Tag: Filmteam

  • ಕನ್ನಡ ಶಾಲೆ ಮುಚ್ಚಬಾರದು ಎಂಬ ವಿಷಯದ ಮೇಲೆ ಈ ಸಿನಿಮಾ ಮಾಡಿದ್ವಿ- ರಿಷಬ್ ಶೆಟ್ಟಿ

    ಕನ್ನಡ ಶಾಲೆ ಮುಚ್ಚಬಾರದು ಎಂಬ ವಿಷಯದ ಮೇಲೆ ಈ ಸಿನಿಮಾ ಮಾಡಿದ್ವಿ- ರಿಷಬ್ ಶೆಟ್ಟಿ

    ಧಾರವಾಡ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ತಂಡ ಇಂದು ಧಾರವಾಡಕ್ಕೆ ಆಗಮಿಸಿತ್ತು. ಈ ವೇಳೆ ಕನ್ನಡ ಶಾಲೆಗಳನ್ನು ಮುಚ್ಚಬಾರದು ಎಂಬ ವಿಷಯದ ಮೇಲೆ ಈ ಚಲನಚಿತ್ರ ಮಾಡಿದ್ದೇವೆ ಎಂದು ನಿರ್ದೇಶಕ ರಿಷಬ್ ಶೆಟ್ಟಿ ತಿಳಿಸಿದ್ದಾರೆ.

    ಈ ವೇಳೆ ನಗರದ ಕೆಸಿಡಿ ಕಾಲೇಜ್ ಬಳಿ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ತಂಡದ ಸದಸ್ಯರು ಸಿನಿಮಾಗೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿದರು. ನಂತರ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪನವರ ಜೊತೆ ಮಾಧ್ಯಮಗೋಷ್ಠಿ ನಡೆಸಿದ ಸಿನಿಮಾ ನಿರ್ದೇಶಕ ರಿಷಬ್ ಶಟ್ಟಿ, ಕನ್ನಡ ಶಾಲೆಗಳನ್ನು ಮುಚ್ಚಬಾರದು ಎಂಬ ವಿಷಯದ ಮೇಲೆ ಈ ಚಲನಚಿತ್ರ ಮಾಡಿದ್ದೇವೆ ಎಂದು ಹೇಳಿದರು. ಕನ್ನಡ ಶಾಲೆಗಳಿಗೆ ಮಕ್ಕಳಿಗೆ ಸರಿಯಾದ ವ್ಯವಸ್ಥೆ ಇಲ್ಲ ಎಂಬ ವಿಷಯದ ಮೇಲೆ ಈ ಚಿತ್ರ ಮಾಡಲಾಗಿದೆ ಎಂದ ಅವರು, ಸರ್ಕಾರಿ ಶಾಲೆಯ ಮಕ್ಕಳು ರ‍್ಯಾಂಕ್ ಬರ್ತಾರೆ ಎಂದು ಹೇಳಿದರು.

    ಕಾಸರಗೋಡಿನ ಒಂದು ಸರ್ಕಾರಿ ಶಾಲೆ ಅದು ಶಿಥಿಲಾವಸ್ಥೆಯಲ್ಲಿದೆ ಎಂಬ ನೆಪ ಹೇಳಿ ಕೇರಳದ ಶಿಕ್ಷಣ ಅಧಿಕಾರಿಯೊಬ್ಬ ಶಾಲೆಯನ್ನು ಮುಚ್ಚಿಸುತ್ತಾನೆ. ಮಕ್ಕಳು ಮತ್ತು ಊರ ಮಂದಿ ದಿಕ್ಕು ಕಾಣದಂತಾಗುತ್ತಾರೆ. ಕಡೆಗೆ ಮಕ್ಕಳೆಲ್ಲ ಸೇರಿ ಸಮಾಜಸೇವಕ ಅನಂತಪದ್ಮನಾಭ ಪಿ.(ಅನಂತನಾಗ್) ಅವರನ್ನು ಕರೆತರುತ್ತಾರೆ. ಅನಂತ್ ಬರೋತನಕ ಮಕ್ಕಳ ಕೀಟಲೆ, ಸಣ್ಣ ವಯಸ್ಸಿನಲ್ಲೇ ಶುರುವಾಗುವ ಪ್ರೀತಿಯ ಸೆಳೆತ ಮುಂತಾದವುಗಳ ಜೊತೆಗೆ ಸಾಗುವ ಕಥೆ ಅನಂತ್ ನಾಗ್ ಅವರು ಬರುತ್ತಿದ್ದಂತೇ ಬೇರೆಯದ್ದೇ ಆಯಾಮ ಪಡೆಯುತ್ತದೆ. ಅನಂತ್ ನಾಗ್ ಕೋರ್ಟ್ ನಲ್ಲಿ ವಾದ ಮಂಡಿಸುವ ಸಂದರ್ಭದಲ್ಲಂತೂ ಎಂಥವರಿಗಾದರೂ ನಗು ಮತ್ತು ಅಳು ಒಟ್ಟೊಟ್ಟಿಗೆ ಒತ್ತರಿಸಿಕೊಂಡು ಬರುತ್ತದೆ.

