Tag: forest

  • Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

    Forest Martyrs Day | ಹುತಾತ್ಮರಿಗೆ 50 ಲಕ್ಷ ರೂ. ಪರಿಹಾರ: ಈಶ್ವರ್ ಖಂಡ್ರೆ

    – ಕರ್ನಾಟಕವೂ ಡೇಂಜರ್ ಝೋನ್‌, ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಪರಿಹಾರ
    – ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1, ಹುಲಿಗಳ ಸಂಖ್ಯೆಯಲ್ಲಿ ಎರಡನೇ ಸ್ಥಾನ

    ಬೆಂಗಳೂರು: ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರಿಗೆ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.

    ಮಲ್ಲೇಶ್ವರಂನ ಅರಣ್ಯ ಭವನದಲ್ಲಿ ಹುತಾತ್ಮರ ದಿನಾಚರಣೆ (National Forest Martyrs Day) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 62 ಜನ ಹುತಾತ್ಮರಾಗಿದ್ದಾರೆ. ವೀರಪ್ಪನ್ ವಿರುದ್ಧ ಕಾರ್ಯಾಚರಣೆ, ಕಳ್ಳಬೇಟೆಗಾರರ ಹತ್ತಿಕ್ಕುವ ವೇಳೆ, ಕಾಡ್ಗಿಚ್ಚು ನಂದಿಸುವ ವೇಳೆ, ಮಾನವ – ಪ್ರಾಣಿಗಳ ಸಂಘರ್ಷದ ವೇಳೆ ಬಲಿಯಾದವರು ಇವರು. ಹುತಾತ್ಮರಾದವರಿಗೆ 50 ಲಕ್ಷ ಪರಿಹಾರ ನೀಡಲಿದ್ದೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಸಾಕಿದ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ – ಕರುಳು ಕಿತ್ತು ಹೋಗುವಂತಿದೆ ಈ ದೃಶ್ಯ

    ಈಗ ಹವಾಮಾನ ಬದಲಾವಣೆ ದೊಡ್ಡ ಮಟ್ಟದ ಸಮಸ್ಯೆಯಾಗುತ್ತಿದೆ. ಏಕಾಏಕಿ ಮೇಘಸ್ಫೋಟ, ಅತಿಯಾದ ಮಳೆ ಬರುತ್ತಿದೆ. ಮನುಕುಲವೇ ನಾಶವಾಗುವ ಪರಿಸ್ಥಿತಿ ಉಂಟಾಗುತ್ತಿದೆ. ಕರ್ನಾಟಕವೂ (Karnataka) ಕೂಡ ಡೇಂಜರ್ ಝೋನ್‌ನಲ್ಲಿದೆ. ಭೂ ಕುಸಿತ ಸಂಭವಿಸುತ್ತಿದೆ. ಅರಣ್ಯ ಸಂಪತ್ತನ್ನು ಉಳಿಸೋದು ಮಾತ್ರ ಇದಕ್ಕೆ ಪರಿಹಾರ. ರಾಜ್ಯದಲ್ಲಿ ಸಂಪತ್ತು ಭರಿತವಾದ ಅರಣ್ಯವಿದೆ. ಪಶ್ಚಿಮ ಘಟ್ಟದಲ್ಲಿ ವಿವಿಧ ಪ್ರಭೇದ ಜೀವ ವೈವಿಧ್ಯ ತಾಣಗಳು ಇದೆ. ಮಳೆ ಮಾರುತವನ್ನು ಬದಲಾವಣೆ ಮಾಡಿ, ಮಳೆಯನ್ನು ತರಿಸುವ ಶಕ್ತಿ ಪಶ್ಚಿಮ ಘಟ್ಟಗಳಿಗೆ ಇದೆ. 2 ಲಕ್ಷ ಎಕ್ರೆ ಭೂಮಿಯ ಒತ್ತುವರಿಯಾಗಿದೆ. ಮೂವತ್ತು- ನಲವತ್ತು ಸಾವಿರ ಎಕ್ರೆ ಭೂಮಿಯನ್ನು ಮರುವಶಪಡಿಸಿಕೊಂಡು ಸಂರಕ್ಷಿತ ತಾಣ ಅಂತಾ ಘೋಷಿಸಿದ್ದೇವೆ ಎಂದರು. ಇದನ್ನೂ ಓದಿ: ಇದು ಮ್ಯಾಚ್‌ ಅಷ್ಟೇ; ಭಾರತ-ಪಾಕ್‌ ಪಂದ್ಯ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಐದು ಹುಲಿಗಳು ಮೃತಪಟ್ಟಿದ್ದು ಬಹಳ ನೋವಾಗಿತ್ತು. ಸಿಎಂ ಕೂಡ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದರು. ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದೆ. ಆನೆಗಳ ಸಂಖ್ಯೆಯಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ, ಆದರೆ ಅರಣ್ಯ ಭೂಮಿ ಕಡಿಮೆ ಇದೆ. ಹೀಗಾಗಿ ಇದರೆ ಬಗ್ಗೆಯೂ ವ್ಯವಸ್ಥೆಗೆ ಅಧ್ಯಯನ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

  • ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ

    ಹೊರರಾಜ್ಯದ ಜಾನುವಾರನ್ನು ಕಾಡಲ್ಲಿ ಮೇಯಿಸಲು ನಿರ್ಬಂಧ, ರಾಜ್ಯದ ಕುರಿಗಾಹಿಗಳಿಗೆ ಇಲ್ಲ ತೊಂದರೆ: ಈಶ್ವರ್ ಖಂಡ್ರೆ

    ಬೆಂಗಳೂರು: ಹೊರ ರಾಜ್ಯದಿಂದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ (Eshwara Khandre) ವಿಧಾನಸಭೆಯಲ್ಲಿಂದು  (Karnataka Assembly Session) ಸ್ಪಷ್ಟಪಡಿಸಿದ್ದಾರೆ.

    ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು (Mahadeshwara Hills Tiger Death Case) ಸಂಭವಿಸಿದಾಗ ತಮಿಳುನಾಡಿನಿಂದ ಸಾವಿರಾರು ಜಾನುವಾರುಗಳನ್ನು ತಂದು ನಮ್ಮ ಅರಣ್ಯ ನಾಶ ಪಡಿಸುತ್ತಿರುವ ಅಂಶ ವರದಿಯಲ್ಲಿ ತಮ್ಮ ಗಮನಕ್ಕೆ ಬಂದ ಬಳಿಕ, ಹೊರ ರಾಜ್ಯದ ಜಾನುವಾರನ್ನು ನಮ್ಮ ಕಾಡಿನಲ್ಲಿ ಮೇಯಿಸುವುದಕ್ಕೆ ನಿಷೇಧ ಹೇರಲಾಗಿದೆ. ನಮ್ಮ ರಾಜ್ಯದ ಕುರಿಗಾಹಿಗಳಿಗೆ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗದ್ದಲದ ನಡುವೆ ಮುಂಗಾರು ಅಧಿವೇಶನ ಅಂತ್ಯ – ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

    ಡೀಮ್ಡ್ ಅರಣ್ಯದ ಬಗ್ಗೆ ಈಗಾಗಲೇ ಮರು ಸಮೀಕ್ಷೆ ನಡೆಯುತ್ತಿದೆ. ಸರ್ವೋನ್ನತ ನ್ಯಾಯಾಲಯ ಮತ್ತೊಂದು ಅವಕಾಶ ನೀಡಿದ್ದು, ಸಮೀಕ್ಷೆಯಲ್ಲಿ ಅರಣ್ಯದಂತೆ ಇಲ್ಲದ ಯಾವ ಪ್ರದೇಶ ಕೈಬಿಡಬಹುದು ಯಾವುದನ್ನು ಸೇರಿಸಬಹುದು ಎಂಬುದನ್ನು ಪರಾಮರ್ಶಿಸಲಾಗುವುದು ಎಂದು ತಿಳಿಸಿದರು.

    ಅರಣ್ಯೇತರ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲು ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಪರ್ಯಾಯ ಭೂಮಿ ಮತ್ತು ಎನ್.ಪಿ.ವಿ. ಶುಲ್ಕ ಪಾವತಿಸಿ ನಿಯಮಾನುಸಾರ ಅನುಮತಿ ಪಡೆಯಲು ಅವಕಾಶವಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಾ.ನಗರದಲ್ಲಿ 5 ಹುಲಿಗಳ ಸಾವು ಕೇಸ್‌ – ಪ್ರತಿಕ್ರಿಯೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಸೂಚನೆ

  • ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಧರ್ಮಸ್ಥಳ ಫೈಲ್ಸ್‌| ಎರಡನೇ ಜಾಗದಲ್ಲಿ ಸಿಗಲಿಲ್ಲ ಯಾವುದೇ ಕಳೇಬರ

    ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Mass Burial Case) ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೇಬರ ಶೋಧ ತೀವ್ರಗೊಂಡಿದೆ.

    ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ಕಾರ್ಯ ನಡೆಯಿತು. ನೇತ್ರಾವತಿ ನದಿ (Netravati River) ಪಕ್ಕದ ದಟ್ಟ ಕಾಡಿನ ಒಳಗಡೆ ಮಧ್ಯಾಹ್ನ 12:30ರವರೆಗೂ ಶೋಧ ಕಾರ್ಯ ನಡೆದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.  ಇದನ್ನೂ ಓದಿ: ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ | ಪ್ರಕರಣದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರು ತಳುಕು

    ಅರಣ್ಯ (Forest) ಪ್ರವೇಶದ ಆರಂಭದಲ್ಲೇ ಇರುವ ಎರಡನೇ ಜಾಗವಿದ್ದು ಪಂಚಾಯತ್‌ನ ಇಪ್ಪತ್ತು ಮಂದಿ ಕಾರ್ಮಿಕರಿಂದ ಉತ್ಖನನ ಕಾರ್ಯ ನಡೆಯಿತು. ಆರಂಭದಲ್ಲಿ ಉದ್ದಕ್ಕೆ ಆರು ಅಡಿ, ಅಗಲಕ್ಕೆ ಐದು ಅಡಿ ಜಾಗ ಗುರುತಿಸಿ ಅಗೆಯಲಾಯಿತು.

    ಅರಣ್ಯದ ಒಳಗಡೆ ಉತ್ಕನನ ನಡೆಸಲು ಯಂತ್ರ ಬಳಸಲು ಅನುಮತಿ ಇಲ್ಲದ ಕಾರಣ ಕಾರ್ಮಿಕರಿಂದಲೇ ಶೋಧ ಕಾರ್ಯ ನಡೆಸಲಾಯಿತು. ಪುತ್ತೂರಿನ ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹಾಗೂ ಎಸ್ಐಟಿ ಎಸ್.ಪಿ ಜಿತೇಂದ್ರ ಕುಮಾರ್ ದಯಾಮ ಖುದ್ದು ಸ್ಥಳದಲ್ಲಿದ್ದಾರೆ.

     

    ಊಟದ ವಿರಾಮದ ನಂತರ  ದೂರುದಾರ  ವ್ಯಕ್ತಿ ತೋರಿಸಿದ ಮೂರನೇ ಜಾಗದಲ್ಲಿ ಅಗೆಯುವ ಕೆಲಸ ಆರಂಭವಾಗಿದೆ.

  • ರಾಜ್ಯದ ಅರಣ್ಯಗಳಲ್ಲಿ ಸಾಕುಪ್ರಾಣಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಈಶ್ವರ ಖಂಡ್ರೆ ಆದೇಶ

    ರಾಜ್ಯದ ಅರಣ್ಯಗಳಲ್ಲಿ ಸಾಕುಪ್ರಾಣಿ, ದನಕರುಗಳನ್ನ ಮೇಯಿಸುವುದು ನಿಷೇಧಿಸಲು ಈಶ್ವರ ಖಂಡ್ರೆ ಆದೇಶ

    ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ (Forest) ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.

    ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕನ್ವರ್ ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ – ಆದೇಶ ಎತ್ತಿ ಹಿಡಿದ ಸುಪ್ರೀಂ

    ದೊಡ್ಡ ಸಂಖ್ಯೆಯ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತಿಯ ಕ್ರಮವಹಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಿಂದ ಮೂರು ಅಪಾಚೆ ಹೆಲಿಕಾಪ್ಟರ್‌ಗಳ ಮೊದಲ ಬ್ಯಾಚ್ ಆಗಮನ

    ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುತ್ತಾರೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಣ್ಣ ಬುದ್ಧಿ ಹೇಳಿದ್ದಕ್ಕೆ ಮಗುವನ್ನು ಬರ್ಬರವಾಗಿ ಕೊಂದ ಚಿಕ್ಕಪ್ಪ

    ಮಿಗಿಲಾಗಿ ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಶೀಘ್ರವೇ ಧರ್ಮಸ್ಥಳ ಪ್ರಕರಣಗಳ ತನಿಖೆ ಆರಂಭ; ಎಸ್‌ಐಟಿ ತಂಡದಿಂದ ಯಾರೂ ಹೊರಗುಳಿಯಲ್ಲ: ಪರಮೇಶ್ವರ್

  • ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

    ಎತ್ತಿನಹೊಳೆ ಯೋಜನೆಗೆ ಹಿನ್ನಡೆ – 423 ಎಕ್ರೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಸರ್ಕಾರದಿಂದ ನಕಾರ

    – 423 ಎಕರೆ ಅರಣ್ಯ ಬಳಕೆಗೆ ಅನುಮೋದನೆ ಕೇಳಿದ್ದ ರಾಜ್ಯ

    ನವದೆಹಲಿ: ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ 23 ಸಾವಿರ ಕೋಟಿ ರೂ. ವೆಚ್ಚದ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಗೆ (Yettinahole Integrated Drinking Water Supply Project) ಹೆಚ್ಚುವರಿಯಾಗಿ 423 ಎಕ್ರೆ ಅರಣ್ಯ (Forest) ಬಳಕೆಗೆ ಅನುಮೋದನೆ ನೀಡಬೇಕೆಂಬ ಕರ್ನಾಟಕ ಸರ್ಕಾರದ (Karnataka Government) ಪ್ರಸ್ತಾವಕ್ಕೆ ಕೇಂದ್ರ ಅರಣ್ಯ, ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ  ಅನುಮತಿ ನೀಡಲು ನಿರಾಕರಿಸಿದೆ.

    ಗುರುತ್ವಾಕರ್ಷಣೆ ಕಾಲುವೆ ನಿರ್ಮಾಣಕ್ಕೆ ಹಾಸನ ಹಾಗೂ ತುಮಕೂರು ಜಿಲ್ಲೆಗಳಲ್ಲಿ 432 ಎಕ್ರೆ ಅರಣ್ಯ ಬಳಕೆಗೆ ಒಪ್ಪಿಗೆ ನೀಡುವಂತೆ ಕೋರಿ ರಾಜ್ಯ ಸರ್ಕಾರವು ಪರಿಸರ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರಸ್ತಾವನೆ ಸಲ್ಲಿಸಿತ್ತು. ಸಚಿವಾಲಯದ ಡಿಐಜಿಎಫ್‌ ಪ್ರಣಿತಾ ಪೌಲ್‌ ನೇತೃತ್ವದ ಅಧಿಕಾರಿಗಳ ತಂಡವು ಯೋಜನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿತ್ತು. ರಾಜ್ಯ ಸರ್ಕಾರವು ಲೋಪಗಳನ್ನು ಸರಿಪಡಿಸಿ ಸೂಕ್ತ ಸಮಜಾಯಿಷಿ ನೀಡಿದ ಬಳಿಕವೇ ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನೀಡಬಹುದು ಎಂದು ಸಮಿತಿ ಶಿಫಾರಸು ಮಾಡಿತ್ತು. ಇದನ್ನೂ ಓದಿ: ನಾನು ಸಚಿವನಾದ್ರೆ ಪುರುಷರಿಗೂ ಬಸ್‌ ಪ್ರಯಾಣ ಫ್ರೀ: ಬಸವರಾಜ ರಾಯರೆಡ್ಡಿ

     

    ನವದೆಹಲಿಯಲ್ಲಿ ಜೂನ್‌ 26ರಂದು ನಡೆದ ಸಲಹಾ ಸಮಿತಿಯ ಸಭೆಯಲ್ಲಿ ಈ ಯೋಜನೆಗೆ ಹೆಚ್ಚುವರಿ ಅರಣ್ಯ ಭೂಮಿ ನೀಡುವ ಬಗ್ಗೆ ಚರ್ಚೆ ನಡೆಯಿತು. ‘ಕೇಂದ್ರದಿಂದ ಅನುಮೋದನೆ ಪಡೆಯುವ ಮುನ್ನವೇ ಈ ಯೋಜನೆಗಾಗಿ ಅರಣ್ಯ ಭೂಮಿಯನ್ನು ಬಳಕೆ ಮಾಡಲಾಗಿದೆ ಎಂಬುದನ್ನು ಅಧಿಕಾರಿಗಳ ತಂಡವು ಬೊಟ್ಟು ಮಾಡಿ ತೋರಿಸಿದೆ. ನಿಯಮ ಉಲ್ಲಂಘಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು’ ಎಂದು ಸಲಹಾ ಸಮಿತಿ ನಿರ್ದೇಶನ ನೀಡಿತು. ಬಳಿಕ ಪ್ರಸ್ತಾವವನ್ನು ಮುಂದಿನ ಸಭೆಗೆ ಮುಂದೂಡಿತು.  ಇದನ್ನೂ ಓದಿ: ಅನಿವಾಸಿ ಭಾರತೀಯರಿಗೆ ಗುಡ್‌ ನ್ಯೂಸ್‌ 23 ಲಕ್ಷಕ್ಕೆ ಜೀವಿತಾವಧಿ ‘ಗೋಲ್ಡನ್‌ ವೀಸಾ’ ಪರಿಚಯಿಸಿದ ಯುಎಇ

    ಪಶ್ಚಿಮ ಘಟ್ಟದ ಎತ್ತಿನಹೊಳೆಯಿಂದ 24 ಟಿಎಂಸಿ ನೀರು ಹರಿಸುವ ಈ ಯೋಜನೆಗೆ ಈ ಹಿಂದೆ 13.93 ಹೆಕ್ಟೇರ್ ಅರಣ್ಯ ಬಳಕೆಗೆ 2016ರಲ್ಲಿ ಪ್ರಸ್ತಾವ ಸಲ್ಲಿಸಲಾಗಿತ್ತು. 33 ಷರತ್ತುಗಳನ್ನು ವಿಧಿಸಿ 2016ರಲ್ಲಿ ಅನುಮೋದನೆ ಕೊಡಲಾಗಿತ್ತು. ಆದರೆ ಬಹುತೇಕ ಷರತ್ತುಗಳನ್ನು ಪಾಲನೆ ಮಾಡಿಲ್ಲ. ಕಾಮಗಾರಿ ಸಂದರ್ಭದಲ್ಲಿ ಭೂಕುಸಿತ ಹಾಗೂ ಮಣ್ಣಿನ ಕೊರೆತ ಉಂಟಾಗಿದೆ ಎಂದು ಎನ್‌ಜಿಟಿಯ ಮೇಲ್ವಿಚಾರಣಾ ತಂಡವು 2019ರಲ್ಲಿ ವರದಿ ಸಲ್ಲಿಸಿತ್ತು. ಭೂಕುಸಿತ ತಡೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಜತೆಗೆ ಅನುಮೋದನೆಗಿಂತ ಹೆಚ್ಚುವರಿ ಅರಣ್ಯ ಬಳಸಲಾಗಿದೆ. ಕಾಮಗಾರಿಯಿಂದಾಗಿ ಅನೇಕ ಮನೆಗಳಿಗೆ ಹಾನಿಯಾಗಿದೆ. ಆದರೆ, ಸಂತ್ರಸ್ತರಿಗೆ ಯಾವುದೇ ಪರಿಹಾರ ನೀಡಿಲ್ಲ ಎಂದು ತಜ್ಞರ ತಂಡವು ಆಕ್ಷೇಪ ವ್ಯಕ್ತಪಡಿಸಿತ್ತು.

  • 7 ದಶಕಗಳ ಕನಸು ಭಗ್ನ – ಟಾರ್ ಹಾಕುವ ಮುನ್ನವೇ ರಸ್ತೆಗೆ ಬೇಲಿ ಹಾಕಿದ ಅರಣ್ಯ ಇಲಾಖೆ

    7 ದಶಕಗಳ ಕನಸು ಭಗ್ನ – ಟಾರ್ ಹಾಕುವ ಮುನ್ನವೇ ರಸ್ತೆಗೆ ಬೇಲಿ ಹಾಕಿದ ಅರಣ್ಯ ಇಲಾಖೆ

    ಚಿಕ್ಕಮಗಳೂರು: ಏಳು ದಶಕಗಳ ಬಳಿಕ ಜಲ್ಲಿ-ಟಾರ್ ಕಾಣುವ ಭಾಗ್ಯ ಕಂಡಿದ್ದ ರಸ್ತೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು (Forest Department) ಈ ಜಾಗ ನಮ್ದು ಅಂತ ರಸ್ತೆ ಮಧ್ಯೆಯೇ ಬೇಲಿ ಹಾಕಿರುವ ಘಟನೆ ಚಿಕ್ಕಮಗಳೂರು (Chikkamgaluru) ಜಿಲ್ಲೆ ಕಳಸ (Kalasa) ತಾಲೂಕಿನ ನಾಗಲಮಕ್ಕಿ ಗ್ರಾಮದಲ್ಲಿ ನಡೆದಿದೆ.

    ಕಳಸ-ಇಡಕಣಿ ಮಾರ್ಗದ ನಾಗಲಮಕ್ಕಿಯ ಈ ರಸ್ತೆಯನ್ನ (Road) ನಂಬಿಕೊಂಡು ಕಾಫಿ ಎಸ್ಟೇಟ್ ಸೇರಿದಂತೆ ಹಲವು ಹಳ್ಳಿಗಳು ಸೇರಿ 250ಕ್ಕೂ ಹೆಚ್ಚು ಮನೆಗಳಿವೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಈ ರಸ್ತೆ ಜಲ್ಲಿ-ಟಾರ್ ನೋಡುವ ಭಾಗ್ಯ ಕಂಡಿರಲಿಲ್ಲ. ಆದರೆ ಈಗ ಸರ್ಕಾರ 4-5 ಕಿ.ಮೀ. ಕಾಂಕ್ರೀಟ್ ರಸ್ತೆಗೆ (Concrete Road) ಅನುಮೋದನೆ ನೀಡಿತ್ತು.  ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

    a dream of 7 decades was shattered the forest department fenced the road before tarring it kalasa chikkamgaluru (1)

    ಅನುಮೋದನೆ ಸಿಕ್ಕಿದ ನಂತರ ಗುತ್ತಿಗೆದಾರರು ಕೆಲಸ ಕೂಡ ಆರಂಭಿಸಿದ್ದರು.‌ ಆದರೆ ಅರಣ್ಯ ಅಧಿಕಾರಿಗಳು ಈ ಜಾಗ ನಮ್ಮದು ಎಂದು ನಡು ರಸ್ತೆಗೆ ಬೇಲಿ ಹಾಕಿದ್ದು ರಸ್ತೆ ಕಾಮಗಾರಿ ಕೆಲಸ ಕೂಡ ಸ್ಥಗಿತಗೊಂಡಿದೆ. ಎರಡು ಚರಂಡಿಗಳಲ್ಲಿ ಒಂದು ಚರಂಡಿಯನ್ನ ಮುಚ್ಚಿರುವ ಅರಣ್ಯ ಇಲಾಖೆ ಅಧಿಕಾರಿಗಳು ಸುಮಾರು 200 ಮೀಟರ್ ರಸ್ತೆ ಮಧ್ಯೆ ಬೇಲಿ ಹಾಕಿದ್ದಾರೆ. ಇದರಿಂದ ಕಂಟ್ರಾಕ್ಟರ್ ಕೆಲಸ ಕೂಡ ನಿಲ್ಲಿಸಿದ್ದಾರೆ.

    75 ವರ್ಷಗಳಿಂದ ರಸ್ತೆ ನೋಡದ ಜನ ರಸ್ತೆಯಾಗಲಿದೆ ಎಂಬು ಖುಷಿಯಲ್ಲಿದ್ದರು. ಈಗ ಅರಣ್ಯ ಅಧಿಕಾರಿಗಳು ಹಳ್ಳಿಗರ ಆಸೆಗೆ ತಣ್ಣೀರೆರಚಿದ್ದಾರೆ. ಜನನಾಯಕರು, ಅಧಿಕಾರಿಗಳ ವಿರುದ್ಧ ಹೋರಾಡಿ, ಕಾಡಿ-ಬೇಡಿ ರಸ್ತೆ ಮಂಜೂರು ಮಾಡಿಸಿಕೊಂಡಿದ್ದರು.

    ಈಗ ರಸ್ತೆ ಮಧ್ಯೆ ಬೇಲಿ ಹಾಕಿದ್ದರಿಂದ ಗುತ್ತಿಗೆದಾರ ಕೆಲಸ ನಿಲ್ಲಿಸಿದರೆ ಇತ್ತ ಕಾಡಂಚಿನ ಕುಗ್ರಾಮದ ಜನ ಮತ್ತೆ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಹೋರಾಡಲು ಶಕ್ತಿ ಇಲ್ಲದೆ ಅಸಹಾಯಕರಾಗಿದ್ದಾರೆ.

  • ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಕಾಡ್ಗಿಚ್ಚು – ಡ್ರೋನ್ ಕಣ್ಗಾವಲಿಗೆ ಮುಂದಾದ ಅರಣ್ಯ ಇಲಾಖೆ

    ಪಶ್ಚಿಮ ಘಟ್ಟ ತಪ್ಪಲಿನಲ್ಲಿ ಕಾಡ್ಗಿಚ್ಚು – ಡ್ರೋನ್ ಕಣ್ಗಾವಲಿಗೆ ಮುಂದಾದ ಅರಣ್ಯ ಇಲಾಖೆ

    ಚಿಕ್ಕಮಗಳೂರು: ಮುಳ್ಳಯ್ಯನಗಿರಿ (Mullayanagiri) ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ (Chandra Drona) ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಪಣ ತೊಟ್ಟಿದ್ದು, ಡ್ರೋನ್‌ಗಳ ಮೊರೆ ಹೋಗಿದ್ದಾರೆ.

    ಮುಳ್ಳಯ್ಯನಗಿರಿ, ದತ್ತಪೀಠದ ಗುಡ್ಡಗಳಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಕಾಡನ್ನ ರಕ್ಷಿಸಲು ಡ್ರೋನ್ ಕಣ್ಗಾವಲಿಗೆ ಇಲಾಖೆ ಮುಂದಾಗಿದೆ. ಇದನ್ನೂ ಓದಿ: ಖರ್ಜೂರದೊಳಗೆ ಇಟ್ಟು ಸಾಗಿಸುತ್ತಿದ್ದ 172 ಗ್ರಾಂ ಚಿನ್ನ ಏರ್‌ಪೋರ್ಟ್‌ನಲ್ಲಿ ವಶಕ್ಕೆ

    ನಿತ್ಯ ಸಾವಿರಾರು ಜನ ಪ್ರವಾಸಿಗರು ಬಂದು ಹೋಗುವ ಪಶ್ಚಿಮ ಘಟ್ಟಗಳ ತಪ್ಪಲುಗಳಲ್ಲಿ ಡ್ರೋನ್ ಕಣ್ಗಾವಲಿನಿಂದ ಬೆಂಕಿ ಹಾಕುವವರು ಸ್ಥಳಿಯರೋ, ಪ್ರವಾಸಿಗರೋ ಅಥವಾ ನಿಜಕ್ಕೂ ಕಾಡ್ಗಿಚ್ಚೋ ಎಂಬುದನ್ನು ಗುರುತಿಸಲು ಸಹಕಾರಿಯಾಗುತ್ತದೆ. ಇದರಿಂದ ನಿತ್ಯ ಸುಟ್ಟು ಕರಕಲಾಗ್ತಿರೋ ಕಾಡಿನ ರಕ್ಷಣೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ

    ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಕಷ್ಟವಾಗಿರುವುದರಿಂದ ಅಗ್ನಿಶಾಮಕ ವಾಹನ ಹೋಗದ ಕಡೆ ಅಧಿಕಾರಿಗಳೇ ಸೊಪ್ಪಿನಿಂದ ಕಾಡನ್ನ ರಕ್ಷಿಸಬೇಕು. ಇದೀಗ ಸ್ಥಳಿಯರು ಹಾಗೂ ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಡಲು ಅರಣ್ಯಾಧಿಕಾರಿಗಳು ಡ್ರೋನ್ ಮೊರೆ ಹೋಗಿದ್ದಾರೆ.

    ಮಂಗಳವಾರ ಹೊರನಾಡು ಸಮೀಪದ ಮಾವಿನಹೊಳ-ಬಲಿಗೆ ಗುಡ್ಡದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚಿನ ಪರಿಣಾಮ ಹತ್ತಾರು ಎಕ್ರೆ ಅರಣ್ಯ ಬೆಂಕಿಗಾಹುತಿಯಾಗಿತ್ತು. ಇದನ್ನೂ ಓದಿ: ಆಹಾರ ಪ್ರಿಯರಿಗೆ ಶಾಕ್‌ – ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ

  • ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    ರಾಮನಗರ | ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ – 30 ಎಕರೆ ಸುಟ್ಟು ಭಸ್ಮ

    – ಕೃತ್ಯವೆಸಗಿದ ಕುರಿಗಾಹಿ ಅರೆಸ್ಟ್

    ರಾಮನಗರ: ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ (Fire) ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ (Kanakapura) ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.

    ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ ಗ್ರಾಮದ ರಾಜಪ್ಪ (42) ಎಂಬಾತನನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಂಗಮ ವನ್ಯಜೀವಿ ವಲಯದಲ್ಲಿ ಅರಣ್ಯ ಪ್ರದೇಶದಲ್ಲಿ ಕುರಿಗಾಹಿ ರಾಜಪ್ಪ ಮೇಕೆಗಳ ಮೇಯಿಸಲು ಹೋಗಿದ್ದ. ಅರಣ್ಯದಲ್ಲಿರುವ ಒಣ ಹುಲ್ಲು ಸುಟ್ಟರೆ ಹೊಸ ಹುಲ್ಲು ಚಿಗುರುತ್ತೆ. ಇದರಿಂದ ಕುರಿ, ಮೇಕೆಗಳಿಗೆ ಮೇವು ಸಿಗುತ್ತದೆ ಎಂಬ ಕಾರಣಕ್ಕೆ ಅರಣ್ಯಕ್ಕೆ ಬೆಂಕಿಹಚ್ಚಿದ್ದ. ಇದನ್ನೂ ಓದಿ: ಮೊನಾಲಿಸಾ ಸಿನಿಮಾ ವಿವಾದ – ಐವರ ವಿರುದ್ಧ ಬಿತ್ತು ಕೇಸ್‌

    ಅರಣ್ಯಕ್ಕೆ ಬೆಂಕಿಬಿದ್ದ ಹಿನ್ನೆಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಬಳಿಕ ಬೆಂಕಿನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿನಂದಿಸುವಷ್ಟರಲ್ಲಿ ಸುಮಾರು 30 ಎಕರೆಗಳಷ್ಟು ಅರಣ್ಯ ಸುಟ್ಟು ಭಸ್ಮವಾಗಿದೆ. ಈ ವೇಳೆ ಅಕ್ರಮವಾಗಿ ವನ್ಯಜೀವಿ ವಲಯಕ್ಕೆ ಎಂಟ್ರಿಯಾಗಿದ್ದ ರಾಜಪ್ಪನನ್ನ ಹಿಡಿದು ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಬೆಂಕಿಹಾಕಿದ್ದನ್ನ ರಾಜಪ್ಪ ಒಪ್ಪಿಕೊಂಡಿದ್ದಾನೆ. ಕೂಡಲೇ ಆರೋಪಿಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 300 ಮಕ್ಕಳ ಮೇಲೆ ವೈದ್ಯನಿಂದ ರೇಪ್ – ನಾನು `ಶಿಶುಕಾಮಿ’ ಎಂದು ತಪ್ಪೊಪ್ಪಿಕೊಂಡ ಆರೋಪಿ

    ಅರಣ್ಯಕ್ಕೆ ಬೆಂಕಿಹಾಕಿದ ಹಿನ್ನೆಲೆ ಕೆಲ ವನ್ಯಜೀವಿಗಳೂ ಸಹ ಸಾವನ್ನಪ್ಪಿದ್ದು, ಬೃಹತ್ ಗಾತ್ರದ ಹೆಬ್ಬಾವು ಸಹ ಬೆಂಕಿಯಲ್ಲಿ ಸುಟ್ಟು ಮೃತಪಟ್ಟಿದೆ. ಇದನ್ನೂ ಓದಿ: ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

  • ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!

    ಜಸ್ಟ್ ಮಿಸ್, ಮರ ಹತ್ತಿ ಆನೆ ದಾಳಿಯಿಂದ ತಪ್ಪಿಸಿಕೊಂಡ ಇಟಿಎಫ್ ಸಿಬ್ಬಂದಿ!

    ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಆನೆ ಹಾವಳಿ ಮುಂದುವರೆದಿದ್ದು ಆನೆ ದಾಳಿಯಿಂದ ಎಲಿಫೆಂಟ್ ಟಾಸ್ಕ್ ಫೋರ್ಸ್ (ETF) ಸಿಬ್ಬಂದಿಯೊಬ್ಬರು ಮರಹತ್ತಿ ಜೀವ ಉಳಿಸಿಕೊಂಡಿರುವ ಘಟನೆ ಎನ್.ಆರ್.ಪುರ ತಾಲೂಕಿನ ಸಾಲೂರು ಅರಣ್ಯದಲ್ಲಿ (Salur Forest) ನಡೆದಿದೆ.

    ಎನ್.ಆರ್.ಪುರ ತಾಲೂಕಿನಲ್ಲಿ ಇತ್ತಿಚೆಗೆ ಆನೆ ಹಾವಳಿ ಮಿತಿ ಮೀರಿದೆ. ಕಾಡಾನೆಗಳು ಪ್ರತಿನಿತ್ಯ ಪುಂಡಾಟ ಮೆರೆಯುತ್ತಿದ್ದು, ಮೂರು ತಿಂಗಳಲ್ಲಿ ಇಬ್ಬರು ಆನೆ ದಾಳಿಗೆ ತುತ್ತಾಗಿದ್ದಾರೆ.‌

     

    View this post on Instagram

     

    A post shared by PUBLiC TV (@publictv)

    ಶುಕ್ರವಾರ ಕೂಡ ಕಾಫಿತೋಟಕ್ಕೆ ಬಂದಿದ್ದ ಪುಂಡಾನೆಯೊಂದನ್ನು ಓಡಿಸಲು ಹೋಗಿದ್ದ ಇಟಿಎಫ್ ಸಿಬ್ಬಂದಿ ಮೇಲೆಯೇ ಆನೆಯೊಂದು ದಾಳಿ ಮಾಡಲು ಮುಂದಾಗಿದೆ. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ

    ಸಾಲೂರು ಗ್ರಾಮಕ್ಕೆ ಎಂಟ್ರಿ ಕೊಟ್ಟಿದ್ದ ಕಾಡಾನೆಯನ್ನು ಓಡಿಸುವ ವೇಳೆ ಆನೆ ಇಟಿಎಫ್ ಸಿಬ್ಬಂದಿ ಮೇಲೆ ದಾಳಿ ನಡೆಸಲು ಮುಂದಾಗಿದೆ. ತಕ್ಷಣ ಎಚ್ಚೆತ್ತ ಇಟಿಎಫ್ ಸಿಬ್ಬಂದಿ ಮರವನ್ನೇರಿ ಜೀವ ಉಳಿಸಿಕೊಂಡಿದ್ದಾರೆ.

    ಮರವೇರಿ ಕುಳಿತ ನಂತರವೂ ಕಾಡಾನೆ ಮರವನ್ನು ಅಲುಗಾಡಿಸಲು ಮುಂದಾಗಿದ್ದು, ಈ ದೃಶ್ಯವನ್ನು ಮರದ ಮೇಲೆ ಕುಳಿತುಕೊಂಡು ಆನೆ ನಿಗ್ರಹ ದಳದ ಸಿಬ್ಬಂದಿ ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಆನೆ ದಾಳಿ ಹಾಗೂ ಹಾವಳಿಯಿಂದ ಕಂಗೆಟ್ಟಿರುವ ಜನ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕೆಂದು ಆಗ್ರಹಿಸಿದ್ದಾರೆ.

  • ಕಪ್ಪತ್ತಗುಡ್ಡಕ್ಕೆ ಬೆಂಕಿ – ನೂರಾರು ಹೆಕ್ಟೇರ್‌ ಅರಣ್ಯದಲ್ಲಿದ್ದ ಔಷಧಿಯ ಸಸ್ಯಗಳು, ಪ್ರಾಣಿ-ಪಕ್ಷಿಗಳು ಬೆಂಕಿಗಾಹುತಿ

    ಕಪ್ಪತ್ತಗುಡ್ಡಕ್ಕೆ ಬೆಂಕಿ – ನೂರಾರು ಹೆಕ್ಟೇರ್‌ ಅರಣ್ಯದಲ್ಲಿದ್ದ ಔಷಧಿಯ ಸಸ್ಯಗಳು, ಪ್ರಾಣಿ-ಪಕ್ಷಿಗಳು ಬೆಂಕಿಗಾಹುತಿ

    ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತಗುಡ್ಡದಲ್ಲಿ (Kappata Gudda) ಬೆಂಕಿ ಕಾಣಿಸಿಕೊಂಡಿದೆ.

    ಬೇಸಿಗೆ ಆರಂಭಕ್ಕೂ‌ ಮುನ್ನ ಔಷಧಿಯ ಸಸ್ಯಕಾಶಿ ಕಪ್ಪತ್ತಗುಡ್ಡ ಬೆಂಕಿಗಾಹುತಿ (Fire) ಆಗುತ್ತಿದೆ. ಮುಂಡರಗಿ ತಾಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ. ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ,‌ ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರ ತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಪ್ರದೇಶ ಸುಟ್ಟು ಹೋಗಿದೆ.

    ಬೆಂಕಿಯಿಂದ ಸರೀಸೃಪಗಳು, ವನ್ಯಜೀವಿಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ. ಆರ್‌ಎಫ್‌ಒ ಮಂಜುನಾಥ ಮೆಗಲಮನಿ ನೇತೃತ್ವದಲ್ಲಿ ಅನೇಕ ಅರಣ್ಯ ಇಲಾಖೆ‌ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

     

    ಜೀವದ ಹಂಗು ತೊರೆದು ಬುಧವಾರ ಸಂಜೆಯಿಂದ ಇಂದು ಬೆಳಗಿನ‌ ಜಾವದ ವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಸಿರು ಸಂಪತ್ತು ರಕ್ಷಣೆಗಾಗಿ ಕಪ್ಪತ್ತಗುಡ್ಡದಲ್ಲಿ ಈಗ ಸುಮಾರು 70 ಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

    ಹಸಿರು ಕಾಶಿಗೆ ಮೊದಲು ಗಣಿ ಹಾಗೂ ಭೂಗಳ್ಳರಿಂದ ಕಪ್ಪತ್ತಗುಡ್ಡಕ್ಕೆ ಆಪತ್ತು ಬಂದಿತ್ತು. ಈಗ ಬೆಂಕಿ ಆಪತ್ತು ಬಂದೊದಗಿದೆ. ಯಾರೋ ಕೊಡಿಗೇಡಿಗಳ ಕೃತ್ಯದಿಂದ ಕಪ್ಪತ್ತಗುಡ್ಡ ಬೆಂಕಿ ಕೆನ್ನಾಲಿಗೆಗೆ ನಲುಗಿದೆ. ಗುಡ್ಡದಲ್ಲಿರುವ ವಿಂಡ್ ಫ್ಯಾನ್ ನಿಂದ ಆಗಿರಬಹುದಾ? ಕುರಿಗಾಹಿಗಳ ಕೃತ್ಯನಾ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.