Tag: Fog

  • ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಂಜು

    ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಂಜು

    ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯಾದ್ಯಂತ ಚಳಿ ಹಾಗೂ ಮುಂಜಾನೆಯ ಮಂಜು ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ಬೀಳುತ್ತಿರುವ ದಟ್ಟ ಮಂಜು ಬೆಳಗ್ಗೆ 9 ಗಂಟೆಯಾದರೂ ಕೂಡ ಸೂರ್ಯನ ದರ್ಶನವಾಗದ ಮಟ್ಟಿಗೆ ಬೀಳುತ್ತಿದೆ.

    ಬೆಳಗ್ಗಿನ ಜಾವಕ್ಕೆ ಶುರುವಾದ ಮಂಜು ಬೆಳಗ್ಗೆ 9.30 ಗಂಟೆಯಾದರೂ ಕೂಡ ಬೀಳುತ್ತಲೇ ಇತ್ತು. ಕುಂದಾನಗರಿ ಜನ ಒಂದು ಕ್ಷಣ ಇದು ಮಂಜೋ, ಮಳೆಯೋ ಎಂದು ಆಶ್ಚರ್ಯಗೊಂಡರು. ಕೆಲ ಜನರು ಈ ಮಂಜಿನ ವಾತಾವರಣದ ಖುಷಿಪಟ್ಟರೆ, ವಾಹನ ಸವಾರರು ಮುಂದಿನ ದೃಶ್ಯ ಕಾಣದೇ ಪೇಚಿಗೆ ಸಿಲುಕಿದರು.

    ಶಾಲಾ-ಕಾಲೇಜು, ನೌಕರಿ ಬೇರೆಡೆ ಹೋಗುವ ಜನ ಸ್ವೇಟರ್, ಟೋಪಿ ಧರಿಸಿಕೊಂಡೆ ಮನೆಯಿಂದ ಹೊರ ಬರುತ್ತಿದ್ದರು. ಬೆಳಗಾವಿಯ ನಗರ ಪ್ರದೇಶ, ರಾಷ್ಟ್ರೀಯ ಹೆದ್ದಾರಿ, ಗ್ರಾಮೀಣ ಪ್ರದೇಶದಲ್ಲೂ ಮಂಜು ಆವರಿಸುತ್ತಿದೆ. ಇದು ಪ್ರಕೃತಿ ಪ್ರಿಯರಿಗೆ ರಸದೌತಣ ನೀಡಿದಂತಾಗುತ್ತಿದೆ.

    ನಗರದಲ್ಲಿ ಪ್ರತಿದಿನ ಬೆಳಗ್ಗೆ 6ರಿಂದ 8ರವರೆಗೆ ಯಾವುದೇ ದಿಕ್ಕಿಗೂ ಕಣ್ಣು ಹಾಯಿಸಿದರೂ ಮಂಜು ಮುಸುಕಿದ ವಾತಾವರಣ ಕಂಡು ಬರುತ್ತಿದೆ. ವಾಯು ವಿಹಾರಕ್ಕೆ ಹೊರಟ ಜನರಿಗೆ ಪಕ್ಕದ ಮನೆ, ರಸ್ತೆಯಲ್ಲಿ ಹೋಗುವ ಜನರು, ಎಲ್ಲವೂ ಅಸ್ಪಷ್ಟವಾಗಿ, ಅಸದೃಶ್ಯವಾಗಿ ಕಾಣುತ್ತಿದ್ದಾರೆ. ಜನರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಅಪರೂಪದ ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದಾರೆ.

  • ತುಮಕೂರಲ್ಲಿ ಬೆಳ್ಳಂಬೆಳಗ್ಗೆ ದಟ್ಟ ಮಂಜು- ಪರದಾಡಿದ ವಾಹನ ಸವಾರರು

    ತುಮಕೂರಲ್ಲಿ ಬೆಳ್ಳಂಬೆಳಗ್ಗೆ ದಟ್ಟ ಮಂಜು- ಪರದಾಡಿದ ವಾಹನ ಸವಾರರು

    ತುಮಕೂರು: ಜಿಲ್ಲೆಗೆ ಇಂದು ಭಾಗಶಃ ಮಂಜಿನ ಮುಸುಕು ಧರಿಸಿತ್ತು. ಬೆಳಗ್ಗಿನ ಜಾವ ಆವರಿಸಿದ ಮಂಜು ತಣ್ಣನೆಯ ಅನುಭವದೊಂದಿಗೆ ಒಂದಿಷ್ಟು ಕಿರಿಕಿರಿಯನ್ನೂ ನೀಡಿತ್ತು. ತುಮಕೂರು ನಗರ, ನಾಮದ ಚಿಲುಮೆ, ಗುಬ್ಬಿಯ ದೊಡ್ಡಗುಣಿ, ಕುಣಿಗಲ್ ತಾಲೂಕಿನಾದ್ಯಂತ ಬೆಳಗ್ಗೆ 8-30ರ ವರೆಗೆ ಸೂರ್ಯನ ದರ್ಶನವಾಗಿಲ್ಲ. ಅಷ್ಟರ ಮಟ್ಟಿಗೆ ದಟ್ಟವಾದ ಮಂಜು ಮುಸುಕಿತ್ತು.

    ವಾತಾವರಣದಲ್ಲಿ ಮಂಜು ಮುಸುಕಿರೋದರ ಆಹ್ಲಾದ, ತಣ್ಣನೆಯ ಅನುಭವವನ್ನು ಪಡೆದ ಜನರು, ಕೆಲ ಹೊತ್ತು ಖುಷಿಯಿಂದ ಕಾಲ ಕಳೆದರು. ಜಾಗಿಂಗ್ ಹೋಗಿದ್ದೋರು ಚುಮುಚುಮು ಚಳಿ, ಮಂಜಿನ ಮಬ್ಬಿನಲ್ಲಿ ಹೆಜ್ಜೆ ಇಟ್ಟಿದ್ದಾರೆ. ಕಾಡಂಚಿನ ಪ್ರದೇಶಗಳು, ಬೆಟ್ಟ-ಗುಡ್ಡಗಳು ಶುಭ್ರವಾದ ಶ್ವೇತವರ್ಣದ ಚಾದರ ಹೊದ್ದಂತೆ ಕಂಗೊಳಿಸುತ್ತಿತ್ತು. ಬೆಳ್ಳಂಬೆಳಗ್ಗೆ ಚಿಲಿಪಿಲಿಯಾಡಬೇಕಿದ್ದ ಪಕ್ಷಿಗಳು ಶೀತದ ಪರಿಣಾಮ ಕೊಂಚ ತಡವಾಗಿ ಸದ್ದು ಮಾಡಿದವು.

    ಮಂಜು ಮುಸುಕಿದ್ದರ ಪರಿಣಾಮ ವಾಹನ ಸವಾರರು ಕಿರಿಕಿರಿ ಅನುಭವಿಸುವಂತಾಯಿತು. ವಾಹನ ಹೋಗಲು ರಸ್ತೆ ಸರಿಯಾಗಿ ಕಾಣಿಸುತ್ತಿರಲಿಲ್ಲವಾದ್ದರಿಂದ ವೇಗವಾಗಿ ವಾಹನ ಚಲಿಸಲು ಆಗಿಲ್ಲ. ಬೆಳಗ್ಗೆ 9 ಗಂಟೆ ನಂತರ ನಿಧಾನವಾಗಿ ಸೂರ್ಯನ ದರ್ಶನವಾಯಿತು. ಆ ನಂತರ ವಾತಾವರಣ ಸಹಜ ಸ್ಥಿತಿಗೆ ಬಂದಿದೆ.

  • ಸುಡು ಬಿಸಿಲಿನಿಂದ ದೂರಾಗಿ ಮಂಜಿನಗರಿಯಾದ ಗಡಿ ಜಿಲ್ಲೆ

    ಸುಡು ಬಿಸಿಲಿನಿಂದ ದೂರಾಗಿ ಮಂಜಿನಗರಿಯಾದ ಗಡಿ ಜಿಲ್ಲೆ

    ಬೀದರ್: ಸದಾ ಬಿಸಿಲಿನ ಬೆಗೆಯಿಂದ ಸುಡುತ್ತಿದ್ದ ಗಡಿ ಜಿಲ್ಲೆ ಬೀದರ್ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಮಂಜಿನನಗರಿಯಾಗಿ ಬದಲಾಗಿದ್ದು, ಮೊದಲ ಬಾರಿಗೆ ಕೂಲ್ ವಾತಾವರಣ ಜಿಲ್ಲೆಯಲ್ಲಿ ಸೃಷ್ಟಿಯಾಗಿದೆ.

    ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಬೀದರ್ ಜಿಲ್ಲೆ ಮಂಜಿನಿಂದ ಆವರಿಸಿಕೊಂಡಿದೆ. ಯಾವಾಗಲೂ ಕೆಂಡದಂತ ಬಿಸಿಲಿನ ಬೇಗೆಗೆ ಸುಡುತ್ತಿದ್ದ ಜನರು ಇಂದು ಮಂಜಿನ ವಾತವಾರಣಕ್ಕೆ ಮನಸೋತ್ತಿದ್ದಾರೆ.

    ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ದಟ್ಟವಾದ ಮಂಜು ಕವಿದಿದ್ದು ಜನರು ಸುಂದರ ವಾತಾವರಣವನ್ನು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಅತಿ ಹೆಚ್ಚು ಚಳಿ ಗಡಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಒಂದೆಡೆ ಜಿಲ್ಲೆ ಮಂಜಿನ ನಗರಿಯಾಗಿದೆ ಎಂದು ಜನರು ಖುಷಿ ಪಟ್ಟರೆ, ಇನ್ನೊಂದೆಡೆ ಚಳಿಗೆ ಹೈರಾಣಾಗಿದ್ದಾರೆ.

    ಶಬ್ಬಲ್ ಬರಿದ್, ಕೋಟೆ, ರಿಂಗ್ ರೋಡ್ ಸೇರಿದಂತೆ ಹಲವು ಕಡೆ ಜನರು ಹೆಚ್ಚಾಗಿ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದರು. ಆದರೆ ಇಂದು ದಟ್ಟವಾದ ಮಂಜು ಕವಿದಿರುವ ವಾತಾವರಣ ಇರುವ ಪರಿಣಾಮ ಜನರು ಮನೆಯಿಂದ ಹೊರಗೆ ಬಾದರೆ ಬೆಚ್ಚಗೆ ಕುಳಿತಿದ್ದಾರೆ.

  • ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಚಾರ್ಮಾಡಿ ಘಾಟ್

    ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಚಾರ್ಮಾಡಿ ಘಾಟ್

    ಚಿಕ್ಕಮಗಳೂರು: ಮಲೆನಾಡಲ್ಲೀಗ ದೃಶ್ಯ ಕಾವ್ಯವೇ ಮೇಳೈಸಿದೆ. ಪಶ್ಚಿಮ ಘಟ್ಟದ ಚಾರ್ಮಾಡಿ ಘಾಟಿನಲ್ಲಿ ನಿಸರ್ಗ ಮಾತೆಯ ನೈಜ ಸೊಬಗು ಅನಾವರಣಗೊಂಡಿದೆ.

    ಕಾಫಿನಾಡು ಚಿಕ್ಕಮಗಳೂರು ಅಂದರೆ ಸಾಕು. ಅಲ್ಲಿನ ಸೌಂದರ್ಯ ರಾಶಿ ಕಣ್ಮುಂದೆ ಬಂದು ನಿಲ್ಲುತ್ತೆ. ಬೆಟ್ಟ-ಗುಡ್ಡಗಳ ಸಾಲು. ಬಾನಿಗೆ ಮುತ್ತಿಕ್ಕುವ ಮಂಜಿನ ರಾಶಿ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಹಸಿರ ಬೆಟ್ಟಗಳ ಸಾಲಿನಿಂದ ಧುಮ್ಮಿಕ್ಕಿ ಹರಿಯುವ ಜಲಧಾರೆ ಚಾರ್ಮಾಡಿ ಘಾಟಿಯ ಸೊಬಗನ್ನು ಇಮ್ಮಡಿಗೊಳಿಸಿದೆ.

    ಮಳೆಗಾಲ ಬಂತೆಂದರೆ ಸಾಕು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿಯ ಚಾರ್ಮಾಡಿಯ ಸೌಂದರ್ಯವನ್ನು ವರ್ಣಿಸಲು ಪದಗಳೇ ಸಾಲದು. ನದಿಗಳು ಜೀವ ಕಳೆಯನ್ನು ಪಡೆದುಕೊಳ್ಳುತ್ತದೆ. ಬಂಡೆಗಳ ಮೇಲಿನಿಂದ ಝುಳು-ಝುಳು ನಿನಾದ ಗೈಯುತ್ತಾ ಧುಮ್ಮಿಕ್ಕುವ ಜಲಧಾರೆಗಳು ಕ್ಷೀರಧಾರೆಯಂತೆ ಭಾಸವಾಗುತ್ತದೆ. ನಿರಂತರ ಮಳೆಯ ಆಗಮನಕ್ಕೆ ಬೆಟ್ಟಗಳ ಸಾಲು ಹಸಿರೊದ್ದು ಝೇಂಕರಿಸುತ್ತಿದ್ದರೆ, ಮಂಜಿನ ಕಣ್ಣಮುಚ್ಚಾಲೆ ಆಟ ಪ್ರವಾಸಿಗರ ಪಾಲಿನ ಸ್ವರ್ಗವಾಗಿ ಮಾರ್ಪಟ್ಟಿದೆ.

    ಬಾನೆತ್ತರದ ಶಿಖರಗಳಿಂದ ರಭಸವಾಗಿ ಚಿಮ್ಮೋ ಜಲಪಾತಗಳು ರಮಣೀಯ ನೋಟವನ್ನು ಸೃಷ್ಟಿಸಿದರೆ, ದಟ್ಟ ಕಾನನದ ನಡುವಿನ ಝುಳು-ಝಳು ನಿನಾದೊಂದಿಗೆ ಹರಿಯೋ ಝರಿಗಳು ಮನಕ್ಕೆ ಮುದ ನೀಡುತ್ತದೆ. ಮುಗಿಲು ಚುಂಬಿಸುವ ಹಸಿರು ಬೆಟ್ಟದ ಮೇಲೆಲ್ಲ ಹರಡಿರುವ ಹಿಮದ ರಾಶಿ. ಬೆಳ್ಮುಗಿಲ ಸಾಲಿಂದ ಬಂಗಾರದ ಕಿರಣಗಳನ್ನು ಹೊರಸೂಸುವ ದಿನಕರನ ಚಿತ್ತಾರ. ಬಂಡೆಯಿಂದ ಬಂಡೆಗೆ ಜಿಗಿಯುತ್ತಾ ಸಾಗುವ ಜಲಧಾರೆಯ ಮಂಜುಳಗಾನ. ಪ್ರಶಾಂತತೆಯಲ್ಲೂ ಹಸಿರ ಹೊದ್ದು ಮಲಗಿರೋ ದಟ್ಟ ಕಾನನಗಳು ಮಲೆನಾಡಲ್ಲೊಂದು ಲೋಕವನ್ನೆ ಸೃಷ್ಟಿಸಿವೆ. ಹಸಿರು ಬೆಟ್ಟಗಳ ನಡುವೆ ಧುಮ್ಮಿಕ್ಕಿ ಹರಿಯೋ ಜಲಧಾರೆಯ ಕವಲು. ನೆಲಕ್ಕೆ ಮುತ್ತಿಕ್ಕಿ ಪುಟಿಯುವ ನೀರ ಹನಿಗಳೊಳಗಿನ ಜಲಪಾತಗಳ ವೈಭವ. ಮುಂಗಾರಿನ ಸಿಂಚನಕ್ಕೆ ಚಾರ್ಮಾಡಿ ತುಂಬೆಲ್ಲಾ ಜಲಪಾತಗಳ ಚಿತ್ತಾರವೇ ಅನಾವರಣಗೊಂಡಿದೆ.

  • ಯುದ್ಧ ವಿಮಾನ ಪತನ- ಭಾರೀ ದುರಂತವನ್ನೇ ತಡೆದು ಅಮರರಾದ ಪೈಲಟ್‍ಗಳು..!

    ಯುದ್ಧ ವಿಮಾನ ಪತನ- ಭಾರೀ ದುರಂತವನ್ನೇ ತಡೆದು ಅಮರರಾದ ಪೈಲಟ್‍ಗಳು..!

    ಬೆಂಗಳೂರು: ತಾಂತ್ರಿಕ ದೋಷದಿಂದ ವಾಯುಪಡೆಯ ಮಿರಾಜ್-2000 ನಂಬರ್‍ನ ಯುದ್ಧ ವಿಮಾನ ಬೆಂಗಳೂರಿನ ಎಚ್‍ಎಎಲ್‍ನ ಯಮಲೂರು ಬಳಿ ಪತನಗೊಂಡು ಇಬ್ಬರು ಪೈಲಟ್‍ಗಳು ಶುಕ್ರವಾರ ಸಾವನ್ನಪ್ಪಿದ್ದರು. ಆದರೆ ಪೈಲಟ್ ಗಳು ತಮ್ಮ ಜೀವತೆತ್ತು ಸಂಭವಿಸಬಹುದಾದ ಭಾರೀ ಅವಘಡವನ್ನು ತಡೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಪ್ರಾಯೋಗಿಕ ಹಾರಾಟ ವೇಳೆ ಈ ಅವಘಡ ಸಂಭವಿಸಿದ್ದು, ರನ್‍ವೇಯಲ್ಲಿ ಹಾರಾಟ ನಡೆಸಿದ್ದ ವಿಮಾನ ಟೇಕಾಫ್ ಆಗಿದ್ದರೆ ವಸತಿ ಹೆಚ್ಚಾಗಿರುವ ಪ್ರದೇಶದಲ್ಲಿ ಬೀಳುವ ಸಾಧ್ಯತೆ ಇತ್ತು. ಆದರೆ ಇದನ್ನು ಮನಗಂಡ ಫೈಲಟ್‍ಗಳು ವಿಮಾನ ಎತ್ತರಕ್ಕೆ ಟೇಕಾಫ್ ಮಾಡದಿರಲು ನಿರ್ಧರಿಸಿ ಹೊರ ಬರಲು ಪ್ರಯತ್ನಿಸಿದ್ದರು.

    ಅಂತಿಮ ಕ್ಷಣದಲ್ಲಿ ತಮ್ಮ ಪ್ರಾಣ ಉಳಿಸಿಕೊಳ್ಳುವ ಪ್ರಯತ್ನ ನಡೆಸಿದ್ದ ಪೈಲಟ್ ಗಳು ಪ್ಯಾರಚೂಟ್ ಬಳಸಿ ಹಾರಲು ಯತ್ನಿಸಿದ್ದರು. ಆದರೆ ಆ ವೇಳೆಗೆ ವಿಮಾನ ಸ್ಫೋಟಗೊಂಡಿತ್ತು. ಪರಿಣಾಮ ಸಿದ್ದಾರ್ಥ್ ನೇಗಿ (31), ಸಮೀರ್ ಅಬ್ರೋಲ್(33) ಜೀವ ಕಳೆದುಕೊಂಡಿದ್ದಾರೆ. ಸಮೀರ್ ಬೆಂಕಿ ಹೊತ್ತಿಕೊಂಡಿದ್ದ ಪ್ಯಾರಚೂಟ್ ಮೇಲೆಯೇ ಬಿದ್ದ ಪರಿಣಾಮ ಸುಟ್ಟು ಕರಕಲಾದರೆ, ತೀವ್ರ ಗಾಯಗೊಂಡಿದ್ದ ನೇಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರು.

    ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದು, ಒಂದೊಮ್ಮೆ ವಿಮಾನ ಜನ ವಸತಿ ಪ್ರದೇಶದಲ್ಲಿ ಪತನವಾಗಿದ್ದರೆ ಭಾರೀ ಅವಘಡ ಸಂಭವಿಸುತ್ತಿತ್ತು ಎಂದು ತಿಳಿಸಿದ್ದಾರೆ. ಅಲ್ಲದೇ ಈ ಕುರಿತು ಮಾಹಿತಿ ನೀಡಿರುವ ಎಚ್‍ಎಎಲ್ ಅಧಿಕಾರಿಯೊಬ್ಬರು ರನ್‍ವೇಯಲ್ಲಿಯೇ ವಿಮಾನದ ಟೈರ್ ಕಳಚಿ ಬಿದ್ದ ಪರಿಣಾಮ ಮುಂಭಾಗ ರನ್ ವೇಗೆ ಉಜ್ಜಿ ಬೆಂಕಿ ಕಿಡಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ವಿವರಿಸಿದ್ದಾರೆ.

    ವಿಮಾನ ಸ್ಫೋಟಗೊಂಡ ಅಲ್ಪ ದೂರದಲ್ಲೇ ಜನ ವಸತಿ ಪ್ರದೇಶಗಳಿದ್ದು, ಶಾಲೆ, ಟೆಕ್ ಪಾರ್ಕ್, ರಸ್ತೆ ಸೇರಿದಂತೆ ಹಲವು ಪ್ರದೇಶಗಳಿದೆ. ಒಂದೊಮ್ಮೆ ಪೈಟಲ್‍ಗಳು ವಿಮಾನವನ್ನು ರನ್ ವೇಯಿಂದ ಟೇಕಾಫ್ ಆಗಿದ್ದರೆ ವಸತಿ ಪ್ರದೇಶದಲ್ಲಿ ಉರುಳುವ ಸಾಧ್ಯತೆ ಇತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ- ಪೈಲಟ್ ದುರ್ಮರಣ

    ಎಚ್‍ಎಎಲ್ ಬಳಿ ಯುದ್ಧವಿಮಾನ ಪತನ- ಪೈಲಟ್ ದುರ್ಮರಣ

    ಬೆಂಗಳೂರು: ಇಲ್ಲಿ ಎಚ್‍ಎಎಲ್ ಏರ್ ಪೋರ್ಟ್  ಬಳಿ ಯುದ್ಧ ವಿಮಾನವೊಂದು ಪತನವಾಗಿದ್ದು, ಪೈಲಟ್ ಮೃತಪಟ್ಟಿರುವ ಘಟನೆ  ಇಂದು ನಡೆದಿದೆ.

    ಸಿದ್ದಾರ್ಥ್ ಮೃತ ದುರ್ದೈವಿ ಪೈಲಟ್ ಆಗಿದ್ದು, ಮಿರಾಜ್ ಎನ್ನುವ ಯುದ್ಧ ವಿಮಾನ ಪತನವಾಗಿದೆ. ಮಿರಾಜ್ ಭಾರೀ ಸ್ಫೋಟಗೊಂಡ ಪರಿಣಾಮ ದಟ್ಟವಾದ ಹೊಗೆ ಅಲ್ಲಿ ಆವರಿಸಿದೆ. ಇದರಿಂದ ಸ್ಥಳೀಯರು ಗಾಬರಿಗೊಂಡಿದ್ದಾರೆ.

    ಎಚ್ ಎ ಎಲ್ ನಿಂದ ಹೊರಭಾಗದಲ್ಲಿ ಮನೆಗಳ ಮೇಲೆ ಪತನವಾಗುವ ಸಾಧ್ಯತೆ ಇತ್ತು. ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಎಚ್ ಎ ಎಲ್ ಕಂಪೌಂಡ್ ಒಳಗೆ ಬಿದ್ದಿದೆ ಎನ್ನಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಾಜ್ಯದೆಲ್ಲೆಡೆ ಶುರುವಾಗಿದೆ ಮೈಕೊರೆಯುವ ಚಳಿ!

    ರಾಜ್ಯದೆಲ್ಲೆಡೆ ಶುರುವಾಗಿದೆ ಮೈಕೊರೆಯುವ ಚಳಿ!

    – ಕೊಡಗಿನಲ್ಲಿ ಸಂಜೆ 5.30ಕ್ಕೆ ಆವರಿಸುತ್ತೆ ಕತ್ತಲು
    – ಮಂಡ್ಯದಲ್ಲಿ ರಸ್ತೆ ಬದಿ ಬೆಂಕಿ ಕಾಯಿಸಿ ಕುಳಿತ ಜನ

    ಮಡಿಕೇರಿ/ಮಂಡ್ಯ/ಕೋಲಾರ: ದಕ್ಷಿಣ ಕಾಶ್ಮೀರ ಕೊಡಗು ಜಿಲ್ಲೆಯಲ್ಲಿಗ ಮೈಕೊರೆಯುವ ಚಳಿ ಶುರುವಾಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಕೊಡಗಿನವರ ಜೀವನ ಶೈಲಿಯನ್ನೇ ಈಗ ಬದಲಾಯಿಸಿದೆ.

    ಗಿರಿ ಪ್ರದೇಶದಲ್ಲಿರುವ ಮಡಿಕೇರಿಯಲ್ಲಿ ದಿನವಿಡೀ ಚಳಿಯ ಅನುಭವ ಹೆಚ್ಚಾಗಿದೆ. ಬೆಳಗ್ಗೆ 7 ಗಂಟೆಯಾದರೂ ಬೆಳಕಾಗುತ್ತಿಲ್ಲ. ಸಂಜೆ 5:30ಗಂಟೆಗೆ ಕತ್ತಲು ಆವರಿಸುತ್ತಿದೆ. ಸಾಮಾನ್ಯವಾಗಿ ಮಡಿಕೇರಿಯಲ್ಲಿ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಚಳಿ ಆರಂಭಗೊಂಡು ಫೆಬ್ರವರಿ ತಿಂಗಳವರೆಗೂ ಮುಂದುವರಿಯುತ್ತದೆ. ಕನಿಷ್ಟ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ವರೆಗೆ ಇಳಿದಿರುತ್ತದೆ.

    ಅತಿಯಾದ ಮೈ ಕೊರೆಯುವ ವಾತಾವರಣ ಪ್ರವಾಸಿಗರಿಗೆ ಮೋಜು ಮಸ್ತಿಯ ಸುಖಾನುಭವ ನೀಡಿದ್ದರೆ, ಕೆಲಸಕ್ಕೆ ತೆರಳುವ ಸ್ಥಳಿಯರಿಗೆ, ವ್ಯಾಪಾರಿಗಳಿಗೆ ಅನಾನುಕೂಲವಾಗಿದೆ. ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರೆಲ್ಲ ಕೋಟು, ಶಾಲು ಹೊದ್ದು ಕೆಲಸ ನಿರ್ವಹಣೆ ಮಾಡುತ್ತಿದ್ದಾರೆ.

    ಇತ್ತ ಮಂಡ್ಯದಲ್ಲೂ ಚಳಿ ಹೆಚ್ಚಾಗಿದೆ. ಚಳಿಗೆ ಜನರು ರಸ್ತೆ ಬದಿ ಬೆಂಕಿ ಕಾಯಿಸುತ್ತ ಕುಳಿತಿರುವ ದೃಶ್ಯ ಈಗ ಕಂಡುಬರುತ್ತಿದೆ. ಕಳೆದ ದಿನಗಳಿಗೆ ಹೋಲಿಸಿದರೆ ಬುಧವಾರ ಚಳಿಯ ಪ್ರಮಾಣ ಏರಿಕೆಯಾಗಿದೆ. ಜನರು ಈ ಚಳಿಗೆ ನಡುಗುತ್ತಿದ್ದು, ಚಳಿ ಕಡಿಮೆ ಮಾಡಿಕೊಳ್ಳಲು ರಸ್ತೆ ಬದಿ ಬೆಂಕಿ ಕಾಯಿಸುತ್ತಿದ್ದಾರೆ.

    ಮಳೆರಾಯನ ಶಾಪದಿಂದ ಮಳೆಯಿಲ್ಲದೆ ಕೊರಗುತ್ತಿರುವ ಕೋಲಾರ ಜನತೆ ಕಳೆದ ಒಂದು ವಾರದಿಂದ ಚಳಿಯಿಂದ ನಡುಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ದಟ್ಟವಾದ ಇಬ್ಬನಿ ಈ ಭಾಗದ ಗಿರಿ ಶಿಖರಗಳನ್ನ ಆವರಿಸಿಕೊಂಡಿದೆ. ಇಲ್ಲಿನ ರಸ್ತೆಗಳು, ರಾಷ್ಟ್ರೀಯ ಹೆದ್ದಾರಿ ಜೊತೆಗೆ ಬೆಟ್ಟದ ತಪ್ಪಿಲಿನ ರಸ್ತೆಗಳಂತೂ ಊಟಿಯ ವಾತಾವರಣವನ್ನೇ ನಿರ್ಮಾಣ ಮಾಡಿವೆ.

    ಚಳಿ ಜೊತೆಗೆ ದಟ್ಟ ಮಂಜು ಆವರಿಸಿ ಇಡೀ ಕೋಲಾರ ಜಿಲ್ಲೆಯನ್ನ ಸುತ್ತುವರಿದಿದೆ. ನಗರದ ಸುತ್ತ ದಟ್ಟವಾದ ಮಂಜು ಆವರಿಸಿದ ಪರಿಣಾಮ ಗಿಡ-ಮರಗಳ ಎಲೆಗಳಿಂದ ನೀರು ತೊಟ್ಟಿಕ್ಕುತ್ತಿದೆ. ದಟ್ಟಣೆಯ ಹಿಮ ಕಾಣಿಸಿಕೊಳ್ಳುವ ಮೂಲಕ ವಾಹನ ಸವಾರರು ಪರದಾಡುವ ಪರಿಸ್ಥಿತಿಯೂ ಕೂಡ ಜಿಲ್ಲೆಯಲ್ಲಿ ನಿರ್ಮಾಣವಾಗಿತ್ತು.

    ಚುಮು ಚುಮು ಚಳಿಗೆ ಮನೆ ಬಿಟ್ಟು ಹೊರ ಬಾರದ ನಗರ ಪ್ರದೇಶದ ಜನ ಚಳಿಗೆ 9 ಗಂಟೆಯ ಒಳಗಡೆ ಗೂಡು ಸೇರುತ್ತಿದ್ದಾರೆ. ದಟ್ಟ ಇಬ್ಬನಿಯಿಂದಾಗಿ ಬೈಕ್ ಸವಾರರು, ವಿದ್ಯಾರ್ಥಿಗಳು ಸೇರಿದಂತೆ ಜನರು ಬೆಚ್ಚನೆಯ ಉಡುಪುಗಳ ಮೊರೆ ಹೋಗುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಸಿಲನಾಡು ವಿಜಯಪುರದಲ್ಲಿ ಇಬ್ಬನಿಯ ಅಬ್ಬರಕ್ಕೆ ಪರದಾಡಿದ ವಾಹನ ಸವಾರರು

    ಬಿಸಿಲನಾಡು ವಿಜಯಪುರದಲ್ಲಿ ಇಬ್ಬನಿಯ ಅಬ್ಬರಕ್ಕೆ ಪರದಾಡಿದ ವಾಹನ ಸವಾರರು

    ವಿಜಯಪುರ: ಬಿಸಿಲ ನಾಡು ಗುಮ್ಮಟ ನಗರಿ ವಿಜಯಪುರದಲ್ಲಿ ಈಗ ಇಬ್ಬನಿಯ ಅಬ್ಬರ ಶುರುವಾಗಿದೆ.

    ಗುಮ್ಮಟ ನಗರಿಯಲ್ಲಿ ಮಿತಿಮೀರಿದ ಮೈ ಕೊರೆಯುವ ಚಳಿ ಆರಂಭವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಹೆಚ್ಚಾಗಿರುವ ಚಳಿಯಿಂದ ಜನರು ತತ್ತರಿಸಿದ್ದು, ಬುಧವಾರ ಬಿದ್ದ ಭಾರೀ ಪ್ರಮಾಣದ ಇಬ್ಬನಿಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.

    ಜನರು ಹಾಗೂ ವಾಹನಗಳು ಬೆಳಗ್ಗೆ ಎಂಟು ಗಂಟೆ ಆದರೂ ರಸ್ತೆ ಮೇಲೆ ಕಾಣಿಸುತ್ತಿಲ್ಲ. ಎದುರಿಗೆ ಬರುವ ವಾಹನಗಳು ಕಾಣದಂತಾಗಿದ್ದು ಸವಾರರ ಪರದಾಟಕ್ಕೆ ಕಾರಣವಾಗಿತ್ತು. ಮೊದಲ ಬಾರಿಗೆ ಆವರಿಸಿದ ಮಂಜಿನಿಂದಾಗಿ ವಿಜಯಪುರ ಜನತೆ ಒಂದೆಡೆ ಪರದಾಡಿದರೆ, ಇನ್ನೊಂದೆಡೆ ಬಿಸಿಲ ನಾಡಲ್ಲಿ ಮಲೆನಾಡ ಸೊಬಗು ಕಂಡು ಫುಲ್ ಖುಷಿಯಾಗಿದ್ದಾರೆ.

    ಬರದಿಂದ ಕಂಗಲಾಗಿದ್ದ ಜಿಲ್ಲೆಯ ರೈತರು ಇಬ್ಬನಿಯನ್ನು ಕಂಡು ಕೊಂಚ ಸಂತಸಗೊಂಡಿದ್ದಾರೆ. ಇಬ್ಬನಿಯಿಂದ ಜೋಳ ಸೇರಿದಂತೆ ಕೆಲ ಬೆಳೆಗಳು ಚೆನ್ನಾಗಿ ಬರಲಿರುವ ಕಾರಣ ರೈತರು ಸಂತೋಷದಲ್ಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚುಮುಚುಮು ಚಳಿಯ ಮಂಜಿನಿಂದ ಸಂಪೂರ್ಣ ಆವೃತ್ತಗೊಂಡ ಶಿವಗಂಗೆ: ವಿಡಿಯೋ

    ಚುಮುಚುಮು ಚಳಿಯ ಮಂಜಿನಿಂದ ಸಂಪೂರ್ಣ ಆವೃತ್ತಗೊಂಡ ಶಿವಗಂಗೆ: ವಿಡಿಯೋ

    ಬೆಂಗಳೂರು: ದಕ್ಷಿಣಕಾಶಿ ಎಂದೇ ಪ್ರಸಿದ್ಧವಾಗಿರುವ ಪುಣ್ಯ ಕ್ಷೇತ್ರ, ಬಯಲು ಸೀಮೆಯಲ್ಲಿದ್ದರು ಮಲೆನಾಡ ಸೊಬಗನ್ನು ಶಿವಗಂಗೆ ಗಿರಿಯಲ್ಲಿ ಕಾಣಬಹುದು. ಶಿವಗಂಗೆ ಸಂಪೂರ್ಣ ಚುಮುಚುಮು ಚಳಿ ಹಾಗೂ ಮಂಜಿನಿಂದ ಆವೃತ್ತವಾಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಇತಿಹಾಸ ಪ್ರಸಿದ್ದ, ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ಮಂಜಿನ ಮಳೆಯಂತೆ ಆವೃತ್ತವಾಗಿರುವ ದೃಶ್ಯ ಸೆರೆಯಾಗಿದೆ. ಎತ್ತ ನೋಡಿದ್ರೂ ಮಂಜು, ಮುಗಿಲೆತ್ತರ ನಿಂತಿರುವ ಗಿರಿ ಶಿಖರ. ಇಂತಹ ದೃಶ್ಯಗಳನ್ನ ನೋಡೋಕೆ ಕರಾವಳಿ ಪ್ರದೇಶಕ್ಕೆ ಹೋಗಬೇಕಾಗುತ್ತದೆ. ಆದರೆ ಬೆಂಗಳೂರಿನ ಕೂಗಳತೆ ದೂರದಲ್ಲೇ ಇಂತಹ ರೋಮಾಂಚನವನ್ನು ಕಣ್ತುಂಬಿಕೊಳ್ಳಬಹುದು.

    ಗಿರಿಯ ತುತ್ತತುದಿ ಮಂಜಿನಿಂದ ಸ್ನಾನ ಮಾಡಿಸಿದ ರೀತಿ ಗಿರಿಯ ವಿಹಂಗಮ ನೋಟ ಕಂಡುಬಂದಿದೆ. ಒಟ್ಟಾರೆ ಆಕರ್ಷಕವಾದ ಗಿರಿಯ ಮೇಲ್ಭಾಗದಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದ್ದು, ಚಾರಣಿಗರಿಗೆ ಮಲೆನಾಡಿನ ಅನುಭವ ಶಿವಗಂಗೆ ಬೆಟ್ಟದಲ್ಲಿ ಸಿಗುವುದರಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=y9NLIZzBlj0&feature=youtu.be

     

  • ಉಡುಪಿಯಲ್ಲಿ ಮಂಜು ಮಳೆಯ ನಡುವೆ ಬಿರುಸಿನ ಮತದಾನ

    ಉಡುಪಿಯಲ್ಲಿ ಮಂಜು ಮಳೆಯ ನಡುವೆ ಬಿರುಸಿನ ಮತದಾನ

    ಉಡುಪಿ: ಜಿಲ್ಲೆಯ ನಾಲ್ಕು ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಮುಂಜಾನೆಯಿಂದಲೇ ಮತದಾನ ಆರಂಭವಾಗಿದ್ದು, ಹಕ್ಕು ಚಲಾಯಿಸಲು ಮಂಜು-ಮಳೆಯ ನಡುವೆಯೂ ಮತದಾರರು ಸರತಿ ಸಾಲಿನಲ್ಲಿ ನಿಂತ ದೃಶ್ಯ ಬೆಳಗ್ಗೆಯಿಂದಲೇ ಕಂಡುಬಂದಿದೆ.

    ನಗರದಲ್ಲಿ ಇನ್ನೂ ಸರಿಯಾಗಿ ಬೆಳಕಾಗದ ವಾತಾವರಣ ಇದ್ದಾಗಲೇ, ಜನ ಆಸಕ್ತಿಯಿಂದ ಮತದಾನ ಮಾಡಿದ್ದಾರೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗಿದ್ದು, ಕಾರ್ಮೋಡ ಆವರಿಸಿರುವ ವಾತಾವರಣವಿದೆ. ಮಂಜಿನ ನಡುವೆಯೂ ಜನ ಮತದಾನ ಮಾಡುತ್ತಿದ್ದಾರೆ.

    ನಗರದ ಕಡಿಯಾಳಿ ಶಾಲೆಯಲ್ಲಿ ಮಾಜಿ ಗೃಹ ಸಚಿವ ಡಾ. ವಿ.ಎಸ್ ಆಚಾರ್ಯರ ಕುಟುಂಬ ಮತದಾನದಲ್ಲಿ ಪಾಲ್ಗೊಂಡಿತು. ಆಚಾರ್ಯ ಪುತ್ರ ಡಾ. ಕಿರಣ್ ಕುಟುಂಬ ಸಮೇತರಾಗಿ ಬಂದು ವೋಟ್ ಮಾಡಿದರು. ಈ ನಡುವೆ ತುಂತುರು ಮಳೆ ಆರಂಭವಾದರೂ, ವರ್ಷಧಾರೆಯ ನಡುವೆಯೇ ಜನ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾವಣೆ ಮಾಡಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಕೂಡ ದಂಪತಿ ಸಮೇತ ಬಂದು ಮತದಾನ ಮಾಡಿದ್ದು, ಅಜ್ಜರಕಾಡು ವಾರ್ಡಿನ ಮಹಿಳಾ ಪಿಯು ಕಾಲೇಜಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.

    ನಗರ ಪ್ರದೇಶದಲ್ಲೂ ದಟ್ಟ ಮಂಜಿನ ವಾತಾವರಣ ಕಂಡು ಬಂದಿದ್ದು, ಜಿಲ್ಲೆಯಾದ್ಯಂತ ಚುನಾವಣೆ ಇರುವ ಕಡೆ ರಜೆ ಘೋಷಿಸಿಲಾಗಿದೆ. ಬೆಳಗ್ಗಿನಿಂದಲೇ ಎಲ್ಲಾ ಮತಗಟ್ಟೆಗಳಲ್ಲಿ ಸರತಿ ಸಾಲಿನ ದೃಶ್ಯ ಸಾಮಾನ್ಯವಾಗಿ ಕಂಡು ಬಂದಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಒಂದೇ ಕಡ ಜನ ಗುಂಪು ಸೇರದಂತೆ ನೋಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv