ್ ಥ್ರಿಲ್ಲರ್ ಮಾದರಿಯ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

  • ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?

    ಮುದ್ದಾದ ಹುಡುಗಿ ಅನುಶ್ರೀಗೆ ಸೈತಾನ್ ಅಂದೋರು ಯಾರು?

    ಕನ್ನಡದ ಹೆಸರಾಂತ ನಿರೂಪಕಿ ಅನುಶ್ರೀ ‘ಸೈತಾನ್’ ರೂಪ ಪಡೆದಿದ್ದಾರೆ. ಅರರೇ.. ಈ ಮುದ್ದಾದ ಹುಡುಗಿಗೆ ಸೈತಾನ್ ಅನ್ನೋಕೆ ಹೇಗಾದರೂ ಮನಸ್ಸು ಬರತ್ತೆ ಅಂದುಕೊಳ್ಳಬಹುದು. ನಿಜ, ಅವರು ಇದೀಗ ಸೈತಾನ್ ಹೆಸರಿನ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರದ್ದು ಅಂಥದ್ದೇ ಹೆಸರಿನ ವಿಚಿತ್ರ ಪಾತ್ರ ಎನ್ನುವುದು ಕುತೂಹಲ. ಇದನ್ನೂ ಓದಿ : ಉಪೇಂದ್ರ ಅಣ್ಣನ ಮಗನ ಬೆನ್ನುಬಿದ್ದ ಸ್ಯಾಂಡಲ್ ವುಡ್


    ಉಪ್ಪು ಹುಳಿ ಖಾರ ಸಿನಿಮಾದ ನಂತರ ಅನುಶ್ರೀ ಕಿರುತೆರೆಯಲ್ಲೇ ಬ್ಯುಸಿಯಾಗಿದ್ದರು. ಇದೀಗ ಸೈತಾನ್ ಮೂಲಕ ಮತ್ತೆ ಹಿರಿತೆರೆಗೆ ಆಗಮಿಸಿದ್ದಾರೆ. ಈ ಸಿನಿಮಾದ ಕುರಿತು ಮಾತನಾಡಿದ ಅವರು, “ನಾನು ಈ ಚಿತ್ರದಲ್ಲಿ ಅಭಿನಯಿಸಲು ಕಾರಣ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ. ಅವರೆ ನನಗೆ ನಿರ್ಮಾಪಕ ಕಂ ನಿರ್ದೇಶಕ ಲೋಹಿತ್ ಅವರ ಪರಿಚಯ‌ ಮಾಡಿಸಿದ್ದು. ಈ ಬಗ್ಗೆ ಇಮ್ರಾನ್ ನನಗೆ ಹೇಳಿದಾಗ ನಾನು ಬೇಡ ಅಂದೆ. ಕಿರುತೆರೆಯಲ್ಲಿ ಆರಾಮವಾಗಿದ್ದೀನಿ ಅಂತಲೂ ಹೇಳಿದ್ದೆ. ನಂತರ ಅವರು ಕಥೆ ಕೇಳಿ ಅಂದರು. ಲೋಹಿತ್ ಹೇಳಿದ ಕಥೆ ಕೇಳಿ ಅಭಿನಯಿಸಲು ಒಪ್ಪಿಕೊಂಡೆ. ಉಪ್ಪು ಹುಳಿ ಖಾರ ಚಿತ್ರದ ನಂತರ ಮತ್ತೊಮ್ಮೆ ನನ್ನ ರೀ ಎಂಟ್ರಿ ಅನ್ನಬಹುದು. ಇದರಲ್ಲಿ ಹೀರೋ, ಹೀರೋ ಇನ್ ಅಂತ ಏನು ಇಲ್ಲ. ಕಥೆಯೇ ನಿಜವಾದ ಹೀರೋ ಎನ್ನುತ್ತಾರೆ” ಎಂದರು. ಇದನ್ನೂ ಓದಿ : ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!


    ಈಗಾಗಲೇ ಮಮ್ಮಿ ಚಿತ್ರದ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ಲೋಹಿತ್.ಹೆಚ್, ಈ ಸಿನಿಮಾಗೆ ನಿರ್ಮಾಪಕ. ತಮ್ಮದೇ ತಂಡದಲ್ಲಿ ಕೆಲಸ ಮಾಡುತ್ತಿದ್ದ ಪ್ರಭಾಕರ್ ಎನ್ನುವ ಹೊಸ ಹುಡುಗನಿಗೆ ನಿರ್ದೇಶಕನ ಪಟ್ಟ ಕಟ್ಟಿದ್ದಾರೆ. ಸದ್ದಿಲ್ಲದೇ ಮೊದಲ ಹಂತದ ಶೂಟಿಂಗ್ ಕೂಡ ಮುಗಿಸಿದ್ದಾರೆ ನಿರ್ದೇಶಕರು. ಮಾಸಾಂತ್ಯಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಗೋವಾದಲ್ಲಿ ನಡೆಯಲಿದೆಯಂತೆ.ಇದನ್ನೂ ಓದಿ : ಅಪ್ಪುವಿನಂತೆ ಸಾವಿನಲ್ಲೂ ಸಾರ್ಥಕತೆ ಮೆರೆದ ಮಾವ ರೇವನಾಥ್


    ಗೌತಮ್ ಬಿ.ಎನ್, ಕೃತಿ, ಐಶ್ವರ್ಯ ಶಿಂಧೋಗಿ, ಸಾರಿಕಾ ರಾವ್, ಭಾರ್ಗವ ವೆಂಕಟೇಶ್, ಗ್ರೀಷ್ಮ ಶ್ರೀಧರ್, ಹರ್ಷ್, ಸಾರಿಕಾ ರಾವ್ ಸೇರಿದಂತೆ ಅನೇಕ ಕಲಾವಿದರು ತಾರಾ ಬಳಗದಲ್ಲಿ ಇದ್ದಾರೆ.