Tag: fire engines

  • ದೆಹಲಿಯ ಕಟ್ಟಡವೊಂದರ 9ನೇ ಮಹಡಿ ಬೆಂಕಿಗಾಹುತಿ – ತಪ್ಪಿದ ದುರಂತ, ವರದಾನವಾಯ್ತು ವರುಣ

    ದೆಹಲಿಯ ಕಟ್ಟಡವೊಂದರ 9ನೇ ಮಹಡಿ ಬೆಂಕಿಗಾಹುತಿ – ತಪ್ಪಿದ ದುರಂತ, ವರದಾನವಾಯ್ತು ವರುಣ

    ನವದೆಹಲಿ: ಇಲ್ಲಿನ ಬರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ (DCM Building) 9ನೇ ಮಹಡಿಯಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಅನೇಕ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸೂಕ್ತ ಸಮಯಕ್ಕೆ ಮಳೆಯೂ ಅಪ್ಪಳಿಸಿದ್ದರಿಂದ ಹಾನಿ ಪ್ರಮಾಣ ಕಡಿಮೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

    ಶನಿವಾರ ಸಂಜೆ 6:21ರ ಸುಮಾರಿಗೆ ಕಟ್ಟಡಕ್ಕೆ ಬೆಂಕಿ ಬಿದ್ದಿರುವ ಕುರಿತು ಕರೆ ಬಂದ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 10 ಅಗ್ನಿಶಾಮಕ ವಾಹನಗಳು (Fire Engines) ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಇದನ್ನೂ ಓದಿ: ದೆಹಲಿ ಪ್ರವಾಹಕ್ಕೆ ಬಿಜೆಪಿಯೇ ಕಾರಣ – AAP ಆರೋಪ

    ಕನ್ನಾಟ್ ಸ್ಥಳಕ್ಕೆ ಸಮೀಪದಲ್ಲಿರುವ ಬಾರಾಖಂಬಾ ರಸ್ತೆಯಲ್ಲಿರುವ ಡಿಸಿಎಂ ಕಟ್ಟಡದ 9ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಧಗಧಗಿಸುತ್ತಿರುವುದನ್ನು ಕಂಡ ಕಟ್ಟಡದ ಮಾಲೀಕರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಅಗ್ನಿ ಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಗಿಳಿಯುತ್ತಿದ್ದಂತೆ ಮಳೆಯೂ ಸಹ ಅಪ್ಪಳಿಸಿದ್ದು, ಕಾರ್ಯಾಚರಣೆಗೆ ನೆರವಾಗಿದೆ.

    ಈ ಕುರಿತ ವೀಡಿಯೋ ಹಾಗೂ ಚಿತ್ರಗಳು ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮದುವೆಯಾದ 2 ಗಂಟೆಯಲ್ಲೇ ಪತ್ನಿಗೆ ತಲಾಖ್ ನೀಡಿದ ಪತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 7 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ- ಮಹಿಳೆ ಸಾವು

    7 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ- ಮಹಿಳೆ ಸಾವು

    ಮುಂಬೈ: ಖಾರ್ ಉಪನಗರದ ಪಶ್ಚಿಮ ಭಾಗದಲ್ಲಿರುವ ಏಳು ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಒಬ್ಬ ಬಾಲಕಿ ಮತ್ತು ಮತ್ತೊಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ.

    ಮೃತ ಮಹಿಳೆಯನ್ನು ಹೇಮಾ ಜಗ್ವಾನಿ(40) ಎಂದು ಗುರುತಿಸಲಾಗಿದೆ. ಕಟ್ಟಡದೊಳಗೆ ಸಿಲುಕಿದ್ದ 10 ವರ್ಷದ ಬಾಲಕಿ ಮತ್ತು 45 ವರ್ಷದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ ಎಂದು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಗುರುವಾರ ಸಂಜೆ 7 ಗಂಟೆ ವೇಳೆಗೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು. ಎಂಟು ಅಗ್ನಿಶಾಮಕ ಯಂತ್ರಗಳು, ಏಳು ನೀರಿನ ಟ್ಯಾಂಕರ್ ಮತ್ತು ಇತರೆ ಸಾಧನಗಳನ್ನು ಬಳಸಿ ರಾತ್ರಿ ಸುಮಾರು11 ಗಂಟೆವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

    ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಾಗ, ಕೊಠಡಿಯಲ್ಲಿ ಸಿಕ್ಕಿಕೊಂಡಿದ್ದ ಹೇಮಾ ಜಗ್ವಾನಿ ಉಸಿರುಗಟ್ಟಿ ಪ್ರಜ್ಞೆಕಳೆದುಕೊಂಡಿದ್ದರು. ನಂತರ ಅವರನ್ನು ಹಿಂದೂಜಾ ಆಸ್ಪತ್ರೆಗೆ ಕರೆತರಲಾಯಿತು. ಅವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಇದನ್ನೂ ಓದಿ: ಬೆಣ್ಣೆ ನಗರಿಯಲ್ಲಿ ವೈರಲ್ ಫೀವರ್ ಆತಂಕ-ಐಸಿಯುನಲ್ಲಿ ಮಕ್ಕಳು

    ಕಟ್ಟಡದ ವಿದ್ಯುತ್ ವೈರಿಂಗ್ ಹಾದುಹೋಗುವ ಕೊಳವೆಯಲ್ಲಿ ಬೆಂಕಿ ತಗುಲಿದೆ. ಕಟ್ಟಡದ ತುಂಬಾ ಹೊಗೆ ತುಂಬಿಕೊಂಡಿದ್ದ ಕಾರಣ, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯ ವೇಳೆ ಕೃತಕ ಉಸಿರಾಟದ ಉಪಕರಣಗಳನ್ನು ಬಳಸಿ ಕಾರ್ಯಾಚರಣೆ ನಡೆಸಿದರು.

  • ದೆಹಲಿಯ ಏಮ್ಸ್ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ- 34 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

    ದೆಹಲಿಯ ಏಮ್ಸ್ ಆಸ್ಪತ್ರೆಯ ಕಟ್ಟಡದಲ್ಲಿ ಬೆಂಕಿ- 34 ಅಗ್ನಿಶಾಮಕ ವಾಹನಗಳಿಂದ ಕಾರ್ಯಾಚರಣೆ

    ನವದೆಹಲಿ: ನಗರದ ಪ್ರಸಿದ್ಧ ಏಮ್ಸ್ ಆಸ್ಪತ್ರೆಯ ಕಟ್ಟಡದ ಎಮರ್ಜೆನ್ಸಿ ವಾರ್ಡ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 34 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿವೆ.

    34 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿದರೂ ಸಹ ಬೆಂಕಿ ಹತೋಟಿಗೆ ಬರುತ್ತಿಲ್ಲ. ಅಗ್ನಿಯು ಕ್ರಮೇಣವಾಗಿ ಕಟ್ಟಡವನ್ನು ಆವರಿಸಿಕೊಳ್ಳುತ್ತಿದೆ. ಬೆಂಕಿಯ ವ್ಯಾಪಕತೆ ಹೆಚ್ಚಿದ್ದರೂ ಸಹ ಈವರೆಗೆ ಯಾವುದೇ ಸಾವು ನೋವು ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಆಸ್ಪತ್ರೆಯ ತುರ್ತು ವಾರ್ಡ್ ಬಳಿಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಯು ಕಟ್ಟಡದಿಂದ ಜನರನ್ನು ಸ್ಥಳಾಂತರಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಕಟ್ಟಡವು ರೋಗಿಗಳಿಲ್ಲದ ಬ್ಲಾಕ್ ಆಗಿದ್ದು, ವೈದ್ಯರ ಕೊಠಡಿ ಹಾಗೂ ಸಂಶೋಧನಾ ಪ್ರಯೋಗಾಲಯಗಳನ್ನು ಒಳಗೊಂಡಿದೆ. ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಹೊಗೆಯು ಎರಡನೇ ಮಹಡಿ ಸೇರಿದಂತೆ ಕಟ್ಟಡದ ತುಂಬ ಆವರಿಸಿಕೊಂಡಿದೆ. ಆಸ್ಪತ್ರೆಯ ಮೇಲ್ಭಾಗದಿಂದ ದಟ್ಟವಾದ ಹೊಗೆ ಕಂಡು ಬರುತ್ತಿದೆ ಎಂದು ಅಗ್ನಿಶಾಮಕದ ಹಿರಿಯ ಸಿಬ್ಬಂದಿ ತಿಳಿಸಿದ್ದಾರೆ.

    ಸುಮಾರು 5 ಗಂಟೆ ಹೊತ್ತಿಗೆ ಆಸ್ಪತ್ರೆಯ ಪಿಸಿ ಹಾಗೂ ಬೋಧಕ ವಿಭಾಗದ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿರುವ ಕುರಿತು ಕರೆ ಬಂತು. ತಕ್ಷಣವೇ ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ದೌಡಾಯಿಸಿದೆವು ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

    ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಸಹ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಬೇರೆ ಕಟ್ಟಡದಲ್ಲಿ ದಾಖಲಾಗಿದ್ದಾರೆ. ಜೇಟ್ಲಿ ಅವರು ಆಗಸ್ಟ್ 9ರಿಂದ ಇನ್ಸೆಂಟಿವ್ ಕೇರ್ ಯುನಿಟ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ದಾಖಲಾಗಿರುವ ಕಟ್ಟಡಕ್ಕೂ ಹಾಗೂ ಬೆಂಕಿ ಹೊತ್ತಿಕೊಂಡಿರುವ ಕಟ್ಟಡಕ್ಕೂ ತುಂಬಾ ಅಂತರವಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

  • ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಢ- ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ

    ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಢ- ಇಬ್ಬರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ

    ಮುಂಬೈ: ಇಲ್ಲಿನ ಲೈಟ್ ಆಫ್ ಏಷ್ಯಾ ಎಂದೇ ಪ್ರಖ್ಯಾತವಾಗಿರುವ ಬಹುಮಹಡಿ ಕಟ್ಟಡದಲ್ಲಿ ಇಂದು ಮುಂಜಾನೆ 4.30ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

    ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದಾಗಿ ವರದಿಯಾಗಿದೆ. ಈ ಕಟ್ಟಡ ಖಾಲಿಯಾಗಿದ್ದು, ಬೆಂಕಿ ನಂದಿಸುತ್ತಿದ್ದ ಸಂದರ್ಭದಲ್ಲಿ ಕಟ್ಟಡ ಕುಸಿದುಬಿದ್ದಿದೆ.

    ಅಗ್ನಿಶಾಮಕ ಸಿಬ್ಬಂದಿ ತಂಡ ಬೆಂಕಿ ನಂದಿಸುವಲ್ಲಿ ಕಾರ್ಯನಿರತರಾಗಿದ್ದ ಸಂದರ್ಭದಲ್ಲಿ ಕಟ್ಟಡ ಕುಸಿದುಬಿದ್ದಿದ್ದು, ಈ ವೇಳೆ ಕೂದಲೆಳೆ ಅಂತರದಲ್ಲಿ ಸಿಬ್ಬಂದಿ ಪಾರಾಗಿದ್ದಾರೆ. ಆದ್ರೆ ಘಟನೆಯ ವೇಳೆ ಅಗ್ನಿಶಾಮಕ ವಾಹನದ ಬಳಿ ನಿಂತಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಅಂತ ಅಧಿಕಾರಿಗಳು ತಿಳಿಸಿದ್ದಾರೆ.

    ಯಾರೊಬ್ಬರು ಕಟ್ಟಡದ ಒಳಗೆ ಸಿಲುಕಿಲ್ಲ. ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಪಕ್ಕದಲ್ಲಿರುವ ಕಟ್ಟಡಗಳಿಗೆ ಬೆಂಕಿ ಪಸರಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟಿನಲ್ಲಿ ಬರೋಬ್ಬರಿ 3 ಗಂಟೆಗಳ ಕಾಲ ಅವರು ಬೆಂಕಿ ನಂದಿಸಲು ಹರಸಾಹಸಪಟ್ಟರು ಅಂತ ಅವರು ತಿಳಿಸಿದ್ರು.

    ಈ ಕಟ್ಟಡ ಸಿ-1 ಕೆಟಗರಿ(ಅಪಾಯಕಾರಿ ಕಟ್ಟಡ)ಗೆ ಸೇರಿದ್ದಾಗಿದ್ದು, ರಾಜ್ಯಸರ್ಕಾರದ ಅಧೀನದಲ್ಲಿತ್ತು. ಆದ್ರೆ ನಾಲ್ಕು ವರ್ಷಗಳ ಹಿಂದೆ ಅಧಿಕಾರಿಗಳು ಈ ಕಟ್ಟಡವನ್ನು ತೊರೆದಿದ್ದರು. ಹೀಗಾಗಿ ಇಂತಹ ಅಪಾಯಕಾರಿ ಕಟ್ಟಡವನ್ನು ಪುನರ್ ನಿರ್ಮಾಣ ಮಾಡಲು ಕೆಡವಲು ಚಿಂತಿಸಲಾಗಿತ್ತು. ಸಾವಿರಾರು ಮಂದಿ ಈ ಕಟ್ಟಡದ ಕೆಳಗಿನಿಂದಲೇ ಪ್ರತಿ ನಿತ್ಯ ಸಂಚರಿಸುವುದರಿಂದ ಕಟ್ಟಡ ನೆಲಸಮ ಮಾಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ.