Tag: followers

  • ಬಿಗ್‍ಬಾಸ್ ಸೆಲೆಬ್ರಿಟಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್!

    ಬಿಗ್‍ಬಾಸ್ ಸೆಲೆಬ್ರಿಟಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್!

    ಬೆಂಗಳೂರು: ಈ ಬಾರಿಯ ಬಿಗ್ ಬಾಸ್ ಮನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೆಲೆಬ್ರಿಟಿಗಳು ಭಾಗವಹಿಸಬೇಕೆಂದು ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.

    ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-6 ಇದೇ ತಿಂಗಳಿನಿಂದ ಶುರುವಾಗುತ್ತಿದೆ. ಕಳೆದ ಸೀಸನ್‍ನಲ್ಲಿ ಬಿಗ್ ಬಾಸ್ ಮನೆಯಲ್ಲಿ ಅರ್ಧ ಸೆಲೆಬ್ರಿಟಿ ಹಾಗೂ ಅರ್ಧ ಕಾಮನ್ ಮ್ಯಾನ್ ಇದ್ದರು. ಆದರೆ ಈ ಸೀಸನ್‍ನಲ್ಲಿ ಹೆಚ್ಚು ಕಾಮನ್ ಮ್ಯಾನ್ ಇರಲಿದ್ದಾರೆ ಎಂಬುದನ್ನು ಬಿಗ್ ಬಾಸ್ ಆಯೋಜಕರು ಸುಳಿವು ನೀಡಿದ್ದಾರೆ.

    ಆರಂಭದ ಆವೃತ್ತಿಯಲ್ಲಿ 15 ಮಂದಿ ಬಿಗ್ ಬಾಸ್ ಮನೆಗೆ ಹೋಗಿದ್ದರು. ನಂತರ ಕಳೆದ ಸೀಸನ್‍ನಲ್ಲಿ 19 ಮಂದಿ ಬಿಗ್ ಬಾಸ್ ಮನೆಯನ್ನು ಪ್ರವೇಶೀಸಿದ್ದರು. ಆದರೆ ಈ ಬಾರಿ ಒಟ್ಟು 18 ಮಂದಿ ಬಿಗ್ ಮನೆಗೆ ಹೋಗುವ ಅವಕಾಶ ಪಡೆಯಲಿದ್ದಾರೆ.

    ಕಳೆದ ಸೀಸನ್‍ನಲ್ಲಿ ಬಿಗ್ ಬಾಸ್ ಮನೆಯಲ್ಲಿ ಅರ್ಧ ಮಂದಿ ಸೆಲೆಬ್ರಿಟಿ ಹಾಗೂ ಅರ್ಧ ಮಂದಿ ಕಾಮನ್ ಮ್ಯಾನ್ ಇದ್ದರು. ಆದರೆ ಸೀಸನ್-6ನಲ್ಲಿ ಕಾಮನ್ ಮ್ಯಾನ್ ಹೆಚ್ಚು ಇರಲಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಎಷ್ಟು ಮಂದಿ ಇರಲಿದ್ದಾರೆ ಎಂಬುದನ್ನು ಆಯೋಜಕರು ಸುಳಿವು ನೀಡಲಿಲ್ಲ.

    ಬಿಗ್ ಬಾಸ್ ಶುರುವಾಗಲು ಕೆಲವೇ ದಿನಗಳು ಬಾಕಿ ಇದೆ. ಆದರೆ ಯಾರೆಲ್ಲ ಒಳಗಡೆ ಹೋಗಲಿದ್ದಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲವಂತೆ. ಈ ಬಾರಿ ಬಿಗ್ ಬಾಸ್ ಮನೆಗೆ ಸಾಧಾರಣ ವ್ಯಕ್ತಿಗಳನ್ನು ಆಯ್ಕೆ ಮಾಡುವುದರ ಬದಲು ವಿಭಿನ್ನವಾಗಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

    ಸದ್ಯ ಈ ಬಾರಿ ಬಿಗ್‍ಬಾಸ್ ಮನೆಯಲ್ಲಿ ಕಾಮನ್ ಮ್ಯಾನ್ ಹೆಚ್ಚು ಇರಲಿದ್ದು, ಕಾಮನ್ ಮ್ಯಾನ್ ಶೋ ಎಂದು ಆಗಲಿದೆ. ಅಲ್ಲದೇ ಕಳೆದ ಸೀಸನ್‍ನಲ್ಲಿ ಪ್ರತಿ ವಾರಾಂತ್ಯದಲ್ಲಿದ್ದ ಕಿಚನ್ ಟೈಂ ಈ ಬಾರಿ ಇರುವುದಿಲ್ಲ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಯಾಂಡಲ್‍ವುಡ್ ಪ್ರಿನ್ಸ್ ಗೆ ಬರ್ತ್ ಡೇ ಸಂಭ್ರಮ- ಸೆಲೆಬ್ರೇಷನ್ ವೇಳೆ ಧ್ರುವ ಸರ್ಜಾ ಅಭಿಮಾನಿಗಳಿಗೆ ಲಾಠಿ

    ಸ್ಯಾಂಡಲ್‍ವುಡ್ ಪ್ರಿನ್ಸ್ ಗೆ ಬರ್ತ್ ಡೇ ಸಂಭ್ರಮ- ಸೆಲೆಬ್ರೇಷನ್ ವೇಳೆ ಧ್ರುವ ಸರ್ಜಾ ಅಭಿಮಾನಿಗಳಿಗೆ ಲಾಠಿ

    ಬೆಂಗಳೂರು: ಸಾಂಡಲ್‍ವುಡ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳಿಗೆ ಶುಕ್ರವಾರ ತಡರಾತ್ರಿ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

    ಧ್ರುವ ಸರ್ಜಾ ನಿನ್ನೆ ತಡರಾತ್ರಿ ತಮ್ಮ 30ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಬೆಂಗಳೂರಿನ ಬನಶಂಕರಿಯ ಎರಡನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿದ್ದಾರೆ. ಈ ವೇಳೆ ಅಭಿಮಾನಿಗಳು ಮುಗಿಬಿದ್ದ ಕಾರಣ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಬಂದಿದ್ದ ಅಭಿಮಾನಿಗಳಿಗೆ ಗಾಯಗಳಾದವು.

    ಧ್ರುವ ತಮ್ಮ ಮುಂದಿನ ‘ಪೊಗರು’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು, ಧ್ರುವ ಈ ಹಿಂದೆ ಇದ್ದ ಲುಕ್‍ಗಿಂತ ಈ ಲುಕ್ ನಲ್ಲಿ ಅಭಿಮಾನಿಗಳ ಮನಸ್ಸು ಸೆಳೆದಿದ್ದಾರೆ. ಧ್ರುವ ನಟಿಸಿದ ಮೂರು ಚಿತ್ರದಲ್ಲಿ ಒಂದೇ ರೀತಿ ಲುಕ್‍ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಪೊಗರು ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ.

    ಪೊಗರು ಚಿತ್ರದ ಪೋಸ್ಟರ್ ನಲ್ಲಿ ಧ್ರುವ ಉದ್ದನೆಯ ಕೂದಲು ಹಾಗೂ ಗಡ್ಡ ಬೆಳೆಸಿಕೊಂಡಿದ್ದಾರೆ. ಸದ್ಯ ಧ್ರುವ ತಮ್ಮ ನಾಲ್ಕನೇ ಚಿತ್ರದಲ್ಲಿ ಯಾವ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದನ್ನು ನೋಡಲು ಅಭಿಮಾನಿಗಳಿಗೆ ಕುತೂಹಲ ಮೂಡಿದೆ.

    ಈ ಚಿತ್ರದಲ್ಲಿ ಧ್ರುವ ಸರ್ಜಾ ಬೇರೆ ಬೇರೆ ರೀತಿಯ ಎರಡು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಗಾಗಿ ಈ ಚಿತ್ರ ತಡವಾಗುತ್ತಿದೆ. ಸದ್ಯ ಚಿತ್ರದ ಎರಡನೇ ಹಂತದ ಶೂಟಿಂಗ್ ಅಕ್ಟೋಬರ್ 10ರಿಂದ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಸದ್ಯ ಪೊಗರು ಚಿತ್ರವನ್ನು ನಿರ್ದೇಶಕ ನಂದ ಕಿಶೋರ್ ನಿರ್ದೇಶನ ಮಾಡುತ್ತಿದ್ದು, ಬಿ.ಕೆ ಗಂಗಾಧರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯ ಈ ಚಿತ್ರಕ್ಕೆ ನಾಯಕಿ ಆಯ್ಕೆ ಆಗಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸ್ಯಾಡ್ ನ್ಯೂಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸ್ಯಾಡ್ ನ್ಯೂಸ್

    ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಸ್ ನಲ್ಲಿ ಕಾರು ಓಡಿಸವುದನ್ನು ನೋಡಲು ಕಾತುರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಬೇಸರದ ಸುದ್ದಿ ಸಿಕ್ಕಿದೆ.

    ಕಾರು ಅಪಘಾತದಲ್ಲಿ ಕೈ ಮೂಳೆ ಮುರಿದ ಕಾರಣ ದರ್ಶನ್ ಕೈಗೆ ಆಪರೇಷನ್ ಆಗಿದೆ. ಆಪರೇಷನ್ ಆದ ಮರು ದಿನ ದರ್ಶನ್, ನಾನು ಇನ್ನೊಂದು ವಾರದೊಳಗೆ ರೇಸ್ ನಲ್ಲಿ ಕಾರು ಓಡಿಸಬೇಕು. ಇದು ಸಾಧ್ಯ ತಾನೇ ಎನ್ನುವ ಗಂಭೀರ ಪ್ರಶ್ನೆಯನ್ನು ವೈದ್ಯರಿಗೆ ಕೇಳಿದ್ದಾರೆ. ಅದಕ್ಕೆ ವೈದ್ಯರು, ರೇಸ್ ಇರಲಿ ನೀವು ಡ್ರೈವ್ ಕೂಡ ಮಾಡುವುದಕ್ಕೆ ಆಗುವುದಿಲ್ಲ. ಇನ್ನು ಏನಿದ್ದರೂ ಫುಲ್ ರೆಸ್ಟ್ ಮಾತ್ರ ಎಂದು ಹೇಳಿದ್ದಾರೆ.

    ವೈದ್ಯರ ಈ ಸಲಹೆಯಿಂದಾಗಿ ಮೈಸೂರಿನಲ್ಲಿ ನಡೆಯವ ಗ್ರಾವಲ್ ಫೆಸ್ಟ್ ಕಾರ್ ರೇಸ್ ನಲ್ಲಿ ಭಾಗವಹಿಸುವ ದರ್ಶನ್ ಉತ್ಸಾಹಕ್ಕೆ ತಣ್ಣೀರು ಬಿದ್ದಂತಾಗಿದೆ. ಈ ವಿಚಾರವನ್ನು ಗ್ರಾವಲ್ ಫೆಸ್ಟ್ ಆಯೋಜಕರಾದ ಅರುಣ್ ಅರಸ್, ಫಾಲ್ಗುಣ ಅರಸ್ ಇಂದು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ: ಅಪಘಾತದ ನಂತ್ರ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

    ರೇಸ್ ಗಾಗಿ ದರ್ಶನ್ 10 ದಿನಗಳ ಕಾಲ ಪ್ರಾಕ್ಟಿಸ್ ಮಾಡಿದರು. ಅದಕ್ಕಾಗಿಯೇ ವಿಶೇಷ ಡ್ರೈವಿಂಗ್ ಲೈಸನ್ಸ್ ಸಹ ಮಾಡಿಸಿದ್ದರು. ದರ್ಶನ್ 1600ಅಅ ಕಾರು ಅನ್ನು ಇಂಟರ್‍ನ್ಯಾಷನಲ್ ಓಪನ್ ವಿಭಾಗದಲ್ಲಿ ಓಡಿಸಬೇಕಿತ್ತು. ರೇಸ್‍ನಲ್ಲಿ ಭಾಗಿಯಾಗಲು ದರ್ಶನ್ ಸಾಕಷ್ಟು ಉತ್ಸಹಿಯಾಗಿದ್ದರು. ಅಪಘಾತದ ಕಾರಣದಿಂದ ಅವರು ರೇಸ್‍ನಲ್ಲಿ ಭಾಗಿಯಾಗುತ್ತಿಲ್ಲ. ಆದರೆ ಭಾನುವಾರ ರೇಸ್ ವೀಕ್ಷಿಸಲು ದರ್ಶನ್ ಬರುತ್ತಾರೆ ಎಂದು ಗ್ರಾವೆಲ್ ಫೆಸ್ಟ್ ಆಯೋಜಕರು ತಿಳಿಸಿದ್ದಾರೆ.

    ದರ್ಶನ್ ಸೆಪ್ಟೆಂಬರ್ 24 ರಂದು ಮೈಸೂರಿಂದ ಬರುತ್ತಿದ್ದಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ದರ್ಶನ್ ಅವರು ಬಲಗೈನ ಮೂಳೆ ಮುರಿದಿದ್ದು, ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ.

    ದರ್ಶನ್ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ಆಸ್ಪತ್ರೆಯ ವೈದ್ಯರು ಮಾಧ್ಯಮಗಳ ಜೊತೆ ಮಾತನಾಡಿ, ದರ್ಶನ್ ಅವರ ಕೈಗೆ ಬಲವಾದ ಪೆಟ್ಟು ಬಿದ್ದಿದ್ದು, ಮೂಳೆ ಮುರಿದಿದೆ. ಕೆಲವು ದಿನಗಳು ವಿಶ್ರಾಂತಿ ಬೇಕಾಗುತ್ತದೆ. ಅವರು ನೋವನ್ನು ತಡೆದುಕೊಂಡು, ಅಭಿಮಾನಿಗಳಿಗೆ ಸ್ಪಂದಿಸಿದ್ದು ನೋಡಿ ಖುಷಿ ಆಯಿತು. ಬೇಗ ಗುಣಮುಖರಾಗುತ್ತಾರೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಪಘಾತದ ನಂತ್ರ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಅಪಘಾತದ ನಂತ್ರ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಬೆಂಗಳೂರು: ಕಾರ್ ಅಪಘಾತಕ್ಕೀಡಾಗಿ ಕೈ ಮೂಳೆ ಮುರಿದು ವಿಶ್ರಾಂತಿ ಪಡೆಯುತ್ತಿರೋ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಇದೀಗ ಗ್ರಾವೆಲ್ ಫೆಸ್ಟ್ 2018 ಕಾರ್ ರೇಸ್‍ನಲ್ಲಿ ಭಾಗವಹಿಸಲು ಲೈಸನ್ಸ್ ಪಡೆದುಕೊಂಡಿದ್ದಾರೆ.

    ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್ 6 ಹಾಗೂ 7 ರಂದು ಲಲಿತ್ ಮಹಲ್‍ನ ಹೆಲಿಪ್ಯಾಡ್ ಮೈದಾನದಲ್ಲಿ ಕಾರ್ ರೇಸ್ ನಡೆಯಲಿದೆ. ಈ ರೇಸ್‍ನಲ್ಲಿ ಭಾಗವಹಿಸಲು ದರ್ಶನ್ ಎಲ್ಲ ತಯಾರಿ ನಡೆಸಿಕೊಂಡಿದ್ದರು. ಆದರೆ ಈ ಮಧ್ಯೆ ದರ್ಶನ್ ಅವರಿಗೆ ಅಪಘಾತವಾಯಿತು.

    ದರ್ಶನ್ ಅವರ ಕಾರ್ ರೇಸ್ ಲೈಸನ್ಸ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರು ಅಪಘಾತಕ್ಕೀಡಾದ ನಂತರ ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಹೇಳಿದ್ದರು. ಆದರೆ ಈಗ ದರ್ಶನ್ ಅವರಿಗೆ ಕಾರ್ ರೇಸ್ ಲೈಸನ್ಸ್ ಸಿಕ್ಕಿರುವುದು ಅಭಿಮಾನಿಗಳಿಗೆ ಕುತೂಹಲ ಮೂಡಿಸಿದೆ. ಕಾರ್ ಅಪಘಾತದಲ್ಲಿ ಬಲಗೈ ಪೆಟ್ಟು ಮಾಡಿಕೊಂಡಿರುವ ದರ್ಶನ್ ಅವರು ಈ ಕಾರ್ ರೇಸ್‍ನಲ್ಲಿ ಭಾಗವಹಿಸುತ್ತಾರಾ ಎಂಬುದು ಅಧಿಕೃತವಾಗಿ ತಿಳಿದುಬಂದಿಲ್ಲ.

    ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಡಿಸ್ಚಾರ್ಜ್ ಆಗುತ್ತಿದ್ದಂತೆಯೇ ದರ್ಶನ್ ಅವರು ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿಗೆ ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೆ ಮಂಗಳವಾರ ತಮ್ಮ ಪತ್ನಿ ವಿಜಯಲಕ್ಷ್ಮೀ ಅವರೊಂದಿಗೆ ಜೊತೆ ದೇವಸ್ಥಾನಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದಿದ್ದಾರೆ.

    ಚಾಮುಂಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ದರ್ಶನ್ ದಂಪತಿ ಬಳಿಕ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕುಟುಂಬಸ್ಥರ ಜೊತೆ ಕುಶಲೋಪರಿ ವಿಚಾರಿಸಿದರು. ಕೆಲ ಸ್ನೇಹಿತರು ಕೂಡ ದರ್ಶನ್ ಗೆ ಸಾಥ್ ನೀಡಿದ್ದರು.

    ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ದರ್ಶನ್ ಅವರ ಬಲಗೈ ಮೂಳೆ ಮುರಿದಿದ್ದು, ಪ್ಲೇಟ್ ಅಳವಡಿಸಲಾಗಿದೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾತನಾಡಿದ್ದ ದರ್ಶನ್ ಆಸ್ಪತ್ರೆಯಲ್ಲಿ ವೈದ್ಯರು ಉತ್ತಮ ಚಿಕಿತ್ಸೆ ನೀಡಿದ್ದಾರೆ. ನಾನು ಚೇತರಿಸಿಕೊಳ್ಳಲು ಹೆಚ್ಚಿನ ಸಮಯ ಬೇಕಾಗಿಲ್ಲ. ಒಂದು ತಿಂಗಳ ವಿಶ್ರಾಂತಿ ಬಳಿಕ ಮತ್ತೆ ಜಿಮ್ ಮಾಡುತ್ತೇನೆ ಎಂದು ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿ.ಸಿ ಪಾಟೀಲಣ್ಣ ಬಿಜೆಪಿ ಸೇರಣ್ಣ, ಬಿಎಸ್‍ವೈ ಜೊತೆಗಿರಣ್ಣ: ಯಡಿಯೂರಪ್ಪ ಅಭಿಮಾನಿ

    ಬಿ.ಸಿ ಪಾಟೀಲಣ್ಣ ಬಿಜೆಪಿ ಸೇರಣ್ಣ, ಬಿಎಸ್‍ವೈ ಜೊತೆಗಿರಣ್ಣ: ಯಡಿಯೂರಪ್ಪ ಅಭಿಮಾನಿ

    ಚಿತ್ರದುರ್ಗ: ಬಿ.ಸಿ ಪಾಟೀಲಣ್ಣ ಬಿಜೆಪಿ ಸೇರಣ್ಣ, ಬಿಎಸ್‍ವೈ ಜೊತೆಗಿರಣ್ಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಅಭಿಮಾನಿಗಳು ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಕಾರು ಅಡ್ಡಗಟ್ಟಿ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

    ಭಾನುವಾರ ರಾತ್ರಿ ಚಿತ್ರದುರ್ಗದ ಸಿರಿಗೆರೆ ಗ್ರಾಮದಲ್ಲಿ ನಡೆದ ತರಳುಬಾಳು ಮಠದ ಶಿವಕುಮಾರ ಶ್ರೀಗಳ 26ನೇ ಶ್ರದ್ಧಾಂಜಲಿ ಸಮಾರಂಭ ಮುಗಿಸಿಕೊಂಡು ಹೊರಟ ಕಾಂಗ್ರೆಸ್‍ನ ಅಸಮಾಧಾನಿತ ಶಾಸಕರೆಂದೇ ಗುರುತಿಸಿಕೊಂಡಿರುವ ಶಾಸಕ ಬಿ.ಸಿ ಪಾಟೀಲ್ ಅವರ ಕಾರನ್ನು ಬಿಎಸ್‍ವೈ ಅಭಿಮಾನಿಗಳು ತಡೆದು ನಿಲ್ಲಿಸಿದ್ದಾರೆ.

    ಬಿಎಸ್ ವೈ ಅಭಿಮಾನಿಗಳು ಬಿ.ಸಿ ಪಾಟೀಲ್ ಅವರನ್ನು ಬಿಜೆಪಿ ಪಕ್ಷ ಸೇರುವಂತೆ ಬೆನ್ನು ಬಿದ್ದು ಬೇಡಿದರು. ಅಲ್ಲದೇ “ಅಣ್ಣ ಬಿಜೆಪಿ ಸೇರಣ್ಣ. ಯಡಿಯೂರಪ್ಪ ಜೊತೆಗಿರಣ್ಣ ಎಂದು ಹೇಳುತ್ತಾ ‘ಯಡಿಯೂರಪ್ಪಗೆ ಜೈ, ಬಿ.ಸಿ ಪಾಟೀಲ್‍ಗೆ ಜೈ’ ಎಂದು ಘೋಷಣೆ ಕೂಗಿದರು.

    ಈ ವೇಳೆ ಬಿಜೆಪಿ ಅಭಿಮಾನಿಗಳ ಒತ್ತಾಯದಿಂದ ಕಸಿವಿಸಿಗೊಂಡ ಬಿ.ಸಿ ಪಾಟೀಲ್ ಏನೂ ಮಾತನಾಡದೇ ಕಾರಿನಲ್ಲಿ ತೆರಳಿದರು. ಈ ವೇಳೆ ಶಾಸಕರ ಕಾರನ್ನು ಮುತ್ತಿಕೊಂಡ ಜನರನ್ನು ನಿಭಾಯಿಸಲು ಪೊಲೀಸರು ಹರ ಸಾಹಸಪಡಬೇಕಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಶ್ಮಿಕಾ, ವಿಜಯ್ ಮದ್ವೆಯಾದ್ರೆ Made For Each Other- ದೇವರಕೊಂಡ ಅಭಿಮಾನಿ

    ರಶ್ಮಿಕಾ, ವಿಜಯ್ ಮದ್ವೆಯಾದ್ರೆ Made For Each Other- ದೇವರಕೊಂಡ ಅಭಿಮಾನಿ

    ಬೆಂಗಳೂರು: ನಟಿ ರಶ್ಮಿಕಾ ಮತ್ತು ನಿನ್ನ ಜೋಡಿ ಸೂಪರ್ ಆಗಿರುತ್ತದೆ. ನೀವಿಬ್ಬರೂ ಮದುವೆಯಾದರೆ ಮೇಡ್ ಫಾರ್ ಈಚ್ ಅದರ್ ಜೋಡಿಯಾಗುತ್ತದೆ. ಪ್ಲೀಸ್ ವಿಜಯ್ ಅಣ್ಣಾ. ನಮ್ಮ ಮನವಿಯನ್ನು ಒಪ್ಪಿಕೋ ಎಂದು ವಿಜಯ್ ಅಭಿಮಾನಿಯೊಬ್ಬರು ಕೇಳಿಕೊಂಡಿದ್ದಾರೆ.

    ‘ಗೀತಾ ಗೋವಿಂದಂ’ ಚಿತ್ರ ತೆರೆ ಕಂಡು ಎರಡು ಮೂರು ವಾರಗಳಾಗಿವೆ. ಕಡಿಮೆ ದಿನಗಳಲ್ಲಿ ಈ ಚಿತ್ರ ಭರ್ಜರಿ ನೂರು ಕೋಟಿಯನ್ನು ದಾಟಿ ಮುನ್ನುಗ್ಗುತ್ತಿದೆ. ತೆಲುಗು ಮಂದಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರನ್ನು ಮೆಚ್ಚಿಕೊಂಡಿದ್ದಾರೆ. ತೆಲುಗು ಚಿತ್ರರಂಗದ ಟಾಪ್ ಹೀರೋಗಳು ರಶ್ಮಿಕಾ ಕಾಲ್‍ಶೀಟ್‍ಗೆ ಮುಗಿಬಿದ್ದಿದ್ದಾರೆ. ಸದ್ಯ ಈ ಚಿತ್ರದ ಯಶಸ್ಸನ್ನು ವಿಜಯ್ ತಮ್ಮ ಚಿತ್ರದ ನಾಯಕಿ ರಶ್ಮಿಕಾ ಮಂದಣ್ಣ ಅವರಿಗೆ ಸಲ್ಲಿಸಿದ್ದಾರೆ.

    ಸಾಮಾನ್ಯವಾಗಿ ಒಂದು ಸಿನಿಮಾ ಸೂಪರ್ ಹಿಟ್ ಆದರೆ, ನೂರು ಕೋಟಿಯನ್ನು ದಾಟಿದರೆ ಎಲ್ಲಾ ಕ್ರೆಡಿಟ್ ಹೀರೋಗೆ ಸಲ್ಲುತ್ತದೆ. ಆ ಚಿತ್ರತಂಡದಿಂದ ಹಿಡಿದು ಉದ್ಯಮ ಕೂಡ ಅದನ್ನೇ ಪಾಲಿಸುತ್ತದೆ. ಆದರೆ ವಿಜಯ್ ದೇವರಕೊಂಡರಂಥ ಕೆಲವು ಹೀರೋಗಳು ಇದಕ್ಕೆ ಅಪವಾದ. ಅದಕ್ಕೇ ಗೀತಾಗೋವಿಂದಂ ನೂರು ಕೋಟಿ ಗಳಿಸಲು ಕಾರಣ ನಿರ್ದೇಶಕ ಪರಶುರಾಮ್ ಮತ್ತು ಮೈ ಲವ್ಲಿ ಪಾರ್ಟನರ್‍ಶಿಪ್ ರಶ್ಮಿಕಾ ಮಂದಣ್ಣ ಎಂದು ಹೇಳಿದ್ದಾರೆ.

    ಸದ್ಯ ಈಗ ಅಭಿಮಾನಿಗಳೆಲ್ಲರೂ ವಿಜಯ್ ಹಾಗೂ ರಶ್ಮಿಕಾ ಅವರ ಅಭಿನಯಕ್ಕೆ ಫಿದಾ ಆಗಿದ್ದಾರೆ. ಅಲ್ಲದೇ ಇಬ್ಬರ ಜೋಡಿ ಇಷ್ಟಪಟ್ಟು ವಿಜಯ್ ನೀನು ರಶ್ಮಿಕಾರನ್ನೇ ಮದುವೆಯಾಗು ಎಂದು ವಿಜಯ್ ಅಭಿಮಾನಿಗಳು ಹೊಸ ಚಳುವಳಿ ಶುರು ಮಾಡಿದ್ದಾರೆ. ರಶ್ಮಿಕಾ ಮತ್ತು ನಿನ್ನ ಜೋಡಿ ಸೂಪರ್ ಆಗಿರುತ್ತದೆ. ನೀವಿಬ್ಬರೂ ಮದುವೆಯಾದರೆ ಮೇಡ್ ಫಾರ್ ಈಚ್ ಅದರ್ ಜೋಡಿಯಾಗುತ್ತದೆ. ಪ್ಲೀಸ್ ಒಪ್ಪಿಕೊಳ್ಳಿ ಅಣ್ಣ ಎಂದು ವಿಜಯ್ ಅಭಿಮಾನಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸ್ಯಾಡ್ ನ್ಯೂಸ್

    ರಕ್ಷಿತ್ ಶೆಟ್ಟಿ ಅಭಿಮಾನಿಗಳಿಗೆ ಸ್ಯಾಡ್ ನ್ಯೂಸ್

    ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹೊರಬರುವ ಮೂಲಕ ತಮ್ಮ ಅಭಿಮಾನಿಗಳಿಗೆ ಸ್ಯಾಡ್ ನ್ಯೂಸ್ ನೀಡಿದ್ದಾರೆ.

    ರಕ್ಷಿತ್ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಯಾವಾಗಲೂ ಸಕ್ರಿಯರಾಗುತ್ತಿದ್ದರು. ತಮ್ಮ ವೈಯಕ್ತಿಕ ಹಾಗೂ ಸಿನಿಮಾಗಳ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು. ಸದ್ಯ ಈಗ ರಕ್ಷಿತ್ ತಮ್ಮ ಸಾಮಾಜಿಕ ಜಾಲತಾಣದಿಂದ ಹೊರಬಂದಿದ್ದಾರೆ.

    ರಕ್ಷಿತ್ ಸಾಮಾಜಿಕ ಜಾಲತಾಣದಿಂದ ಹೊರಬರುವ ಮೊದಲು ಈ ಬಗ್ಗೆ ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದರು. “ನಾನು ಸಾಮಾಜಿಕ ಜಾಲತಾಣಗಳಿಂದ ಹೊರನಡೆಯುವ ಬಗ್ಗೆ ಚಿಂತನೆ ನಡೆಸುತ್ತಿದ್ದೇನೆ. ನನಗೆ ನೀವು ಅತ್ಯಧಿಕ ಪ್ರೀತಿ ತೋರಿಸಿದ್ದೀರಿ. ಅದಕ್ಕೆ ನನ್ನ ಧನ್ಯವಾದ. ಲವ್ ಯು ಆಲ್” ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

    ರಕ್ಷಿತ್ ಟ್ವಿಟ್ಟರ್, ಫೇಸ್‍ಬುಕ್ ಹಾಗೂ ಇನ್‍ಸ್ಟಾಗ್ರಾಂನಲ್ಲಿ ಅಧಿಕೃತ ಖಾತೆ ತೆರೆದು ಅದನ್ನು ಬಳಸುತ್ತಿದ್ದರು. ಆದ್ರೆ ಇದೀಗ ರಕ್ಷಿತ್ ಶೆಟ್ಟಿ ಅವರ ಈ ಮೂರು ಖಾತೆ ಚಾಲ್ತಿಯಲ್ಲಿ ಇಲ್ಲ. ಟ್ವಿಟ್ಟರ್, ಫೇಸ್‍ಬುಕ್ ಹಾಗೂ ಇನ್‍ಸ್ಟಾಗ್ರಾಂ ಅಧಿಕೃತ ಖಾತೆಯನ್ನು ಡಿಲೀಟ್ ಮಾಡಿದ್ದಾರೆ. ಈಗ ಇವರ ಹೆಸರಿನಲ್ಲಿ ಕೆಲ ಆಫೀಶಿಯಲ್ ಖಾತೆಗಳಿವೆ. ಈ ಖಾತೆಗಳ ಮೂಲಕ ರಕ್ಷಿತ್ ಅವರ ಅಭಿಮಾನಿಗಳು ಅವರ ವೈಯಕ್ತಿಕ ಹಾಗೂ ಸಿನಿಮಾದ ಸುದ್ದಿಗಳ ಬಗ್ಗೆ ತಿಳಿದುಕೊಳ್ಳಬಹುದು.

    ರಕ್ಷಿತ್ ತಮ್ಮ ಸಿನಿಮಾ ಪ್ರಮೋಶನ್, ಫ್ಯಾನ್ಸ್ ಜೊತೆ ಮಾತುಕತೆ, ವೈಯಕ್ತಿಕ ವಿಚಾರಗಳು ಸೇರಿದಂತೆ ಹಲವು ವಿಷಯಗಳನ್ನು ಹಂಚಿಕೊಳ್ಳುತ್ತಿದ್ದರು. `ಸಿನಿಮಾ ಚೆನ್ನಾಗಿಲ್ಲ ಅಂತ ರಿಪೋರ್ಟ್ ಕೊಟ್ಟರೆ, 3 ಗಂಟೆ ಸಿನಿಮಾ ನೋಡಿ ವಿಮರ್ಶೆ ಬರೆಯುವವರಿಗೆ ಏನ್ ಗೊತ್ತಿರುತ್ತೆ ಸಿನಿಮಾ ಮಾಡುವವರ ಕಷ್ಟ’ ಎಂದು ಖಡಕ್ ಸೂಚನೆ ನೀಡುತ್ತಿದ್ದರು. ಸದ್ಯ ರಕ್ಷಿತ್ ಕಳೆದ 20 ದಿನಗಳಿಂದಲೂ ಸಾಮಾಜಿಕ ಜಾಲತಾಣದಿಂದ ಕೊಂಚ ದೂರ ಉಳಿದಿದ್ದು, ಕಳೆದ ಭಾನುವಾರ ತಮ್ಮ ಸಾಮಾಜಿಕ ಖಾತೆಗಳನ್ನು ಡಿಆಕ್ಟಿವೇಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಿಚ್ಚ ಸುದೀಪ್ ವೈರಲ್ ಫೋಟೋದ ರಹಸ್ಯ ಇಲ್ಲಿದೆ

    ಕಿಚ್ಚ ಸುದೀಪ್ ವೈರಲ್ ಫೋಟೋದ ರಹಸ್ಯ ಇಲ್ಲಿದೆ

    ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಬಾರಿ ಅಭಿಮಾನಿಗಳ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸುದೀಪ್ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸೆ. 2 ಅಂದರೆ ನಾಳೆ ಸುದೀಪ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ತಮ್ಮ ಪತಿಯ ವಿಶೇಷವಾದ ಫೋಟೋವನ್ನು ಬಿಡುಗಡೆ ಮಾಡಿದ್ದಾರೆ. ಈ ಫೋಟೋದಲ್ಲಿ ಸುದೀಪ್ ಯಾವ ವರ್ಷದಲ್ಲಿ ಯಾವ ಪ್ರಶಸ್ತಿ ಪಡೆದಿದ್ದಾರೆ ಎನ್ನುವ ಕಿರು ಮಾಹಿತಿಯಿದೆ. ಇದನ್ನೂ ಓದಿ:  ಅಭಿಮಾನಿಗಳ ಜೊತೆಗೆ ಈ ಬಾರಿ ನಡೆಯಲಿದೆ ಕಿಚ್ಚನ ಬರ್ತ್ ಡೇ!

    ಯಾವ ವರ್ಷದಲ್ಲಿ ಯಾವ ಪ್ರಶಸ್ತಿ?
    2001- ಹುಚ್ಚ ಚಿತ್ರಕ್ಕಾಗಿ ಫಿಲ್ಮಂಫೇರ್ ಅತ್ಯುತ್ತಮ ನಟ ಪ್ರಶಸ್ತಿ
    2002- ನಂದಿ ಚಿತ್ರಕ್ಕಾಗಿ ಫಿಲ್ಮಂಫೇರ್ ಅತ್ಯುತ್ತಮ ನಟ ಪ್ರಶಸ್ತಿ
    2003- ಸ್ವಾತಿಮುತ್ತು ಚಿತ್ರಕ್ಕಾಗಿ ಫಿಲ್ಮಂಫೇರ್ ಅತ್ಯುತ್ತಮ ನಟ ಪ್ರಶಸ್ತಿ
    2009- ವೀರ ಮದಕರಿ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ
    2011- ವಿಷ್ಣುವರ್ಧನ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ
    2012- ನಾನ್ ಇ ತಮಿಳು ಚಿತ್ರಕ್ಕಾಗಿ ಅತ್ಯುತ್ತಮ ಖಳನಟ ಪ್ರಶಸ್ತಿ
    2012- ಈಗ ಚಿತ್ರಕ್ಕಾಗಿ ಫಿಲ್ಮಂಫೇರ್ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ (ತೆಲುಗು)
    2012- ಈಗ ಚಿತ್ರಕ್ಕಾಗಿ ಮಡ್ರಿಡ್ ಅಂತರಾಷ್ಟ್ರಿಯ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ
    2012- ನಾನ್ ಇ ತಮಿಳು ಚಿತ್ರಕ್ಕಾಗಿ ಎಡಿಸನ್‍ನ ಅತ್ಯುತ್ತಮ ಖಳನಟ ಪ್ರಶಸ್ತಿ
    2012- ಈಗ ಚಿತ್ರಕ್ಕಾಗಿ ಟೊರಂಟೋ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಖಳನಟ ಪ್ರಶಸ್ತಿ
    2012- ಈಗ ಚಿತ್ರಕ್ಕಾಗಿ ಟಿಒಐ ಅತ್ಯುತ್ತಮ ಖಳನಟ ಪ್ರಶಸ್ತಿ
    2016- ಜೀ ದಶಕದ ಸಂಭ್ರಮದ ಎಂಟರ್‍ಟೈನರ್ ಆಫ್ ದಿ ಡಿಕೇಡ್ ಪ್ರಶಸ್ತಿ
    2017- ಫಾರ್‍ಎವೆರ್ ಮೋಸ್ಟ್ ಡಿಸೈರೆಬಲ್ ಮೆನ್ ಪ್ರಶಸ್ತಿ

    ಸದ್ಯ ಈ ಫೋಟೋವನ್ನು ಸುದೀಪ್ ಅವರ ಕರ್ನಾಟಕ ಕಿಚ್ಚ ಸುದೀಪ್ ಫ್ಯಾನ್ಸ್ ಆಸೋಸಿಯೇಶನ್ ಅವರು ತಯಾರಿಸಿದ್ದಾರೆ. ಅಲ್ಲದೇ ಈ ಫೋಟೋವನ್ನು ಸುದೀಪ್ ಅವರ ಪತ್ನಿ ಪ್ರಿಯಾ ಸುದೀಪ್ ಅವರು ಬಿಡುಗಡೆ ಮಾಡಿದ್ದಾರೆ. ಈ ಫೋಟೋ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‍ನಲ್ಲಿದೆ. ಅಲ್ಲದೇ ಸಾಕಷ್ಟು ಜನ ಡಿಪಿ (ಡಿಸ್‍ಪ್ಲೈ ಪಿಚ್ಚರ್)ಹಾಗೂ ಪ್ರೋಫೈಲ್ ಪಿಚ್ಚರ್ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊನೆಗೂ ಅಭಿಮಾನಿಗಳ ಬಹುದಿನದ ಆಸೆಯನ್ನು ನೆರವೇರಿಸಿದ್ರು ಪವರ್ ಸ್ಟಾರ್!

    ಕೊನೆಗೂ ಅಭಿಮಾನಿಗಳ ಬಹುದಿನದ ಆಸೆಯನ್ನು ನೆರವೇರಿಸಿದ್ರು ಪವರ್ ಸ್ಟಾರ್!

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕೊನೆಗೂ ಟ್ವಿಟ್ಟರ್ ಖಾತೆ ತೆರೆಯುವ ಮೂಲಕ ಅಭಿಮಾನಿಗಳ ಬಹುದಿನದ ಕನಸನ್ನು ನೆರವೇರಿಸಿದ್ದಾರೆ.

    ಟ್ವಿಟ್ಟರಿನಲ್ಲಿ ಖಾತೆಯನ್ನು ತೆರೆಯಬೇಕೆಂದು ಅನೇಕ ಅಭಿಮಾನಿಗಳು ಪುನೀತ್ ಬಳಿ ಕೇಳಿಕೊಂಡಿದ್ದರು. ಸದ್ಯ ಪುನೀತ್ ಈಗ ತಮ್ಮ ಹೆಸರಿನಲ್ಲಿ ಅಧಿಕೃತ ಖಾತೆಯನ್ನು ತೆರೆದಿದ್ದಾರೆ.

    ಪುನೀತ್ ಈಗ ಅಧಿಕೃತವಾಗಿ ಟ್ವಿಟ್ಟರ್ ಖಾತೆ ತೆರೆದಿದ್ದು, ಸದ್ಯ ಅವರನ್ನು 7 ಸಾವಿರಕ್ಕೂ ಹೆಚ್ಚು ಮಂದಿ ಫಾಲೋ ಮಾಡುತ್ತಿದ್ದಾರೆ. ಪುನೀತ್ ಇದುವರೆಗೂ ಟ್ವಿಟ್ಟರಿನಲ್ಲಿ ಯಾರನ್ನು ಫಾಲೋ ಮಾಡುತ್ತಿಲ್ಲ. ಅಲ್ಲದೇ ಇದುವರೆಗೂ ಒಂದು ಟ್ವೀಟ್ ಕೂಡ ಮಾಡಿಲ್ಲ.

    ಈ ಹಿಂದೆ ಪುನೀತ್ ರಾಜ್‍ಕುಮಾರ್ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಆಗಿರುವ ಬಗ್ಗೆ ನವರಸನಾಯಕ ಜಗ್ಗೇಶ್ ರಿವೀಲ್ ಮಾಡಿ, ಈ ಖಾತೆ ವಿರುದ್ಧ ಕಿಡಿಕಾರಿದ್ದರು. ಅಚ್ಚರಿ ಅಂದರೆ ಸಾಕಷ್ಟು ನಟ ನಟಿಯರು ಪುನೀತ್ ಅಧಿಕೃತ ಖಾತೆ ಎಂದು ತಿಳಿದು ಫೋಟೋಗಳನ್ನು ಟ್ಯಾಗ್ ಮಾಡುತ್ತಿದ್ದರು. ಸುಮಾರು 10 ಸಾವಿರಕ್ಕೂ ಜನ ಈ ಖಾತೆ ನಿಜವೆಂದು ತಿಳಿದು ಫಾಲೋ ಮಾಡುತ್ತಿದ್ದರು.

    “ಸೆಲಿಬ್ರಿಟಿಗಳ ಬದುಕು ಎಷ್ಟು ಕಷ್ಟ ಅನ್ನೋದು ಇದಕ್ಕೆ. ಕಷ್ಟಪಟ್ಟು ನೋವು ಅಪಮಾನ ಸಹಿಸಿ ಬೆಳೆದ ಮೇಲೆ ಇಂತಹ ಸಮಯ ಸಾಧಕರ ಆಗಮನ ಶ್ರಮವಿಲ್ಲದೆ ಸಾಧಕನ ಹೆಸರು ಬಳಸಿ ಬೆಳೆಯಲು. ಸ್ವತಃ ಪುನೀತನೆ ಹೇಳಬೇಕಾಯಿತು ಅಭಿಮಾನಿಗಳಿಗೆ. ಜಾಲತಾಣ ದುರ್ಬಳಕೆ ಅಂದರೆ ಇದೆ ಅದಕ್ಕೆ ಜನ ಯಾರನ್ನು ನಂಬೋಲ್ಲ. ಇದಕ್ಕಿಂತ ಮೈಬಗ್ಗಿಸಿ ದುಡಿದು ತಿನ್ನಿ ಸ್ವಾಭಿಮಾನದಿಂದ” ಎಂದು ಬರೆದು ಜಗ್ಗೇಶ್ ಟ್ವೀಟ್ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಪ್ರಿಯಾಮಣಿ!

    ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಪ್ರಿಯಾಮಣಿ!

    ಬೆಂಗಳೂರು: ಬಹುಭಾಷಾ ನಟಿ ಪ್ರಿಯಾಮಣಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರಿಯಾಮಣಿ ಇತ್ತೀಚಿಗೆ ಒಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನೋಡಿದ ಅಭಿಮಾನಿಗಳು ಪ್ರಿಯಾಮಣಿ ತಾಯಿ ಆಗುತ್ತಿದ್ದಾರೆ ಎಂದು ಅವರಿಗೆ ಶುಭ ಕೋರುತ್ತಿದ್ದಾರೆ.

    “ನಾನು ಮತ್ತು ನನ್ನ ಪತಿ ಮುಸ್ತಾಫ್ ರಾಜ್ ಕಡೆಯಿಂದ ಸಮ್‍ಥಿಂಗ್ ಇಂಟ್ರೆಸ್ಟಿಂಗ್ ಹಾಗೂ ಫನ್ ಸಂಗತಿಯೊಂದು ನಿಮ್ಮ ಮುಂದೆ ಬರಲಿದೆ. ವೇಟ್ ಆಂಡ್ ವಾಚ್” ಎಂದು ಪ್ರಿಯಾಮಣಿ ತಮ್ಮ ಪತಿ ಜೊತೆಯಿರುವ ಫೋಟೋವನ್ನು ಹಾಕಿ ಟ್ವೀಟ್ ಮಾಡಿದ್ದಾರೆ.

    ಪ್ರಿಯಾಮಣಿ ಅವರ ಟ್ವೀಟ್ ನೋಡಿ ಅವರು ತಾಯಿ ಆಗುತ್ತಿದ್ದಾರಾ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಭಿಮಾನಿಗಳು ಕೂಡ ಅವರ ಟ್ವೀಟ್ ನೋಡಿ ಪ್ರಿಯಾಮಣಿ ಅಮ್ಮ ಆಗುತ್ತಿದ್ದಾರೆ ಎಂದು ತಿಳಿದು ಅವರಿಗೆ ಶುಭ ಕೋರುತ್ತಿದ್ದಾರೆ.

    https://twitter.com/priyamani6/status/1023587440018243590

    ಪ್ರಿಯಾಮಣಿ 2017 ಅಗಸ್ಟ್ 23ರಂದು ಮುಸ್ತಾಫ್ ರಾಜ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಈ ಟ್ವೀಟ್ ನೋಡಿ ಅಭಿಮಾನಿಗಳು ಪ್ರಿಯಾಮಣಿಗೆ ರೀ-ಟ್ವೀಟ್ ಮಾಡುವ ಮೂಲಕ ಜೂನಿಯರ್ ಪ್ರಿಯಾಮಣಿ ಬರುತ್ತಿರಬಹುದು ಎಂದು ಒಬ್ಬರು ಟ್ವೀಟ್ ಮಾಡಿದ್ದರೆ, ಮತ್ತೊಬ್ಬರು ಚೋಟಾ ಪ್ರಿಯಾಮಣಿ ಎಂದು ಟ್ವೀಟ್ ಮಾಡಿದ್ದಾರೆ.

    ಇತ್ತ ಪ್ರಿಯಾಮಣಿ ಟ್ವೀಟ್‍ಗೆ ನಟಿ ಪರೂಲ್ ಯಾದವ್ ಸಹ ಮಗು ಐಸ್ ಕ್ರೀಂ ತಿನ್ನುವ ಜಿಫ್ ಹಾಕುವ ಮೂಲಕ ಶುಭಾಶಯ ಕೋರಿದ್ದಾರೆ. ಪರೂಲ್ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ಪ್ರಿಯಾಮಣಿ ಲವ್ ಸೂಚಕದ ಎಮೋಜಿ ಹಾಕಿ ಉತ್ತರಿಸಿದ್ದಾರೆ. ಸದ್ಯ ಪ್ರಿಯಾಮಣಿ ಈ ವಿಷಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಆದರೆ ಆ ಟ್ವೀಟ್ ನೋಡಿದ ಅಭಿಮಾನಿಗಳು ಪ್ರಿಯಾಮಣಿ ತಾಯಿ ಆಗುತ್ತಿದ್ದಾರೆ ಎಂದು ತಿಳಿದು ಶುಭಾಶಯಗಳ ಮಹಾಪೂರ ಹರಿಸುತ್ತಿದ್ದಾರೆ. ಸದ್ಯ ಪ್ರಿಯಾಮಣಿ ಅವರ ಸ್ಪೆಷಲ್ ಸುದ್ದಿ ಏನು ಎಂಬುದು ಕಾದು ನೋಡಬೇಕಿದೆ.