Tag: foremr cm

  • ಸಿದ್ದರಾಮಯ್ಯರ ಸಂಧಾನಕ್ಕೆ ಬಾಗ್ತಾರಾ ಜಾರಕಿಹೊಳಿ ಬ್ರದರ್ಸ್?

    ಸಿದ್ದರಾಮಯ್ಯರ ಸಂಧಾನಕ್ಕೆ ಬಾಗ್ತಾರಾ ಜಾರಕಿಹೊಳಿ ಬ್ರದರ್ಸ್?

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡುವ ಸಾಧ್ಯತೆಗಳಿವೆ. ಭಾನುವಾರವಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ಸಿದ್ದರಾಮಯ್ಯ ಅವರ ಇಂದಿನ ಸಂಧಾನ ಸಕ್ಸಸ್ ಆಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.

    ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಟಾಸ್ಕ್ ಅನ್ನು ಸಿದ್ದರಾಮಯ್ಯ ಸಮರ್ಥವಾಗಿ ನಿಭಾಯಿಸ್ತಾರಾ ಅನ್ನುವ ಪ್ರಶ್ನೆಯೊಂದು ಮೂಡಿದೆ. ಹೀಗಾಗಿ ಇಂದಿನ ಮೆಗಾ ಪೊಲಿಟಿಕಲ್ ಟರ್ನ್ ಸಿದ್ದರಾಮಯ್ಯ ಮೇಲೆ ನಿಂತಿದೆ. ಕಾಂಗ್ರೆಸ್ ಹೈಕಮಾಂಡ್ ಶಾಸಕರನ್ನು ಸಮಾಧಾನಪಡಿಸುವ ಹೊಣೆ ಸಿದ್ದರಾಮಯ್ಯಗೆ ಕೊಟ್ಟಿದೆ. ಆದ್ರೆ ಎಲ್ಲ ಅಸಮಾಧಾನಿತ ಶಾಸಕರು ಸಿದ್ದರಾಮಯ್ಯ ಮಾತು ಕೇಳ್ತಾರಾ? ಅಥವಾ ಸಿದ್ದು ಮಾತು ಕೇಳದೇ ಕಮಲ ಮನೆಯ ಬಾಗಿಲು ತಟ್ಟುತ್ತಾರಾ ಅನ್ನುವ ಹಲವು ಪ್ರಶ್ನೆಗಳಿಗೆ ಇಂದು ಉತ್ತರ ಸಿಗಲಿದೆ. ಇದನ್ನೂ ಓದಿ: ಕೈ ನಾಯಕರ ಜೊತೆ ವೇಣುಗೋಪಾಲ್ ಸಭೆಯಲ್ಲಿ ಏನಾಯ್ತು: ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಸಿದ್ದರಾಮಯ್ಯ ಸಂಧಾನ ವಿಫಲವಾದ್ರೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ಹೆಚ್ಚಾಗಿರುವ ಕುರಿತು ಚರ್ಚೆಗಳು ನಡೆಯುತ್ತಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ವಾತಂತ್ರ್ಯ ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ- ಮಾಜಿ ಸಿಎಂ

    ಸ್ವಾತಂತ್ರ್ಯ ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲ- ಮಾಜಿ ಸಿಎಂ

    ಬೆಂಗಳೂರು: ಇಂದು ನಾಡಿನಾದ್ಯಂತ 72ನೇ ವರ್ಷದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಆದ್ರೆ ಈ ಸ್ವಾತಂತ್ರ್ಯ ಕೇವಲ ರಾಜಕೀಯ ರಂಗಕ್ಕೆ ಮಾತ್ರ ಸೀಮಿತವಲ್ಲ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ವಾತ್ರಂತ್ಯ ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುದಲ್ಲ. ಅದರ ಜತೆ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಕೂಡಾ ಸಾಕ್ಷಾತ್ಕಾರಗೊಳ್ಳಬೇಕು. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಆಶಿಸಿದ್ದು. ಇದು ನಮ್ಮೆಲ್ಲರ ಆಶಯವಾಗಬೇಕು. ದೇಶಬಾಂಧವರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಅಂತ ಹೇಳಿದ್ದಾರೆ.

    ಬಿಬಿಎಂಪಿ ವತಿಯಿಂದ 72 ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗಿದ್ದು, ಬಿಬಿಎಂಪಿ ಕೇಂದ್ರ ಕಚೇರಿ ಮುಂಭಾಗ ಧ್ವಜಾರೋಹಣ ಮಾಡಿ ಆವರಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮೇಯರ್ ಸಂಪತ್ ರಾಜ್, ಆಯುಕ್ತ ಮಂಜುನಾಥ್ ಪ್ರಸಾದ್ ಭಾಗಿಯಾಗಿದ್ದರು. ರಾಜ್ಯ, ದೇಶದ ಜನತೆಗೆ ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಶುಭ ಹಾರೈಸಿದ್ರು. ಹಲವು ಮಹನಿಯರ ಬಲಿತ್ಯಾಗದಿಂದ ದೇಶ ಸ್ವಾತಂತ್ರ್ಯವಾಗಿದೆ. ನಾಡಿನ ಜನ್ರು ಸುಖ, ಶಾಂತಿಯಿಂದ ಇರಲಿ ಅಂತ ಧ್ವಜಾರೋಹಣದ ಬಳಿಕ ಮೇಯರ್ ಹೇಳಿದ್ದಾರೆ.

    ಬೆಂಗಳೂರಿನ ವೈಯಲಿಕವಲ್ ಬಳಿಯಿರುವ ಗ್ರೌಂಡ್ ನಿಂದ ಯಲಹಂಕ ಗೆ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸುಮಾರು 400ಕು ಹೆಚ್ಚು ಬೈಕ್ ಗಳು ಭಾಗಿಯಾಗಿತ್ತು.


    ಆರ್‍ಟಿ ನಗರದ ಹೆಚ್‍ಎಂಟಿ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಸುರೇಶ್ ಧ್ವಜಾರೋಹಣ ಮಾಡಿದ್ರು. ಬಳಿಕ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಮಾಡಲಾಯಿತು. ಪರೇಡ್‍ನಲ್ಲಿ ಸರ್ಕಾರಿ, ಖಾಸಗಿ ಶಾಲೆಯ ಮಕ್ಕಳು ಭಾಗಿಯಾಗಿದ್ದರು. ಆರ್ ಟಿ ನಗರದ ಎಚ್ ಎಮ್ ಟಿ ಮೈದಾನದಲ್ಲಿ ಹೆಲಿಕಾಪ್ಟರ್ ಮೂಲಕ ಧ್ವಜಾರೋಹಣ ನಂತರ ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.

    ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿಯೂ ಕೂಡ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದ್ದು, ಆಸ್ಪತ್ರೆಯ ನಿರ್ದೇಶಕರಾದ ಡಾ ಶಿವಲಿಂಗಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ರು. ಬಳಿಕ ಆಸ್ಪತ್ರೆಯನ್ನು ಕ್ಲೀನ್ ಮಾಡೋ ಮೂಲಕ ವಿಕ್ಟೋರಿಯಾ ಸಿಬ್ಬಂದಿ ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ ಅಚರಣೆ ಮಾಡಿದ್ರು.

  • ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು!

    ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು!

    ಬೆಂಗಳೂರು: ತಮ್ಮ ಸ್ವ-ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋತಿದ್ರೂ ಸಿದ್ದರಾಮಯ್ಯ ಇದೀಗ ಮಾಸ್ಟರ್ ಪ್ಲಾನ್ ಮಾಡಿದ್ದಾರಂತೆ. ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಹಠ ಹಿಡಿದಿದ್ದಾರೆ.

    ಯಾವುದೇ ಕಾರಣಕ್ಕೂ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡಬಾರದು. ಬೇರೆ ಯಾವ ಕ್ಷೇತ್ರದಲ್ಲಾದರೂ ಮೈತ್ರಿ ಮಾಡಿಕೊಳ್ಳಿ. ಆದ್ರೆ ಮೈಸೂರನ್ನು ಮಾತ್ರ ಬಿಡಕ್ಕಾಗಲ್ಲ ಅಂತ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಅಂತ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಮೈಸೂರು ಲೋಕಸಭಾ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡಬೇಕು. ಸಮನ್ವಯ ಸಮಿತಿ ಮುಖ್ಯಸ್ಥ ಸಿದ್ದು ಪಟ್ಟು ಕೇಳಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ದೇವೇಗೌಡರಿಗೆ ಶಾಕ್ ಆಗಿದೆ ಎನ್ನಲಾಗಿದೆ.

    ಒಟ್ಟಿನಲ್ಲಿ ತವರು ಜಿಲ್ಲೆಯಲ್ಲಿ ತಮ್ಮ ಹಿಡಿತ ಬಿಗಿಗೊಳಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಂತ್ರ ಹೂಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.