Tag: Forest Officers

  • ಮಲಗಿದ್ದ ಮಗುವನ್ನ ಹೊತ್ತೊಯ್ದು ತಿಂದ ಚಿರತೆ – ಅರ್ಧ ದೇಹ ಪತ್ತೆ

    ಮಲಗಿದ್ದ ಮಗುವನ್ನ ಹೊತ್ತೊಯ್ದು ತಿಂದ ಚಿರತೆ – ಅರ್ಧ ದೇಹ ಪತ್ತೆ

    ರಾಮನಗರ: ಪೋಷಕರ ಬಳಿ ಮಲಗಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ಅರ್ಧ ಚಿಂದು ಸಾಯಿಸಿರುವ ಅಮಾನವೀಯ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ನಡೆದಿದೆ.

    ಮೂರು ವರ್ಷದ ಹೇಮಂತ್‍ನನ್ನು ಚಿರತೆ ತಿಂದು ಸಾಯಿಸಿದೆ. ಹೇಮಂತ್ ತನ್ನ ತಾತನ ಮನೆಗೆ ಬಂದಿದ್ದ ಸಂದರ್ಭದಲ್ಲಿ ಇಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮಗುವನ್ನು ತಿಂದು ಹೋಗಿದೆ. ಇದೀಗ ಮಗುವಿನ ಅರ್ಧ ದೇಹ ಪತ್ತೆಯಾಗಿದೆ.

    ಮೃತ ಹೇಮಂತ್ ದೊಡ್ಡೇರಿ ಗ್ರಾಮದ ಚಂದ್ರಶೇಖರ್ ಮತ್ತು ಮಂಗಳ ದಂಪತಿಯ ಮಗುವಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ಹೇಮಂತ್ ತಂದೆ-ತಾಯಿಯ ಜೊತೆ ಮಲಗಿದ್ದನು. ಆದರೆ ಪೋಷಕರು ಸೆಕೆ ಹೆಚ್ಚಾಗಿದ್ದರಿಂದ ಬಾಗಿಲನ್ನ ತೆಗೆದು ಮಲಗಿದ್ದರು. ಈ ವೇಳೆ ಬಂದ ಚಿರತೆ ಮಲಗಿದ್ದ ಮಗುವನ್ನ ಹೊತ್ತೊಯ್ದಿದೆ.

    ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಬಳಿಕ ಮಗುವಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ಆದರೆ ಮಗುವಿನ ಅರ್ಧ ದೇಹ ಮನೆ ಬಳಿ ಇರುವ ಕಾಡಿನಲ್ಲಿ ಪತ್ತೆಯಾಗಿದೆ.

    ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

  • ಹಗಲು ಹೊತ್ತಲ್ಲೇ ಚಿರತೆ ಕಾಟ- ಗ್ರಾಮಸ್ಥರು ಕಂಗಾಲು

    ಹಗಲು ಹೊತ್ತಲ್ಲೇ ಚಿರತೆ ಕಾಟ- ಗ್ರಾಮಸ್ಥರು ಕಂಗಾಲು

    ಹಾಸನ: ಹಗಲು ಹೊತ್ತಿನಲ್ಲೇ ಚಿರತೆಯೊಂದು ಹೊಲ, ಮನೆಗಳ ಸಮೀಪ ಓಡಾಡುತ್ತಿದ್ದು, ಗ್ರಾಮಸ್ಥರು ಕಂಗಾಲಾಗಿದ್ದಾರೆ. ಜೀವ ಕೈಯಲ್ಲೇ ಹಿಡಿದುಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಗಾನಗರ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಚಿರತೆ ಓಡಾಡುವ ದೃಶ್ಯವನ್ನು ಗ್ರಾಮಸ್ಥರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಹಗಲು ಹೊತ್ತಿನಲ್ಲೇ ಗ್ರಾಮದ ಸುತ್ತ-ಮುತ್ತ ಚಿರತೆ ಜನರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆಗೆ ತಿಳಿಸಿ ಚಿರತೆ ಹಿಡಿಯುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

    ಚಿರತೆಯ ಕಾಟದಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಹಗಲು ಹೊತ್ತಿನಲ್ಲೇ ಚಿರತೆ ಓಡಾಡುವ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದು, ಚಿರತೆ ದಾಳಿಯಿಂದ ಅನಾಹುತ ಸಂಭವಿಸುವ ಮುನ್ನ ಚಿರತೆ ಸೆರೆ ಹಿಡಿಯಿರಿ. ಇಲ್ಲವಾದಲ್ಲಿ ಆಗುವ ಅನಾಹುತಕ್ಕೆ ನೀವೇ ಹೊಣೆಗಾರರು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

  • ಬೆನ್ನಟ್ಟಿ ಬಂದ ಚಿರತೆಯನ್ನು ಬಾವಿಗೆ ಬೀಳಿಸಿದ ಶ್ವಾನ

    ಬೆನ್ನಟ್ಟಿ ಬಂದ ಚಿರತೆಯನ್ನು ಬಾವಿಗೆ ಬೀಳಿಸಿದ ಶ್ವಾನ

    ಕಾರವಾರ: ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಓಡಿಬಂದ ವೇಗಕ್ಕೆ ಆಯಾ ತಪ್ಪಿ ಬಾವಿಗೆ ಬಿದ್ದು ನರಳಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಬರ್ಗಿ ಗ್ರಾಮದಲ್ಲಿ ನಡೆದಿದೆ.

    ಇಂದು ಬೆಳಗ್ಗೆ ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದಿದ್ದ ಚಿರತೆ, ಕುಮಟಾ ತಾಲೂಕಿನ ಬರ್ಗಿ ಬಳಿಯ ವಸಂತ್ ಶಿವು ನಾಯ್ಕ ಮನೆಯ ಬಳಿ ಬೀದಿ ನಾಯಿಯನ್ನು ನೋಡಿ ಅಟ್ಟಿಸಿಕೊಂಡು ಹೋಗಿದೆ. ಈ ವೇಳೆ ನಾಯಿ ಓಟ ಕಿತ್ತಿದ್ದು ಅಲ್ಲಿಯೇ ಇದ್ದ ಬಾವಿ ಬಳಿ ಜಿಗಿದು ತಪ್ಪಿಸಿಕೊಂಡಿದೆ. ಈ ವೇಳೆ ಚಿರತೆ ಬಂದ ವೇಗಕ್ಕೆ ಆಯ ತಪ್ಪಿ ಬಾವಿಗೆ ಬಿದ್ದಿದೆ.

    ಚಿರತೆಯು ಬಿದ್ದ ಹೊಡೆತಕ್ಕೆ ಬಾವಿಯಿಂದ ಏಳಲು ಪ್ರಯತ್ನಿಸಿದೆ. ಈ ವೇಳೆ ಅದರ ಗರ್ಜನೆಗೆ ಮನೆಯವರಿಗೆ ತಿಳಿದಿದ್ದು, ಬಾವಿಯಲ್ಲಿ ಚಿರತೆ ಬಿದ್ದಿರುವುದು ಗೊತ್ತಾಗಿದೆ. ಆಗ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅರಣ್ಯ ಇಲಾಖೆಗೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಅದರ ರಕ್ಷಣೆಗಾಗಿ ಡೇರಿಂಗ್ ಟೀಮ್ ಬಂದಿದೆ. ಬಾವಿಗೆ ಬಿದ್ದಿರುವ ಚಿರತೆಯನ್ನು ರಕ್ಷಿಸಲು ಬಾವಿಗೆ ದೊಡ್ಡ ಬುಟ್ಟಿಯನ್ನು ಇಳೆ ಬಿಡುವ ಮೂಲಕ ಬಲೆ ಹಾಕಿ ಚಿರತೆ ರಕ್ಷಣೆ ಮಾಡಿದ್ದಾರೆ.

  • ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ದೈತ್ಯ ಚಿರತೆ ಕೊನೆಗೂ ಬೋನಿನಲ್ಲಿ ಸೆರೆ

    ಗ್ರಾಮದಲ್ಲಿ ಉಪಟಳ ನೀಡುತ್ತಿದ್ದ ದೈತ್ಯ ಚಿರತೆ ಕೊನೆಗೂ ಬೋನಿನಲ್ಲಿ ಸೆರೆ

    ನೆಲಮಂಗಲ: ಕಳೆದ ಇಪ್ಪತ್ತು ದಿನಗಳಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ದೈತ್ಯ ಚಿರತೆಯೊಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಬರಗೂರು ಗ್ರಾಮದ ಬಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ.

    ಗ್ರಾಮಸ್ಥರ ಒತ್ತಾಯದಿಂದ ಕಳೆದ ಒಂದು ವಾರದ ಹಿಂದೆ ನೆಲಮಂಗಲ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನ್‍ನ್ನು ಇರಿಸಿದ್ದರು. ಈ ದೈತ್ಯ ಚಿರತೆ ಪ್ರತಿದಿನ ಗ್ರಾಮದಲ್ಲಿ ಭಾರಿ ಆರ್ಭಟ ಮಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.

    ಈ ಕಾರಣದಿಂದ ನೆಲಮಂಗಲ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಹಲವಾರು ದಿನಗಳಿಂದ ನಾಗರಿಕರಿಗೆ ನಿದ್ದೆಗೆಡಿಸಿದ್ದ ಚಿರತೆ ಹಿಡಿಯಲು ಬೋನ್ ಹಾಕಿದ್ದರು. ಇಂದು ಗ್ರಾಮದ ದಿಣ್ಣೆ ಹೊಲ ಎಂಬಲ್ಲಿ ಆಹಾರ ಅರಸಿ ಬಂದು ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟದ್ದಾರೆ.

  • ಕೃಷ್ಣಮೃಗಗಳ ಕಾಟ, ಕಡಲೆಬೆಳೆ ನಾಶ- ಚಿತ್ರದುರ್ಗದ ರೈತರಲ್ಲಿ ಆತಂಕ

    ಕೃಷ್ಣಮೃಗಗಳ ಕಾಟ, ಕಡಲೆಬೆಳೆ ನಾಶ- ಚಿತ್ರದುರ್ಗದ ರೈತರಲ್ಲಿ ಆತಂಕ

    ಚಿತ್ರದುರ್ಗ: ಕೋಟೆನಾಡಿನ ರೈತರ ಬೆಳೆಗಳಿಗೆ ಇವರೆಗೆ ಕೀಟಬಾಧೆ ಹಾಗೂ ನೀರಿನ ಅಭಾವ ಕಾಡುತ್ತಿತ್ತು. ಆದರೆ ಈಗ ಹೊಸ ಪ್ರಾಣಿಗಳ ಕಾಟ ರೈತರಿಗೆ ತಲೆನೋವು ತಂದಿದೆ.

    ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹೂವಿನ ಹೊಳೆ ಗ್ರಾಮದ ರೈತ ರಾಜೇಂದ್ರ ಎಂಬವರು ಸುಮಾರು 20ಕ್ಕೂ ಹೆಚ್ಚು ಎಕರೆಗಳಲ್ಲಿ ಕಡಲೆಬೆಳೆಯನ್ನು ಬೆಳೆದಿದ್ದಾರೆ. ಈ ಕಡಲೆಬೆಳೆಯನ್ನು ಕೃಷ್ಣಮೃಗ ಪ್ರತಿನಿತ್ಯ ತಿಂದು ಹಾಕುತ್ತಿವೆ. ಹೀಗಾಗಿ ರೈತ ರಾಜೇಂದ್ರ ಕಣ್ಣೀರು ಹಾಕುತ್ತಿದ್ದಾರೆ.

    ಇದೇ ಗ್ರಾಮದ ರೈತರು ನೂರಾರು ಎಕರೆ ಜಮೀನಿನಲ್ಲಿ ಈ ಕಡಲೆಬೆಳೆಯನ್ನು ಬೆಳೆದಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಬಗ್ಗೆ ಮಾತನಾಡಿದ ರೈತರು, ಕೈಗೆ ಬಂದ ಬೆಳೆ ಇದೇ ರೀತಿ ದಿನನಿತ್ಯ ಕಡವೆ ಮತ್ತು ಕೃಷ್ಣಮೃಗಗಳ ಪಾಲಾಗುತ್ತಿದ್ದು, ನಮ್ಮ ಬೆಳೆ ನಾಶವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಇರುವುದನ್ನು ಕಾಪಾಡಿಕೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿ ಮಾಡಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ರೈತ ರಾಜೇಂದ್ರ, ಕಳೆದ ವರ್ಷ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕ ಮಾಡಿದ್ದು ನಾಶವಾಗಿರುವ ಬೆಳಗ್ಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಸಂಬಂಧಪಟ್ಟ ದಾಖಲೆಗಳನ್ನು ನಮ್ಮಿಂದ ಪಡೆದುಕೊಂಡಿದ್ದಾರೆ. ಆದರೆ ಇದುವರೆಗೂ ಯಾವುದೇ ಪರಿಹಾರ ದೊರಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಹಿರಿಯೂರು ಅರಣ್ಯ ವಲಯ ಅಧಿಕಾರಿ ಶ್ರೀಹರ್ಷ ಪ್ರತಿಕ್ರಿಯಿಸಿದ್ದು, ಈ ಭಾಗವು ಆಂಧ್ರ ಮತ್ತು ಕರ್ನಾಟಕ ರಾಜ್ಯಗಳ ಗಡಿ ಭಾಗವಾಗಿರುವುದರಿಂದ ಇಲ್ಲಿ ಕೃಷ್ಣಮೃಗಗಳು ಹೆಚ್ಚಾಗಿ ಕಾಣತೊಡಗಿವೆ. ಅವುಗಳನ್ನು ನಾಶ ಮಾಡುವುದು ಕಾನೂನು ಬಾಹಿರ. ಹಾಗಾಗಿ ಇವುಗಳಿಂದ ನಷ್ಟಕ್ಕೊಳಗಾದ ರೈತರು ಕಛೇರಿಗೆ ಧಾವಿಸಿ ಅವರ ಬೆಳೆ ನಾಶದ ಬಗ್ಗೆ ದಾಖಲಾತಿಗಳನ್ನು ಒದಗಿಸಿದರೆ, ನಾವು ಇ-ಆಫ್ ಎಂಬ ಒಂದು ಹೊಸ ಯೋಜನೆ ಅಡಿಯಲ್ಲಿ ಆ ರೈತರಿಗೆ 15ರಿಂದ 30 ದಿನಗಳ ಒಳಗೆ ನಷ್ಟವಾದ ಬೆಳೆಗೆ ನೇರವಾಗಿ ರೈತರ ಖಾತೆಗೆ ಪರಿಹಾರವನ್ನು ಕೊಡಲಾಗುವುದು ಎಂಬ ಭರವಸೆ ನೀಡಿದ್ದಾರೆ.

  • ಕಾಡು ಪ್ರಾಣಿಗಳ ಬೇಟೆಗಾರರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

    ಕಾಡು ಪ್ರಾಣಿಗಳ ಬೇಟೆಗಾರರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

    ಬೆಳಗಾವಿ: ಕಳೆದ ಹಲವಾರು ದಿನಗಳಿಂದ ಖಾನಾಪೂರ ಕಾಡಿನಲ್ಲಿ ಅಕ್ರಮವಾಗಿ ಬೇಟೆಯಾಡುತ್ತಿದ್ದ ಕಳ್ಳರ ಜಾಲವೊಂದನ್ನು ಗೋಲಿಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

    ತಂಡವೊಂದು ಕಾಡುಪ್ರಾಣಿಗಳನ್ನು ತಡರಾತ್ರಿ ಬೇಟೆಯಾಡುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಸಿನೀಮಿಯ ರೀತಿಯಲ್ಲಿ ರೇಡ್ ಮಾಡಿ ಬಂಧನ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ನಿಚ್ಚನಕಿ ಗ್ರಾಮದ ಬಳಿ ಬಂದ ಆರೋಪಿಗಳನ್ನು ವಶಕ್ಕೆ ಪಡೆದಾಗ ಅವರ ಬಳಿ ಚಿಗರಿ ಮೃತ ದೇಹ ಹಾಗೂ ಕಾಡು ಮೊಲದ ಮೃತ ದೇಹಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

    ಬೈಲಹೊಂಗಲ ತಾಲೂಕಿನ ಬುಡರಕಟ್ಟಿ ಗ್ರಾಮದ ಭರಮಾ, ಮಲ್ಲೇಶ ಹಾಗೂ ಯವರಾಜ ಕಳೆದ ಹಲವಾರು ದಿನಗಳಿಂದಲೂ ವನ್ಯಜೀವಿಗಳನ್ನು ಕೊಂದು ಮಾಂಸವನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಗೋಲಿಹಳ್ಳಿ ಅರಣ್ಯಾಧಿಕಾರಿಗಳ ಕಡೊಲಕರ್ ತಂಡ ಈ ಕಾರ್ಯಚರಣೆ ಮಾಡಿದ್ದು ತನಿಖೆ ಆರಂಭವಾಗಿದೆ.

  • ವನ್ಯಜೀವಿಗಳ ಮಾರಾಟ- ಓರ್ವನ ಬಂಧನ

    ವನ್ಯಜೀವಿಗಳ ಮಾರಾಟ- ಓರ್ವನ ಬಂಧನ

    ಬೆಂಗಳೂರು: ವನ್ಯಜೀವಿಗಳ ಮಾರಾಟದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

    ಕಬತೂರ್ ಶಾಹಿದ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಶಿವಾಜಿನಗರದ ಪಿಳ್ಳಪ್ಪ ಗಾರ್ಡನ್ ನಲ್ಲಿ ದಾಳಿ ನಡೆಸಿದ ಅರಣ್ಯಾಧಿಕಾರಿಗಳಿಗೆ ನಿಜಕ್ಕೂ ಶಾಕ್ ಆಗಿತ್ತು. ದಾಳಿ ವೇಳೆ 3 ಉಡ, 14 ವಿವಿಧ ಜಾತಿಯ ಪಕ್ಷಿಗಳನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ಕಬೂತರ್ ಶಾಹಿದ್ ಆಕ್ರಮವಾಗಿ ಬೇಟೆಯಾಡಿ ಉಡಗಳನ್ನ ಹಿಡಿದಿದ್ದನು. ಬೆಂಗಳೂರಿನಿಂದ ಮುಂಬೈಗೆ ವನ್ಯಜೀವಿಗಳನ್ನ ಪೂರೈಸುತ್ತಿದ್ದನು.

    ಶಾಹಿದ್ ಅರಣ್ಯಾಧಿಕಾರಿಗಳ ಬಲೆಗ ಬೀಳುವ ಮೊದಲು ಮುಂಬೈಯಲ್ಲಿ ಇವನ ಡೀಲರ್ ನ ಬಂಧನವಾಗಿತ್ತು. ಮುಂಬೈಯಲ್ಲಿ ಕಲೀಲ್ ಎಂಬಾತನ್ನು ಮುಂಬೈ ಅರಣ್ಯಾಧಿಕಾರಿಗಳು ಬಂಧಿಸಿದ್ದರು. ಈ ವೇಳೆ ಬಂಧಿತ ಕಲೀಲ ತನ್ನ ಪೂರೈಕೆದಾರ ಶಾಹಿದ್ ಹೆಸರನ್ನು ಬಾಯಿ ಬಿಟ್ಟಿದ್ದಾರೆ. ಮುಂಬೈ ಅಧಿಕಾರಿಗಳು ಬೆಂಗಳೂರಿನ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

    ಖಚಿತ ಮಾಹಿತಿ ಆಧರಿಸಿ ಯಲಹಂಕ ಉಪವಲಯ ಅರಣ್ಯಾಧಿಕಾರಿ ಜಗನ್ನಾಥ್ ರೆಡ್ಡಿ ನೇತೃತ್ವದಲ್ಲಿ ರೇಡ್ ಮಾಡಿದಾಗ ಶಾಹಿದ್ ನನ್ನು ಬಂಧಿಸಿದ್ದಾರೆ. ಆರೋಪಿ ಶಾಹಿದ್ ಮೇಲೆ ಅಕ್ರಮ ಬೇಟೆ, ಅಕ್ರಮ ವನ್ಯಜೀವಿ ಸಾಗಾಟದ ಆರೋಪಡಿ ಪ್ರಕರಣ ದಾಖಲು ಮಾಡಲಾಗಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅಡಿ ದೂರು ದಾಖಲು ಮಾಡಿ ಕಂಬಿ ಹಿಂದೆ ತಳ್ಳಿದ್ದಾರೆ.

  • ಅಕ್ರಮ ಮರ ಸಾಗಾಣೆ: ಇಬ್ಬರ ಬಂಧನ

    ಅಕ್ರಮ ಮರ ಸಾಗಾಣೆ: ಇಬ್ಬರ ಬಂಧನ

    ಕೊಡಗು: ಅನಧಿಕೃತವಾಗಿ ಹೆಬ್ಬಲಸಿನ ಮರಗಳನ್ನು ಸಾಗಾಣೆ ಮಾಡುತ್ತಿದ್ದ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಸೋಮವಾರಪೇಟೆ ವಲಯ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದು, 3 ಲಕ್ಷ ಮೌಲ್ಯದ ಮರಗಳನ್ನು ವಶಪಡಿಸಿಕೊಂಡಿದ್ದಾರೆ.

    ವಿರಾಜಪೇಟೆ ತಾಲೂಕಿನ ಸಿ.ಎಸ್.ಸುಗುಣ, ಚೆನ್ನೈ ಕೋಟೆಯ ಪಿ.ಕೆ. ಮಜೀದ್ ಇಬ್ಬರನ್ನು ಬಂಧಿಸಿದ್ದು, ಲಾರಿ ಮಾಲೀಕ ರಫೀಕ್ ಹಾಗೂ ನಾಪೋಕ್ಲು ನಿವಾಸಿ ಹಂಸ ಇಬ್ಬರು ತಲೆ ಮರೆಸಿಕೊಂಡಿದ್ದಾರೆ.

    ಮಡಿಕೇರಿಯಿಂದ ಸೋಮವಾರಪೇಟೆ ತಾಲೂಕಿಗೆ ಸಂಪರ್ಕ ಕಲ್ಪಿಸುವ ಐಗೂರು ಗ್ರಾಮದ ಕಾಜೂರು ರಸ್ತೆ ಲಾರಿ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ. ಯಾರಿಗೂ ಅನುಮಾನ ಬಾರದಂತೆ ಆರೋಪಿಗಳು ಲಾರಿಯಲ್ಲಿ ಹೆಬ್ಬಲಸಿನ ಮರಗಳನ್ನು ತುಂಬಿ ಅವುಗಳ ಮೇಲೆ ಸಿಲ್ವರ್ ಮರಗಳನ್ನು ತುಂಬಿ ಸೋಮವಾರಪೇಟೆ ಕಡೆಯಿಂದ ಹಾಸನ ಮಾರ್ಗವಾಗಿ ಮಂಗಳೂರಿಗೆ ಸಾಗಿಸುತ್ತಿದ್ದರು ಎನ್ನಲಾಗಿದೆ.

    ಮಜೀದ್ ಕೆಲ ದಿನಗಳ ಹಿಂದಷ್ಟೇ ಹೆಬ್ಬಲಸು ಮರಗಳನ್ನು ಸಾಗಿಸುತ್ತಿದ್ದಾಗ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಹೊರಗೆ ಬಂದಿದ್ದನು. ಕಾರ್ಯಚರಣೆಯಲ್ಲಿ ಸೋಮವಾರಪೇಟೆ ವಲಯ ಅರಣ್ಯ ಅಧಿಕಾರಿ ಕ್ಷಮಾ, ಸತೀಶ್ ಕುಮಾರ್ ಅರಣ್ಯ ರಕ್ಷಕರಾದ ರಾಜಣ್ಣ, ಮೋಹನ್, ವಿಜಯ್ ಹಾಗೂ ವಾಹನ ಚಾಲಕ ನಂದೀಶ್ ಭಾಗವಹಿಸಿದ್ದರು.

  • ಮಟನ್ ವಾಸನೆ ಹಿಡಿದು, ಮನೆಗೆ ನುಗ್ಗಿದ ಹುಲಿ- ಮಹಿಳೆ ಸಾವು

    ಮಟನ್ ವಾಸನೆ ಹಿಡಿದು, ಮನೆಗೆ ನುಗ್ಗಿದ ಹುಲಿ- ಮಹಿಳೆ ಸಾವು

    ರಾಂಚಿ: ಮನೆಯಲ್ಲಿ ಮಟನ್ ಅಡುಗೆ ಮಾಡುತ್ತಿದ್ದ ವೇಳೆ ಮಹಿಳೆ ಮೇಲೆ ಹುಲಿ ದಾಳಿ ನಡೆಸಿ ಸಾಯಿಸಿರುವ ಘಟನೆ ಜಾರ್ಖಂಡ್‍ನ ರಾಮಕಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕುಶ್ವರ್ ಗ್ರಾಮದಲ್ಲಿ ನಡೆದಿದೆ.

    ಕಲಾಶಿಯಾ ದೇವಿ ಸಾವನ್ನಪ್ಪಿರುವ ಮಹಿಳೆಯಾಗಿದ್ದು, ಮಂಗಳವಾರ ಕಲಾಶಿಯಾ ಮಾಂಸದ ಅಡುಗೆಯನ್ನು ಮಾಡುತ್ತಿದ್ದರು. ಇದರ ವಾಸನೆ ದೂರದಲ್ಲಿದ್ದ ಹುಲಿಗೆ ಬಡಿದಿದೆ. ಹುಲಿ ಮಾಂಸವನ್ನು ಹುಡುಕುತ್ತ ಗ್ರಾಮದತ್ತ ಧಾವಿಸಿದೆ. ನಂತರ ಮಹಿಳೆ ಮಾಂಸ ಮಾಡುತ್ತಿರುವ ಮನೆಗೆ ನುಗ್ಗಿ ಹಲ್ಲೆ ಮಾಡಿದೆ.

    ಕಾಡಿನ ಬಳಿಯೆ ಕಲಾಶಿಯಾ ದೇವಿ ಅವರ ಗ್ರಾಮವಿದೆ. ಇವರೆಲ್ಲರೂ ಕಾಡು ಪ್ರಾಣಿಗಳು ಓಡಾಡುವ ಶಬ್ದವನ್ನು ಕೇಳಿಯೆ ಬದುಕುತ್ತಿದ್ದರು. ಪ್ರಾಣಿಗಳು ಮನುಷ್ಯರನ್ನು ಕೊಲ್ಲುತ್ತಿವೆ ಎಂಬುದರ ಕುರಿತು ಅರಿವಿದ್ದರೂ ಅದೇ ಕಾಡಿನ ಬಳಿ ಗ್ರಾಮಸ್ಥರು ವಾಸಿಸುತ್ತಿದ್ದರು.

    ಹುಲಿಯು ಗುಡಿಸಲಿಗೆ ನುಗ್ಗಿ ಬಾಯಿಂದಲೇ ಮಹಿಳೆಯನ್ನು ಕಾಡಿಗೆ ಎಳೆದೊಯ್ದಿದೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಕಿರುಚಿದ್ದು, ಧ್ವನಿ ಕೇಳಿದ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿದ್ದಾರೆ. ಆದರೆ ತಡವಾಗಿದ್ದರಿಂದ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಗುಡಿಸಲಿನೊಳಗೆ ಕಲಾಶಿಯಾ ಅವರ ದೇಹದ ಮಾಂಸದ ತುಂಡುಗಳು ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.

    ಅರಣ್ಯ ಇಲಾಖೆ ಘಟನೆಯನ್ನು ದೃಢಪಡಿಸಿದೆ. ಆದರೆ ಮಹಿಳೆಯನ್ನು ಕೊಂದಿದ್ದು, ಹುಲಿಯಲ್ಲ ಚಿರತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಹಳ್ಳಿಯ ಸಮೀಪವಿರುವ ಅರಣ್ಯವು ಬೆಟ್ಲಾ ಹುಲಿ  ಮೀಸಲು ರಕ್ಷಿತಾರಣ್ಯಕ್ಕೆ ಹೊಂದಿಕೊಂಡಿದ್ದು, ಹೀಗಾಗಿ ಪ್ರಾಣಿಗಳು ಹೆಚ್ಚು ವಲಸೆ ಬರುತ್ತವೆ. ಈ ಹಿಂದೆ ಸಹ ಇಂತಹ ಘಟನೆಗಳು ನಡೆದಿದ್ದು, ಈ ಕುರಿತು ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

  • 3.80 ಲಕ್ಷ ಮೌಲ್ಯದ ಬೀಟೆ ನಾಟಾಗಳ ವಶ

    3.80 ಲಕ್ಷ ಮೌಲ್ಯದ ಬೀಟೆ ನಾಟಾಗಳ ವಶ

    ಮಡಿಕೇರಿ: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಸಮೀಪದ ದೊಡ್ಡಕೊಳತ್ತೂರು ಗ್ರಾಮದಿಂದ ಗೂಡ್ಸ್ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.80 ಲಕ್ಷ ರೂ. ಮೌಲ್ಯದ ನಾಟಾಗಳನ್ನು ಅರಣ್ಯ ವಲಯಾಧಿಕಾರಿ ವಶಪಡಿಸಿಕೊಂಡಿದ್ದಾರೆ.

    ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಳತ್ತೂರು ಗ್ರಾಮದ ಕಾಫಿತೋಟದಿಂದ ಅರಕಲಗೂಡಿಗೆ ಮೂವರು ಆರೋಪಿಗಳು ಗೂಡ್ಸ್ ಪಿಕಪ್ ವಾಹನದಲ್ಲಿ ಅಕ್ರಮವಾಗಿ ನಾಟಾಗಳನ್ನು ಸಾಗಿಸುತ್ತಿದ್ದರು. ಈ ವೇಳೆ ಅರಣ್ಯ ವಲಯಾಧಿಕಾರಿ ಕೆ.ಕೊಟ್ರೇಶ್ ಹಾಗೂ ಸಿಬ್ಬಂದಿ ವಾಹನವನ್ನು ಪರಿಶೀಲನೆ ಮಾಡಿದ್ದು, ವಾಹನ ಜೊತೆಗೆ 3.80 ಲಕ್ಷ ಮೌಲ್ಯದ 3 ಬೀಟೆ ನಾಟಾಗಳನ್ನು ವಶಪಡಿಸಿಕೊಂಡಿದ್ದಾರೆ.

    ಗುಂಡೂರಾವ್ ಬಡಾವಣೆಯ ಎಚ್.ಎನ್.ಪುನೀತ್ ಹಾಗೂ ಜಾಬಿಕೋಡಿ ಗ್ರಾಮದ ಡಿ.ವಿ.ವಿನಯ್ ಬಂಧಿತ ಆರೋಪಿಗಳು. ಶಿರಂಗಾಲ ಗ್ರಾಮದ ಆರೋಪಿ ಸಾಬು ತಲೆಮರೆಸಿಕೊಂಡಿದ್ದಾನೆ. ವಿಜಯಕುಮಾರ್ ತೋಟದಿಂದ ವಾಹನದಲ್ಲಿ ಅರಕಲಗೂಡಿಗೆ ಸಾಗಿಸುವಾಗ ದೊರೆತ ಮಾಹಿತಿ ಅನ್ವಯ ಹೊಸೂರು ರಸ್ತೆಯ ಬಾಪೂಜಿ ವಿದ್ಯಾಸಂಸ್ಥೆಯ ಬಳಿ ಅಡ್ಡಗಟ್ಟಿ ವಶಪಡಿಸಿಕೊಳ್ಳಲಾಗಿದೆ.

    ಅರಣ್ಯ ವಲಯಾಧಿಕಾರಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತಾರೆ.