Tag: First look

  • ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ರವಿಶಂಕರ್ ಮಗನ ಚಿತ್ರಕ್ಕೆ ಶಿವಣ್ಣ ಸಾಥ್: ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್

    ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ (Subrahmanya) ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.

    ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ 60% ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ

    ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.

  • ‘ಅತಿಕಾಯ’ ಸಿನಿಮಾದ ಮಾಸ್ ಲುಕ್‌ನಲ್ಲಿ ನಿರೂಪ್ ಭಂಡಾರಿ

    ‘ಅತಿಕಾಯ’ ಸಿನಿಮಾದ ಮಾಸ್ ಲುಕ್‌ನಲ್ಲಿ ನಿರೂಪ್ ಭಂಡಾರಿ

    ಚಾಕೋಲೆಟ್ ಬಾಯ್, ಲವರ್ ಬಾಯ್ ಗೆಟಪ್‌ನಲ್ಲಿ ಮಿಂಚುತ್ತಿದ್ದ ನಿರೂಪ್ ಭಂಡಾರಿ (Nirup Bhandari), ಇದೀಗ ಮಾಸ್  ಲುಕ್‌ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ. ರಕ್ತಸಿಕ್ತ ಮುಖ,  ಲಾಂಗ್ ಹಿಡಿದು ನಿರೂಪ್ ಕ್ಯಾಮೆರಾ ಎದುರಿಸಿದ್ದಾರೆ. ಇದು ಯಾವ ಚಿತ್ರಕ್ಕಾಗಿ ಅಂತೀರಾ? ನಿರೂಪ್ ‘ಅತಿಕಾಯ’ (Atikaya)ಎನ್ನುವ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದು ಸಿಕ್ಕಾಪಟ್ಟೆ ರಗಡ್ ಆಗಿ ದರ್ಶನ ಕೊಡಲು ಸಜ್ಜಾಗಿದ್ದಾರೆ.

    ಅಂದಹಾಗೆ ಅತಿಕಾಯ ಸಿನಿಮಾ ನಾಗರಾಜ್ ಪೀಣ್ಯ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ. ಈ ಹಿಂದೆ ಪದೇ ಪದೇ, ನಮಕ್‌ಹರಾಮ್ ಮೊದಲಾದ ವಿಭಿನ್ನ ರೀತಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ನಾಗರಾಜ್ ಪೀಣ್ಯ, ಸಣ್ಣ ಗ್ಯಾಪ್‌ನ ಬಳಿಕ ‘ಅತಿಕಾಯ’ನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಬಾರಿ ಹೊಸ ರೀತಿಯ ಕಥೆ ಸಿದ್ಧಪಡಿಸಿಕೊಂಡು ಅಖಾಡಕ್ಕಿಳಿದಿರುವ ನಾಗರಾಜ್, ಈಗಾಗಲೇ ಮೊದಲ ಹಂತದ ಶೂಟಿಂಗ್ ಮುಗಿಸಿದ್ದಾರೆ. ಮತ್ತೊಂದು ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ ಚಿತ್ರತಂಡ.

    ಈವರೆಗೂ ಬೆಂಗಳೂರಿನ ಜನಜಂಗುಳಿ ಪ್ರದೇಶಗಳಲ್ಲೇ ಬಹುತೇಕ ಚಿತ್ರೀಕರಣ ನಡೆಸಲಾಗಿದ್ದು, ನೈಜವಾಗಿ ಮೂಡಿಬರಬೇಕೆಂಬ ಕಾರಣದಿಂದ ರಿಯಲಿಸ್ಟಿಕ್ ಆಗಿಯೇ ಶೂಟ್ ಮಾಡಲಾಗಿದೆಯಂತೆ. ಇದೀಗ ಚಿತ್ರದ ಫಸ್ಟ್‌ಲುಕ್ (First Look) ಬಿಡುಗಡೆ ಮಾಡಲಾಗಿದ್ದು, ನಿರೂಪ್  ಮಾಸ್ ಗೆಟಪ್ ಅನಾವರಣಗೊಂಡಿದೆ. ನಿರೂಪ್ ಅವರ ಈ ಲುಕ್ ನೋಡಿ ಸಿನಿ ಅಭಿಮಾನಿಗಳು ಕೂಡ ಅಚರಚರಿಗೊಂಡಿದ್ದಾರೆ.

    ‘ಈ ಚಿತ್ರಕ್ಕಾಗಿ ನಿರೂಪ್ ಭಂಡಾರಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ವರ್ಕೌಟ್ ಮಾಡಿ ದೇಹ ದಂಡಿಸಿದ್ದಾರೆ. ಪಾತ್ರಕ್ಕಾಗಿ ಗೆಟಪ್ ಸಹ ಬದಲಾಯಿಸಿಕೊಂಡಿದ್ದಾರೆ. ಅವರು ಈವರೆಗೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ‘ಅತಿಕಾಯ’ ಮೂಲಕ ಎಂಟ್ರಿ ಕೊಡಲಿದ್ದಾರೆ ಎಂಬುದು ವಿಶೇಷ. ಡೈಲಾಗ್ ಡೆಲಿವರಿ ಕೂಡ ಭಿನ್ನವಾಗಿರಲಿದೆ. ಒಟ್ಟಾರೆ ಅವರು ಔಟ್ ಆಂಡ್ ಔಟ್ ಬದಲಾದ ರೂಪದಲ್ಲಿ ಕಾಣಸಿಗುತ್ತಾರೆ. ಸಿನಿಮಾ ಕೂಡ ತುಂಬಾ ರಗಡ್ ಆಗಿರಲಿದೆ’ ಎಂದು ವಿವರಿಸುತ್ತಾರೆ ನಿರ್ದೇಶಕ ನಾಗರಾಜ್ ಪೀಣ್ಯ. ಉದಯಲೀಲ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀನಿವಾಸ್ ಪಿ ಬಾಬು ಸಂಕಲನ, ಸತೀಶ್ ಆರ್ಯನ್ ಸಂಗೀತ ಸಂಯೋಜಿಸುತ್ತಿದ್ದಾರೆ.

  • ‘ಇಂಟರ್ ವೆಲ್’ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ಸಾಥ್ : ಫಸ್ಟ್ ಲುಕ್ ರಿಲೀಸ್

    ‘ಇಂಟರ್ ವೆಲ್’ ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ಸಾಥ್ : ಫಸ್ಟ್ ಲುಕ್ ರಿಲೀಸ್

    ವಿಭಿನ್ನ ಶೀರ್ಷಿಕೆ ಹೊಂದಿರುವ ಚಿತ್ರಗಳ‌ ಸಾಲಿಗೆ ಸೇರಲಿರುವ  ಮತ್ತೊಂದು ಚಿತ್ರ ಇಂಟರ್ ವೆಲ್. ಇಂಜಿನಿಯರಿಂಗ್ ಸ್ಟಡಿ  ಮುಗಿಸಿದ ಯುವಕರ ಕೆಲಸ ಹುಡುಕುತ್ತ ನಡೆಸೋ ಹೋರಾಟದ ಕಥೆಯನ್ನು  ಹೇಳುವ ಇಂಟರ್ ವೆಲ್ (Interwell) ಚಿತ್ರಕ್ಕೆ  ಭರತ್ ವರ್ಷ ಅವರು  ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ತನ್ನ ಚಿತ್ರೀಕರಣ ಹಾಗೂ  ಪೊಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಚಿತ್ರವೀಗ  ಬಿಡುಗಡೆಯ ಹಂತದಲ್ಲಿದೆ. ರಿಲೀಸ್ ಸಿದ್ದತೆಯಲ್ಲಿರುವ ಈ ಚಿತ್ರದ  ಫಸ್ಟ್‌‌ ಲುಕ್ ಪೊಸ್ಟರ್ ನ್ನು ಇತ್ತೀಚೆಗೆ  ಅಣ್ಣಾವ್ರ ಕುಟುಂಬದ ಕುಡಿ,  ಯುವನಟ ವಿನಯ್ ರಾಜ್ ಕುಮಾರ್ (Vinay Rajkumar)  ಅವರು ಬಿಡುಗಡೆ ಮಾಡಿ ಶೀರ್ಷಿಕೆ ತುಂಬಾ ಚೆನ್ನಾಗಿದೆ. ಚಿತ್ರವೂ  ಪನರ ಮನ ಗೆಲ್ಲಲಿ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು.

    ಇಂಟರ್ ವೆಲ್  ಚಿತ್ರಕ್ಕೆ ಬೆಂಗಳೂರು ಹಾಗೂ ಶಿವಮೊಗ್ಗದ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಎ.ಬಿ ಅರ್ಜುನ್ ಹಾಗೂ ಎಸ್.ಬಿ ರಾಠೋಡ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಸುಖಿ ಅವರು ಬರೆದಿದ್ದಾರೆ. ಚಿತ್ರದ ಐದು ಹಾಡುಗಳಿಗೆ ವಿಕಾಸ್ ವಿಶಿಷ್ಟ ಅವರ ಸಂಗೀತ ನಿರ್ದೇಶನವಿದ್ದು, ಪ್ರಮೋದ್ ಮರವಂತೆ ಹಾಗೂ ಸುಖಿ  ಸಾಹಿತ್ಯ ಬರೆದಿದ್ದಾರೆ.  ಚಿತ್ರಕ್ಕೆ ರಾಜ್ ಕಾಂತ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರೆ, ಶಶಿಧರ್  ಸಂಕಲನ ಕಾರ್ಯ ನಿರ್ವಹಿಸಿದ್ದಾರೆ.

     

    ಅನೇಕ ಧಾರಾವಾಹಿಗಳಲ್ಲಿ ನಟಿಸಿರುವಂತ ಶಶಿರಾಜ್ (ಬಾಲಾ) ಅವರು ಈ ಚಿತ್ರದಲ್ಲಿ ಮೊದಲಬಾರಿಗೆ ನಾಯಕನಾಗಿ ಅಭಿನಯಿಸಿದ್ದಾರೆ, ರಂಗಭೂಮಿ ನಟ ಪ್ರಜ್ವಲ್ ಗೌಡ , ಸುಖಿ, ಹಾಗೂ ರಂಗನಾಥ ಶಿವಮೊಗ್ಗ ಪ್ರಮುಖ‌ ಪಾತ್ರಗಳಲ್ಲಿ  ನಟಿಸಿದ್ದಾರೆ. ಈ ಚಿತ್ರದಲ್ಲಿ ಇಬ್ಬರು ನಾಯಕ ನಟಿಯರಿದ್ದಾರೆ.

  • ಜೀಬ್ರಾ ತಂಡದಿಂದ ʻಸತ್ಯದೇವ್ʼ ಫಸ್ಟ್ ಲುಕ್:  ಡಾಲಿ ಧನಂಜಯ್ ನಟನೆ

    ಜೀಬ್ರಾ ತಂಡದಿಂದ ʻಸತ್ಯದೇವ್ʼ ಫಸ್ಟ್ ಲುಕ್: ಡಾಲಿ ಧನಂಜಯ್ ನಟನೆ

    ಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ `ಜೀಬ್ರಾ’ (Zebra) ಅನೌನ್ಸ್‌ ಮಾಡಿದ್ದು ಗೊತ್ತೇ ಇದೆ.  ಈ ಸಿನಿಮಾಗೆ ಸತ್ಯದೇವ್ (Satyadev)  ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ  ಸ್ಯಾಂಡಲ್‌ವುಡ್‌ ಸ್ಟಾರ್ ಡಾಲಿ ಧನಂಜಯ (Dolly Dhananjay) ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ. ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ, ಸತ್ಯದೇವ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಫಸ್ಟ್ ಲುಕ್ ರಿವೀಲ್‌ ಮಾಡಿದೆ.  ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ.  ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ.  ಇದೀಗ ಜೀಬ್ರಾ ತಂಡ ಫಸ್ಟ್‌ ಲುಕ್‌ ಅನಾವರಣಗೊಳಿಸಿದೆ.