    ಬಹುಶಃ ಇದೇ ಕಥೆಯನ್ನೇ ತೀರಾ ಗಂಭೀರವಾಗಿ ಹೇಳಿದ್ದಿದ್ದರೆ ಅದು ಮಾಮೂಲಿ ಕಲಾತ್ಮಕ ಸಿನಿಮಾವಾಗಿ ಅಥವಾ ಡಾಕ್ಯುಮೆಂಟರಿ ರೀತಿಯ ಚಿತ್ರವಾಗಿಯಷ್ಟೇ ದಾಖಲಾಗುತ್ತಿತ್ತು. ನಿರ್ದೇಶಕ ರಿಷಬ್ ಶೆಟ್ಟಿ ಗಡಿನಾಡು ಮತ್ತು ಭಾಷೆಯ ಸಮಸ್ಯೆಯನ್ನು ಹೊಂದಿರುವ ತೀರಾ ಗಂಭೀರವಾದ ವಿಚಾರವನ್ನು ಪಕ್ಕಾ ಮನರಂಜನಾ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದಾರೆ. ಆ ಮೂಲಕ ರಂಜಿಸುತ್ತಲೇ ಸೀರಿಯಸ್ಸಾದ ವಿಚಾರವನ್ನು ನೋಡುಗರ ಮನಸ್ಸಿಗೆ ದಾಟಿಸಿದ್ದಾರೆ.

    ಪ್ರಮೋದ್ ಶೆಟ್ಟಿ, ಅನಂತ್ ನಾಗ್ ಮತ್ತು ಎಲ್ಲ ಮಕ್ಕಳೂ ಅದ್ಭುತವಾಗಿ ನಟಿಸಿದ್ದಾರೆ. ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣ ಕಣ್ಣೆದುರೇ ಕಾಸರಗೋಡನ್ನು ಕಟ್ಟಿಕೊಟ್ಟಿದೆ. ರಾಜ್ ಬಿ. ಶೆಟ್ಟಿ ಅವರ ಸಂಭಾಷಣೆ ಮನಸ್ಸಿಗೆ ಹತ್ತಿರವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೆಟ್ಟೇರಿತ್ತು `ದಚ್ಚು ದೀಪು’ ಸಿನಿಮಾ!

    ಸೆಟ್ಟೇರಿತ್ತು `ದಚ್ಚು ದೀಪು’ ಸಿನಿಮಾ!

    ಬೆಂಗಳೂರು: `ದಚ್ಚು ದೀಪು’ ಎನ್ನುವ ಶೀರ್ಷಿಕೆಯಲ್ಲಿ ಕನ್ನಡ ಸಿನಿಮಾ ಸೆಟ್ಟೇರಿದೆ.

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕಿಚ್ಚ ಸುದೀಪ್ ಅವರನ್ನು ಸ್ಯಾಂಡಲ್‍ವುಡ್‍ನಲ್ಲಿ ದಚ್ಚು, ದೀಪು ಎನ್ನುವ ಹೆಸರಿನಿಂದ ಕರೆಯಲಾಗುತ್ತೆ. ಹೀಗಾಗಿ ಇಂದು ಸೆಟ್ಟೇರಿರುವ `ದಚ್ಚು ದೀಪು’ ಸಿನಿಮಾ ಕುತೂಹಲಕ್ಕೆ ಕಾರಣವಾಗಿದೆ.

    ದರ್ಶನ್ ಮತ್ತು ಸುದೀಪ್ ಅಭಿಮಾನಿಗಳ ಸ್ನೇಹ, ವೈರತ್ವದ ಕಥೆ ಚಿತ್ರದಲ್ಲಿರುತ್ತೆ ಎಂದು ಚಿತ್ರದ ನಾಯಕ ಚಂದು ಹೇಳಿದ್ದಾರೆ. ಇನ್ನೂ ಚಿತ್ರದ ಪೋಸ್ಟರ್ ನಲ್ಲಿ ದರ್ಶನ್ ಮತ್ತು ಸುದೀಪ್ ಪೋಸ್ಟರ್ ಗಳನ್ನೂ ಹಾಕಲಾಗಿದೆ.

    ಇಬ್ಬರು ನಟರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಹಾಗಾಗಿ ನಾವು ಅವರ ಅಭಿಮಾನಿಯಾಗಿದ್ದು, ಅವರ ಆರ್ಶೀವಾದದಿಂದ ಈ ಸಿನಿಮಾ ಮಾಡೋಣ ಅನ್ನಿಸಿತ್ತು ಎಂದು ನಿರ್ದೇಶಕ ಆನಂದ್ ತಿಗಡಿ ಹೇಳಿದ್ದಾರೆ.

    ರಂಜಿತ್ ತಿಗಡಿ ನಿರ್ದೇಶನದ ದಚ್ಚು ದೀಪು ಸಿನಿಮಾದಲ್ಲಿ ಆನಂದ್, ಚಂದು ಹೊಸ ಪ್ರತಿಭೆಗಳು ಅಭಿನಯಿಸುತ್ತಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಚಿತ್ರದ ಮುಹೂರ್ತ ನಡೆದಿದೆ. ಜಗ್ಗೇಶ್ ಮತ್ತು ಅಜಯ್ ರಾವ್ ಚಿತ್ರದ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದ್ದರು.

  • ನಟಸಾರ್ವಭೌಮ ಚಿತ್ರತಂಡವನ್ನು ವಿಶೇಷವಾಗಿ ಗೌರವಿಸಿದ ಪವರ್ ಸ್ಟಾರ್!

    ನಟಸಾರ್ವಭೌಮ ಚಿತ್ರತಂಡವನ್ನು ವಿಶೇಷವಾಗಿ ಗೌರವಿಸಿದ ಪವರ್ ಸ್ಟಾರ್!

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ತಾವು ನಟಿಸುತ್ತಿರುವ ‘ನಟಸಾರ್ವಭೌಮ’ ಚಿತ್ರತಂಡವನ್ನು ತಮ್ಮ ಮನೆಗೆ ಕರೆಸಿ ವಿಶೇಷವಾಗಿ ಗೌರವಿಸಿದ್ದಾರೆ. ಪುನೀತ್ ತನ್ನ ಪತ್ನಿ ಜೊತೆ ಸೇರಿ ಚಿತ್ರತಂಡಕ್ಕೆ ವಿಶೇಷ ಔತಣ ನೀಡಿದ್ದಾರೆ.

    ಗುರುವಾರ ಚಿತ್ರದ ನಿರ್ದೇಶಕರ ತಂಡ ಪುನೀತ್ ಅವರ ಮನೆಗೆ ವಿಶೇಷ ಔತಣಕ್ಕೆಂದು ಹೋಗಿದ್ದರು. ನಿರ್ದೇಶಕರಾದ ಪವನ್ ಒಡೆಯರ್, ಕುಮಾರ್ ಹಾಗೂ ಹಾಸ್ಯ ನಟ ಚಿಕ್ಕಣ್ಣ ಅವರು ಒಟ್ಟಿಗೆ ಊಟ ಮಾಡಿದ್ದಾರೆ.

    ಪುನೀತ್ ರಾಜ್‍ಕುಮಾರ್ ಅವರ ಮನೆಯಲ್ಲಿ ಊಟ ಮಾಡಿ ಬಳಿಕ ಚಿತ್ರತಂಡದ ಸದಸ್ಯರು ಒಂದು ಫೋಟೋವನ್ನು ತೆಗೆಸಿಕೊಂಡಿದ್ದಾರೆ. ಸದ್ಯ ಆ ಫೋಟೋವನ್ನು ನಿರ್ದೇಶಕ ಪವನ್ ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅದಕ್ಕೆ,”ಇಂದು ನಾನು ಪುನೀತ್ ಸರ್ ಮನೆಯಲ್ಲಿ ಊಟ ಮಾಡಿದೆ. ಅಶ್ವಿನಿ ಮೆಡಮ್ ಸಾಂಬರ್, ಪೂರಿ ಡೆಸರ್ಟ್ಸ್ ಹಾಗೂ ಅದ್ಭುತ ಊಟಕ್ಕೆ ಧನ್ಯವಾದಗಳು. ಇಡೀ ನಿರ್ದೇಶಕರ ತಂಡ ಊಟವನ್ನು ಆನಂದಿಸಿದೆ” ಎಂದು ಬರೆದು ಪವನ್ ಒಡೆಯರ್ ಪೋಸ್ಟ್ ಮಾಡಿದ್ದಾರೆ.

    ಸದ್ಯ ಪುನೀತ್ ರಾಜ್‍ಕುಮಾರ್ ನಟಸಾರ್ವಭೌಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದು, ರಾಕ್‍ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ ಪವನ್ ಒಡೆಯರ್, ಪುನೀತ್ ರಾಜ್‍ಕುಮಾರ್ ಅವರ ‘ರಣವಿಕ್ರಮ’ ಚಿತ್ರವನ್ನು ನಿರ್ದೇಶಿಸಿದ್ದರು.