Tag: Filmmaker

  • ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ನಿಧನ

    ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ನಿಧನ

    ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) (Yashwant Sardeshpande) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಯಶವಂತ ಸರದೇಶಪಾಂಡೆ ಕನ್ನಡ ರಂಗಭೂಮಿ (Kannada theatre) ನಟರಾಗಿ ಹೆಚ್ಚು ಜನಪ್ರಿಯವಾದವರು. ರಾಜ್ಯಾದಂತ್ಯ ಇವರು ನಟಿಸಿ-ನಿರ್ದೇಶಿಸಿರುವ ʻಆಲ್ ದಿ ಬೆಸ್ಟ್ʼ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು. ಈಗ ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಪಾತ್ರವಹಿಸುತ್ತಿದ್ದಾರೆ. ಇವರ ಪತ್ನಿ ಮಾಲತಿ ಸಹ ರಂಗಭೂಮಿ ಮತ್ತು ಕಿರುತೆರೆಯಲ್ಲಿ ಜನಪ್ರಿಯ ಕಲಾವಿದೆಯಾಗಿದ್ದಾರೆ.

    ನಟ, ನಿರ್ದೇಶಕ, ನಾಟಕಕಾರ, ಹಾಸ್ಯ ನಾಟಕಗಳ ಮುಖಾಂತರ ಕರ್ನಾಟಕದಾದ್ಯಂತ ಮನೆಮಾತಾಗಿರುವ ಯಶವಂತ ಸರದೇಶಪಾಂಡೆಯವರು 1965ರ ಜೂ.13ರಲ್ಲಿ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಎಂಬ ಹಳ್ಳಿಯಲ್ಲಿ ಜನಿಸಿದರು. ತಂದೆ ಶ್ರೀಧರರಾವ್ ಗೋಪಾಲರಾವ್ ಸರದೇಶಪಾಂಡೆ, ತಾಯಿ ಕಲ್ಪನಾದೇವಿ.

    ರಂಗಕರ್ಮಿ ನಿಧನಕ್ಕೆ ಶಿವರಾಜ ತಂಗಡಗಿ ಶೋಕ
    ಹಿರಿಯ ರಂಗಕರ್ಮಿ ಯಶವಂತ ಸರದಶಪಾಂಡೆ ಅವರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ರಂಗಭೂಮಿಯ ಜೊತೆ ಸಿನಿಮಾ ಮತ್ತು ಟಿವಿ ಧಾರವಾಹಿಗಳಲ್ಲಿಯ ನಟನೆಯಿಂದ ಅಪಾರ ಹೆಸರು ಮಾಡಿರುವ ಯಶವಂತ ಸರದೇಶಪಾಂಡೆ ಸಮಕಾಲೀನ ಹಾಸ್ಯ ಕಲಾವಿದರ ಪಾಲಿನಲ್ಲಿ ತಮ್ಮ ವಿಶಿಷ್ಟ ಭಾಷೆ, ಆಂಗಿಕ ಅಭಿನಯದಿಂದ ಅಪಾರ ಜನಪ್ರಿಯತೆ ಪಡೆದಿದ್ದರು. ರಂಗ ವರ್ತುಲ ತಂಡವನ್ನು ಕಟ್ಟಿ, ಆ ಮೂಲಕ ಅಸಂಖ್ಯಾತ ನಾಟಕಗಳನ್ನ ಪ್ರದರ್ಶಿಸಿದ ಯಶವಂತ ಸರದೇಶಪಾಂಡೆ ಅವರ ಆಲ್ ದಿ ಬೆಸ್ಟ್ ನಾಟಕ ದಾಖಲೆಯ ಪ್ರದರ್ಶನಗಳನ್ನ ಕಂಡಿದೆ. ಕಮಲ ಹಾಸನ್ ಅಭಿನಯದ ರಾಮ ಶಾಮ ಭಾಮ ಜನಪ್ರಿಯ ಚಲನಚಿತ್ರದ ಸಂಭಾಷಣಕಾರರಾಗಿ,ಜೊತೆಗೆ ನಟಿಸಿ ,ಅಪಾರ ಜನಪ್ರೀತಿ ಗಳಿಸಿದ್ದರು.

    ದಾವಣಗೆರೆಯ ವೃತ್ತಿರಂಗಭೂಮಿ ರಂಗಾಯಣದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಯಶವಂತ ಸರದೇಶಪಾಂಡೆ ಅವರ ಸಾಂಸ್ಕೃತಿಕ ಕೊಡುಗೆಗಾಗಿ ಅವರಿಗೆ ನನ್ನ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

  • `ಕಲಾತಪಸ್ವಿ’ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

    `ಕಲಾತಪಸ್ವಿ’ ಖ್ಯಾತ ಚಲನಚಿತ್ರ ನಿರ್ಮಾಪಕ ಕೆ. ವಿಶ್ವನಾಥ್ ನಿಧನ

    ಅಮರಾವತಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಪುರಸ್ಕೃತ ಖ್ಯಾತ ಚಲನಚಿತ್ರ ನಿರ್ಮಾಪಕ (Filmmaker) ಕಾಸಿನಾಧುನಿ ವಿಶ್ವನಾಥ್ (92) (K Viswanath) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ತಡರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    `ಕಲಾತಪಸ್ವಿ’ (Kalatapasvi) ಎಂದೇ ಖ್ಯಾತರಾಗಿರುವ ವಿಶ್ವನಾಥ್ ಅವರು ಫೆಬ್ರವರಿ 1930ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದರು. ತೆಲುಗು ಚಿತ್ರರಂಗದಲ್ಲಿ (Telugu Industry) ಮಾತ್ರವಲ್ಲದೇ ತಮಿಳು ಹಾಗೂ ಹಿಂದಿ ಚಲನಚಿತ್ರಗಳಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ.

    1951ರಲ್ಲಿ ಪಾತಾಳ ಭೈರವಿ ಸಿನಿಮಾದ ಮೂಲಕ ಸಹಾಯಕ ನಿರ್ದೇಶಕರಾಗಿ ಸಿನಿಮಾ (Cinema) ರಂಗದಲ್ಲಿ ವೃತ್ತಿ ಜೀವನ ಆರಂಭಿಸಿದ ಕೆ ವಿಶ್ವನಾಥ್, 1965 ರಲ್ಲಿ `ಆತ್ಮ ಗೌರವಂ’ ಸಿನಿಮಾದ ಮೂಲಕ ನಿರ್ದೇಶನಕ್ಕೆ ಕಾಲಿಟ್ಟರು. ಇದನ್ನೂ ಓದಿ: ಖ್ಯಾತ ನಟ ನಿತಿನ್ ಪಾಲಾದ ‘ಕಬ್ಜ’ ಸಿನಿಮಾದ ಆಂಧ್ರ-ತೆಲಂಗಾಣ ಹಕ್ಕು

    `ಸ್ವಾತಿ ಮುತ್ಯಂ (Swati Mutyam), ಸಾಗರ ಸಂಗಮಂ, ಶಂಕರಾಭರಣಂ, ಸಪ್ತಪದಿ, ಸಿರಿವೆನ್ನೆಲ, ಶುಭಲೇಖ, ಶ್ರುತಿಲಯಲು’ ಸೇರಿದಂತೆ ಹತ್ತು ಹಲವು ಅತ್ಯದ್ಭುತ ತೆಲುಗು ಸಿನಿಮಾಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿದ್ದ ವಿಶ್ವನಾಥ್, ಹಿಂದಿ ಭಾಷೆಯಲ್ಲೂ `ಈಶ್ವರ್, ಸಂಜೋಗ್, ಸುರ ಸಂಗಮ್ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ದೇಶಿಸಿದ್ದರು. ಸ್ವರಾಭಿಷೇಕಂ, ಅತಡು, ಠಾಗೂರ್’ ಸೇರಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಟ, ನಿರ್ದೇಶಕರಾಗಿ, ಚಿತ್ರಕಥೆಗಾರರಾಗಿಯೂ ತನ್ನದೇ ಆದ ಛಾಪು ಮೂಡಿಸಿ ತೆಲುಗು ಚಿತ್ರರಂಗದಲ್ಲಿ ಕಲಾ ತಪಸ್ವಿ ಎಂದೇ ಹೆಸರಾಂತರಾಗಿದ್ದರು.

    ವಿಶ್ವನಾಥ್ ಅವರಿಗೆ 1992ರಲ್ಲಿ ಪದ್ಮಶ್ರೀ, 5 ರಾಷ್ಟ್ರೀಯ ಪ್ರಶಸ್ತಿಗಳು, ಆಂಧ್ರಪ್ರದೇಶ ಸರ್ಕಾರದಿಂದ 20 ನಂದಿ ಪ್ರಶಸ್ತಿಗಳು, ಜೀವಮಾನ ಸಾಧನೆ ಸೇರಿ 10 ಫೆಲ್ಮ್‌ಫೇರ್‌ ಪ್ರಶಸ್ತಿಗಳು ಸಂದಿವೆ. ಅಲ್ಲದೇ ಭಾರತೀಯ ಚಿತ್ರರಂಗದ ಅತ್ಯುನ್ನತ `ದಾದಾಸಾಹೇಬ್ ಫಾಲ್ಕೆ’ ಗೌರವ ಸಿಕ್ಕಿತ್ತು. ಇದನ್ನೂ ಓದಿ: ಕನ್ನಡದ ‘ಕಬ್ಜ’ ಸಿನಿಮಾಗೆ ಸಾಥ್ ನೀಡಲಿದ್ದಾರೆ ರಾಜಮೌಳಿ

    ವಿಶ್ವನಾಥ್ ಅವರ ನಿಧನಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಸಂತಾಪ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ

    ಪ್ರಧಾನಿ ಮೋದಿ – ಟಿಎಂಸಿ ನಡುವೆ `ಕಾಳಿ’ ಕದನ

    ಕೋಲ್ಕತ್ತ: ಹಿಂದೂ ದೇವತೆಗಳನ್ನು ಸತತವಾಗಿ ಅವಮಾನಿಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಮೊದಲ ಪೋಸ್ಟರ್‌ನಲ್ಲೇ ಕಾಳಿ ದೇವಿ ಕೈಯಲ್ಲಿ ಸಿಗರೇಟು ನೀಡಿ ವಿವಾದಕ್ಕೀಡಾಗಿದ್ದರು. ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಶಿವ-ಪಾರ್ವತಿ ಪಾತ್ರಧಾರಿಗಳು ಸಿಗರೇಟು ಸೇದುವ ದೃಶ್ಯದ ಫೋಟೋ ಹಾಕಿ ಮತ್ತೊಮ್ಮೆ ವಿವಾದಕ್ಕೆ ಕಾರಣರಾದರು. ಇದೀಗ ರಾಷ್ಟ್ರವ್ಯಾಪಿಯಾಗಿ ವಿವಾದ ಹರಡಿದೆ.

    ಕಾಳಿ ದೇವಿ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದು, ಟಿಎಂಸಿ (ತೃಣಮೂಲ ಕಾಂಗ್ರೆಸ್) ಪ್ರಮುಖರಿಂದ ಆಕ್ಷೇಪಣೆಗಳೂ ವ್ಯಕ್ತವಾಗಿವೆ. ಇದನ್ನೂ ಓದಿ: ದೇವೇಗೌಡರನ್ನು ಭೇಟಿಯಾದ ದ್ರೌಪದಿ ಮುರ್ಮು- ಎನ್‍ಡಿಎ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ

    ರಾಮಕೃಷ್ಣ ಮಿಷನ್ ಹಮ್ಮಿಕೊಂಡಿದ್ದ ಸ್ವಾಮಿ ಆತ್ಮಸ್ಥಾನಾನಂದ ಅವರ ಜನ್ಮ ಶತಮಾನೋತ್ಸವ ವರ್ಚುವಲ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಂದು ಕಾಳಿ ದೇವಿ ಕುರಿತು ಮಾತನಾಡಿದ್ದಾರೆ.

    ಕಾಳಿ ಮಾತೆಯ ಆಶೀರ್ವಾದ ಈ ದೇಶದ ಮೇಲೆ ಸದಾಕಾಲವೂ ಇರಲಿದೆ. ದೇಶದಲ್ಲಿರುವ ಸಂತರು `ಏಕ ಭಾರತ, ಶ್ರೇಷ್ಠ ಭಾರತ’ ಆಶಯದ ಸಾಕಾರಕ್ಕೆ ಬೆಂಬಲವಾಗಿ ನಿಂತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಿಕಿ ಪಾಂಟಿಂಗ್ ದಾಖಲೆ ಸರಿಗಟ್ಟಲು ರೋಹಿತ್ ಶರ್ಮಾಗೆ ಇನ್ನೊಂದೆ ಹೆಜ್ಜೆ

    ರಾಮಕೃಷ್ಣ ಪರಮಹಂಸರು ಕಾಳಿ ಮಾತೆಯ ಕುರಿತು ಸ್ಪಷ್ಟ ಕಲ್ಪನೆ ಹೊಂದಿದ್ದರು. ಅವರ ಶಿಷ್ಯ ಸ್ವಾಮಿ ವಿವೇಕಾನಂದರೂ ಆಧ್ಯಾತ್ಮಿಕ ದೃಷ್ಟಿಕೋನ ಹೊಂದಿದ್ದರು. ಇದು ಅವರಲ್ಲಿ ಅಸಾಧಾರಣ ಶಕ್ತಿ ತುಂಬಿತ್ತು. ನಂಬಿಕೆ ಪವಿತ್ರವಾಗಿದ್ದರೆ ಅಗೋಚರ ಶಕ್ತಿಯೊಂದು ನಮಗೆ ಅರಿವಿಲ್ಲದಂತೆಯೇ ನಮ್ಮನ್ನು ಸರಿ ದಾರಿಯಲ್ಲಿ ಕೊಂಡೊಯ್ಯುತ್ತದೆ. ಕಾಳಿ ಮಾತೆಯ ಕೃಪೆ ಭಾರತದ ಮೇಲೆ ಇದೆ. ಆಧ್ಯಾತ್ಮಿಕ ಶಕ್ತಿಯೊಂದಿಗೆ ದೇಶವು ಲೋಕ ಕಲ್ಯಾಣದ ಕಾಯಕದಲ್ಲಿ ಮುನ್ನಡೆಯುತ್ತಿದೆ ಎಂದು ಶ್ಲಾಘಿಸಿದ್ದಾರೆ.

    ಪ್ರಧಾನಿ ಮೋದಿ ಅವರ ಹೇಳಿಕೆಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಸುಳಿವಿಲ್ಲದ ವಿಷಯಗಳ ಬಗ್ಗೆ ತಮ್ಮ ಯಜಮಾನರು ಕಾಮೆಂಟ್ ಮಾಡುವುದನ್ನು ನಿಲ್ಲಿಸಬೇಕೆಂದು ಸಲಹೆ ನೀಡುತ್ತೇನೆ ಎಂಬುದಾಗಿ ಬಂಗಾಳದ ಬಿಜೆಪಿ ಘಟಕದ ವಿರುದ್ಧ ಹರಿಹಾಯ್ದಿದ್ದಾರೆ.

    ಇದರಿಂದ ಮೊಯಿತ್ರಾ ಅವರನ್ನು ಟಿಎಂಸಿ ಸದಸ್ಯತ್ವದಿಂದ ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನನ್ನ `ಕಾಳಿ’ ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ: ಲೀನಾ ಮಣಿಮೇಕಲೈ ಸ್ಫೋಟಕ ಹೇಳಿಕೆ

    ನನ್ನ `ಕಾಳಿ’ ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ: ಲೀನಾ ಮಣಿಮೇಕಲೈ ಸ್ಫೋಟಕ ಹೇಳಿಕೆ

    ಚೆನ್ನೈ: ಹಿಂದೂ ದೇವತೆಗಳನ್ನು ಸತತವಾಗಿ ಅವಮಾನಿಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ವಿವಿಧೆಡೆ ದೂರುಗಳು ದಾಖಲಾಗುತ್ತಿವೆ. ಲೀನಾ ಅವರು ಮೊದಲ ಪೋಸ್ಟರ್‌ನಲ್ಲೇ ಕಾಳಿ ಕೈಗೆ ಸಿಗರೇಟು ನೀಡಿದ್ದರು. ನಂತರ ಮತ್ತೊಂದು ಪೋಸ್ಟ್ ಮಾಡಿದ್ದ ಅವರು ಶಿವ ಮತ್ತು ಪಾರ್ವತಿ ಕೈಯಲ್ಲೂ ಸಿಗರೇಟು ಕೊಡಿಸಿದ್ದರು.

    ಇದರಿಂದಾಗಿ ಹಿಂದೂಪರ ಸಂಘಟನೆಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಕನ್ನಡದ ನಟಿ ಮಾಳವಿಕಾ ಅವಿನಾಶ್ ಸಹ ಈ ನಡೆಯನ್ನು ವಿರೋಧಿಸಿದ್ದರು. ವ್ಯಾಪಕ ವಿರೋಧಗಳ ನಡುವೆಯೂ ಚಿತ್ರದ ನಿರ್ದೇಶಕಿ ಲೀನಾ ಮಣಿಮೇಕಲೈ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಟ್ವೀಟ್‌ನಲ್ಲಿ ಏನಿದೆ?
    ನನ್ನ ಕಾಳಿ ವಿಲಕ್ಷಣವಾದರೂ ಸ್ವತಂತ್ರ ಮನೋಭಾವದ ಚೇತನ. ಪಿತೃ ಪ್ರಭುತ್ವದ ಮೇಲೆ ಉಗುಳುತ್ತಾಳೆ. ನನ್ನ ಕಾಳಿ ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ, ಬಂಡವಾಳಶಾಹಿಯನ್ನು ಕಿತ್ತೊಗೆಯುತ್ತಾಳೆ. ತನ್ನ ಸಾವಿರ ಕೈಗಳಿಂದ ಎಲ್ಲರನ್ನು ಅಪ್ಪಿಕೊಳ್ಳುತ್ತಾಳೆ ಎಂದು ಬರೆದುಕೊಂಡಿದ್ದಾರೆ. ಇದರೊಂದಿಗೆ ಕಾಳಿಯ ರೌದ್ರಾವತಾರದ ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

    ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

    ಒಟ್ಟೋವಾ: ಕಾಳಿ ಪೋಸ್ಟರ್ ಕುರಿತು ವಿವಾದ ಸೃಷ್ಟಿಸಿದ್ದ ಟೊರಂಟೋದ ಆಗಾಖಾನ್ ಮ್ಯೂಸಿಯಂ ಹಿಂದೂ ಸಮುದಾಯದ ಕ್ಷಮೆ ಕೇಳಿದೆ.

    ಭಾರತೀಯ ರಾಯಭಾರಿ ಕಚೇರಿ ಪತ್ರಕ್ಕೆ ಸ್ಪಂದಿಸಿದ ಆಗಾಖಾನ್ ಮ್ಯೂಸಿಯಂ, ಹಿಂದೂ ಧರ್ಮ ಮತ್ತು ಇತರೆ ಸಮುದಾಯಗಳ ನಂಬಿಕೆಗೆ ಧಕ್ಕೆ ತಂದಿದ್ದಕ್ಕೆ ತೀವ್ರ ವಿಷಾದವಿದೆ. ಈ ಬಗ್ಗೆ ಕ್ಷಮೆ ಕೋರುತ್ತೇವೆ ಎಂದು ಟ್ವೀಟ್ ಮೂಲಕ ಪ್ರಕಟಿಸಿದೆ. ಇದನ್ನೂ ಓದಿ: ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ

    ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ಕಾಳಿದೇವಿ ಸಾಕ್ಷ್ಯಾಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ, ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಕಾಳಿ ಕುರಿತಾದ ಸಾಕ್ಷ್ಯಾಚಿತ್ರ ಪೋಸ್ಟರ್ ನೋಡಿ ಬೇಸರವಾಗಿದೆ. ಕೆಲ ವರ್ಷಗಳಿಂದ ಕೆನಡಾದಲ್ಲೂ ಸಾಂಪ್ರದಾಯಿಕ ಹಿಂದೂ ವಿರೋಧಿ ಮತ್ತು ಭಾರತ-ವಿರೋಧಿ ಗುಂಪುಗಳು ಸೇರಿಕೊಂಡು ಮಾಧ್ಯಮಗಳಲ್ಲಿ `ಹಿಂದೂಫೋಬಿಕ್’ (ಹಿಂದೂ ಧರ್ಮದ ಬಗ್ಗೆ ಭಯ ಹುಟ್ಟಿಸುವುದು) ಲೇಖನಗಳನ್ನು ಪ್ರಕಟಿಸುತ್ತಿವೆ. ಹಿಂದೂ ಧರ್ಮದ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದ್ದರು. ಇದಕ್ಕೆ ಶೀಘ್ರವೇ ಪ್ರತಿಕ್ರಿಯಿಸಿರುವ ಆಗಾಖಾನ್ ಮ್ಯೂಸಿಯಂ ಕ್ಷಮೆ ಕೇಳಿದ್ದು, ಇದನ್ನು ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    https://twitter.com/AryaCanada/status/1544413469059186688?ref_src=twsrc%5Etfw%7Ctwcamp%5Etweetembed%7Ctwterm%5E1544413469059186688%7Ctwgr%5E%7Ctwcon%5Es1_&ref_url=https%3A%2F%2Fpublictv.in%2Fpainful-to-see-kaali-poster-by-filmmaker-leena-manimekalai-says-chandra-arya%2F

    ಮಹುವಾ ವಿರುದ್ಧ FIR: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಮಧ್ಯಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ ಮಹುವಾ ಮೊಯಿತ್ರಾ ಅವರು, ನನಗೆ ಕಾಳಿ ಮಾತೆಯು ಮಾಂಸ ತಿನ್ನುವ, ಮದ್ಯ ಸ್ವೀಕರಿಸುವ ದೇವತೆಯಾಗಿದ್ದಾಳೆ. ನಿಮ್ಮ ದೇವತೆ ಬಗ್ಗೆ ಊಹಿಸಿಕೊಳ್ಳುವ ಸ್ವಾತಂತ್ರ‍್ಯ ನಿಮಗಿದೆ ಎಂದು ಹೇಳಿದ್ದರು. ಈ ಹೇಳಿಕೆ ವಿವಾದವಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಂಧಿತ ಐಎಎಸ್ ಅಧಿಕಾರಿ ಜೊತೆಗಿದ್ದ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು

    ಬಂಧಿತ ಐಎಎಸ್ ಅಧಿಕಾರಿ ಜೊತೆಗಿದ್ದ ಅಮಿತ್ ಶಾ ಫೋಟೊ ಶೇರ್ – ನಿರ್ದೇಶಕನ ವಿರುದ್ಧ ಪ್ರಕರಣ ದಾಖಲು

    ಅಹಮದಾಬಾದ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈಚೆಗೆ ಬಂಧಿಸಿರುವ ಜಾರ್ಖಂಡ್‌ನ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇರುವ ಫೋಟೋ ಹಂಚಿಕೊಂಡಿದ್ದಕ್ಕಾಗಿ ಗುಜರಾತ್ ಪೊಲೀಸರು ಚಲನಚಿತ್ರ ನಿರ್ಮಾಪಕ ಅವಿನಾಶ್ ದಾಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

    ಅವಿನಾಶ್ ದಾಸ್ (46) ಅವರು ಮೇ 8 ರಂದು ಟ್ವಿಟ್ಟರ್‌ನಲ್ಲಿ ಅಮಿತ್ ಶಾ ಅವರು ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರ ಜೊತೆ ಇರುವ ಫೋಟೊವನ್ನು ಹಂಚಿಕೊಂಡಿದ್ದರು ಎಂದು ಅಹಮದಾಬಾದ್ ಪೊಲೀಸ್ ಇನ್ಸ್‌ಪೆಕ್ಟರ್‌ ಎಚ್.ಎಂ.ವ್ಯಾಸ್ ಹೇಳಿದ್ದಾರೆ. ಇದನ್ನೂ ಓದಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ನಟ ದಿಲೀಪ್ ಸ್ನೇಹಿತ ಅರೆಸ್ಟ್‌

    ಪೂಜಾ ಸಿಂಘಾಲ್ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಆದರೆ ಕಳೆದ 5 ವರ್ಷಗಳ ಹಿಂದೆ ವೇದಿಕೆಯೊಂದರಲ್ಲಿ ಅಮಿತ್ ಶಾ ಅವರೊಂದಿಗೆ ಕಾಣಿಸಿಕೊಂಡಿದ್ದರು. 5 ವರ್ಷಗಳ ಹಳೇ ಫೋಟೋವನ್ನು ದಾಸ್ ಹಂಚಿಕೊಂಡಿದ್ದಾರೆ. ಬಂಧನಕ್ಕೆ ಒಳಗಾಗಿರುವ ಅಧಿಕಾರಿಯ ಜೊತೆ ಇರುವ ಫೋಟೊ ಈಗ ಹಂಚಿಕೊಂಡು ಜನತೆಯ ದಾರಿ ತಪ್ಪಿಸಿದ್ದಾರೆ ಎಂದು ವ್ಯಾಸ್ ತಿಳಿಸಿದ್ದಾರೆ.

    ಮೇ 8ರ ಟ್ವಿಟ್ಟರ್ ಪೋಸ್ಟ್‌ಗಾಗಿ ದಾಸ್ ವಿರುದ್ಧ ಐಪಿಸಿ 469 (ನಕಲಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದಕ್ಕೂ ಮುನ್ನ ನಿರ್ದೇಶಕ ದಾಸ್ ಮಾರ್ಚ್ 17 ರಂದು ತಮ್ಮ ಫೇಸ್‌ಬುಕ್‌ನಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡುವ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದರು. ಅದಕ್ಕೂ ಸಹ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್

    ಕಳೆದ ಬುಧವಾರ ಇಡಿ ಜಾರ್ಖಂಡ್‌ನ ಗಣಿ ಇಲಾಖೆ ಕಾರ್ಯದರ್ಶಿ ಪೂಜಾ ಅವರ ಮನೆಯಲ್ಲಿ 18 ಕೋಟಿ ಹಣವನ್ನು ಜಪ್ತಿ ಮಾಡಿ, ಅವರನ್ನು ಬಂಧಿಸಿತ್ತು.

    ಬಾಲಿವುಡ್‌ನಲ್ಲಿ ಅವಿನಾಶ್ ದಾಸ್ ಅವರು ಗುರುತಿಸಿಕೊಂಡಿದ್ದು ಸ್ವರಾ ಭಾಸ್ಕರ್ ಅವರ `ಅನಾರ್ಕಲಿ ಆಫ್ ಆರಹ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ.

  • ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕೇರಳದ ಖ್ಯಾತ ಸಿನಿಮಾ ನಿರ್ದೇಶಕ ಅಲಿ ಅಕ್ಬರ್

    ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕೇರಳದ ಖ್ಯಾತ ಸಿನಿಮಾ ನಿರ್ದೇಶಕ ಅಲಿ ಅಕ್ಬರ್

    ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್ ಮತ್ತು ಅವರ ಪತ್ನಿ ಮುಸ್ಲಿಂ ಧರ್ಮ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.

    ಈ ಬಗ್ಗೆ ವೀಡಿಯೋ ಮೂಲಕ ಸ್ಪಷ್ಟ ಪಡಿಸಿರುವ ಅಲಿ ಅಕ್ಬರ್, ಸೇನಾ ದಂಡನಾಯಕ ಬಿಪಿನ್ ರಾವತ್ ಹುತಾತ್ಮರಾದಾಗ ಅವರ ಫೋಟೋ ಹಾಕಿಕೊಂಡು ಅಪಹಾಸ್ಯ, ನಗುವಿನ ಇಮೋಜಿ ಹಾಕಿ ಸಂಭ್ರಮಿಸಿದ ಕೆಲ ಮುಸ್ಲಿಂ ಬಾಂಧವರನ್ನು ಕಂಡು ನನಗೆ ನಮ್ಮ ಧರ್ಮದಲ್ಲಿ ಇರಲು ಇಷ್ಟವಿಲ್ಲ. ಹಾಗಾಗಿ ನಾನು ಮತ್ತು ನನ್ನ ಪತ್ನಿ ಮುಸ್ಲಿಂ ಧರ್ಮವನ್ನು ತೊರೆದು ಹಿಂದೂ ಧರ್ಮವನ್ನು ಸೇರುತ್ತಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಉ.ಪ್ರ. ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ಮತಾಂತರ

    ಹಿಂದೂ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅಲಿ ಅಕ್ಬರ್ ಎಂದಿದ್ದ ತಮ್ಮ ಹೆಸರನ್ನು ರಾಮಸಿಂಹನ್ ಎಂದು ಮರುನಾಮಕರಣ ಮಾಡಿಕೊಂಡಿದ್ದಾರೆ. ಬಿಪಿನ್ ರಾವತ್ ಹುತಾತ್ಮರಾದಾಗ ಕೆಲ ಕಿಡಿಗೇಡಿಗಳು ಅವಹೇಳನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಈ ಬಗ್ಗೆ ಧರ್ಮದ ಗುರುಗಳು ಯಾವುದೇ ರೀತಿಯ ಪ್ರತಿಕ್ರಿಯೆ ಕೊಡದೇ ಇದ್ದುದರಿಂದ ಬಹಳಷ್ಟು ನೋವಾಗಿದೆ ಹಾಗಾಗಿ ಮತಾಂತರವಾಗುವುದಾಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪತಿಗೆ ಡೈವೋರ್ಸ್ ಕೊಡು, ಮುಸ್ಲಿಂ ಯುವಕನ ಜೊತೆ ಮದುವೆ ಮಾಡಿಸ್ತೀನಿ – ನೂರ್ ಜಹಾನ್ ಅರೆಸ್ಟ್

    ಅಲಿ ಅಕ್ಬರ್ ಮತ್ತು ಅವರ ಪತ್ನಿ ಮಾತ್ರ ಮತಾಂತರಗೊಂಡಿದ್ದು, ಅವರ ಪುತ್ರಿಗೆ ತಮ್ಮದೇ ನಿರ್ಧಾರವನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯ ನೀಡಿದ್ದಾರೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆಗೆ ಮತಾಂತರ ಯತ್ನವೇ ಕಾರಣ- ಪೊಲೀಸರ ತನಿಖೆಯಿಂದ ಬಯಲು

    ಕೆಲದಿನಗಳ ಹಿಂದೆ ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಇಸ್ಲಾಂ ಧರ್ಮವನ್ನು ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದರು. ದಾಸ್ನಾ ದೇವಸ್ಥಾನದ ಮಹಂತ್ ನರಸಿಂಹ ಆನಂದ ಸರಾವತಿ ಅವರು ರಿಜ್ವಿ ಅವರಿಗೆ ಔಪಚಾರಿಕವಾಗಿ ಹಿಂದೂ ಧರ್ಮದ ದೀಕ್ಷೆಯನ್ನು ನೀಡಿದ್ದರು.

     

  • ಅಫ್ಘಾನ್ ನಿರ್ದೇಶಕಿಯ ಭಾವನಾತ್ಮಕ ಪತ್ರ- ಎಲ್ಲವೂ ಶೂನ್ಯದಿಂದ ಆರಂಭ

    ಅಫ್ಘಾನ್ ನಿರ್ದೇಶಕಿಯ ಭಾವನಾತ್ಮಕ ಪತ್ರ- ಎಲ್ಲವೂ ಶೂನ್ಯದಿಂದ ಆರಂಭ

    ಕಾಬೂಲ್: ತಾಲಿಬಾನ್ ಉಗ್ರರಿಂದ ತಪ್ಪಿಸಿಕೊಂಡು ಅಫ್ಘಾನಿಸ್ತಾನವನ್ನು ತೊರತೆದು ಅನೇಕರು ಬೇರೆಕಡೆ ಪ್ರಯಾಣವನ್ನು ಬೆಳೆಸುತ್ತಿದ್ದಾರೆ. ಫಿಲ್ಮ್ ಮೇಕರ್ ಹಾಗೂ ಫೋಟೋ ಜರ್ನಲಿಸ್ಟ್ ರೋಯಾ ಹೈದರಿ ಅಪ್ಘಾನಿಸ್ತಾನ ತೊರೆದು ಫ್ರಾನ್ಸ್ ಸೇರಿದ್ದಾರೆ. ಅವರು ಭಾವನಾತ್ಮಕ ಪತ್ರವನ್ನು ಬರೆದುಕೊಂಡಿದ್ದಾರೆ.

    ವಿಮಾನ ನಿಲ್ದಾಣದಲ್ಲಿ ನಿಂತಿರುವ ಫೋಟೋ ಹಾಕಿರುವ ಅವರು ಮತ್ತೊಮ್ಮೆ ನಾನು ನನ್ನ ತಾಯ್ನಾಡಿನಿಂದ ಓಡುತ್ತಿದ್ದೇನೆ. ಮತ್ತೊಮ್ಮೆ ನನ್ನ ಜೀವನವನ್ನು ನಾನು ಶೂನ್ಯದಿಂದ ಪ್ರಾರಂಭಿಸಲಿದ್ದೇನೆ. ನಾನು ನನ್ನ ಕ್ಯಾಮೆರಾಗಳನ್ನು ಮತ್ತು ಮೃತಪಟ್ಟ ಆತ್ಮವನ್ನು ನನ್ನೊಂದಿಗೆ ಸಾಗರದಾಚೆ ತೆಗೆದುಕೊಂಡು ಹೋಗುತ್ತಿದ್ದೇನೆ. ನಾವು ಮತ್ತೆ ಭೇಟಿಯಾಗುವವರೆಗೂ ಭಾರವಾದ ಹೃದಯದಿಂದ ಮಾತೃಭೂಮಿಗೆ ವಿದಾಯ ಎಂದಿದ್ದಾರೆ. ಇದನ್ನೂ ಓದಿ: ನಟ ಚಿರಂಜೀವಿ ಭೇಟಿಗಾಗಿ 600 ಕಿ.ಮೀ ಸೈಕಲ್ ತುಳಿದ ಅಭಿಮಾನಿ

