Tag: Final Tribute

  • ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

    ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

    ಬೆಂಗಳೂರು: ಟೀಂ ಇಂಡಿಯಾದ (Team India) ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble) ಅವರಿಂದು ಬೆಂಗಳೂರು ಸದಾಶಿವ ನಗರದ ಎಸ್‌ಎಂ ಕೃಷ್ಣ (SM Krishna) ನಿವಾಸಕ್ಕೆ ಆಗಮಿಸಿ ಎಸ್‌ಎಂಕೆಗೆ ಅಂತಿಮ ನಮನ ಸಲ್ಲಿಸಿದರು.

    ಬಳಿಕ ಮಾತನಾಡಿದ ಅವರು, ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು, ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆ ಸಾಕಷ್ಟಿದೆ. ಜೊತೆಗೆ ಕ್ರೀಡೆಗೂ ತುಂಬಾ ಪ್ರೋತಾಹ ನೀಡುತ್ತಿದ್ದರು ಎಂದರು.ಇದನ್ನೂ ಓದಿ: 1,000 ಕೆಜಿ ಗಂಧದ ಕಟ್ಟಿಗೆಯಲ್ಲಿ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ: ಗಣಿಗ ರವಿ

    ಎಸ್‌ಎಂ ಕೃಷ್ಣ ಅವರ ಅಗಲಿಕೆ ರಾಜ್ಯಕ್ಕೆ ದು:ಖಕರವಾದ ಸಂಗತಿ. ನಾವೆಲ್ಲ ಕುಟುಂಬದ ರೀತಿ ಇದ್ದೇವು ಎಂದು ಸ್ಮರಿಸಿದರು.

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರಿಂದು (ಡಿ.10) ಬೆಳಗಿನ ಜಾವ ವಿಧಿವಶರಾದರು.ಇದನ್ನೂ ಓದಿ: ಹೈಟೆಕ್‌ ಜಿಮ್‌, ಸ್ಪಾ – ದೆಹಲಿ ಸಿಎಂ ನಿವಾಸ ʻಶೇಶ್‌ ಮಹಲ್‌ʼ ವೀಡಿಯೋ ಹರಿಬಿಟ್ಟ ಬಿಜೆಪಿ!

  • ಬಾಗಲಕೋಟೆಗೆ ಆಗಮಿಸಿದ ಮಾತೆ ಮಹಾದೇವಿ ಲಿಂಗೈಕ್ಯ ಶರೀರ

    ಬಾಗಲಕೋಟೆಗೆ ಆಗಮಿಸಿದ ಮಾತೆ ಮಹಾದೇವಿ ಲಿಂಗೈಕ್ಯ ಶರೀರ

    ಬಾಗಲಕೋಟೆ: ಜಗತ್ತಿನ ಪ್ರಥಮ ಮಹಿಳಾ ಜಗದ್ಗುರು ಡಾ. ಮಾತೆ ಮಹಾದೇವಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಲಿಂಗಾಯತ ಧರ್ಮದ ಮತ್ತೊಂದು ಕೊಂಡಿ ಕಳಚಿದಂತಾಗಿದೆ. ರಾತ್ರಿ ವೇಳೆ ಆಗಮಿಸಿದ ಮಾತಾಜಿ ಪಾರ್ಥಿವ ಶರೀರವನ್ನು ಕೂಡಲಸಂಗಮ ಕ್ರಾಸ್ ಬಳಿ ಬರಮಾಡಿಕೊಂಡರು. ಬಸವಣ್ಣನವರ ವಚನಗಳ ಮೂಲಕ ಭಕ್ತಿಯ ಶ್ರದ್ಧಾಂಜಲಿ ಅರ್ಪಿಸಿದರು.

    ಸಂಗಮಕ್ರಾಸ್ ನಿಂದ ಬಸವಣ್ಣನ ವೃತ್ತ ಮೂಲಕ ಬಸವ ಧರ್ಮಪೀಠ ವರೆಗೆ ಮೆರವಣಿಗೆ ಮಾಡಲಾಯಿತು. ದಾರಿಯುದ್ದಕ್ಕೂ ಅಪಾರ ಭಕ್ತರು ಮಾತಾಜಿ ಲಿಂಗೈಕ್ಯ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಮೊಂಬತ್ತಿ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

    ನಂತರ ಬಸವಧರ್ಮ ಪೀಠ ವೇದಿಕೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು. ಬಸವಧರ್ಮ ನೂತನ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಸೇರಿದಂತೆ ಅನೇಕ ಸ್ವಾಮೀಜಿಗಳು ಮಾತಾಜಿ ಶರೀರಕ್ಕೆ ಪೂಜೆ ಸಲ್ಲಿಸಿದರು.

    ರಾತ್ರಿಯಾದರೂ ಅಪಾರ ಭಕ್ತರು ತಾಯಿ ದರ್ಶನ ಪಡೆದು ಕಣ್ಣೀರಿಟ್ಟರು. ಮಾತೆ ಸತ್ಯಾದೇವಿ, ಮಹಾದೇಶ್ವರ ಸ್ವಾಮೀಜಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ, ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮೀಜಿ ಹಾಗೂ ಸಿದ್ದರಾಮೇಶ್ವರ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು, ಭಕ್ತ ಸಮೂಹ ಶೋಕ ಸಾಗರದಲ್ಲಿ ಮೊಳಗಿತ್ತು. ರಾತ್ರಿ ಇಡೀ ಶರಣರ ವಚನಗಳ ಭಜನೆ ಮಾಡಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದಗಂಗಾ ಶ್ರೀ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ – ಓರ್ವ ಸಾವು

    ಸಿದ್ದಗಂಗಾ ಶ್ರೀ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ – ಓರ್ವ ಸಾವು

    ಚಿಕ್ಕಮಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆದು ಹಿಂದಿರುಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಬಳಿ ನಡೆದಿದೆ.

    ಪರಮೇಶ್ವರಪ್ಪ(40) ಸ್ಥಳದಲ್ಲೇ ಮೃತ ವ್ಯಕ್ತಿ. ಕಡೂರಿನ ಮಲ್ಲೇಶ್ವರ ಗ್ರಾಮದ ಏಳು ಮಂದಿ ಬೊಲೆರೋ ಮಾಡಿಕೊಂಡು ಶ್ರೀಗಳ ಅಂತಿಮ ದರ್ಶನಕ್ಕೆಂದು ಸೋಮವಾರ ಮಧ್ಯಾಹ್ನ ತೆರಳಿದ್ದರು. ಸೋಮವಾರ ರಾತ್ರಿಯೇ ದರ್ಶನ ಮಾಡಿಕೊಂಡು ವಾಪಸ್ ಮರಳುವಾಗ ಈ ಅಪಘಾತ ಸಂಭವಿಸಿದೆ.

    ಈ ಘಟನೆಯಲ್ಲಿ ಪರಮೇಶ್ವರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದು, ಡ್ರೈವರ್ ಸೇರಿ ಆರು ಮಂದಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಕೂಡಲೇ ಕಡೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

    ನಡೆದಾಡುವ ದೇವರ ಅಂತಿಮ ದರ್ಶನಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ

    ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನ ಪಡೆಯಲು ಕಳೆದ ರಾತ್ರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಈ ವೇಳೆ ಜನ ಸಾಗರದಿಂದ ಮಹಿಳೆಯರು ವೃದ್ಧರು ಅವಕಾಶ ಸಿಗದೇ ಇಂದು ಬೆಳಗ್ಗೆ ಶ್ರೀಗಳ ದರ್ಶನಕ್ಕೆ ಮುಂದಾಗಿದ್ದಾರೆ.

    ರಾತ್ರಿ ವೇಳೆ ಬಂದಿರುವ ಭಕ್ತರು ಸಿದ್ದಗಂಗಾ ಮಠದ ಆವರಣದಲ್ಲಿಯೇ ಕೆಲಕಾಲ ವಿಶ್ರಾಂತಿಯನ್ನ ಪಡೆದರು. ಇಂದು ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಭಕ್ತರ ದಾಸೋಹಕ್ಕೆ ಯಾವುದೇ ಸಮಸ್ಯೆಯಾಗದೇ ಇರಲು ಮಠದ ಸುತ್ತಲೂ ಹತ್ತು ಕಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: 70ರ ದಶಕದಲ್ಲೇ ಗದ್ದುಗೆ ನಿರ್ಮಾಣಕ್ಕೆ ಜಾಗ ಸೂಚಿಸಿದ್ದ ಶ್ರೀ: ಭವನದ ವಿಶೇಷತೆ ಏನು?

    ಸಿದ್ದಗಂಗಾ ಮಠದಲ್ಲಿ ಮಾತ್ರವಲ್ಲದೇ ಮಠದ ಭಕ್ತರಿಂದ ತುಮಕೂರು ಸುತ್ತಮುತ್ತಲಿನ ಹಲೆವೆಡೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ದೂರದ ಊರಿನಿಂದ ಸಿದ್ದಗಂಗಾ ಮಠಕ್ಕೆ ಹೋಗುವ ಜನರಿಗಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ. ರಾತ್ರಿ ವೇಳೆಯೇ 1 ಲಕ್ಷಕ್ಕೂ ಹೆಚ್ಚು ಭಕ್ತರು ಅಂತಿಮ ದರ್ಶನ ಪಡೆದಿದ್ದಾರೆ. ಸರದಿ ಸಾಲಿನಲ್ಲಿ ಬಂದು ಭಕ್ತರು ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ.

    ನಟಿ ಸುಮಲತ, ಮಗ ಅಭಿಷೇಕ್ ಗೌಡ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ, ದೊಡ್ಡಣ್ಣ ಶ್ರೀಗಳ ಅಂತಿಮ ದರ್ಶನ ಪಡೆದಿದ್ದಾರೆ. ಸಾಗರೋಪಾದಿಯಲ್ಲಿ ಬರುತ್ತಿರುವ ಭಕ್ತಾದಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸ್ಯಾಂಡಲ್‍ವುಡ್ ಕ್ವೀನ್‍ಗೆ ಫುಲ್‍ಕ್ಲಾಸ್- ರಮ್ಯಾ ಬರ್ತ್ ಡೇ ನಮ್ಗೆ ಕರಾಳ ದಿನವೆಂದ್ರು ಅಭಿಮಾನಿ

    ಸ್ಯಾಂಡಲ್‍ವುಡ್ ಕ್ವೀನ್‍ಗೆ ಫುಲ್‍ಕ್ಲಾಸ್- ರಮ್ಯಾ ಬರ್ತ್ ಡೇ ನಮ್ಗೆ ಕರಾಳ ದಿನವೆಂದ್ರು ಅಭಿಮಾನಿ

    ಮಂಡ್ಯ: ನಟ, ಮಾಜಿ ಸಚಿವ ಅಂಬರೀಶ್ ಅಂತ್ಯಕ್ರಿಯೆಗೆ ನಟಿ, ಮಾಜಿ ಸಂಸದೆ ರಮ್ಯಾ ಬಾರದ ಹಿನ್ನೆಲೆಯಲ್ಲಿ ರಮ್ಯಾ ಕಟ್ಟಾ ಅಭಿಮಾನಿಯೇ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಸ್ಯಾಂಡಲ್ ವುಡ್ ಕ್ವೀನ್ ವಿರುದ್ಧ ಪೋಸ್ಟ್ ಮಾಡಿದ್ದಾರೆ.

    ಅಭಿಮಾನಿ ಗುಣಶೇಖರ್ ಎಂಬವರು ರಮ್ಯಾ ಅವರ ವಿರುದ್ಧ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ರಮ್ಯಾ ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದಾಗ ಅವರ ಅಭಿಮಾನಿಯಾಗಿ ಗುಣಶೇಖರ್ ಸಾಕಷ್ಟು ಶ್ರಮ ಪಟ್ಟಿದ್ದರು. ಆದರೆ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ದರ್ಶನ ಪಡೆಯುವುದಕ್ಕೆ ರಮ್ಯಾ ಅವರು ಬಂದಿಲ್ಲ ಎಂದು ಅಭಿಮಾನಿ ಕೋಪಗೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಭಿಮಾನಿ ಪೋಸ್ಟ್ ನಲ್ಲೇನಿದೆ..?
    ಗುಣಶೇಖರ್ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ, `ಇಲ್ಲಿ ಸಲ್ಲದ ನೀವು ಇನ್ನೆಲ್ಲೂ ಸಲ್ಲಲ್ಲ. ಇಂದು ನಿಮ್ಮ ಹುಟ್ಟು ಹಬ್ಬದ ದಿನ ಆದ್ರೆ ನಮಗೆ ಇಂದು ಬೇಸರದ ದಿನ. ಹೃದಯವಂತ ಅಂಬರೀಶ್ ಅವರ ಅಂತಿಮ ದರ್ಶನ ಮಾಡದ ನೀವು ಕನ್ನಡಿಗರ ದರ್ಶನ ಮಾಡಲು ಅನರ್ಹರು. ನಿಮ್ಮ ಮೇಲಿಟ್ಟಿದ್ದ ನಂಬಿಕೆಗಳೆಲ್ಲ ಸುಳ್ಳಾಗಿದೆ. ಅಂಬಿ ಎಲ್ಲಿದ್ದರೂ ಮಂಡ್ಯ ಮರೆತಿರಲಿಲ್ಲ. ಆದ್ದರಿಂದ ಅಂಬಿಗೆ ಮಂಡ್ಯದಿಂದ ಇಂಡಿಯಾವರೆಗೆ ಅಭಿಮಾನಿಗಳಿದ್ದಾರೆ. ರೈತನಾಯಕ ಪುಟ್ಟಣ್ಣಯ್ಯ ಅಂತ್ಯಕ್ರಿಯೆಗೆ ನೀವು ಬರಲಿಲ್ಲ. ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಇಡೀ ದೇಶವೇ ಕಂಬನಿ ಮಿಡಿಯಿತು. ಆದ್ರೆ ನೀವು ಸಾವಿನಲ್ಲೂ ರಾಜಕಾರಣ ಮಾಡುತ್ತೀದ್ದೀರಾ..’ ಎಂದು ನಟಿ ರಮ್ಯಾ ವಿರುದ್ಧ ಕಿಡಿಕಾರಿದ್ದಾರೆ.

    ಅಷ್ಟೆ ಅಲ್ಲದೆ `ನೀವು ಟ್ವಿಟ್ಟರ್‍ನಲ್ಲಿ ಸಂತಾಪ ಸೂಚಿಸುತ್ತಾ ಕಾಲಕಳೆಯುತ್ತಿದ್ದೀರಿ. ನಿಮ್ಮ ತಪ್ಪುಗಳ ಅರಿವು ನನಗಿದ್ದರೂ ನಿಮ್ಮ ಅಭಿಮಾನಿಯಾಗಿ ನಿಮ್ಮನ್ನ ಸಮರ್ಥಿಸಿಕೊಳ್ಳುತ್ತಿದ್ದೆ. ಯಾಕಂದ್ರೆ ತಿಳಿದೋ ತಿಳಿಯದೋ ತಪ್ಪು ಮಾಡಿರಬಹುದು ಅಂತಾ ಅಂದುಕೊಂಡಿದ್ದೆ. ಆದ್ರೆ ನಿಮ್ಮಲ್ಲಿರೋದು ವಿಷ ಅಂತಾ ಗೊತ್ತಿರಲಿಲ್ಲ. ಪ್ರತಿ ವರ್ಷ ನಿಮ್ಮ ಹುಟ್ಟುಹಬ್ಬದಂದು ಅನಾಥ ಮಕ್ಕಳಿಗೆ, ಬಡ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಕೊಟ್ಟು ಆಚರಿಸುತ್ತಿದ್ವಿ, ನಿಮ್ಮನ್ನ ಸಮರ್ಥಿಸಿಕೊಂಡು ಸ್ವಪಕ್ಷೀಯರ ವಿರೋಧವೂ ಕಟ್ಟಿಕೊಂಡಿದ್ದೆ. ಇಂದು ಆ ಹೋರಾಟವೆಲ್ಲಾ ವ್ಯರ್ಥವಾಗಿದೆ. ಇಂದು ನಿಮ್ಮ ಜನ್ಮದಿನವಲ್ಲ ಕರಾಳ ದಿನ’ ಎಂದು ರಮ್ಯ ಅಭಿಮಾನಿ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ಅವರಿಗೆ ಫುಲ್‍ಕ್ಲಾಸ್ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅಂತಿಮ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ

    ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅಂತಿಮ ದರ್ಶನ ಪಡೆದ ಸಿಎಂ ಕುಮಾರಸ್ವಾಮಿ

    ಹಾಸನ: ಮಂಗಳವಾರದಂದು ನಿಧನರಾದ ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅವರ ಪ್ರಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಎಂ ಕುಮಾರಸ್ವಾಮಿ ಅವರು ಪಡೆದಿದ್ದಾರೆ.

    ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಆಗಮಿಸಿದ ಸಿಎಂ, ಅಗಲಿದ ಹಿರಿಯ ನಾಯಕನಿಗೆ ಕೊನೆಯ ನಮನ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಚಿವ ಹೆಚ್.ಡಿ.ರೇವಣ್ಣ ಭಾಗಿಯಾಗಿದ್ದರು.

