Tag: financial year

  • ಏ.1ರಿಂದ UPI, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ರೂಲ್ ಚೇಂಜ್

    ಏ.1ರಿಂದ UPI, ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ ರೂಲ್ ಚೇಂಜ್

    ನವದೆಹಲಿ: ಏ.1ರಿಂದ ಆದಾಯ ತೆರಿಗೆ ಸೇರಿದಂತೆ ಯುಪಿಐ (UPI) ಮತ್ತು ಮಿನಿಮಮ್ ಬ್ಯಾಂಕ್ ಬ್ಯಾಲೆನ್ಸ್ (Minimum Bank Balance) ನಿಯಮಗಳಲ್ಲಿ ಬದಲಾವಣೆಯಾಗಲಿದೆ.

    ಇದೇ ಏ.1 ರಿಂದ ಹಣಕಾಸು ನಿಯಮಗಳಲ್ಲಿ ಹಲವಾರು ಬದಲಾವಣೆಗಳು ಜಾರಿಗೆ ಬರಲಿದ್ದು, ತೆರಿಗೆದಾರರು, ಯುಪಿಐ ಬಳಕೆದಾರರು, ಕ್ರೆಡಿಟ್ ಕಾರ್ಡ್ ಹೊಂದಿರುವವರು ಮತ್ತು ಪಿಂಚಣಿದಾರರ ಮೇಲೆ ಇದು ಪರಿಣಾಮ ಬೀರಲಿದೆ. 2025-26ರ ಹಣಕಾಸು ವರ್ಷ ಪ್ರಾರಂಭವಾಗುತ್ತಿದ್ದಂತೆ, ಆದಾಯ ತೆರಿಗೆ, ಕ್ರೆಡಿಟ್ ಕಾರ್ಡ್ಗಳು, ಯುಪಿಐ ಭದ್ರತೆ, ಜಿಎಸ್‌ಟಿ ಹಾಗೂ ಬ್ಯಾಂಕಿಂಗ್ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆ ತರಲಿದೆ.ಇದನ್ನೂ ಓದಿ:ಕೇಂದ್ರ ನೌಕರರಿಗೆ ಯುಗಾದಿ ಗಿಫ್ಟ್ – ಶೇ.2 ರಷ್ಟು ಡಿಎ ಏರಿಕೆ

    2025ರ ಕೇಂದ್ರ ಬಜೆಟ್‌ನಲ್ಲಿ ಪರಿಷ್ಕೃತ ಆದಾಯ ತೆರಿಗೆ ಸ್ಲ್ಯಾಬ್‌ಗಳು ಮತ್ತು ಕಡಿತಗಳನ್ನು ಪರಿಚಯಿಸಿದೆ. ಅವುಗಳನ್ನು ಈದೀಗ ಜಾರಿಗೆ ತರಲಾಗುತ್ತಿದ್ದು, ಹೊಸ ತೆರಿಗೆ ಪದ್ಧತಿಯಡಿಯಲ್ಲಿ ವರ್ಷಕ್ಕೆ 12 ಲಕ್ಷ ರೂ.ವರೆಗೆ ಗಳಿಸುವವರು ಆದಾಯ ತೆರಿಗೆ ಪಾವತಿಸುವುದರಿಂದ ವಿನಾಯಿತಿ ಪಡೆಯುತ್ತಾರೆ. ಅದಕ್ಕೂ ಹೆಚ್ಚು ಸಂಬಳ ಪಡೆಯುವವರು 75,000 ರೂ.ಗಳ ಪ್ರಯೋಜನ ಪಡೆಯುತ್ತಾರೆ, ಇದರಿಂದಾಗಿ 12.75 ಲಕ್ಷ ರೂ.ವರೆಗಿನ ವಾರ್ಷಿಕ ಆದಾಯವು ತೆರಿಗೆ ಮುಕ್ತವಾಗಿರುತ್ತದೆ.

