Tag: Foreign Affairs

  • ಇರಾಕ್‍ನಲ್ಲಿ ಕಿಡ್ನಾಪ್ ಆಗಿದ್ದ 39 ಭಾರತೀಯರು ಐಸಿಸ್‍ನಿಂದ ಹತ್ಯೆ

    ಇರಾಕ್‍ನಲ್ಲಿ ಕಿಡ್ನಾಪ್ ಆಗಿದ್ದ 39 ಭಾರತೀಯರು ಐಸಿಸ್‍ನಿಂದ ಹತ್ಯೆ

    ನವದೆಹಲಿ: 2014 ರಲ್ಲಿ ಇರಾಕ್ ನಿಂದ ಐಸಿಸ್ ಅಪಹರಣ ಮಾಡಿದ್ದ 39 ಮಂದಿ ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

    ರಾಜ್ಯಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಪಹಣಕ್ಕೀಡಾಗಿದ್ದ 39 ಭಾರತೀಯರನ್ನು ಐಸಿಸ್ ಉಗ್ರರು ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೊಸುಲ್ ನಿಂದ ಅಪಹರಣ ಮಾಡಿದವರ ಹತ್ಯೆ ಕುರಿತು ಖಚಿತ ಮಾಹಿತಿ ಪಡಿಸಿಕೊಳ್ಳಲು ಆಳವಾದ ರೇಡಾರ್ ಬಳಕೆ ಮಾಡಲಾಗಿದ್ದು, ಹತ್ಯೆಯಾದ ಭಾರತೀಯ ಮೃತದೇಹಗಳನ್ನು ಪತ್ತೆ ಹಚ್ಚಲಾಗಿದೆ. ಅಲ್ಲದೇ ಎಲ್ಲರ ಮೃತದೇಹಗಳನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿತ್ತು. ಮೃತ ದೇಹಗಳನ್ನು ಗುರುತಿಸಲು ಡಿಎನ್‍ಎ ಪರೀಕ್ಷೆಗಾಗಿ ಬಾಗ್ದಾದ್ ಗೆ ಕಳುಹಿಸಲಾಗಿದೆ. ಸೋಮವಾರ ನಮಗೆ ಲಭಿಸಿದ ಮಾಹಿತಿ ಪ್ರಕಾರ 39 ಮೃತದೇಹಗಳಲ್ಲಿ 38 ಮಂದಿಯ ಡಿಎನ್‍ಎ ಸ್ಯಾಪಲ್ ಮ್ಯಾಚ್ ಆಗಿದೆ. 39ನೇ ಮೃತ ದೇಹದ ಡಿಎನ್‍ಎ ಶೇ. 70 ರಷ್ಟು ಮ್ಯಾಚ್ ಆಗಿದೆ ಎಂದರು.

    ಕಳೆದ ವರ್ಷ ಜುಲೈನಲ್ಲಿ ಸದನಕ್ಕೆ ಮಾಹಿತಿ ನೀಡಿದ್ದ ಸುಷ್ಮಾ ಸ್ವರಾಜ್ ಅವರು, ಅಪಹರಣಕ್ಕೆ ಒಳಗಾಗಿರುವ 39 ಮಂದಿಯ ಖಚಿತ ಮಾಹಿತಿ ದೊರೆಯದ ಹೊರತು ಅವರು ಮೃತ ಪಟ್ಟಿದ್ದಾರೆ ಎಂದು ಪ್ರಕಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದರು. ಆದರೆ ಇಂದು ಖಚಿತ ಮಾಹಿತಿಯ ಮೇಲೆ 39 ಮಂದಿಯ ಹತ್ಯೆಯಾಗಿರುವುದನ್ನು ದೃಢಪಡಿಸಿದರು.

    ಹತ್ಯೆಯಾದ ಭಾರತೀಯ ಮೃತದೇಹದ ಅವಶೇಷಗಳನ್ನು ಭಾರತಕ್ಕೆ ತರಲಾಗುವುದು. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿಕೆ ಸಿಂಗ್ ಇರಾಕ್ ಗೆ ತೆರಳಿ ಅಲ್ಲಿಂದ ಮೃತರ ಅವಶೇಷಗಳನ್ನು ಅಮೃತಸರ, ಪಾಟ್ನಾ ಹಾಗೂ ಕೋಲ್ಕತ್ತಾಗಳಿಗೆ ತರಲಿದ್ದಾರೆ ಎಂದು ಮಾಹಿತಿ ನೀಡಿದರು.

    ಇದೇ ವೇಳೆ ಐಸಿಸ್ ಉಗ್ರರಿಂದ ತಪ್ಪಿಸಿಕೊಂಡು ಬಂದ ಹರ್ಜಿತ್ ಮಾಸಿಹ್ ಕಥೆ ಸುಳ್ಳು. ಐಸಿಸಿ ಉಗ್ರರು ಭಾರತೀಯರ ಜೊತೆಗೆ 51 ಬಾಂಗ್ಲಾದೇಶಿ ಕಾರ್ಮಿಕರನ್ನು ಒತ್ತೆಯಾಗಿರಿಸಿಕೊಂಡಿದ್ದರು ಈ ವೇಳೆ ಬಾಂಗ್ಲಾದೇಶ ಒತ್ತೆಯಾಳುಗಳ ಜೊತೆ ಅಲ್ಲಿಂದ ವಾಪಸ್ ಹರ್ಜಿತ್ ಮಾಸಿಹ್ ಬಂದಿದ್ದರು ಎಂದು ಸುಷ್ಮಾ ಸ್ವರಾಜ್ ಸದನಕ್ಕೆ ಸ್ಪಷ್ಟಪಡಿಸಿದರು.

    ಅಪಹರಣ ಮಾಡಿ ಹತ್ಯೆ ಮಾಡಲಾಗಿರುವ 39 ಮಂದಿ ಭಾರತೀಯರು ಟರ್ಕಿ ಮೂಲಕ ನಿರ್ಮಾಣ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು. 2014ರಲ್ಲಿ ಐಸಿಸ್ ನಿಂದ ಅಪಹರಣಕ್ಕೆ ಒಳಗಾದ ಸಂದರ್ಭದಲ್ಲಿ ಮೊಸೂಲ್ ನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಮಾಡುತ್ತಿದ್ದರು. ಅಪಹರಣಕ್ಕೆ ಒಳಗಾದ ಭಾರತೀಯರ ಪೈಕಿ ಪಂಜಾಬ್ ರಾಜ್ಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದರು.

    ಮೃತ ದೇಹ ಪತ್ತೆ ಮಾಡಿದ್ದು ಹೇಗೆ?
    ಮೃತ ದೇಹಗಳ ಪತ್ತೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಲಾಗಿದ್ದು, ಅಳವಾದ ರಡಾರ್ ಬಳಕೆ ಮಾಡಿ ಸಾಮೂಹಿಕವಾಗಿ ಸಮಾಧಿ ಮಾಡಿದ್ದ ದೇಹಗಳನ್ನು ಪತ್ತೆ ಮಾಡಲಾಗಿತ್ತು. ಬಳಿಕ ಮೃತ ದೇಹದ ಬಳಿ ಪತ್ತೆಯಾದ ಗುರುತಿನ ಚೀಟಿ, ಇರಾನಿ ದೇಶಕ್ಕೆ ಸಂಬಂಧಿಸದ ಶೂ, ಸಿಖ್ ಪೇಟಾ ಹಾಗೂ ಮೃತ ದೇಹಗಳ ಅವಶೇಷಗಳಲ್ಲಿ ದೊರೆತ ಉದ್ದ ಕೂದಲುಗಳನ್ನು ಸಂಗ್ರಹಿಸಲಾಯಿತು.

    ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ಭಾರತದಿಂದ ಕಾಣೆಯಾಗಿದ್ದ ವ್ಯಕ್ತಿಗಳ ಕುಟುಂಬ ಸದಸ್ಯರ ಡಿಎನ್‍ಎ ಸ್ಯಾಪಲ್ ಗಳನ್ನು ವಿದೇಶಾಂಗ ಇಲಾಖೆ ಇರಾಕ್ ಗೆ ಕಳುಹಿಸಿ ಕೊಡಲಾಗಿತ್ತು. ಬಾಗ್ದಾದ್ ನಲ್ಲಿ 39 ಮೃತ ದೇಹಗಳ ಡಿಎನ್‍ಎ ಪರೀಕ್ಷೆ ನಡೆಸಿ ಅವುಗಳನ್ನು ಕಾಣೆಯಾಗಿದ್ದ ಭಾರತೀಯ ಮಂದಿಯದ್ದೇ ಎಂದು ದೃಢಿಕರಿಸಲಾಯಿತು.

    ಈ ಕುರಿತು ಪ್ರತಿಕ್ರಿಯೇ ನೀಡಿರುವ ವಿಕೆ ಸಿಂಗ್ ಅವರು, ಕಾಣೆಯಾಗಿದ್ದ ಕುಟುಂಬ ಸದಸ್ಯರ ಡಿಎನ್‍ಎ ಸಂಗ್ರಹಿಸಿ ಅವುಗಳನ್ನು ಮೃತದೇಹಗಳ ಅವಶೇಷಗಳಿಗೆ ಹೋಲಿಕೆ ಮಾಡುವುದು ಬಹುದೊಡ್ಡ ಕಾರ್ಯವಾಗಿತ್ತು ಎಂದು ಹೇಳಿದ್ದಾರೆ.

  • ಆಫ್ರಿಕಾದಲ್ಲಿ ಅಪಹರಣಗೊಂಡಿದ್ದ ಹಡಗಿನಲ್ಲಿದ್ದ 22 ಭಾರತೀಯರ ರಕ್ಷಣೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು

    ಆಫ್ರಿಕಾದಲ್ಲಿ ಅಪಹರಣಗೊಂಡಿದ್ದ ಹಡಗಿನಲ್ಲಿದ್ದ 22 ಭಾರತೀಯರ ರಕ್ಷಣೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು

    ನವದೆಹಲಿ: ಆಫ್ರಿಕಾ ಬೆನಿನ್ ಕರಾವಳಿಯಿಂದ ಅಪಹರಣಗೊಂಡಿದ್ದ ಇಂಧನ ಹಡಗಿನಲ್ಲಿದ್ದ 22 ಭಾರತೀಯರನ್ನು ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.

    ಫೆಬ್ರವರಿ 1 ರಂದು ಪಶ್ಚಿಮ ಆಫ್ರಿಕಾ ಕರಾವಳಿಯಿಂದ ಹಡಗು ನಾಪತ್ತೆಯಾಗಿತ್ತು. ಈ ಕುರಿತು ಟ್ವೀಟ್ ಮಾಡಿರುವ ಸುಷ್ಮಾ ಸ್ವರಾಜ್ ಅವರು, ನನಗೆ ತುಂಬಾ ಸಂತೋಷವಾಗುತ್ತಿದೆ. 22 ಭಾರತೀಯ ಪ್ರಜೆಗಳಿದ್ದ ಹಡಗನ್ನು ಅಪಹರಣಕಾರರು ಬಿಡುಗಡೆ ಮಾಡಿದ್ದಾರೆ. ಈ ಕಾರ್ಯಕ್ಕೆ ಸಹಕಾರ ನೀಡಿದ ನೈಜೀರಿಯಾ ಹಾಗೂ ಬಿನಿನ್ ಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.

    ಈ ಹಿಂದೆ ಘಟನೆ ಕುರಿತು ಮಾಹಿತಿ ನೀಡಿದ್ದ ಅವರು, ತಾನು ನೈಜೀರಿಯಾ ವಿದೇಶಾಂಗ ಇಲಾಖೆಯೊಂದಿಗೆ ಸಂಪರ್ಕ ಮಾಡಿದ್ದು, ಅವರು ಸಹಕಾರ ನೀಡುವುದಾಗಿ ತಿಳಿಸಿದ್ದರು ಎಂದು ಹೇಳಿದ್ದರು.

    13,500 ಟನ್ ಗ್ಯಾಸೋಲಿನ್ ಹೊಂದಿದ್ದ ಹಡಗನ್ನು ಹೈಜಾಕ್ ಮಾಡಲಾಗಿತ್ತು. ಇದಕ್ಕೂ ಮುನ್ನ ಹಡಗಿನ ಎಲ್ಲಾ ಸಂವಹನ ವ್ಯವಸ್ಥೆಗಳನ್ನು ಕಡಿತಗೊಳಿಸಿದ್ದರು. ಹಡಗನ್ನು ಗಲ್ಫ್ ನ ಬೆನಿನ್ ಗಿನಿಯ ಪ್ರದೇಶದಲ್ಲಿ ನಿಲ್ಲಿಸಿದ್ದರು ಎಂದು ತಿಳಿದುಬಂದಿದೆ.

    ಇಂಧನ ಹಡಗು ಮುಂಬೈ ಮೂಲದ ಆಂಗ್ಲೋ ಇಸ್ಟ್ರನ್ ಕಂಪನಿ ಮಾಲೀಕತ್ವ ಹೊಂದಿತ್ತು. ಈ ಮೊದಲು ನೌಕೆಯ ಕಾಣೆಯಾಗಿರುವ ಕುರಿತು ಅನುಮಾನ ವ್ಯಕ್ತವಾಗಿತ್ತು. ಆದರೆ ಅನಂತರದಲ್ಲಿ ಅಪಹರಣವಾಗಿರುವುದು ದೃಢಪಟ್ಟಿತ್ತು. ಶೋಧಕಾರ್ಯಕ್ಕೆ ಸಹಾಯ ಮಾಡುವಂತೆ ಹಡಗು ಮಾಲೀಕರು ಮುಂಬೈನ ನೌಕ ಮಹಾನಿರ್ದೇಶನಾಲಯಕ್ಕೆ ಮನವಿ ಮಾಡಿದ್ದರು. ಭಾರತೀಯ ವಿದೇಶಾಂಗ ಇಲಾಖೆ ನೈಜೀರಿಯಾ ದೇಶದ ಸಹಾಯ ಪಡೆದು ಪತ್ತೆ ಕಾರ್ಯಾಚರಣೆ ನಡೆಸಿತ್ತು.