Tag: fire fly kannada

  • ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ‘ಫ್ಲೈರ್‌ ಫ್ಲೈ’ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿ

    ನಿವೇದಿತಾ ಶಿವರಾಜ್‌ಕುಮಾರ್‌ ನಿರ್ಮಾಣದ ‘ಫ್ಲೈರ್‌ ಫ್ಲೈ’ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿ

    ಶಿವಣ್ಣನ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ ‘ಫ್ಲೈರ್‌ ಫ್ಲೈ’ (Fire Fly Kannada) ಕುಂಬಳಕಾಯಿ ಪ್ರಾಪ್ತಿಯಾಗಿದೆ. ಕುಂಬಳಕಾಯಿ ಇವೆಂಟ್‌ನಲ್ಲಿ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ನಿವೇದಿತಾ ಶಿವರಾಜ್ ಕುಮಾರ್, ನಿರ್ದೇಶಕ ವಂಶಿ, ಸಂಗೀತ ನಿರ್ದೇಶಕ ಚರಣ್ ರಾಜ್, ನಾಯಕಿ ರಚನಾ ಸೇರಿದಂತೆ ಇಡೀ ತಂಡ ಭಾಗಿಯಾಗಿತ್ತು. ಇದನ್ನೂ ಓದಿ:ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರ 200 ರೂ.ಗೆ ನಿಗದಿಪಡಿಸುವಂತೆ ಸಿಎಂಗೆ ಮನವಿ

    ಈ ಸಿನಿಮಾದಲ್ಲಿ ಯುವ ಪ್ರತಿಭೆ ವಂಶಿ ನಾಯಕನಾಗಿ ನಟಿಸುತ್ತಿದ್ದಾರೆ. ಇದರೊಂದಿಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ‘ಫ್ಲೈರ್‌ ಫ್ಲೈ’ ಸಿನಿಮಾದಲ್ಲಿ ವಂಶಿ ನಟ ಕಮ್ ನಿರ್ದೇಶಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ವಂಶಿ ಜೊತೆ ಸುಧಾರಾಣಿ, ಅಚ್ಯುತ್ ಕುಮಾರ್, ಶೀತಲ್ ಶೆಟ್ಟಿ ಸೇರಿದಂತೆ ಹಲವು ಹಿರಿಯ ನಟರು ಕೂಡ ಅಭಿನಯಿಸಿದ್ದಾರೆ. ಇನ್ನು ವಂಶಿಗೆ ನಾಯಕಿಯಾಗಿ ರಚನಾ ಇಂದರ್ ಜೊತೆಯಾಗಿದ್ದಾರೆ.

    ‘ಫೈರ್ ಫ್ಲೈ’ ಸಿನಿಮಾಗೆ ಅಭಿಲಾಷ್ ಕಳತ್ತಿ ಕ್ಯಾಮರಾ ವರ್ಕ್ ಇದ್ದರೆ, ಚರಣ್ ರಾಜ್ ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಅವರ ಸಂಭಾಷಣೆಯಿದೆ. ಈ ಸಿನಿಮಾವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡಲು ಮುಂದಾಗಿದೆ.

  • ‘ಫೈರ್‌ ಫ್ಲೈ’ ಟೀಸರ್ ರಿಲೀಸ್- ವಿಕ್ಕಿಯಾಗಿ ವಂಶಿಯನ್ನು ಪರಿಚಯಿಸಿದ ಚಿತ್ರತಂಡ

    ‘ಫೈರ್‌ ಫ್ಲೈ’ ಟೀಸರ್ ರಿಲೀಸ್- ವಿಕ್ಕಿಯಾಗಿ ವಂಶಿಯನ್ನು ಪರಿಚಯಿಸಿದ ಚಿತ್ರತಂಡ

    ‘ಫೈರ್‌ ಫ್ಲೈ’ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ (Shivarajkumar) ಅವರ ಪುತ್ರಿ ನಿವೇದಿತಾ (Niveditha) ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ ನಾಯಕ ವಂಶಿಯನ್ನು ‘ಫೈರ್‌ ಫ್ಲೈ’ (Fire Fly) ಬಳಗ ಸಿನಿಮಾ ಪ್ರೇಮಿಗಳಿಗೆ ಪರಿಚಯಿಸಿದೆ. ಇದನ್ನೂ ಓದಿ:ಹೊಸ ರಿಯಾಲಿಟಿ ಶೋಗೆ ‘ಬಿಗ್ ಬಾಸ್’ ವಿನ್ನರ್ ಕಾರ್ತಿಕ್ ಹೋಸ್ಟ್‌

    ವಿವೇಕಾನಂದ ಎಂದು ಪರಿಚಯಿಸಿಕೊಳ್ಳುವ ನಾಯಕ ತಾನೊಬ್ಬ ಅವಾರ್ಡ್ ವಿನ್ನಿಂಗ್ ಮ್ಯಾಥ್ಸ್ ಟೀಚರ್ ಎಂದು ಹೇಳಿಕೊಳ್ಳುತ್ತಾನೆ. ವಿಕ್ಕಿ ಪ್ರಪಂಚದಲ್ಲಿ ಬೆಳಿಗ್ಗೆ 7, ಮಧ್ಯಾಹ್ನ 1 ಮತ್ತು ರಾತ್ರಿ 8 ಗಂಟೆಗೆ ಏನ್ ನಡೆಯುತ್ತದೆ. ವಿಕ್ಕಿ ವಿಚಿತ್ರ ವರ್ತನೆಯನ್ನು ಸಖತ್ ಫನ್ನಿಯಾಗಿ ಕಟ್ಟಿಕೊಡಲಾಗಿದೆ. 2 ನಿಮಿಷ 49 ಸೆಕೆಂಡ್ ಇರುವ ‘ಫೈರ್ ಫ್ಲೈ’ ಟೀಸರ್ ಕುತೂಹಲದಿಂದ ಕೂಡಿದ್ದು, ವಿಕ್ಕಿ ಯಾರು ಅನ್ನೋದನ್ನು ಹೇಳಿರುವ ಚಿತ್ರತಂಡ ಅಸಲಿಗೆ ಯಾಕೆ ವಿಚಿತ್ರವಾಗಿ ವರ್ತನೆ ಮಾಡ್ತಾನೆ ಅನ್ನೋದರ ಗುಟ್ಟು ಬಿಟ್ಟು ಕೊಟ್ಟಿಲ್ಲ.

    ವಂಶಿ ನಾಯಕನಾಗಿ ನಿರ್ದೇಶಕನಾಗಿ ಮಿಂಚಿದ್ದು, ತಾಂತ್ರಿಕವಾಗಿ ಟೀಸರ್ ಶ್ರೀಮಂತಿಕೆಯಿಂದ ಕೂಡಿದೆ. ಚಿತ್ರದ ಫ್ರೇಮ್, ಕಲರಿಂಗ್, ಕಂಟೆಂಟ್, ಕ್ವಾಲಿಟಿಯಲ್ಲಿ ಕಾಂಪ್ರಮೈಸ್ ಆಗದೆ ಒಳ್ಳೆಯ ಔಟ್‌ಫುಟ್ ನೀಡಲಾಗಿದೆ. ಚರಣ್ ರಾಜ್ ಸಂಗೀತ, ಅಭಿಲಾಷ್ ಕಳತ್ತಿ ಕ್ಯಾಮೆರಾ ವರ್ಕ್ ರಘು ನಿಡುವಳ್ಳಿ ಸಂಭಾಷಣೆ, ಸುರೇಶ್ ಆರುಮುಗಂ ಸಂಕಲನ ‘ಫೈರ್‌ ಫ್ಲೈ’ ಟೀಸರ್ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.

    ‘ಫೈರ್‌ ಫ್ಲೈ’ ನಾಯಕನಾಗಿ ಅಭಿನಯಿಸಿರುವ ವಂಶಿಗೆ ಜೋಡಿಯಾಗಿ ರಚನಾ ಇಂದರ್, ಉಳಿದಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಮೂಗು ಸುರೇಶ್, ಚಿತ್ಕಲಾ ಬಿರಾದಾರ್, ಸಿಹಿ ಕಹಿ ಚಂದ್ರು ತಾರಾಬಳಗದಲ್ಲಿದ್ದಾರೆ. ಈ ಸಿನಿಮಾವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡಲು ಮುಂದಾಗಿದೆ.

    ‘ಫೈರ್‌ ಫ್ಲೈ’ ಮೂಲಕವೇ ನಿರ್ದೇಶಕ ವಂಶಿ ಪೂರ್ಣ ಪ್ರಮಾಣದ ನಾಯಕರಾಗುತ್ತಿದ್ದಾರೆ. ಇವರ ಮೊದಲ ಪ್ರಯತ್ನದ ಬಗ್ಗೆ ಟಾಕ್ ಇದ್ದೇ ಇದೆ. ಚಿತ್ರದ ಮೊದಲ ಝಲಕ್‌ನಲ್ಲಿ ಫನ್-ಎಮೋಷನ್ ಎಲ್ಲವೂ ಸಿನಿಮಾದಲ್ಲಿದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಈ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

  • ‘ಫೈರ್‌ ಫ್ಲೈ’ ಶೂಟಿಂಗ್ ಮುಕ್ತಾಯ- ಮರೆಯಲಾಗದ ಪಯಣ ಎಂದ ನಿವೇದಿತಾ ಶಿವರಾಜ್‌ಕುಮಾರ್

    ‘ಫೈರ್‌ ಫ್ಲೈ’ ಶೂಟಿಂಗ್ ಮುಕ್ತಾಯ- ಮರೆಯಲಾಗದ ಪಯಣ ಎಂದ ನಿವೇದಿತಾ ಶಿವರಾಜ್‌ಕುಮಾರ್

    ಟ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣ ಮಾಡುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಫೈರ್‌ ಫ್ಲೈ’ (Firefly Kannada) ಚಿತ್ರೀಕರಣ ಮುಕ್ತಾಯಗೊಂಡಿದೆ. ‘ಫೈರ್‌ ಫ್ಲೈ’ ಶೂಟಿಂಗ್ ಜರ್ನಿಯ ಝಲಕ್ ನ್ನು ಚಿತ್ರತಂಡ ಹಂಚಿಕೊಂಡು, ಕುತೂಹಲವನ್ನು ದುಪ್ಪಟ್ಟು ಮಾಡಿದೆ. ಇದನ್ನೂ ಓದಿ:‘ರೈಸ್ 4’ಗಾಗಿ ಸೈಫ್ ಅಲಿ ಖಾನ್ ಜೊತೆ ಕೈಜೋಡಿಸಿದ ಸಿದ್ಧಾರ್ಥ್ ಮಲ್ಹೋತ್ರಾ

    ‘ಫೈರ್‌ ಫ್ಲೈ’ ಪಯಣದ ಬಗ್ಗೆ ನಿವೇದಿತಾ ಶಿವರಾಜ್ ಕುಮಾರ್ (Niveditha Shivarajkumar) ಮನದ ಮಾತನ್ನು ಹಂಚಿಕೊಂಡಿದ್ದಾರೆ. ಚಿಕ್ಕವಳಿದ್ದಾಗಿನಿಂದಲೂ ಸಿನಿಮಾ ಮತ್ತು ಕಥೆಗಳೊಡನೆ ಬೆಳೆದವಳು ನಾನು ಅಂದಿನಿಂದಲೂ ನನಗಿಷ್ಟವಾದ ಕಥೆಗಳನ್ನು ಬೆಳ್ಳಿತೆರೆಯ ಮೇಲೆ ತರಬೇಕೆಂದು ಕಂಡ ಕನಸಿಗೆ ಕಟ್ಟಿದ ಮೊದಲ ರೆಕ್ಕೆ ‘ಫೈರ್‌ ಫ್ಲೈ’ ಸಿನಿಮಾ. ಇದರ ಚಿತ್ರೀಕರಣ ಇನ್ನೇನು ಮುಗಿಯುತ್ತಿರಲು, ಚಿತ್ರ ತಂಡದ ನಾವಿಕರಾದ ವಂಶಿ, ನಮ್ಮ ತಂತ್ರಜ್ಞರು, ಹಿರಿಯ ನಟ ನಟಿಯರು. ಅತ್ಯದ್ಭುತ ಪ್ರತಿಭೆಗಳು ಹಾಗೂ ನನ್ನ ಬೆನ್ನೆಲುಬಾಗಿ ನಿಂತ ತಂಡದ ಪ್ರತಿಯೊಬ್ಬರೂ ಹಾಗೂ ಅವರೊಡನೆ ಮೂಡಿದ ನೆನಪುಗಳು ನನ್ನಲ್ಲಿ ಶಾಶ್ವತವಾಗಿ ಉಳಿಯುವುದು.

    ಶುರುವಾದ ಪ್ರತಿಯೊಂದು ಪ್ರಯಾಣವು ಎಲ್ಲಾದರೂ ಅಂತ್ಯಗೊಳ್ಳಬೇಕೆನ್ನುತ್ತಾರೆ. ಆದರೆ ನನ್ನ ಈ ಕನಸಿನ ಪ್ರಯಾಣದ ಕೊನೆ ಹತ್ತಿರವಾಗುತ್ತಿದ್ದರೂ ಹೊಸತೊಂದು ಪ್ರಯಾಣದ ಆರಂಭವಾದಂತಿದೆ. ಅಂತರಾಳದ ಬೆಳಕಿನ ಹುಡುಕಾಟದ ಕಥೆಯಾಗಿರುವ ನಮ್ಮ ‘ಫೈರ್‌ ಫ್ಲೈ’ ಚಿತ್ರವನ್ನು ನಿಮ್ಮೊಂದಿಗೆ ತೆರೆಯ ಮೂಲಕ ಹಂಚಿಕೊಳ್ಳಲು ಕಾತುರದಿಂದ ಕಾಯುತ್ತಿರುವೆ ಎಂದು ಪತ್ರದ ಮೂಲಕ ಮನದ ಮಾತು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ – ರೇಣುಕಾಸ್ವಾಮಿ ತಂದೆ ಕಣ್ಣೀರು

    ಯುವ ಪ್ರತಿಭೆ ವಂಶಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಬಣ್ಣ ಹಚ್ಚಿರುವ ‘ಫೈರ್ ಫ್ಲೈ’ ನಲ್ಲಿ ಸುಧಾರಾಣಿ, ಅಚ್ಯುತ್ ಕುಮಾರ್, ಹಿರಿಯ ಕಲಾವಿದ ಮೂಗು ಸುರೇಶ್ ಅಭಿನಯಿಸಿದ್ದಾರೆ. ವಂಶಿಗೆ ಜೋಡಿಯಾಗಿ ರಚನಾ ಇಂದರ್ ಸಾಥ್ ಕೊಟ್ಟಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

    ನಾಯಕ- ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ.

  • ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

    ದಾಖಲೆ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದ ಆಡಿಯೋ ಹಕ್ಕು

    ನ್ನಡದ ಬಹುನಿರೀಕ್ಷಿತ ಸಿನಿಮಾ ‘ಫೈರ್ ಫ್ಲೈ’ (Fire Fly Kannada) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್‌ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜೊತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನಾಯಕ ಮತ್ತು ನಿರ್ದೇಶಕ ವಂಶಿ (Vamsi) ಸಾರಥ್ಯದಲ್ಲಿ ಮೂಡಿ ಬರ್ತಿರುವ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

    ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು (Audio Rights) ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಇದನ್ನೂ ಓದಿ:ಸೆನ್ಸಾರ್ ಮುಗಿಸಿದ ವಿನಯ್ ರಾಜ್ ಕುಮಾರ್ ನಟನೆಯ ‘ಪೆಪೆ’ ಚಿತ್ರ

    ‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರ ಪುತ್ರಿ ನಿವೇದಿತಾ (Niveditha Shivarajkumar) ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರುತ್ತಿದ್ದಾರೆ. ವಂಶಿಗೆ ‌’ಲವ್ ಮಾಕ್ಟೈಲ್’ ನಟಿ ರಚನಾ ಇಂದರ್ (Rachana Inder) ನಾಯಕಿಯಾಗಿದ್ದಾರೆ.

    ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ.