Tag: Fisher Man

  • ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

    ಉಡುಪಿ | ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರ – ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ

    ಉಡುಪಿ: ಸಮುದ್ರದಲ್ಲಿ ಮುಳುಗುತ್ತಿದ್ದ ಮೀನುಗಾರನ್ನು (Fisherman) ಸ್ಥಳೀಯರು ರಕ್ಷಿಸಿದ ಘಟನೆ ಉಡುಪಿ (Udupi) ಜಿಲ್ಲೆಯ ಕಾಪು ಲೈಟ್ ಹೌಸ್ ಸಮೀಪದಲ್ಲಿ ನಡೆದಿದೆ.

    ಸಚಿನ್ ಎಂಬ ವ್ಯಕ್ತಿ ಮೀನಿಗೆ ಬಲೆ ಬೀಸುತ್ತಿದ್ದ ವೇಳೆ ಆಯತಪ್ಪಿ ಸಮುದ್ರಕ್ಕೆ (Sea) ಬಿದ್ದಿದ್ದ. ಈತನ ರಕ್ಷಣೆ ಮಾಡುವುದಕ್ಕೆ ಸತತ ಒಂದು ಗಂಟೆಗಳ ಕಾಲ ಸ್ಥಳೀಯರು ಶೋಧಕಾರ್ಯ ನಡೆಸಿದರು. ಇದನ್ನೂ ಓದಿ: Gujarat Floods | ಸ್ಕೂಟಿ ಮೇಲೆ ಹೊತ್ತೊಯ್ದು ಮೊಸಳೆ ರಕ್ಷಣೆ – ವೀಡಿಯೋ ವೈರಲ್

    ಶರ್ಮಾ, ಹರೀಶ್, ಬಾಲಕೃಷ್ಣ ಕೋಟ್ಯಾನ್, ಚಂದ್ರಶೇಖರ್ ಎಂಬವರು ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನ ರಕ್ಷಿಸಿದ್ದಾರೆ.

  • ಮೀನುಗಾರನ ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ – 6 ಆರೋಪಿಗಳ ಬಂಧನ

    ಮೀನುಗಾರನ ತಲೆಕೆಳಗಾಗಿಸಿ ನೇತು ಹಾಕಿ ಹಲ್ಲೆ – 6 ಆರೋಪಿಗಳ ಬಂಧನ

    ಮಂಗಳೂರು: ಕಡಲನಗರಿ ಮಂಗಳೂರಿನ ಮೀನುಗಾರಿಕಾ ಬಂದರಿನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕರು ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ.

    ನಮ್ಮ ರಾಜ್ಯದ ಮೀನುಗಾರಿಕೆಯಲ್ಲಿ ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಆಂಧ್ರಪ್ರದೇಶ ಮೂಲದ ಕಾರ್ಮಿಕರು ಕೆಲಸ ಮಾಡುತ್ತಾರೆ. ಇದೇ ರೀತಿ ಮಂಗಳೂರಿನಲ್ಲಿ ಮೀನುಗಾರಿಕ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವೈಲ ಶೀನು ಎಂಬ ಆಂಧ್ರಪ್ರದೇಶ ಮೂಲದ ಕಾರ್ಮಿಕನಿಗೆ ಸಹೋದ್ಯೋಗಿಗಳೇ ಸೇರಿಕೊಂಡು ಅಮಾನುಷ ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

    ಮೊಬೈಲ್ ಕದ್ದ ಆರೋಪದಲ್ಲಿ ವೈಲ ಶೀನುನನ್ನು ಮೀನುಗಾರಿಕ ಬೋಟ್‍ನಲ್ಲಿಯೇ ಉಲ್ಟಾ ನೇತು ಹಾಕಿ ಆಂಧ್ರಪ್ರದೇಶ ಮೂಲದ ಆರು ಜನ ಮೀನುಗಾರಿಕಾ ಕಾರ್ಮಿಕರು ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲ್ಲೆ ನಡೆಸಿದ ಆರು ಜನ ಆರೋಪಿಗಳನ್ನು  ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಬಂಧಿತರನ್ನು ಕೊಂಡೂರು ಪೋಲಯ್ಯ, ಅವುಲ ರಾಜ್ ಕುಮಾರ್, ಕಾಟಂಗರಿ ಮನೋಹರ್, ವೂಟುಕೋರಿ ಜಾಲಯ್ಯ, ಕರಪಿಂಗಾರ ರವಿ, ಪ್ರಲಯಕಾವೇರಿ ಗೋವಿಂದಯ್ಯ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು ಏನು? 

    ಡಿ.14ರಂದು ಆರೋಪಿಗಳು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಶೈಲೇಶ್ 2 ಎಂಬ ಬೋಟಿನಲ್ಲಿ ಪಾರ್ಟಿಯೊಂದನ್ನು ಮಾಡಿದ್ದಾರೆ. ಆ ಪಾರ್ಟಿಗೆ ಪರಿಚಯದ ವೈಲ ಶೀನುನನ್ನು ಕರೆದಿದ್ದಾರೆ ಮರುದಿನ ಬೆಳಗ್ಗೆ ಎದ್ದು ನೋಡಿದಾಗ ಪಾರ್ಟಿಯಲ್ಲಿದ್ದವರ ಎರಡು ಮೊಬೈಲ್ ಮಿಸ್ಸಿಂಗ್ ಆಗಿರುತ್ತದೆ. ಈ ಮೊಬೈಲ್‍ನ್ನು ವೈಲ ಶೀನು ಕದ್ದಿದ್ದಾನೆ ಎಂದು ಆರೋಪಿಸಿ ಉಲ್ಟಾ ನೇತು ಹಾಕಿ ಸರಪಳಿಯಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಸಾರ್ವಜನಿಕರ ಸಹಾಯಯಿಂದ ವೈಲ ಶೀನು ಪಾರಾಗಿ ಕಾರವಾರಕ್ಕೆ ತೆರಳಿದ್ದಾನೆ. ಈ ವಿಚಾರ ಪೊಲೀಸರಿಗೆ ತಿಳಿಯುತ್ತಿದ್ದಂತೆ ಹಲ್ಲೆ ನಡೆಸಿದ ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಇದೀಗ ಬಂಧಿಸಿದ್ದಾರೆ. ವೈಲ ಶೀನುವಿನ ಕಾಲುಗಳನ್ನು ಕಟ್ಟಿ ಸಮುದ್ರಕ್ಕೆ ಬಿಸಾಡಿ ಕೊಲೆ ನಡೆಸಲು ಆರೋಪಿಗಳು ಮಾತುಕತೆ ನಡೆಸಿದ್ದರು. ಹೀಗಾಗಿ ಸದ್ಯ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.