    ಸಾವು ಒಮ್ಮೆ ಮಾತ್ರ ಬರುತ್ತದೆ. ಅವರು ನನ್ನನ್ನು ಕೊಂದರೆ ನಾನು ಹೆದರುವುದಿಲ್ಲ. ಆದರೆ ನನ್ನನ್ನು ಜೈಲಿನಲ್ಲಿ ಹಾಕಿಟ್ಟರೆ ನನ್ನ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎನ್ನುವ ಭಯವಷ್ಟೇ. ಅಪ್ಘಾನಿಸ್ತಾನದ ಪ್ರಾಂತ್ಯಗಳು ತಾಲೀಬಾನಿಗಳ ವಶವಾಗಿದೆ. ಸಾಕಷ್ಟು ಜನರು ಹತ್ಯೆಗೊಳಗಾಗಿದ್ದಾರೆ. ಹೆಣ್ಣು ಮಕ್ಕಳನ್ನು ಕಂಡ ಕಂಡಲ್ಲಿ ಅತ್ಯಾಚಾರ ಮಾಡಲಾಗುತ್ತಿದೆ. ಅನೇಕ ಶಾಲೆಗಳು ನೆಲಸಮಗೊಂಡಿವೆ. ಈಗ ಅಪ್ಘಾನಿಸ್ತಾನದ ನಿರ್ದೇಶಕಿ ಸಹ್ರಾ ಕರೀಮಿ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ಬರೆದುಕೊಂಡು ಸಹಾಯ ಕೇಳಿದ್ದರು. ಚಲನಚಿತ್ರ ನಿರ್ಮಾತೃರರನ್ನು ತಾಲೀಬಾನ್‍ನಿಂದ ರಕ್ಷಿಸಬೇಕು ಎಂದು ನಾನು ನೋವಿನಿಂದ ಕೇಳಿಕೊಳ್ಳುತ್ತಿದ್ದೇನೆ. ಕಳೆದ ಕೆಲವು ವಾರಗಳಲ್ಲಿ ಹಲವು ಪ್ರಾಂತ್ಯಗಳ ಮೇಲೆ ತಾಲಿಬಾನ್ ಉಗ್ರರು ನಿಯಂತ್ರಣ ಸಾಧಿಸಿದ್ದಾರೆ. ಅವರು ಇಲ್ಲಿ ಹತ್ಯಾಕಾಂಡ ಮಾಡುತ್ತಿದ್ದಾರೆ. ಅನೇಕ ಮಕ್ಕಳನ್ನು ಅವರು ಅಪಹರಿಸಿದ್ದಾರೆ. ಹುಡುಗಿಯರನ್ನು ಮಾರಿದ್ದಾರೆ ಎಂದು ಅವರು ಬರೆದುಕೊಂಡಿದ್ದರು.

    ಅಪ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನಿಗಳ ಕಪಿಮುಷ್ಟಿ ಸೇರಿದೆ. ಈ ಕಾರಣಕ್ಕೆ ಅನೇಕರು ದೇಶಬಿಟ್ಟು ತೆರಳುತ್ತಿದ್ದಾರೆ. ಈ ಮಧ್ಯೆ ತಾಲಿಬಾನಿಗಳು ಸಿನಿಮಾ ನಿರ್ಮಾಣದ ಮೇಲೆ ತಾಲಿಬಾನಿಗಳು ನಿಬರ್ಂಧ ಹೇರಿದ್ದಾರೆ. ಹೀಗಾಗಿ ಅಲ್ಲಿನ ಸಿನಿಮಾ ನಿರ್ಮಾತೃರರು ದೇಶ ಬಿಟ್ಟು ತೊರೆಯುತ್ತಿದ್ದಾರೆ.

  • ಗಂಡು ಮಗುವಿನ ತಂದೆಯಾದ ನಿರ್ದೇಶಕ ಎ.ಪಿ. ಅರ್ಜುನ್

    ಗಂಡು ಮಗುವಿನ ತಂದೆಯಾದ ನಿರ್ದೇಶಕ ಎ.ಪಿ. ಅರ್ಜುನ್

    ಬೆಂಗಳೂರು: ವಿಭಿನ್ನವಾದ ಸಿನಿಮಾ ನಿರ್ದೇಶನದ ಮೂಲಕವಾಗಿ ಗುರುತಿಸಿಕೊಂಡ ಎ,ಪಿ ಅರ್ಜುನ್ ತಂದೆಯಾಗಿರುವ ಖುಷಿಯಲ್ಲಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಸ್ಯಾಂಡಲ್‍ವುಡ್ ನಿರ್ದೇಶಕ ಎ.ಪಿ. ಅರ್ಜುನ್ ಹಾಗೂ ಅನ್ನಪೂರ್ಣ ದಂಪತಿಗೆ ಗಂಡು ಮಗುವಾಗಿದೆ. ಈ ಸಂತಸದ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ನಗುತ್ತಿರುವ ಕಣ್ಣುಗಳಿಂದ ನಗುತ್ತಿರುವ ಮುಖ ನಿಮ್ಮೆಲ್ಲರೊಡನೆ ನನ್ನ ಜೀವನದ ಸಂತೋಷದಾಯಕ ಸುದ್ದಿಗಳನ್ನು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ನಿನ್ನೆ ಮದ್ಯಾಹ್ನ ಗಂಡು ಮಗುವಾಗಿದ್ದು, ದೇವರ ಕೃಪೆಯಿಂದ ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಅರ್ಜುನ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

     

    View this post on Instagram

     

    A post shared by ap arjun (@aparjun_official)

    ಕಳೆದ ವರ್ಷ ಲಾಕ್‍ಡೌನ್ ಆದಾಗ ಈ ಜೋಡಿ ವಿವಾಹವಾಗಿತ್ತು. ಕಳೆದ ವರ್ಷದ ಮೇ 10ರಂದು ಕುಟುಂಬದ ಆಪ್ತರು ಹಾಗೂ ಕೆಲವೇ ಸ್ನೇಹಿತರ ಸಮ್ಮುಖದಲ್ಲಿ ತಮ್ಮ ದೀರ್ಘಕಾಲದ ಪ್ರೇಮಿ ಅನ್ನಪೂರ್ಣಾ ಅವರನ್ನು ವಿವಾಹವಾಗಿದ್ದರು. ಇತ್ತೀಚೆಗಷ್ಟೆ ಮಡದಿಯ ಸೀಮಂತ ಸಮಾರಂಭವನ್ನು ಸರಳವಾಗಿ ಮನೆಯಲ್ಲಿ ಸೆಲೆಬ್ರೆಟ್ ಮಾಡಿದ್ದರು. ಇದೀಗ ಈ ಮುದ್ದಾದ ಜೋಡಿಗೆ ಗಂಡು ಮಗುವಾಗಿದೆ.

  • ಪತ್ನಿಯನ್ನ ಕೊಲೆಗೈದು, ತುಂಡು ಮಾಡಿ ಕಸದಬುಟ್ಟಿಗೆ ಎಸೆದಿದ್ದ ನಿರ್ಮಾಪಕ ಅರೆಸ್ಟ್

    ಪತ್ನಿಯನ್ನ ಕೊಲೆಗೈದು, ತುಂಡು ಮಾಡಿ ಕಸದಬುಟ್ಟಿಗೆ ಎಸೆದಿದ್ದ ನಿರ್ಮಾಪಕ ಅರೆಸ್ಟ್

    – ತುಂಡಾಗಿ ಬಿದ್ದಿದ್ದ ದೇಹದ ಮೇಲಿದ್ದ ಟ್ಯಾಟೂನಿಂದ ಆರೋಪಿ ಸಿಕ್ಕಿಬಿದ್ದ

    ಚೆನ್ನೈ: ಪತ್ನಿಯನ್ನು ಕೊಲೆ ಮಾಡಿ, ಮೃತ ದೇಹವನ್ನು ತುಂಡು ತುಂಡು ಮಾಡಿ ಕಸದ ತೊಟ್ಟಿಗೆ ಎಸೆದಿದ್ದ ಕಿರುಚಿತ್ರ ನಿರ್ದೇಶಕ, ನಿರ್ಮಾಪಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

    ಸಂಧ್ಯಾ (35) ಕೊಲೆಯಾದ ಪತ್ನಿ. ಚೆನ್ನೈನ ಬಾಲಕೃಷ್ಣ (51) ಬಂಧಿತ ನಿರ್ದೇಶಕ, ನಿರ್ಮಾಪಕ. ಸಂಧ್ಯಾ ಕೊಲೆಯಾದ ಹದಿನೈದು ದಿನಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಇದು ತನಿಖೆಗೆ ಹೊಸ ಟ್ವಿಸ್ಟ್ ನೀಡಿತ್ತು.

    ಆರೋಪಿ ಬಾಲಕೃಷ್ಣ ಜನವರಿ 19ರಂದು ಸಂಧ್ಯಾಳನ್ನು ಕೊಲೆ ಮಾಡಿದ್ದ. ಮಾರನೇ ದಿನ ಮೃತ ದೇಹವನ್ನು ತುಂಡು ತುಂಡು ಮಾಡಿ, ಪ್ರತ್ಯೇಕ ಪ್ಲಾಸ್ಟಿಕ್ ಬ್ಯಾಗ್‍ಗಳಿಗೆ ತುಂಬಿದ್ದ. ಬಳಿಕ ಅದನ್ನು ಯಾರಿಗೂ ತಿಳಿಯದಂತೆ ನಗರದ ಕಸದ ಬುಟ್ಟಿಗಳಲ್ಲಿ ಎಸೆದು ಪರಾರಿಯಾಗಿದ್ದ.

    ಸಂಧ್ಯಾ ನಾಪತ್ತೆಯಾಗಿರುವ ಕುರಿತು ಪೋಷಕರು ಚೆನ್ನೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕಸದಬುಟ್ಟಿಯಲ್ಲಿ ಮೃತ ದೇಹದ ಅಂಗಾಂಗಗಳು ಸಿಕ್ಕಿವೆ. ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಟ್ಯಾಟೂ ಇರುವುದು ಕಂಡು ಬಂದಿದೆ.

    ಸಂಧ್ಯಾ ಪೋಷಕರು ನೀಡಿದ್ದ ದೂರಿನಲ್ಲಿ ಮಗಳ ದೇಹದ ಮೇಲೆ ಟ್ಯಾಟೂ ಗುರುತು ತಿಳಿಸಿದ್ದರು. ಇದರಿಂದಾಗಿ ಮೃತದೇಹ ಸಂಧ್ಯಾಳದ್ದೇ ಎನ್ನುವ ಶಂಕೆ ವ್ಯಕ್ತವಾಗಿತ್ತು. ಪ್ರಕರಣದ ಸಂಬಂಧ ಬಾಲಕೃಷ್ಣನನ್ನು ಬುಧವಾರ ಬಂಧಿಸಿ ವಿಚಾರಣೆ ನಡೆದಿದಾಗ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಎಕೆ ವಿಶ್ವನಾಥನ್ ತಿಳಿಸಿದ್ದಾರೆ.

    ಬಾಲಕೃಷ್ಣ ನೀಡಿದ ಮಾಹಿತಿ ಆಧಾರದ ಮೇಲೆ ಪರಿಶೀಲನೆ ನಡೆಸಿದಾಗ ಬುಧವಾರ ಸಂಧ್ಯಾ ಮೃತದೇಹದ ಮತ್ತೊಂದು ಭಾಗ ಪತ್ತೆಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv