Tag: Foreign Investment

  • ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ ಅನುಮೋದನೆ ಸಾಧ್ಯತೆ

    ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ 49% ವಿದೇಶಿ ನೇರ ಹೂಡಿಕೆಗೆ (FDI) ಭಾರತ ಸರ್ಕಾರ ಅನುಮೋದನೆ ನೀಡುವ ಸಾಧ್ಯತೆ ಇದೆ.

    ಕಳೆದ ಎರಡು ತಿಂಗಳಿಂದ ಹಣಕಾಸು ಸಚಿವಾಲಯವು ದೇಶದ ಬ್ಯಾಂಕಿಂಗ್ ವಲಯದ ನಿಯಂತ್ರಕ ಸಂಸ್ಥೆಯಾದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜೊತೆ ಈ ವಿಷಯದ ಬಗ್ಗೆ ಚರ್ಚಿಸುತ್ತಿದೆ. ಈ ಪ್ರಸ್ತಾವನೆಯನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ಪ್ರಸ್ತುತ ಶೇ.20 ಎಫ್‌ಡಿಐ ಮಿತಿ ಹೇರಿದೆ. ಹೊಸ ಕ್ರಮವು ಸಾರ್ವಜನಿಕ ವಲಯ ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ನಿಯಮಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿದೆ. ಖಾಸಗಿ ವಲಯದ ಬ್ಯಾಂಕ್‌ಗಳಿಗೆ ಪ್ರಸ್ತುತ ಎಫ್‌ಡಿಐ ಮಿತಿ ಶೇ.74 ರಷ್ಟಿದೆ. ಈ ಬಗ್ಗೆ ಆರ್‌ಬಿಐ ಜೊತೆಗೆ ಹಣಕಾಸು ಸಚಿವಾಲಯ ಚರ್ಚಿಸುತ್ತಿದೆ.

    ಭಾರತದ ಸಾರ್ವಜನಿಕ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಲು ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ. ಶೀಘ್ರದಲ್ಲೇ ಹೂಡಿಕೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.

    ದುಬೈ ಮೂಲದ ಎಮಿರೇಟ್ಸ್ ಎನ್‌ಬಿಡಿ ಇತ್ತೀಚೆಗೆ ಆರ್‌ಬಿಎಲ್ ಬ್ಯಾಂಕಿನಲ್ಲಿ 60% ಪಾಲನ್ನು 3 ಬಿಲಿಯನ್‌ ಡಾಲರ್‌ಗೆ ಖರೀದಿಸಿದೆ. ಸುಮಿಟೊಮೊ ಮಿಟ್ಸುಯಿ ಬ್ಯಾಂಕಿಂಗ್ ಕಾರ್ಪ್ ಯೆಸ್ ಬ್ಯಾಂಕಿನಲ್ಲಿ 20% ಪಾಲನ್ನು 1.6 ಬಿಲಿಯನ್‌ ಡಾಲರ್‌ಗೆ ಸ್ವಾಧೀನಪಡಿಸಿಕೊಂಡಿದ್ದು, ಜಪಾನಿನ ಸಾಲದಾತ ನಂತರ ಇದನ್ನು ಮತ್ತೊಂದು 4.99% ಹೆಚ್ಚಿಸಿದ್ದರಿಂದ ಭಾರತದ ಬ್ಯಾಂಕಿಂಗ್ ಉದ್ಯಮದಲ್ಲಿ ವಿದೇಶಿ ಆಸಕ್ತಿ ಹೆಚ್ಚುತ್ತಿದೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ವಿದೇಶಿ ಹೂಡಿಕೆದಾರರಿಂದ ಆಸಕ್ತಿಯನ್ನು ನಿರೀಕ್ಷಿಸುತ್ತಿವೆ. ವಿದೇಶಿ ಮಾಲೀಕತ್ವದ ಮಿತಿಯನ್ನು ಹೆಚ್ಚಿಸುವುದರಿಂದ ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಬಂಡವಾಳವನ್ನು ಪಡೆಯಲು ಸಹಾಯವಾಗುತ್ತದೆ.

  • ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು: ಬೊಮ್ಮಾಯಿ

    ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು: ಬೊಮ್ಮಾಯಿ

    ಹುಬ್ಬಳ್ಳಿ: ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು. ಈ ಮೂಲಕ ರಾಜ್ಯವನ್ನು ಅಭಿವೃದ್ಧಿಯಲ್ಲಿ ಮುಂದೆ ಬರುವಂತೆ ಮಾಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

    ಗೋಕುಲ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿನ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಮತ್ತು ರಿಸರ್ಚ್ ಸೆಂಟರ್ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದಲ್ಲಿ ಸ್ವಯಂ ಶಿಸ್ತು ತರುವ ಈ ಸಂಸ್ಥೆಗೆ ಎನ್‍ಎಬಿಎಲ್ ಮಾನ್ಯತೆ ದೊರೆತಿರುವುದು ಸಂತಸ ತಂದಿದೆ ಎಂದರು. ಇದನ್ನೂ ಓದಿ: ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ

    ಹುಬ್ಬಳ್ಳಿಯ ಕೆಎಂಟಿಆರ್‍ಸಿ ಅತ್ಯಾಧುನಿಕ ಉಪಕರಣಗಳ ಪೂರೈಕೆಗಾಗಿ 4 ಕೋಟಿ ರೂಪಾಯಿ ಕೋರಿ ಸಂಸ್ಥೆ ಪ್ರಸ್ತಾವನೆ ಸಲ್ಲಿಸಿದೆ. ಅದಕ್ಕೆ ಸರ್ಕಾರ ಹಣಕಾಸು ನೆರವು ನೀಡಲಿದೆ. ಹುಬ್ಬಳ್ಳಿ, ಧಾರವಾಡದಲ್ಲಿ ಎಫ್‍ಎಂಜಿಸಿ ಕ್ಲಸ್ಟರ್ ಸ್ಥಾಪನೆ ಮೂಲಕ ಒಂದು ಲಕ್ಷ ಉದ್ಯೋಗ ಸೃಜನೆಯಾಗಲಿವೆ. ಉತ್ತರ ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಇದು ಮಹತ್ವದ ಪಾತ್ರ ವಹಿಸಲಿದೆ ಎಂದು ತಿಳಿಸಿದರು.

    ಧಾರವಾಡ ಮತ್ತು ತುಮಕೂರು ವಿಶೇಷ ಹೂಡಿಕೆ ಪ್ರದೇಶಗಳ ಸ್ಥಾಪನೆಗೆ ಶಾಸನಗಳ ತಿದ್ದುಪಡಿ ಅಗತ್ಯವಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಈ ತಿದ್ದುಪಡಿಗಳನ್ನು ತರಲಾಗುವುದು. ಬರುವ ನವೆಂಬರ್ 2 ಹಾಗೂ 3 ರಂದು ಬೆಂಗಳೂರಿನಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನದಲ್ಲಿ ಸ್ಥಳೀಯ ಕನ್ನಡಿಗ ಉದ್ದಿಮೆದಾರರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬೇಕು ಎಂದು ವಿನಂತಿ ಮಾಡಿಕೊಂಡರು. ಇದನ್ನೂ ಓದಿ: ಖಶೋಗಿ ಹತ್ಯೆಗೆ ಸೌದಿ ಕ್ರೌನ್ ಪ್ರಿನ್ಸ್ ಹೊಣೆಗಾರಿಕೆ: ಬೈಡನ್ 

    ವಿದೇಶಿ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದೆ. ಉದ್ಯಮದ ಎಲ್ಲ ರಂಗಗಳಲ್ಲಿ ಕನ್ನಡಿಗರು ಅಗ್ರಸ್ಥಾನದಲ್ಲಿ ಇರಬೇಕು ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ದಾವೋಸ್ ಆರ್ಥಿಕ ಶೃಂಗಸಭೆ- ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವೇ ಫೇವರೇಟ್

    ದಾವೋಸ್ ಆರ್ಥಿಕ ಶೃಂಗಸಭೆ- ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕವೇ ಫೇವರೇಟ್

    ದಾವೊಸ್ (ಸ್ವಿಟ್ಜರ್ಲೆಂಡ್): ವರ್ಲ್ಡ್ ಎಕನಾಮಿಕ್ ಫೋರಂ ಸಮಾವೇಶದ ಮೂರನೇ ದಿನವಾದ ಇಂದು ಕರ್ನಾಟಕದ ಪಾಲಿಗೆ ಫಲಪ್ರದವಾಗಿ ಪರಿಣಮಿಸಿತು. ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಅವರು ಪ್ರತಿಷ್ಠಿತ ಹೂಡಿಕೆದಾರರು ಹಾಗೂ ಕೈಗಾರಿಕೋದ್ಯಮಿಗಳನ್ನು ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದರು. ಇದರಲ್ಲಿ ದಸ್ಸಾ ಸಿಸ್ಟಮ್ಸ್, ಅರ್ಸೆಲಾರ್ ಮಿತ್ತಲ್, ಭಾರತ್ ಫೋರ್ಜ್, ಲಾಕ್ ಹೀಡ್ ಮಾರ್ಟಿನ್, ಲುಲು ಗ್ರೂಪ್ ಮತ್ತು ನೊವೊ ನಾರ್ಡಿಸ್ಕ್ ಮೊದಲಾದ ಕಂಪೆನಿಗಳು ಸೇರಿದ್ದವು.

    ತಮ್ಮನ್ನು ಭೇಟಿಯಾದ ಹೂಡಿಕೆದಾರರೊಂದಿಗೆ ಮಾತುಕತೆ ನಡೆಸಿದ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ಹೂಡಿಕೆದಾರರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡಲಿದೆ. ಜೊತೆಗೆ ಎಲ್ಲ ರೀತಿಯ ಅಡಚಣೆಗಳನ್ನು ನಿವಾರಿಸಲಿದೆ ಎಂದು ಸ್ಪಷ್ಟ ಪಡಿಸಿದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಹೆಚ್ಚಿನ ಆಸಕ್ತಿ ವಹಿಸಿ ಹೂಡಿಕೆಗೆ ಸೂಕ್ತ ನೆರವು ಒದಗಿಸಲಿದ್ದಾರೆ ಎಂದು ತಿಳಿಸಿದರು.

    ಈಗಾಗಲೇ ಬೆಂಗಳೂರಿನಲ್ಲಿ ಅಸ್ತಿತ್ವ ಹೊಂದಿರುವ ದಸ್ಸಾ ಸಿಸ್ಟಮ್ಸ್ 3ಡಿಎಸ್ ಅವರಿಂದ ಹೂಡಿಕೆಯ ಕುರಿತು ಅತ್ಯಂತ ಭರವಸೆಯ ಪ್ರತಿಕ್ರಿಯೆ ವ್ಯಕ್ತವಾಯಿತು. ಕಂಪೆನಿಯ ಉಪಾಧ್ಯಕ್ಷ ಫ್ಲಾರೆನ್ಸ್ ವರ್ಝೆಲೆನ್ ಅವರು ಬೆಂಗಳೂರು ಹಾಗೂ ಯಾವುದಾದರೂ ಜಿಲ್ಲೆಯಲ್ಲಿ ಎರಡು ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ವಹಿಸುವುದಾಗಿ ತಿಳಿಸಿದರು. `ನಾವು ಪ್ರತಿ ಕೇಂದ್ರದಲ್ಲಿ ಪ್ರತಿ ವರ್ಷ ತಲಾ 2,000 ಯುವಕರಿಗೆ ತರಬೇತಿ ನೀಡಿ, ದೊಡ್ಡ ಕಂಪೆನಿಗಳಲ್ಲಿ ಕೌಶಲ್ಯಪೂರ್ಣ ಉದ್ಯೋಗ ಪಡೆಯಲು ಅರ್ಹರನ್ನಾಗಿಸಲಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆಗಳಲ್ಲಿ ಯುವಕರಿಗೆ ತರಬೇತಿ ನೀಡಲು ತಾವು ಆಸಕ್ತರಾಗಿದ್ದೇವೆ’ ತಿಳಿಸಿದರು.

    ಎಂಜಿನಿಯರಿಂಗ್ ಪದವೀಧರರಿಗೂ ತರಬೇತಿ ನೀಡಲಾಗುವುದು ಎಂದು ತಿಳಿಸಿದ ಫ್ಲಾರೆನ್ಸ್ ವರ್ಝೆಲೆನ್ ಅವರು, ಈ ಕೇಂದ್ರಗಳ ಸ್ಥಾಪನೆಗೆ ಒಂದು ದಶಲಕ್ಷ ಯುರೋ ಹೂಡಿಕೆ ಮಾಡಲಾಗುವುದು ಎಂದರು. ಬೆಂಗಳೂರು ರಕ್ಷಣಾ ಉಪಕರಣಗಳು ಹಾಗೂ ಎರೋಸ್ಪೇಸ್ ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈ ವಲಯಗಳಲ್ಲಿ ತರಬೇತಿ ಹೊಂದಿದ ಯುವಕರಿಗೆ ಬೇಡಿಕೆ ಇರುವ ಕುರಿತು ಸಿಎಂ ಗಮನ ಸೆಳೆದಾಗ ವರ್ಝೇಲೆನ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಮುಂದಿನ ದಿನಗಳಲ್ಲಿ ಅಂತಹ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

    ಉಕ್ಕಿನ ಕೈಗಾರಿಕೆಗಳ ಪ್ರಮುಖ ಉದ್ಯಮಿ ಲಕ್ಷ್ಮಿ ಎನ್.ಮಿತ್ತಲ್ ಮಂಗಳವಾರ ರಾತ್ರಿ ನಡೆದ ಸಿಐಐ ಭೋಜನ ಕೂಟದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಇಂದು ಬೆಳಗ್ಗೆಯೂ ಕರ್ನಾಟಕ ಪೆವಿಲಿಯನ್‍ಗೆ ಆಗಮಿಸಿ, ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಚರ್ಚೆ ನಡೆಸಿದರು. ಅವರ ಕಂಪೆನಿಯು ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 3,000 ಎಕರೆ ಭೂಮಿ ಹೊಂದಿದೆ.

    `2010ರಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ ಉಕ್ಕು ತಯಾರಿಕಾ ಘಟಕ ಸ್ಥಾಪನೆಗೆ ಅನುಮತಿ ನೀಡಿದ್ದು, ಕಾರಣಾಂತರಗಳಿಂದ ಇದಕ್ಕೆ ಅಡಚಣೆಗಳು ಉಂಟಾಗಿವೆ. ಈಗ ತಾವು ಎಲ್ಲ ಅಡ್ಡಿ ಆತಂಕಗಳನ್ನು ನಿವಾರಿಸಿ ಎಂದು ಲಕ್ಷ್ಮಿ ಎನ್.ಮಿತ್ತಲ್ ಮನವಿ ಮಾಡಿದರು. ಕರ್ನಾಟಕದಲ್ಲಿ ಸೌರ ವಿದ್ಯುತ್ ಸ್ಥಾವರದಲ್ಲಿ ಹೂಡಿಕೆ ಮಾಡುವುದಾಗಿ ಮಿತ್ತಲ್ ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಉಕ್ಕು ತಯಾರಿಕಾ ಘಟಕ ಹಾಗೂ ಸೌರ ವಿದ್ಯುತ್ ಸ್ಥಾವರಗಳೆರಡರ ಯೋಜನೆಯನ್ನೂ ಕೂಡಲೇ ಪ್ರಾರಂಭಿಸುವಂತೆ ಸಲಹೆ ನೀಡಿದರು. ಅದಕ್ಕೆ ಮಿತ್ತಲ್ ಅವರು ಈ ಕೂಡಲೇ ಉಕ್ಕಿನ ಉಪಯೋಗದ ಕುರಿತ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸುವುದಾಗಿ ಭರವಸೆ ನೀಡಿದರು.

    ಲುಲು ಗ್ರೂಪ್ ಅಧ್ಯಕ್ಷ ಯೂಸುಫ್ ಅಲಿ ಅವರು ಕರ್ನಾಟಕದಲ್ಲಿ ಸರಕು ಸಾಗಾಣಿಕೆ ವಲಯದಲ್ಲಿ 2000 ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದರು. ಈ ಸಂಸ್ಥೆಯು ವಿಶೇಷವಾಗಿ ಕೃಷಿ ಉತ್ಪನ್ನ ಹಾಗೂ ಶೀಘ್ರ ಕೊಳೆತುಹೋಗುವ ತರಕಾರಿ, ಆಹಾರ ವಸ್ತುಗಳು, ಹಣ್ಣು ಹಂಪಲು ಹಾಗೂ ಪುಷ್ಪಗಳ ಸಾಗಾಣಿಕೆಗೇ ಹೂಡಿಕೆ ಮಾಡಲಿದೆ.

    ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೂ ಸಹ ಸಭೆಗಳಲ್ಲಿ ಭಾಗವಹಿಸಿದ್ದರು.

  • ಕರ್ನಾಟಕದಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿರುವ ವಿದೇಶಿ ಕಂಪನಿಗಳು

    ಕರ್ನಾಟಕದಲ್ಲಿ ಬಂಡವಾಳ ಹೂಡಲು ಉತ್ಸುಕರಾಗಿರುವ ವಿದೇಶಿ ಕಂಪನಿಗಳು

    ದಾವೋಸ್ : ಜಾಗತಿಕ ಭದ್ರತೆ ಮತ್ತು ಏರೋಸ್ಪೇಸ್ ಸಂಸ್ಥೆಯಾದ ಲಾಕ್‍ಹೀಡ್ ಮಾರ್ಟಿನ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ರಿಚರ್ಡ್ ಅಂಬ್ರೋಸ್ ಅವರು ಕರ್ನಾಟಕ ಪೆವಿಲಿಯನ್‍ಗೆ ಭೇಟಿ ನೀಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದರು. ಶೀಘ್ರದಲ್ಲೇ ಬೆಂಗಳೂರಿಗೆ ಭೇಟಿ ನೀಡಿ ಕರ್ನಾಟಕದಲ್ಲಿ ಹೂಡಿಕೆಯ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ರಿಚರ್ಡ್ ಅಂಬ್ರೋಸ್ ತಿಳಿಸಿದರು.

    ಕರ್ನಾಟಕದಲ್ಲಿ ಏರೋಸ್ಪೇಸ್ ಮತ್ತು ಜಾಗತಿಕ ಭದ್ರತಾ ವ್ಯವಸ್ಥೆಯ ಕುರಿತು ವಿವರಿಸಿದ ಮುಖ್ಯಮಂತ್ರಿಗಳು, ಫಾರ್ಚೂನ್ 500 ಕಂಪನಿಗಳ ಪೈಕಿ 400 ಕಂಪನಿಗಳು ಕರ್ನಾಟಕದಲ್ಲಿ ಈಗಾಗಲೇ ಅಸ್ತಿತ್ವದಲ್ಲಿದ್ದು, ಕರ್ನಾಟಕದಲ್ಲಿ ಲಾಕ್‍ಹೀಡ್ ಮಾರ್ಟಿನ್ ಕಂಪನಿ ಹೂಡಿಕೆ ಮಾಡಲು ಸೂಕ್ತ ವಾತಾವರಣ ಇರುವುದಾಗಿ ತಿಳಿಸಿದರು.

    ಏರೋಸ್ಪೇಸ್ ಕೈಗಾರಿಕೆಗಳು ಮತ್ತು ಮಲ್ಟಿಕೋರ್ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಅತ್ಯುತ್ತಮ ಪರಿಸರವನ್ನು ಕರ್ನಾಟಕ ಹೊಂದಿದೆ. ರಾಜ್ಯದಲ್ಲಿ ಹೂಡಿಕೆ ಮಾಡುವ ಮೂಲಕ ಲಾಕ್‍ಹೀಡ್ ಮಾರ್ಟಿನ್ ಕಂಪನಿ ರಾಜ್ಯದಲ್ಲಿನ ಕೈಗಾರಿಕಾ ಸಾಮರ್ಥ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ತಿಳಿಸಿದರು.

    ಜಾಗತಿಕ ಆಟೋಮೇಟಿವ್ ಭಾಗಗಳ ತಯಾರಕ ಕಂಪನಿ ಡೆನ್ಸೊ, ಕರ್ನಾಟಕದ ನಿಯೋಗದೊಂದಿಗೆ ಚರ್ಚಿಸಿತು. ದೆಹಲಿಯಲ್ಲಿ ತಮ್ಮ ಕಂಪನಿಯು ಶ್ರೇಷ್ಠತಾ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಿದ್ದು, ಶೀಘ್ರದಲ್ಲಿಯೇ ಬೆಂಗಳೂರಿಗೆ ಭೇಟಿ ನೀಡಿ ದಕ್ಷಿಣ ಭಾರತದಲ್ಲಿ ತಮ್ಮ ಸಂಸ್ಥೆಯನ್ನು ವಿಸ್ತರಿಸುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸಂಸ್ಥೆಯ ಉಪಾಧ್ಯಕ್ಷ ಹಿರೋಯುಕಿ ವಕಬಾಸ್ಯಿ ತಿಳಿಸಿದರು. ಡೆನ್ಸೊ ಸಂಸ್ಥೆಯು ಕಿರ್ಲೋಸ್ಕರ್ ಸಹಯೋಗದೊಂದಿಗೆ ನೆಲಮಂಗಲದಲ್ಲಿ 429 ನೌಕರರುಳ್ಳ ಘಟಕವನ್ನು ಹೊಂದಿದೆ.

    ಮಧುಮೇಹಿಗಳಿಗೆ ಸಿಹಿ ಸುದ್ದಿ : ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸುಲಭ ದರದಲ್ಲಿ ಆರೋಗ್ಯ ಇಲಾಖೆಯ ಮುಖಾಂತರ ಔಷಧಿಯನ್ನು ಸರಬರಾಜು ಮಾಡಲು ಡ್ಯಾನಿಷ್‍ನ ಪ್ರಸಿದ್ಧ ಔಷಧ ತಯಾರಿಕಾ ಕಂಪನಿಯಾದ ನೋವೋ ನಾರ್ಡಿಸ್ಕ್ ಮುಂದಾಗಿದೆ.

    ಕರ್ನಾಟಕ ಸರ್ಕಾರದೊಂದಿಗೆ ಕೈಜೋಡಿಸುವ ಆಸಕ್ತಿ ವ್ಯಕ್ತಪಡಿಸಿದ ನೋವೋ ನಾರ್ಡಿಸ್ಕ್ ಅಧ್ಯಕ್ಷ ಮತ್ತು ಸಿಇಒ ಫ್ರುಯರ್ ಗಾರ್ಡ್ ಜಾರ್ಜೆನ್ಸನ್ ಮಧುಮೇಹದ ವಿವಿಧ ಹಂತಗಳಲ್ಲಿರುವ ರೋಗಿಗಳಿಗೆ ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿರುವುದಾಗಿ ತಿಳಿಸಿದರು. ಸುಲಭ ದರದಲ್ಲಿ ಔಷಧಗಳನ್ನು ಸರಬರಾಜು ಮಾಡುವುದಲ್ಲದೆ, ಕಾಯಿಲೆಯನ್ನು ನಿಭಾಯಿಸಲು ಹಾಗೂ ಅದನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಸರ್ಕಾರದೊಂದಿಗೆ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

    ಮಧುಮೇಹ ಕಾಯಿಲೆಯನ್ನು ನಿಯಂತ್ರಿಸಲು ಕಂಪನಿಯ ಸಹಕಾರವನ್ನು ಪಡೆಯಲು ಸಿದ್ಧವಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರು ಮಾತನಾಡಿ, ಔಷಧಗಳನ್ನು ಕೊಳ್ಳಲು ಅಶಕ್ತರಾಗಿರುವ ಬಡ ಮಧುಮೇಹಿ ರೋಗಿಗಳಿಗೆ ಸಹಾಯ ಮಾಡಲು ಸಂಸ್ಥೆಯ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದೆಂದು ತಿಳಿಸಿದರು.