    ಯುಪಿಐ ನಿಯಮಗಳು:
    ಏ.1 ರಿಂದ ನಿಷ್ಕ್ರಿಯ ಮೊಬೈಲ್ ಸಂಖ್ಯೆಗಳಿಂದ ಯುಪಿಐ ವಹಿವಾಟು ನಡೆಸಲಾಗುವುದಿಲ್ಲ. ಭದ್ರತೆಯನ್ನು ಹೆಚ್ಚಿಸಲು, ಬ್ಯಾಂಕ್‌ಗಳು ಮತ್ತು ಫೋನ್ ಪೇ ಮತ್ತು ಗೂಗಲ್ ಪೇನಂತಹ ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳಲ್ಲಿ ದೀರ್ಘಕಾಲದವರೆಗೆ ಬಳಕೆಯಾಗದೆ ಉಳಿದಿರುವ ಮೊಬೈಲ್ ಸಂಖ್ಯೆಗಳಿಗೆ ಲಿಂಕ್ ಮಾಡಲಾದ ಖಾತೆಗಳನ್ನು ಹಂತಹಂತವಾಗಿ ರದ್ದುಗೊಳಿಸಲು ಸೂಚಿಸಲಾಗಿದೆ. ಹೀಗಾಗಿ ಏ.1ರ ಮೊದಲು ಮೊಬೈಲ್ ಸಂಖ್ಯೆಗಳನ್ನು ನವೀಕರಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಆದೇಶಿಸಿದೆ.

    ಪಿಂಚಣಿ ಯೋಜನೆ:
    ಮತ್ತೊಂದು ಮಹತ್ವದ ಆರ್ಥಿಕ ಬದಲಾವಣೆಯೆಂದರೆ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಬದಲಾಯಿಸುವ ಏಕೀಕೃತ ಪಿಂಚಣಿ ಯೋಜನೆ. 2024ರ ಆಗಸ್ಟ್ನಲ್ಲಿ ಪರಿಚಯಿಸಲಾದ ಯುಪಿಎಸ್, ಏ.1 ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. ಈ ಬದಲಾವಣೆಯಿಂದ ಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರ ಮೇಲೆ ಪರಿಣಾಮ ಬೀರಲಿದೆ. ಕನಿಷ್ಠ 25 ವರ್ಷಗಳ ಸೇವೆಯನ್ನು ಹೊಂದಿರುವವರು ತಮ್ಮ ಕೊನೆಯ 12 ತಿಂಗಳ ಸರಾಸರಿ ಮೂಲ ವೇತನದ ಶೇ.50 ರಷ್ಟಕ್ಕೆ ಸಮಾನವಾದ ಪಿಂಚಣಿಯನ್ನು ಪಡೆಯಲಿದ್ದಾರೆ.

    ಕನಿಷ್ಠ ಬ್ಯಾಲೆನ್ಸ್:
    ಬ್ಯಾಂಕಿಂಗ್ ವಲಯದಲ್ಲಿ, ಎಸ್‌ಬಿಐ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಕೆನರಾದಂತಹ ಪ್ರಮುಖ ಬ್ಯಾಂಕ್‌ಗಳು ಕನಿಷ್ಠ ಬ್ಯಾಲೆನ್ಸ್ ನಿಯಮಗಳನ್ನು ನವೀಕರಿಸುತ್ತಿದ್ದು, ಪರಿಷ್ಕೃತ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳಲು ಸಾಧ್ಯವಾಗದಿದ್ದರೆ ಗ್ರಾಹಕರು ಹೊಸ ಬ್ಯಾಂಕಿಂಗ್ ಮಾರ್ಗಸೂಚಿಗಳ ಪ್ರಕಾರ ದಂಡ ಪಾವತಿಸಬೇಕಾಗುತ್ತದೆ.ಇದನ್ನೂ ಓದಿ:ಮೇ.1 ರಿಂದ ಎಟಿಎಂ ವಿತ್ ಡ್ರಾ ಶುಲ್ಕ 2 ರೂ. ಹೆಚ್ಚಳ

  • ಅಪಘಾತದಲ್ಲಿ ಒಂದೂ ಸಾವಿಲ್ಲ – 166 ವರ್ಷಗಳ ಇತಿಹಾಸ ಹೊಂದಿರೋ ರೈಲ್ವೇಯಿಂದ ದಾಖಲೆ

    ಅಪಘಾತದಲ್ಲಿ ಒಂದೂ ಸಾವಿಲ್ಲ – 166 ವರ್ಷಗಳ ಇತಿಹಾಸ ಹೊಂದಿರೋ ರೈಲ್ವೇಯಿಂದ ದಾಖಲೆ

    ನವದೆಹಲಿ: ಭಾರತೀಯ ರೈಲ್ವೇಯ 166 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಈ ವರ್ಷ ಯಾವುದೇ ಪ್ರಯಾಣಿಕರು ಸಾವನ್ನಪ್ಪಿಲ್ಲ. ಈ ಹಣಕಾಸು ವರ್ಷದಲ್ಲಿ ಒಬ್ಬ ಪ್ರಯಾಣಿಕರೂ ಸಾವನ್ನಪ್ಪಿಲ್ಲ ಎಂದು ಭಾರತೀಯ ರೈಲ್ವೇ ಹೇಳಿಕೊಂಡಿದೆ.

    ಭಾರತೀಯ ರೈಲ್ವೇಯ 166 ವರ್ಷಗಳ ಇತಿಹಾಸದಲ್ಲಿ, 2019-20 ‘ಶೂನ್ಯ ಪ್ರಯಾಣಿಕರ ಸಾವಿಗೆ’ ಸಾಕ್ಷಿಯಾಗಿದೆ ಎಂದು ರೈಲ್ವೇ ಸಚಿವ ಪಿಯೂಷ್ ಗೋಯಲ್ ಟ್ವಿಟ್ಟರ್ ಖಾತೆಯಲ್ಲಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

    ರೈಲ್ವೇ ಸೇವೆಗಳ ಏಕೀಕರಣ, ರೈಲ್ವೇ ಸೌಲಭ್ಯಗಳು, ಇಲಾಖೆ ಕಾರ್ಯ ಶೈಲಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಗಮನಾರ್ಹ ಸುಧಾರಣೆ ಇದಕ್ಕೆ ಕಾರಣವಾಗಿದೆ. ಈ ಬೆಳವಣಿಗೆ ವಿಶ್ವ ದರ್ಜೆಯ ರೈಲ್ವೇ ಸೇವೆಗಳನ್ನು ಒದಗಿಸುವ ನಮ್ಮ ಸಂಕಲ್ಪದ ದಿಕ್ಕಿನಲ್ಲಿ ತೆಗೆದುಕೊಂಡ ಹೆಜ್ಜೆಯಾಗಿದೆ. ದೇಶದ ಅಭಿವೃದ್ಧಿಗೆ ಇದು ಹೆಚ್ಚಿನ ಕೊಡುಗೆ ನೀಡಲಿದ್ದು ನಾವು ಹೆಚ್ಚು ಸುರಕ್ಷತೆ ಆದ್ಯತೆ ನೀಡುತ್ತಿದ್ದೇವೆ ಎಂದು ತಮ್ಮ ಎರಡನೇ ಟ್ವೀಟ್ ನಲ್ಲಿ ಗೋಯಲ್ ಹೇಳಿಕೊಂಡಿದ್ದಾರೆ.

    ಕಳೆದ ಡಿಸೆಂಬರ್ 6 ರಂದು, ದೆಹಲಿ ಹೈಕೋರ್ಟ್ ದೇಶಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳಲ್ಲಿ ಸುರಕ್ಷತೆ ಮತ್ತು ಸುರಕ್ಷತಾ ಕ್ರಮಗಳ ಅತ್ಯುನ್ನತ ಗುಣಮಟ್ಟವನ್ನು ಕಾಯ್ದುಕೊಳ್ಳಲು ಕೋರಿ ಸಲ್ಲಿಸಿದ ಅರ್ಜಿಯ ಮೇಲೆ ಕೇಂದ್ರದಿಂದ ಪ್ರತಿಕ್ರಿಯೆ ನೀಡಲು ಸೂಚಿಸಿತ್ತು.

    2018ರ ಹಣಕಾಸು ವರ್ಷದಲ್ಲಿ 73 ರೈಲ್ವೇ ಅಪಘಾತಗಳು ಸಂಭವಿಸಿದ್ದವು. 2019ರಲ್ಲಿ ಈ ಸಂಖ್ಯೆ 59ಕ್ಕೆ ಇಳಿದಿದೆ. 2013ರಿಂದ 2018ರವರೆಗೆ ಪ್ರತಿ ವರ್ಷ ಸರಾಸರಿ 110 ಅಪಘಾತಗಳು ಸಂಭವಿಸಿದ್ದು 990 ಮಂದಿ ಬಲಿಯಾಗಿದ್ದರು.

    ಇದಕ್ಕೆ ಪ್ರತಿಕ್ರಿಯಿಸಿರುವ ರೈಲ್ವೆ ಇಲಾಖೆ ನವೆಂಬರಿನಲ್ಲಿ ರೈಲ್ವೇ ಹಳಿಗಳನ್ನು ಸುರಕ್ಷತೆ ಸುಧಾರಿಸಲು ಆಧುನೀಕರಿಸಲಾಗುತ್ತಿದೆ ಎಂದು ಹೇಳಿಕೊಂಡಿದೆ. ಹಳಿಗಳಲ್ಲಿ ಆಗುವ ಅನಾಹುತಗಳನ್ನು ತಪ್ಪಿಸಲು ಅಲ್ಟ್ರಾಸೋನಿಕ್ ಫ್ಲಾ ಡಿಟೆಕ್ಷನ್(ಯುಎಸ್‍ಎಫ್‍ಡಿ) ತಂತ್ರಜ್ಞಾನ ಬಳಸಿಕೊಂಡಿದ್ದು ಸೆನ್ಸರ್  ಮೂಲಕ ಅಪಘಾತಗಳನ್ನು ತಪ್ಪಿಸಲಾಗಿದೆ. ಇವೆಲ್ಲದರ ಹೊರತಾಗಿ, ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುತ್ತಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

  • ಜಾಹೀರಾತು ಪ್ರಕಟಿಸದೇ ಫಸ್ಟ್ ಟೈಂ 6.84 ಕೋಟಿ ಆದಾಯಗಳಿಸಿದ ವಾಟ್ಸಪ್

    ಜಾಹೀರಾತು ಪ್ರಕಟಿಸದೇ ಫಸ್ಟ್ ಟೈಂ 6.84 ಕೋಟಿ ಆದಾಯಗಳಿಸಿದ ವಾಟ್ಸಪ್

    ನವದೆಹಲಿ: ಯಾವುದೇ ಜಾಹಿರಾತನ್ನು ಪ್ರಕಟಿಸದೇ ಮೆಸೇಂಜಿಂಗ್ ಅಪ್ಲಿಕೇಶನ್ ವಾಟ್ಸಪ್ 6.84 ಕೋಟಿ ರೂ. ಆದಾಯ ಗಳಿಸಿದೆ.

    ರಿಜಿಸ್ಟ್ರಾರ್ ಆಫ್ ಕಂಪನಿಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿ ಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. 2018ರ ಹಣಕಾಸು ವರ್ಷದಲ್ಲಿ ವಾಟ್ಸಪ್ ಯಾವುದೇ ಆದಾಯಗಳಿಸದೇ 5 ಲಕ್ಷ ರೂ. ನಷ್ಟ ಅನುಭವಿಸಿತ್ತು.

    ವಾಟ್ಸಪ್ ಒಟ್ಟು ಹಣಕಾಸು ವರ್ಷದಲ್ಲಿ ವ್ಯವಹಾರ ನಡೆಸಲು 5.99 ಕೋಟಿ ರೂ. ಖರ್ಚು ಮಾಡಿದೆ. ಇದರಲ್ಲಿ 3.43 ಕೋಟಿ ರೂ. ಹಣವನ್ನು ಉದ್ಯೋಗಿಗಳ ಸಂಬಳಕ್ಕೆ ಖರ್ಚು ಮಾಡಿದರೆ 1.3 ಕೋಟಿ ರೂ. ಹಣವನ್ನು ಪ್ರಚಾರಕ್ಕೆ ವಿನಿಯೋಗಿಸಿದೆ. ಇದನ್ನೂ ಓದಿ: ವಾಟ್ಸಪ್ ಯೂ ಟರ್ನ್ – ಇನ್ನು ಮುಂದೆ ಬರುತ್ತೆ ಜಾಹೀರಾತು!

    ಆದಾಯಗಳಿಸಿದ್ದು ಹೇಗೆ?
    ವಾಟ್ಸಪ್‍ನಲ್ಲಿ ಯಾವುದೇ ಜಾಹೀರಾತು ಪ್ರಕಟಗೊಳ್ಳುವುದಿಲ್ಲ. ಆದರೆ ಭಾರತದಲ್ಲಿ ತನ್ನ ಬಿಸಿನೆಸ್ ಆಪ್ ಮೂಲಕ ಆದಾಯಗಳಿಸಿದೆ. 15 ತಿಂಗಳ ಹಿಂದೆ ವಾಟ್ಸಪ್ ಈ ಅಪ್ಲಿಕೇಶನ್ ಬಿಡುಗಡೆ ಮಾಡಿತ್ತು. ವಿಶ್ವದಲ್ಲಿ ಒಟ್ಟು 50 ಲಕ್ಷ ಮಂದಿ ಬಿಸಿನೆಸ್ ಆ್ಯಪ್ ಬಳಸುತ್ತಿದ್ದರೆ ಭಾರತದಲ್ಲಿ ಒಟ್ಟು 10 ಲಕ್ಷಕ್ಕೂ ಹೆಚ್ಚು ಮಂದಿ ಬಿಸಿನೆಸ್ ಆ್ಯಪ್ ಬಳಸುತ್ತಿದ್ದಾರೆ. ಭಾರತದಲ್ಲಿ ಒಟ್ಟು 40 ಕೋಟಿ ಜನ ವಾಟ್ಸಪ್ ಬಳಸುತ್ತಿದ್ದಾರೆ.