Tag: Financial Assistance

  • ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

    ‘ಬಿಗ್ ಬ್ರದರ್’ ಎಂದು ಭಾರತ, ಮೋದಿಗೆ ಧನ್ಯವಾದ ಹೇಳಿದ ಲಂಕಾ ಕ್ರಿಕೆಟಿಗ ಜಯಸೂರ್ಯ

    ಕೊಲಂಬೋ: ಶ್ರೀಲಂಕಾ ಕ್ರಿಕೆಟಿಗ ಜಯಸೂರ್ಯ ದೇಶದಲ್ಲಿ ನಡೆಯುತ್ತಿರುವ ಆರ್ಥಿಕ ಭಿಕ್ಕಟ್ಟಿಗೆ ಭಾರತ ಸಹಾಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೃತಜ್ಞತಾಪೂರ್ವವಾಗಿ ‘ಬಿಗ್ ಬ್ರದರ್'(ದೊಡ್ಡ ಅಣ್ಣ) ಎಂದು ಕರೆದಿದ್ದಾರೆ.

    ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಬಳಿಕ ನಡೆಯುತ್ತಿರುವ ಶ್ರೀಲಂಕಾದ ಅತೀದೊಡ್ಡ ಆರ್ಥಿಕ ಭಿಕ್ಕಟ್ಟು ಇದೀಗ ತಲೆದೋರಿದ್ದು, ಭಾರತ ನೆರೆಯ ದೇಶಕ್ಕೆ ಸಹಾಯ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರಿಕೆಟಿಗ ಭಾರತ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ವಿಎಲ್‍ಸಿ ಮೀಡಿಯಾ ಪ್ಲೇಯರ್ ಬಳಸಿ ಚೀನಾ ಸೈಬರ್ ದಾಳಿ

    ನೆರೆಯ ದೇಶವಾಗಿ ಹಾಗೂ ನಮ್ಮ ದೇಶದ ಹಿರಿಯ ಸಹೋದರನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಕೃತಜ್ಞರಾಗಿರುತ್ತೇವೆ. ಪ್ರಸ್ತುತ ಸನ್ನಿವೇಶದಲ್ಲಿ ನಮ್ಮ ಬದುಕು ಕಷ್ಟಕರವಾಗಿದೆ. ಭಾರತ ಹಾಗೂ ಇತರ ದೇಶಗಳ ಸಹಾಯದಿಂದ ನಾವು ಈ ಆರ್ಥಿಕ ಭಿಕ್ಕಟ್ಟಿನಿಂದ ಹೊರಬರಲು ಆಶಿಸುತ್ತೇವೆ ಎಂದರು.

    ಪ್ರಸ್ತುತ ಶ್ರೀಲಂಕಾ ತೀವ್ರ ಗತಿಯಲ್ಲಿ ಆಹಾರ ಹಾಗೂ ಇಂಧನ ಕೊರತೆಯನ್ನು ಎದುರಿಸುತ್ತಿದೆ. ಈ ಬಿಕ್ಕಟ್ಟನ್ನು ತಗ್ಗಿಸಲು ಭಾರತ ಇದುವರೆಗೆ ಶ್ರೀಲಂಕಾಗೆ 2,70,000 ಮೆಟ್ರಿಕ್ ಟನ್(ಎಂಟಿ) ಇಂಧನವನ್ನು ಪೂರೈಸಿದೆ. ಕಳೆದ 24 ಗಂಟೆಗಳಲ್ಲಿ ಭಾರತ 36,000 ಎಂಟಿ ಪೆಟ್ರೋಲ್ ಹಾಗೂ 40,000 ಎಂಟಿ ಡೀಸೆಲ್ ರವಾನಿಸಿದೆ. ಇದರೊಂದಿಗೆ ಔಷಧ, ಧಾನ್ಯ, ಅಕ್ಕಿಯನ್ನೂ ಕಳುಹಿಸಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ಅಧಿಕಾರಕ್ಕೆ ಕತ್ತರಿ ಬೀಳ್ತಿದ್ದಂತೇ ಆಪ್ತರಿಗೆ ಸಂಕಷ್ಟ

    ಕೋವಿಡ್-19 ಹಾವಳಿ ಪ್ರಾರಂಭವಾದಾಗಿನಿಂದ ಶ್ರೀಲಂಕಾದಲ್ಲಿ ಆರ್ಥಿಕ ಭಿಕ್ಕಟ್ಟು ನಿಧಾನವಾಗಿ ಪ್ರಾರಂಭವಾಯಿತು. ಪ್ರವಾಸೋದ್ಯಮವೇ ಉಸಿರಾಗಿರುವ ದ್ವೀಪ ದೇಶದಲ್ಲಿ ಕೋವಿಡ್ ಪ್ರಾರಂಭವಾದಂತೆ ಪ್ರವಾಸೋದ್ಯಮಕ್ಕೆ ಬೇಡಿಕೆ ಕಡಿಮೆಯಾದ್ದರಿಂದ ಇದೀಗ ಶ್ರೀಲಂಕಾ ಕಷ್ಟದ ದಿನಗಳನ್ನು ಎದುರಿಸುತ್ತಿದೆ.

  • ಬಡ್ಡಿರಹಿತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 500 ಕೋಟಿ ರೂ. ಸಾಲಕೊಟ್ಟ ಶಿರಡಿ ದೇವಾಲಯ

    ಬಡ್ಡಿರಹಿತವಾಗಿ ಮಹಾರಾಷ್ಟ್ರ ಸರ್ಕಾರಕ್ಕೆ 500 ಕೋಟಿ ರೂ. ಸಾಲಕೊಟ್ಟ ಶಿರಡಿ ದೇವಾಲಯ

    ಮುಂಬೈ: ಕುಡಿಯುವ ನೀರು ಯೋಜನೆಗಾಗಿ ಶಿರಡಿ ದೇವಾಲಯ ಸಮಿತಿ ಮಹಾರಾಷ್ಟ್ರ ಸರ್ಕಾರಕ್ಕೆ ಬಡ್ಡಿ ರಹಿತವಾಗಿ 500 ಕೋಟಿ ರೂಪಾಯಿ ಸಾಲವನ್ನು ನೀಡಿದೆ.

