Tag: flower

  • ಹೆಣ್ಣು ಹೂವಿನಂತೆ – ಇರಾನ್‌ ಸುಪ್ರೀಂ ನಾಯಕನ ಹಳೆಯ ಪೋಸ್ಟ್‌ ವೈರಲ್‌

    ಹೆಣ್ಣು ಹೂವಿನಂತೆ – ಇರಾನ್‌ ಸುಪ್ರೀಂ ನಾಯಕನ ಹಳೆಯ ಪೋಸ್ಟ್‌ ವೈರಲ್‌

    – ಹೆಣ್ಣಿನ ಭಾವನೆಯನ್ನ ನಿರ್ಲಕ್ಷ್ಯ ಮಾಡಬಾರದು ಎಂದಿದ್ದ ಖಮೇನಿ

    ಟೆಹ್ರಾನ್‌: ಇಸ್ರೇಲ್ ಮತ್ತು ಇರಾನ್ (Israel Iran Conflict) ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಪರಸ್ಪರ ದಾಳಿ ನಡೆಸುತ್ತಿದ್ದು, ಎರಡೂ ದೇಶಗಳಲ್ಲಿ ನೂರಾರು ಮಂಧಿ ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ಪ್ರಾಣ ಭಯದಿಂದ ದೇಶವನ್ನೇ ಬಿಟ್ಟು ಹೋಗ್ತಿದ್ದಾರೆ. ಆದ್ರೆ ಯಾರ ಮಾತನ್ನೂ ಕೇಳುವಂತಹ ಪರಿಸ್ಥಿತಿಯಲ್ಲಿ ಈ ದೇಶಗಳು ಇದ್ದಂತೆ ಕಾಣ್ತಿಲ್ಲ. ದಿನೇ ದಿನೇ ದಾಳಿಯ ಸ್ವರೂಪವನ್ನು ತೀವ್ರಗೊಳಿಸಿವೆ. ಈ ನಡುವೆ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿಯ (Ayatollah Ali Khamenei) ಹಳೆಯ ಟ್ವೀಟ್‌ಗಳು ವೈರಲ್‌ ಆಗಿವೆ.

    ಕೆಲವೊಂದು ಸೋಷಿಯಲ್‌ ಮೀಡಿಯಾ ಪೋಸ್ಟ್‌ಗಳು (Social Media Posts) ಖಮೇನಿಗೆ ಮಹಿಳೆಯರ ಮೇಲಿನ ಗೌರವನ್ನು ಸೂಚಿಸಿವೆ. ಅಲ್ಲದೇ ಮಹಿಳಾ ಹಕ್ಕುಗಳ ಬಗ್ಗೆ ಖಮೇನಿ ಚಿಂತಿಸುತ್ತಿದ್ದದ್ದು, ಕವಿತೆಗಳನ್ನು ಇಷ್ಟಪಡುವುದು, ಬಾಲ್ಯದ ತುಂಟತನ, ಹಾಸ್ಯಪ್ರಜ್ಞೆ ಎಲ್ಲವೂ ಅನಾವರಣಗೊಂಡಿದೆ.

    ಈ ಪೋಸ್ಟ್‌ಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ಖಮೇನಿ ತೀವ್ರವಾದಿ ಎಂದು ಕಿಡಿ ಕಾರಿದ್ದರೆ, ಇನ್ನೂ ಕೆಲವರು ಹೀಗೂ ಇದ್ದರಾ? ಅಂತ ಮೂಗಿನ ಮೇಲೆ ಬೆರಳಿಟ್ಟಿದ್ದಾರೆ. ಅದೇನೆಂಬುದನ್ನು ಮುಂದೆ ನೋಡೋಣ….

    ಪೋಸ್ಟ್-1
    ಪುರುಷನು ಮಹಿಳೆಯ ಅಗತ್ಯತೆಗಳು ಮತ್ತು ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಜವಾಬ್ದಾರಿ ಹೊಂದಿದ್ದಾನೆ. ಅವಳ ಭಾವನಾತ್ಮಕ ಸ್ಥಿತಿಯ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು.

    ಪೋಸ್ಟ್‌-2
    ಮಹಿಳೆಯರು ಪುರುಷರಿಗಿಂತ ಬಲಶಾಲಿಗಳು. ಮಹಿಳೆಯರು ತಮ್ಮ ಬುದ್ಧಿವಂತಿಕೆ ಮತ್ತು ಸೂಕ್ಷ್ಮತೆಯಿಂದ ಪುರುಷರನ್ನು ಸಂಪೂರ್ಣವಾಗಿ ನಿಯಂತ್ರಿಸಬಹುದು ಮತ್ತು ಪ್ರಭಾವಿಸಬಹುದು.

    ಪೋಸ್ಟ್‌-3‌
    ಮಹಿಳೆಯರು ಗುಲಾಮಗಿರಿ ನಿರ್ಮೂಲನೆಗಾಗಿ ಒಂದು ದಿನವನ್ನು ಆಚರಿಸುತ್ತಾರೆ. ಆದ್ರೆ ಅಂತಹ ಅಪರಾಧಗಳು ಕರಿಯರ ವಿರುದ್ಧ ನಡೆಯುತ್ತವೆ.

    ಪೋಸ್ಟ್‌-4
    ನನಗೆ ಸಿನಿಮಾ ಮತ್ತು ದೃಶ್ಯಕಲೆಗಳಲ್ಲಿ ಆಸಕ್ತಿ ಇಲ್ಲ. ಆದ್ರೆ ಕಾವ್ಯ, ಕಾದಂಬರಿಗಳ ವಿಷಯಕ್ಕೆ ಬಂದಾಗ ಯಾರಿಗೇನು ಕಡಿಮೆ ಇರಲಿಲ್ಲ.

  • ಉರಿ ಬಿಸಿಲ ಕಡಲಲ್ಲಿ ಅಲೆಯಾಗಿ ಬಂದ ನಗು..!

    ಉರಿ ಬಿಸಿಲ ಕಡಲಲ್ಲಿ ಅಲೆಯಾಗಿ ಬಂದ ನಗು..!

    ನಿನ್ನೆ ಉರಿ ಬಿಸಿಲಿನ ಹೊತ್ತಲ್ಲಿ ತಾಳಗುಪ್ಪದಿಂದ ಹೊನ್ನೆಮರಡಿನ (Honnemaradu) ದಾರಿಯಲ್ಲಿ ನಡೆದುಕೊಂಡು ಹೋಗ್ತಾ ಇದ್ದೆ.. ಉರಿ ಬಿಸಿಲು… ಝರಿ ಸದ್ದು…. ನಡುವೆ ಗಹಗಹಿಸಿ ನಗುವ ಸದ್ದು! ಯಾರು ಎಂದು ನೋಡಿದರೆ, ಸುತ್ತಮುತ್ತ ಯಾರೂ ಕಾಣ್ತಿಲ್ಲ..! ಸುಮ್ಮನೆ ಮತ್ತಷ್ಟು ದೂರ ನಡೆದಾಗ ಗೊತ್ತಾಗಿದ್ದು ಇದು ಭೂಮಿಯ (Earth) ನಗು..!

    ಹೌದು ಭೂಮಿ ನಗುತ್ತದೆ…! ಸುಡುವ ಬಿಸಿಲಿನ ಪ್ರೇಮದಲ್ಲಿ..! ಹೇಗೆ ಚಿನ್ನ ಸುಟ್ಟು ಹೊಳಪು ಪಡೆಯುತ್ತದೆಯೋ ಹಾಗೆ ಭೂಮಿಯೂ ಸುಡುವ ಬಿಸಿಲಲ್ಲಿ ಬೆಂದು ತನ್ನ ನಗುವಿನ ಹೊಳಪನ್ನ ಪಡೆದುಕೊಳ್ಳುತ್ತದೆ. ಆಶ್ಚರ್ಯ ಆಯ್ತಾ? ಆದ್ರೂ ಇದು ಸತ್ಯ! ಭೂಮಿ ನಗುತ್ತದೆ. ಹೂಗಳ (Malnad Flowers) ರೂಪದಲ್ಲಿ! ಭೂಮಿ ತನ್ನೆಲ್ಲ ಗಂಧ, ಪ್ರೇಮವನ್ನು ಹೂಗಳಲ್ಲಿ ಸೇರಿಸಿ ಚಲುವಿನ ವನವನ್ನು ಸೃಷ್ಠಿಸಿ, ಉರಿ ಬಿಸಿಲಿಗೆ ಸವಾಲೆಸೆದು ನಗುತ್ತದೆ.

    ಕವಿ ಹಾಗೂ ತತ್ವಜ್ಞಾನಿ ರಾಲ್ಫ್ ವಾಲ್ಡೋ ಎಮರ್ಸನ್ ʻಭೂಮಿಯು ಹೂವುಗಳಲ್ಲಿ ನಗುತ್ತದೆʼ ಎಂದು ಒಂದು ಕಡೆ ಬರೆಯುತ್ತಾನೆ. ಹೌದಲ್ಲವೇ? ಭೂಮಿ ಹೀಗೆ ಅಲ್ವಾ ನಗೋದು..? ನಮಗೆ ನೋಡೋಕೆ ಕಣ್ಣು ಬೇಕು ಅಷ್ಟೇ! ಬೇಕಿದ್ರೆ ಇಂದೇ ಪರೀಕ್ಷೆ ಮಾಡ್ನೋಡಿ. ನಿಮ್ಮ ಮನೆಯ ಅಕ್ಕಪಕ್ಕದ ಗಿಡಗಳ ಬಳಿ ನಿಂತು ಆ ನಗುವನ್ನು ಆನಂದಿಸಿ, ಗಿಡಗಳ ಜೊತೆ ಕೆಲಕಾಲ ಮಾತಾಡಿ! ಆ ಅಂದ ಗಂಧವನ್ನು ಆಸ್ವಾದಿಸಿ!

    ಇಂತಹ ಅನುಭವ ನಮಗೆ ಸಿಗುವುದು, ರಾಶಿ ರಾಶಿ ಹೂಗಳು ಬೆಟ್ಟದ ಮೇಲೆ, ರಸ್ತೆಯ ಬದಿಯ ಮೇ ಫ್ಲವರ್‌ ಅರಳಿ ನಿಂತಾಗ ಮಾತ್ರ ಏನಲ್ಲ. ಕೆಲವೊಮ್ಮೆ ಒಂದೇ ಹೂ ಸಹ ನಮ್ಮನ್ನು ಹೀಗೆ ಸೆಳೆಯಬಹುದು. ಉದಾಹರಣೆಗೆ ʻವರ್ಡ್ಸ್‌ ವರ್ತ್‌ ಡ್ಯಾಫೋಡಿಲ್ಸ್‌ ಪದ್ಯದಲ್ಲಿ Ten thousand saw I at a glance ಸಾಲು ಬರೆಯುವಾಗ… ಅವನು 10,000 ಡ್ಯಾಫೋಡಿಲ್ಸ್‌ ಹೂಗಳನ್ನು ನೋಡಿ ಲೆಕ್ಕ ಮಾಡಿರಲ್ಲ, ಅದೊಂದು ಮಾತಷ್ಟೇ! ಹಾಗೆ ಒಂದೇ ಒಂದು ಹೂವು ಸಹ ನಮಗೆ ಸಾವಿರಾರು ಹೂಗಳ ಅನುಭವ ಕೊಡಬಹುದು!

    ನಮ್ಮ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಎಪ್ರಿಲ್‌, ಮೇ ತಿಂಗಳ ಅವಧಿಯಲ್ಲಿ ಅದೆಷ್ಟು ರಾಶಿ ರಾಶಿ ಮೇ ಫ್ಲವರ್‌ ಅರಳಿ ನಿಂತಿರುತ್ತವೆ ಅಂದ್ರೆ, ಈ ಹೂಗಳ ಲೋಕದಲ್ಲಿ ಕಳೆದು ಹೋಗದವರಿಲ್ಲ. ಅಂತಹ ಒಂದು ಅನುಭವ ಅಲ್ಲಿ ಪಡೆದಿದ್ದೇನೆ. ಕೆಂಪು ಹಳದಿಯ ಆ ಹೂಗಳು ಕನ್ನಡದ ಭಾವುಟ ನೆಟ್ಟಂತೆ ವಿಶೇಷವಾದ ಅನುಭವಕ್ಕೆ ನಮ್ಮನ್ನು ತೆರೆದಿಡುತ್ತವೆ. ನಮ್ಮಲ್ಲಿಯ ಅನೇಕ ನೋವುಗಳಿಗೆ ಗಂಧವನ್ನು, ನಗುವನ್ನು ಲೇಪಿಸಿ, ಹೊಸಬರನ್ನಾಗಿ ಮಾಡಿ ಕಳಿಸುವ ಈ ಹೂಗಳಿಗೆ ನಾನಂತೂ ಥ್ಯಾಂಕ್ಸ್‌ ಹೇಳ್ತೇನೆ!

    ನನ್ನ ಸ್ನೇಹಿತೆ ಒಬ್ಬಳು ಹೇಳ್ತಿದ್ರು, ಪ್ರವಾಸಿಗರ ಕಿರಿಕಿರಿ ಇಲ್ಲದೇ ಇದ್ದಾಗ 12 ವರ್ಷಕ್ಕೊಮ್ಮೆ ಚಿಕ್ಕಮಗಳೂರಲ್ಲಿ ಅರಳುವ ಕುರಂಜಿ (Neelakurinji) ಹೂ ನೋಡೋಕೆ ಹೋಗ್ಬೇಕು… ಅದೆಷ್ಟು ಮಜಾ ಕೊಡುತ್ತೆ ಗೊತ್ತಾ ಅಂತ! ಹೌದು ಇಂತಹ ಜಾಗಗಳಿಗೆ ಒಬ್ಬಂಟಿಯಾಗೇ ಹೋಗ್ಬೇಕು! ಆಗಷ್ಟೇ ಹೂವುಗಳು ನಮ್ಮ ಬಳಿ ಮಾತಾಡ್ತವೆ! ಇನ್ನೂ ಸಸ್ಯ ವಿಜ್ಞಾನದಲ್ಲಿ ಕುರುಂಜಿಗೆ ‘ಸ್ಟ್ರೋಬಿಲಾಂಥಿಸ್’ ಎಂಬ ಹೆಸರು ಇದ್ದು, 70ಕ್ಕೂ ಹೆಚ್ಚು ಪ್ರಬೇಧಗಳು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತವೆ.

    ನೀವು ಈ ನಗುವನ್ನು ನೋಡಲು ವಿಶೇಷವಾದ ಶಕ್ತಿ ಬೇಕು..! ಆ ಶಕ್ತಿ ಕಣ್ಣಿಗೆ ಬರಬೇಕಾದರೆ ಅದಕ್ಕೊಂದು ಆಧ್ಯಾತ್ಮದ ಪ್ರೇಮವೇ ಘಟಿಸಬೇಕು! ಆಗಾಧವಾದ ಪ್ರೇಮದಿಂದ ಕಣ್ಣುಗಳನ್ನು ತೆರೆಯಬೇಕು, ಆಗಷ್ಟೇ ನಮಗೆ ನಮ್ಮಿಷ್ಟದ ವಿಶೇಷ ಸಂಗತಿಗಳು ಕಾಣ ಸಿಗುತ್ತವೆ. ಕೈಗೆ ಎಟುಕುತ್ತವೆ. ನಮ್ಮನ್ನು ಯಾವುದೋ ಆನಂದ ಬಿಂದುವಿನ ಮಧ್ಯದಲ್ಲಿ ತಂದು ನಿಲ್ಲಿಸುತ್ತದೆ. ಅಂತಹ ದಿವ್ಯವಾದ ಧ್ಯಾನದ ಕಣ್ಣನ್ನು ತೆರೆದುಕೊಳ್ಳುವ ಮಾರ್ಗವನ್ನು ಕಂಡುಕೊಳ್ಳುವ ಯತ್ನ ಮಾಡಬೇಕು. ಇನ್ನೂ ಕೆಲವರಿಗೆ ಅದು ದೈವ ಕೃಪೆ.

    ಹಾಗೆಯೇ ಈ ಗಿಡಗಳು, ಹೂಗಳು, ಹರಿವ ನದಿಗಳು, ಎಲ್ಲೋ ಹಾಡುವ ಹಕ್ಕಿಗಳಲ್ಲಿ ಅಂತಹ ದೈವಿಕ ಅಂಶಗಳನ್ನು ಹೆಕ್ಕಲು ಸಾಧ್ಯವಾಗುತ್ತದೆ. ಅದನ್ನೇ ಬಹುಶಃ ರಾಲ್ಫ್ ವಾಲ್ಡೋ ಎಮರ್ಸನ್ ಅನುಭವಿಸಿದ್ದಾನೆ. ಅಂತಹ ಅನುಭವವನ್ನು ನಾನು ಪಡೆದಿದ್ದೇನೆ ಎಂಬ ಹೆಮ್ಮೆಯೊಂದು ನನ್ನ ಹೆಗಲ ಮೇಲೆ ಕೂತಿದೆ! ಹಾಗೆ ಮನೆಗೆ ನಡೆದುಕೊಂಡು ಹೋದವನಿಗೆ ಹೂಗಳ ನಗುವಿನ ನೆರಳಲ್ಲಿ ಬಿಸಿಲ ಝಳದ ಅರಿವೇ ಆಗಲಿಲ್ಲ.

    ಹೂಗಳು ಮಾತಾಡುತ್ತವೆ, ನಗುತ್ತವೆ… ಭೂಮಿಯ ಗಂಧವನ್ನೆಲ್ಲ ಹೊದ್ದು, ನಮ್ಮ ಆತ್ಮಕ್ಕೆ ಸಂತೃಪ್ತಿಯನ್ನೀಯಲು?! ಆ ದಿವ್ಯ ಅನುಭವ ನಿಮಗೂ ಸಿಗಲಿ ಎಂಬುದೇ ನನ್ನ ಆಶಯ.                                                                                                                                – ಗೋಪಾಲಕೃಷ್ಣ

  • ಕೋಲಾರ| ನಿರಂತರ ಮಳೆ- ಲಾಭದ ನಿರೀಕ್ಷೆಯಲ್ಲಿದ್ದ ಹೂವಿನ ಬೆಳೆಗಾರರು ಕಂಗಾಲು

    ಕೋಲಾರ| ನಿರಂತರ ಮಳೆ- ಲಾಭದ ನಿರೀಕ್ಷೆಯಲ್ಲಿದ್ದ ಹೂವಿನ ಬೆಳೆಗಾರರು ಕಂಗಾಲು

    ಕೋಲಾರ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯ (Rain) ಪರಿಣಾಮ ಸಾಕಷ್ಟು ಅನಾಹುತಗಳು ಸೃಷ್ಟಿಯಾಗಿವೆ. ಅದರಲ್ಲೂ ರೈತರು ಬೆಳೆದ ಬೆಳೆಗಳು ಮಳೆಯ ಹೊಡೆತಕ್ಕೆ ಕೊಚ್ಚಿ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.

    ಕೋಲಾರ (Kolara) ತಾಲೂಕು ಹೊದಲವಾಡಿ ಗ್ರಾಮದಲ್ಲಿ ಹೂ ತೋಟಕ್ಕೆ ನಿರಂತರ ಮಳೆಯಿಂದ ನೀರಿನಲ್ಲಿ ನೆನೆದು ಹೂವಿನ ತೋಟ ಕೊಳೆಯಲು ಆರಂಭಿಸಿದೆ. ಪರಿಣಾಮ ದೀಪಾವಳಿವರೆಗೂ ಹೂವಿನ ಬೆಳೆ ಇರುತ್ತದೆ ಎಂದು ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದ ರೈತರಿಗೆ ಜಡಿ ಮಳೆ ತಣ್ಣೀರೆರಚಿದೆ. ಇದನ್ನೂ ಓದಿ: ಬಾಗಲಕೋಟೆ| ಮಳೆ ಅವಾಂತರಕ್ಕೆ ಕೊಳೆತು ಹೋಗುತ್ತಿದೆ ಈರುಳ್ಳಿ – ರೈತರ ಕಣ್ಣೀರು

    ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಚೆಂಡು ಹೂವು ತೋಟದಲ್ಲಿ ನೀರು ನಿಂತಿದ್ದು ಹೂವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಅದರಲ್ಲೂ ದೀಪಾವಳಿ ಹಬ್ಬದ ಹಿನ್ನೆಲೆ ಹೂವಿಗೆ ಒಳ್ಳೆಯ ಬೆಲೆ ಬರುತ್ತದೆ. ಹಬ್ಬಕ್ಕಾಗಿಯೇ ತೋಟಕ್ಕೆ ಗೊಬ್ಬರ ನೀರು ಹಾಕಿ ಔಷಧ ಹಾಕಿ ಚೆನ್ನಾಗಿ ತೋಟವನ್ನು ಬೆಳೆಸಿ, ಹಬ್ಬದ ಸಮಯಕ್ಕೆ ಒಂದಷ್ಟು ಆದಾಯ ಮಾಡಿಕೊಳ್ಳಬಹುದು ಎಂದುಕೊಂಡಿದ್ದ ಹೂವು ಬೆಳೆಗಾರ ವೇಣು ಅವರಿಗೆ ನಿರಾಸೆಯಾಗಿದೆ. ಇದನ್ನೂ ಓದಿ: ಸ್ನೇಹಿತನ ವಿರುದ್ಧ ಸೇಡು ತೀರಿಸಿಕೊಳ್ಳಲು 4 ವಿಮಾನಗಳಿಗೆ ಬಾಂಬ್ ಬೆದರಿಕೆ – ಮುಂಬೈನಲ್ಲಿ ಅಪ್ರಾಪ್ತ ಅರೆಸ್ಟ್‌

    ಕಳೆದ ನವರಾತ್ರಿ ಹಬ್ಬದಲ್ಲಿ ಒಂದಷ್ಟು ಆದಾಯ ಬಂದಿದೆ. ಆದರೆ ದೀಪಾವಳಿ ಹಬ್ಬಕ್ಕೆ ಒಳ್ಳೆಯ ಬೆಲೆ ಬರುತ್ತದೆ ಆಗ ಹಾಕಿದ ಬಂಡವಾಳಕ್ಕೆ ಒಂದಷ್ಟು ಲಾಭ ಬರುತ್ತದೆ ಅನ್ನೋ ನಿರೀಕ್ಷೆಯಲ್ಲಿದ್ದ ವೇಣು ಅವರಿಗೆ ನಿರಂತರ ಸೈಕ್ಲೋನ್ ಮಳೆ ನಿರಾಸೆ ಉಂಟು ಮಾಡಿದೆ. ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೂವಿನ ಗಿಡಗಳು ಕೊಳೆಯಲು ಆರಂಭಿಸಿದೆ. ಅಲ್ಲದೆ ಮೊಗ್ಗಿಗೆ ರೋಗ ಬಾಧೆ ಶುರುವಾಗಿದೆ. ಇನ್ನೆರಡು ದಿನ ಇದೇ ರೀತಿ ಮಳೆ ಬಂದರೆ ಬೆಳೆ ಸಂಪೂರ್ಣ ಹಾಳಾಗುತ್ತದೆ ಅನ್ನೋದು ರೈತರ ಮಾತು. ಇದನ್ನೂ ಓದಿ: ಬೆಂಗಳೂರು, ದೆಹಲಿಗೆ ಹೊರಟಿದ್ದ 2 ವಿಮಾನಗಳಿಗೆ ಬಾಂಬ್‌ ಬೆದರಿಕೆ – 3 ದಿನಗಳಲ್ಲಿ 12 ಕೇಸ್‌

  • Shivaratri Speical – ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ? – ಏನಿದು ಪುರಾಣ ಕಥೆ?

    Shivaratri Speical – ಶಿವರಾತ್ರಿ ದಿನ ಕೇದಗೆ ಹೂ ಬಳಸಲ್ಲ ಯಾಕೆ? – ಏನಿದು ಪುರಾಣ ಕಥೆ?

    ಶಿವರಾತ್ರಿ (Shivratri) ದಿನ ಹೂವುಗಳಿಗೆ ಬಹಳ ಬೇಡಿಕೆ ಇರುತ್ತದೆ. ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಹೂವಿನಿಂದ (Flowers) ಶಿವನನ್ನು (Shiva) ಅಲಂಕರಿಸಲಾಗುತ್ತದೆ. ಆದರೆ ಹೂವಿನ ಅಲಂಕಾರ ಸೇವೆಯಲ್ಲಿ ಕೇದಗೆ ಹೂವಿಗೆ (Kedige Flower) ಅವಕಾಶವಿಲ್ಲ

    ಹೌದು. ಶಿವರಾತ್ರಿ ದಿನ ಕೇದಗೆ ಹೂವಿನ ಬಳಕೆಗೆ ನಿಷೇಧವಿದೆ. ನಿಷೇಧ ಯಾಕೆಂದರೆ ಅದಕ್ಕೂ ಒಂದು ಪುರಾಣ ಕಥೆಯಿದೆ.

    ಕಥೆ ಏನು?
    ಒಂದು ದಿನ ಕ್ಷೀರಸಾಗರದಲ್ಲಿ ಲಕ್ಷ್ಮಿಯಿಂದ ವಿಷ್ಣು (Vishnu) ಕಾಲನ್ನು ಒತ್ತಿಸಿಕೊಳ್ಳುತ್ತಿದ್ದ. ಈ ಸಮಯದಲ್ಲಿ ಬ್ರಹ್ಮ (Brahma) ಆಕಸ್ಮಿಕವಾಗಿ ಅಲ್ಲಿಗೆ ಆಗಮಿಸಿದ. ಸೃಷ್ಟಿಕರ್ತನಾದ ನಾನು ಬಂದರೂ ಸ್ವಾಗತ, ಗೌರವ ನೀಡದ್ದಕ್ಕೆ ಬ್ರಹ್ಮನಿಗೆ ಸಿಟ್ಟು ಬಂದು ಆಕ್ಷೇಪಿಸಿದ. ಇದಕ್ಕೆ ವಿಷ್ಣು ನನ್ನ ಹೊಕ್ಕುಳದಿಂದಲೇ ಹುಟ್ಟಿದ ನಿನಗೆ ಯಾಕೆ ನಾನು ಗೌರವ ಕೊಡಬೇಕು ಎಂದು ಮರು ಪ್ರಶ್ನೆಹಾಕಿದ.

    ಆರಂಭದಲ್ಲಿ ತೆಗಳಿಕೆಯಿಂದ ಆರಂಭವಾದ ಮಾತು ನಂತರ ನಮ್ಮಿಬ್ಬರಲ್ಲಿ ಯಾರು ಶ್ರೇಷ್ಠ ಎಂಬ ವಿಚಾರಕ್ಕೆ ತಿರುಗಿತು. ಸೃಷ್ಟಿ ಮತ್ತು ಸ್ಥಿತಿಯ ಜವಾಬ್ದಾರಿ ಹೊತ್ತ ಇಬ್ಬರು ನಿರಂತರವಾಗಿ ವಾದ ಮಾಡುತ್ತಿದ್ದರೆ ವ್ಯವಸ್ಥೆ ಅಸ್ತವ್ಯಸ್ತವಾಗಬಹುದು ಎಂಬದುನ್ನು ಅರಿತ ದೇವತೆಗಳು ಇಬ್ಬರನ್ನೂ ಸಮಾಧಾನ ಮಾಡಲು ಮುಂದಾಗುತ್ತಾರೆ.  ಇದನ್ನೂ ಓದಿ: Shivaratri Speical: ಶಿವಭಕ್ತಿಗೆ ಒಲಿದ ಆಸ್ಟ್ರೇಲಿಯಾ – ಮುಕ್ತಿ ಗುಹೇಶ್ವರ ದೇವಾಲಯದಲ್ಲಿ ಹಲವು ವಿಶೇಷ!

    ದೇವತೆಗಳ ಸಮಾಧಾನಕ್ಕೆ ಇಬ್ಬರು ಬಗ್ಗದೇ ವಾಗ್ವಾದ ಮುಂದುವರಿಸುತ್ತಲೇ ಇದ್ದರು. ಕೊನೆಗೆ ಇವರಿಬ್ಬರ ಮಧ್ಯೆ ನಡೆಯುತ್ತಿರುವ ವಾದವನ್ನು ನಿಲ್ಲಿಸುವ ಏಕೈಕ ಶಕ್ತಿ ಇರುವುದು ಶಿವನಿಗೆ ಮಾತ್ರ ಎಂದು ಭಾವಿಸಿ ದೇವತೆಗಳು ಲಯ ಕರ್ತೃನ ಮುಂದೆ ಹೋಗಿ ಮೊರೆ ಇಡುತ್ತಾರೆ.

    ದೇವತೆಗಳ ಪ್ರಾರ್ಥನೆಯನ್ನು ಒಪ್ಪಿಕೊಂಡರೂ ಇಬ್ಬರ ಜಗಳ ನಿಲ್ಲಿಸುವುದು ಹೇಗೆ ಎಂದು ಶಿವ ಆಲೋಚಿಸತೊಡಗಿದ. ಕೊನೆಗೆ ವಿಷ್ಣು ಮತ್ತು ಬ್ರಹ್ಮನ ಮಧ್ಯೆ ಕಣ್ಣುಕೋರೈಸುವ ಜ್ಯೋತಿಸ್ತಂಭವಾಗಿ ನಿಂತುಬಿಟ್ಟ. ನಂತರ ಇಬ್ಬರನ್ನು ಉದ್ದೇಶಿಸಿ, ನೀವಿಬ್ಬರೂ ವಾದ ಮಾಡುತ್ತಲೇ ಇದ್ದರೆ ಯಾರು ಶ್ರೇಷ್ಠ ಎನ್ನುವುದು ತಿಳಿಯಲು ಸಾಧ್ಯವಿಲ್ಲ. ಮೂರನೇ ವ್ಯಕ್ತಿ ಮಾತ್ರ ತೀರ್ಪು ನೀಡಲು ಸಾಧ್ಯ. ಹೀಗಾಗಿ ನಿಮಗೆ ನಾನೊಂದು ಪರೀಕ್ಷೆ ಕೊಡುತ್ತೇನೆ. ಈ ಪರೀಕ್ಷೆಯಲ್ಲಿ ಯಾರು ಯಶಸ್ವಿಯಾಗುತ್ತಾರೋ ಅವರು ಶ್ರೇಷ್ಠ ಎಂದು ಹೇಳುತ್ತಾನೆ. ಈ ಪರೀಕ್ಷೆಯನ್ನು ಸ್ವೀಕರಿಸುವುದಾಗಿ ಇಬ್ಬರು ಒಪ್ಪಿಕೊಳ್ಳುತ್ತಾರೆ. ಇದನ್ನೂ ಓದಿ: ಮಹಾಶಿವರಾತ್ರಿಯಲ್ಲಿ ಜಾಗರಣೆಗಿರುವ ಮಹತ್ವವೇನು?

    ಈಗಲೇ ನೀವಿಬ್ಬರೂ ಈ ಕಂಬದ ತುದಿಗಳು ಎಲ್ಲಿದೆ ಎಂದು ಪತ್ತೆ ಹಚ್ಚಿಕೊಂಡು ಬನ್ನಿ. ಯಾರು ಮೊದಲು ಪತ್ತೆ ಮಾಡುತ್ತಾರೋ ಅವರೇ ಶ್ರೇಷ್ಠರು ಎಂದು ಶಿವ ಹೇಳುತ್ತಾನೆ. ಕೂಡಲೇ ಬ್ರಹ್ಮ ಹಂಸರೂಪವನ್ನು ಧರಿಸಿ ಕಂಬದ ಮೇಲ್ತುದಿಯನ್ನು ಹುಡುಕಲು ಹೊರಟರೆ ವಿಷ್ಣು ಹಂದಿಯ ರೂಪ ಧರಿಸಿ ಕೆಳಭಾಗವನ್ನು ತಲುಪಲು ಹೋಗುತ್ತಾನೆ. ಬಹಳ ದೂರದವರೆಗೂ ಹೋದರೂ ತುದಿ ಸಿಗದ ಕಾರಣ ವಿಷ್ಣು ಮರಳಿ ಬರುತ್ತಾನೆ.

    ಬ್ರಹ್ಮ ಮೇಲಕ್ಕೆ ಹೋಗುತ್ತಿದ್ದಂತೆ ಗಾಳಿಯಲ್ಲಿ ಹಾರಿಕೊಂಡು ಒಂದು ಕೇದಗೆ ಹೂ ಬರುತ್ತಿರುತ್ತದೆ. ಈ ವೇಳೆ, ನೀನು ಎಲ್ಲಿಂದ ಬಂದೆ ಎಂದು ಬ್ರಹ್ಮ ಕೇಳಿದಾಗ ನಾನು ಶಿವನ ತುತ್ತ ತುದಿಯಿಂದ ಜಾರಿ ಬೀಳುತ್ತಿದ್ದೇನೆ ಎಂದು ಹೇಳಿತು. ಬ್ರಹ್ಮನಿಗೆ ಸಂತೋಷವಾಗಿ ಕೇದಗೆ ಹೂವನ್ನು ಹಿಡಿದುಕೊಂಡು ಶಿವನಿದ್ದಲ್ಲಿಗೆ ಮರಳಿದ. ಗೆಲುವಿನ ಹುಮ್ಮಸ್ಸಿನಲ್ಲಿ ಬ್ರಹ್ಮ, ನಾನು ಮೇಲ್ತುದಿಯನ್ನು ನೋಡಿದ್ದೇನೆ. ಇದಕ್ಕೆ ಈ ಕೇದಗೆ ಹೂವೇ ಸಾಕ್ಷಿ ಎಂದ.

    ಸುಳ್ಳು ಹೇಳಿದ್ದನ್ನು ಕಂಡು ಸಿಟ್ಟಾದ ಶಿವ, ಇನ್ನು ಮುಂದೆ ನಿನ್ನನ್ನು ಯಾರೂ ಪೂಜೆಸಬಾರದು ಎಂದು ಬ್ರಹ್ಮನಿಗೆ ಶಾಪ ನೀಡಿದ. ಜೊತೆಗೆ ಸುಳ್ಳು ಸಾಕ್ಷಿ ಹೇಳಿದ್ದಕ್ಕೆ ಯಾರದೇ ಪೂಜೆಯಲ್ಲೂ ನಿನ್ನನ್ನು ಸೇರಿಸಬಾರದು ಎಂಬುದಾಗಿ ಶಪಿಸಿದ. ತನ್ನ ತಪ್ಪಿನ ಅರಿವಾದಂತೆ ಕೇದಗೆ ಅಂಗಲಾಚಿ ಬೇಡಿದ್ದರಿಂದ ಶಿವ, ನನ್ನ ಪೂಜೆಗೆ ನೀನು ಅರ್ಹನಲ್ಲ. ಆದರೆ ನನ್ನ ಆಭರಣ ಸರ್ಪರಾಜ ವಾಸುಕಿಯ ಪೂಜೆ ಅಂದರೆ ನಾಗನ ಪೂಜೆ ನೀನು ಅರ್ಹ ಎಂದು ಹೇಳಿ ಶಾಪದ ತೀವ್ರತೆಯನ್ನು ತಗ್ಗಿಸಿದ.

    ಈ ಕಥೆಯಂತೆ ದೇಶದೆಲ್ಲೆಡೆ ತ್ರಿಮೂರ್ತಿಗಳ ಪೈಕಿ ಶಿವ ಮತ್ತು ವಿಷ್ಣುವಿಗೆ ದೇವಸ್ಥಾನವಿದೆ ಬ್ರಹ್ಮನಿಗೆ ಇಲ್ಲ. ಇದರೊಂದಿಗೆ ನಾಗರ ಪಂಚಮಿಯಂದು ಕೇದಗೆ ಬಹಳ ಮುಖ್ಯ. ಬಹಳಷ್ಟು ಕಡೆ ಪ್ರಸಾದ ರೂಪದಲ್ಲಿ ಕೇದಗೆಯನ್ನೇ ನೀಡಲಾಗುತ್ತದೆ.

     

  • ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ

    ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ

    – ಆಯುಧ ಪೂಜೆಗೆ ಖರೀದಿ ಭರಾಟೆ..!

    ಬೆಂಗಳೂರು: ನಾಡಿನಾದ್ಯಂತ ಆಯುಧ ಪೂಜೆ ಹಾಗೂ ವಿಜಯದಶಮಿ (Vijaya  Dashami) ಸಂಭ್ರಮ ಮನೆ ಮಾಡಿದೆ. ಇಂದು ಆಯುಧ ಪೂಜೆ (Ayudha Pooje) ಹಿನ್ನೆಲೆ ಹೂವು-ಹಣ್ಣುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ನಗರದ ಕೆ.ಆರ್.ಮಾರ್ಕೆಟ್, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಮಡಿವಾಳ ಮಾರ್ಕೆಟ್‍ಗಳಲ್ಲಿ ಜನಸ್ತೋಮವೇ ತುಂಬಿ ತುಳುಕುತ್ತಿದೆ.

    ಹೌದು, ಬೆಲೆ ಏರಿಕೆ ನಡುವೆಯೂ ಕೆ.ಆರ್ ಮಾರ್ಕೆಟ್‍ನಲ್ಲಿ (KR Market) ಹೂ, ಹಣ್ಣು, ತರಕಾರಿ ಖರೀದಿಗೆ ಜನಸಾಗರವೇ ಹರಿದುಬಂದಿದೆ. ಆಯುಧ ಪೂಜೆಗೆ ಬೂದುಕುಂಬಳಕಾಯಿ ಹಾಗೂ ಬಾಳೆ ಕಂಬಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಹಬ್ಬದ ಸಂಭ್ರಮದಲ್ಲಿ ಇರುವವರಿಗೆ ಹೂ-ಹಣ್ಣಿನ ದರ ಏರಿಕೆ ಬಿಸಿ ತಟ್ಟಿದೆ. ಕಳೆದ ವಾರಕ್ಕೆ ಹೋಲಿಕೆ ಮಾಡಿದ್ರೆ ಹೂ ಹಣ್ಣುಗಳ ದರ ಡಬಲ್ ಏರಿಕೆಯಾಗಿದೆ. ಇದನ್ನೂ ಓದಿ: ನವರಾತ್ರಿ ಹಬ್ಬ – ಆಯುಧ ಪೂಜೆ ಮಾಡೋದು ಯಾಕೆ? ಪುರಾಣ ಕಥೆ ಏನು?

    ಹೂವಿನ ದರ..!
    ಮಲ್ಲಿಗೆ- 1,200 ರೂ.
    ಸೇವಂತಿಗೆ- 300 ರೂ.
    ಗುಲಾಬಿ- 200 ರೂ.
    ಕನಕಾಂಬರ- 1,300 ರೂ.
    ಮಳ್ಳೆ ಹೂವು- 1000 ರೂ.

    ಹಣ್ಣುಗಳ ದರವೂ ದುಬಾರಿ..!
    ಏಲಕ್ಕಿ ಬಾಳೆಹಣ್ಣು- 100 ರೂ.
    ಅನಾನಸ್- 70 ರೂ.
    ದಾಳಿಂಬೆ- 150 ರೂ.
    ಸೇಬು- 180 ರೂ.

    ಒಟ್ಟಿನಲ್ಲಿ ಈ ಬಾರಿ ದಸರ ಹಬ್ಬಕ್ಕೆ ಕೊಂಚ ಬೆಲೆ ಏರಿಕೆಯಾಗಿದ್ದರೂ ಸಹ ಜನರೆಲ್ಲರೂ ನಾಡಿನ ಹಬ್ಬದ ಆಚರಣೆ ಸಂಭ್ರಮದಲ್ಲಿದ್ದಾರೆ. ಕೊಂಚ ಬೆಲೆ ಏರಿಕೆಗೆ ರೈತ ನಗು ಬಿರಿದ್ರೆ ಗ್ರಾಹಕರು ಉಸಿರು ಬಿಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೂ ದರ ಭಾರೀ ಇಳಿಕೆ – ಮಾರುಕಟ್ಟೆಯಲ್ಲೇ ಎಸೆದು ಹೋದ ರೈತರು

    ಹೂ ದರ ಭಾರೀ ಇಳಿಕೆ – ಮಾರುಕಟ್ಟೆಯಲ್ಲೇ ಎಸೆದು ಹೋದ ರೈತರು

    ಚಿಕ್ಕಬಳ್ಳಾಪುರ: ರಾಜ್ಯದ ಬಹುತೇಕ ಕಡೆ ಬರದ ವಾತಾವರಣ, ಬರದ ನಡುವೆಯೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ಹಗಲು ರಾತ್ರಿ ಎನ್ನದೇ  ಪಾತಾಳದಿಂದ ಅಂರ್ತಜಲ ಬಗೆದು ಹನಿ ಹನಿ ನೀರುಣಿಸಿ ಬಂಗಾರದಂತಹ ಹೂಗಳನ್ನ ಬೆಳೆದಿದ್ದಾರೆ. ಆದರೆ ಬರದ ನಡುವೆ ಕಳೆದ ಮೂರು ದಿನಗಳಿಂದ ಬಂದ ಮಳೆ (Rain) ಈಗ ಆ ಜಿಲ್ಲೆಯ ಹೂ ಬೆಳೆಗಾರರಿಗೆ (Flower Growers) ಬರೆ ಹಾಕುವಂತೆ ಮಾಡಿದೆ.

    ರಾಶಿ ರಾಶಿ ಹೂ ಬಿಕರಿಯಾಗದೇ ರೈತರು ಸುಖಾಸುಮ್ಮನೆ ಬಿಸಾಡಿ ಹೋಗುವಂತಹ ಘಟನೆ ಚಿಕ್ಕಬಳ್ಳಾಪುರ (Chikkballapura) ಹೂವಿನ ಮಾರುಕಟ್ಟೆಯಲ್ಲಿ (Flower Market) ನಡೆದಿದೆ. ಹೂವಿನ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಹೂ ಮಾರಾಟ ಮಾಡಲು ಮಾರುಕಟ್ಟೆಗೆ ಹೂ ತಂದ ರೈತರು ಹೂ ಕೇಳುವವರಿಲ್ಲದೇ, ಖರೀದಿ ಮಾಡುವವರಿಲ್ಲದೇ  ಎಸೆದು ಹೋಗಿದ್ದಾರೆ.

    ಕಳೆದ 1 ತಿಂಗಳು ಸೇರಿದಂತೆ ಅದರಲ್ಲೂ ವರಮಹಾಲಕ್ಷ್ಮೀ ಹಬ್ಬಕ್ಕೆ ಭಾರೀ ಏರಿಕೆ ಕಂಡಿದ್ದ ಹೂವಿನ ದರ ಈಗ ಪಾತಾಳಕ್ಕೆ ಕುಸಿದಿದೆ. ವರಮಹಾಲಕ್ಷ್ಮೀ ಹಬ್ಬದಂದು 1 ಕೆಜಿ ಚೆಂಡು ಹೂ 40 ರಿಂದ 70 ರೂ.ಗೆ ಮಾರಾಟವಾಗಿತ್ತು. ಆದರೆ ಈಗ ಚೆಂಡು ಹೂ ಖರೀದಿ ಮಾಡುವವರೇ ಇಲ್ಲ. ಈಗ 1 ಕೆಜಿ ಚೆಂಡು ಹೂ 1 ರೂ., 2 ರೂ.ಗೆ ಮಾರಾಟವಾಗುತ್ತಿದೆ. ಹೀಗಾಗಿ ರೈತರು ಮಾರಾಟಕ್ಕೆ ತಂದಿದ್ದ ಹೂವನ್ನ ಮಾರುಕಟ್ಟೆಯಲ್ಲೇ  ಬಿಸಾಡಿ ಹೋಗುತ್ತಿದ್ದಾರೆ. ಇದನ್ನೂ ಓದಿ: ಹಿಂದೂ ಸಮಾಜದ ಅನಿಷ್ಟಗಳಿಗೆ ಮುಸ್ಲಿಮರ ಆಕ್ರಮಣವೇ ಕಾರಣ: ಆರ್‌ಎಸ್ಎಸ್‌ ಮುಖಂಡ ಕೃಷ್ಣ ಗೋಪಾಲ್

    ವರಮಹಾಲಕ್ಷ್ಮೀ (Varamahalakshmi) ಹಬ್ಬದ ಸಮಯದಲ್ಲಿ ಸೇವಂತಿಗೆ 300 ರಿಂದ 600 ರೂಪಾಯಿಗೂ ಮಾರಾಟವಾಗಿತ್ತು. ಈಗ 5 ರೂ. 10 ರೂ.ಗೆ ಇಳಿದಿದೆ. ಮಳೆಯಿಂದ ನೆನೆದು ಹೋದ ಒದ್ದೆಯಾದ ಹೂಗಳನ್ನ ಖರೀದಿ ಮಾಡುವವರೇ ಇಲ್ಲ. ಹೀಗಾಗಿ ಸೇವಂತಿಗೆ ಹೂಗಳನ್ನ ಸಹ ರೈತರು ಎಲ್ಲಂದರಲ್ಲಿ ಎಸೆಯುತ್ತಿದ್ದಾರೆ.

    ಮತ್ತೊಂದೆಡೆ 150 ರೂಪಾಯಿಯಿಂದ 250 ರೂಪಾಯಿಗೆ ಮಾರಾಟವಾಗುತ್ತಿದ್ದ ಗುಲಾಬಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು 10 ರಿಂದ 20 ರೂಪಾಯಿಗೆ ಮಾರಾಟವಾಗುತ್ತಿದೆ. ಮಳೆಯಿಲ್ಲದೆ ಈಗ ಧಿಡೀರ್ ಮಳೆ ಬಂದ ಕಾರಣ ಹೂಗಳ ಇಳುವರಿಯಲ್ಲಿ ಹೆಚ್ಚಳವಾಗಿ ಹೂ ಬೆಲೆ ಕುಸಿದಿದೆ ಎನ್ನುತ್ತಾರೆ ವರ್ತಕರು.

    ಒಟ್ಟಿನಲ್ಲಿ ಹೂ ಮಾರಾಟ ಮಾಡಲು ಮಾರುಕಟ್ಟೆಗೆ ಹೂ ತಂದ ರೈತರು ಬೆಲೆ ಕುಸಿತದಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಎಸೆದು ಬರಿಗೈಯಲ್ಲೇ ಮನೆಗೆ ಹೋಗುವಂತಾಗಿದೆ. ಒಂದು ಕಡೆ ಮಳೆ ಬಂದರೂ ಕಷ್ಟ. ಮಳೆ ಬರದಿದ್ದರೂ ಕಷ್ಟ ಎನ್ನುವಂತೆ ರೈತರಿಗೆ ನಷ್ಟ ಎಂಬಂತಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!

    ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!

    – ಮಳೆ ಕೊರತೆಯಿಂದ ಹೂಗಳ ಕೊರತೆ, ಬೆಲೆ ದುಬಾರಿ
    – ಹೂ ಖರೀದಿಗೆ ಹೋದ್ರೆ ಚುಚ್ಚುತ್ತೆ ದುಬಾರಿ ಮುಳ್ಳು

    ಬೆಂಗಳೂರು: ಕಳೆದ ಕೆಲ ದಿನಗಳಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ತರಕಾರಿ ಬೆಲೆ, ಬೇಳೆಕಾಳಿನ ಬೆಲೆ ನಂತರ ಇದೀಗ ಹೂವುಗಳ (Flower) ಸರದಿ ಶುರುವಾಗಿದೆ. ಹೂಗಳ ಬೆಲೆ ದುಬಾರಿಯಾಗಿದ್ದು (Flower Price Hike), ಹೂಗಳನ್ನು ಕೊಳ್ಳಂಗಿಲ್ಲ.. ಮುಡಿಯೋ ಹಾಗಿಲ್ಲ.. ಅನ್ನುವಂತಾಗಿದೆ.

    ಈ ಬಾರಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಮುಂಗಾರು ಕೈಕೊಟ್ಟಿದ್ದು, ಮಳೆಯಿಂದಾಗಿ ತರಕಾರಿಗಳ ಬೆಲೆಗಳು ದುಬಾರಿಯಾಗಿವೆ. ಈ ಬೆನ್ನಲ್ಲೇ ಹೂಗಳ ಬೆಲೆ ಗಗನಕ್ಕೇರುತ್ತಿದೆ. ಮುಂಗಾರು ಮಳೆ (Rain) ಕೊರತೆಯಿಂದ ಹೂವಿನ ಫಸಲಿನಲ್ಲಿ ಗಣನೀಯ ಇಳಿಕೆ ಕಂಡುಬರುತ್ತಿದೆ. ಹೀಗಾಗಿ ಹೂಗಳ ದರವೂ ಏರಿಕೆಯಾಗಿದ್ದು. ಮಾರ್ಕೆಟ್‌ನಲ್ಲಿಯೂ ಹೂವುಗಳು ಸಿಗುತ್ತಿಲ್ಲ. ಸಾಮಾನ್ಯವಾಗಿ ಆಷಾಢದಲ್ಲಿ ಶುಭ ಸಮಾರಂಭಗಳು ಕಡಿಮೆ ಇರೋದ್ರಿಂದ ಹೂಗಳು ಕಡಿಮೆ ಬೆಲೆಯಲ್ಲಿ ಸಿಗುತ್ತಿತ್ತು. ಆದ್ರೆ ಈ ಬಾರಿ ಮಳೆಯಿಂದಾಗಿ ಹೂಗಳ ಬೆಲೆ ಡಬಲ್ ಆಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಮಂಗಳೂರಿನ ಪಂಪ್‍ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!

    ಯಾವ ಹೂವಿನ ದರ ಎಷ್ಟು..? (ಪ್ರತಿ ಕೆಜಿಗಳಿಗೆ)
    ಸದ್ಯ ಮಾರುಕಟ್ಟೆಯಲ್ಲಿ ಮಲ್ಲಿಗೆ ಕೆ.ಜಿ 1,200 ರೂ., ಕನಕಾಂಬರಿ 2,000 ರೂ., ಸೇವಂತಿಗೆ 400 ರೂ., ಚೆಂಡು ಹೂವು, 200 ರೂ., ಸುಗಂಧರಾಜ 200 ರೂ., ಮಲ್ಲಿಗೆ ಹಾರ (ಒಂದು ಜೊತೆ) 800 ರೂ. ನಿಂದ 1,000 ರೂ.ಗಳಿಗೆ ಮಾರಾಟವಾಗ್ತಿದೆ. ಇದನ್ನೂ ಓದಿ: ಯಶವಂತಪುರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ನೂತನ ವಕ್ಫ್ ಭವನ – ಜಮೀರ್ ಅಹಮದ್

    ಒಂದೆಡೆ ಮಳೆ ಕೊರತೆ ಮತ್ತೊಂದೆಡೆ ಬಿಸಿಲ ತಾಪದಿಂದ ಹೂವಿನ ಫಸಲಿನಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಇದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ದಿನನಿತ್ಯದ ಪೂಜೆಗೂ ಹೂ ಕೊಳ್ಳಲು ಜನ ಹಿಂಜರಿಯುತ್ತಿದ್ದಾರೆ. ಮುಂದಿನ ತಿಂಗಳಿನಿಂದ ಸಾಲು ಹಬ್ಬಗಳು ಬರುವುದರಿಂದ ಮತ್ತಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಹೇಳುತ್ತಾರೆ ಗ್ರಾಹಕರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕವಿಯಾಗಿ ಹೂವು ಬಗ್ಗೆ ಕವಿತೆ ಬರೆದ ಮೋಹಕತಾರೆ ರಮ್ಯಾ

    ಕವಿಯಾಗಿ ಹೂವು ಬಗ್ಗೆ ಕವಿತೆ ಬರೆದ ಮೋಹಕತಾರೆ ರಮ್ಯಾ

    ಅಲ್ಲು ಇಲ್ಲು ಎಲ್ಲೆಲ್ಲೂ ರಮ್ಯಾ  (Ramya ) ಮಿಂಚ್ತಿದ್ದಾರೆ. ಅಂದವಾದ ಹೂವಿನ (Flower) ಜೊತೆ ಚಂದವಾದ ಹೀರೋಯಿನ್‌ನ ನೋಡಿದ ಫ್ಯಾನ್ಸ್ ಫುಲ್ ಖುಷಿಯಾಗಿದ್ದಾರೆ. ಹೂವು ಅರಳಿದೆ ರಮ್ಯಾ ಮೊಗದಲ್ಲಿ ಮಂದಹಾಸ ಮೂಡಿದೆ ಜೊತೆಗೆ ಈ ಚೆಲುವೆ ಪೋಣಿಸಿದ ಸಾಲುಗಳು (Poem) ಸಖತ್ ಸೌಂಡ್ ಮಾಡ್ತಿದೆ.

    ಮೋಹಕತಾರೆಯ ಹೊಸ ಅಪ್‌ಡೇಟ್ ನೊಡಿಕೊಂಡು ರಮ್ಯಾ ಬರೆದಿರುವ ಕವಿತೆಯ ಸಾರವನ್ನ ತಿಳಿದುಕೊಂಡು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಸುರಲೋಕದ ಸುಂದರಿಯನ್ನ ಯಾರೂ ನೋಡಿಲ್ಲ ಅವರು ಕಾಣಿಸ್ತಾರೋ ಇಲ್ವೋ ಗೊತ್ತಿಲ್ಲ. ಆದ್ರೆ ಸ್ಯಾಂಡಲ್‌ವುಡ್ ಸಿನಿಮಾ ಅಭಿಮಾನಿಗಳಿಗೆ ಮೋಹಕತಾರೆ ರಮ್ಯಾ ದೇವಲೋಕದ ಸುಂದರಿಯಂತೆ ಸೋಷಿಯಲ್ ಮೀಡಿಯಾದಲ್ಲಿ ದರ್ಶನ ಕೊಡ್ತಿರ್ತಾರೆ.

    ಸದ್ಯ ರಮ್ಯಾ ಜಾಲತಾಣದಲ್ಲಿ ಸಖತ್ ಸೌಂಡ್ ಮಾಡ್ತಿದ್ದಾರೆ. ಈ ಕ್ಯೂಟ್ ಫೋಟೋಸ್ ನೋಡಿ ರಮ್ಯಾ ಅಭಿಮಾನಿಗಳು ಲೈಕ್ಸ್, ಕಾಮೆಂಟ್‌ಗಳ ಸುರಿಮಳೆ ಸುರಿಸ್ತಿದ್ದಾರೆ. ಫೋಟೋದಲ್ಲಿ ನಗ್ತಿರುವ ರಮ್ಯಾ ಮಂದಹಾಸವನ್ನ ಮನದಲ್ಲಿ ತುಂಬಿಕೊಳ್ತಿದ್ದಾರೆ ಈಕೆಯ ಅಭಿಮಾನಿಗಳು.

    ರಮ್ಯಾ ಸದ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಗುಲಾಬಿ ಹೂವುಗಳ ಮುಂದೆ ನಿಂತು ಮುಗುಳು ನಗೆ ಕೊಟ್ಟಿದ್ದಾರೆ. ಈ ಸುಂದರಿಯ ಸ್ಮೈಲ್ ನೋಡಿ ಹೂವುಗಳು ಕೂಡ ಖುಷಿ ಪಟ್ಟಿದೆ ಅನ್ನೊದು ದೂರದಿಂದ ಬಂದ ಸಮಾಚಾರ. ಅಂದವಾದ ಫೋಟೋಗಳ ಜೊತೆ ಚಂದವಾದ ಸಾಲುಗಳನ್ನ ಕೂಡ ಪೋಣಿಸಿದ್ದಾರೆ ಮೋಹಕತಾರೆ.

     

    ನಿರ್ಮಾಪಕಿಯಾಗಿ ಹೊಸ ಅಧ್ಯಾಯ ಶುರು ಮಾಡಿರುವ ರಮ್ಯಾ ನಟಿಯಾಗಿ ಕೂಡ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಶೂಟಿಂಗ್ ಶುರು ಮಾಡುವ ಮೊದಲು ಒಂದು ವೆಕೇಷನ್‌ಗೆ ಹೋಗಿದ್ದಾರೆ ಅನ್ನೊದು ಮೂಲಗಳ ಮಾಹಿತಿ. ಹೂವು ಅಂದ… ರಮ್ಯಾ ನಗು ಚೆಂದ… ನಮ್ಗು ನಿಮ್ಗು ಇರಲಿ ಜನುಮ ಜನುಮಕ್ಕು ಅನುಬಂಧ ಅಂತಿದ್ದಾರೆ ಅಭಿಮಾನಿಗಳು.

  • ಕುಸಿದ ಬೆಲೆ- ರಸ್ತೆಗೆ ಹೂವು ಚೆಲ್ಲಿ ರೈತ ಕಣ್ಣೀರು

    ಕುಸಿದ ಬೆಲೆ- ರಸ್ತೆಗೆ ಹೂವು ಚೆಲ್ಲಿ ರೈತ ಕಣ್ಣೀರು

    ಕೋಲಾರ: ಸರಣಿ ಹಬ್ಬಗಳು ಮುಗಿಯುತ್ತಿದ್ದಂತೆ ಚೆಂಡು ಹೂವಿಗೆ ಬೆಲೆ ಇಲ್ಲದೆ ಹೂವು ಬೆಳೆಗಾರರು ಕಂಗಾಲಾಗಿದ್ದಾರೆ.

    ರೈತರು (Farmer) ಬೆಳೆದು ಹೂವಿಗೆ ಬೆಲೆ ಇಲ್ಲದ ಹಿನ್ನೆಲೆ ರೈತರು ಕಿತ್ತ ಹೂವನ್ನ ಕಣ್ಣಿರಾಕುತ್ತಾ ರಸ್ತೆಗೆ ಸುರಿಯುತ್ತಿದ್ದಾರೆ. ಕೋಲಾರ (Kolar) ನಗರದ ಹೊರವಲಯದ ಕೊಂಡರಾಜನಹಳ್ಳಿ ರಾಷ್ಟ್ರೀಯ ಹೆದ್ದಾರಿಯ ರಸ್ತೆಗೆ ಸುರಿದ ರೈತ ಕಣ್ಣಿರಾಕುತ್ತಿದ್ದಾನೆ. ಇದನ್ನೂ ಓದಿ: ವೇತನ ಸಮಸ್ಯೆ – 108 ಅಂಬುಲೆನ್ಸ್ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

    ಮಾರುಕಟ್ಟೆಯಲ್ಲಿ ಹೂವಿಗೆ ಬೆಲೆ ಇಲ್ಲದ ಕಾರಣ ಗದ್ದೆಕಣ್ಣೂರಿನ ರೈತರು ರಸ್ತೆಯಲ್ಲಿ ಸುರಿದಿದ್ದಾರೆ. ಅಲ್ಲದೆ ಹಾಕಿದ ಬಂಡವಾಳ ಸಹ ರೈತನಿಗೆ ಸಿಗುತ್ತಿಲ್ಲ, ಕೆಜಿ 2 ರಿಂದ 5 ರೂಪಾಯಿಗೆ ಮಾರಾಟವಾಗುತ್ತಿದೆ ಎಂದು ಕಣ್ಣೀರು ಹಾಕಿಕೊಂಡು ರಸ್ತೆಗೆ ಹೂವು ಸುರಿದ ಆಕ್ರೋಶ ಹೊರ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದಸರಾ, ಆಯುಧಪೂಜೆ – ಗಗನಕ್ಕೇರಿದ ಹೂ, ಅಗತ್ಯ ವಸ್ತುಗಳ ಬೆಲೆ

    ದಸರಾ, ಆಯುಧಪೂಜೆ – ಗಗನಕ್ಕೇರಿದ ಹೂ, ಅಗತ್ಯ ವಸ್ತುಗಳ ಬೆಲೆ

    ಬೆಂಗಳೂರು: ದಸರಾ (Dasara) ಮತ್ತು ಆಯುಧಪೂಜೆ (Ayudha Puja) ಹಿನ್ನೆಲೆ ನಗರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಹಿನ್ನೆಲೆ ನಾಳೆ ನಾಡಿದ್ದು ಇನ್ನಷ್ಟು ದರ ಏರಿಕೆ ಸಾಧ್ಯತೆ ಇದ್ದು, ಇಂದೇ ಜನ ಖರೀದಿಗೆ ಮುಂದಾಗಿದ್ದಾರೆ.

    ಹಬ್ಬದ ದಿನಗಳು ಹತ್ತಿರ ಬಂದರೆ ಸಾಕು ಜನಸಾಮಾನ್ಯರ ಜೇಬಿಗೆ ಹೊರೆ ಬೀಳುವುದು ಸಾಮಾನ್ಯ. ಕಾರಣ ಅಗತ್ಯ ವಸ್ತುಗಳ ಖರೀದಿ ಹೆಚ್ಚಾಗುವ ಕಾರಣ ಇತರೆ ದಿನಗಳಿಗೆ ಹೋಲಿಕೆ ಮಾಡಿದರೆ ಹಬ್ಬದ ದಿನಗಳಲ್ಲಿ ಬೆಲೆ ಹೆಚ್ಚಾಗುತ್ತಲೇ ಇರುತ್ತದೆ. ಅದರಂತೆ ಈ ಬಾರಿಯ ಆಯುಧಪೂಜೆ ದಸರಾಗೂ ದರ ಏರಿಕೆಯಾಗಿದ್ದು, ಹಬ್ಬಕ್ಕೆ ಎರಡು ದಿನ ಮುನ್ನವೆ ಖರೀದಿ ಕೂಡ ಜೋರಾಗಿದೆ. ಇದನ್ನೂ ಓದಿ : ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

    ಈ ಬಾರಿ ಆಯುಧಪೂಜೆಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದೆ. ಸಾಮಾನ್ಯವಾಗಿ ಆಯುಧಪೂಜೆ ಸಂದರ್ಭದಲ್ಲಿ ವಾಹನಗಳು, ಯಂತ್ರಗಳಿಗೆ ಹೂವಿನ ಅಲಂಕಾರದ ಜೊತೆಗೆ, ಪೂಜೆ ಪುನಾಸ್ಕಾರಗಳು ಜೋರಾಗಿಯೇ ಮಾಡುವುದರಿಂದ ಹೂ ಸೇರಿದಂತೆ ಕೆಲ ಅಗತ್ಯ ವಸ್ತುಗಳ ದರ ದುಪ್ಪಟ್ಟಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಹೂವಿನ ದರ ಡಬಲ್ ಏರಿಕೆಯಾಗಿದೆ. ಆದರೆ ವಿಶೇಷ ಅಂದರೆ ಹಣ್ಣು ಮತ್ತು ತರಕಾರಿ ದರ ತಟಸ್ಥವಾಗಿದ್ದು, ಹೂವಿನ ದರ ಕೈಸುಡುತ್ತಿದೆ. ಇನ್ನೂ ನಾಳೆ, ನಾಡಿದ್ದು ಇನ್ನಷ್ಟು ದರ ಏರಿಕೆಯಾಗುವ ಸಾಧ್ಯತೆ ಇದ್ದು, ಹೂ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇತ್ತ ಗ್ರಾಹಕರು ಕೂಡ ಹೂವಿನ ಬೆಲೆ ಜಾಸ್ತಿ ಆಗುವ ಸಾಧ್ಯತೆ ಹಿನ್ನೆಲೆ ಇಂದೇ ವ್ಯಾಪಾರಕ್ಕೆ ಮುಂದಾಗಿದ್ದಾರೆ.

    ಹೂವಿನ ಬೆಲೆ ಕೆಜಿಗೆ ಎಷ್ಟು?
    ಮಲ್ಲಿಗೆ ಹೂ – 1000 ಸಾವಿರ ರೂ.
    ಸೇವಂತಿಗೆ – 300-500  ರೂ.
    ಚೆಂಡು ಹೂ – 150 ರೂ .
    ಕನಕಾಂಬರ – 3 ಸಾವಿರ
    ಸುಗಂಧರಾಜ – 400 ರೂ.
    ಕಾಕಡ – 700-800 ರೂ.

    ಕೇವಲ ಹೂ ಮಾತ್ರ ಅಲ್ಲ. ಈ ಹಬ್ಬಕ್ಕೆ ಬೇಕಾದ ಮತ್ತೊಂದು ಅಗತ್ಯ ವಸ್ತು ಅಂದರೆ ಕುಂಬಳಕಾಯಿ (Pumpkin) ಹಾಗೂ ಬಾಳೆ ಕಂಬ. ಇವುಗಳ ಬೆಲೆ ಕೂಡ ಡಬಲ್ ಆಗಿದೆ. ತಮಿಳುನಾಡು, ಆಂಧ್ರದಿಂದ ನಗರಕ್ಕೆ ಆಗಮಿಸಿರುವ ಕುಂಬಳಕಾಯಿ ಕೆ.ಜಿಗೆ 35 ರಿಂದ 40 ರೂ. ಗೆ ಏರಿಕೆ ಆಗಿದೆ. ಕಳೆದ ವಾರ 15 ರೂ. ಇದ್ದ ಕುಂಬಳಕಾಯಿ ದರ ಈ ವಾರ ಎರಡು ಪಟ್ಟು ಏರಿಕೆಯಾಗಿದೆ. ಬಾಳೆ ಕಂಬ ಸಹ ಜೊತೆಗೆ 150 ರೂ. ಆಗಿದೆ. ಹಲವೆಡೆ ಮಳೆ ಮತ್ತು ಬೆಳೆನಷ್ಟ ಹಿನ್ನೆಲೆ ಈ ಬಾರಿ ಬೇರೆ ಕಡೆಯಿಂದ ಲೋಡ್ ಬಾರದ ಹಿನ್ನೆಲೆ ಸದ್ಯ ಬೆಲೆ ಏರಿಕೆಯಾಗಿದೆ ಎನ್ನಲಾಗುತ್ತಿದೆ.

    ಒಟ್ಟಾರೆ ನಾಳೆ ನಾಡಿದ್ದು ಇನ್ನಷ್ಟು ದರ ಹೆಚ್ಚಾಗುವ ಸಾಧ್ಯತೆ ಇದೆ. ಇಂದೇ ನಿಮ್ಮ ಖರೀದಿ ಮಾಡಿ ಮುಗಿಸಿದರೆ ಸ್ವಲ್ಪ ಹಣ ಉಳಿತಾಯ ಆದರೂ ಆಗಬಹುದು. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    Live Tv
    [brid partner=56869869 player=32851 video=960834 autoplay=true]