Tag: foot

  • ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

    ಕಾಲಿನ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಮೆಗಾಸ್ಟಾರ್

    ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಿರಂಜೀವಿ (Chiranjeevi) ಮೊನ್ನೆಯಷ್ಟೇ ಪತ್ನಿಯೊಂದಿಗೆ ವಿಮಾನಯಾನ ಬೆಳೆಸಿದ್ದರು. ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅದೊಂದು ಖಾಸಗಿ ವಿಮಾನವಾಗಿದ್ದರಿಂದ ಅಲ್ಲಿನ ಕೆಲ ದೃಶ್ಯಗಳನ್ನು ಅವರು ಹಂಚಿಕೊಂಡು ಸಂಭ್ರಮಿಸಿದ್ದರು. ವಿರಾಮ ಬಯಸಿ ಅವರು ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಸಲಿ ಸುದ್ದಿ ಈಗ ಹೊರ ಬಂದಿದೆ.

    ಮೆಗಾಸ್ಟಾರ್ ಚಿರಂಜೀವಿ ಪತ್ನಿಯೊಂದಿಗೆ ಪ್ರಯಾಣ ಬೆಳೆಸಿದ್ದು ಅಮೆರಿಕಾಗೆ (America) ಎಂದು ಹೇಳಲಾಗುತ್ತಿದೆ. ಅಮೆರಿಕಾದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿರಂಜೀವಿ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ (Surgery) ಮಾಡಲಾಗಿದೆಯಂತೆ. ಅದಕ್ಕಾಗಿ ಅವರು ಪತ್ನಿಯೊಂದಿಗೆ ಅಮೆರಿಕಾಗೆ ತೆರಳಿದ್ದರು ಎನ್ನುವುದು ಈಗ ಗೊತ್ತಾಗಿದೆ. ಇದನ್ನೂ ಓದಿ:ಸೌತ್‌ನ ಇಬ್ಬರು ಸ್ಟಾರ್ ನಟರ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್

    ಭೋಲಾ ಶಂಕರ್ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಅಮೆರಿಕಾಗೆ ಹಾರಿದ್ದರು ಚಿರಂಜೀವಿ. ಕಾಲಿನಲ್ಲಿ ನೋವು ಕಾಣಿಸಿಕೊಂಡಿದ್ದರಿಂದ  ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ಪಡೆಯಲಾಗಿತ್ತು. ಸಣ್ಣದೊಂದು ಶಸ್ತ್ರ ಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದರು. ಅದರಂತೆ ಚಿರಂಜೀವಿ ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರಂತೆ.

     

    ಈವರೆಗೂ ಈ ವಿಷಯವನ್ನು ಗೌಪ್ಯವಾಗಿ ಇಡಲಾಗಿತ್ತು. ಆದರೆ, ಆಪ್ತರು ಈ ಮಾಹಿತಿಯನ್ನು ಹಂಚಿಕೊಂಡಿದ್ದರಿಂದ ಅದು ದೊಡ್ಡ ಸುದ್ದಿಯಾಗಿದೆ. ಈಗಾಗಲೇ ಶಸ್ತ್ರ ಚಿಕಿತ್ಸೆ ನಡೆದಿದ್ದು, ಆತಂಕ ಪಡುವಂತಹ ಅಗತ್ಯವಿಲ್ಲ ಎಂದಿದ್ದಾರೆ ಆಪ್ತರು. ಅಲ್ಲಿಂದ ಬಂದು ಮತ್ತೆ ಅವರು ಸಿನಿಮಾ ಸಂಬಂಧಿ ಕಾರ್ಯಗಳಲ್ಲಿ ತೊಡಗಲಿದ್ದಾರಂತೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

    ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಕಾಲಿಗೆ ಗಂಭೀರ ಪೆಟ್ಟು: ಯಶಸ್ವಿ ಶಸ್ತ್ರ ಚಿಕಿತ್ಸೆ

    ವಾರದ ಹಿಂದೆಯಷ್ಟೇ ಕ್ರೀಮ್ ಸಿನಿಮಾದ ಶೂಟಿಂಗ್ ಸಮಯದಲ್ಲಿ ಕಾಲಿಗೆ ಗಂಭೀರ ಪೆಟ್ಟು ಮಾಡಿಕೊಂಡಿದ್ದ ಕಿರಿಕ್ ಪಾರ್ಟಿ ಖ್ಯಾತಿಯ ನಟಿ ಸಂಯುಕ್ತ ಹೆಗ್ಡೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಕಾಲಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯಾಗಿದ್ದು, ಇನ್ನೆರಡು ದಿನಗಳಲ್ಲಿ ಡಿಸ್ ಚಾರ್ಜ್ ಮಾಡುವುದಾಗಿ ವೈದ್ಯರು ತಿಳಿಸಿದ್ದಾರೆ.

    ಸರ್ಜರಿ ನಂತರ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿರುವ ವೈದ್ಯರು, ಕಾಲಿಗೆ ಗಂಭೀರವಾಗಿಯೇ ಪೆಟ್ಟು ಬಿದ್ದಿತ್ತು. ಹಾಗಾಗಿ ಅನಿವಾರ್ಯವಾಗಿ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕಾಯಿತು. ಇದೀಗ ಸರ್ಜರಿ ಯಶಸ್ವಿಯಾಗಿ ನಡೆದಿದ್ದು, ಎಂಟು ವಾರಗಳ ಕಾಲ ಅವರು ರೆಸ್ಟ್ ಮಾಡಬೇಕು. ಅಲ್ಲದೇ, ಫಿಸಿಯೋಥೆರಪಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಸಿಂಪಲ್ ಸುನಿ `ಗತವೈಭವ’ದಲ್ಲಿ ದೇವಕನ್ಯೆಯಾಗಿ ಆಶಿಕಾ ರಂಗನಾಥ್‌

    ಕ್ರೀಮ್ ಸಿನಿಮಾದ ಸಾಹಸ ಸನ್ನಿವೇಶವನ್ನು ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಚಿತ್ರತಂಡವು ಡ್ಯೂಪ್ ಬಳಸುವಂತೆ ಹೇಳಿದರೂ, ಸಂಯುಕ್ತ ಹೆಗ್ಡೆ ಅತ್ಯುತ್ಸಾಹದಿಂದ ಡ್ಯೂಪ್ ಇಲ್ಲದೇ ತಾವೇ ಪಾಲ್ಗೊಂಡಿದ್ದರು, ಆಗ ಕಾಲು ಟ್ವಿಸ್ಟ್ ಆಗಿತ್ತು. ಕೂಡಲೇ ಅವರಿಗೆ ಪ್ರಥಮ ಚಿಕಿತ್ಸೆಯನ್ನೂ ನೀಡಲಾಯಿತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದುಕೊಂಡು ಟ್ರೀಟ್ಮೆಂಟ್ ಪಡೆದರು. ಆದರೂ, ನೋವು ಕಡಿಮೆ ಆಗಿರಲಿಲ್ಲ. ಕೊನೆಗೂ ಆಸ್ಪತ್ರೆ ಸೇರಿ, ಚಿಕಿತ್ಸೆ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಮೀನು ವಿವಾದ – ಯುವಕನ ಕಾಲು ಮುರಿದ ದಾಯಾದಿಗಳು

    ಜಮೀನು ವಿವಾದ – ಯುವಕನ ಕಾಲು ಮುರಿದ ದಾಯಾದಿಗಳು

    ರಾಯಚೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದಾಯಾದಿಗಳು ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಮಾನ್ವಿ ತಾಲೂಕಿನ ಕಟಕನೂರು ಗ್ರಾಮದಲ್ಲಿ ನಡೆದಿದೆ.

    ರಾಜೊಳ್ಳಿಯ ನಿವಾಸಿ ಮಂಜುನಾಥ್ ಹಲ್ಲೆಗೊಳಗಾದ ಯುವಕ. ಸಂಬಂಧಿಯನ್ನುದನ್ನು ನೋಡದೆ ನೋವಿನಿಂದ ನರಳಾಡಿದರೂ ಬಿಡದೆ ಬೆನ್ನತ್ತಿ ಹಲ್ಲೆ ಮಾಡಿದ್ದಾರೆ. ದಾಯಾದಿಗಳಾದ ನರಸಣ್ಣ, ತಿಮ್ಮಪ್ಪ, ವಿರೇಶ್ ಎಂಬುವವರಿಂದ ಈ ಹಲ್ಲೆ ನಡೆದಿದೆ. ಇದನ್ನೂ ಓದಿ: ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಕೋಲ್ಡ್ ವಾರ್ – ನಟಿ ಅನುಷ್ಕಾ ಶೆಟ್ಟಿ ಸಹೋದರನ ಕೊಲೆಗೆ ಸ್ಕೆಚ್

    ಹೊಲದಲ್ಲಿ ಟ್ರ್ಯಾಕ್ಟರ್‌ನಿಂದ ಉಳುಮೆ ಮಾಡಲು ಹೋದಾಗ, ಒಬ್ಬನೆ ಇರುವುದು ತಿಳಿದು ಹಲ್ಲೆ ಮಾಡಿದ್ದಾರೆ. ಪಿತ್ರಾರ್ಜಿತವಾಗಿ ಬಂದ ಐದುವರೆ ಎಕರೆ ಜಮೀನಿನ ವಿವಾದ ಹಿನ್ನೆಲೆ ಹೊಡೆದಾಟ ನಡೆದಿದೆ. ಮಂಜುನಾಥ್‍ನಿಗೆ ದೊಣ್ಣೆಯಿಂದ ಹೊಡೆದು ಒಂದು ಕಾಲು ಮುರಿದಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮುಂಬೈ ಪೊಲೀಸರಿಂದ ಸಮನ್ಸ್

    ಗಾಯಾಳು ಮಂಜುನಾಥ್‍ನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಸಂಬಂಧ ಯರಗೇರಾ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೇರಳದ ಆನೆ ಸಾವು ಮಾಸುವ ಮುನ್ನವೇ ಯಾದಗಿರಿಯಲ್ಲಿ ಅಮಾನವೀಯ ಘಟನೆ

    ಕೇರಳದ ಆನೆ ಸಾವು ಮಾಸುವ ಮುನ್ನವೇ ಯಾದಗಿರಿಯಲ್ಲಿ ಅಮಾನವೀಯ ಘಟನೆ

    – ಕಾಲು ಕಳ್ಕೊಂಡು ನದಿಯಲ್ಲಿ ನರಳುತ್ತಿರೋ ಎಮ್ಮೆ

    ಯಾದಗಿರಿ: ಇತ್ತೀಚೆಗೆ ಕೇರಳದಲ್ಲಿ ಆನೆಯೊಂದು ದುಷ್ಟರ ಕೃತ್ಯಕ್ಕೆ ನದಿಯಲ್ಲಿ ನರಳಿ ಪ್ರಾಣ ಬಿಟ್ಟಿದೆ. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ಯಾದಗಿರಿಯಲ್ಲಿ ನಡೆಯುತ್ತಿದೆ.

    ಎಮ್ಮೆಯೊಂದು ಜಿಲ್ಲೆಯ ವಡಗೇರಾ ತಾಲೂಕಿನ ಕೊಡಲ ಗ್ರಾಮದ ಸಮೀಪದ ಕೃಷ್ಣಾ ನದಿ ತೀರದಲ್ಲಿ ಮೊಸಳೆ ಹೊಡೆತಕ್ಕೆ ಸಿಕ್ಕು ಕಾಲು ಕಳೆದುಕೊಂಡಿದೆ. ಆದರೆ ಎಮ್ಮೆ ಕಳೆದ ಎರಡು ದಿನಗಳಿಂದ ನರಳುತ್ತಿದೆ. ಈ ವಿಷಯ ಸ್ಥಳೀಯ ಪಶು ಚಿಕಿತ್ಸಾಲಯ ಕ್ಕೆ ಗೊತ್ತಿದ್ದರೂ ಪಶು ವೈದ್ಯರು ಮಾತ್ರ ಎಮ್ಮೆಗೆ ಚಿಕಿತ್ಸೆ ನೀಡಲು ಮುಂದಾಗಿಲ್ಲ. ಇದರಿಂದ ಅತೀವ ನೋವಿನಿಂದ ನರಳುತ್ತಿರುವ ಎಮ್ಮೆ ನೋವು ತಗ್ಗಿಸಿಕೊಳ್ಳಲು ನದಿಯ ನೀರಿನಲ್ಲಿ ಕಾಲ ಕಳೆಯುತ್ತಿದೆ.

    ಕಳೆದ ಎರಡು ದಿನಗಳ ಹಿಂದೆ ನೀರು ಕುಡಿಯಲು ನದಿ ತೀರಕ್ಕೆ ಎಮ್ಮೆ ತೆರಳಿತ್ತು. ಈ ಸಮಯದಲ್ಲಿ ಮೊಸಳೆಯೊಂದು ಎಮ್ಮೆಯ ಮೇಲೆ ಏಕಾಏಕಿ ದಾಳಿ ಮಾಡಿದೆ. ದಾಳಿಯಲ್ಲಿ ಎಮ್ಮೆಯ ಕಾಲು ಕಟ್ ಆಗಿದ್ದು, ಮೊಸಳೆ ಬಾಯಿಂದ ತಪ್ಪಿಸಿಕೊಂಡು ಎಮ್ಮೆ ಜೀವ ಉಳಿಸಿಕೊಂಡಿದೆ. ತೀವ್ರವಾಗಿ ಗಾಯಗೊಂಡಿರುವ ಎಮ್ಮೆಯ ರಕ್ಷಣೆಗೆ ಯಾರೂ ಧಾವಿಸದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ನದಿಯ ನೀರಿನಲ್ಲಿ ಎಮ್ಮೆ ಕುಳಿತಿದೆ.

    ಇನ್ನೂ ನದಿಯಲ್ಲಿ ಮೊಸಳೆ ಇರುವುದರಿಂದ ನದಿಗಿಳಿದು ಎಮ್ಮೆ ಕಾಪಾಡಲು ಸ್ಥಳೀಯರು ಹಿಂದೇಟು ಹಾಕುತ್ತಿದ್ದಾರೆ. ಎರಡು ದಿನವಾದರೂ ಎಮ್ಮೆ ಮಾಲಿಕ ಪತ್ತೆಯಾಗಿಲ್ಲ. ವಿಷಯ ತಿಳಿದಿದ್ದರೂ ಇನ್ನೂ ಸ್ಥಳಕ್ಕೆ ಧಾವಿಸಿದ ಪಶು ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಎಐಎಡಿಎಂಕೆ ಧ್ವಜಸ್ತಂಭದಿಂದಾಗಿ ಟ್ರಕ್ ಹರಿದು ಎಡಗಾಲನ್ನು ಕಳೆದುಕೊಂಡ ಮಹಿಳೆ

    ಎಐಎಡಿಎಂಕೆ ಧ್ವಜಸ್ತಂಭದಿಂದಾಗಿ ಟ್ರಕ್ ಹರಿದು ಎಡಗಾಲನ್ನು ಕಳೆದುಕೊಂಡ ಮಹಿಳೆ

    ಚೆನ್ನೈ: ಎಐಎಡಿಎಂಕೆ ಧ್ವಜಸ್ತಂಭಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಮಹಿಳೆಯ ಬೈಕಿಗೆ ಟ್ರಕ್‍ವೊಂದು ಡಿಕ್ಕಿ ಹೊಡೆದಿದ್ದು ಈಗ ಮಹಿಳೆಯ ಎಡಗಾಲು ಕತ್ತರಿಸಲಾಗಿದೆ.

    ಈ ಅಪಘಾತದಲ್ಲಿ ತನ್ನ ಕಾಲನ್ನು ಕಳೆದುಕೊಂಡ ಮಹಿಳೆಯನ್ನು 30 ವರ್ಷದ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಕೊಯಮತ್ತೂರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆಗೆ ನಿರ್ಮಿಸಲಾಗಿದ್ದ ಎಐಎಡಿಎಂಕೆ ಧ್ವಜಸ್ತಂಭವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

    ಬೈಕಿನಲ್ಲಿ ಬರುತ್ತಿದ್ದ ರಾಜೇಶ್ವರಿ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಎಐಎಡಿಎಂಕೆ ಧ್ವಜಸ್ತಂಭವನ್ನು ತಪ್ಪಿಸಲು ಹೋದಾಗ ನಿಯಂತ್ರಣ ಕಳೆದುಕೊಂಡಿದ್ದಾರೆ. ಈ ವೇಳೆ ಅವರ ಹಿಂದೆ ಬರುತ್ತಿದ್ದ ಲಾರಿ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಜೇಶ್ವರಿ ಅವರು ಎರಡು ಕಾಲುಗಳಿಗೆ ಗಂಭೀರವಾದ ಗಾಯಗಳಾಗಿತ್ತು. ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದು, ಎಡಗಾಲಿಗೆ ಜಾಸ್ತಿ ಪೆಟ್ಟಾಗಿ ಅದು ನುಜ್ಜಾಗಿದೆ. ಆದ್ದರಿಂದ ಅದನ್ನು ಮೊಣಕಾಲಿನಿಂದ ಕೆಳಗೆ ಕತ್ತರಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಒಬ್ಬಳೇ ದುಡಿದು ಕುಟುಂಬವನ್ನು ಸಾಕುತ್ತಿದ್ದ ರಾಜೇಶ್ವರಿ ಮೊದಲು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಹಣದ ಸಮಸ್ಯೆಯ ಕಾರಣಕ್ಕೆ ಕೆಲವು ದಿನದ ಹಿಂದೆ ಕೊಯಮತ್ತೂರಿಗೆ ಬಂದು ಗೋಕುಲಮ್ ಪಾರ್ಕ್ ಎಂಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು.

  • ರಸ್ತೆ ಗುಂಡಿಯಲ್ಲಿ ಕಾಲಿಟ್ಟು ತನ್ನ ಎರಡು ಕಾಲು ಕಳೆದುಕೊಂಡ ಎತ್ತು

    ರಸ್ತೆ ಗುಂಡಿಯಲ್ಲಿ ಕಾಲಿಟ್ಟು ತನ್ನ ಎರಡು ಕಾಲು ಕಳೆದುಕೊಂಡ ಎತ್ತು

    ಧಾರವಾಡ: ಹೊಲದಲ್ಲಿ ಉಳುಮೆ ಮಾಡಿ ವಾಪಸ್ ಬರುವಾಗ ರಸ್ತೆ ಗುಂಡಿಗೆ ಕಾಲಿಟ್ಟ ಎತ್ತಿನ ಎರಡು ಕಾಲುಗಳು ಮುರಿದ ಘಟನೆ ಧಾರವಾಡ ನಗರದ ಮುರುಘಾಮಠದ ಬಳಿ ನಡೆದಿದೆ.

    ನಗರದ ಗಾಂಧಿಚೌಕದ ನಿವಾಸಿಯಾದ ಶಂಕರ ಉಳ್ಳಾಗಡ್ಡಿ ಎಂಬವರಿಗೆ ಸೇರಿದ ಎತ್ತು ರಸ್ತೆ ಗುಂಡಿಗೆ ಬಿದ್ದು ತನ್ನ ಎರಡು ಕಾಲುಗಳನ್ನು ಕಳೆದುಕೊಂಡಿದೆ. ನಗರದ ಹೊರವಲಯದ ಕವಲಗೇರಿ ಗ್ರಾಮದ ರಸ್ತೆಯಲ್ಲಿ ಇವರ ಹೊಲಗಳಿವೆ. ಅಲ್ಲಿ ಎತ್ತಿನ ಮಾಲೀಕ ಉಳುಮೆ ಮುಗಿಸಿಕೊಂಡು ವಾಪಸ್ ಬರುವಾಗ ಈ ಘಟನೆ ನಡೆದಿದೆ.

    ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ ಎಂದು ಜನಪ್ರತಿನಿಧಿಗಳಿಗೆ ದೂರು ನೀಡಿದರೂ ಯಾರೂ ಕ್ಯಾರೇ ಎಂದಿರಲಿಲ್ಲ. ಎತ್ತಿನ ಕುಟುಂಬದವರು ಸ್ಥಳಕ್ಕೆ ಬಂದು ಕಣ್ಣೀರು ಹಾಕಿದ್ದು ಎಲ್ಲರಿಗೆ ನೋವು ತಂದಿದೆ. ಎತ್ತಿನ ಮಾಲೀಕ ಶಂಕರ ಎರಡು ಎತ್ತುಗಳನ್ನು ಮಹಾರಾಷ್ಟ್ರ ದಿಂದ ತಂದಿದ್ದರು. ಒಟ್ಟು 1 ಲಕ್ಷ 40 ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದರು. ಅದರಲ್ಲಿ ಒಂದು ಎತ್ತು ಕಾಲು ಕಳೆದುಕೊಂಡಿದ್ದು, ರೈತನಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

    ಮೊದಲೇ ಅಕಾಲಿಕ ಮಳೆಗೆ ಸಾಕಷ್ಟು ನಷ್ಟದಲ್ಲಿರುವ ರೈತನಿಗೆ ಇದು ಕೂಡಾ ಸಾಕಷ್ಟು ನೋವು ತಂದಿದೆ. ಸದ್ಯ ಈ ಎತ್ತಿಗೆ ಎಷ್ಟೇ ಖರ್ಚು ಮಾಡಿದರೂ ಅದು ಎದ್ದು ಓಡಾಡದ ಸ್ಥಿತಿಯಲ್ಲಿದ್ದು, ಇದಕ್ಕೆ ಇಲ್ಲಿಯ ಜನಪ್ರತಿನಿಧಿಗಳೇ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ಕಳ್ಳತನ ಒಪ್ಪಿಕೊಳ್ಳುವಂತೆ ಎದೆಗೆ ಒದ್ದ ಪೊಲೀಸ್- ರೈತನ ಸ್ಥಿತಿ ಗಂಭೀರ

    ಕಳ್ಳತನ ಒಪ್ಪಿಕೊಳ್ಳುವಂತೆ ಎದೆಗೆ ಒದ್ದ ಪೊಲೀಸ್- ರೈತನ ಸ್ಥಿತಿ ಗಂಭೀರ

    ಗದಗ: ಬೈಕ್ ಕಳ್ಳತನ ಮಾಡಿರೋದಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿ ಪೊಲೀಸರು ಅಮಾಯಕ ರೈತನ ಮೇಲೆ ದೌರ್ಜನ್ಯ ನಡೆಸಿರೋ ಆರೋಪವೊಂದು ಜಿಲ್ಲೆಯಲ್ಲಿ ಕೇಳಿಬಂದಿದೆ.

    ನಗರ ಠಾಣೆಯ ಪೊಲೀಸ್ ಪೇದೆ ಯಲ್ಲಪ್ಪ ಎಂಬವರ ಮೇಲೆ ಈ ಆರೋಪ ಕೇಳಿಬಂದಿದೆ. ಹುಯಿಲಗೋಳ ಗ್ರಾಮದ ರೈತ ಈರಪ್ಪ ಹೊಸಳ್ಳಿಗೆ ಎದೆಗೆ ಯಲ್ಲಪ್ಪ ಬೂಟುಗಾಲಿನಿಂದ ಒದ್ದಿದ್ದಾರೆ ಅಂತ ಗಾಯಾಳು ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ.

    ಏನಿದು ಪ್ರಕರಣ?:
    ಜುಲೈ 23 ರಂದು ಈರಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಆತನ ಎದೆಗೆ ಪೊಲೀಸ್ ಯಲ್ಲಪ್ಪ ಒದ್ದಿದ್ದಾರೆ. ಬೂಟಿನೇಟಿನಿಂದಾಗಿ ಈರಪ್ಪ ಇದೀಗ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು, ಗದಗ ಜಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದು, ಇದೀಗ ಸ್ಥಿತಿ ಗಂಭೀರವಾಗಿರುವುದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

    ಅಮಾಯಕನನ್ನು ಕರೆತಂದು ಹೊಡೆದಿರುವುದು ಖಂಡನೀಯ. ತಪ್ಪಿತಸ್ಥ ಪೊಲೀಸ್ ಮೇಲೆ ಕ್ರಮಕೈಗೊಳ್ಳದಿದ್ದರೆ, ಕುಟುಂಬ ಸಮೇತ ಪೊಲೀಸ್ ಠಾಣೆಯ ಎದುರು ಹೋರಾಟ ಮಾಡುವುದಾಗಿ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ತನಗೆ ಸಂಬಂಧವಿಲ್ಲದ, ಬೈಕ್ ಕಳ್ಳತನ ಒಪ್ಪಿಕೊಳ್ಳುವಂತೆ ಪೇದೆ ಥಳಿಸಿದ್ದಾನೆಂದು ಈರಪ್ಪ ಅವರ ಸಂಬಂಧಿಗಳು ಆರೋಪಿಸಿದ್ದಾರೆ.

  • ಆತ್ಮಹತ್ಯೆಗೆ ಯತ್ನಿಸಿ, ಲಾರಿಗೆ ಸಿಕ್ಕು ಎರಡೂ ಕಾಲು ಕಳೆದುಕೊಂಡ!

    ಆತ್ಮಹತ್ಯೆಗೆ ಯತ್ನಿಸಿ, ಲಾರಿಗೆ ಸಿಕ್ಕು ಎರಡೂ ಕಾಲು ಕಳೆದುಕೊಂಡ!

    ಕೊಪ್ಪಳ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಲಾರಿಗೆ ಸಿಲುಕಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಕುಕನೂರು ಪಟ್ಟಣದ ಪ್ರವಾಸಿ ಮಂದಿರದ ಸಮೀಪದಲ್ಲಿ ನಡೆದಿದೆ.

    ಕುಕನೂರು ಪಟ್ಟಣದ ಹುಸೇನ್ ಸಾಬ್ ಕುಷ್ಟಗಿ (30) ಆತ್ಮಹತ್ಯೆಗೆ ಯತ್ನಿಸಿ ಕಾಲುಗಳನ್ನು ಕಳೆದುಕೊಂಡ ವ್ಯಕ್ತಿ. ಅಪಘಾತವನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಅದೃಷ್ಟವಶಾತ್ ಹುಸೇನ್ ಬದುಕುಳಿದಿದ್ದು, ತನ್ನ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾನೆ.

    ಹುಸೇನ್ ಸಾಬ್ ಮನೆಯಲ್ಲಿ ಜಗಳ ಮಾಡಿಕೊಂಡು ಹೊರ ಬಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದ ಹುಸೇನ್ ಸಾಬ್ ಎದುರಿಗೆ ಬರುತ್ತಿದ್ದ ಲಾರಿಗೆ ಕೈ ಮುಗಿದು ಚಕ್ರಕ್ಕೆ ಬೀಳಲು ಯತ್ನಿಸಿದ್ದಾನೆ. ತಕ್ಷಣವೇ ಜಾಗೃತಗೊಂಡ ಚಾಲಕ ಎಷ್ಟೇ ಪ್ರಯತ್ನಿಸಿದರೂ ಲಾರಿ ನಿಯಂತ್ರಣಕ್ಕೆ ಸಿಗದೇ ಹುಸೇನ್ ಸಾಬ್ ಕಾಲುಗಳ ಮೇಲೆ ಹಾದು ಹೋಗಿದೆ. ಅತೀಯಾದ ರಕ್ತಸ್ರಾವದಿಂದ ಬಳಲುತ್ತಿದ್ದ ಹುಸೇಸ್ ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

    ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಕಾಲಲ್ಲಿ ಗಾಯವಾದ್ರೆ ರಕ್ತದ ಬದಲು ತ್ರಾಮದ ಮೊಳೆಗಳು ಹೊರಬಂದ್ವು- ಚಾಮರಾಜನಗರದಲ್ಲೊಂದು ಅಚ್ಚರಿ!

    ಕಾಲಲ್ಲಿ ಗಾಯವಾದ್ರೆ ರಕ್ತದ ಬದಲು ತ್ರಾಮದ ಮೊಳೆಗಳು ಹೊರಬಂದ್ವು- ಚಾಮರಾಜನಗರದಲ್ಲೊಂದು ಅಚ್ಚರಿ!

    ಚಾಮರಾಜನಗರ: ಕಾಲಿಗೆ ಗಾಯವಾದರೆ ರಕ್ತ ಬರುವುದನ್ನು ನೋಡಿದ್ದೀರ. ಆದರೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡತಪ್ಪೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕಾಲಿಗೆ ಗಾಯವಾಗಿದ್ದು, ತಾಮ್ರದ ಮೊಳೆಗಳು ಹೊರಬಂದಿವೆ.

    ಗ್ರಾಮದ ಮಾದಪ್ಪ ಎಂಬವರ ಕಾಲಿನಲ್ಲಿ ಗಾಯವಾದ ಜಾಗದಲ್ಲಿ ರಕ್ತದ ಬದಲು ತಾಮ್ರದ ಮೊಳೆಗಳು ಬರುತ್ತಿವೆ. ಕಳೆದ ಪೂರ್ಣಿಮೆಯಂದು ಜಮೀನಿನಿಂದ ಮನೆಗೆ ಬರುವ ವೇಳೆ ಮಾಟ ಮಾಡಿದ ಜಾಗದಲ್ಲಿ ಮಾದಪ್ಪ ಕಾಲಿಟ್ಟಿದ್ದಾರೆ. ಮಾದಪ್ಪ ಅವರಿಗೆ ಮಾಟಮಂತ್ರದ ಬಗ್ಗೆ ಹೆಚ್ಚು ನಂಬಿಕೆ ಇಲ್ಲದ ಕಾರಣ ಇದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಂಡಿರಲಿಲ್ಲ. ಆದ್ರೆ ಒಂದು ದಿನದ ನಂತರ ಪಾದದಲ್ಲಿ ದೊಡ್ಡ ಗುಳ್ಳೆಯೊಂದು ಆಗಿದೆ.

    ಇದನ್ನು ಗುಣಪಡಿಸಿಕೊಳ್ಳಲು ವೈದ್ಯರ ಬಳಿ ಹೋದ ಸಂದರ್ಭದಲ್ಲಿ ಗುಳ್ಳೆಯನ್ನು ಒಡೆದು, ಔಷಧಿಯನ್ನು ನೀಡಿದ್ದಾರೆ. ಆದರೂ ಸಹ ಗಾಯ ಮಾತ್ರ ವಾಸಿಯಾಗಿರಲಿಲ್ಲ. ಮಂಗಳವಾರ ಅಮವಾಸ್ಯೆಯಾದ್ದರಿಂದ ಪತ್ನಿಯ ಒತ್ತಾಯಕ್ಕೆ ಮಣಿದು ಗುಂಡ್ಲುಪೇಟೆ ತಾಲೂಕಿನ ತವರೆಕಟ್ಟೆಯಲ್ಲಿರುವ ಮಹದೇಶ್ವರ ಸನ್ನಿಧಿಗೆ ಹೋಗಿದ್ದಾರೆ. ಅಲ್ಲಿನ ಅರ್ಚಕರು ಗಾಯದ ಮೇಲೆ ನಿಂಬೆ ರಸವನ್ನು ಬಿಟ್ಟ ಸಂದರ್ಭದಲ್ಲಿ ಎಲ್ಲರಿಗೂ ಆಶ್ಚರ್ಯವಾಗುವ ರೀತಿಯಲ್ಲಿ ಕಾಲಿನಿಂದ ಸುಮಾರು 30 ರಿಂದ 40 ತಾಮ್ರದ ಮೊಳೆಗಳು ಹೊರಬಂದಿವೆ.

  • ಏಳನೇ ತರಗತಿ ಓದಿತ್ತಿರೋ ಪುಟ್ಟ ಬಾಲಕಿ ಕಾಲು ಆಪರೇಷನ್ ಗೆ ಬೇಕಿದೆ ಸಹಾಯ

    ಏಳನೇ ತರಗತಿ ಓದಿತ್ತಿರೋ ಪುಟ್ಟ ಬಾಲಕಿ ಕಾಲು ಆಪರೇಷನ್ ಗೆ ಬೇಕಿದೆ ಸಹಾಯ

    ವಿಜಯಪುರ: ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯನ್ನು ಬೆಳಗಬೇಕಿದ್ದ ಬಾಲಕಿ ಪೋಲೀಯೋದಿಂದ ನರಳುವಂತಾಗಿದೆ. ಇತ್ತ ಶಾಲೆಗೂ ಹೋಗಲು ಆಗದೆ, ಅತ್ತ ಎಲ್ಲರಂತೆ ಆಟವಾಡಲು ಆಗದಂತೆ ಬಾಲಕಿ ನೋವು ಅನುಭವಿಸುತ್ತಿದ್ದಾಳೆ. ಇನ್ನು ಮಗಳ ನೋವು ನೋಡಿಯು ಕೈಯಿಂದ ಏನು ಮಾಡಲು ಆಗದ ಕುಟುಂಬಸ್ಥರು ಪ್ರತಿನಿತ್ಯ ಕಣ್ಣಿರಿನಲ್ಲೆ ಕೈ ತೊಳೆಯುವಂತಾಗಿದೆ.

    ಹೌದು. ಲತ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬಿಕೆ ಗ್ರಾಮದ ಪ್ರಕಾಶ್ ಮತ್ತು ಶ್ರೀದೇವಿ ದಂಪತಿಯ ಪುತ್ರಿ ಅಪೂರ್ವ ಇದೀಗ ಏಳನೇ ತರಗತಿ ಓದುತ್ತಿದ್ದಾಳೆ. ಅಪೂರ್ವ ಹುಟ್ಟಿದಾಗ ಚೆನ್ನಾಗಿಯೇ ಇದ್ದಳಂತೆ. ಆದ್ರೆ ಅಂಗನಾವಾಡಿಗೆ ಹೋಗುವಾಗ ಯಾವುದೋ ಒಂದು ಚುಚ್ಚು ಮದ್ದು ನೀಡಿದ್ದರ ಪರಿಣಾಮ ಆಕೆಯ ಎಡಗಾಲಿನಲ್ಲಿ ಒಂದು ಗಂಟಾಗಿದೆ. ಬಳಿಕ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ ಕುಟುಂಬಸ್ಥರು ಸುಮ್ಮನಾಗಿದ್ದಾರೆ. ಆದ್ರೆ ಅಪೂರ್ವ 5 ನೇ ತರಗತಿಗೆ ಬರುವಷ್ಟರಲ್ಲಿ ಎಡಗಾಲಿನ ಗಂಟು ಹೆಚ್ಚಾಗಿ ಒಳಗಡೆಯೇ ಕೊಳೆಯಲು ಆರಂಭವಾಯಿತು. ಇದರಿಂದ ಆಕೆಗೆ ಕುಳಿತಲ್ಲಿಂದ ಏಳಲು, ನಿಂತ್ರೆ ಕೂರಲು ಸಾಧ್ಯವಿಲ್ಲದಂತಾಯಿತು.


    ಈ ವೇಳೆ ಕುಟುಂಬಸ್ಥರು ಹಲವೆಡೆ ಚಿಕಿತ್ಸೆ ಕೊಡಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ತದನಂತರ ಮೀರಜ್ ನ ಪ್ರತಿಷ್ಠಿತ ವೈದ್ಯ ಜಿ.ಎಸ್.ಕುಲಕರ್ಣಿ ಅವರ ಹತ್ತಿರ ಅಪೂರ್ವಗೆ ಚಿಕಿತ್ಸೆ ಕೊಡಿಸಿ ಒಂದು ಆಪರೇಷನ್ ಮಾಡಿಸಿದ್ದಾರೆ. ಈ ಆಪರೇಷನ್ ಆದ 6 ತಿಂಗಳ ನಂತರ ಮರಳಿ ಬಂದು ಇನ್ನೊಂದು ಆಪರೇಷನ್ ಮಾಡಿಸಿ. ಹೀಗೆ ಮಾಡಿದ್ದಲ್ಲಿ ಮಾತ್ರ ಆಕೆಯ ಕಾಲು ಸರಿ ಹೋಗುತ್ತೆ. ಅಲ್ಲದೇ ನಡೆದಾಡಲು ಬರುತ್ತೆ ಅಂತಾ ಹೇಳಿದ್ದರು. ಆದ್ರೆ ಅಪೂರ್ವಳದ್ದು ಬಡ ಕುಟುಂಬವಾದುದರಿಂದ ಮೊದಲನೇ ಆಪರೇಷನ್ ಆಗಿ 7 ತಿಂಗಳು ಕಳೆದ್ರೂ ಹಣವಿಲ್ಲದ ಕಾರಣ ಮತ್ತೊಮ್ಮೆ ಆಪರೇಷನ್ ಮಾಡಿಸದೆ ಕುಟುಂಬಸ್ಥರು ಸುಮ್ಮನಾಗಿ ಬಿಟ್ಟಿದ್ದಾರೆ.

    ಮೊದಲನೆ ಆಪರೇಷನ್ ಗೆ 65 ಸಾವಿರ ಹಣವನ್ನು ಕುಟುಂಬಸ್ಥರು ಹಾಕಿದ್ದು, ಈಗ 2ನೇ ಆಪರೇಷನ್ ಗೆ ಮತ್ತೆ 65 ಸಾವಿರ ಹಣ ಬೇಕಾಗಿದೆ. ಇಷ್ಟೊಂದು ಹಣವಿಲ್ಲದ ಕಾರಣ ಆಪರೇಷನ್ ಮಾಡದೆ ಕುಟುಂಬಸ್ಥರು ಚಿಕಿತ್ಸೆಯ ಹಣಕ್ಕಾಗಿ ಅಲ್ಲಿಲ್ಲಿ ಪರದಾಡುತ್ತಿದ್ದಾರೆ. ಸದ್ಯ ಅಪೂರ್ವ ಕುಟುಂಬ ಸಹಾಯ ಹಸ್ತ ಚಾಚಿ ಪಬ್ಲಿಕ್ ಟಿವಿಯ ಮೊರೆ ಬಂದಿದೆ.

    https://www.youtube.com/watch?v=UxkfpFSgYPo