ನೆಲಮಂಗಲ: ಮೂರಂತಸ್ತಿನ ಕಟ್ಟಡದಿಂದ ಬಿದ್ದು ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ (Suspicious Death) ಘಟನೆ ಬೆಂಗಳೂರು(Bengaluru) ಉತ್ತರ ತಾಲ್ಲೂಕಿನ ಕಡಬಗೆರೆಯಲ್ಲಿ ನಡೆದಿದೆ.
ಇದ್ದಕ್ಕಿದ್ದಂತೆ ಮೂರನೇ ಮಹಡಿಯಲ್ಲಿದ್ದ ಫಿಟ್ನೆಸ್ ಸೆಂಟರ್ ಕಟ್ಟಡದ ಮೇಲಿನಿಂದ ಬಿದ್ದು ರಕ್ಷಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾಷಿಂಗ್ಟನ್: ಅಮೆರಿಕದ (America) ಇಂಡಿಯಾನಾದಲ್ಲಿ ಫಿಟ್ನೆಸ್ ಸೆಂಟರ್ನಲ್ಲಿ (Fitness Center) ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಭಾರತ ಮೂಲದ ವಿದ್ಯಾರ್ಥಿ (Indian Student) ವರುಣ್ ರಾಜ್ ಪುಚಾ (24) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಆತ ವ್ಯಾಸಂಗ ಮಾಡುತ್ತಿದ್ದ ವಿಶ್ವವಿದ್ಯಾಲಯ ತಿಳಿಸಿದೆ.
ವಾಲ್ಪಾರೈಸೊ ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿ ವರುಣ್ (Varun Raj Pucha) ಅಕ್ಟೋಬರ್ 29 ರಂದು ಸಾರ್ವಜನಿಕ ಜಿಮ್ನಲ್ಲಿದ್ದಾಗ ದುಷ್ಕರ್ಮಿ ಜೋರ್ಡಾನ್ ಆಂಡ್ರೇಡ್ (24) ಎಂಬಾತ ಆತನ ತಲೆಗೆ ಚಾಕುವಿನಿಂದ ಇರಿದಿದ್ದ. ಘಟನೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿ ಅಗಲಿಕೆ ಬಳಿಕ ಮಾಹಿತಿ ನೀಡಿರುವ ವಾಲ್ಪರೈಸೊ ವಿಶ್ವವಿದ್ಯಾಲಯ, ವರುಣ್ ರಾಜ್ ಪುಚ್ಚಾ ಅಗಲಿಕೆ ಸುದ್ದಿಯನ್ನು ನಾವು ಭಾರವಾದ ಹೃದಯದಿಂದ ಹಂಚಿಕೊಳ್ಳುತ್ತಿದ್ದೇವೆ. ನಮ್ಮ ಕ್ಯಾಂಪಸ್ ಸಮುದಾಯದ ಭಾಗವಾಗಿದ್ದ ವಿದ್ಯಾರ್ಥಿಯನ್ನು ಕಳೆದುಕೊಂಡಿದ್ದೇವೆ. ಈ ನಷ್ಟಕ್ಕೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ನಾವು ಅಗಲಿದ ವಿದ್ಯಾರ್ಥಿ ವರುಣ್ನ ಕುಟುಂಬ ಮತ್ತು ಸ್ನೇಹಿತರೊಂದಿಗಿದ್ದೇವೆ ಎಂದು ಹೇಳಿದೆ. ಇದನ್ನೂ ಓದಿ: ಜಮ್ಮುವಿನಲ್ಲಿ ಉಗ್ರನ ಬೇಟೆಯಾಡಿದ ಭಾರತೀಯ ಸೇನೆ
ತೆಲಂಗಾಣದ ಖಮ್ಮಂ ಮೂಲದ ವರುಣ್ 2022ರ ಆಗಸ್ಟ್ನಲ್ಲಿ ಅಮೆರಿಕಗೆ ತೆರಳಿ ಕಂಪ್ಯೂಟರ್ ಸೈನ್ಸ್ನಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದ. ಮುಂದಿನ ವರ್ಷ ತಮ್ಮ ಕೋರ್ಸ್ ಮುಗಿದ ಬಳಿಕ ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದ. ಆದರೆ ಅನಿರೀಕ್ಷಿತ ಘಟನೆಯಿಂದ ವಿದ್ಯಾರ್ಥಿಯ ಕುಟುಂಬ ಹಾಗೂ ವಿಶ್ವವಿದ್ಯಾಲಯ ಆಘಾತಕ್ಕೊಳಗಾಗಿದೆ. ಇದನ್ನೂ ಓದಿ: ಜೇಡ ಕಚ್ಚಿ ಖ್ಯಾತ ಗಾಯಕ ಸಾವು
ಚಿಕ್ಕಬಳ್ಳಾಪುರ: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಅಕಾಲಿಕ ಸಾವನ್ನಪ್ಪಿದ ಹಿನ್ನೆಲೆ ರಾಜ್ಯದಲ್ಲಿ ಜಿಮ್ ಹಾಗೂ ಫಿಟ್ನೆಸ್ ಸೆಂಟರ್ಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮಾರ್ಗಸೂಚಿಗಳ ರಚನೆ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ನಟ ಪುನೀತ್ ಸಾವಿನ ನಂತರ ಜಿಮ್ ಮಾಡಬೇಕಾ ಮಾಡಬಾರದ ಎಂಬ ಗೊಂದಲದ ಪ್ರಶ್ನೆ ಉದ್ಭವವಾಗಿದೆ. ಬಹಳ ಜನ ಜಿಮ್ ಮಾಡಬೇಕಾ ಬೇಡ್ವಾ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಒಂದೆರೆಡು ಈ ರೀತಿಯ ಪ್ರಕರಣಗಳಿಂದ ಜಿಮ್ ಮಾಡುವುದೇ ತಪ್ಪು ಎಂಬ ನಿರ್ಧಾರ ಸರಿ ಅಲ್ಲ. ಹೀಗಾಗಿ ಈ ಬಗ್ಗೆ ಸಂಪೂರ್ಣ ಮಾಹಿತಿಯ ಹೆಸರಾಂತ ಹೃದಯ ತಜ್ಞರ ವರದಿ ತಯಾರಿ ಮಾಡಲಿದ್ದೇವೆ. ಜಿಮ್ ಹಾಗೂ ಫಿಟ್ನೆಸ್ ಸೆಂಟರ್ಗಳಿಗೆ ಮಾರ್ಗಸೂಚಿಗಳ ರಚನೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಸಂಪತ್ತು ಭಾರೀ ಏರಿಕೆ – ಪಾಕಿಸ್ತಾನದ GDP ಮೀರಿಸಿದ ಎಲೋನ್ ಮಸ್ಕ್
ಜಿಮ್ ಫಿಟ್ನೆಸ್ ಸೆಂಟರ್ಗಳಲ್ಲಿ ಯಾವ ಸಾಮಾಗ್ರಿಗಳಿರಬೇಕು? ಸಮಸ್ಯೆ ಬಂದಾಗ ಯಾವ ರೀತಿ ನಿಭಾಯಿಸಬೇಕು ಎಂಬ ಪ್ರಥಮ ಚಿಕಿತ್ಸೆಯಿಂದ ಹಿಡಿದು ಆಸ್ಪತ್ರೆ ದಾಖಲಾಗುವವರೆಗೆ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಜಿಮ್ ಟ್ರೈನರ್ಸ್ಗೆ ಈ ಪರಿಣಿತಿ ಕೊಡುವ ತರಬೇತಿ ನೀಡಲಾಗುವುದು. ನಾನು ಸಹ ಹೆಸರಾಂತ ಹೃದಯ ತಜ್ಞರ ಜೊತೆ ವಿಚಾರ ಮಾಡಿದ್ದೇನೆ. ರಾಜ್ಯದ ಹಲವು ಪ್ರಖ್ಯಾತ ಹೃದಯ ತಜ್ಞರು ಹಾಗೂ ಅಮೇರಿಕಾದ ಖ್ಯಾತ ಹೃದಯ ತಜ್ಞರ ಜೊತೆ ಸಹ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿರಾ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ
ಇದೇ ವೇಳೆ, ಪುನೀತ್ ರಾಜ್ಕುಮಾರ್ ನನಗೆ ಬಹಳ ಆತ್ಮೀಯರು. ಇತ್ತೀಚೆಗೆ ಅವರ ಪತ್ನಿ ಅಶ್ವಿನಿ ಹಾಗೂ ಕುಟುಂಬಸ್ಥರು ನಮ್ಮ ಮನೆಗೆ ಬಂದು ಜೊತೆಯಲ್ಲಿ ಊಟ ಮಾಡಿದ್ದೀವಿ. ಆ ನೆನಪು ಹಾಗೆ ಇದೆ. ಅವರ ನೆನಪು ಮರೆಯಾಗಲ್ಲ. ಈ ಘಟನೆ ಇದು ದುರದೃಷ್ಟಕರ ವಿಧಿ ಬರಹ. 16 ವರ್ಷದ ಹಿಂದೆ ನಾನು ಅವರು ಒಂದೇ ಸಲ ಜಿಮ್ ಸ್ಟಾರ್ಟ್ ಮಾಡಿದ್ವಿ. ನಾನು ಅವರು ರಾಘವೇಂದ್ರ ರಾಜ್ ಕುಮಾರ್ ಜಿಮ್ ಮಾಡುತ್ತಿದ್ರು. ಪುನೀತ್ ದೇಹ ದಂಡನೆ ನೋಡಲು ಬಹಳ ಸಂತೋಷ ಆಗುತ್ತಿತ್ತು. ಅವರು ಆರೋಗ್ಯಕ್ಕೆ ಹೆಚ್ಚು ಲಕ್ಷ್ಯ ಕೊಡುತ್ತಿದ್ದರು. ಅವರ ಬಳಿ ಯಾವುದೇ ದುರ್ಗುಣಗಳಿರಲಿಲ್ಲ. ಆದರೂ ಕೂಡ ವಿಧಿ ಬರಹ, ದೇವ್ರು ಒಳ್ಳೆಯವರನ್ನು ಇಷ್ಟಪಡುತ್ತಾರೆ ಎನ್ನುವಂತೆ ಈ ಪ್ರಕರಣ ಪೂರಕವಾಗಿದೆ. ಬಹಳ ಬೇಗ ತಂದೆ ತಾಯಿ ದೇವರ ಬಳಿ ಹೋಗಿದ್ದಾರೆ ಅಂತ ನಾನು ತಿಳಿಕೊಂಡಿದ್ದೀನಿ. ಇಡೀ ರಾಜ್ಯ 2 ದಿನದಿಂದ ಶೋಕಾಚರಣೆಯಲ್ಲಿ ಮುಳುಗಿದೆ. ನನಗೆ ಬಹಳ ನೋವಾಗಿದೆ. ಭಗವಂತ ಅವರ ಕುಟುಂಬಕ್ಕೆ ಆಸರೆಯಾಗಿ ಶಕ್ತಿ ತುಂಬಲಿ. ಮೂವರು ಹೆಣ್ಣು ಮಕ್ಕಳಿಗೆ ಎಲ್ಲಾ ಧೈರ್ಯ ಕೊಟ್ಟು ಒಳ್ಳೆಯದನ್ನು ಮಾಡಲಿ ಅಂತ ಹಾರೈಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಸಕ್ಕರೆ ನಾಡಿಗೆ ನೂತನ ಎಸ್ಪಿ ಆಗಮನ