    ಮಹಾರಾಷ್ಟ್ರದ ಅಹಮದ್‍ನಗರ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗಾಗಿ ನೀರಾವರಿ ಯೋಜನೆಯನ್ನು ಮಹಾರಾಷ್ಟ್ರ ಸರ್ಕಾರ ಕೈಗೆತ್ತಿಕೊಂಡಿತ್ತು. ಆದರೆ ಹಣದ ಕೊರತೆಯಿಂದಾಗಿ ಯೋಜನೆಯನ್ನು ಅರ್ಧಕ್ಕೆ ಕೈ ಬಿಟ್ಟಿತ್ತು. ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ ಬಿಜೆಪಿ ಶಿರಡಿ ದೇವಾಲಯದಿಂದ ಆರ್ಥಿಕ ಸಹಾಯ ಕೇಳಲು ನಿರ್ಧರಿಸುತ್ತು.

    ಸರ್ಕಾರದ ಪ್ರತಿನಿಧಿಗಳು ಶಿರಡಿ ದೇವಾಲಯದ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿಯ ಸುರೇಶ್ ಹವಾರೆಯನ್ನು ಭೇಟಿ ಮಾಡಿ ಚರ್ಚಿಸಿದ್ದರು. ಸರ್ಕಾರದ ಕೋರಿಕೆಯನ್ನು ಈಡೇರಿಸಿದ ಶಿರಡಿ ದೇವಾಲಯ ಸರ್ಕಾರಕ್ಕೆ ಬಡ್ಡಿರಹಿತವಾಗಿ 500 ಕೋಟಿ ರೂಪಾಯಿಯನ್ನು ನೀಡಲು ಒಪ್ಪಿಗೆ ಸೂಚಿಸಿದೆ.

    ಈ ಕುರಿತು ಸರ್ಕಾರದ ಅಧಿಕಾರಿಗಳು ಮಾತನಾಡಿ, ಶಿರಡಿ ಸಾಯಿಬಾಬಾ ದೇವಾಲಯ ಗೋದಾವರಿ ಹಾಗೂ ಮರಾಠವಾಡದ ನೀರಾವರಿ ಅಭಿವೃದ್ಧಿ ಕಾರ್ಪೋರೇಷನ್ ಯೋಜನೆಗೆ ಆರ್ಥಿಕ ನೆರವನ್ನು ನೀಡುವ ಬಗ್ಗೆ ಒಪ್ಪಿಕೊಂಡಿದೆ. ದೇವಾಲಯದ ಇತಿಹಾಸದಲ್ಲೇ ಇದೊಂದು ಮಹತ್ವದ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

    ಗೋದಾವರಿ ಹಾಗೂ ಮರಾಠವಾಡದ ನೀರಾವರಿ ಯೋಜನೆಗೆ ಒಟ್ಟು 1,200 ಕೋಟಿ ರೂಪಾಯಿಗಳ ಅವಶ್ಯಕತೆಯಿದೆ. ಇದರಲ್ಲಿ 500 ಕೋಟಿ ರೂಪಾಯಿಯನ್ನು ಶಿರಡಿ ದೇವಾಲಯ ಸಮಿತಿ ನೀಡಿದರೆ ಉಳಿದ 700 ಕೋಟಿ ರೂಪಾಯಿಯನ್ನು ಸರ್ಕಾರ ನೀಡಲಿದೆ. ಅಲ್ಲದೇ ಸಾಲ ಮರುಪಾವತಿಗೆ ಶಿರಡಿ ದೇವಾಲಯ ಯಾವುದೇ ವಾಯಿದೆಯನ್ನು ಸಹ ನೀಡಿಲ್ಲ.

    ಮಾಹಿತಿಗಳ ಪ್ರಕಾರ ಶಿರಡಿ ದೇವಾಲಯ ಒಟ್ಟು 2,100 ಕೋಟಿ ರೂ ಹಣವನ್ನು ಠೇವಣಿಯಾಗಿ ಇಟ್ಟಿದೆ. ದೇವಾಲಯಕ್ಕೆ ಪ್ರತಿನಿತ್ಯ 2 ಕೋಟಿ ರೂಪಾಯಿ ಆದಾಯ ಬರುತ್ತದೆ. ವಾರ್ಷಿಕವಾಗಿ 700 ಕೋಟಿ ಆದಾಯ ಗಳಿಸುತ್ತದೆ. ಪ್ರತಿನಿತ್ಯ 70,000 ಭಕ್ತರು ಸಾಯಿಬಾಬಾರ ದರ್ಶನವನ್ನು ಪಡೆದುಕೊಳ್ಳುತ್ತಾರೆ. ವಿಶೇಷ ದಿನಗಳಂದು 3.5 ಲಕ್ಷಕ್ಕೂ ಹೆಚ್ಚಿನ ಭಕ್ತರು ದೇವಾಲಯಕ್ಕೆ ಬರುತ್ತಾರೆ. ದೇಶದಲ್ಲಿಯೇ ಅತ್ಯಂತ ಶ್ರೀಮಂತ ದೇಗುಲಗಳಲ್ಲಿ ಶಿರಡಿ ದೇವಾಲಯವು ಸಹ ಒಂದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv