Tag: fire

  • ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

    ಮೊರಾದಾಬಾದ್ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ – ಓರ್ವ ಮಹಿಳೆ ಸಾವು, ಆರು ಮಂದಿಗೆ ಗಾಯ

    ಲಕ್ನೋ: ಉತ್ತರಪ್ರದೇಶದ ಮೊರಾದಾಬಾದ್‌ನ (Moradabad) ರೆಸ್ಟೋರೆಂಟ್‌ನಲ್ಲಿ ಭಾರೀ ಅಗ್ನಿ (Fire) ಅವಘಡ ಸಂಭವಿಸಿ, ಓರ್ವ ಮಹಿಳೆ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

    ಮಾಯಾ (56) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೊರಾದಾಬಾದ್‌ನ ಶ್ರೀರಾಂಪುರ ರೋಡ್ ಬಳಿಯಿರುವ 5 ಅಂತಸ್ತಿನ ರೆಸ್ಟೋರೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನೆಲ ಮಹಡಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತು. ಪರಿಣಾಮ 4 ಸಿಲಿಂಡರ್‌ಗಳು ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆಯು ಇತರ ಇತರ ಮಹಡಿಗಳಿಗೆ ಹರಡಿತ್ತು. ಇದನ್ನೂ ಓದಿ: CJI ಗವಾಯಿ ಮೇಲೆ ಶೂ ಎಸೆದ ಕೇಸ್ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ ಸುಪ್ರೀಂ

    ಈ ಬಗ್ಗೆ ಮೊರಾದಾಬಾದ್ ಸಿಎಫ್‌ಒ ರಾಜೀವ್ ಕುಮಾರ್ ಪಾಂಡೆ ಮಾತನಾಡಿ, ರಾತ್ರಿ 10 ಗಂಟೆಗೆ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ಕರೆ ಬಂದಿತ್ತು. ಬೆಂಕಿಯ ತೀವ್ರಗೆ ಸುಮಾರು ನಾಲ್ಕು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿತ್ತು. ರೆಸ್ಟೋರೆಂಟ್‌ನಲ್ಲಿದ್ದ ಸುಮಾರು 16 ಜನರನ್ನು ರಕ್ಷಿಸಿದ್ದೇವೆ. ಇದರಲ್ಲಿ ನಾಲ್ಕು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿ, ಒಂದು ನಾಯಿಯ ರಕ್ಷಣೆ ಮಾಡಿದ್ದೇವೆ. ಬೆಂಕಿಯ ನಿಖರ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ.

    ಮೊರಾದಾಬಾದ್ ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಕೀಯ ಅಧಿಕಾರಿ ಡಾ. ಜುನೈದ್ ಅಸಾರಿ ಅವರು ಮಾತನಾಡಿ, ಒಟ್ಟು ಏಳು ರೋಗಿಗಳನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಅವರಲ್ಲಿ ಒಬ್ಬರಾದ 56 ವರ್ಷ ವಯಸ್ಸಿನ ಮಾಯಾ ಮೃತಪಟ್ಟಿದ್ದಾರೆ. ಉಳಿದ ರೋಗಿಗಳು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

  • ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಹೈದರಾಬಾದ್‌: ಕರ್ನೂಲ್‌ನಲ್ಲಿ (Kurnool) ನಡೆದ ಭೀಕರ ಬಸ್ಸು ದುರಂತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ. ಆದರೆ ಈ ದುರಂತಕ್ಕೆ ಕಾರಣವಾದ ಬೈಕ್‌ (Bike) ಮತ್ತು ಬಸ್ಸಿನ (Bus) ನಡುವೆ ಅಪಘಾತ ಹೇಗೆ ಸಂಭವಿಸಿದೆ ಎನ್ನುವುದರ ಬಗ್ಗೆ ಈಗ ತನಿಖೆ ನಡೆಯುತ್ತಿದೆ.

    ದುರಂತ ಹೇಗಾಯ್ತು?
    ಬೈಕ್‌ನಲ್ಲಿದ್ದ ವ್ಯಕ್ತಿಯನ್ನು ಶಿವಶಂಕರ್ ಎಂದು ಗುರುತಿಸಲಾಗಿದೆ. ಬಸ್ಸು ಮತ್ತು ಬೈಕ್‌ ಒಂದೇ ದಿಕ್ಕಿನಲ್ಲಿ ಪ್ರಯಾಣಿಸುತ್ತಿತ್ತು. ವೇಗವಾಗಿ ಬರುತ್ತಿದ್ದ ಬಸ್ಸು ಮೊದಲು ಹಿಂಬದಿಯಿಂದ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಕೆಳಗಡೆ ಬಿದ್ದಿದೆ. ಬೈಕ್‌ ಕೆಳಗಡೆ ಬಿದ್ದರೂ ಚಾಲಕ ಬಸ್ಸನ್ನು ವೇಗವಾಗಿ ಚಲಾಯಿಸಿದ್ದಾನೆ.

    ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್‌  ಕೆಳಕ್ಕೆ ಚೆಲ್ಲಿದೆ.  ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್‌ ಟ್ಯಾಂಕ್‌ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ  ಹೊತ್ತಿಕೊಂಡು ಟ್ಯಾಂಕ್‌ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಡೀಸೆಲ್‌ ಮೇಲುಗಡೆ ಹಾರಿದ್ದರಿಂದ ಸುಲಭವಾಗಿ ಬೆಂಕಿ ಹರಡಿ ಕ್ಷಣಮಾತ್ರದಲ್ಲಿ ಬಸ್ಸು  ಧಗಧಗಿಸಿದೆ.

    ಬೆಂಗಳೂರು ಮತ್ತು ಹೈದರಾಬಾದ್‌ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಸ್ಲೀಪರ್‌ ಕೋಚ್‌ ಬಸ್ಸುಗಳ ಮಲಗುವ ಜಾಗಗಳನ್ನು ಮರದ ಪ್ಲೈವುಡ್‌ ಬಳಸಿ ಸಿದ್ಧಪಡಿಸುತ್ತಾರೆ. ಇದರ ಮೇಲೆ ಕಿರು ಹಾಸಿಗೆ ಇರುತ್ತದೆ.  ಮರ, ಹಾಸಿಗೆ ಎರಡೂ ಬೆಂಕಿ ತಗುಲಿದ ಕೂಡಲೇ ಜ್ವಾಲೆ ಮತ್ತಷ್ಟು ಹೆಚ್ಚಾಗಿದೆ.

    ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ. ಒಂದು ವೇಳೆ ಬೈಕ್‌ಗೆ ಗುದ್ದಿದ ಕೂಡಲೇ ಬಸ್ಸನ್ನು ನಿಲ್ಲಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಚಾಲಕ ನಿಲ್ಲಸದೇ ಬೇಜವಾಬ್ದಾರಿ ವರ್ತನೆ ತೋರಿದ್ದರಿಂದ ಅಮಾಯಕರ ಜೀವಗಳು ಬಲಿಯಾಗಿದೆ.

    ಆಂಧ್ರದ ಕರ್ನೂಲ್‌ (Kurnool) ಬಳಿಯ ಚಿನ್ನಟೇಕೂರು ಈ ದುರಂತ ಸಂಭವಿಸಿ 20 ಮಂದಿ ಮೃತಪಟ್ಟಿದ್ದಾರೆ. ಸ್ಲೀಪರ್‌ ಕೋಚ್‌ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್‌ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

  • Maharashtra | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ

    Maharashtra | ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – ನಾಲ್ವರು ಸಾವು, 10 ಮಂದಿಗೆ ಗಾಯ

    ಮುಂಬೈ: ಮಹಾರಾಷ್ಟ್ರದ (Maharshtra) ನವಿ ಮುಂಬೈ (Navi Mumbai) ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಾಶಿ ಪ್ರದೇಶದ ಸೆಕ್ಟರ್ 14ರಲ್ಲಿರುವ ರಹೇಜಾ ರೆಸಿಡೆನ್ಸಿಯ ಎಂಜಿಎಂ ಕಾಂಪ್ಲೆಕ್ಸ್‌ನ 10ನೇ ಫ್ಲೋರ್‌ನಲ್ಲಿರುವ ಫ್ಲಾಟ್‌ನಲ್ಲಿ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ 11 ಮತ್ತು 12ನೇ ಮಹಡಿಗೂ ಹರಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರೆಸ್ಸಿಂಗ್‌ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ್ಕೆ ಕ್ಯಾಪ್ಟನ್ಸಿಯಿಂದ ರಿಜ್ವಾನ್‌ ಔಟ್‌!

    ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾಶಿಯ ಎರಡು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಇದನ್ನೂ ಓದಿ: ಇಂದಿನಿಂದ ನಾಲ್ಕು ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಕೇರಳ ಪ್ರವಾಸ

    ಬೆಂಕಿ ಅವಘಡದ ಕುರಿತು ಮಾಹಿತಿ ದೊರೆಯುತ್ತಿದ್ದಂತೆ 40 ಅಗ್ನಿಶಾಮಕ ದಳದ ಸಿಬ್ಬಂದಿ, 8 ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಮಂಗಳವಾರ ಬೆಳಗ್ಗೆ 4 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ: ಪಟಾಕಿ ಸಿಡಿಸಲು ಹೋಗಿ ಅನಾಹುತ – ನಾರಾಯಣ ನೇತ್ರಾಲಯದಲ್ಲಿ 20 ಕೇಸ್ ದಾಖಲು

  • ದೆಹಲಿಯಲ್ಲಿ ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ಗಳಲ್ಲಿ ಭಾರಿ ಬೆಂಕಿ ಅವಘಡ

    ದೆಹಲಿಯಲ್ಲಿ ರಾಜ್ಯಸಭಾ ಸಂಸದರಿಗೆ ಹಂಚಲಾಗಿದ್ದ ಅಪಾರ್ಟ್‌ಮೆಂಟ್‌ಗಳಲ್ಲಿ ಭಾರಿ ಬೆಂಕಿ ಅವಘಡ

    ನವದೆಹಲಿ: ದೆಹಲಿಯಲ್ಲಿ (Delhi) ಸಂಸತ್ ಸದಸ್ಯರಿಗೆ ಹಂಚಿಕೆಯಾದ ಫ್ಲ್ಯಾಟ್‌ಗಳಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ.

    ಬಿಡಿ ಮಾರ್ಗದಲ್ಲಿರುವ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ಗಳಿಂದ ಹೊಗೆ ಮೇಲೇರುತ್ತಿರುವ ದೃಶ್ಯ ಕಂಡುಬಂದಿದೆ. ಅದನ್ನು ಈಗ ನಂದಿಸಲಾಗಿದೆ. ರಾಜಧಾನಿಯ ಬಿಶಂಭರ್ ದಾಸ್ ಮಾರ್ಗದಲ್ಲಿರುವ ಬ್ರಹ್ಮಪುತ್ರ ಅಪಾರ್ಟ್‌ಮೆಂಟ್‌ಗಳು ರಾಜ್ಯಸಭಾ ಸಂಸದರ ವಸತಿ ಸಂಕೀರ್ಣವಾಗಿದೆ. ಇದನ್ನೂ ಓದಿ: ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

    ಮಧ್ಯಾಹ್ನ 1:20 ಕ್ಕೆ ಅಗ್ನಿಶಾಮಕ ಇಲಾಖೆಗೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

    ಅಪಾರ್ಟ್ಮೆಂಟ್‌ನಲ್ಲಿರುವ ಅಗ್ನಿಶಾಮಕ ಘಟಕ ಕಾರ್ಯನಿರ್ವಹಿಸುತ್ತಿಲ್ಲ. ಟ್ಯಾಂಕ್ ಮತ್ತು ಪೈಪ್‌ಲೈನ್‌ಗಳಲ್ಲಿ ನೀರಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಬೆಂಕಿಯಿಂದ ಅಪಾರ್ಟ್‌ಮೆಂಟ್‌ ಕೆಳಗಿನ ಎರಡು ಮಹಡಿಗಳಿಗೆ ಭಾರಿ ಹಾನಿಯಾಗಿದೆ. ಇದನ್ನೂ ಓದಿ: ಕದನ ವಿರಾಮ ಉಲ್ಲಂಘಿಸಿ ಪಾಕ್ ಏರ್‌ಸ್ಟ್ರೈಕ್‌ – ಮೂವರು ಅಫ್ಘಾನ್‌ ಕ್ರಿಕೆಟಿಗರು ಸಾವು; ರಶೀದ್‌ ಖಾನ್‌ ಖಂಡನೆ

  • ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

    ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

    ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204) (Garib Rath Express) ಏಕಾಏಕಿ ಬೆಂಕಿ (fire) ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಉರಿದ ಪಂಜಾಬ್‌ನಲ್ಲಿ ನಡೆದಿದೆ. ಓರ್ವ ಮಹಿಳಾ ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದೆ, ಗಾಯಾಳು ಮಹಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ (Amritsar) ಪ್ರಯಾಣಿಸುತ್ತಿತ್ತು. ಆದ್ರೆ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದೇ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಮೂಡಿದೆ. ಇದನ್ನೂ ಓದಿ: ಲಿಂಗಾಯತ ಧರ್ಮದ ಬಗ್ಗೆ ಅವಹೇಳನ; ಬಾಗಲಕೋಟೆ ತೊರೆಯುವಂತೆ ಕನ್ನೇರಿ ಶ್ರೀಗಳಿಗೆ ನೊಟೀಸ್!

    ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿಯ ಪ್ರಕಾರ, ಬೆಂಕಿ ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ. ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ರೈಲು ಸಂಖ್ಯೆ 12204 ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್‌ನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಪ್ರಯಾಣಿಕರೊಬ್ಬರು ಕೂಡಲೇ ಸರಪಳಿ ಎಳೆದು ರೈಲನ್ನು ನಿಲ್ಲಿಸಿದರು. ತಕ್ಷಣ, ಪೈಲಟ್ (ಚಾಲಕ) ಎಲ್ಲಾ ಪ್ರಯಾಣಿಕರನ್ನು ರೈಲಿನಿಂದ ಇಳಿಯುವಂತೆ ಕೇಳಿಕೊಂಡರು ಮತ್ತು ಬೆಂಕಿಯ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಕೋಚ್‌ನಲ್ಲಿದ್ದ ಪ್ರಯಾಣಿಕರನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮಾಹಿತಿ ತಿಳಿದ ತಕ್ಷಣ ರೈಲ್ವೆ ನಿಲ್ದಾಣದ ಅಧಿಕಾರಿಗಳು, ನೌಕರರು, ಜಿಆರ್‌ಪಿ, ಆರ್‌ಪಿಎಫ್ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತಲುಪಿದವು. ಅಗ್ನಿಶಾಮಕ ದಳದವರನ್ನೂ ಸಹ ಘಟನಾ ಸ್ಥಳಕ್ಕೆ ತಂದು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.

    ಗೊಂದಲದಲ್ಲಿ ರೈಲಿನಿಂದ ಇಳಿಯಲು ಪ್ರಯತ್ನಿಸುವಾಗ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

  • ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್ – 19 ಪ್ರಯಾಣಿಕರು ಸಜೀವ ದಹನ

    ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ಹೊತ್ತಿ ಉರಿದ ಬಸ್ – 19 ಪ್ರಯಾಣಿಕರು ಸಜೀವ ದಹನ

    ಜೈಪುರ: ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ (Bus) ಬೆಂಕಿ ಕಾಣಿಸಿಕೊಂಡ ಪರಿಣಾಮ 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ (Jaisalmer–Jodhpur Highway) ನಡೆದಿದೆ.

    ಒಟ್ಟು 57 ಮಂದಿ ಪ್ರಯಾಣಿಕರನ್ನು ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬಸ್ ಅನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದಾನೆ. ಅಷ್ಟುಹೊತ್ತಿಗಾಗಲೇ ಬೆಂಕಿ ಸಂಪೂರ್ಣ ಬಸ್ ಅನ್ನು ಆವರಿಸಿಕೊಂಡಿದ್ದು, 19 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ಘಟನೆ ನಡೆದ ತಕ್ಷಣವೇ ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಲ್ಲದೇ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಜೈಸಲ್ಮೇರ್‌ನ ಜವಾಹರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: Udupi | ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

    ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಜೈಸಲ್ಮೇರ್ ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಿದೆ. ಇದನ್ನೂ ಓದಿ: ಬಿಹಾರ ಚುನಾವಣೆಗೆ 71 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ ಬಿಜೆಪಿ – ಸ್ಪೀಕರ್‌ಗೆ ಕೊಟ್ಟಿಲ್ಲ ಟಿಕೆಟ್

    ಗಾಯಾಳುಗಳಿಗೆ ತಕ್ಷಣ ವೈದ್ಯಕೀಯ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಮಾಹಿತಿ ತಿಳಿದ ತಕ್ಷಣ ಸಿಎಂ ಭಜನ್‌ಲಾಲ್ ಶರ್ಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಇದನ್ನೂ ಓದಿ: ಅ.22 ರಂದು ಶಬರಿಮಲೆಗೆ ದ್ರೌಪದಿ ಮುರ್ಮು ಭೇಟಿ

    ರಾಜ್ಯಪಾಲ ಹರಿಭಾವು ಬಗಾಡೆ, ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಬಿಜೆಪಿ ರಾಜ್ಯಾಧ್ಯಕ್ಷ ಮದನ್ ರಾಥೋಡ್ ಮತ್ತು ಇತರ ನಾಯಕರು ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಮೀನಿಗೆ ತೆಂಗಿನಕಾಯಿ ಕೀಳಲು ಹೋಗಿದ್ದಾಗ ಅವಘಡ – ಅಕ್ರಮ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

  • ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ

    ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ

    ಮಡಿಕೇರಿ: ಇಲ್ಲಿನ ಖಾಸಗಿ ವಸತಿ ಶಾಲೆಯಲ್ಲಿ ಅಗ್ನಿ (Fire) ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ (Madikeri) ನಡೆದಿದೆ.

    ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಖಾಸಗಿ ವಸತಿ ಶಾಲೆಯಲ್ಲಿ ಎರಡನೇ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾನೆ.

    ಶಾಲೆಯ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮಲಗಿರುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿ ಸುಮಾರು 35 ಕ್ಕೂ ಹೆಚ್ಚು ಮಕ್ಕಳು ಬೆಂಕಿ ಕಂಡು ಕೊಠಡಿಯಿಂದ ಓಡಿಹೋಗಿದ್ದಾರೆ. ಇನ್ನೂ ಕೆಲವರು ಭಯದಲ್ಲೇ ಹಾಗೂ ಭಾರೀ ಹೊಗೆಯ ವಾತಾವರಣದಿಂದ ಹೊರಗೆ ಹೋಗಲಾರದೇ ಕಿರುಚಾಟ ನಡೆಸಿದ್ದರು.

    ವಸತಿ ಸಿಬ್ಬಂದಿ ಕೆಲ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಆದರೆ ವಿದ್ಯಾರ್ಥಿ ಪುಷ್ಪಕ್ ಮಾತ್ರ ದಟ್ಟ ಹೊಗೆ ಅವರಿಸಿದ ಹಿನ್ನಲೆಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದು ಹೋಗಿದ್ದ ಎನ್ನಲಾಗಿದೆ. ಸಿಬ್ಬಂದಿ ಮಕ್ಕಳ ಎಣಿಕೆ ಮಾಡುವ ಸಂದರ್ಭದಲ್ಲಿ ಓರ್ವ ವಿದ್ಯಾರ್ಥಿ ಕಾಣೆಯಾಗಿದ್ದಾನೆ ಎಂದು ಕೊಠಡಿ ಒಳಗೆ ನುಗ್ಗಿ ಹುಡುಕಾಟ ನಡೆಸುವ ಸಂದರ್ಭದಲ್ಲಿ ಪುಷ್ಪಕ್ ಜೀವಂತ ದಹನವಾಗಿರುವುದು ಬೆಳಕಿಗೆ ಬಂದಿದೆ.

    ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ್, ಫೈರ್ ಬ್ರಿಗೇಡ್ ಅಧಿಕಾರಿ ನಾಗರಾಜ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಪೋಷಕರು ಸಹ ಸ್ಥಳಕ್ಕಾಗಮಿಸಿದ್ದಾರೆ.

  • Kolar | ಕಿಡಿಗೇಡಿಗಳಿಂದ ಮನೆಗೆ ಬೆಂಕಿ – 4 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

    Kolar | ಕಿಡಿಗೇಡಿಗಳಿಂದ ಮನೆಗೆ ಬೆಂಕಿ – 4 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

    ಕೋಲಾರ: ಕಿಡಿಗೇಡಿಗಳು ಮನೆಗೆ ಬೆಂಕಿ (Fire) ಹಾಕಿದ ಪರಿಣಾಮ ಮನೆಯಲ್ಲಿದ್ದ ಸಾಮಗ್ರಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಚೀಟಿಂವಾರಪಲ್ಲಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ. ಚೀಟಿಂವಾರಪಲ್ಲಿ ಗ್ರಾಮದ ರೈತ ಜಯರಾಮ್ ಎಂಬವರಿಗೆ ಸೇರಿದ ಮನೆಗೆ ದುಷ್ಕರ್ಮಿಗಳು ಬೆಂಕಿ ಹಾಕಿದ ಹಿನ್ನೆಲೆ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಜಯರಾಮ್ ಅವರು ಊರಿನಲ್ಲಿ ಮನೆ ಕೆಲಸ ಮಾಡಿಸುತ್ತಿರುವ ಕಾರಣ ಮನೆಯಲ್ಲಿದ್ದ ಎಲ್ಲಾ ವಸ್ತುಗಳನ್ನು ತೋಟದ ಮನೆಯಲ್ಲಿಡಲಾಗಿತ್ತು. ಇದನ್ನೂ ಓದಿ: ‘ಐ ಲವ್ ಮುಹಮ್ಮದ್’ ಅಭಿಯಾನಕ್ಕೆ 5 ದಿನಗಳ ಪ್ಲ್ಯಾನಿಂಗ್ – ಯುಪಿ ಪೊಲೀಸರ ತನಿಖೆಯಲ್ಲಿ ಬಯಲು

    ಬೆಂಕಿಯಿಂದ ಮನೆಯಲ್ಲಿದ್ದ ರಸಗೊಬ್ಬರ, ಮನೆ ಸಾಮಾನುಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಸುಮಾರು 4 ಲಕ್ಷ ರೂಪಾಯಿ ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮನೆಗೆ ಬೆಂಕಿಯಿಟ್ಟಿರುವ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಸಮಸ್ಯೆಗಳ ನಡ್ವೆ ನಾಯಿಗಳ ಭಯ; ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಜರ್ಮನ್ ಶೆಫರ್ಡ್ ನಾಯಿ ಕಡಿತ!

  • ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಕಾರು – ಯುವಕ ಸಜೀವ ದಹನ

    ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದ ಕಾರು – ಯುವಕ ಸಜೀವ ದಹನ

    ಚಿತ್ರದುರ್ಗ: ಕಾರಿನಲ್ಲಿ (Car) ಆಕಸ್ಮಿಕವಾಗಿ ಬೆಂಕಿ (Fire) ಕಾಣಿಸಿಕೊಂಡು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ಯುವಕನೋರ್ವ ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಅರಳೀಕಟ್ಟೆ ಗ್ರಾಮದ ಸಿದ್ದೇಶ್ವರ್ (35) ಮೃತ ದುರ್ದೈವಿ. ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು. ಈ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಇದನ್ನೂ ಓದಿ: ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಬೆಂಕಿಯ ಕೆನ್ನಾಲಿಗೆ ಸಿಲುಕಿ ಕಾರಿನಲ್ಲಿದ್ದ ಸಿದ್ದೇಶ್ವರ್ ಸಂಪೂರ್ಣ ಸುಟ್ಟು ಹೋಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ಘಟನಾ ಸ್ಥಳಕ್ಕೆ ಡಿವೈಎಸ್ಪಿ ಶಿವಕುಮಾರ್, ಸಿಪಿಐ ಗುಡ್ಡಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಬಾದಾಮಿ| ಅಕ್ರಮವಾಗಿ ಸಂಗ್ರಹಿಸಿದ್ದ ಸಿಲಿಂಡರ್‌ಗಳು ಸ್ಫೋಟ- ಹೊತ್ತಿ ಉರಿದ ಅಂಗಡಿ

    ಬಾದಾಮಿ| ಅಕ್ರಮವಾಗಿ ಸಂಗ್ರಹಿಸಿದ್ದ ಸಿಲಿಂಡರ್‌ಗಳು ಸ್ಫೋಟ- ಹೊತ್ತಿ ಉರಿದ ಅಂಗಡಿ

    ಬಾಗಲಕೋಟೆ: ಅಕ್ರಮವಾಗಿ ಸಂಗ್ರಹಿಸಿದ್ದ ವಾಣಿಜ್ಯ ಸಿಲಿಂಡರ್‌ಗಳು ಸ್ಫೋಟಗೊಂಡ (Commercial Cylinder) ಘಟನೆ ಬಾದಾಮಿ (Badami) ಶಿವಾಜಿ ಸರ್ಕಲ್ ಬಳಿ ನಡೆದಿದೆ.

    ದಾದಾಫಿರ್ ಜಮಾದಾರ್ ಎಂಬುವರ ಅಂಗಡಿಯಲ್ಲಿದ್ದ ಸಂಗ್ರಹಿಸಿದ್ದ 5 ಕೆಜಿ ಸಿಲಿಂಡರ್ ಸ್ಫೋಟಗೊಂಡಿದ್ದು, ಅಂಗಡಿ ಮಾಲೀಕ ಸಾಯಿಲ್ ಜಮಾದಾರ್, ದಾದಾಪಿರ್ ಜಮಾದಾರ್ ಹಾಗೂ ಬಾದಾಮಿಯ‌ ಮೂವರು ಹೋಮ್‌ಗಾರ್ಡ್‌ಗಳು ಗಾಯಗೊಂಡಿದ್ದಾರೆ.

    ಗಾಯಾಳುಗಳು ಬಾದಾಮಿಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬಾದಾಮಿ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.  ಇದನ್ನೂ ಓದಿ: ವೇಗವಾಗಿ ಬಂದು ಆಟೋಗೆ ಗುದ್ದಿದ KSRTC; ಮತ್ತೆ ರಿವರ್ಸ್‌ ಆಗಿ ಪ್ರಯಾಣಿಕರು, ಆಟೋಗೆ ಡಿಕ್ಕಿ ತಲಪಾಡಿ ಆಕ್ಸಿಡೆಂಟ್‌ ಹೇಗಾಯ್ತು?

    ದಾದಾಫಿರ್ ಅಂಗಡಿ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಬಾದಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಟ್ಟಣದಲ್ಲಿ ರಸಮಂಜರಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ಬಂದೋಬಸ್ತ್ ಮಾಡಲು ಹೋಮ್ ಗಾರ್ಡ್‌ಗಳು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಸ್ಥಳಕ್ಕೆ ಬಂದಿದಾರೆ. ದಾಪಿರ್ ಜೊತೆ ಬಂದು ಅಂಗಡಿ ಬಾಗಿಲು ತೆಗೆದಾಗ ಬೆಂಕಿ ಹೊರ ಚಿಮ್ಮಿದರಿಂದ ಹೋಮ್ ಗಾರ್ಡ್‌ಗಳು ಗಾಯಗೊಂಡಿದ್ದಾರೆ.