Tag: Financial Help

  • ಮನೆ ಕಳೆದುಕೊಂಡ ತಮ್ಮ ಗ್ರಾಮಸ್ಥರ ನೆರವಿಗೆ ಬಂದ ಪೃಥ್ವಿ ಶಾ

    ಮನೆ ಕಳೆದುಕೊಂಡ ತಮ್ಮ ಗ್ರಾಮಸ್ಥರ ನೆರವಿಗೆ ಬಂದ ಪೃಥ್ವಿ ಶಾ

    ಮುಂಬೈ: ಭಾರತ ತಂಡ ಆಟಗಾರ 20 ವರ್ಷದ ಪೃಥ್ವಿ ಶಾ ತಮ್ಮ ಗ್ರಾಮದ ನಿವಾಸಿಗಳ ಮನೆಯನ್ನು ರಿಪೇರಿ ಮಾಡಿಸಿಕೊಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

    ಸದ್ಯ ಲಾಕ್‍ಡೌನ್‍ನಿಂದ ತಮ್ಮ ಗ್ರಾಮದಲ್ಲೇ ಬಂಧಿಯಾಗಿರುವ ಪೃಥ್ವಿ ಶಾ, ರಾಜಕಾರಣಿ ಸಂಜಯ್ ಪೊಟ್ನಿಸ್ ತೋಟದ ಮನೆಯಲ್ಲಿ ಉಳಿದಿದ್ದಾರೆ. ಸಂಜಯ್ ಅವರ ಮಗ ಯಶ್ ಮತ್ತು ಪೃಥ್ವಿ ಶಾ ಇಬ್ಬರು ಗೆಳೆಯರಾಗಿದ್ದು, ಇವರಿಬ್ಬರು ಒಟ್ಟಿಗೆ ಅವರ ತೋಟದ ಮನೆಯಲ್ಲಿ ಉಳಿದುಕೊಂಡಿದ್ದಾರೆ.

    ಮಹಾರಾಷ್ಟ್ರದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದೆ. ಭಾರತದಲ್ಲೇ ಅತೀ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರದಲ್ಲಿ ಇದ್ದಾರೆ. ಕೊರೊನಾದಿಂದ ನಲುಗಿದ್ದ ಮಹಾಗೆ ಸೈಕ್ಲೋನ್ ಕೂಡ ಪೆಟ್ಟುಕೊಟ್ಟಿತ್ತು. ಈ ಸೈಕ್ಲೋನ್‍ನಿಂದ ಪೃಥ್ವಿ ಅವರ ಸ್ವಗ್ರಾಮವಾದ ಮಾಂಡ್ವಾದ ಧೋಕವಾಡೆದಲ್ಲಿ ಹಲವಾರು ಮನೆಗಳು ಹಾನಿಯಾಗಿದ್ದರು. ಈ ಹಾಳಾಗಿದ್ದ ಮನೆಗಳನ್ನು ಸರಿಪಡಿಸಲು ಪೃಥ್ವಿ ಗ್ರಾಮಸ್ಥರಿಗೆ ಸಹಾಯ ಮಾಡುತ್ತಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿರುವ ಸಂಜಯ್ ಪೊಟ್ನಿಸ್, ಪೃಥ್ವಿ ಮತ್ತು ನನ್ನ ಮಗ ಲಾಕ್‍ಡೌನ್‍ನಿಂದ ನಮ್ಮ ಮನೆಯಲ್ಲೇ ಇದ್ದಾರೆ. ಸೈಕ್ಲೋನ್ ಇಲ್ಲಿ ಜಾಸ್ತಿ ಅವಾಂತರವನ್ನು ಸೃಷ್ಟಿಸಿದೆ. ನಮ್ಮ ಧೋಕವಾಡೆ ಗ್ರಾಮ ಹಾನಿಗೊಳಗಾಗಿದೆ. ನಮ್ಮ ಮನೆಗೂ ಕೂಡ ಹಾನಿಯಾಗಿದೆ. ಗ್ರಾಮಸ್ಥರ ಕಷ್ಟವನ್ನು ನೋಡಿ ಪೃಥ್ವಿ ಮತ್ತು ನನ್ನ ಮಗ ಅವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಪೃಥ್ವಿ ಇದರ ಜೊತೆಗೆ ಕಷ್ಟದಲ್ಲಿ ಇರುವ ಜನರಿಗೆ ಆರ್ಥಿಕ ಸಹಾಯ ಮಾಡಲು ಮುಂದಾಗಿದ್ದಾನೆ ಎಂದು ಹೇಳಿದ್ದಾರೆ.

    ಈ ಎಲ್ಲದರ ಜೊತೆಗೆ ಪೃಥ್ವಿ ತೋಟದ ಮನೆಯಲ್ಲಿ ತಮ್ಮ ಫಿಟ್ನೆಸ್ ಅನ್ನು ಕಾಪಾಡಿಕೊಳ್ಳುತ್ತಿದ್ದಾರೆ. ಇತರ ಆಟಗಾರರಂತೆ ಅವರು ಕೂಡ ಕಳೆದ ಮಾರ್ಚ್‍ನಿಂದ ಕ್ರಿಕೆಟ್‍ನಿಂದ ದೂರು ಉಳಿದಿದ್ದಾರೆ. ಕಳೆದ ಮಾರ್ಚ್‍ನಲ್ಲಿ ನಡೆಯಬೇಕಿದ್ದ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಪೃಥ್ವಿ ಶಾ ಆಯ್ಕೆಯಾಗಿದ್ದರು. ಆದರೆ ಸರಣಿ ಆರಂಭವಾಗುವ ಮುನ್ನವೇ ಕೊರೊನಾ ವೈರಸ್ ನಿಂದ ಕೇಂದ್ರ ಸರ್ಕಾರ ಲಾಕ್‍ಡೌನ್ ಘೋಷಣೆ ಮಾಡಿದ ಕಾರಣ ಅದು ಕೂಡ ನಿಂತು ಹೋಗಿತ್ತು.

    ಕಳೆದ ವರ್ಷ ಡೋಪಿಂಗ್ ಉಲ್ಲಂಘನೆ ಮಾಡಿದ್ದಾರೆ ಎಂದು ಪೃಥ್ವಿ ಶಾ ಅವರನ್ನು ಎಂಟು ತಿಂಗಳು ಕ್ರಿಕೆಟ್‍ನಿಂದ ನಿಷೇಧ ಮಾಡಲಾಗಿತ್ತು. ಇದಾದ ನಂತರ ಶಾ ಭಾರತ ಎ ತಂಡಕ್ಕೆ ಮರಳುವ ಮೂಲಕ ಕ್ರಿಕೆಟ್‍ಗೆ ವಾಪಸ್ ಆಗಿದ್ದರು. ನಂತರ ನ್ಯೂಜಿಲೆಂಡ್‍ನಲ್ಲಿ ನಡೆದ ಮೂರು ಏಕದಿನ ಮತ್ತು ಎರಡು ಟೆಸ್ಟ್ ಸರಣಿಯಲ್ಲೂ ಆಡಿದ್ದರು. ಇದರ ಜೊತೆಗೆ 2020ರ ಐಪಿಎಲ್‍ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಬೇಕಿತ್ತು. ಆದರೆ ಕೊರೊನಾ ಭೀತಿಯಿಂದ ಐಪಿಎಲ್ ಕೂಡ ಮುಂದಕ್ಕೆ ಹೋಗಿದೆ.

  • ವಿದೇಶದಲ್ಲಿ ವ್ಯಾಸಂಗ ಮಾಡೋ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ವಿದೇಶದಲ್ಲಿ ವ್ಯಾಸಂಗ ಮಾಡೋ ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಸಾಂದರ್ಭಿಕ ಚಿತ್ರ

    – ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂ.ಗಿಂತ ಕಡಿಮೆ ಇದ್ರೆ ಸರ್ಕಾರದಿಂದ ವೆಚ್ಚ

    ಬೆಂಗಳೂರು: ವಿದೇಶದಲ್ಲಿ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಪ್ರಬುದ್ಧ ಯೋಜನೆ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

    ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಪ್ರಬುದ್ಧ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ವಿಧಾನಸೌಧದಲ್ಲಿ ಇಂದು ಚಾಲನೆ ನೀಡಿದ್ದಾರೆ.

    ಸಾಂದರ್ಭಿಕ ಚಿತ್ರ

    ಈ ಮೂಲಕ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ವಿದೇಶದಲ್ಲಿ ಪದವಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಇಂತಹ ಅವಕಾಶ ಸಿಗಲಿದೆ. ಪ್ರಬುದ್ಧ ಯೋಜನೆಯಲ್ಲಿ ವಿಶೇಷ ಚೇತನರಿಗೆ ಶೇ. 4 ಹಾಗೂ ವಿದ್ಯಾರ್ಥಿನಿಯರಿಗೆ ಶೇ. 33 ಮೀಸಲಾತಿ ನೀಡಲಾಗಿದೆ.

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಿಸಿಎಂ ಪರಮೇಶ್ವರ್ ಅವರು, ವಿದ್ಯಾರ್ಥಿ ವೇತನ ಪಡೆದು ನಾನು ಸಂಶೋಧನೆ ಮಾಡಿ ಆಸ್ಟ್ರೇಲಿಯಾದಲ್ಲಿ ಪಿಎಚ್‍ಡಿ ಪದವಿ ಪಡೆದೆ. ಡಾ.ಬಿ.ಆರ್.ಅಂಬೇಡ್ಕರ್ ಅವರು ಕೂಡ ವಿದ್ಯಾರ್ಥಿ ವೇತನ ಪಡೆದು ವಿದೇಶದಲ್ಲಿ ವ್ಯಾಸಂಗ ಮಾಡಿ ಸಂವಿಧಾನ ರಚನೆ ಮಾಡಿದರು. ಹಿಂದುಳಿದವರಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸುವ ಉದ್ದೇಶದಿಂದ ಸರ್ಕಾರ ಪ್ರಬುದ್ಧ ಯೋಜನೆ ಜಾರಿಗೆ ತಂದಿದೆ ಎಂದರು. ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸೇರಿ ಹಲವರು ಭಾಗವಹಿಸಿದ್ದರು.’

    ಸಾಂದರ್ಭಿಕ ಚಿತ್ರ

    ಯೋಜನೆಯಲ್ಲಿ ಏನಿದೆ?:
    ಕುಟುಂಬದ ವಾರ್ಷಿಕ ಆದಾಯ ಗರಿಷ್ಟ 8 ಲಕ್ಷ ರೂ. ಇರುವರಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಸಂಪೂರ್ಣ ವೆಚ್ಚ ಸರ್ಕಾರವೇ ಭರಿಸಲಿದೆ. 8-15 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಕುಟುಂಬದ ವಿದ್ಯಾರ್ಥಿಗಳಿಗೆ ಶೇ.50ರಷ್ಟು ಹಣವನ್ನು ಸರ್ಕಾರ ಭರಿಸುತ್ತದೆ. 15 ಲಕ್ಷ ರೂ. ಮೇಲ್ಪಟ್ಟ ಆದಾಯ ಇರುವ ವಿದ್ಯಾರ್ಥಿಗಳಿಗೆ ಶೇ.33 ಹಣ ಸಹಾಯ ಮಾಡಲಾಗುತ್ತದೆ. ಪ್ರಬುದ್ಧ ಯೋಜನೆಯಲ್ಲಿ ವಿಕಲಚೇತನರಿಗೆ ಶೇ.4 ಹಾಗೂ ವಿದ್ಯಾರ್ಥಿನಿಯರಿಗೆ ಶೇ.33 ಮೀಸಲಾತಿ ಸಿಗಲಿದೆ.

