Tag: financial trouble

  • ಮಗನ ಬೇಡಿಕೆಗಳನ್ನು ಈಡೇರಿಸಲಾಗದೇ ಕೊಂದೇ ಬಿಟ್ಟ!

    ಮಗನ ಬೇಡಿಕೆಗಳನ್ನು ಈಡೇರಿಸಲಾಗದೇ ಕೊಂದೇ ಬಿಟ್ಟ!

    ನವದೆಹಲಿ: ಮಗನ ಬೇಡಿಕೆಗಳನ್ನು ಈಡೇರಿಸಲು ಆಗದ್ದಕ್ಕೆ ತಂದೆಯೇ ತನ್ನ ಪುತ್ರನನ್ನು ಕೊಲೆ ಮಾಡಿರುವ ಅಮಾನವೀಯ ಘಟನೆ ಉತ್ತರ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ.

    ರೋಹಿಣಿಯ ನಿವಾಸಿ ವಿನೋದ್(46) ತನ್ನ 6 ವರ್ಷದ ಮಗನನ್ನು ಕೊಲೆಗೈದಿದ್ದಾನೆ. ಹಾಲಿನ ಉತ್ಪನ್ನಗಳನ್ನು ಮಾರುವ ಸೇಲ್ಸ್‍ಮ್ಯಾನ್ ಆಗಿ ವಿನೋದ್ ಕೆಲಸ ಮಾಡುತ್ತಿದ್ದನು. ಆದ್ರೆ ಕೆಲ ದಿನಗಳ ಹಿಂದೆ ಅವನು ಕೆಲಸ ಮಾಡುತ್ತಿದ್ದ ಅಂಗಡಿ ಮುಚ್ಚಿದ್ದರಿಂದ ವಿನೋದ್ ಕೆಲಸ ಕಳೆದುಕೊಂಡಿದ್ದನು. ಕೈಯಲ್ಲಿ ಕೆಲಸವಿಲ್ಲದೆ ಹಣವಿಲ್ಲದೆ ವಿನೋದ್ ಜೀವನ ಸಾಗಿಸಲು ಬಹಳ ಕಷ್ಟ ಪಡುತ್ತಿದ್ದನು. ಈ ವೇಳೆ ತನ್ನ ಮಗನನ್ನು ಸರಿಯಾಗಿ ನೋಡಿಕೊಳ್ಳಲು ಆಗುತ್ತಿಲ್ಲ. ಆತನ ಆಸೆ, ಬೇಡಿಕೆಗಳನ್ನು ಪೂರೈಸಲು ಆಗುತ್ತಿಲ್ಲ ಎಂದು ಮನನೊಂದು ಅಸಹಾಯಕತೆಯಿಂದ ಸ್ವಂತ ಮಗನನ್ನೇ ವಿನೋದ್ ಶನಿವಾರದಂದು ಮನೆಯಲ್ಲಿ ಕೊಲೆ ಮಾಡಿದ್ದಾನೆ.

    ಕಳೆದ ಎರಡು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆಯಿಂದ ವಿನೋದ್ ಪತ್ನಿ ಸಾವನ್ನಪ್ಪಿದ್ದರು. ಆಗಿನಿಂದ ವಿನೋದ್ ಹಾಗೂ ಆತನ ಮಗ ಇಬ್ಬರೇ ರೋಹಿಣಿ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಆದರೆ ಶನಿವಾರ ಬೆಳಗ್ಗೆ ವಿನೋದ್ ಮಗನನ್ನು ಕೊಲೆ ಮಾಡಿ ಬಳಿಕ ಈ ವಿಷಯವನ್ನು ಆತ ಬಾಡಿಗೆಗೆ ಇದ್ದ ಮನೆಯ ಮಾಲೀಕರ ಬಳಿ ಬಂದು ಹೇಳಿದ್ದಾನೆ. ನಂತರ ಮತ್ತೆ ತನ್ನ ಮನೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾನೆ. ಈ ಬಗ್ಗೆ ಮನೆ ಮಾಲೀಕರು ಪೊಲೀಸರಿಗೆ ಮಾಹಿತಿ ತಿಳಿಸಿದಾಗ, ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

    ತದನಂತರ ವಿಚಾರಣೆ ವೇಳೆ, ಮಗನನ್ನು ಸಾಕಲು ನನ್ನ ಬಳಿ ಹಣವಿರಲಿಲ್ಲ. ಆತನ ಆಸೆ, ಬೇಡಿಕೆಗಳನ್ನು ಪೂರೈಸಲು ನನ್ನ ಕೈಯಿಂದ ಆಗುತ್ತಿರಲಿಲ್ಲ. ಆದರಿಂದ ಮಗನನ್ನು ಕೊಲೆ ಮಾಡಿಬಿಟ್ಟೆ ಎಂದು ಆರೋಪಿ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಳೆ ಹಸುಗೂಸನ್ನು ಉಸಿರುಗಟ್ಟಿಸಿ ಕೊಂದೇ ಬಿಟ್ಳು ಅಜ್ಜಿ!

    ಎಳೆ ಹಸುಗೂಸನ್ನು ಉಸಿರುಗಟ್ಟಿಸಿ ಕೊಂದೇ ಬಿಟ್ಳು ಅಜ್ಜಿ!

    ಮುಂಬೈ: ಮಗುವಿನ ಚಿಕಿತ್ಸೆಗೆ ಹಾಗೂ ಇತರೆ ಕೆಲಸಗಳಿಗೆ ಹಣ ಇಲ್ಲವೆಂದು ಅಜ್ಜಿ ತನ್ನ ಮೂರು ತಿಂಗಳ ಎಳೆ ಹಸುಗೂಸನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ಕೋಲ್ಹಾಪುರದಲ್ಲಿ ನಡೆದಿದೆ.

    ರಾಜರಾಂಪುರಿ ಪೊಲೀಸರು ಕೊಲೆ ಮಾಡಿದ್ದ ಅಜ್ಜಿಯನ್ನು ಬಂಧಿಸಿದ್ದಾರೆ. ಮಹೋಬಾತ್ಬಿ ಅಡಮ್ ಮುಲ್ಲಾ ಮಗುವನ್ನು ಕೊಂದ ಆರೋಪಿ. ಮಹೋಬ್ಬಾತಿ ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದು, ಆಕೆಯನ್ನು ಬಂಧಿಸಿ ಸೋಮವಾರ ಸ್ಥಳೀಯ ನ್ಯಾಯಾಲಯದಲ್ಲಿ ಒಪ್ಪಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

    ಶನಿವಾರ ಬೆಳಿಗ್ಗೆ ಛತ್ರಪತಿ ಪ್ರಮಿಳಾ ರಾಜೇ ಸಿವಿಲ್ ಆಸ್ಪತ್ರೆಗೆ ಮಗುವನ್ನು ಪೋಷಕರು ದಾಖಲಿಸಿದ್ದಾರೆ. ಡಾಕ್ಟರ್ ಪರೀಕ್ಷಿಸಿದಾಗ ಮಗುವಿನ ಕುತ್ತಿಗೆಯ ಭಾಗದಲ್ಲಿ ಗುರುತುಗಳು ಕಾಣಿಸಿಕೊಂಡಿತ್ತು. ಮರಣೋತ್ತರ ಪರೀಕ್ಷೆಯ ವೇಳೆ ಮಗುವನ್ನು ಕೊಲೆ ಮಾಡಲಾಗಿದೆ ಎನ್ನುವ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ತನಿಖೆಗೆ ಇಳಿದಾಗ ಈ ಕೊಲೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಯನ್ನು ಡಾಕ್ಟರ್‍ನಿಂದ ಪಡೆದುಕೊಂಡ ಬಳಿಕ ಕುಟುಂಬದ ಸದಸ್ಯರನ್ನು ಈ ವಿಚಾರವಾಗಿ ಪ್ರಶ್ನಿಸಿದ್ದಾರೆ. ಈ ವೇಳೆ ಮಹೋಬಾತ್ಬಿಯ ನಡವಳಿಕೆಯಿಂದಾಗಿ ಆಕೆಯನ್ನು ಭಾನುವಾರ ಬಂಧಿಸಲಾಗಿದ್ದು, ವಿಚಾರಣೆ ಒಳಪಡಿಸಿದಾಗ ತಾನೇ ಈ ಕೃತ್ಯ ಎಸಗಿರುವುದಾಗಿ ತಪ್ಪನ್ನು ಒಪ್ಪಿಕೊಂಡಿದ್ದಾಳೆ.

    ಏನಿದು ಪ್ರಕರಣ?
    ಆಗ ತಾನೇ ಜನಿಸಿದ್ದ ಮಗು ಅನಾರೋಗ್ಯದಿಂದ ಬಳಲುತಿತ್ತು. ಹೀಗಾಗಿ ಎರಡು ತಿಂಗಳ ಕಾಲ ಮಗುವನ್ನು ಸಿಪಿಆರ್ ಸಿವಿಲ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿಡಲಾಗಿತ್ತು. ಎರಡು ತಿಂಗಳ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾದ ಮಗು 1,600 ಗ್ರಾಂ ತೂಕವನ್ನು ಇತ್ತು. ಮಹೋಬಾತ್ಬಿ ಅಡಮ್ ಮುಲ್ಲಾ ಮತ್ತು ಆಕೆಯ ಮಗ ಶಬ್ಬೀರ್ ಕೂಲಿಕಾರರಾಗಿದ್ದರು. ಆದರೆ ಮಗಳನ್ನು ನೋಡಿಕೊಳ್ಳಲು ಶಬ್ಬೀರ್ ತನ್ನ ಕೆಲಸವನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಮಹೋಬಾತ್ಬಿ ಒಬ್ಬಳೇ ಕುಟುಂಬ ನಿರ್ವಹಣೆ ಜವಾಬ್ದಾರಿ ಹೊರಬೇಕಾಗಿತ್ತು.

    ಈ ಎಲ್ಲದರ ಮಧ್ಯೆ ಮಗುವಿನ ಆರೋಗ್ಯ ಸುಧಾರಿಸಲು ಹಾಲಿನ ಪುಡಿ ಮತ್ತು ಇತರ ಔಷಧಿಗಳನ್ನು ಖರೀದಿಸಬೇಕಿತ್ತು. ಮಗುವಿನ ಜನನದಿಂದಲೇ ನಾವು ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ ಎಂದು ಭಾವಿಸಿ ಮಹೋಬಾತ್ಬಿ ಕಂದಮ್ಮನನ್ನು ಕೊಲೆ ಮಾಡಿದ್ದಾಳೆ.

    ಮಹೋಬಾತ್ಬಿ ಮೇಲೆ ಐಪಿಸಿ ಸೆಕ್ಷನ್ 302 ಮತ್ತು 201 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv