ಬಾಗಲಕೋಟೆ: ಜಿಲ್ಲೆಯಲ್ಲಿ (Bagalkote) ಕಳೆದ ಎರಡು ತಿಂಗಳ ಹಿಂದೆ ನಡೆದಿದ್ದ ಭ್ರೂಣಹತ್ಯೆ ಕೇಸ್ (Foeticide case) ಮಾಸುವ ಮುನ್ನವೇ ಮತ್ತೊಂದು ಪ್ರಕರಣ ನಡೆದಿದೆ. ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.
ಮುಧೋಳ್ನ ರನ್ನಬೆಳಗಲಿ ಗ್ರಾಮದ 24 ವರ್ಷದ ಮಹಿಳೆಯ ಗರ್ಭದಲ್ಲಿ ಹೆಣ್ಣು ಮಗು ಇದೆ ಎಂದು ವೈದ್ಯರು ತಿಳಿಸಿದ್ದರು. ಇದರಿಂದ ಮಹಿಳೆಯ 14 ವಾರಗಳ ಭ್ರೂಣವನ್ನು ತೆಗೆಸಲು ಕುಟುಂಬದವರು ಮತ್ತು ವೈದ್ಯರು ನಿರ್ಧರಿಸಿದ್ದರು. ಬಳಿಕ ಗರ್ಭಪಾತದ ವೇಳೆ ಪೋಷಕರಿಗೆ ಅದು ಗಂಡು ಮಗು ಎಂದು ಗೊತ್ತಾಗಿದೆ. ಇದರಿಂದ ಈ ಪ್ರಕರಣ ಹೊರಬಂದಿದೆ.
ಸ್ಥಳಕ್ಕೆ ಬಾಗಲಕೋಟೆ ಡಿಹೆಚ್ಓ ಸುವರ್ಣ ಕುಲಕರ್ಣಿ, ಮುಧೋಳ್ ಟಿಹೆಚ್ಓ ಮಲಘಾಣ್ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಯ ಡೆಲಿವರಿ ಥಿಯೇಟರ್, ಸ್ಕ್ಯಾನಿಂಗ್ ಸೆಂಟರ್, ಎಂಆರ್ಡಿ ರೂಮ್ ಸೀಜ್ ಮಾಡಲಾಗಿದೆ. ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲು ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ಇತ್ತೀಚೆಗೆ ಇದೇ ಮಹಾಲಿಂಗಪುರ ಪಟ್ಟಣದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರ ಮಹಿಳೆ ಮೃತಪಟ್ಟಿದ್ದಳು.
ಮಂಡ್ಯ: ಜಿಲ್ಲೆಯಲ್ಲಿ (Mandya) ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ದಂಧೆ (Foeticide Case) ಮುಂದುವರಿದಿದೆ. ಆಲೆಮನೆ, ಹೆಲ್ತ್ ಕ್ವಾಟ್ರಸ್ ಬಳಿಕ ನಾಗಮಂಗಲದ (Nagamangala) ಮಾವಿನಕೆರೆ ತೋಟದ ಮನೆಯೊಂದರಲ್ಲಿ ಭ್ರೂಣ ಹತ್ಯೆ ದಂಧೆ ಬೆಳಕಿಗೆ ಬಂದಿದೆ.
ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದಾಗಲೇ ಡಿಹೆಚ್ಒ ಡಾ.ಮೋಹನ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಅಲ್ಲದೇ ಭ್ರೂಣ ಲಿಂಗ ಪತ್ತೆಗಾಗಿ ಕರೆತರಲಾಗಿದ್ದ ಹಾಸನ ಮೂಲದ ಗರ್ಭಿಣಿ ಮಹಿಳೆಯನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.
ದಾಳಿ ವೇಳೆ ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಈ ಪ್ರಕರಣ ಸಂಬಂಧ ಅಧಿಕಾರಿಗಳು ಮನೆಯ ಮಾಲೀಕ ಧನಂಜಯ್, ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರೆಯೊಬ್ಬಳು ಸೇರಿದಂತೆ, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ.
ಇದೀಗ ಅಕ್ರಮ ಭ್ರೂಣ ಪತ್ತೆ ಕೇಂದ್ರವನ್ನು ಸೀಜ್ ಮಾಡಿದ್ದು, ಸ್ಕ್ಯಾನಿಂಗ್ ಮಷಿನ್ ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಬೆಳಗಾವಿ: ಮಗು ಮಾರಾಟ ಜಾಲ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಕಿಂಗ್ಪಿನ್ ಅಬ್ದುಲ್ ಲಾಡಖಾನ್ಗೆ ಸೇರಿದ ಕಿತ್ತೂರಿನ ಫಾರ್ಮಹೌಸ್ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಆರೋಪಿಗೆ ಸೇರಿದ ತೋಟದಲ್ಲಿ ಗರ್ಭಪಾತ (Foeticide Case) ನಡೆಸಿ ಹೂತಿಟ್ಟಿದ್ದ ಭ್ರೂಣಗಳು ಪತ್ತೆಯಾಗಿವೆ.
ಸ್ಥಳೀಯರಿಂದ ನಕಲಿ ವೈದ್ಯ ಲಾಡಖಾನ್ ಗರ್ಭಪಾತ ಮಾಡಿಸುತ್ತಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪದ ಬೆನ್ನಲ್ಲೇ ಕಿತ್ತೂರು ಪೊಲೀಸ್ (Kittur police) ಠಾಣೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಬಳಿಕ ಲಾಡಾಖಾನ್ ಹಾಗೂ ಆತನ ಸಹಾಯಕ ರೋಹಿತ್ನನ್ನು ಬಂಧಿಸಿದ್ದರು. ಇದೀಗ ನ್ಯಾಯಾಲಯದ ಅನುಮತಿ ಮೇರೆಗೆ ಫಾರ್ಮ್ ಹೌಸ್ ಇರುವ ಜಾಗದಲ್ಲಿ ಅಧಿಕಾರಿಗಳು ನೆಲ ಅಗೆದು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಾರಿಗೆ ಬಸ್ ಚಾಲಕನಿಂದ ಹಿಟ್ & ರನ್- ಸುಳಿವುಕೊಟ್ಟ ಪ್ಲಾಸ್ಟಿಕ್ ಚೂರು
ಭ್ರೂಣಗಳನ್ನು ಹೂತಿದ್ದ ಲಾಡಖಾನ್ನ ಸಹಾಯಕ ರೋಹಿತ್ನ ಸಮ್ಮುಖದಲ್ಲಿ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಬಳಿಕ ಹೂತಿಟ್ಟಿದ್ದ ಭ್ರೂಣಗಳನ್ನು ಹೊರತೆಗೆದು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಆರೋಪಿ ಲಾಡಖಾನ್ ಆಸ್ಪತ್ರೆ ನಡೆಸುತ್ತಿದ್ದ ಎಂದು ತಿಳಿದು ಬಂದಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆಯನ್ನು ಸೀಜ್ ಮಾಡಿದ್ದಾರೆ. ಬಂಧಿತ ಲಾಡಖಾನ್ ಗರ್ಭಪಾತ ಹಾಗೂ ಮಗು ಮಾರಾಟ ಕೇಸ್ನಲ್ಲಿ ಎ2 ಆರೋಪಿಯಾಗಿದ್ದಾನೆ.
ಇತ್ತೀಚೆಗೆ ರಾಮತೀರ್ಥ ನಗರದಲ್ಲಿ ಮಕ್ಕಳ ರಕ್ಷಣಾ ಘಟಕದ ಕೈಗೆ ಸಿಕ್ಕಿ ಬಿದ್ದಿದ್ದ ಮಹಿಳೆಯಿಂದ ಈ ಜಾಲ ಪೊಲೀಸರ ಖೆಡ್ಡಾಕ್ಕೆ ಬಿದ್ದಿದೆ. ನಕಲಿ ವೈದ್ಯನೊಬ್ಬನಿಂದ ಮಗುವನ್ನು 60 ಸಾವಿರ ರೂ.ಗೆ ಪಡೆದು 1.40 ಲಕ್ಷ ರೂ.ಗೆ ಮಾರಾಟ ಮಾಡಲು ಮಹಾದೇವಿ ಎಂಬ ಮಹಿಳೆ ಬಂದಿದ್ದಳು. ಈ ವಿಷಯ ತಿಳಿದುಕೊಂಡಿದ್ದ ಮಕ್ಕಳ ರಕ್ಷಣಾ ಘಟಕ ಪೊಲೀಸರ ಸಹಾಯದಿಂದ ಆಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಇಡೀ ಪ್ರಕರಣ ಬೆಳಕಿಗೆ ಬಂದಿತ್ತು.