    ಆರ್ಥಿಕ ಸಹಾಯ ನೀಡುವ ಸರ್ಕಾರವು ಕೆಲವು ಷರತ್ತುಗಳನ್ನು ಹಾಕಿದೆ. ವಿದ್ಯಾರ್ಥಿಯೂ ವಿದೇಶದಲ್ಲಿ ವ್ಯಾಸಂಗ ಮಾಡಿದ ಬಳಿಕ ಮತ್ತೆ ಮರಳಿ ರಾಜ್ಯಕ್ಕೆ ಬರಬೇಕು. ಒಂದು ವೇಳೆ ಆತನಿಗೆ ವಿದೇಶದಲ್ಲಿ ಕೆಲಸ ಸಿಕ್ಕರೆ ತೆರಳಬಹುದು ಎಂದು ತಿಳಿಸಲಾಗಿದೆ.

    ಸಾಂದರ್ಭಿಕ ಚಿತ್ರ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಜನತಾ ದರ್ಶನದಲ್ಲಿ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಿಎಂ ಸಹಾಯ

    ಜನತಾ ದರ್ಶನದಲ್ಲಿ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಿಎಂ ಸಹಾಯ

    ಬೆಂಗಳೂರು: ಜನತಾ ದರ್ಶನದಲ್ಲಿ ರಾಮನಗರದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕಾಗಿ 70 ಸಾವಿರ ರೂಪಾಯಿಯ ಚೆಕ್ ಅನ್ನು ಸಿಎಂ ಕುಮಾರಸ್ವಾಮಿಯವರು ವಿತರಿಸಿದ್ದಾರೆ.

    ಕಳೆದ ವಾರದ ಹಿಂದೆ ರಾಮನಗರದ ವಿದ್ಯಾರ್ಥಿ ಕಾಂಚನಾ ಇಂಜಿನಿಯರಿಂಗ್ ಓದಲು ಆರ್ಥಿಕ ಸಮಸ್ಯೆಯನ್ನು ಎದುರಾಗಿದ್ದು ಸಹಾಯ ನೀಡುವಂತೆ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಬಳಿ ಕೇಳಿಕೊಂಡಿದ್ದಳು. ಈ ವೇಳೆ ಮುಖ್ಯಮಂತ್ರಿಯವರು ಯುವತಿಗೆ ಒಂದು ವಾರ ಬಿಟ್ಟು ಬರುವಂತೆ ತಿಳಿಸಿದ್ದರು.

    ಇಂದು ಜೆಪಿ ನಗರದ ನಿವಾಸದಲ್ಲಿ ನಡೆದ ಜನತಾ ದರ್ಶನದಲ್ಲಿ ಕಾಂಚನಾ ಸಮಸ್ಯೆಗೆ ಸ್ಪಂದಿಸಿ ಆಕೆಯ ವಿದ್ಯಾಭ್ಯಾಸಕ್ಕಾಗಿ 70 ಸಾವಿರ ರೂಪಾಯಿಯ ಚೆಕ್ ಅನ್ನು ಮುಖ್ಯಮಂತ್ರಿ ವಿತರಿಸಿದ್ದಾರೆ. ಚೆಕ್ ಪಡೆದ ಯುವತಿಯು ನನ್ನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ ಮುಖ್ಯಮಂತ್ರಿಗಳಿಗೆ ವಂದನೆ ಸಲ್ಲಿಸಿ, ಇಂತಹ ಮುಖ್ಯಮಂತ್ರಿಗಳು ನಮಗೆ ಬೇಕು ಎಂದು ಸಂತಸ ಹಂಚಿಕೊಂಡಿದ್ದಾಳೆ.

    ಡಾ. ರವೀಂದ್ರ ಭೇಟಿ:
    ಕರ್ನಾಟಕ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ.ರವೀಂದ್ರ ಮುಖ್ಯಮಂತ್ರಿ ಕುಮಾರಸ್ವಾಮಿಗಳನ್ನು ಜೆಪಿ ನಗರದ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಕೊಪ್ಪಳ ಮೆಡಿಕಲ್ ಕಾಲೇಜಿಗೆ 150 ಸೀಟುಗಳು ಮಿಸ್ ಆದ ಕಾರಣ ಸಿಎಂ ಜತೆ ಚರ್ಚಿಸಲು ಹಾಗೂ ಯಶಸ್ವಿನಿ ಯೋಜನೆ ಮುಂದುವರಿಸುವ ಕುರಿತು ಮಾತುಕತೆ ನಡೆಸಿದ್ದಾರೆ.