    ಪೋಸ್ಟರ್‌ನಲ್ಲಿ ಸತ್ಯದೇವ್ ಅತ್ಯಂತ  ಸ್ಟೈಲಿಶ್ ಅವತಾರ ತಾಳಿದ್ದಾರೆ. ಸೂಟ್‌ ಧರಿಸಿ ಅತ್ಯಂತ ಖಡಕ್‌ ಲುಕ್‌ನಲ್ಲಿ ಕಂಡಿದ್ದಾರೆ. ತುಂಬಾ ಗಂಭೀರವಾಗಿ ಕಂಡಿದ್ದಾರೆ ಸತ್ಯದೇವ್‌.  ಭುಜದ ಮೇಲೆ ಚೀಲವನ್ನು ಹೊತ್ತುಕೊಂಡು ಬಹಳ ಗಭೀರದಿಂದ ನಡೆಯುತ್ತಿರುವ ಲುಕ್‌ನಲ್ಲಿ ಕಂಡಿದ್ದಾರೆ.  ಇನ್ನೊಂದು ಕೈಯಲ್ಲಿ ಪೆನ್ನು ಇದೆ. ಪೋಸ್ಟರ್‌ ಬ್ಯಾಕ್‌ರೌಂಡ್‌ನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿವೆ.  ʻಜೀಬ್ರಾ’ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯದೇವ್, ನಟಿ ಅಮೃತಾ ಐಯ್ಯಂಗಾರ್, ಪ್ರಿಯಾ ಭವಾನಿ ಶಂಕರ್, ತೆಲುಗಿನ ಜನಪ್ರಿಯ ಹಾಸ್ಯನಟ ಸುನಿಲ್, ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಊರ್ವಶಿ ರೌಟೆಲ್ಲಾ ಇನ್ನೂ ಕೆಲವು ಪ್ರತಿಭಾವಂತ ನಟರು ಇರಲಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ.

     

    ʻಲಕ್ ಫೇವರ್ಸ್ ದಿ ಬ್ರೇವ್ʼ ಎಂದು ಅಡಿಬರಹ ಕೂಡ ಇದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.  ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಆಗುತ್ತಿವೆ.   ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು  ಚಿತ್ರತಂಡ ಘೋಷಿಸಲಿದೆ. ಈಶ್ವರ್ ಕಾರ್ತಿಕ್ ನಿರ್ದೇಶನದ ಈ ಕ್ರೈಮ್ ಆಕ್ಷನ್ ಎಂಟರ್‌ಟೈನರ್‌ನಲ್ಲಿ ಪ್ರಿಯಾ ಭವಾನಿ ಶಂಕರ್ ಮತ್ತು ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಸತ್ಯ ಅಕಾಲ ಮತ್ತು ಸುನಿಲ್ ಇತರ ಪ್ರಮುಖ ಪಾತ್ರಧಾರಿಗಳು. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್  ಸಂಭಾಷಣೆ  ಇದೆ.  ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು  ಕಾಸ್ಟ್ಯೂಮ್ ಡಿಸೈನರ್ ಆಗಿದ್ದಾರೆ.  ಚಿತ್ರ   ಸತ್ಯದೇವ್, ಡಾಲಿ ಧನಂಜಯ, ಸತ್ಯರಾಜ್, ಪ್ರಿಯಾ ಭವಾನಿ ಶಂಕರ್, ಜೆನ್ನಿಫರ್ ಪಿಕ್ಕಿನಾಟೊ, ಸತ್ಯ ಅಕಾಲ, ಸುನಿಲ್ ಹೀಗೆ ಬಹು ತಾರಾಗಣ ಹೊಂದಿದೆ.

  • ‘ಜಟ್ಟ’ ಖ್ಯಾತಿಯ ನಿರ್ದೇಶಕನ ಹೊಸ ಚಿತ್ರಕ್ಕೆ ರಾಗಿಣಿ ನಾಯಕಿ

    ‘ಜಟ್ಟ’ ಖ್ಯಾತಿಯ ನಿರ್ದೇಶಕನ ಹೊಸ ಚಿತ್ರಕ್ಕೆ ರಾಗಿಣಿ ನಾಯಕಿ

    ಗಿರೀಶ್ ವಿ ಗೌಡ ಸಾರಥ್ಯದಲ್ಲಿ, ರಾಮಕೃಷ್ಣ ನಿಗಾಡಿ ಅವರ ನಿರ್ಮಾಣದಲ್ಲಿ ಹಾಗೂ ಜಟ್ಟ,  ಮೈತ್ರಿ ಚಿತ್ರಗಳ ಖ್ಯಾತಿಯ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ನೂತನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಯಿತು.

    ರಾಷ್ಟ್ರಪ್ರಶಸ್ತಿ ವಿಜೇತ ಹರಿವು ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು ಎಂದು ಮಾತನಾಡಿದ ಗಿರೀಶ್ ವಿ ಗೌಡ, ಹತ್ತು ವರ್ಷಗಳಿಂದ ರಾಗಿಣಿ ಅವರ ಜೊತೆಗೆ ಚಿತ್ರ ನಿರ್ಮಾಣ ಮಾಡಬೇಕೆಂದು ಪ್ರಯತ್ನಿಸುತ್ತಿದ್ದೆ. ಈಗ ಕಾಲ ಕೂಡಿ ಬಂದಿದೆ. ನಿರ್ದೇಶಕ ಬಿ.ಎಂ.ಗಿರಿರಾಜ್ ಒಳ್ಳೆ ಕಥೆ ಮಾಡಿಕೊಂಡಿದ್ದಾರೆ.  ಹಿಂದೆ ಹೊಂಬಣ್ಣ ಚಿತ್ರ ನಿರ್ಮಿಸಿದ್ದ ರಾಮಕೃಷ್ಣ ನಿಗಾಡಿ ಅವರು ಸಂಚಲನ ಮೂವೀಸ್ ಮೂಲಕ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇಂದು ಫಸ್ಟ್ ಲುಕ್ ಬಿಡುಗಡೆಯಾಗಿದೆ‌ ಎಂದರು.

    ಕೌಂಡಿನ್ಯ ಅವರು ನನ್ನ ನೆಚ್ಚಿನ ಲೇಖಕರು. ಅವರ ಕಥೆಗಳಿಂದ ಪ್ರೇರಿತನಾಗಿ ಈ ಚಿತ್ರದ ಕಥೆ ಸಿದ್ದ ಮಾಡಿದ್ದೇನೆ. ರಾಗಿಣಿ ಅವರ ಜೊತೆ ಇದು ನನ್ನ ಮೊದಲ ಸಿನಿಮಾ ಎಂದರು ನಿರ್ದೇಶಕ ಬಿ.ಎಂ.ಗಿರಿರಾಜ್. ಫಸ್ಟ್ ಲುಕ್ ಸಖತಾಗಿದೆ‌. ಅದಕ್ಕಿಂತ ಚಿತ್ರದ ಶೀರ್ಷಿಕೆ ಹಾಗೂ ಕಥೆ ಇನ್ನೂ ಚೆನ್ನಾಗಿದೆ. ಸದ್ಯದಲ್ಲೇ ಶೀರ್ಷಿಕೆ ಅನಾವರಣವಾಗಲಿದೆ. ಗಿರೀಶ್ ವಿ ಗೌಡ ಅವರಿಗೆ ಧನ್ಯವಾದಗಳು ಎಂದರು ನಾಯಕಿ ರಾಗಿಣಿ ದ್ವಿವೇದಿ.

    ಅರುಣ್ ಗುರೂಜಿ, ಭಾಸ್ಕರ್ ಗುರೂಜಿ , ಮೋಕ್ಷಗುಂಡಂ ಗುರೂಜಿ ಹಾಗೂ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಅವರು ನೂತನ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದರು.

  • ‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ‘ರುದ್ರ ಗರುಡ ಪುರಾಣ’ ಫಸ್ಟ್ ಲುಕ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ಡಿಯರ್ ವಿಕ್ರಂ ಖ್ಯಾತಿಯ ನಂದೀಶ್ (Nandish) ಮತ್ತು ರಿಷಿ ಕಾಂಬಿನೇಷನ್ ನ ‘ರುದ್ರ ಗರುಡ ಪುರಾಣ’ (Rudra Garuda Purana) ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಫಸ್ಟ್ ಲುಕ್ ವಿಡಿಯೋ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಚಿತ್ರದ ಫಸ್ಟ್ ಲುಕ್ ಅನ್ನೂ ಅವರು ಮೆಚ್ಚಿಕೊಂಡಿದ್ದಾರೆ.

    ರಿಷಿ (Rishi) ನಾಯಕರಾಗಿ  ಅಭಿನಯಿಸಿರುವ, ಅಶ್ವಿನಿ ಆರ್ಟ್ಸ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಚಿತ್ರವಿದು. ಮೊನ್ನೆಯಷ್ಟೇ ಕ್ಲೈಮ್ಯಾಕ್ಸ್ ಫೈಟ್ ಅನ್ನು ಹೆಚ್. ಎಂ. ಟಿ ಫ್ಯಾಕ್ಟರಿಯಲ್ಲಿ ಆರು ದಿನಗಳ ಕಾಲ ಚಿತ್ರಿಸಿಕೊಳ್ಳುವುದರೊಂದಿಗೆ ಈ ಚಿತ್ರದ ಚಿತ್ರೀಕರಣವನ್ನು ಮುಕ್ಯಾತವಾಗಿತ್ತು. ಚಿತ್ರಕ್ಕೆ ಒಟ್ಟು 70 ದಿನಗಳ ಚಿತ್ರೀಕರಣ ನಡೆದಿದೆ.

    ಕವಲು ದಾರಿ ಚಿತ್ರದಲ್ಲಿ ಟ್ರಾಫಿಕ್ ಪೊಲೀಸ್ ಕೆಲಸದಿಂದ ಕ್ರೈಂ ಡಿಪಾರ್ಟ್ಮೆಂಟ್ ನಲ್ಲಿ ಕೆಲಸ ಮಾಡಲು ಆಸೆ ಪಡುವ ಪಾತ್ರದಲ್ಲಿ ನಟಿಸಿದ್ದ ರಿಷಿ, ರುದ್ರ ಗರುಡ ಪುರಾಣ ಚಿತ್ರದಲ್ಲಿ ಕ್ರೈಂ ಇನ್ಸ್ ಪೆಕ್ಟರ್ ಆಗಿ ಕಾಣಿಸಿಕೊಂಡಿದ್ದಾರೆ. ರುದ್ರ ಗರುಡ ಪುರಾಣ ಆಕ್ಷನ್ ಡ್ರಾಮಾ ಜಾನರ್ ನ  ಚಿತ್ರವಾಗಿರುತ್ತದೆ. ಟೆಕ್ನಿಕಲ್ ವಿಚಾರದಲ್ಲಿ ಹಲವಾರು ಹೊಸತನಗಳನ್ನು ಅಳವಡಿಸಿಕೊಂಡು ಫೈಟ್ ಮತ್ತು ಸಾಂಗ್ ಗಳನ್ನು ಚಿತ್ರೀಕರಣ ಮಾಡಿರುವುದು ಈ ಚಿತ್ರದ ವಿಶೇಷ.

    ರಿಷಿ ಅವರಿಗೆ  ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. “ಕಾಟೇರ” ಚಿತ್ರದಲ್ಲಿ ವಿಲನ್ ಆಗಿ ಅಭಿನಯಿಸಿ ಖ್ಯಾತರಾದ ವಿನೋದ್ ಆಳ್ವ. ಅವಿನಾಶ್. ಕೆ ಎಸ್ ಶ್ರೀಧರ್. ಗಿರಿ. ಕೆ ಆರ್ ಪೇಟೆ ಶಿವು. ಮಜಾ ಭಾರತ ಜಗಪ್ಪ . ಅಶ್ವಿನಿ ಗೌಡ. ಗೌತಮ್ ಮೈಸೂರ್ ಮುಂತಾದವರು ಈ ಚಿತ್ರದ  ತಾರಾಬಳಗದಲ್ಲಿದ್ದಾರೆ. ಹಾಟ್ ಸ್ಟಾರ್ ನಲ್ಲಿ ಬಿಡುಗಡೆಗೊಂಡು  ಯಶಸ್ವಿಗೊಂಡ ತೆಲುಗಿನ “ಸೈತಾನ್” ವೆಬ್ ಸೀರೀಸ್ ರಿಷಿ ಅವರು ನಟಿಸಿದ್ದರು. ಅದಕ್ಕೆ ಅವರಿಗೆ ಅತ್ಯುತ್ತಮ ಖಳನಟ ಪ್ರಶಸ್ತಿ ದೊರಕಿತ್ತು.  ತೆಲುಗಿನ ಬಾಲಯ್ಯ ಅವರ ಚಿತ್ರದಲ್ಲಿ ನಟಿಸುವುದರೊಂದಿಗೆ ಹಲವಾರು ತೆಲುಗು ಚಿತ್ರಗಳಲ್ಲಿ ರಿಷಿ ಬಿಜಿಯಾಗಿದ್ದಾರೆ.

     

    ರುದ್ರ ಗರುಡ ಪುರಾಣ ಚಿತ್ರವನ್ನು ಮೊದಲಿಗೆ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಮಾಡಿ ನಂತರ ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯೋಜನೆಯನ್ನು ರೂಪಿಸಿಕೊಳ್ಳಲಾಗುತ್ತಿದೆ ಎಂದು ಚಿತ್ರತಂಡ ತಿಳಿಸಿದೆ.

  • ಅನುಪಮಾ ನಟನೆಯ ‘ಪರದಾ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಅನುಪಮಾ ನಟನೆಯ ‘ಪರದಾ’ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಟಿಲ್ಲು ಸ್ಕ್ವೇರ್ ಯಶಸ್ಸಿನಲ್ಲಿ ತೇಲುತ್ತಿರುವ ನಟಿ ಅನುಪಮಾ ಪರಮೇಶ್ವರನ್ ನಟನೆಯ ಹೊಸ ಸಿನಿಮಾ ಅನೌನ್ಸ್ ಆಗಿದೆ. ಜೊತೆಗೆ ಚಿತ್ರದ ಫಸ್ಟ್ ಲುಕ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. ಈ ಚಿತ್ರಕ್ಕೆ ಪರದಾ (Paradha) ಎಂದು ಹೆಸರಿಡಲಾಗಿದ್ದು, ಫಸ್ಟ್ ಲುಕ್ (First Look) ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಈ ಹಿಂದೆ ಬಂಡಿ ಸಿನಿಮಾ ಮಾಡಿದ್ದ ಪ್ರವೀಣ್ ಕಂಡ್ರೇಗುಲಾ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ದರ್ಶನಾ ರಾಜೇಂದ್ರನ್ ಮತ್ತು ಸಂಗೀತಾ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಶ್ರೀಧರ್ ಮುಕ್ಕುವ, ವಿಜಯ್ ಡೊಂಕದ ಹಾಗೂ ಶ್ರೀನಿವಾಸಲು ಈ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.

    ಅನುಪಮಾ ಪರಮೇಶ್ವರನ್ ಸದ್ಯ ಪಡ್ಡೆಹುಡುಗರ ಕ್ರಶ್ ಆಗಿದ್ದಾರೆ. ‘ಟಿಲ್ಲು ಸ್ಕ್ವೇರ್’ (Tillu Square) ಸಿನಿಮಾ ಸಕ್ಸಸ್ ಆದ್ಮೇಲೆ ಅನುಪಮಾ (Anupama Parameshwaran) ದುಬಾರಿ ನಟಿಯಾಗಿದ್ದಾರೆ. ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ.

    ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಳ್ಳಲ್ಲ. ಬೋಲ್ಡ್ ಪಾತ್ರಗಳಲ್ಲಿ ನಟಿಸಲ್ಲ ಎಂದಿದ್ದ ಅನುಪಮಾ ಇದೀಗ ಬದಲಾಗಿದ್ದಾರೆ. ‘ಟಿಲ್ಲು ಸ್ಕ್ವೇರ್’ ಚಿತ್ರದ ಮೂಲಕ ಅಭಿಮಾನಿಗಳ ಉತ್ತರ ಸಿಕ್ಕಿದೆ. ಈ ಚಿತ್ರ ರಿಲೀಸ್ ಆದ್ಮೇಲೆ ಅನುಪಮಾಗೆ ಸಹಜವಾಗಿ ಬೇಡಿಕೆ ಜಾಸ್ತಿ ಆಗಿದೆ.

    ಕಳೆದ ವರ್ಷ ‘ಕಾರ್ತಿಕೇಯ 2’ ಸಿನಿಮಾ ಆದ್ಮೇಲೆ ‘ಟಿಲ್ಲು ಸ್ಕ್ವೇರ್’ ಚಿತ್ರದ ಮೂಲಕ ಕೂಡ ಬ್ರೇಕ್ ಸಿಕ್ಕಿದೆ. 40ರಿಂದ 60 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಿದ್ದ ನಟಿ, ಒಂದೂವರೆ ಕೋಟಿ ರೂ.ವರೆಗೂ ಚಾರ್ಜ್ ಮಾಡುತ್ತಿದ್ದಾರಂತೆ.

     

    ಇದೀಗ ಬರುತ್ತಿರುವ ಸಿನಿಮಾ ಆಫರ್‌ಗಳಿಗೆ ದುಬಾರಿ ಸಂಭಾವನೆಗೆ ನಟಿ ಬೇಡಿಕೆ ಇಡುತ್ತಿದ್ದಾರೆ ಎಂದು ಟಾಲಿವುಡ್ ಅಂಗಳದಲ್ಲಿ ಗುಸು ಗುಸು ಶುರುವಾಗಿದೆ. ಈ ಮೂಲಕ ರಶ್ಮಿಕಾ, ಶ್ರೀಲೀಲಾ, ಪೂಜಾ ಹೆಗ್ಡೆ ಸಾಲಿಗೆ ಸೇರುವ ಮೂಲಕ ದುಬಾರಿ ನಟಿ ಎನಿಸಿಕೊಂಡಿದ್ದಾರೆ.

  • ‘ವಿಕ್ಟೋರಿಯಾ ಮಾನ್ಸನ್’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವಣ್ಣ

    ‘ವಿಕ್ಟೋರಿಯಾ ಮಾನ್ಸನ್’ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿದ ಶಿವಣ್ಣ

    ಹೊಸಬರ ಚಿತ್ರಗಳಿಗೆ ಸದಾ ಪ್ರೋತ್ಸಾಹ ನೀಡುತ್ತಿರುವ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivraj Kumar) ಈಗ ’ವಿಕ್ಟೋರಿಯಾ ಮಾನ್ಸನ್’ (Victoria Monson) ಸಿನಿಮಾದ ಫಸ್ಟ್ ಲುಕ್ (First Look) ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ನಂತರ ಮಾತನಾಡುತ್ತಾ, ಚಿತ್ರರಂಗಕ್ಕೆ ನವ ಪ್ರತಿಭೆಗಳು ಬರಬೇಕು. ಆವಾಗಲೇ ವಿನೂತನ ಕಥೆಗಳು ಬರುತ್ತದೆ. ತುಣುಕುಗಳು ಚೆನ್ನಾಗಿ ಬಂದಿದೆ. ಹೊಸಬರದು ಅನಿಸುವುದಿಲ್ಲ. ನಿಮ್ಮಗಳ ಪ್ರಯತ್ನ ನಿರಂತರವಾಗಿ ಸಾಗಲಿ. ಸಿನಿಮಾ ತೆರೆಕಂಡು ಯಶಸ್ಸು ಗಳಿಸಲಿ ಎಂದರು. ಈ ಸಂದರ್ಭದಲ್ಲಿ ಆರ್.ಚಂದ್ರು ಉಪಸ್ತಿತಿ ಇತ್ತು.

    ಸುಮಾರು ನಾಲ್ಕು ನೂರಕ್ಕೂ ಹೆಚ್ಚು ಚಿತ್ರಗಳಿಗೆ ಡಿಜಿಟಲ್ ಪ್ರಚಾರ ಮಾಡಿರುವ ಹಾಗೂ ಸ್ಟಾರ್ ನಿರ್ದೇಶಕ ಮತ್ತು ನಿರ್ಮಾಪಕ ಆರ್.ಚಂದ್ರು ಸಿನಿಮಾಗಳಿಗೂ ಕೆಲಸ  ಮಾಡುತ್ತಿರುವ ಕಿರಿ ವಯಸ್ಸಿನ ಉಮೇಶ್.ಕೆ.ಎನ್ ಅವರು ಶ್ರೀ ಪದ್ಮಾವತಿ  ಪ್ರೊಡಕ್ಷನ್ ಮೂವೀ ಬ್ಯಾನರ್‌ದಲ್ಲಿ ಬಂಡವಾಳ ಹೂಡುತ್ತಿದ್ದಾರೆ. ರಾಜೇಶ್‌ಬಲಿಪ ನಿರ್ದೇಶನ ಜತೆಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ.

    ಕಥೆಯ ಕುರಿತು ಹೇಳುವುದಾದರೆ 1900ನೇ ಇಸವಿಯಲ್ಲಿ ಹನುಮಗಿರಿ ಎಂಬ ಪುಟ್ಟ ಗ್ರಾಮದಲ್ಲಿ ಭೀಕರ ಘಟನೆಗಳು ನಡೆಯುತ್ತಿರುತ್ತವೆ. ಅಲ್ಲಿ ಪಾಲಿಸುತ್ತಿದ್ದ ವಿಚಿತ್ರ ಆಚರಣೆಗಳು ಎಷ್ಟೋ ಶತಮಾನಗಳಿಂದ ಉಳಿದ ನಿಗೂಢ ರಹಸ್ಯಗಳನ್ನು ಆರ್ಕಾಲಜಿ ಇಲಾಖೆಯು ಹೇಗೆ ಭೇದಿಸುತ್ತದೆ ಎಂಬುದನ್ನು ಥ್ರಿಲ್ಲರ್ ಮೂಲಕ ತೋರಿಸಲಾಗುತ್ತಿದೆ.

    ರಾಜೇಶ್ ನಾಯಕ. ಕಾಶೀಮ ನಾಯಕಿ. ಇವರೊಂದಿಗೆ ಮಿಮಿಕ್ರಿಗೋಪಿ, ಮಠಕೊಪ್ಪಳ, ಶ್ರೀಧರ್, ಬಲರಾಜವಾಡಿ, ಗುರುದೇವ್‌ನಾಗರಾಜ್, ಉಮೇಶ್, ಮದನ್, ಅಂಜಿ, ಹಿತೇಶ್, ಪಲ್ಟಿಗೋವಿಂದ್, ಶೈಲಜ, ಕೀರ್ತನ ಮುಂತಾದವರು ನಟಿಸುತ್ತಿದ್ದಾರೆ. ಸಂಗೀತ ಕಿರಣ್‌ರವೀಂದ್ರನಾಥ್, ಛಾಯಾಗ್ರಹಣ ವೀರೇಶ್‌ಬುಗುಡೆ, ಸಂಕಲನ ನಾನಿ ಕೃಷ್ಣ, ಸಾಹಸ ಅಶೋಕ್ ಅವರದಾಗಿದೆ. ಬೆಂಗಳೂರು, ಮಂಗಳೂರು, ಮೂಡಬಿದ್ರಿ, ಚಿಕ್ಕಮಗಳೂರು, ಬೇಲೂರು ಸುಂದರ ತಾಣಗಳಲ್ಲಿ ಶೇಕಡ 90ರಷ್ಟು ಚಿತ್ರೀಕರಣ ಮುಗಿಸಿಕೊಂಡು, ಸದ್ಯದಲ್ಲೆ ಕುಂಬಳಕಾಯಿ ಒಡೆಯಲು ತಂಡವು ಯೋಜನೆ ರೂಪಿಸಿಕೊಂಡಿದೆ.

  • ರಜನಿ 171ನೇ ಸಿನಿಮಾದ ಫಸ್ಟ್ ಲುಕ್ ಔಟ್: ತಲೈವಾ ಅವತಾರಕ್ಕೆ ಕುಣಿದ ಫ್ಯಾನ್ಸ್

    ರಜನಿ 171ನೇ ಸಿನಿಮಾದ ಫಸ್ಟ್ ಲುಕ್ ಔಟ್: ತಲೈವಾ ಅವತಾರಕ್ಕೆ ಕುಣಿದ ಫ್ಯಾನ್ಸ್

    ಜನಿಕಾಂತ್ (Rajinikanth) ನಟನೆಯ 171ನೇ ಸಿನಿಮಾದ ಫಸ್ಟ್ ಲುಕ್ (First Look) ರಿಲೀಸ್ ಆಗಿದೆ. ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ (Lokesh Kanakaraj)  ಅವರೇ ತಮ್ಮ ಸೋಷಿಯಲ್ ಮೀಡಿಯಾದ ಪೇಜ್ ನಲ್ಲಿ ಫಸ್ಟ್ ಲುಕ್ ಅನ್ನು ಪೋಸ್ಟ್ ಮಾಡಿದ್ದಾರೆ. ಬಂಗಾರದ ವಾಚ್ ಅನ್ನು ಬೇಡಿ ಮಾಡಿಕೊಂಡು ಸಖತ್ ಲುಕ್ ನಲ್ಲಿ ರಜನಿ ಕಾಣಿಸಿಕೊಂಡಿದ್ದಾರೆ. ತಲೈವಾ ಅವತಾರ ಕಂಡು ಫ್ಯಾನ್ಸ್ ಕುಣಿದಿದ್ಧಾರೆ.

    ಈ ಸಿನಿಮಾ ಕುರಿತಂತೆ ಭಾರೀ ಭಾರೀ ಸುದ್ದಿಗಳು ಹೊರ ಬರುತ್ತಿವೆ. ಅದರಲ್ಲೂ ತಾರಾಗಣದ ಕುರಿತಂತೆ ರೋಚಕ ವಿಷಯಗಳು ಕೇಳುತ್ತಿವೆ. ಅವುಗಳು ನಿಜವೋ ಸುಳ್ಳೋ ಗೊತ್ತಿಲ್ಲ. ಒಟ್ಟಿನಲ್ಲಿ ಥ್ರಿಲ್ ಅನುಭವಿಸುತ್ತಿದ್ದಾರೆ ರಜನಿ ಫ್ಯಾನ್ಸ್. ಇದೀಗ ಮತ್ತೊಂದು ಹೊಸ ಸುದ್ದಿ ಹರಿದಾಡುತ್ತಿದ್ದು ರಜನಿ ಜೊತೆ ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ (Mammootty) ಕೂಡ ಪಾತ್ರ ಮಾಡಲಿದ್ದಾರೆ.

    ‘ಜೈಲರ್’ (Jailer) ಸಿನಿಮಾದ ಭರ್ಜರಿ ಸಕ್ಸಸ್ ನಂತರ ರಜನಿಕಾಂತ್ ಸಿನಿಮಾ ಆಯ್ಕೆಯಲ್ಲಿ ಮತ್ತಷ್ಟು ಚ್ಯುಸಿಯಾಗಿದ್ದಾರೆ. ಹೀಗಿರುವಾಗ ತಮ್ಮ 171ನೇ ಚಿತ್ರಕ್ಕೆ ಲೋಕೇಶ್ ಕನಗರಾಜ್ ಜೊತೆ ಕೈಜೋಡಿಸಿದ್ದಾರೆ. ತಲೈವಾ ಮುಂದೆ ಅಬ್ಬರಿಸಲು ನಟ ರಾಘವ್ ಲಾರೆನ್ಸ್ ಕೂಡ ಸಜ್ಜಾಗಿದ್ದಾರೆ.

    ರಜನಿಕಾಂತ್ ಅವರ 171ನೇ ಚಿತ್ರದಲ್ಲಿ ವಿಲನ್‌ಗೂ ಕೂಡ ತೂಕವಾಗಿರುವಂತಹ ಪಾತ್ರವಿದ್ದು, ತಲೈವಾ ಮುಂದೆ ಅಬ್ಬರಿಸೋಕೆ ರಾಘವ್ ಸೂಕ್ತ ಎಂದೇನಿಸಿ ನಿರ್ದೇಶಕರು ಆಯ್ಕೆ ಮಾಡಿದ್ದಾರೆ. ಹಾಗಾಗಿ ರಾಘವ್ ವಿಶೇಷ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು.

     

    ತಲೈವಾ ನಟಿಸಿದ್ದ ಚಂದ್ರಮುಖಿ ಸಿನಿಮಾದ ಮುಂದಿನ ಭಾಗ ಚಂದ್ರಮುಖಿ 2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ (Raghava Lawrence) ನಾಯಕನಾಗಿ ನಟಿಸಿದ್ದರು. ಮೊದಲ ಚಂದ್ರಮುಖಿ ಸಿನಿಮಾದಲ್ಲಿ ರಜನೀಕಾಂತ್ ನಿರ್ವಹಿಸಿದ್ದ ಪಾತ್ರವನ್ನೇ ರಾಘವ್ ನಿರ್ವಹಿಸಿದ್ದರು.  ರಜನಿಕಾಂತ್ 171ನೇ ಸಿನಿಮಾ, ಲೋಕೇಶ್ ಕನಗರಾಜ್ ಅವರ 6ನೇ ಸಿನಿಮಾ ಆಗಲಿದೆ. ರಜನೀಕಾಂತ್‌ಗೆ ನಿರ್ದೇಶಿಸಲಿರುವ ಮೊದಲ ಸಿನಿಮಾ ಇದಾಗಿದ್ದು, ರಾಘವ್ ಲಾರೆನ್ಸ್-ತಲೈವಾ ಮೊದಲ ಬಾರಿಗೆ ಜೊತೆಯಾಗಿ ನಟಿಸಲಿದ್ದಾರೆ.

  • ‘ಜೀನಿ’ ಚಿತ್ರದ ಫಸ್ಟ್ ಲುಕ್ ರಿಲೀಸ್: ಹೊಸ ಅವತಾರದಲ್ಲಿ ಜಯಂರವಿ

    ‘ಜೀನಿ’ ಚಿತ್ರದ ಫಸ್ಟ್ ಲುಕ್ ರಿಲೀಸ್: ಹೊಸ ಅವತಾರದಲ್ಲಿ ಜಯಂರವಿ

    ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು ನಟ ಜಯಂರವಿ ಜೀನಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅರ್ಜುನನ್ ಜೂನಿಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಫಸ್ಟ್ ಲುಕ್ ಅನಾವರಣಗೊಂಡಿದೆ. ಜೀನಿಯಲ್ಲಿ ಜಯಂರವಿ ಹೊಸ ಅವತಾರ ತಾಳಿದ್ದಾರೆ.

    ಜೀನಿ ಫ್ಯಾಂಟಸಿ ಸಿನಿಮಾ. ಇದೇ ಮೊದಲ ಬಾರಿಗೆ ಜಯಂರವಿ ಫ್ಯಾಂಟಸಿ ಕಥೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹೀಗಾಗಿ ಫಸ್ಟ್ ಲುಕ್ ಕೂಡ ವಿಭಿನ್ನವಾಗಿದೆ. ಸರಪಣಿಯಲ್ಲಿ ಬಂಧಿಯಾಗಿರುವ ಜಯಂರವಿ, ಜುಟ್ಟು ಕಟ್ಟಿ ಸ್ಟೈಲೀಶ್ ಲುಕ್ ನಲ್ಲಿ ಮಿಂಚಿದ್ದಾರೆ.

    ಜಯಂರವಿ ನಾಯಕನಾಗಿ ನಟಿಸಿರುವ ಕಲ್ಯಾಣಿ ಪ್ರಿಯದರ್ಶನ್, ಕೃತಿ ಶೆಟ್ಟಿ ಮತ್ತು ವಾಮಿಕಾ ಗಬ್ಬಿ ನಾಯಕಿಯರಾಗಿ ನಟಿಸಿದ್ದಾರೆ. ಆಸ್ಕರ್ ವಿಜೇತ ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಜೀನಿ ಚಿತ್ರದ 75%  ಶೂಟಿಂಗ್ ಕಂಪ್ಲೀಟ್ ಆಗಿದ್ದು, ಕೇವಲ 3 ಹಾಡುಗಳ ಚಿತ್ರೀಕರಣ ಬಾಕಿ ಉಳಿದಿದೆ. ಇನ್ನೂ 10 ದಿನಗಳಲ್ಲಿ  ಆ ಚಿತ್ರೀಕರಣ ಮುಗಿಸಿ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ತೊಡಗಿಸಿಕೊಳ್ಳಲಿದೆ.

    ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್‌ನ ಡಾ. ಇಶಾರಿ ಕೆ. ಗಣೇಶ್ ಜೀನಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಮಹೇಶ್ ಮುತ್ತುಸ್ವಾಮಿ ದೃಶ್ಯಗಳನ್ನು ಕ್ಯಾ,ಮೆರಾ ಹ್ಯಾಂಡಲ್ ಮಾಡಿದ್ದು, ಪ್ರದೀಪ್ ಇ ರಾಗವ್ ಸಂಕಲನ,  ಯಾನಿಕ್ ಬೆನ್ ಆಕ್ಷನ್ ದೃಶ್ಯಗಳ ನಿರ್ದೇಶನ ಚಿತ್ರಕ್ಕಿದೆ.