ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಮಹೋತ್ಸವದ ಉದ್ಘಾಟನೆ ನೆರವೇರಿಸಿದೆ. ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆಬಾನು ಮುಷ್ತಾಕ್ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಮಾಡುವ ಮೂಲಕ ಮಹೋತ್ಸವಕ್ಕೆ ಚಾಲನೆ ಕೊಟ್ಟಿದ್ದಾರೆ. ಬಳಿಕ ಆಹಾರ ಮೇಳ, ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಶತಶತಮಾನಗಳ ಪಾರಂಪರಿಕ ಪ್ರತೀಕ ಹಬ್ಬವಾಗಿರುವ ದಸರಾ ಸೊಬಗು ಸಾಂಸ್ಕೃತಿಕ ನಗರಿಯಲ್ಲಿ ಕಳೆಗಟ್ಟಿದೆ. ಫಲಪುಷ್ಟ ಪ್ರದರ್ಶನ, ಆಹಾರದ ಮೇಳದ ಘಮಲು ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಿದ್ದರೆ, ಅತ್ತ ಅರಮನೆ ವೇದಿಕೆಯಲ್ಲಿ ಮೊಳಗುತ್ತಿರುವ ಸಂಗೀತ ಝೇಂಕಾರ ಕಿವಿಗೆ ಇಂಪು ನೀಡುತ್ತಿವೆ. ಇದೆಲ್ಲವೂ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿರುವ ಫೋಟೋಗಳಿವೆ ಕಣ್ತುಂಬಿಕೊಳ್ಳಿ…
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಿನ್ನೆಲೆ ನಗರದ ಲಾಲ್ಬಾಗ್ನಲ್ಲಿ ಆ.07ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಇಂದು ಸಂಜೆ 7 ಗಂಟೆಗೆ ಫಲಪುಷ್ಪ ಪ್ರದರ್ಶನ ಮುಕ್ತಾಯಗೊಳ್ಳಲಿದೆ. ಪ್ರದರ್ಶನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನ ಥೀಮ್ನಲ್ಲಿ ಕಿತ್ತೂರು ಸಂಸ್ಥಾನ, ರಾಜರು, ಇತಿಹಾಸ, ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಐತಿಹಾಸಿಕ ಹೆಜ್ಜೆಗುರುತುಗಳ ಪ್ರತಿಬಿಂಬವನ್ನು ಪುಷ್ಪಗಳಲ್ಲಿ ತೋರ್ಪಡಿಸಲಾಗಿತ್ತು.
ಭಾನುವಾರ ಒಂದೇ ದಿನ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ 7,960 ಮಕ್ಕಳು, 7,200 ಶಾಲಾ ಮಕ್ಕಳು, 52,150 ವಯಸ್ಕರು ಸೇರಿದಂತೆ ಒಟ್ಟು 67,310 ಮಂದಿ ಭೇಟಿ ನೀಡಿದ್ದು, ಒಟ್ಟು 37.39 ಲಕ್ಷ ರೂ. ಆದಾಯ ಬಂದಿದೆ. ಈವರೆಗೆ ಒಟ್ಟು 5.80 ಲಕ್ಷ ಜನರು ಲಾಲ್ಬಾಗ್ಗೆ ಭೇಟಿ ನೀಡಿದ್ದಾರೆ. ಸೋಮವಾರ ಕೊನೆಯ ದಿನವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸುತ್ತಿದ್ದು, ದಿನದ ಅಂತ್ಯಕ್ಕೆ ಭೇಟಿ ಕೊಟ್ಟವರ ಒಟ್ಟು ಜನರ ಸಂಖ್ಯೆ 6 ಲಕ್ಷಕ್ಕೆ ಏರಿಕೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: `ವೇಷಗಳು’ ಚಿತ್ರದ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಿದ ಶರತ್ ಲೋಹಿತಾಶ್ವ
– ಆಗಸ್ಟ್ 18ರವರೆಗೆ ನಡೆಯಲಿರುವ ಫ್ಲವರ್ ಶೋ – ಫಲಪುಷ್ಪಗಳಲ್ಲಿ ಅನಾವರಣಗೊಂಡ ಸ್ವಾತಂತ್ರ್ಯ ವೀರರ ಜೀವನ ಚರಿತ್ರೆ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಲಾಲ್ಬಾಗ್ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
ಕಿತ್ತೂರು ರಾಣಿ ಚೆನ್ನಮ್ಮಗೆ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧಗಳಲ್ಲಿ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ್ಯ ಸಿಕ್ಕ ದಿನವಾದರೆ, ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯದ ದಿನ. ಇದು ಕಾಕತಾಳೀಯ ಅಂತಾನೇ ಎನ್ನಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ದಾಳಿ ಮಾಡಿ – ಪಾಕ್ ಸೇನಾ ಮುಖ್ಯಸ್ಥನಿಗೆ ಬೆಂಗಳೂರಿನ ಅಲ್ಖೈದಾ ಭಯೋತ್ಪಾದಕಿ ಮನವಿ
ಬ್ರಿಟಿಷರ ವಿರುದ್ಧ ರಾಯಣ್ಣ ವೀರಾವೇಶದಿಂದ ಹೋರಾಡಿದ್ದರು. ಬ್ರಿಟಿಷರನ್ನು ಸೋಲಿಸಿ 200 ವರ್ಷ ಆಯಿತು. ರಾಯಣ್ಣ ಹಿಂದುಳಿದ ಜಾತಿಗೆ ಸೇರಿದವರು, ಎಲ್ಲಾ ಸೈನ್ಯದಲ್ಲಿ ಎಲ್ಲ ಜಾತಿಯವರಿದ್ದರು. ಜಾತ್ಯಾತೀತರಾಗಿ ಎಲ್ಲರನ್ನೂ ಬಳಸಿಕೊಂಡು ಕಿತ್ತೂರು ಪ್ರಾಂತ್ಯ ಆಳಿದ್ದರು. ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡಲಾಗುತ್ತದೆ. ಸಂಗೊಳ್ಳಿ ರಾಜಣ್ಣ ಅವರ ಪ್ರಾಧಿಕಾರ ಮಾಡಿದ್ದೇವೆ ಎಂದಿದ್ದಾರೆ.
ಬಳಿಕ ಸಿಎಂ ಸಿದ್ದರಾಮಯ್ಯ ಅವರು ಫ್ಲವರ್ ಶೋ ವೀಕ್ಷಣೆ ಮಾಡಿದರು. ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್, ತೋಟಗಾರಿಕೆ ಇಲಾಖೆಯ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಮತ್ತಿತ್ತರು ಸಾಥ್ ನೀಡಿದರು.
ಆ.18ರವರೆಗೆ ನಡೆಯಲಿದೆ ಫ್ಲವರ್ ಶೋ
ಇಂದಿನಿಂದ (ಆ.7) ಆಗಸ್ಟ್ 18ರವರೆಗೆ ಲಾಲ್ಬಾಗ್ನಲ್ಲಿ ಫ್ಲವರ್ ಶೋ ನಡೆಯಲಿದ್ದು, ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಪುಷ್ಪಮೇಳ ನಡೆಯುತ್ತಿದೆ. ಸ್ವಾತಂತ್ರ್ಯ ವೀರರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣಗೊಂಡಿದೆ. 18 ಅಡಿ ಎತ್ತರ, 32 ಅಡಿ ಅಗಲದ ಕಿತ್ತೂರು ಕೋಟೆಯ ಮಾದರಿಯಲ್ಲಿ ನಿರ್ಮಾಣವಾಗಿದೆ. ಅದರ ಒಳಭಾಗದಲ್ಲಿ ಫಲಪುಷ್ಪಗಳ ಮೂಲಕ ಹೋರಾಟದ ಸ್ಮರಣೆ ಮಾಡಲಾಗಿದೆ. ಇದನ್ನೂ ಓದಿ: ಟ್ರಂಪ್ ಬೆದರಿಕೆಗೆ ಜಗ್ಗದ ಭಾರತ – ರಷ್ಯಾದ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ
ರಾಣಿ ಅಬ್ಬಕ್ಕದೇವಿ, ರಾಣಿ ಚೆನ್ನಭೈರಾದೇವಿ, ರಾಣಿ ಬೆಳವಾಡಿ ಮಲ್ಲಮ್ಮ, ರಾಣಿ ಕೆಳದಿ ಚೆನ್ನಮ್ಮ, ಒನಕೆ ಓಬವ್ವ ಅವರ ಹೂವಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆ.7ರಿಂದ ಹನ್ನೊಂದು ದಿನಗಳವರೆಗೆ ಫ್ಲವರ್ ಶೋ ನಡೆಯಲಿದೆ.
ಪ್ರವೇಶ ಶುಲ್ಕ ಎಷ್ಟು?
ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ., ಮಕ್ಕಳಿಗೆ 30 ರೂ. ಹಾಗೂ ಶನಿವಾರ, ಭಾನುವಾರ ರಜಾದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.
ಮಂಡ್ಯ: ಸಕ್ಕರೆ ನಾಡಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ನಡೆಯುವ ಫಲಪುಷ್ಪ ಪ್ರದರ್ಶನ (Flower Show) ಹಾಗೂ ಮಧುರ ವಸ್ತ್ರೋತ್ಸವಕ್ಕೆ ಸಚಿವ ಎನ್.ಚಲುವರಾಯಸ್ವಾಮಿ (Chaluvaraya Swamy) ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಉದ್ಯಾನವನದಲ್ಲಿ ಆಕರ್ಷಕ ಬಣ್ಣದ ನಾನಾ ಜಾತಿಯ ಹೂಗಳಿಂದ ಹಲವಾರು ಕಲಾಕೃತಿಗಳು ಅರಳಿ ನಿಂತಿದ್ದು, ಜನರನ್ನು ಕೈಬೀಸಿ ಕರೆಯುತ್ತಿದೆ. ಆಕರ್ಷಕ ಸೆಲ್ಫಿ ಪಾಯಿಂಟ್ಗಳಲ್ಲಿ ಪುಷ್ಪ ಪ್ರಿಯರು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ಮತ್ತೊಂದೆಡೆ 9 ಲಕ್ಷ ವಿವಿಧ ಬಣ್ಣದ ಸೇವಂತಿಗೆ ಮತ್ತು ಗುಲಾಬಿ ಹೂವುಗಳಿಂದ ಪ್ರವಾಸಿ ತಾಣ, ದೇವಾಲಯಗಳ ನಿರ್ಮಾಣವಾಗಿದ್ದು, ಕಣ್ಮನ ಸೆಳೆಯುತ್ತಿದೆ.
ಪ್ರತಿ ದಿನ ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆ ವರೆಗೆ ಪ್ರವೇಶ
5 ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಫಲಪುಷ್ಪ ಪ್ರದರ್ಶನ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ವಯಸ್ಕರಿಗೆ ಟಿಕೆಟ್ ದರ 30 ರೂ. ಟಿಕೆಟ್ ದರ ಇರಲಿದ್ದು, 6-12 ವರ್ಷದ ಮಕ್ಕಳಿಗೆ 20 ರೂ. ಹಾಗೂ ಸಮವಸ್ತ್ರ ಧರಿಸಿ ಬರುವ ಶಾಲಾ ಮಕ್ಕಳಿಗೆ ಹಾಗೂ 6 ವರ್ಷದೊಳಗಿನ ಮಕ್ಕಳಿಗೆ ಉಚಿತ ಪ್ರವೇಶ ಇರಲಿದೆ.
ಪ್ರಮುಖ ಆಕರ್ಷಣೆಗಳಿವು:
ಫಲಪುಷ್ಪ ಪ್ರದರ್ಶನದಲ್ಲಿ ವಿವಿಧ ಬಣ್ಣದ 9 ಲಕ್ಷ ಸೇವಂತಿಗೆ ಹೂವು, ಬಗೆ ಬಗೆಯ ಬಣ್ಣದ ಗುಲಾಬಿ ಬಳಸಿ ಪ್ರಸಿದ್ಧ ದೇವಾಲಯ ಹಾಗೂ ಪ್ರವಾಸಿ ತಾಣಗಳನ್ನು ನಿರ್ಮಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ. ಇದರೊಂದಿಗೆ ಯುವ ಜನತೆಯನ್ನು ಸೆಳೆಯಲು ಹತ್ತು ಸ್ಥಳಗಳಲ್ಲಿ ಸೆಲ್ಫಿ ಪಾಯಿಂಟ್, ಹೂವಿನ ಆಕೃತಿಯ ಕ್ಷಯ ರೋಗ ಕುರಿತು ಜಾಗೃತಿ, ನರೇಗಾ ಯೋಜನೆಯ ಮಾಹಿತಿಯೊನ್ನೊಳಗೊಂಡ ಸ್ಥಬ್ಥ ಚಿತ್ರ, ಆಕರ್ಷಕ ಅಡಿನಿಯಂ ಗಿಡಗಳು, ಬೋನ್ಸಾಯ್ ಗಿಡಗಳು, ವಿವಿಧ ತರಕಾರಿ ಹಣ್ಣುಗಳನ್ನು ಬಳಸಿ ಕಲಾಕೃತಿಗಳನ್ನ ಕೆತ್ತನೆ ಮಾಡಲಾಗಿದೆ.
ವಿವಿಧ ಜಿಲ್ಲೆಗಳ ಕೈಮಗ್ಗ, ನೇಕಾರರ ಸಹಕಾರ ಸಂಘಗಳು ಭಾಗವಹಿಸಿದ್ದು, ಕೈಮಗ್ಗ ನೇಕಾರರಿಂದ ತಯಾರಿಸಿರುವ ಹತ್ತಿ, ರೇಷ್ಮೆ, ಮೊಳಕಾಲ್ಮೂರು ರೇಷ್ಮೆ ಸೀರೆ, ಚಿಂತಾಮಣಿ ರೇಷ್ಮೆ ಸೀರೆ, ಕಾಟನ್ ಸೀರೆ, ಪಂಚೆ, ಬೆಡ್ಶೀಟ್, ಟವಲ್, ಲುಂಗಿ ಹಾಗೂ ಇತರೆ ಕೈ ಮಗ್ಗ ಉತ್ಪನ್ನಗಳನ್ನು ಶೇ.20 ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಇದನ್ನೂ ಓದಿ: ಇಂಗ್ಲಿಷ್ ಪರೀಕ್ಷೆಗೆ ಹೆದರಿ ಮನೆ ಬಿಟ್ಟ ಮಕ್ಕಳು – ಸಕಲೇಶಪುರದಲ್ಲಿ ನಾಪತ್ತೆಯಾದವರು ಬೆಂಗಳೂರಲ್ಲಿ ಪತ್ತೆ
ಅಲ್ಲದೇ ಕೃಷಿ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಪಶು ಸಂಗೋಪನೆ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕೆ ಮತ್ತು ಖಾದಿ ಮತ್ತು ಗ್ರಾಮೋದ್ಯೋಗ ವತಿಯಿಂದ ಕಲಾಕೃತಿಗಳನ್ನು ಹಾಗೂ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಗುತ್ತಿದೆ.
ಚಾಮರಾಜನಗರ: ಬೆಂಗಳೂರು, ಮೈಸೂರಿನಂತಹ ದೊಡ್ಡ ದೊಡ್ಡ ನಗರಗಳಿಗೆ ಫಲಪುಷ್ಪ ಪ್ರದರ್ಶನ ಸೀಮಿತವಾಗಿತ್ತು. ಆದರೆ, ಚೆಲುವ ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಚಾಮರಾಜನಗರದಲ್ಲಿ (Chamarajanagara) ಆಕರ್ಷಕ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದ್ದು, ಗಡಿನಾಡಿನ ಜನತೆ ಕಣ್ತುಂಬಿಕೊಳ್ಳುತ್ತಿದ್ದಾರೆ.
ಚೆಲುವ ಚಾಮರಾಜನಗರ ದಸರಾ ಮಹೋತ್ಸವ (Chamarajanagara Dasara) 2024 ಅಂಗವಾಗಿ ಆಯೋಜಿಸಿರುವ ಕಲರ್ಫುಲ್ ಫ್ಲವರ್ ಶೋ ಕಣ್ಮನ ಸೆಳೆಯುತ್ತಿದೆ. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಚಾಮರಾಜನಗರ ದಸರಾದ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿ ಮಾರ್ಪಟ್ಟಿದ್ದು, ಆಕರ್ಷಣೀಯವಾಗಿದೆ. ವಿವಿಧ ಬಗೆಯ ಪುಷ್ಪಗಳಿಂದ ಪ್ರಾಣಿ ಪಕ್ಷಿಗಳು, ಸಂಗೀತ ಪರಿಕರಗಳು, ಏಳು ಹೆಡೆಯ ಆದಿಶೇಷ, ಹಿಮವದ್ ಗೋಪಾಲಸ್ವಾಮಿ ಸೇರಿದಂತೆ ಹಲವು ಕಲಾಕೃತಿಗಳು ಕಣ್ಮನ ಸೆಳೆಯುತ್ತಿವೆ. ಇದನ್ನೂ ಓದಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವ ಆಚರಣೆ
ಕಲಾವಿದರ ಕುಂಚದಲ್ಲಿ ಮೂಡಿರುವ ಸಿನಿ ತಾರೆಯರು ಹಾಗೂ ಗಣ್ಯರ ಭಾವಚಿತ್ರಗಳು ಆಕರ್ಷಣೀಯವಾಗಿವೆ. ಕಲ್ಲಂಗಡಿ ಹಣ್ಣಿನಲ್ಲಿ ರಚಿಸಲಾಗಿರುವ ಮೇರುನಟ ಡಾ.ರಾಜ್ಕುಮಾರ್, ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕಲಾಕೃತಿಗಳು ಗಮನ ಸೆಳೆಯುತ್ತಿವೆ. ಜಲಜೀವನ್ ಮಿಷನ್ ಹಾಗೂ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸಾರುವ ಬಣ್ಣ ಬಣ್ಣದ ಪುಷ್ಪಗಳಿಂದ ರಚಿಸಿರುವ ಕಲಾಕೃತಿಗಳು ಜಾಗೃತಿ ಮೂಡಿಸುತ್ತಿವೆ. ಕಾಡಿನಲ್ಲಿ ವಾಸಿಸುವ ಸೋಲಿಗರಿಗೂ ಫಲಪುಷ್ಪ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
ವಿಶೇಷವಾಗಿ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ದೂರದ ಮೈಸೂರು ಬೆಂಗಳೂರಿಗೆ ಹೋಗುತ್ತಿದ್ದ ಜನರು ಇದೀಗ ಸ್ಥಳೀಯವಾಗಿಯೇ ವೀಕ್ಷಿಸಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನ ನೋಡಲು ಚಾಮರಾಜನಗರ ಜಿಲ್ಲೆಯ ವಿವಿಧೆಡೆಯಿಂದ ಜನರು ಬರತೊಡಗಿದ್ದಾರೆ. ಇದನ್ನೂ ಓದಿ: ರಾಜ, ರಾಜಕಾರಣಿಯಾಗಿ ಮೈಸೂರು ದಸರಾದಲ್ಲಿ ಭಾಗಿ – ಪರಂಪರೆ ಮುಂದುವರಿಸಿದ ಯದುವೀರ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್ನಲ್ಲಿ (Lalbagh) ಈ ಬಾರಿಯ ಗಣರಾಜ್ಯೋತ್ಸವ ಅಂಗವಾಗಿ ಜನವರಿ 18ರಿಂದ 28ರವರೆಗೆ 215ನೇ ಫಲಪುಷ್ಪ ಪ್ರದರ್ಶನ (Flower Show) ನಡೆಯಲಿದೆ. ಈ ಬಾರಿ ಹಲವು ವಿಶೇಷಗಳೊಂದಿಗೆ ತೋಟಗಾರಿಕಾ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಈ ಬಾರಿ ಬರೋಬ್ಬರಿ 11 ದಿನಗಳ ಕಾಲ ವಚನ ಸಾಹಿತ್ಯದ ಪರಿಕಲ್ಪನೆಯಡಿ ಲಾಲ್ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. 12ನೇ ಶತಮಾನದ ಕನ್ನಡದ ತತ್ವಜ್ಞಾನಿ, ಸಮಾಜ ಸುಧಾರಕರಾದ ಬಸವಣ್ಣನವರು ಲಿಂಗ ತಾರತಮ್ಯದೊಂದಿಗೆ ಮೂಢನಂಬಿಕೆಗಳನ್ನು ನಿರಾಕರಿಸಿದ್ರು. ಮಹಿಳೆಯರಿಗೂ ಸಮಾನತೆ ಪ್ರತಿಪಾಸಿದ್ರು. ಅವರ ಚಿಂತನೆ, ಕಾಯಕ ವೈಖರಿಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ. ಹೀಗಾಗಿ ಈ ಬಾರಿ ಬಸವಣ್ಣ ಮತ್ತು `ವಚನ ಸಾಹಿತ್ಯ’ ಕುರಿತಂತೆ ಫಲಪುಷ್ಪ ಪ್ರದರ್ಶನ ಮಾದರಿಗಳನ್ನು ನಿರ್ಮಿಸಲಾಗುತ್ತಿದೆ.
ಕೇವಲ ಬಸವಣ್ಣ ಮಾತ್ರವಲ್ಲ ಅಕ್ಕಮಹಾದೇವಿ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ, ಗಂಗಾಂಬಿಕೆ, ನೀಲಾಂಬಿಕೆ ಮತ್ತಿತರ ವಚನಕಾರರ ಪ್ರತಿಮೆಗಳು, ಅವರ ವಚನಗಳು ಮತ್ತು ವಚನಕಾರರ ಅಂಕಿತನಾಮಗಳು ಹೀಗೆ ಸಮಗ್ರ ವಚನ ಸಾಹಿತ್ಯವೇ ಫಲಪುಷ್ಪ ಪ್ರದರ್ಶನದಲ್ಲಿರಲಿದೆಯಂತೆ. ಫಲಪುಷ್ಪ ಪ್ರದರ್ಶನಕ್ಕೆ 80 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಹಾಲಿಡೇಸ್ನಲ್ಲಿ 100 ರೂ. ಟಿಕೆಟ್ ದರ ಇರಲಿದೆ. ಶಾಲಾ ಸಮವಸ್ತ್ರ ಧರಿಸಿ ಬರುವ ಮಕ್ಕಳಿಗೆ ಉಚಿತ ಪ್ರವೇಶವಿರುತ್ತೆ. ಸಮವಸ್ತ್ರ ಇಲ್ಲದ ವಿದ್ಯಾರ್ಥಿಗಳಿಗೆ, ಮಕ್ಕಳಿಗೆ 30 ರೂ. ದರ ನಿಗದಿ ಮಾಡಲಾಗಿದೆ.
ಪ್ರಮುಖ ವಿಶೇಷವೇನು..?: 10 ಅಡಿಯ ಬಸವಣ್ಣನ ಪ್ರತಿಮೆ ಮತ್ತು 30 ಅಡಿ ಎತ್ತರದ ಅನುಭವ ಮಂಟಪ ಈ ಬಾರಿಯ ಪ್ರದರ್ಶನದ ಪ್ರಮುಖ ಆಕರ್ಷಣೆ. ಅನುಭವ ಮಂಟಪದ ಮೂಲ ಪ್ರತಿರೂಪದ ರಚನೆಯನ್ನು ಐರನ್ ಫ್ರೇಮ್ವರ್ಕ್ನಿಂದ ರೂಪಿಸಿ, ಅದಕ್ಕೆ 750 ಕೆಜಿಗೂ ಹೆಚ್ಚು ವೈರ್ ಮೆಷ್ ಅಳವಡಿಸಿ, 10 ಸಾವಿರಕ್ಕೂ ಹೆಚ್ಚು ಫ್ಲೋರಲ್ ಫೋಮ್ಗಳನ್ನು ಬಳಸಿ ಅಂತಿಮ ರೂಪ ಕೊಡಲಾಗಿದೆ. ಅನುಭವ ಮಂಟಪ 34 ಅಡಿ ಅಗಲ ಮತ್ತು 30 ಅಡಿ ಎತ್ತರವಿರುತ್ತೆ. ಕಡುಗೆಂಪು, ಹಳದಿ ಮತ್ತು ಕಿತ್ತಳೆ ವರ್ಣದ 1.5 ಲಕ್ಷ ಗುಲಾಬಿ ಹೂಗಳು, ಹಳದಿ, ಪಿಂಕ್ ಮತ್ತು ಶ್ವೇತ ವರ್ಣದ 1.55 ಲಕ್ಷ ಆಕರ್ಷಕ ಸೇವಂತಿಗೆ ಹೂಗಳು ಹಾಗೂ 1.85 ಲಕ್ಷ ಗುಂಡುರಂಗು (ಗಾಂಫ್ರಿನಾ) ಹೂವುಗಳನ್ನು ಬಳಸಲಾಗುತ್ತದೆ. ಈ ಎಲ್ಲಾ ಹೂಗಳು ಸೇರಿ 4.8 ಲಕ್ಷ ಹೂಗಳನ್ನು ಒಂದು ಬಾರಿಗೆ ಬಳಸಲಾಗುತ್ತಿದೆ.
ಈ ಬಾರಿ ವಚನಕಾರರನ್ನ ಫಲಪುಷ್ಪ ಪ್ರದರ್ಶನದಲ್ಲಿ ಸಂಭ್ರಮಿಸಲು ಹಾಗೂ ಜನತೆಗೆ, ವಿದ್ಯಾರ್ಥಿಗಳಿಗೆ ಫಲಪುಷ್ಪದ ಮೂಲಕ ಅವರನ್ನ ತಲುಪಿಸುವ ಕೆಲಸಕ್ಕೆ ತೋಟಗಾರಿಕೆ ಇಲಾಖೆ ಮುಂದಾಗಿದೆ.
ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬೆಂಗಳೂರಿನ ಲಾಲ್ ಬಾಗ್ (Lal Bagh) ನಲ್ಲಿ ಫ್ಲವರ್ ಶೋ (Flower Show) ನಡೆಯುತ್ತಿದೆ. ಇದರಲ್ಲಿ ಅತಿಥಿಯಾಗಿ ಪಾಲ್ಗೊಳ್ಳುವುದಕ್ಕಾಗಿ ನಟಿ ರಚಿತಾ ರಾಮ್ (Rachita Ram) ಇಂದು ಲಾಲ್ ಬಾಗ್ ಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ರಚಿತಾ ಪ್ರಯಾಣಿಸುತ್ತಿದ್ದ ಕಾರು ಸ್ವಚ್ಛತಾ ಕಾರ್ಮಿಕನಿಗೆ ಗುದ್ದಿದೆ. ಜಸ್ಟ್ ಮಿಸ್ ಎನ್ನುವಂತೆ ಕಾರ್ಮಿಕ ಪಕ್ಕಕ್ಕೆ ಹಾರಿ ಅಪಘಾತದಿಂದ ತಪ್ಪಿಸಿಕೊಂಡಿದ್ದಾನೆ.
ಈ ಘಟನೆ ನಡೆದಾಗ ರಚಿತಾ ರಾಮ್ ಕಾರಲ್ಲಿ ಇದ್ದರೂ, ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ಲವರ್ ಶೋನತ್ತ ತೆರಳಿದ್ದಾರೆ. ಕಾರು ನಿಲ್ಲಿಸದೇ ಕ್ಷಮೆಯಾಚನೆಯೂ ಮಾಡದೇ ಹೊರಟ ರಚಿತಾ ಹಾಗೂ ಡ್ರೈವರ್ ನಡೆಗೆ ಅಲ್ಲಿದ್ದವರು ಬೇಸರ ಮಾಡಿಕೊಂಡಿದ್ದಾರೆ.
ಆಕಸ್ಮಿಕ ಎನ್ನುವಂತೆ ಘಟನೆ ನಡೆದಿದ್ದರೂ, ರಚಿತಾ ರಾಮ್ ಕನಿಷ್ಠ ಮಾನವೀಯತೆ ದೃಷ್ಟಿಯಿಂದಾರೂ ಕಾರ್ಮಿಕನನ್ನು ಮಾತನಾಡಿಸಬೇಕಿತ್ತು ಎನ್ನುವುದು ಅಲ್ಲಿದ್ದವರ ಪ್ರತಿಕ್ರಿಯೆಯಾಗಿತ್ತು. ಆದರೆ, ರಚಿತಾ ಹಾಗೆ ಮಾಡಿಲ್ಲ ಎನ್ನುವುದೇ ಬೇಸರದ ಸಂಗತಿ.
ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ (Lalbagh) ನಲ್ಲಿ ಶುಕ್ರವಾರದಿಂದ ಫ್ಲವರ್ ಶೋ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಇಂದಿನಿಂದ ಸಾರ್ಜಜನಿಕರಿಗೆ ಫಲಪುಷ್ಟ ಪರ್ದಶನದ ವೀಕ್ಷಣೆಗೆ ಅವಕಾಶ ಕಲ್ಪಸಲಾಗಿದ್ದು, ವೀಕ್ ಎಂಡ್ ಆಗಿರೋದ್ರಿಂದ ಜನಸಾಗರವೇ ಇಂದು ಫ್ಲವರ್ ಶೋಗೆ (Flower Show) ಬಂದಿತ್ತು.
ಹೂಗಳಿಂದ ನಿರ್ಮಾಣವಾಗಿರುವ ವಿಧಾನಸೌಧ (Vidhanasoudha), ಕೆಂಗಲ್ ಹನುಮಂತಯ್ಯನವರ ಪ್ರತಿಮೆ, ಸತ್ಯಾಗ್ರಹ ಮಂಟಪ ಇದೆಲ್ಲವೂ ಕಂಡು ಬಂದಿದ್ದು, ಲಾಲ್ಬಾಗ್ನಾ ಫ್ಲವರ್ ಶೋನಲ್ಲಿ. ಹೌದು, ಸಸ್ಯಕಾಶಿ ಇಂದಿನಿಂದ 214ನೇ ಫ್ಲವರ್ ಶೋ ಆರಂಭವಾಗಿದ್ದು, ಈ ಹೂವಿನ ಲೋಕಕ್ಕೆ ಜನಸಾಗರವೇ ಹರಿದು ಬಂದಿತ್ತು. ಸೆಲ್ಫಿ ತೆಗೆದುಕೊಂಡು ಖುಷಿ ಪಟ್ರು.
ಹೂವಿನ ಕಲೆಯ ಕಲಾವಿದರಿಗಾಗಿಯೇ ಇಲ್ಲಿ ಇಕೆಬಾನೆ ಮತ್ತು ಕಲೆಗಳ ಸರ್ಧೆಯನ್ನ ಆಯೋಜನೆ ಮಾಡಲಾಗಿತ್ತು. ನಟಿ, ಕಾಂಗ್ರೆಸ್ ನಾಯಕಿ ಉಮಶ್ರೀ ಮತ್ತು ಹೈಕೋರ್ಟ್ ನ್ಯಾಯಮೂರ್ತಿ ಸಂದೀಪ್, ಕೆಂಗಲ್ ಹನುಮಂತಯ್ಯ ಅವ್ರ ಪುತ್ರಿ ಭೇಟಿ ನೀಡಿ ಸಂಭ್ರಮಿಸಿದ್ರು. ಇದನ್ನೂ ಓದಿ: ಮನೆ ಮುಂದೆ ಹೆಚ್ಚಿದ ಕಾರ್ ಪಾರ್ಕಿಂಗ್ – ಸಿಎಂ ನಿವಾಸದ ಎದುರು ಮನೆ ವ್ಯಕ್ತಿ ರಂಪಾಟ
ಇಂದು ಸರಿಸುಮಾರು 60 ಸಾವಿರಕ್ಕು ಅಧಿಕ ಜನರು ಪ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ. ಇನ್ನೂ ಆಗಸ್ಟ್ 15 ರವರೆಗೆ ನಡೆಯಲಿರೋ ಈ ಶೋಗೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನ ಬರುವ ನಿರೀಕ್ಷೆಯಿದೆ.
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಸಸ್ಯಕಾಶಿ ಲಾಲ್ಬಾಗ್ನಲ್ಲಿ (Lalbagh) ಆಯೋಜಿಸಲಾಗಿರುವ 214ನೇ ಫ್ಲವರ್ ಶೋ ಶುಕ್ರವಾರದಿಂದ ಆರಂಭವಾಗಲಿದೆ.
ನಾಳೆ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಲಾಲ್ ಬಾಗ್ ಶೋ ಉದ್ಘಾಟಿಸಲಿದ್ದಾರೆ. ಆ.4ರಿಂದ ಶುರುವಾಗಿ ಆಗಸ್ಟ್ 15ರ ವರೆಗೆ ಫ್ಲವರ್ ಶೋ ನಡೆಯಲಿದೆ. ಜನರಿಗೆ ಯಾವುದೇ ಸಮಸ್ಯೆಗಳಗಾದಂತೆ ಬಿಗಿ ಬಂದೋಬಸ್ತ್ ಮಾಡಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಸಸ್ಯಕಾಶಿ ಲಾಲ್ ಬಾಗ್ನಲ್ಲಿ 76ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214ನೇ ಫ್ಲವರ್ ಶೋ (Flower Show) ಆಯೋಜನೆ ಮಾಡಲಾಗಿದೆ.
ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಇನ್ನು ಬರೋಬ್ಬರಿ 2 ಕೋಟಿ ಖರ್ಚು ಮಾಡುತ್ತಿದ್ದು, 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನ ಹೆಚ್ಚಿಸಲಿವೆ. ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಫ್ಲವರ್ ಶೋಗೆ ಶಾಲಾ ಮಕ್ಕಳಿಗೆ ಫ್ರೀ ಇರಲಿದ್ದು, ಶಾಲಾ ಮಕ್ಕಳಿಗೆ ಕಾಂಪಿಟೇಷನ್ ಆಯೋಜಿಸಲಾಗಿದೆ. ಇದನ್ನೂ ಓದಿ: ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರಾಟ – ಅಪ್ರಾಪ್ತರನ್ನೇ ಟಾರ್ಗೆಟ್ ಮಾಡ್ತಿದ್ದ ಗ್ಯಾಂಗ್ ಬಂಧನ
ಸಾರ್ವಜನಿಕರಿಗೆ ಟ್ರಾಫಿಕ್ ಸಮಸ್ಯೆಯಾಗದಂತೆ ಪಾಕಿರ್ಂಗ್ ವ್ಯವಸ್ಥೆ ಮಾಡಲಾಗಿದ್ದು, ಆದಷ್ಟು ಜನರು ಮೆಟ್ರೋ ಹಾಗೂ ಬಿಎಂಟಿಸಿ ಬಸ್ಸುಗಳಿಂದಲೇ ಬಂದರೆ ಟ್ರಾಫಿಕ್ ಕಡಿಮೆಯಾಗಲಿದೆ ಎಂದು ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಜನರಿಗೆ ಅನುಕೂಲವಾಗುವ ನಿಟ್ಟಿನಿಂದ ಒಟ್ಟು ನಾಲ್ಕೂ ಗೇಟ್ ಗಳಲ್ಲಿ ಜನರಿಗೆ ಎಂಟ್ರಿಗೆ ಅವಕಾಶ ನೀಡಲಾಗಿದೆ. ಫ್ಲವರ್ ಶೋ ಬರುವವರಿಗೆ ಎಂಟ್ರಿ ಫೀಸ್ ದೊಡ್ಡವರಿಗೆ 70 ರೂ. ಹಾಗೂ ಮಕ್ಕಳಿಗೆ 30 ರೂ. ನಿಗದಿ ಮಾಡಿದ್ದು, 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗಿದೆ.
ಬೆಂಗಳೂರು: 213 ನೇ ಫಲಪುಷ್ಪ ಪ್ರದರ್ಶನ ಇಂದು ಲೋಕಾರ್ಪಣೆಗೊಂಡಿದೆ. ಇಂದಿನಿಂದ ಜನವರಿ 30ರವರೆಗೆ ನಡೆಯಲಿರುವ ಫಲಪುಷ್ಪ (FlowerShow) ಪ್ರದರ್ಶನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿದ್ಯುಕ್ತ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಇಂದು ಅತ್ಯಂತ ಸಂತೋಷದಿಂದ ಫಲಪುಷ್ಪ ಪ್ರದರ್ಶನ ಉದ್ಘಾಟನೆ ಮಾಡಿದ್ದೇನೆ. 10-15 ಲಕ್ಷ ಜನ ಬರೋ ನಿರೀಕ್ಷೆ ಇದೆ. ರಾಜ್ಯದ ಸಸ್ಯಸಂಪತ್ತಿನ ಪ್ರದರ್ಶನ ಆಗ್ತಿದೆ. ರಾಜ್ಯದಲ್ಲಿ ಹಸಿರು ವಿಸ್ತರಣೆಗಾಗಿ 100 ಕೋಟಿ ರೂಪಾಯಿ ಕೊಟ್ಟಿದ್ದೇನೆ ಎಂದರು.
ರಾಜ್ಯದ ತೋಟಗಾರಿಕೆಯಿಂದ ಹಸಿರು ಹೆಚ್ಚಾಗಿ, ಉತ್ಪಾದನೆ ಹೆಚ್ಚಾಗುತ್ತದೆ. ಬೆಂಗಳೂರು ಗಾರ್ಡನ್ ಸಿಟಿ ಎಂದು ಹೆಸರಾಗಿತ್ತು. ಬೆಂಗಳೂರಿನ ಗಾರ್ಡನ್ ಗಳನ್ನು ಬೆಳೆಸುತ್ತೇವೆ. ಗಾರ್ಡನ್ ಸಿಟಿಯ ಗತವೈಭವ ಮತ್ತೆ ಮರುಕಳಿಸಲಿ ಎಂದು ಹೇಳಿದರು.
ಈ ಫ್ಲವರ್ ಶೋನಿಂದ ಸಸ್ಯ ಸಂಪತ್ತು ಪ್ರದರ್ಶನ ಆಗುತ್ತಿದೆ. ರಾಜ್ಯಾದ್ಯಂತ ಹಸಿರು ವಿಸ್ತರಣೆ ಆಗಬೇಕಿದೆ. ರಾಜ್ಯದಲ್ಲಿ ಹಸಿರೀಕರಣ ವಿಸ್ತರಣೆಗೆ ಬಜೆಟ್ ನಲ್ಲಿ 100 ಕೋಟಿ ಮೀಸಲಿಡುತ್ತೇವೆ. ಗುಡ್ಡಗಾಡು ಪ್ರದೇಶದಲ್ಲಿ ಹಸಿರು ಸಮೃದ್ಧಿಯಾಗಬೇಕು. ತೋಟಗಾರಿಕೆ ಫಾರ್ಮ್ ಅಭಿವೃದ್ಧಿಗೆ ಬಜೆಟ್ ನಲ್ಲಿ ಅನುದಾನ ನೀಡಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಒಟ್ಟಿನಲ್ಲಿ ಫಲಪುಷ್ಪ ಮೇಳಕ್ಕೆ ಲಾಲ್ಬಾಗ್ ಅದ್ಧೂರಿಯಾಗಿ ಸಿದ್ಧಗೊಂಡಿದೆ. ಬೆಂಗಳೂರು ನಗರದ ಚಿತ್ರಣ ಈ ಬಾರಿಯ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಕಂಗೊಳಿಸಲಿದೆ. ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಥೀಮ್ ಬೆಂಗಳೂರು ನಗರದ ಇತಿಹಾಸವಾಗಿದ್ದು, ಲಾಲ್ಬಾಗ್ನಲ್ಲಿ ಸೃಷ್ಟಿಯಾಗಲಿದೆ. ಮೆಗಾ ಫ್ಲೋರಲ್ ಫ್ಲೋ ಪರಿಕಲ್ಪನೆ ಪುಷ್ಪ ಪಿರಾಮಿಡ್ ಗಳು ಕಂಗೊಳಸಲಿದೆ. ವಿದೇಶದಿಂದಲೂ ವಿವಿಧ ಬಗೆಯ ಹೂಗಳನ್ನ ತರಸಿ ಅಲಂಕಾರ ಮಾಡಲಾಗುತ್ತದೆ.
ಇದೇ ವೇಳೆ ತೋಟಗಾರಿಕಾ ಸಚಿವ ಮುನಿರತ್ನ (Muniratna), ತೋಟಗಾರಿಕೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ (K Nagendra Prasad), ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
Live Tv
[brid partner=56869869 player=32851 video=960834 autoplay=true]