    ಎಚ್.ಎಸ್ ಪ್ರಕಾಶ್ ಅವರು ಒಟ್ಟು 6 ಬಾರಿ ಹಾಸನ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು. ಅದರಲ್ಲಿ 4 ಬಾರಿ ಗೆಲುವನ್ನು ಸಾಧಿಸಿದ್ದರು. ಮೊದಲ ಬಾರಿಗೆ 1994ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 2004 ರಿಂದ 2018 ರ ವರೆಗೆ ಚುನಾವಣೆಯಲ್ಲಿ ಮೂರು ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಸೌಮ್ಯ ಸ್ವಭಾವದ ರಾಜಕಾರಣಿಯಾಗಿದ್ದ ಪ್ರಕಾಶ್, ಜನತಾ ದಳ ಪರಿವಾರದ ನಾಯಕರಾದ ದೇವೇಗೌಡರು, ಸಿದ್ದರಾಮಯ್ಯ ಅವರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರು. ಈಗ ಎಚ್.ಎಸ್ ಪ್ರಕಾಶ್ ಅವರ ನಿಧನದಿಂದ ಜೆಡಿಎಸ್ ಪಕ್ಷ ಓರ್ವ ಉತ್ತಮ ರಾಜಕಾರಣಿಯನ್ನು ಕಳೆದುಕೊಂಡಿದೆ.

    ಮಾಜಿ ಶಾಸಕ ಎಚ್.ಎಸ್ ಪ್ರಕಾಶ್ ಅವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನದ ನಂತರ, ಶಾಂತಿ ಗ್ರಾಮ ಹೋಬಳಿ ಕೆ. ಆಲದಹಳ್ಳಿಯ ಅವರ ಜಮೀನಿನಲ್ಲಿ ನೆರವೇರಲಿದೆ. ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಮ್ಯಾಗೆ ನಟ ಜಗ್ಗೇಶ್‍ರಿಂದ ಸಖತ್ ಕ್ಲಾಸ್

    ರಮ್ಯಾಗೆ ನಟ ಜಗ್ಗೇಶ್‍ರಿಂದ ಸಖತ್ ಕ್ಲಾಸ್

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ನವರಸನಾಯಕ ಜಗ್ಗೇಶ್ ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ.

    ಟ್ವಿಟ್ಟರಿನಲ್ಲಿ ಅಭಿಮಾನಿಯೊಬ್ಬರು, “ಕಡೆಯಾಗ ನೋಡಿದೋಳೋನಾ ಕಡೆಗಣಿಸೋದೆ ತಕ್ಕ ಉತ್ತರ. ಹತ್ತಿದ ಏಣಿನಾ ಮರೆಯೋ ಇಂಥೋರನ್ನಾ ನೆನಿಲುಬಾರದು” ಡ್ರಾಮಾ ಕ್ವೀನ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಜಗ್ಗೇಶ್ ಅವರಿಗೆ ಟ್ಯಾಗ್ ಮಾಡಿದ್ದರು.

    ಅಭಿಮಾನಿಯ ಟ್ವೀಟ್‍ಗೆ ಜಗ್ಗೇಶ್ ಪ್ರತಿಕ್ರಿಯಿಸಿ, “ಸಾವಿನಲ್ಲಿ ಗೌರವಿಸದವರು ಮನುರೂಪದ ರಾಕ್ಷಸ ಗುಣದವರು. ಕ್ರೂರತ್ವದ ಮಗ್ಗಲು ಪ್ರಕಟಿಸಿದ ಮಹನೀಯರು. ದೇವನೊಬ್ಬ ಇರುವ ಅವ ಎಲ್ಲ ನೋಡುತಿರುವ ದೋಸೆ ಮೊಗಚಿ ತಳಸೀಯುತ್ತದೆ ತಪ್ಪದೆ ಒಂದು ದಿನ. ಯತಃ ಮನಃ ತಥಃ ಜೀವನ ಎಂದು ಜಗ್ಗೇಶ್ ರೀ-ಟ್ವೀಟ್ ಮಾಡಿದ್ದಾರೆ.

    ಜಗ್ಗೇಶ್ ಅವರ ಟ್ವೀಟ್‍ಗೆ ಅಭಿಮಾನಿಗಳು ರೀ-ಟ್ವೀಟ್ ಮಾಡಿ, “7,500 ಕಿಲೋಮೀಟರ್ ನಿಂದ ದರ್ಶನ್ ಅವರು ತನ್ನ ತಂದೆ ಸಮಾನ ಅಂಬಿ ಅವರ ದರ್ಶನಕ್ಕೆ ಬಂದಿದ್ದಾರೆ. ಭಾರತೀಯ ಚಿತ್ರರಂಗ, ರಾಜಕೀಯ ಕ್ಷೇತ್ರ, ಕೋಟ್ಯಂತರ ಅಭಿಮಾನಿಗಳು ಅಂಬಿ ಅಣ್ಣನ ಸಾವಿಗೆ ಕಂಬನಿ ಮಿಡಿದಿದೆ. ಶ್ರೇಷ್ಠ ವ್ಯಕ್ತಿಯ ಅಂತಿಮ ದರ್ಶನ ಸಿಗುವುದಕ್ಕೂ ಯೋಗ್ಯತೆ ಬೇಕು. ಅಂತಹದರಲ್ಲಿ ಈ ರಮ್ಯಾಗೆ ಎಲ್ಲಿದೆ ಯೋಗ್ಯತೆ” ಎಂದು ರೀ-ಟ್ವೀಟ್ ಮಾಡಿದ್ದಾರೆ.

    ಮತ್ತೆ ಕೆಲವರು ನಮ್ ಮಂಡ್ಯ ರೈತರ ಪಾದದ ಧೂಳಿಗ್ ಸಮ ಇಲ್ಲದೇ ಹೋಗಿರೋರು ಬಂದರೆಷ್ಟು ಬಿಟ್ಟರೆಷ್ಟು. ನಮ್ಮ ಮಂಡ್ಯ ಮಣ್ಣಿನ ತಿಲಕ ಅಣ್ಣನ್ ಹಣೆಗೆ ಇಟ್ಟಾಗೇ ಅಣ್ಣನ್ ಆತ್ಮಕ್ಕೆ ಶಾಂತಿ ಸಿಕ್ಕಾಯ್ತು ಎಂದು ಟ್ವೀಟ್ ಮಾಡಿ ರಮ್ಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಪಂಚಭೂತಗಳಲ್ಲಿ ರೆಬೆಲ್ ಸ್ಟಾರ್ ಅಂಬಿ ಲೀನ

    ಪಂಚಭೂತಗಳಲ್ಲಿ ರೆಬೆಲ್ ಸ್ಟಾರ್ ಅಂಬಿ ಲೀನ

    ಬೆಂಗಳೂರು: ಮಾಜಿ ಸಚಿವ, ಸ್ಯಾಂಡಲ್‍ವುಡ್ ಟ್ರಬಲ್ ಶೂಟರ್, ಬೊಂಬೆ ಆಡ್ಸೋನು ಮೇಲೆ ಇದ್ದಾನೆ ಎಂದು ಹೇಳಿ ಕನ್ನಡಿಗರನ್ನು ಇಲ್ಲಿಯವರೆಗೆ ರಂಜಿಸಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಇನ್ನು ನೆನಪು ಮಾತ್ರ. ಅಂಬರೀಶ್ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

    ಪುತ್ರ ಅಭಿಷೇಕ್ ಅಗ್ನಿ ಸ್ಪರ್ಶ ನೆರವೇರಿಸಿದರು. ಕುಟುಂಬಸ್ಥರು, ಚಿತ್ರೋದ್ಯಮದ ಗಣ್ಯರು, ರಾಜಕಾರಣಿಗಳು ಸೇರಿದಂತೆ ಸಾವಿರಾರು ಅಭಿಮಾನಿಗಳು ಈ ವೇಳೆ ಭಾಗಿಯಾಗಿದ್ದರು.

    ತಲತಲಾಂತರಗಳಿಂದ ಅಂಬಿ ಮನೆತನದ ಪೌರೋಹಿತ್ಯ ಮಾಡುತ್ತಿರುವ ಮದ್ದೂರು ಮೂಲದ ಪುರೋಹಿತರಾದ ಚಿಕ್ಕ ಹುಚ್ಚಯ್ಯ, ಕೋಣಪ್ಪ ಪೂಜಾರಿ ನೇತೃತ್ವದಲ್ಲಿ ಅಂತ್ಯಸಂಸ್ಕಾರದ ಅಂತಿಮ ವಿಧಿವಿಧಾನಗಳು ನಡೆಯಿತು. ಪೂಜಾ ವಿಧಿವಿಧಾನ ನೆರವೇರಿಸಿ, ಅಂಬರೀಶ್ ಚಿತೆಗೆ ಪುತ್ರ ಅಭಿಷೇಕ್ ಅಗ್ನಿ ಸ್ಪರ್ಶ ಮಾಡಿದರು. ಈ ವೇಳೆ ಅಲ್ಲಿ ಸೇರಿದ್ದ ಜನರು ಕಂಬನಿ ಮಿಡಿದರು.

    ಅಂತ್ಯಕ್ರಿಯೆಗೆ ಶನಿವಾರದಿಂದಲೇ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿ ಖುದ್ದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಥಳ ಪರಿಶೀಲನೆ ಮಾಡಿದ್ದರು. ವರನಟ ಡಾ.ರಾಜ್‍ಕುಮಾರ್ ಸಮಾಧಿ ಸಮೀಪದಲ್ಲಿ ಅಂತ್ಯಕ್ರಿಯೆ ಜಾಗ ಗುರುತು ಮಾಡಲಾಗಿತ್ತು.

    ಸಿಮೆಂಟ್, ಇಟ್ಟಿಗೆಯಿಂದ 16*16 ಸುತ್ತಳತೆಯಲ್ಲಿ ನಿರ್ಮಾಣಗೊಂಡಿದ್ದ ಚಿತೆಗೆ ವಿಕಿ ಆರ್ಟ್ಸ್ ವತಿಯಿಂದ ಕಲಾಸ್ಪರ್ಶ ನೀಡಲಾಗಿತ್ತು. ಅಂಬಿ ಅಭಿಮಾನಿಗಳಾದ 5 ಜನ ಕಲಾವಿದರು ಅಂಬರೀಶ್ ಹಾಗೂ ಸೂರ್ಯ ಮುಳುಗುತ್ತಿರುವ ಪರಿಸರ ದೃಶ್ಯವನ್ನು ಚಿತೆಯ ಮೇಲೆ ಬಿಡಿಸಿ, ಕನ್ನಡ ಚಿತ್ರರಂಗದ ಭೀಷ್ಮ ಇನ್ನಿಲ್ಲ ಅಂತ ಬರೆದಿದ್ದರು. ಎಲ್ಲರಿಗೂ ಕಾಣಿಸಲೆಂದು ಒಂದೂವರೆ ಅಡಿ ಎತ್ತರದಲ್ಲಿ ಚಿತೆಯನ್ನು ನಿರ್ಮಾಣ ಮಾಡಲಾಗಿತ್ತು. ಚಿತೆಗೆ 500 ಕೆ.ಜಿ ಕಟ್ಟಿಗೆಯಲ್ಲಿ 300 ಶ್ರೀಗಂಧವನ್ನು ಬಳಸಲಾಗಿತ್ತು. ಉಳಿದ 200 ಕೆಜಿ ಹುಣಸೆ, ಸಾಮೆ, ಸರ್ವೆ ಹಾಗೂ ನೀಲಗಿರಿ ಮರಗಳ ಕಟ್ಟಿಗೆ ಬಳಕೆ ಮಾಡಲಾಗಿತ್ತು. ಜೊತೆಗೆ 30 ಕೆ.ಜಿ. ಕರ್ಪೂರವನ್ನು ಚಿತೆಗೆ ಹಾಕಲಾಗಿತ್ತು.

    ನಟಸಾರ್ವಭೌಮ ವರನಟ ರಾಜಕುಮಾರ್ ಅವರ ಸಮಾಧಿಯ ಎದುರುಗಡೆ ಇರುವ ಒಂದೂವರೆ ಎಕರೆ ಸರ್ಕಾರಿ ಭೂಮಿಯಲ್ಲಿ ಅಂಬರೀಶ್ ಅಂತ್ಯಕ್ರಿಯೆ ನಡೆಯಲಿದೆ. ಇಲ್ಲಿಯೇ ಅಂಬಿ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ.

    ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಬರಲಿದ್ದಾರೆ ಎಂದು ಅರಿತಿದ್ದ ಪೊಲೀಸರು ಸ್ಟುಡಿಯೋ ಸುತ್ತ ಬ್ಯಾರಿಕೇಡ್ ಹಾಕಿದ್ದರು. ಅಭಿಮಾನಿಗಳು ಹೊರಗೆ ನಿಂತುಕೊಂಡೇ ಅಂತ್ಯಕ್ರಿಯೆ ವೀಕ್ಷಿಸಲು ಅನುಕೂಲವಾಗುವಂತೆ ನಾಲ್ಕು ಕಡೆಗಳಲ್ಲಿ ಎಲ್‍ಇಡಿ ಟಿವಿ ಅಳವಡಿಲಾಗಿತ್ತು. ಇದಕ್ಕೆ ಪೂರಕವಾಗಿ ಕಂಠೀರವ ಸ್ಟುಡಿಯೋದಲ್ಲಿ 15 ಸಿಸಿಟಿವಿ ಕ್ಯಾಮೆರಾವನ್ನು ಹಾಕಲಾಗಿತ್ತು. ಅಂತ್ಯಕ್ರಿಯೆ ಸ್ಥಳದಲ್ಲಿ ಕುಟುಂಬಸ್ಥರಿಗೆ 300 ಆಸನ ಹಾಗೂ ಸಾರ್ವಜನಿಕರಿಗೆ 2 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿತ್ತು.

    ಮಂಡ್ಯ ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಇಂದು ಬೆಳಗ್ಗೆ 10.53ಕ್ಕೆ ವಾಯು ಸೇನೆಯ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಎಚ್‍ಎಎಎಲ್ ಪಾರ್ಥಿವ ಶರೀರವನ್ನು ಸಾಗಿಸಲಾಯ್ತು. 25 ನಿಮಿಷದಲ್ಲಿ ಎಚ್‍ಎಎಲ್ ತಲುಪಿದ ಶವವನ್ನು ಅಂಬುಲೆನ್ಸ್ ಮೂಲಕ ಕಂಠೀರವ ಸ್ಟೇಡಿಯಂಗೆ ತರಲಾಯಿತು.

    ಪುಷ್ಪಾಂಲಕೃತ ವಾಹನದಲ್ಲಿ ಅಂಬರೀಶ್ ಪಾರ್ಥಿವ ಶರೀರವನ್ನು ಇಟ್ಟು, ಮಧ್ಯಾಹ್ನ 12:30 ಕಂಠೀರವ ಸ್ಟೇಡಿಯಂನಿಂದ ಮೆರವಣಿಗೆ ಪ್ರಾರಂಭಿಸಲಾಯಿತು. ಅಭಿಮಾನಿಗಳು ವಾಹನದ ಕಡೆಗೆ ನುಗ್ಗಬಾರದು ಎನ್ನುವ ಉದ್ದೇಶದಿಂದ ಭಾರೀ ಭದ್ರತೆ ಒದಗಿಸಲಾಗಿತ್ತು.

    ಕಂಠೀರವ ಕ್ರೀಡಾಂಗಣದಿಂದ ಹೊರಟ ಮೆರವಣಿಗೆ ಕೆಜಿ ರೋಡ್ ಮೂಲಕ ಸಾಗಿ ಹಡ್ಸನ್ ಸರ್ಕಲ್, ಹಲಸೂರು ಗೇಟ್ ಪಿಎಸ್, ಪೊಲೀಸ್ ಕಾರ್ನರ್, ಮೈಸೂರ್ ಬ್ಯಾಂಕ್ ಸರ್ಕಲ್ ಮಾರ್ಗವಾಗಿ ಪ್ಯಾಲೇಸ್ ರೋಡ್ ಮೂಲಕ ಸಾಗಿತು. ಬಳಿಕ ಸಿಐಡಿ ಜಂಕ್ಷನ್, ಬಸವೇಶ್ವರ ಸರ್ಕಲ್, ಓಲ್ಡ್ ಹೈಗ್ರೌಂಡ್ಸ್ ಪಿಎಸ್, ವಿಂಡ್ಸರ್ ಮ್ಯಾನರ್, ಕಾವೇರಿ ಜಂಕ್ಷನ್, ಬಾಷ್ಯಂ ಸರ್ಕಲ್, ಸ್ಯಾಂಕಿ ರೋಡ್, ಮಾರಮ್ಮ ಸರ್ಕಲ್, ಬಿಎಚ್‍ಇಐ ಮೂಲಕ ಯಶವಂತಪುರ ಫ್ಲೈಓವರ್ ಮೇಲೇರಿ ಮೆಟ್ರೋ ಬಳಿ ಬಲ ತಿರುವು ಪಡೆದು ಆರ್ ಎಂಸಿ ಯಾರ್ಡ್ ಪಿಎಸ್ ಮಾರ್ಗವಾಗಿ ಗೊರುಗುಂಟೆಪಾಳ್ಯ ಸಿಗ್ನಲ್ ಬಳಿ ಎಡ ತಿರುವು ಪಡೆದು ಸಿಎಂಟಿಐ ಮಾರ್ಗ ಮೂಲಕ 13 ಕಿ.ಮೀ. ಕ್ರಮಿಸಿ ಕಂಠೀರವ ಸ್ಟುಡಿಯೋವನ್ನು ತಲುಪಿತು.

    ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಸಂಖ್ಯೆಯಲ್ಲಿ ಜನ ನೆರೆದಿದ್ದರು. ಅಂತ್ಯಕ್ರಿಯೆಯ ವೇಳೆ ಸಿಎಂ ಎಚ್.ಡಿ.ಕುಮಾರಸ್ವಾಮಿ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಸಾರಾ ಮಹೇಶ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಜಯಮಾಲಾ, ಕೆ.ಜಿ.ಜಾರ್ಜ್, ಶಾಸಕ ಮುನಿರತ್ನ,

    ನಟರಾದ ಕಿಚ್ಚ್ ಸುದೀಪ್, ರಾಕಿಂಗ್ ಸ್ಟಾರ್ ಯಶ್, ಚಾಲೆಂಚಿಂಗ್ ಸ್ಟಾರ್ ದರ್ಶನ್, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್, ಹಿರಿಯ ನಟರಾದ ಜಗ್ಗೇಶ್, ಕ್ರೆಜಿಸ್ಟಾರ್ ವಿ.ರವಿಚಂದ್ರನ್, ರಮೇಶ್ ಅರವಿಂದ್, ತೆಲಗು ಚಿತ್ರರಂಗ ಹಿರಿಯ ನಟ, ನಿರ್ದೇಶಕ ಮೋಹನ್ ಬಾಬು ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು.

    https://www.youtube.com/watch?v=SwwphJ1oJuc

    https://youtu.be/vpV25SEDROE

    https://www.youtube.com/watch?v=ei5fso60PsU

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದು ಫೋಟೋ ನೂರು ಮಾತು- ಅಂಬಿ ಅಂತಿಮ ದರ್ಶನದ ಭಾವನ್ಮಾತಕ ಫೋಟೋ ವೈರಲ್

    ಒಂದು ಫೋಟೋ ನೂರು ಮಾತು- ಅಂಬಿ ಅಂತಿಮ ದರ್ಶನದ ಭಾವನ್ಮಾತಕ ಫೋಟೋ ವೈರಲ್

    ಬೆಂಗಳೂರು: ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ಮೃತಪಟ್ಟಿದ್ದರು. ಭಾನುವಾರ ಅಂಬಿ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಈ ವೇಳೆ ಕ್ಲಿಕ್ಕಿಸಿದ ಫೋಟೋ ವೈರಲ್ ಆಗಿದೆ.

    ರೆಬಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ದರ್ಶನದ ವೇಳೆ ಅವರ ಮಗ ಅಭಿಷೇಕ್ ಭಾವುಕರಾಗಿ ತಮ್ಮ ತಂದೆಯ ಪಾರ್ಥಿವ ಶರೀರವನ್ನು ನೋಡುತ್ತಿದ್ದರೆ, ಸುಮಲತಾ ಅವರು ತಮ್ಮ ಮಗ ಅಭಿಷೇಕ್‍ನನ್ನು ನೋಡುತ್ತಿದ್ದಾರೆ. ಸದ್ಯ ಈ ಮನಕಲಕುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಫೋಟೋ ಭಾವನಾತ್ಮಕವಾಗಿದ್ದು, ಬದುಕಿನ ಕತೆಯನ್ನು ಹೇಳುವಂತಿದೆ. ಸದ್ಯ ಈ ಫೋಟೋವನ್ನು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ವರ್ಣಿಸುತ್ತಿದ್ದಾರೆ. ಈ ಫೋಟೋದಲ್ಲಿ ಅಭಿಷೇಕ್ ಹಾಗೂ ಸುಮಲತಾ ಅವರ ಭಾವನೆ ಫೋಟೋದಲ್ಲಿ ಕಾಣಿಸಿಕೊಂಡಿದೆ.

    ಖಾಸಗಿ ಪ್ರತಿಕೆಯೊಂದರಲ್ಲಿ ಕಳೆದ ಆರು ವರ್ಷದಿಂದ ಕೆಲಸ ಮಾಡುತ್ತಿರುವ ರಂಜಿತ್ ಈ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಫೋಟೋ ಜರ್ನಲಿಸಂ ಮಾಡಿರುವ ಇವರು 50 ಫೋಟೋ ತೆಗೆದು ಕೊನೆಗೆ ಈ ಭಾವನಾತ್ಮಕ ಫೋಟೋವನ್ನು ಓಕೆ ಮಾಡಿದ್ದಾರೆ.

    ಭಾನುವಾರ ಎಲ್ಲರೂ ಅಂಬರೀಶ್ ಅವರ ಫೋಟೋ ಕ್ಲಿಕ್ಕಿಸುತ್ತಿದ್ದರು. ನಾನು ಆಗ ಅವರ ಮೂಡ್ ಹೇಗಿರುತ್ತೆ ಎಂದು ಗಮನಿಸಿ ಸ್ವಲ್ಪ ಜೂಮ್ ಮಾಡಿ ಈ ಫೋಟೋ ಕ್ಲಿಕ್ಕಿಸಿದೆ. ಆದರೆ ಈ ಫೋಟೋದಲ್ಲಿ ಅವರ ಭಾವನೆಗಳು ಸೆರೆಯಾಗಿವೆ ಎಂದು ರಂಜಿತ್ ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಲ್ಲ ಕಷ್ಟಗಳನ್ನು ನಿವಾರಿಸಿ ಅಪ್ಪಾಜಿ ನೋಡಲು ಸ್ವೀಡನ್‍ನಿಂದ ಬಂದ ದರ್ಶನ್!

    ಎಲ್ಲ ಕಷ್ಟಗಳನ್ನು ನಿವಾರಿಸಿ ಅಪ್ಪಾಜಿ ನೋಡಲು ಸ್ವೀಡನ್‍ನಿಂದ ಬಂದ ದರ್ಶನ್!

    ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಲ್ಯಾಂಡ್ ಆಗಿದ್ದಾರೆ.

    ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಕಂಠೀರವ ಸ್ಟೇಡಿಯಂಗೆ ಅಂಬುಲೆನ್ಸ್ ಮೂಲಕ ಮೃತ ಶರೀರ ಬಂದ ಬಳಿಕ ದರ್ಶನ್ ಅಂಬಿ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಅಂಬಿ ಮೃತದೇಹಕ್ಕೆ ದರ್ಶನ್ ಹೆಗಲು ನೀಡಿದರು.

    ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು.

    ತಡವಾಗಿದ್ದು ಯಾಕೆ?
    ಭಾರತ ಹಾಗೂ ಸ್ವೀಡನ್ ದೇಶಕ್ಕೆ ನೇರವಾದ ವಿಮಾನವಿಲ್ಲ. ದುಬೈ ಮೂಲಕ ಭಾರತಕ್ಕೆ ಪ್ರಯಾಣ ಮಾಡಬೇಕು. ಸ್ವೀಡನ್‍ನಿಂದ ಭಾರತಕ್ಕೆ ಅಂದಾಜು 7 ಸಾವಿರ ಕಿ.ಮೀ ದೂರವಿದೆ. ಹೀಗಾಗಿ ದರ್ಶನ್ ಸ್ವೀಡನ್‍ನಿಂದ ದುಬೈಗೆ ಬಂದು, ದುಬೈನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿ ಬಂದಿದ್ದಾರೆ.

    ಸ್ವೀಡನ್‍ನಿಂದ ದುಬೈ, ಟರ್ಕಿ, ಇರಾಕ್, ರೋಮೆನಿಯಾ, ಪೋಲೆಂಡ್ ಸೇರಿದಂತೆ ಹಲವು ದೇಶಗಳನ್ನು ದಾಟಿ ಭಾರತಕ್ಕೆ ಬರಬೇಕು. ಮೊದಲೇ ಟಿಕೆಟ್ ಬುಕ್ ಮಾಡಿದರೆ ಯಾವುದೇ ಸಮಸ್ಯೆ ಇಲ್ಲ. ಆದರೆ ಶನಿವಾರ ರಾತ್ರಿಯೇ ತುರ್ತಾಗಿ ಭಾನುವಾರ ವಿಮಾನ ಟಿಕೆಟ್ ಬೇಕಾದರೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. ನಮಗೆ ಬೇಕಾದ ಸಮಯಕ್ಕೆ ಸಿಗುವುದು ಬಹಳ ಕಷ್ಟ. ಈ ಎಲ್ಲ ಕಷ್ಟಗಳನ್ನು ನಿವಾರಿಸಿ ದರ್ಶನ್ ಸೋಮವಾರ ಬೆಳಗ್ಗೆ 9.20ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿದರು.

    ಅಂಬಿ ನಿಧನದ ಸುದ್ದಿ ಕೇಳಿ ಚಿತ್ರತಂಡದ ಎಲ್ಲ ಸದಸ್ಯರು ಬೆಂಗಳೂರಿಗೆ ಬರುತ್ತೇವೆ ಎಂದು ದರ್ಶನ್ ಹೇಳಿದ್ದರು. ಆದರೆ ಇಂದು ದರ್ಶನ್ ಒಬ್ಬರೇ ಬೆಂಗಳೂರಿಗೆ ಹಿಂದಿರುಗಿದ್ದಾರೆ. ಭಾರತದ ಸಮಯಕ್ಕೂ ಸ್ವೀಡನ್ ಸಮಯಕ್ಕೂ 4.30 ಗಂಟೆ ವ್ಯತ್ಯಾಸವಿದೆ. ಅಂಬರೀಶ್ ನಿಧನದ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದ್ದು ರಾತ್ರಿ 9.50ರ ವೇಳೆಗೆ. ಭಾರತದಲ್ಲಿ ರಾತ್ರಿ 10 ಗಂಟೆಯಾದರೆ ಸ್ವೀಡನ್ ನಲ್ಲಿ ಸಂಜೆ 5.30 ಸಮಯ ಆಗಿರುತ್ತದೆ.

    ದರ್ಶನ್ ಹಾಗೂ ಅಂಬರೀಶ್ ಅವರ ಸಂಬಂಧ ತಂದೆ-ಮಗವಿನ ರೀತಿ ಇತ್ತು. ಅಂಬರೀಶ್ ಅವರ ಪ್ರತಿಯೊಂದು ಹುಟ್ಟುಹಬ್ಬಕ್ಕೆ ದರ್ಶನ್ ಮೊದಲ ಕೇಕ್ ತರುತ್ತಿದ್ದರು. ಅಲ್ಲದೇ ದರ್ಶನ್, ಅಂಬರೀಶ್ ಅವರ ಮಾತನ್ನು ಪಾಲಿಸುತ್ತಿದ್ದರು. ಸದ್ಯ ಇಂದು ಬೆಳಗ್ಗೆ ದರ್ಶನ್ ಬೆಂಗಳೂರಿಗೆ ಆಗಮಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv