Tag: forest official

  • ರಾಮದೇವರ ಬೆಟ್ಟದಲ್ಲಿ ಎರಡು ಕರಡಿ ಪ್ರತ್ಯಕ್ಷ – ಜನರಲ್ಲಿ ಆತಂಕ

    ರಾಮದೇವರ ಬೆಟ್ಟದಲ್ಲಿ ಎರಡು ಕರಡಿ ಪ್ರತ್ಯಕ್ಷ – ಜನರಲ್ಲಿ ಆತಂಕ

    ಬೆಂಗಳೂರು: ರಾಮದೇವರ ಬೆಟ್ಟದಲ್ಲಿ ಕರಡಿ ಮತ್ತು ಕರಡಿ ಮರಿ ಕಾಣಿಸಿದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ರಾಯರಪಾಳ್ಯ ಗ್ರಾಮದ ಬಳಿ ಇರುವಂತಹ ರಾಮದೇವರ ಬೆಟ್ಟದಲ್ಲಿ ಎರಡು ಕರಡಿಗಳು ಕಾಣಿಸಿಕೊಂಡು ಜನರಲ್ಲಿ ಭಯ ಹುಟ್ಟಿಸಿದೆ. ಕರಡಿಗಳನ್ನು ಕಂಡ ರಾಯರಪಾಳ್ಯ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

    ಕರಡಿಗಳನ್ನು ಹಿಡಿಯಲು ಅರಣ್ಯಧಿಕಾರಿಗಳು ವಿಫಲರಾಗಿದ್ದು, ಬೋನ್‍ಗಳನ್ನು ನೀಡಲು ಗ್ರಾಮಸ್ಥರ ಸಹಕಾರವೇ ಬಯಸುತ್ತಾರೆ ಎಂದು ಗ್ರಾಮಸ್ಥರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಅದಷ್ಟೂ ಬೇಗ ಕರಡಿಗಳನ್ನು ಹಿಡಿಯಬೇಕೆಂದು ಗ್ರಾಮದವರು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

    ಈ ಘಟನೆ ಡಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ವಿಡಿಯೋ: ವಸತಿ ಕಾಲೋನಿಗೆ ನುಗ್ಗಿದ ಚಿರತೆ- ಸೆರೆಹಿಡಿಯುವಾಗ ಅರಣ್ಯಾಧಿಕಾರಿ ಮೇಲೆ ದಾಳಿ!

    ವಿಡಿಯೋ: ವಸತಿ ಕಾಲೋನಿಗೆ ನುಗ್ಗಿದ ಚಿರತೆ- ಸೆರೆಹಿಡಿಯುವಾಗ ಅರಣ್ಯಾಧಿಕಾರಿ ಮೇಲೆ ದಾಳಿ!

    ಇಂದೋರ್: ಚಿರತೆಯೊಂದು ಜನನಿವಾಸಿ ಪ್ರದೇಶಕ್ಕೆ ಬಂದು ಜನರಲ್ಲಿ ಆತಂಕ ಸೃಷ್ಟಿಸಿದ ಘಟನೆ ಇಂದೋರ್‍ನಲ್ಲಿ ಶುಕ್ರವಾರದಂದು ನಡೆದಿದೆ.

    ಇಲ್ಲಿನ ಪಲ್ಹಾರ್ ನಗರ ಪ್ರದೇಶಕ್ಕೆ ಶುಕ್ರವಾರ ಬೆಳಗ್ಗೆ ಚಿರತೆ ಲಗ್ಗೆ ಇಟ್ಟಿತ್ತು. ನಿರ್ಮಾಣ ಹಂತದ ಕಟ್ಟವೊಂದಕ್ಕೆ ಹಾಗೂ ಮನೆಯೊಳಗೆ ಚಿರತೆ ನುಗ್ಗುವುದು ಕಂಡುಬಂದಿತ್ತು. ಚಿರತೆ ಮೂವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದು, ಕೊನೆಗೂ ಅರಣ್ಯಾಧಿಕಾರಿಗಳು ಚಿರತೆಯನ್ನ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಚಿರತೆ ಅರಣ್ಯಾಧಿಕಾರಿ ಮೇಲೆ ದಾಳಿ ಮಾಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸುಮಾರು 8 ವರ್ಷ ವಯಸ್ಸಿನ ಚಿರತೆ ಹತ್ತಿರದ ಅರಣ್ಯಪ್ರದೇಶದಿಂದ ಬಂದು ಸ್ಥಳೀಯ ನಿವಾಸಿಗಳಲ್ಲಿ ಆತಂಕ ಹುಟ್ಟಿಸಿತ್ತು. ಚಿರತೆಯನ್ನ ಸೆರೆಹಿಡಿಯುವ ವೇಳೆ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್ ನ ನೌಕರರೊಬ್ಬರ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ ಎಂದು ಕಮಲಾ ನೆಹರೂ ಮೃಗಾಲಯದ ಉಸ್ತುವಾರಿ ಉತ್ತಮ್ ಯಾದವ್ ಹೇಳಿದ್ದಾರೆ.

    ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಚಿರತೆಯನ್ನ ಸ್ಥಳೀಯರು ನೋಡಿದ್ದರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಮೊದಲಿಗೆ ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿದ್ದ ಚಿರತೆ ಬಳಿಕ ಮತ್ತೊಂದು ಮನೆಗೆ ನುಗ್ಗಿ 3 ಗಂಟೆಗಳವರೆಗೆ ಅಲ್ಲಿಯೇ ಇತ್ತು ಎಂದು ವರದಿಯಾಗಿದೆ.

    ಅಂತಿಮವಾಗಿ ಅರವಳಿಕೆ ಮುದ್ದು ನೀಡಿ ಅರಣ್ಯಾಧಿಕಾರಿಗಳು ಚಿರತೆಯನ್ನ ಸೆರೆಹಿಡಿದಿದ್ದಾರೆ. ಮೊದಲನೇ ಅರವಳಿಕೆ ನೀಡಿದ ನಂತರ ಅರಣ್ಯಾಧಿಕಾರಿಯೊಬ್ಬರು ಚಿರತೆ ಬಳಿ ಹೋಗಿದ್ದು, ಈ ವೇಳೆ ಅವರ ಮೇಲೆ ದಾಳಿ ಮಾಡಿದೆ. ಸಿಬ್ಬಂದಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗಾಯಗೊಂಡಿದ್ದಾರೆ.

    ನಂತರ ಎರಡನೇ ಬಾರಿಗೆ ಅರವಳಿಕೆ ಮದ್ದು ನೀಡಿ ಚಿರತೆ ಪ್ರಜ್ಞೆ ತಪ್ಪುವಂತೆ ಮಾಡಿದ್ದು, ಅರಣ್ಯಾಧಿಕಾರಿಗಳು ಸ್ಟೀಲ್ ಬೋನಿನಲ್ಲಿ ಚಿರತೆಯನ್ನ ಬಂಧಿಸಿದ್ದಾರೆ. ಅಗತ್ಯ ವೈದ್ಯಕೀಯ ಪರೀಕ್ಷೆಗಳು ನಡೆಸಿದ ಬಳಿಕ ಚಿರತೆಯನ್ನ ಕಾಡಿಗೆ ಬಿಡಲಾಗುತ್ತದೆ ಎಂದು ವರದಿಯಾಗಿದೆ.