Tag: Food Grain

  • ಬಿಸಿಯೂಟ ಆಹಾರ ಧಾನ್ಯಕ್ಕೆ ಕಳ್ಳರ ಕಾಟ – ಶಾಲೆಯಲ್ಲಿಯೇ ವಾಸ್ತವ್ಯ ಮಾಡಿ ರೇಷನ್ ಕಾಪಾಡಿದ ಹೆಡ್ ಮಾಸ್ಟರ್

    ಬಿಸಿಯೂಟ ಆಹಾರ ಧಾನ್ಯಕ್ಕೆ ಕಳ್ಳರ ಕಾಟ – ಶಾಲೆಯಲ್ಲಿಯೇ ವಾಸ್ತವ್ಯ ಮಾಡಿ ರೇಷನ್ ಕಾಪಾಡಿದ ಹೆಡ್ ಮಾಸ್ಟರ್

    ಯಾದಗಿರಿ: ಕಳ್ಳರ ಕಾಟಕ್ಕೆ ಬೇಸತ್ತು ಶಿಕ್ಷಕರೊಬ್ಬರು ಬಿಸಿಯೂಟ ಆಹಾರ ಧಾನ್ಯ ಕಾಯಲು ಶಾಲೆಯಲ್ಲಿ ರಾತ್ರಿ ವಾಸ್ತವ್ಯ ಮಾಡಿ ಆಹಾರ ಧಾನ್ಯ ಕಳ್ಳತನವಾಗದಂತೆ ಸರ್ಪಗಾವಲು ಹಾಕಿಕೊಂಡಿದ್ದಾರೆ

    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಮಾಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸಿದ್ದಣ್ಣಗೌಡ ಅವರು ಆಹಾರ ಧಾನ್ಯಗಳಿಗೆ ಶಾಲೆಯಲ್ಲಿ ವಾಸ್ತವ್ಯ ಮಾಡಿ ಆಹಾರ ಧಾನ್ಯಗಳ ರಕ್ಷಿಸಿದ್ದಾರೆ. ಸರ್ಕಾರ ಈಗಾಗಲೇ 1 ರಿಂದ 10 ನೇ ತರಗತಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ನವೆಂಬರ್ ನಿಂದ ಎಪ್ರಿಲ್ ತಿಂಗಳ ವರಗಿನ 5 ತಿಂಗಳ ಆಹಾರ ಧಾನ್ಯವನ್ನು ಅಕ್ಷರ ದಾಸೋಹ ಯೋಜನೆಯಡಿ ಶಾಲೆಗಳಿಗೆ ಪೂರೈಕೆ ಮಾಡಿದೆ. ಅದೇ ರೀತಿ ಮಾಲಹಳ್ಳಿ ಗ್ರಾಮದ ಶಾಲೆಯ ವಿದ್ಯಾರ್ಥಿಗಳಿಗೆ ಲಕ್ಷಾಂತರ ರೂ. ವೆಚ್ಚದ ಆಹಾರ ಧಾನ್ಯ ಪೂರೈಕೆ ಮಾಡಲಾಗಿದೆ. ಅಕ್ಕಿ, ಗೋಧಿ, ತೊಗರಿ ಬೇಳೆ, ಉಪ್ಪು, ಅಡುಗೆ ಎಣ್ಣೆ ಪೂರೈಕೆ ಮಾಡಲಾಗಿದೆ.

    ಕೆಲ ಶಾಲೆಗಳಲ್ಲಿ ರಾತ್ರಿ ದುಷ್ಕರ್ಮಿಗಳು ಶಾಲೆ ಬೀಗ ಮುರಿದು ಮಕ್ಕಳ ಬಿಸಿಯೂಟದ ಆಹಾರ ಧಾನ್ಯ ಕಳ್ಳತನ ಮಾಡಿದ್ದಾರೆ. ಇದೇ ತಿಂಗಳ ಯಾದಗಿರಿ ಜಿಲ್ಲೆಯ ಬಲಶೆಟ್ಟಿಹಾಳ ಶಾಲೆಯಲ್ಲಿ ಕೂಡ ಖದೀಮರು ಶಾಲೆ ಬೀಗ ಮುರಿದು ಅಡುಗೆ ಎಣ್ಣೆ ಕಳ್ಳತನ ಮಾಡಿದ್ದರು. ಶಾಲೆಯಲ್ಲಿ ಸಂಗ್ರಹಿಸಿಟ್ಟಿದ್ದ ಆಹಾರ ಧಾನ್ಯ ಕಳ್ಳತನ ಮಾಡುತ್ತಿರುವದನ್ನು ಅರಿತು ಶಾಲೆ ಮುಖ್ಯ ಶಿಕ್ಷಕ ಸಿದ್ದಣ್ಣಗೌಡ ಮನೆ ಬಿಟ್ಟು ಶಾಲೆಯಲ್ಲಿ ಆಹಾರ ಧಾನ್ಯಗಳಿಗೆ ಸರ್ಪಗಾವಲು ಆಗಿದ್ದಾರೆ.

    ಆಹಾರ ಧಾನ್ಯ ಕಳ್ಳರ ಪಾಲಾಗದಂತೆ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದು ಈಗ ಶಿಕ್ಷಕರ ಕಾರ್ಯಕ್ಕೆ ಎಲ್ಲಡೇ ಮೆಚ್ಚುಗೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಶಾಲೆ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ ಮಾಡಲಿದ್ದಾರೆ. ಇದನ್ನೂ ಓದಿ: ಯಾದಗಿರಿಯ ತಿಂಥಣಿ ರಾಜ್ಯದ ಮೊದಲ ಕೊರೊನಾ ಲಸಿಕೆ ಮುಕ್ತ ಗ್ರಾಮ ಪಂಚಾಯ್ತಿ

  • 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ- ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ

    80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ- ಮೋದಿ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ: ಕೊರೊನಾ 2ನೇ ಅಲೆಯಿಂದ ನಲುಗುತ್ತಿರುವ ಬಡ ಜನರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದ್ದು, 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

    ಶುಕ್ರವಾರ ಈ ಕುರಿತು ಘೋಷಣೆ ಮಾಡಿರುವ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಮೇ ಹಾಗೂ ಜೂನ್ 2 ತಿಂಗಳು ಉಚಿತ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದೆ. ಒಟ್ಟು 80 ಕೋಟಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ.ಉಚಿತ ಆಹಾರ ಧಾನ್ಯ ನೀಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ.

    ಉಚಿತ ಆಹಾರ ಧಾನ್ಯ ವಿತರಣೆಗಾಗಿ ಕೇಂದ್ರ ಸರ್ಕಾರ 26 ಸಾವಿರ ಕೋಟಿಗೂ ಅಧಿಕ ಹಣವನ್ನು ವ್ಯಯಿಸುತ್ತಿದ್ದು, 80 ಲಕ್ಷ ಟನ್ ಆಹಾರ ಧಾನ್ಯ ವಿತರಿಸುತ್ತಿದೆ. ಕೊರೊನಾ ಎರಡನೇ ಅಲೆ ಹಿನ್ನೆಲೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ಈ ಘೋಷಣೆ ಮಾಡಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ನಾಗರಿಕ ಸರಬರಾಜು ಯೋಜನೆಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆ.ಜಿ.ಆಹಾರ ಧಾನ್ಯಗಳನ್ನು 2 ತಿಂಗಳು ವಿತರಿಸಲಾಗುವುದು. ಆದರೆ ಈ ಬಾರಿ ನಾವು ಬೇಳೆ ಕಾಳುಗಳನ್ನು ನೀಡುವುದಿಲ್ಲ ಎಂದು ಸುಧಾಂಶು ಪಾಂಡೆ ತಿಳಿಸಿದ್ದಾರೆ.

    ದೇಶದಲ್ಲಿ ಕೊರೊನಾ ಸಾರ್ವಕಾಲಿಕ ದಾಖಲೆಯ ಕೇಸ್‍ಗಳು ಪತ್ತೆಯಾಗುತ್ತಿದ್ದು, ಜನ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ದೇಶದಲ್ಲಿ ಶುಕ್ರವಾರ ಒಂದೇ ದಿನ 3.32 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

    ಈ ಹಿಂದೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‍ಎಫ್‍ಎಸ್‍ಎ) ಅಡಿಯಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 5 ಕೆ.ಜಿ ಅಕ್ಕಿ, ಗೋಧಿಯ ಜೊತೆಗೆ 1 ಕೆ.ಜಿ. ಬೇಳೆ ಕಾಳು ನೀಡಲಾಗುತ್ತಿತ್ತು. ಆದರೆ ಈ ಬಾರಿ ಬೇಳೆ ಕಾಳುಗಳನ್ನು ವಿತರಿಸುವುದಿಲ್ಲ ಎಂದು ಸುಧಾಂಶು ಪಾಂಡೆ ತಿಳಿಸಿದ್ದಾರೆ.

    2020ರಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯಡಿ 3 ತಿಂಗಳುಗಳ ಕಾಲ 2020ರ ಜುಲೈವರೆಗೆ ಬಡವರಿಗೆ ಉಚಿತ ಆಹಾರ ಧಾನ್ಯ ವಿತರಿಸಲಾಗಿತ್ತು. ಕೋವಿಡ್‍ನಿಂದಾಗಿ ಈ ಯೋಜನೆಯನ್ನು ನವೆಂಬರ್ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೆ ಜಾರಿಗೆ ತರಲಾಗುತ್ತಿದೆ.